ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ರೋಟರಿ ಕ್ಲಬ್ ನಿಂದ ಹಗಲು ರಾತ್ರಿ ಎನ್ನದೇ ಕಷ್ಟದಲ್ಲಿರುವ ಜನರಿಗೆ ಎಂಬುಲೆನ್ಸ್ ಸೇವೆಯನ್ನು ಬಹಳ ವರ್ಷಗಳಿಂದಲೂ ನೀಡುತ್ತಾ ಬಂದಿರುವ ಸಮಾಜ ಸೇವಕ ಇಬ್ರಾಹಿಮ್ ಅವರನ್ನು ಗುರುತಿಸಿ ಸನ್ಮಾನಿಸಲಾಯಿತು. ರೋಟರಿಯ ಸುಗುಣಾ ಸನ್ಮಾನಿತರನ್ನು ಪರಿಚಸಿಯಿದರು, ಗಿರೀಶ್ ಮತ್ತು ಕೃಷ್ಣ ಇವರ ಸೇವೆಯ ಕುರಿತು ಹೇಳಿದರು, ಕ್ಲಬ್ ಅಧ್ಯಕ್ಷರಾದ ರಾಜೇಶ್ ಎಂ ಜಿ. ಹಾಗೂ ಹಿರಿಯ ಸದಸ್ಯರನ್ನೊಳಗೊಂಡು ಇಬ್ರಾಹಿಮ್ ಅವರನ್ನು ಗೌರವಿಸಲಾಯಿತು. ಸನ್ಮಾನಿತರಾದ ಇಬ್ರಾಹಿಮ್ ಅವರು ಸಂತಸ ವ್ಯಕ್ತ ಪಡಿಸಿದರು. ಕಾರ್ಯದರ್ಶಿ ನಾರಾಯಣ ನಾಯ್ಕ ಧನ್ಯವಾದ ಸಮರ್ಪಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕತಾರ್: ಭಾರತೀಯ ಸಮುದಾಯ ಹಿತೈಷಿ ವೇದಿಕೆಯ (ಐ.ಸಿ.ಬಿ.ಎಫ್ – ಇಂಡಿಯನ್ ಕಮ್ಯುನಿಟಿ ಬೆನಿವೊಲೆಂಟ್ ಫೋರಂ) ಆಡಳಿತ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವರು ಒಂದೇ ಭಾರತ್ ಮಿಷನ್ ಅಡಿಯಲ್ಲಿ ಕತಾರಿನಿಂದ ಭಾರತಕ್ಕೆ ವಿಶೇಷ ವಿಮಾನ ಸೇವೆ ಕಲ್ಪಿಸುವಲ್ಲಿ ಬಹು ಮುಖ್ಯ ಪಾತ್ರ ವಹಿಸಿದ್ದರು. ಕತಾರ್ ನಲ್ಲಿ ಕರೋನಾ ಪರಿಣಾಮವಾಗಿ ಬಹಳ ಜನ ನಿರಾಶ್ರಿತರಾಗಿದ್ದ ಸಮಯದಲ್ಲ್ಲಿ ಅನ್ನಾಹಾರ, ಊಟದ ಅವಶ್ಯಕತೆಯನ್ನು ಪೂರ್ಣಗೊಳಿಸಿ ದಿನನಿತ್ಯ ಸುಮಾರು 100-200 ಜನರಿಗೆ ತರಕಾರಿ ಅಥವ ಅನ್ನ ನೀರುಗಳನ್ನು ಸ್ವತಃ ತಮ್ಮ ವಾಹನದಲ್ಲಿ ಸರಬರಾಜು ಮಾಡುವ ಮೂಲಕ ಕತಾರ್ ನಲ್ಲಿ ಕೋವಿಡ್ ನಿಂದ ಅಸುನೀಗಿದ ಪಾರ್ಥಿವ ಶರೀರಗಳನ್ನು ಭಾರತದಲ್ಲಿನ ಸ್ವಗೃಹಕ್ಕೆ ತಲುಪಿಸುವ ಕಾರ್ಯ ಮಾಡಿದರು. ಅವರ ಸೇವೆಯನ್ನು ಗುರುತಿಸಿ ಕತಾರ್ನ ಭಾರತೀಯ ರಾಯಭಾರಿ ಕಾರ್ಯಾಲಯದ ಪ್ರಥಮ ಕಾರ್ಯದರ್ಶಿ (ಕಾರ್ಮಿಕ ಹಾಗು ಸಮುದಾಯ ಕಲ್ಯಾಣ ವಿಭಾಗ) ಎಸ್. ಆರ್.ಎಚ್. ಫಾಹ್ಮಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಈ ಕಾರ್ಯಕ್ರಮ ಸಂಘಟಿತ ಭಾರತೀಯ ಸಮುದಾಯ ಕೇಂದ್ರದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಯುವ ಜನತೆ ತಮ್ಮ ಪದವಿ ವಿದ್ಯಾಭ್ಯಾಸದ ನಂತರ ಸ್ವಉದ್ಯೋಗ ಕೈಗೊಂಡು ಯಶಸ್ವಿಯಾಗುವ ಕುರಿತಂತೆ ಕಾಲೇಜುಗಳಲ್ಲಿ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ನೆಹರು ಯುವ ಕೇಂದ್ರದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸೂಚಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ನೆಹರು ಯುವ ಕೇಂದ್ರದ ವಾರ್ಷಿಕ ಕ್ರಿಯಾ ಯೋಜನೆ ಅನುಷ್ಠಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಯುವ ಜನರು ಪದವಿ ನಂತರ ತಮ್ಮ ಭವಿಷ್ಯದ ಬಗ್ಗೆ ಚಿಂತಿಸಲು ಅವಕಾಶ ನೀಡದಂತೆ, ಅವರು ಪದವಿ ಅಂತಿಮ ವರ್ಷದಲ್ಲಿ ಇರುವಾಗಲೇ, ಪದವಿ ನಂತರ ಅವರು ಕೈಗೊಳ್ಳಬಹುದಾದ ಸ್ವ ಉದ್ಯೋಗಗಳ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿವರವಾದ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಎಲ್ಲಾ ಕಾಲೇಜುಗಳಲ್ಲಿ ಹಮ್ಮಿಕೊಳ್ಳಿ, ಈ ಕಾರ್ಯಕ್ರಮಗಳಿಗೆ ಲೀಡ್ಬ್ಯಾಂಕ್ ಅಧಿಕಾರಿಗಳನ್ನು ಆಹ್ವಾನಿಸಿ, ವಿವಿಧ ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್ಗಳು ನೀಡುವ ವಿವಿಧ ಬಗೆಯ ಸಾಲಗಳು, ಸಬ್ಸಿಡಿ ಮೊತ್ತ ಮುಂತಾದವುಗಳ ಬಗ್ಗೆ ಸಮಗ್ರ ವಿವರಗಳನ್ನು ವಿದ್ಯಾರ್ಥಿಗಳಿಗೆ ನೀಡಿ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಭಿನವ ಕಲಾತಂಡದ ಕರ್ಕಾಟಿ ಅಮಾಸಿ ಕಲಾತ್ಮಕ ಕಿರುಚಿತ್ರ ಬಿಡುಗಡೆ ಹಾಗೂ ಅಭಿನವ ಪ್ರಶ್ನಾವಳಿ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ವಿಶ್ವ ಕುಂದಾಪುರ ಕನ್ನಡ ದಿನಾಚರಣೆಯನ್ನು ಇಲ್ಲಿನ ಶ್ರೀ ಕಾರ್ತಿಕೇಯ ಕೃಪಾ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆ. ರಾಮಚಂದ್ರ ಉಡುಪ, ಕಲಾತಂಡದಿಂದ ಪ್ರದರ್ಶಿಸಲ್ಪಟ್ಟ ರತ್ನ ಶಾಮಿಯಾನ ನಾಟಕ ಅದೊಂದು ಯಶಸ್ವೀ ನಾಟಕ, ಕರೋಣ ಕಾರಣದಿಂದ ಪ್ರದರ್ಶನದಿಂದ ವಂಚಿತರಾದರೂ ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಹಲವಾರು ಹಾಸ್ಯ ಚಿತ್ರಗಳು, ಕಿರುಚಿತ್ರ ಹಾಗೂ ತಮ್ಮ ತಂಡದ ಕಲಾವಿದರು ಮಾತ್ರವಲ್ಲದೆ ಬೇರೆ ತಂಡಗಳ ಕಲಾವಿದರನ್ನು ಕೂಡಿಕೊಂಡು ಕಲಾತ್ಮಕ ಕಿರುಚಿತ್ರಗಳನ್ನು ಮಾಡಿ ಜನ ಮನ್ನಣೆಗೆ ಪಾತ್ರವಾಗಿದೆ ಎಂದು ಶ್ಲಾಘಿಸಿದರು. ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ ನ ಪೂರ್ವಧ್ಯಕ್ಷರಾದ ಎ. ಎಸ್. ಏನ್. ಹೆಬ್ಬಾರ್ ಕಿರುಚಿತ್ರ ಬಿಡುಗಡೆಗೊಳಿಸಿ ಮಾತನಾಡಿ, ಇದೊಂದು ಅಭೂತ ಪೂರ್ವ ಕಿರುಚಿತ್ರ ಇದನ್ನು ನೋಡಿದಷ್ಟು ಇನ್ನೊಮ್ಮೆ ನೋಡಬೇಕಿನಿಸುವಷ್ಟು ಸಂದೇಶದ ಹಂದರವಿದೆ ಎಂದು ಹರ್ಷ ವ್ಯಕ್ತಪಡಿಸಿ, ಅಭಿನವ ಕಲಾ ತಂಡದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಗ್ಗರ್ಸೆ ನಿವಾಸಿ ನಿವೃತ್ತ ಪ್ರಾಂಶುಪಾಲ ಬಾಳ್ಕುದ್ರು ರಘುರಾಮ ಶೆಟ್ಟಿ (88) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಶಿಕ್ಷಣ ಕ್ಷೇತ್ರಕ್ಕೆ ಕಾಲಿರಿಸಿದ ಇವರು ಅನೇಕ ಸರ್ಕಾರಿ ವಿದ್ಯಾ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ಕೊನೆಯಲ್ಲಿ ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ನಂತರ ಇಲ್ಲಿಯೇ ನಿವೃತ್ತಿಯಾಗಿದ್ದರು. 1986-87ನೇ ಸಾಲಿನಲ್ಲಿ ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಇವರು ಬೈಂದೂರು ತಾಲೂಕು ರಚನಾ ಹೋರಾಟ ಸಮಿತಿ ಸದಸ್ಯರಾಗಿದ್ದರು. ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಹಾಗೂ ಸಂಘ-ಸಂಸ್ಥೆಗಳಲ್ಲಿ ಸಕ್ರೀಯವಾಗಿದ್ದ ಇವರು ಜೀವಿತದ ಕೊನೆಯ ತನಕ ಆಸಕ್ತ ಮಕ್ಕಳಿಗೆ ಪಾಠ, ಉಪನ್ಯಾಸ ನೀಡುತ್ತಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮಾಜ ಕಲ್ಯಾಣ ಇಲಾಖೆ ಅನಾವಶ್ಯಕ ಖರ್ಚಿಗೆ ಕಡಿವಾಣ ಹಾಕಿ ಮೂಲಭೂತ ಸೌಲಭ್ಯ ಹೆಚ್ಚಿಸಲು ಆದ್ಯತೆ ನೀಡಲು ಉದ್ದೇಶಿಸಲಾಗಿದೆ. ಪರಿಶಿಷ್ಟ ಜಾತಿಯ ಕುಟುಂಬದ ಮನೆ ನಿರ್ಮಾಣಕ್ಕೆ ಇದ್ದ ಅನುದಾನವನ್ನು 5 ಲಕ್ಷಕ್ಕೆ ಹೆಚ್ಚಿಸುವ ನಿರ್ಧಾರಕ್ಕೆ ಬರಲಾಗಿದೆ. ಈ ಹಿಂದೆ ಇದ್ದ 1.70 ಲಕ್ಷ ಅನುದಾನದಲ್ಲಿ ಉತ್ತಮ ಮನೆ ನಿರ್ಮಾಣ ಸಾಧ್ಯವಿಲ್ಲ ಎನ್ನುವ ಕಾರಣದಿಂದ ಈ ನಿರ್ಧಾರ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಮಂಗಳವಾರ ಕುಂದಾಪುರ ಬಿಜೆಪಿ ಕಚೇರಿಯಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ, ರಾಜ್ಯದಲ್ಲಿ 25 ಲಕ್ಷ ಪರಿಶಿಷ್ಟ ಕುಟುಂಬಗಳಿದ್ದು, ಸರ್ವೇ ನಡೆಸಿ ಮನೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಒಂದು ವರ್ಷ ಅನಗತ್ಯ ವೆಚ್ಚಕ್ಕೆ ಕಡಿವಾಣ, ಅನಿವಾರ್ಯ ಅಲ್ಲದ ಯೋಜನೆ ತಡೆ ಹಿಡಿಯಲಾಗುವುದು. ಪರಿಶಿಷ್ಟ ಸಮಾಜ ಮುಖ್ಯವಾಹಿನಿಗೆ ತರಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು. ಸಾಮಾನ್ಯನಾಗಿದ್ದ ನನಗೆ ಸಮಾಜ ಕಲ್ಯಾಣ ಇಲಾಖೆಯ ದೊಡ್ಡ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಶೇ.100 ಫಲಿತಾಂಶ ದಾಖಲಿಸುವ ಮೂಲಕ ಉತ್ತಮ ಸಾಧನೆ ಮಾಡಿದೆ. ಪರೀಕ್ಷೆಗೆ ಹಾಜರಾದ ಒಟ್ಟು 48 ವಿದ್ಯಾರ್ಥಿಗಳ ಪೈಕಿ 16 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಭಾರ್ಗವ ಮಧ್ಯಸ್ಥ 617 ಅಂಕ ಗಳಿಸುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಮಾನ್ಯತಾ ವಿ.ಶೇಟ್ (608), ವೈಷ್ಣವಿ ಕೋಟೆಗಾರ್ (607), ಪ್ರಿಯಾಂಕ ಕೆ.ಬೈಂದೂರು (606), ಕೀರ್ತಿ ಭಟ್ (604), ಅಮೀಕ್ಷಾ ಡಿ.ನಾಯ್ಕ್ (603) ಮತ್ತು ಬಿ.ಸಾಹೀಲ್ (602) ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಲ್ಯಾಕ್ ಫಂಗಸ್ಗೆ ಔಷಧಿಯನ್ನು ಸಂಶೋಧಿಸಿದ ಗಂಗೊಳ್ಳಿ ಮೂಲದ ಬಿ.ಶ್ರೀಕಾಂತ ಪೈ ಮುಂಬೈ ಅವರನ್ನು ಕುಂದಾಪುರ ತಾಲೂಕಿನ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಪರವಾಗಿ ಗೌರವಿಸಿ ಅಭಿನಂದಿಸಲಾಯಿತು. ದೇವಸ್ಥಾನಕ್ಕೆ ಭೇಟಿ ನೀಡಿದ ಬಿ.ಶ್ರೀಕಾಂತ ಪೈ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕಾಶೀನಾಥ ಪೈ ಹಾಗೂ ಕೆ.ಗಣೇಶ ಪ್ರಭು ಅವರಿಗೆ ಶ್ರೀದೇವರ ಪ್ರಸಾದ ನೀಡಿ ಸನ್ಮಾನಿಸಿ ಗೌರವಿಸಿದರು. ಬಿ. ಗೋವಿಂದ್ರಾಯ ಪೈ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾದ ಎಸ್.ದಿನಕರ ಶೆಣೈ, ಎಸ್.ಗೋಪಾಲಕೃಷ್ಣ ಪೈ, ಎಸ್. ಗೋಪಾಲಕೃಷ್ಣ ಪೈ, ಎಂ.ವಿಶ್ವನಾಥ ಪೈ, ಎಸ್.ಪ್ರಭಾಕರ ಪೈ, ಎಂ.ಅನಂತ ಪೈ, ಬಿ.ಗಣೇಶ ಪೈ, ಯು.ಕಮಲಾಕ್ಷ ಪೈ, ಅರುಣ್ ಶೆಣೈ, ಪತ್ರಕರ್ತ ಬಿ. ರಾಘವೇಂದ್ರ ಪೈ, ಬಿ. ರಾಜೇಶ ಪೈ, ದೇವಸ್ಥಾನದ ಅರ್ಚಕರು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ ರಾಜ್ಯದ ಕ್ರೀಡಾ ಪೋಷಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿರುತ್ತದೆ. ಕಳೆದ ಮೂರು ವರ್ಷಗಳಿಂದ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಕ್ಷೇತ್ರದಲ್ಲಿ ಸಾಧನೆಗೈದ ಕ್ರೀಡಾ ಪೋಷಕರು ಆಗಸ್ಟ್ 25 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; 0820-2521324, 94808-86467 ನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2020ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ 2020ನೇ ಸಾಲಿನ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಕ್ರೀಡಾ ಪಟುಗಳು ಅರ್ಜಿ ನಮೂನೆಯನ್ನು ಆಗಸ್ಟ್ 25 ರೊಳಗೆ ಸಲ್ಲಿಸುವಂತೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸುಮಾರು ಹದಿನೈದು ವರ್ಷಗಳಿಂದ ಮುಚ್ಚಿರುವ ಹಾಗೂ ನೈಪಥ್ಯಕ್ಕೆ ಸರಿಯುತ್ತಿರುವ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯನ್ನು ಉಳಿಸಿಕೊಳ್ಳುವ ಹೋರಾಟ ಸಾಕಷ್ಟು ಬಾರಿ ನಡೆದಿದ್ದು ಇದೀಗ ಹೊಸ ಆಡಳಿತದ ಮಂಡಳಿ ಈ ನಿಟ್ಟಿನಲ್ಲಿ ಒಂದಷ್ಟು ಪೂರಕ ಚಟುವಟಿಕೆಯಲ್ಲಿ ತೊಡಗಿದೆ. ಹೀಗಾಗಿ ಸಕ್ಕರೆ ಕಾರ್ಖಾನೆಯ ಅಳಿವು-ಉಳಿವಿನ ಸಾಧ್ಯತೆಗಳ ಕುರಿತು ಚರ್ಚೆ ನಡೆಸುವ ಸಲುವಾಗಿ ಬ್ರಹ್ಮಾವರ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಾರ್ಖಾನೆ ಆಡಳಿತ ಮಂಡಳಿಯೊಂದಿಗೆ ಮಾಧ್ಯಮ ಸಂವಾದ ಕಾರ್ಯಕ್ರಮ ಬ್ರಹ್ಮಾವರದ ಮದರ್ ಪ್ಯಾಲೇಸ್ ಸಭಾಂಗಣದಲ್ಲಿ ಜರಗಿತು. ಕಾರ್ಖಾನೆ ಆಡಳಿತ ಮಂಡಳಿಯ ಅಧ್ಯಕ್ಷ ಬಕಾಡಿ ಸುಪ್ರಸಾದ್ ಶೆಟ್ಟಿ ಮಾತನಾಡಿ, ರಾಜ್ಯದಲ್ಲಿ 152 ಸಂಸ್ಥೆಗಳು ಎಥೆನಾಲ್ ಘಟಕ ಸ್ಥಾಪನೆಗೆ ಹೆಸರು ನೊಂದಾಯಿಸಿಕೊಂಡಿದ್ದು ಇದರಲ್ಲಿ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯೂ ಒಂದು. ಎಥೆನಾಲ್ ಘಟಕ ಸ್ಥಾಪನೆಗೆ ಸರಕಾರದಿಂದ ದೊಡ್ಡ ಮಟ್ಟದ ಸಹಕಾರ ದೊರೆಯುತ್ತದೆ ಹಾಗೂ ಅರ್ಥಿಕ ಸಂಸ್ಥೆಗಳು ನೆರವು ನೀಡಬೇಕೆಂಬ ಸೂಚನೆ ಇದೆ. ಘಟಕಕ್ಕೆ ಅಗತ್ಯವಿರುವ ಜಾಗ ಹಾಗೂ ಮೂಲಸೌಕರ್ಯಗಳು ನಮ್ಮಲ್ಲಿ ಇದೆ. ಹೀಗಾಗಿ ಸಕ್ಕರೆ ಉತ್ಪಾದನೆ…
