Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗವು ಮೂಡುಬಿದಿರೆಯ ಶ್ರೀಧವಳಾ ಕಾಲೇಜಿನ ಎನ್‌ಎಸ್‌ಎಸ್ ಘಟಕದ ಸಹಯೋಗದಲ್ಲಿ ಪತ್ರಿಕೋದ್ಯಮ ಕೌಶಲ್ಯಗಳ ಕುರಿತು ಒಂದು ದಿನದ ಕಾರ್ಯಗಾರವನ್ನು ಆಯೋಜಿಸಲಾಯಿತು. ಕಾರ್ಯಗಾರವನ್ನು ಉದ್ಘಾಟಿಸಿದ ಆಳ್ವಾಸ್ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗದ ಸಂಯೋಜಕ ಪ್ರಸಾದ್ ಶೆಟ್ಟಿ ಮಾತನಾಡಿ, ಪತ್ರಿಕೋದ್ಯಮವೆಂಬುದು ವಿಪುಲ ಅವಕಾಶಗಳಿರುವ ಕ್ಷೇತ್ರ. ನವಯುಗದ ಕೌಶಲ್ಯಗಳನ್ನು ತಮ್ಮ ಕಾರ‍್ಯ ಕ್ಷೇತ್ರದಲ್ಲಿ ಆಳವಡಿಸಿಕೊಂಡರೆ ಅತ್ಯಂತ ಹೆಚ್ಚು ಬೇಡಿಕೆ ಇರುವ ವ್ಯಕ್ತಿಗಳಾಗಿ ನಾವು ಬೆಳಯಬಹುದು. ಇಂತಹ ವಿಭಿನ್ನ ಕ್ಷೇತ್ರಕ್ಕೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಥೆವಹಿಸಿ ಬರುವಂತಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀಧವಳಾ ಕಾಲೇಜಿನ ಪ್ರಾಂಶುಪಾಲ ಡಾ. ಸುದರ್ಶನ್‌ಕುಮಾರ್ ಮಾತನಾಡಿ, ಭಾರತದಂತಹ ಪ್ರಜಾಸತ್ತಾತ್ಮಕ ರಾಷ್ಟ್ರದಲ್ಲಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಅದರದ್ದೇ ಆದ ಮಹತ್ವವಿದೆ. ಇದು ಸಾಕಷ್ಟು ಸದವಕಾಶಗಳನ್ನು ಒದಗಿಸುವ ಕ್ಷೇತ್ರವಾಗಿರುವುದರಿಂದ ವಿದ್ಯಾರ್ಥಿಗಳು ಇದರ ಕಡೆಗೆ ಗಮನಹರಿಸಬೇಕು. ಈ ಹಿನ್ನೆಲೆಯಲ್ಲಿ ಪತ್ರಿಕೋದ್ಯಮ ಕೌಶಲ್ಯಗಳನ್ನು ಒದಗಿಸುವ ಈ ಕಾರ್ಯಗಾರ ಪ್ರಾಮುಖ್ಯತೆ ಪಡೆದಿದೆ’ ಎಂದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅಖಿಲ ಭಾರತ ನಿಮಾ೯ಣಕಾಮಿ೯ಕರ ಫೆಡರೇಶನ್ ನವದೆಹಲಿಗೆ ಸಂಯೋಜಿಸಲ್ಪಟ್ಟ ಕನಾ೯ಟಕ ರಾಜ್ಯ ಕಟ್ಟಡ ಮತ್ತು ಇತರೆ ನಿಮಾ೯ಣ ಕಾಮಿ೯ಕರ ಫೆಡರೇಶನ್ ನೇತೃತ್ವದಲ್ಲಿ ಬೈಂದೂರು ತಾಲೂಕು ಕಟ್ಟಡ ಮತ್ತು ಇತರೆ ನಿಮಾ೯ಣ ಕಾಮಿ೯ಕರ ಸಂಘದಡಿಯಲ್ಲಿ ಗೋಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರೆಶಿರೂರು ಪ್ರದೇಶದ ಕಟ್ಟಡ ಮತ್ತು ಇತರೆ ನಿಮಾ೯ಣ ಕಾಮಿ೯ಕರ ಸಮಾವೇಶವು ಅರೆಶಿರೂರು ಪ್ರಾಥಮಿಕ ಶಾಲಾ ವಠಾರದಲ್ಲಿ ಜರುಗಿತು. ಬೈಂದೂರು ತಾಲೂಕು ಹಾಗೂ ಕಟ್ಟಡ ಮತ್ತು ಇತರೆ ನಿಮಾ೯ಣ ಕಾಮಿ೯ಕರ ಸಂಘ (ಸಿಐಟಿಯು)ದ ಕಾಯ೯ದಶಿ೯ ಶ್ರೀಧರ ಉಪ್ಪುಂದ ಮಾತನಾಡಿ, ಕನಾ೯ಟಕ ಕಟ್ಟಡ ಮತ್ತು ಇತರೆ ನಿಮ೯ಣ ಕಾಮಿ೯ಕರ ಕಲ್ಯಾಣ ಮಂಡಳಿಯಲ್ಲಿ ಕಾಮಿ೯ಕರ ಸಾಮಾಜಿಕ ಭದ್ರತೆಯ ವಿವಿಧ ಸೌಲಭ್ಯಕ್ಕಾಗಿ ಜಮೆ ಯಾಗಿರುವ ಕೋಟ್ಯಾಂತರ ರೂಪಾಯಿ ಕಾಮಿ೯ಕರ ಹಕ್ಕಿನ ಸೆಸ್ ಹಣ,ಮೀಸಲಿಟ್ಟಿರುವುದನ್ನು ಸಕಾಲದಲ್ಲಿ ಮಂಜೂರು ಮಾಡುವುದಕ್ಕೆ ಸೂಕ್ತ ಕ್ರಮವಹಿಸಬೇಕು ಎಂದು ಸರಕಾರವನ್ನುಒತ್ತಾಯಿಸಿದರು. ಕಾಮಿ೯ಕ ಮುಖಂಡ ವೆಂಕಟೇಶ್ ಕೋಣಿ ಸಭೆಯನ್ನದ್ದೇಶಿಸಿ ಮಾತನಾಡಿ, ಕಟ್ಟಡ ಕಾಮಿ೯ಕರ ಕಲ್ಯಾಣ ಮಂಡಳಿಯಿಂದ ಲಭ್ಯವಿರುವ ವಿವಿಧ ಸೌಲಭ್ಯಗಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಜಲಜೀವನ್ ಮಿಷನ್ ಯೋಜನೆಯನ್ನು ಸಕಾಲದಲ್ಲಿ ಮುಕ್ತಾಯಗೊಳಿಸಿ, ಸಾರ್ವಜನಿಕರಿಗೆ ಯೋಜನೆಯ ಸಂಪೂರ್ಣ ಪ್ರಯೋಜನ ಒದಗಿಸುವಂತೆ ರಾಜ್ಯ ಗ್ರಾಮೀಣಾಭಿವೃಧ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರದಾನ ಕಾರ್ಯದರ್ಶಿ ಎಲ್. ಕೆ. ಅತೀಕ್ ಹೇಳಿದರು. ಅವರು ಶನಿವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಗ್ರಾಮೀಣಾಭಿವೃಧ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಎಲ್ಲಾ ಮನೆಗಳಿಗೆ ಶುದ್ದ ಕುಡಿಯುವ ನೀರು ಕುಡಿಯುವ ಉದ್ದೇಶವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ನಿಗಧಿತ ಅವಧಿಯೊಳಗೆ ನೀರು ಒಗಿಸುವಂತೆ ಸೂಚಿಸಿದ ಪ್ರದಾನ ಕಾರ್ಯದರ್ಶಿಗಳು, ಯೋಜನೆಯ ಅನುಷ್ಠಾನದಲ್ಲಿ ಯಾವುದೇ ದೂರುಗಳಿಗೆ ಆಸ್ಪದವಾಗದಂತೆ, ಸ್ಥಳೀಯ ಜನಪ್ರನಿಧಿಗಳ ಅಭಿಪ್ರಾಯಗಳನ್ನು ಆಲಿಸಿ , ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಕುರಿತು ಪರಿಶೀಲಿಸಿದ ಪ್ರದಾನ ಕಾರ್ಯದರ್ಶಿ ಎಲ್. ಕೆ. ಅತೀಕ್ ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕೋಟತಟ್ಟು ಗ್ರಾಮ ಪಂಚಾಯತ್,ಡಾ.ಶಿವರಾಮ ಕಾರಂತ ಪ್ರತಿಷ್ಠಾನ (ರಿ.)ಕೋಟ, ಡಾ.ಶಿವರಾಮ ಕಾರಂತ ಜನ್ಮದಿನೋತ್ಸವ ಅಂಗವಾಗಿ, ಕೋಟ ವಿವೇಕ ವಿದ್ಯಾಸಂಸ್ಥೆ ಆವರಣದಲ್ಲಿ ನಡೆದ, ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳ ಪಂಚಾಯತ್ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ , ಹೊಳಪು 2021 – ಕ್ರೀಡೋತ್ಸವ -ಸಾಂಸ್ಕೃತಿಕ ಸ್ಪರ್ದೆಗಳಿಗೆ ಶನಿವಾರ ಚಾಲನೆ ನೀಡಲಾಯಿತು. ಅವದೂತ ವಿನಯ್ ಗುರೂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯಾವುದೇ ಜಾತಿ ಮತ ಭೇದ ನೋಡದೆ ಐಕ್ಯತೆಯ ಸಂದೇಶ ಸಾರುವ ಹೊಳಪು ಕಾರ್ಯಕ್ರಮ ಆಯೋಜಿಸುವ ಮೂಲಕ ಕೋಟ ಶ್ರೀನಿವಾಸ ಪೂಜಾರಿಯವರು ಡಾ. ಶಿವರಾಮ ಕಾರಂತರಿಗೆ ನಿಜವಾದ ಗೂರು ದಕ್ಷಿಣೆ ನೀಡುತ್ತಿದ್ದಾರೆ ಎಂದರು. ದ.ಕನ್ನಡ ಜಿಲ್ಲೆ ಸಂಸದ ನಳಿನ್ ಕುಮಾರ್ ಕಟೀಲು ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳ ಪಂಚಾಯತ್ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಪಥ ಸಂಚಲನದ ಗೌರವ ರಕ್ಷೆ ಸ್ವೀಕರಿಸಿದರು. ಉಡುಪಿ ಶಾಸಕ ರಘುಪತಿ ಭಟ್ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದರು. ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ ಪ್ರತಿಜ್ಞಾವಿಧಿ ಭೋದಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯುವ ಸ್ಪಂದನ ಉಡುಪಿ ಹಾಗೂ ಚ್ಯಾಲೆಂಜರ್ಸ ಕುಂದಾಪುರ ಇದರ ಜಂಟಿ ಆಶ್ರಯದಲ್ಲಿ ಭ್ರಷ್ಟಾಚಾರ ನಿನಿರ್ಮೂಲನಾ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಭ್ರಷ್ಟಾಚಾರ ನಿಗ್ರಹದಳ ಉಡುಪಿ ಉಪ ಅಧೀಕ್ಷಕರಾದ ಬಿ. ಎಸ್. ಸತೀಶ್ ಮಾತನಾಡಿ, ಆಚಾರವೇ ಶಿಷ್ಟಾಚಾರ ಆಚಾರವನ್ನು ಅತಿ ಕೃಮಿಸುವುದೇ ಭ್ರಷ್ಟಾಚಾರ, ಯುವಶಕ್ತಿ ಭ್ರಷ್ಟಾಚಾರಕ್ಕೆ ಬದುಕಿನಲ್ಲಿ ಆಸ್ಪದ ಕೊಡದೇ ಭ್ರಷ್ಟಾಚಾರದ ನಿರ್ಮೂಲನೆಗೆ ಕಾರಣೀಕರ್ತರಾಗಬೇಕು ಎಂದು ನುಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ.ಎಮ್. ಅಬ್ದುಲ್ ರೆಹಮಾನ ವಹಿಸಿದ್ದರು. ಚಾಲೆಂಜರ್ಸ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ ಶ್ರೀಯಾನ್, ಉಡುಪಿ ಯುವ ಸ್ಪಂದನ ಕೇಂದ್ರ ಯುವ ಪ್ರವರ್ತಕ ನರಸಿಂಹ, ಬ್ಯಾರೀಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಮೀರ್, ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಡಾ. ಸಂದೀಪ ಕುಮಾರ ಶೆಟ್ಟಿ, ಘಟಕದ ವಿದ್ಯಾರ್ಥಿ ಮುಖಂಡ ಮೊಹಮ್ಮದ ಅಯಾನ್ ವೇದಿಕೆಯಲ್ಲಿ ಉಪಸ್ಥಿತರಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ.ಸಂದೀಪ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರದ್ಧಾ ಕೇಂದ್ರಗಳು ಸಮಾಜದಲ್ಲಿ ಒಗ್ಗಟ್ಟು, ಜಾಗೃತಿ, ಸಾಂಸ್ಕೃತಿಕ ಪ್ರಜ್ಞೆ ಜಾಗೃತಗೊಳಿಸುತ್ತವೆ. ನಮ್ಮ ಶ್ರೇಷ್ಠ ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಲು ದೇವಸ್ಥಾನ, ದೈವಸ್ಥಾನಗಳು ಶಕ್ತಿಶಾಲಿ ವೇದಿಕೆಗಳು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ವಂಡ್ಸೆ ಯಕ್ಷೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಡೆದ ಯಕ್ಷೀ ಅನ್ನಪೂರ್ಣೇಶ್ವರಿ ಯುವ ಸಂಘಟನೆ ದಶಮಾನೋತ್ಸವ ಶಿವರಾತ್ರಿ ಉತ್ಸವದಲ್ಲಿ ಮಾತನಾಡಿದರು. ಉತ್ಸವವನ್ನು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಧಾರ್ಮಿಕ ಮುಂದಾಳು ಬಿ. ಅಪ್ಪಣ್ಣ ಹೆಗ್ಡೆ ಅವರನ್ನು ‘ಧಾರ್ಮಿಕ ಮಾಣಿಕ್ಯ’ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರನ್ನು ‘ನಮ್ಮೂರ ಮಾಣಿಕ್ಯ’ ಶೆಫ್‌ಕಾಟ್ ಫುಡ್ ಅಂಡ್ ಹಾಸ್ಪಿಟಾಲಿಟಿ ಸರ್ವಿಸಸ್ ಸಂಸ್ಥಾಪಕ ಗೋವಿಂದ ಬಾಬು ಪೂಜಾರಿ ಅವರನ್ನು ‘ಉದ್ಯೋಗ ಮಾಣಿಕ್ಯ’ ಬಿರುದಿ ನೀಡಿ ಸನ್ಮಾನಿಸಲಾಯಿತು. ಯುವ ಸಂಘಟನೆ ಅಧ್ಯಕ್ಷ ಗಣೇಶ ದೇವಾಡಿಗ ಅಡಿಕೆಕೊಡ್ಲು ಅಧ್ಯಕ್ಷತೆ ವಹಿಸಿದ್ದರು. ಮಂಜುನಾಥ ಭಟ್ ಕಲ್ಯಾಣಪುರ ಆಶೀರ್ವಚನ ನೀಡಿದರು. ಉದ್ಯಮಿ ಗುರುರಾಜ್ ಪಂಜು ಪೂಜಾರಿ, ಗ್ರಾಮ ಪಂಚಾಯಿತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇವರು ಧರ್ಮದ ಕೇಂದ್ರ ಬಿಂದು. ರಾಮ, ಕೃಷ್ಣ ದುಷ್ಟರ ನಾಶ, ಶಿಷ್ಟರ ರಕ್ಷಣೆ, ನಿಸ್ವಾರ್ಥ ಬದುಕಿನಿಂದಾಗಿ ಅವರು ದೈವತ್ವಕ್ಕೇರಿದರು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಇಲ್ಲಿಗೆ ಸಮೀಪದ ಕೋಟೇಶ್ವರದಲ್ಲಿ ಶಿವರಾತ್ರಿ ಪ್ರಯುಕ್ತ ಶ್ರೀರಾಮ ಕೋಟೀಶ್ವರ ಕಲಾ ಸಂಘದ ಆಶ್ರಯದಲ್ಲಿ ನಡೆದ ಎರಡು ದಿನಗಳ ರಾಜ್ಯ ಮಟ್ಟದ ಪುರುಷ ಮತ್ತು ಮಹಿಳೆಯರ ಕುಣಿತ ಭಜನಾ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. ಭಜನೆ, ನಾಮ ಸಂಕೀರ್ತನೆಗಳಿಂದ ನಮ್ಮ ಮನಸ್ಸಿನ ದೃಢತೆ ಹಾಗೂ ಏಕಾಗ್ರತೆ ಸಾಧಿಸಬಹುದು. ಭಜನೆ ಎಂದೂ ಸಂಸಾರಗಳನ್ನು ವಿಭಜನೆ ಮಾಡುವುದಿಲ್ಲ. ಜನರನ್ನು ದೈವ ಚಿಂತನೆಗಳಿಂದ ವಿಮುಖಗೊಳಿಸುವ ಯತ್ನಗಳು ನಡೆಯುತ್ತಿರುವ ಕಾಲಘಟ್ಟದಲ್ಲಿ ಭಜನೆ ಸಂಸ್ಕೃತಿ ಎಲ್ಲೆಡೆ ಮತ್ತೆ ಬೆಳೆಯುತ್ತಿರುವುದು ಸಂತೋಷದ ವಿಚಾರ ಎಂದು ಅವರು ಹೇಳಿದರು. ಶ್ರೀರಾಮ ಕೋಟೀಶ್ವರ ಕಲಾ ಸಂಘದ ಅಧ್ಯಕ್ಷ ಬಿ. ಜಿ. ಸೀತಾರಾಮ ಧನ್ಯ ಅಧ್ಯಕ್ಷತೆ ವಹಿಸಿದ್ದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದರೆ: ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು, ವಿಶೇಷವಾಗಿ ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ತಿಳಿಯುವುದು ಮುಖ್ಯ. ದೌರ್ಜನ್ಯ, ವಂಚನೆಗಳ ಸಮಯದಲ್ಲಿ ಮಹಿಳೆಯರು ಕಾನೂನಾತ್ಮಕ ಸಲಹೆ ಪಡೆಯಬೇಕು ಎಂದು ಭ್ರಷ್ಟಾಚಾರ ನಿಗ್ರಹ ದಳ ಮಂಗಳೂರು ವಿಭಾಗದ ಹಿರಿಯ ಕಾನೂನು ಅಧಿಕಾರಿ ಹಾಗೂ ಸರಕಾರಿ ಪ್ರಾಸಿಕ್ಯೂಟರ್ ಜುಡಿತಾ ಒ. ಎಮ್ ಕ್ರಾಸ್ತ ಹೇಳಿದರು. ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಟೆಕ್ನಾಲಜಿಯ ಎಂಬಿಎ ವಿಭಾಗದ ವತಿಯಿಂದ ಮಿಜಾರಿನಲ್ಲಿ ನಡೆದ ಮಹಿಳಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಮಹಿಳಾ ಕಾನೂನುಗಳು, ದೌರ್ಜನ್ಯ ತಡೆ ಕಾನೂನುಗಳ ಬಗ್ಗೆ ಎಲ್ಲರಿಗೂ ಮಾಹಿತಿ ಇರಬೇಕು. ಆದರೆ ಎಷ್ಟೋ ಸಂದರ್ಭಗಳಲ್ಲಿ ಮಾಹಿತಿಯ ಅಭಾವದಿಂದಾಗಿ ದೌರ್ಜನ್ಯದ ಪ್ರಕರಣಗಳು ಬೆಳಕಿಗೆ ಬರುತ್ತಿಲ್ಲ. ಪೋಕ್ಸೊ ಕಾಯ್ದೆ, ವರದಕ್ಷಿಣೆ ತಡೆ ಕಾಯ್ದೆ, ಕೌಟುಂಬಿಕ ದೌರ್ಜನ್ಯ ಕಾಯ್ದೆ ೨೦೦೫, ಐಟಿ ಕಾಯ್ದೆಯಂತಹ ಎಷ್ಟೋ ಕಾನೂನುಗಳಿದ್ದು ದೌರ್ಜನ್ಯದ ಸಮಯದಲ್ಲಿ ಮಹಿಳೆಯರು ದೂರು ದಾಖಲಿಸಲು ಮುಂದೆ ಬರುವಂತಾಗಬೇಕು ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕರ್ನಾಟಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಗಂಗೊಳ್ಳಿ ಶ್ರೀ ಇಂದುಧರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ 26ನೇ ಮಹೋತ್ಸವದ ಪ್ರಯುಕ್ತ ಗಂಗೊಳ್ಳಿಯ ಶ್ರೀ ಇಂದುಧರ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಉಡುಪಿ ಜಿಲ್ಲಾ ಮಟ್ಟದ ಆಹ್ವಾನಿತ ಬಾಲಕ ಬಾಲಕಿಯರ ಭಜನಾ ವೈವಿಧ್ಯತೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಜರಗಿತು. ಗಂಗೊಳ್ಳಿಯ ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಮತ್ಸ್ಯೋದ್ಯಮಿ ಜಿ.ಟಿ.ಮಂಜುನಾಥ ಶುಭ ಹಾರೈಸಿದರು. ಈ ಸಂದರ್ಭ ಸಾಹಿತಿ ನರೇಂದ್ರ ಎಸ್.ಗಂಗೊಳ್ಳಿ, ಕಲಾವಿದ ಗಣೇಶ ಗಂಗೊಳ್ಳಿ, ಪತ್ರಕರ್ತ ಬಿ.ರಾಘವೇಂದ್ರ ಪೈ, ಭಜನಾ ಸಾಧಕರಾದ ಮಾಸ್ತಿ ಪೂಜಾರಿ ನಾಯಕವಾಡಿ, ಪದ್ಮಾವತಿ ಬಿ., ದೇವಸ್ಥಾನದ ಅಭಿವೃದ್ಧಿಗೆ ಶ್ರಮಿಸಿದ ಜಿ.ಈಶ್ವರ, ಸುಂದರ ಬಿ. ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸ.ವಿ.ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ದೇವ್, ದೇವಸ್ಥಾನದ ಉಪಾಧ್ಯಕ್ಷ ಸುರೇಶ ಜಿ., ಮೊಕ್ತೇಸರ ಸಂಜೀವ ಜಿ.ಟಿ., ನರಸಿಂಹ ಕೆ., ಅರುಣ್ ಕುಮಾರ್ ಜಿ., ಸಂದೀಪ ಜಿ.ಎನ್., ಶ್ರೀಕಾಂತ ಎನ್., ವಿಘ್ನೇಶ ಜಿ.ಟಿ., ರಾಘವೇಂದ್ರ ಜಿ.ಟಿ., ಅರ್ಚಕ ಶಿವ ಜಿ.ಟಿ.,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಗರಡಿಯ ವಿಶ್ವಸ್ಥರು ಮತ್ತು ಅನುವಂಶಿಕ ಬಲ್ಲಾಳರಾದ ಚಂದ್ರಶೇಖರ ಶೆಟ್ಟಿ ಹಾಗೂ ಪಾರ್ವತಿ ವಿಶ್ವನಾಥ ಶೆಟ್ಟಿ ಮತ್ತು ಮಕ್ಕಳು ನಿರ್ಮಿಸಿಕೊಟ್ಟಿರುವ ನೂತನ ಸ್ವಾಗತ ಗೋಪುರ ಇತ್ತೀಚಿಗೆ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಉದ್ಘಾಟನೆಗೊಂಡಿತು. ಸ್ವಾಗತ ಗೋಪುರವನ್ನು ಉದ್ಘಾಟಿಸುವ ಮೂಲಕ ಅನುವಂಶಿಕ ಬಲ್ಲಾಳರ ಕುಟುಂಬದವರು, ಗರಡಿಯ ಕುಟುಂಬದವರು, ನಂಬಿದ ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ಪಂಜುರ್ಲಿ ಮತ್ತು ಪರಿವಾರ ದೈವಗಳಿಗೆ ವಿಶೇಷ ಅಲಂಕಾರ ಪೂಜೆ ಸಲ್ಲಿಸಿದರು. ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಗರಡಿಯ ಟ್ರಸ್ಟಿ ಹಾಗೂ ಅನುವಂಶಿಕ ಬಲ್ಲಾಳರಾದ ಚಂದ್ರ ಶೇಖರ ಶೆಟ್ಟಿ, ಪಾರ್ವತಿ ಶೆಟ್ಟಿ, ವಿಶ್ವನಾಥ ಶೆಟ್ಟಿ, ಅಧ್ಯಕ್ಷರಾದ ಡಾ. ಎನ್ ಕೆ ಬಿಲ್ಲವ, ಆಡಳಿತ ಮೊಕ್ತೇಸರರಾದ ಶೇಖರ ಪೂಜಾರಿ, ಸಮಿತಿಯ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರಾದ ಮುತ್ತ ಬಿಲ್ಲವ, ಗರಡಿಯ ವಿಶ್ವಸ್ಥರಾದ ಸೀತಾರಾಮ ಬಿಲ್ಲವ, ಆರ್ ಕೆ ಬಿಲ್ಲವ, ಸತ್ಯಾವತಿ ಬಿಲ್ಲವ, ತಾಲೂಕು ಪಂಚಾಯತ್ ಸದಸ್ಯರಾದ ಹಕ್ಕಾಡಿ ಜಗದೀಶ ಪೂಜಾರಿ, ಹಿರಿಯ…

Read More