ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಕರ್ನಾಟಕ ಸರಕಾರದ ವಿದ್ಯಾರ್ಥಿ ಲಸಿಕಾ ಅಭಿಯಾನದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಹಯೋಗದೊಂದಿಗೆ ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಶೀಲ್ಡ್ ಲಸಿಕೆ ವಿತರಿಸಲಾಯಿತು. ಆಳ್ವಾಸ್ ಕಾಲೇಜು ಸೇರಿದಂತೆ ಮೂಡುಬಿದಿರೆಯ ವಿವಿಧ ಕಾಲೇಜುಗಳ ಸುಮಾರು 1616 ವಿದ್ಯಾರ್ಥಿಗಳು ಲಸಿಕೆಯ ಪ್ರಥಮ ಡೋಸ್ ಪಡೆದರು. ಮುಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. ಮೂಡುಬಿದಿರೆ ಪುರಸಭೆ ಅಧ್ಯಕ್ಷ ಪ್ರಸಾದ್ ಕುಮಾರ್, ಪುರಸಭೆ ಅಧಿಕಾರಿ ಇಂದು, ಎಂ.ಸಿ.ಎಸ್. ಬ್ಯಾಂಕ್ನ ಅಧ್ಯಕ್ಷ ಬಾಹುಬಲಿಪ್ರಸಾದ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಲಸಿಕಾ ಅಭಿಯಾನದ ನೋಡಲ್ ಆಫೀಸರ್ ಡಾ. ಸುಭಾಷ್ ಶೆಟ್ಟಿ, ಡಾ.ಮನಿಷಾ, ಸೀನಿಯರ್ ಹೆಲ್ತ್ ಇನ್ಸ್ಪೆಕ್ಟರ್ ಖಾದರ್, ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್, ಶ್ರೀಧವಳಾ ಕಾಲೇಜಿನ ಪ್ರಾಂಶುಪಾಲ ಡಾ.ಸುದರ್ಶನ್ ಅಭಿಯಾನದಲ್ಲಿ ಭಾಗಿಯಾಗಿದ್ದರು. ಆಳ್ವಾಸ್ ಕಾಲೇಜಿನ ಸುಂದರಿ ಆನಂದ ಆಳ್ವ ಆವರಣದ ನುಡಿಸಿರಿ ವೇದಿಕೆಯಲ್ಲಿ ಲಸಿಕೆ ಅಭಿಯಾನದ ವ್ಯವಸ್ಥೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲೆಯ ಕೊಡವೂರಿನಲ್ಲಿರುವ ಟಿಪ್ಪು ಸುಲ್ತಾನ್ ಕಾಲದ ಐತಿಹಾಸಿಕ ಮಸೀದಿಯ ವಿಚಾರದಲ್ಲಿ ಜಿಲ್ಲೆಯ ಶಾಂತಿಗೆ ಕೊಳ್ಳಿ ಇಡುವ ಪ್ರಯತ್ನಗಳು ಆಗುತ್ತಿದೆ. 1980ರಿಂದಲೇ ಮಸೀದಿಗೆ ಸರಕಾರದಿಂದ ತಸ್ಘೀಕ್ ದೊರೆಯುತ್ತಿದ್ದು ಮಸೀದಿಯ ಜಾಗವು ವಕ್ಫಬೋಡ್ನಲ್ಲಿ ನೋಂದಾವಣೆಗೊಂಡಿದ್ದು, ಕಾನೂನಾತ್ಮಕ ದಾಖಲೆಗಳಿದ್ದರೂ ಮಸೀದಿಯ ಜಾಗವನ್ನು ವಶಪಡಿಸಿಕೊಂಡಿರುವುದರ ಹಿಂದೆ ಜಿಲ್ಲೆಯಲ್ಲಿ ಶಾಂತಿ ಕದಡುವ ಹುನ್ನಾರ ಅಡಗಿದೆ ಎಂದು ಪ್ರಗತಿಪರ ಚಿಂತಕ ಶಶಿಧರ ಹೆಮ್ಮಾಡಿ ಹೇಳಿದರು. ಸರ್ವೆ ನಂ 53A/6 ರಲ್ಲಿ ಮಸ್ಜೀದ್ಗೆ ಸೇರಿದ 67 ಸೆಂಟ್ಸ್ ಜಾಗದ ಬಗ್ಗೆ ಕೊಡವೂರು ಗ್ರಾಮದ ಅಡಂಗಲ್ನಲ್ಲಿ ಉಲ್ಲೇಖವಿದೆ. ಸರ್ವೆಯ ನಕ್ಷೆಯಲ್ಲಿ ಮಸ್ಜೀದ್ ಕಟ್ಟಡ ಮತ್ತು ಕೊಳವಿರುವುದು ಸ್ಪಷ್ಟವಾಗಿರುತ್ತದೆ. ಕಾನೂನು ಬದ್ದವಾಗಿ ವಕ್ಫನಲ್ಲಿ ನೋದಾವಣಿ ಹಾಗೂ ಗೆಝೆಟ್ ನೋಟಿಫಿಕೇಶನ್ ಆದ ಕಲ್ಮತ್ ಜಮ್ಮಾ ಮಸೀದಿಯು ಸ್ಥಿರಾಸ್ಥಿಯ ಪಹಣಿ ಪತ್ರದಲ್ಲಿ ಎಲ್ಲಾ ನಿಯಮಗಳನ್ನು ಉಲ್ಲಂಘಿಸಿ ಕಲ್ಮತ್ ಜುಮ್ಮಾ ಮಸೀದಿಯ ಹಕ್ಕನ್ನು ಕಸಿದುಕೊಂಡು ಕಾನೂನು ಬಾಹಿರವಾಗಿ ಸರಕಾರದ ಹೆಸರನ್ನು ನಮೂದಿಸಲಾಗಿದೆ ಈ ಕೂಡಲೇ ಸರಕಾರವು ಅಲ್ಪಸಂಖ್ಯಾತರ ಧಾರ್ಮಿಕ ಹಕ್ಕನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಎಸ್ಎಸ್ಎಲ್ಸಿ ಪರೀಕ್ಷೆಗಳು ಇದೇ ಜುಲೈ 19 (ಕೋರ್ ಸಬ್ಜೆಕ್ಟ್) ಮತ್ತು ಜುಲೈ 22 (ಭಾಷಾ ವಿಷಯ) ರಂದು ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಕನ್ನಡ, ಹಿಂದಿ, ಇಂಗ್ಲಿಷ್ ಸೇರಿ ಒಂದು ಪ್ರಶ್ನೆ ಪತ್ರಿಕೆ ಇರಲಿದೆ. ಎರಡನೇಯದ್ದು ಗಣಿತ, ವಿಜ್ಞಾನ ಮತ್ತು ಸಮಾಜದ ಪ್ರಶ್ನೆ ಪತ್ರಿಕೆ ಇರಲಿದೆ. ಎಲ್ಲವೂ ಬಹು ಆಯ್ಕೆಯ ಪ್ರಶ್ನೆಗಳು ಇರಲಿವೆ ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದರು. ಪರೀಕ್ಷೆ ಕೇಂದ್ರಗಳು ಮಕ್ಕಳ ಸುರಕ್ಷಾ ಕೇಂದ್ರಗಳಿರಲಿವೆ. ಯಾವುದೇ ಆತಂಕ ಇಲ್ಲದೇ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆ. ಪರೀಕ್ಷೆ ಸಮಯ 10.30ರಿಂದ 1.30 ಗಂಟೆವರೆಗೆ ಇರಲಿದೆ. ಈ ಬಾರಿ ಒಟ್ಟು 8,76,581 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ ವರ್ಷ 8 ಲಕ್ಷ 46 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕೊರೊನಾ ಹಿನ್ನೆಲೆ ಪರೀಕ್ಷಾ ಕೊಠಡಿಗಳನ್ನು ಹೆಚ್ಚು ಮಾಡಲಾಗಿದೆ. ಈ ಬಾರಿ 73066 ಪರೀಕ್ಷಾ ಕೊಠಡಿಗಳು ಇರಲಿವೆ.
ಬದುಕಿನಲ್ಲಿ ಪ್ರತಿಯೊಬ್ಬರು ಸುಖಿಯಾಗಿರಲು ಬಯಸುತ್ತಾರೆ. ಆದರೆ ಒಂದಿಲ್ಲೊಂದು ಕಾರಣದಿಂದ ಅವರು ತಮ್ಮ ಬದುಕಿನ ಸಂತೋಷದ ಕ್ಷಣಗಳನ್ನು ಮಿಸ್ ಮಾಡಿಕೊಳ್ಳುತ್ತಲೇ ಇರುತ್ತಾರೆ. ಹಾಗೆ ಮಿಸ್ ಮಾಡಿಕೊಳ್ಳಬಾರದ ಈ ಐದು ಅಂಶಗಳು ನಿಮ್ಮ ಸುಖಿ ಜೀವನದ ಕೀಲಿಕೈ ಆಗಲಿದೆ. ಪ್ರೀತಿಸಿ: ನಮಗೆ ತುಂಬಾ ಖುಷಿಯನ್ನು ಕೊಟ್ಟ ಕ್ಷಣಗಳು ಯಾವುದು ಅಂತ ಒಮ್ಮೆ ನೆನಪು ಮಾಡಿಕೊಳ್ಳಿ. ಅಮ್ಮನ ಜೊತೆ ಹಾಡು ಗುನುಗುತ್ತ ಕಳೆದ ಸಂಜೆ, ಅಪ್ಪನ ಕೈ ಹಿಡಿದು ಜಾತ್ರೆಗೆ ಹೋದ ದಿನ, ತಂಗಿಯ ಜೊತೆಗೆ ಜಾರುಬಂಡಿ ಆಟವಾಡಿ ದಣಿದ ದಿನ, ಅಕ್ಕನ ಜೊತೆಗೆ ಒಂದೇ ಕೊಡೆಯಲ್ಲಿ ಜೋರು ಮಳೆಯ ದಿನ ಶಾಲೆಯಿಂದ ಬಂದ ಸಂಜೆ, ಹೆಂಡತಿಯ ಜೊತೆಗೆ ಹನಿಮೂನ್ ಹೋದಾಗ ಕಳೆದ ಕ್ಷಣಗಳು, ಮಗಳು ತನ್ನ ಮೊದಲ ತೊದಲು ಮಾತಿನಿಂದ ಅಪ್ಪಾ- ಅಮ್ಮಾ ಅಂತ ಕರೆದಾಗ ಆದ ಭಾವುಕ ಕ್ಷಣ ಇತ್ಯಾದಿ. ಇಲ್ಲೆಲ್ಲಾ ನಮ್ಮ ಸಂಬಂಧಗಳೇ ನಮ್ಮ ಖುಷಿಗೆ ಮೂಲವಾಗಿರುವುದನ್ನು ನೀವು ನೋಡಬಹುದು. ಹಾಗೇ ನಿಮ್ಮ ಸಂಬಂಧದಲ್ಲೂ ನಿಮ್ಮ ಕೆರಿಯರ್ನಲ್ಲೂ ಇನ್ನೊಬ್ಬರನ್ನು ಅತ್ಯಂತ ಕಾಳಜಿಯಿಂದ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅವರು ತಮ್ಮ ಗೃಹ ಕಛೇರಿಯಲ್ಲಿ ಭಾನುವಾರ ಖಾಸಗಿ ನೆಟ್ವರ್ಕ್ ಆಪರೇಟರ್ಗಳ ಸಭೆ ನಡೆಸಿದರು. ಗ್ರಾಮೀಣ ಭಾಗಗಳನ್ನು ಹೆಚ್ಚು ಒಳಗೊಂಡಿರುವ ಕ್ಷೇತ್ರ ಬೈಂದೂರು. ಇಲ್ಲಿನ ಬಹಳಷ್ಟು ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ಇದ್ದು, ಜನರು ಸಂವಹನ ಸಮಸ್ಯೆಯನ್ನು ಎದುರಿಸುತಿದ್ದಾರೆ. ಪ್ರಸ್ತುತ ಲಾಕ್ಡೌನ್ ಕಾರಣದಿಂದ ಎಲ್ಲಾ ಶಾಲಾ ಕಾಲೇಜುಗಳ ಶಿಕ್ಷಣ ಆನ್ಲೈನ್ ಮೂಲಕ ನಡೆಯುತ್ತಿದೆ. ಮೊಬೈಲ್ ಅವಲಂಬಿತ ಪ್ರಸಕ್ತ ಶಿಕ್ಷಣದಿಂದಾಗಿ ವಿದ್ಯಾರ್ಥಿಗಳಿಗೆ ನೆಟ್ವರ್ಕ್ ಅತಿ ಅಗತ್ಯವಾಗಿದೆ. ನೆಟ್ವರ್ಕ್ ಸಮಸ್ಯೆಯಿಂದ ಗುಡ್ಡಗಾಡು ಪ್ರದೇಶಗಳಲ್ಲಿ ಮಳೆಯಲ್ಲಿ ನಿಂತುಕೊಳ್ಳುವುದು, ಕಿಲೋಮಿಟರಗಳುಗಟ್ಟಲೆ ಹೋಗಬೇಕಾದ್ದು, ಕಾಡು ಪ್ರಾಣಿಗಳ ಕಾಟ, ಹೀಗೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಮಗ್ರ ಬೈಂದೂರಿನ ನೆಟ್ವರ್ಕ್ ಸಮಸ್ಯೆಗೆ ಮುಕ್ತಿ ಕೊಡುವಂತೆ ನೆಟ್ವರ್ಕ್ ಆಪರೇಟರ್ಗಳೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು. ಟವರ್ ಹಾಕಿಸಲು ಕನ್ವರ್ಷನ್ ಭೂಮಿ ಬೇಕು ಎಂಬ ಕಾರಣಕ್ಕೆ ಹೊಸದಾಗಿ ಟವರ್ ಮಾಡುವಲ್ಲಿ ಕನ್ವರ್ಷನ್ ಜಾಗಗಳ ಸಮಸ್ಯೆ ಎದುರಾಗುತಿತ್ತು. ಹಾಗಾಗಿ ಅದರಿಂದ ವಿನಾಯತಿ…
ಹಿಂದಿನ ಕಾಲದಲ್ಲಿ ಮನೆಯ ಹಿತ್ತಲಿನಲ್ಲಿಯೇ ತರಕಾರಿ ಹಣ್ಣು ಹಂಪಲುಗಳ ಜೊತೆಗೆ ಔಷಧೀಯ ಸಸ್ಯಗಳನ್ನು ಕೂಡ ಹಿರಿಯವರು ಬೆಳೆಸುತ್ತಿದ್ದರು. ಇದರಿಂದ ಮನೆಯ ಔಷಧೋಪಚಾರದ ಸಮಸ್ಯೆಯೂ ಬಗೆಹರಿಯುತ್ತಿತ್ತು ಜೊತೆಗೆ ಮನೆಗೂ ಕೀಟಗಳಿಂದ ಸಂರಕ್ಷಣೆ ದೊರೆಯುತ್ತಿತ್ತು. ಆದರೆ ಇಂದಿನ ಅಪಾಂಟ್ಮೆಂಟ್ ಯುಗದಲ್ಲಿ ಹಿತ್ತಲು ಎಂಬುದಕ್ಕೆ ಜಾಗವೇ ಇಲ್ಲದಂತಾಗಿದೆ. ಅದಾಗ್ಯೂ ಪ್ಲಾಟ್ಗಳಲ್ಲಿ ಬೆಳೆಯಬಹುದಾದ ಔಷಧೀಯ ಸಸ್ಯಗಳನ್ನು ನಾವು ಇಂದಿನ ಲೇಖನದಲ್ಲಿ ನೀಡುತ್ತಿದ್ದೇವೆ. ತುಳಸಿ: ಹಿಂದೂ ಧರ್ಮದಲ್ಲಿ ತುಳಸಿಗೆ ಹೆಚ್ಚಿನ ಸ್ಥಾನವಿದೆ. ಪವಿತ್ರ ಗಿಡವೆಂಬ ಮನ್ನಣೆ ಇದೆ. ತನ್ನ ಔಷಧೀಯ ಗುಣಗಳಿಂದ ಇದು ಸಸ್ಯ ಜಗತ್ತಿನ ರಾಣಿ ಎಂದೆನಿಸಿದೆ. ಇದನ್ನು ಹರ್ಬಲ್ ಚಹಾ ರೂಪದಲ್ಲಿ ಅಂತೆಯೇ ಹಸಿಯಾಗಿ ಕೂಡ ಸೇವಿಸಬಹುದು. ತುಳಸಿಯಲ್ಲಿ ಹಲವಾರು ವಿಧಗಳಿದ್ದು ರಾಮ ತುಳಸಿ, ವನ ತುಳಸಿ, ಕೃಷ್ಣ ತುಳಸಿ, ಕರ್ಪೂರ ತುಳಸಿ ಎಂಬವುಗಳಿವೆ. ದೇಹದ ಹೊರಗಿನ ಸಮಸ್ಯೆಗಳಿಗೆ ಕರ್ಪೂರ ತುಳಸಿಯನ್ನು ಬಳಸಬಹುದಾಗಿದೆ. ಕಿವಿ ನೋವಿಗೆ ಇಯರ್ ಡ್ರಾಪ್ಸ್ನಂತೆ ಇದು ಕೆಲಸ ಮಾಡುತ್ತದೆ. ಸೂಕ್ಷ್ಮಾಣುಜೀವಿಗಳ ವಿರುದ್ಧ ಹೋರಾಡುವ ಶಕ್ತಿಯನ್ನು ತುಳಸಿ ಪಡೆದುಕೊಂಡಿದ್ದು ಜ್ವರ, ಸಾಮಾನ್ಯ ಶೀತಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮದ ಕಾಸನಾಡಿ ಎಂಬಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ‘ಶ್ರೀ ವರಲಕ್ಷ್ಮೀ” ನೂತನ ಗೃಹದ ಹಸ್ತಾಂತರ ಸಮಾರಂಭ ಶನಿವಾರ ಜರುಗಿತು. ಉದ್ಯಮಿ ಹಾಗೂ ಮ್ಯಾನೇಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರ ಜನ್ಮದಿನದಂದು ಮನೆ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಗೋವಿಂದ ಬಾಬು ಪೂಜಾರಿ ಅವರ ಪೋಷಕರಾದ ಮಂಜಮ್ಮ- ಬಾಬು ಪೂಜಾರಿ ದಂಪತಿಗಳು ನೂತನ ಗೃಹ ಉದ್ಘಾಟಿಸಿದರು. ಮ್ಯಾನೇಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಹಾಗೂ ಮಾಲತಿ ಗೋವಿಂದ ಪೂಜಾರಿ ಅವರು ನೂತನ ಗೃಹದ ಯಜಮಾನರಾದ ವಿಜಯಾ ರಮೇಶ್ ಪೂಜಾರಿ ಅವರಿಗೆ ಬೀಗದ ಕೈ ಹಸ್ತಾಂತರಿಸಿದರು. ಈ ಸಂದರ್ಭ ಮ್ಯಾನೇಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ ಟ್ರಸ್ಟೀ ಮೂಲಕ ನಿರ್ಮಿಸಲಾಗಿರುವ ಎರಡನೇ ಮನೆ ಇದಾಗಿದ್ದು, ಇನ್ನು ಎರಡು ಮನೆಗಳು ನಿರ್ಮಾಣ ಹಂತದಲ್ಲಿದೆ. ಆರೋಗ್ಯ ಸೇವೆ, ಅಗತ್ಯವುಳ್ಳವರಿಗೆ ನೆರವು, ಪುಡ್ ಕಿಟ್ ವಿತರಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಭತ್ತದ ಭಿತ್ತನೆಗೆ ಪ್ರತೀ ವರ್ಷ ಎಂಓ4 ಭಿತ್ತನೆ ಬೀಜದ ಕೊರತೆಯಾಗುತ್ತಿದ್ದು, ಮುಂದಿನ ವರ್ಷದಿಂದ ಭಿತ್ತನೆ ಬೀಜದ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ. ಸಿ ಪಾಟೀಲ್ ಹೇಳಿದರು. ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕೃಷಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿಯಲ್ಲಿನ ಹಡಿಲು ಕೃಷಿ ಭೂಮಿಯಲ್ಲಿ ಭಿತ್ತನೆ ಮಾಡುವ ಕಾರ್ಯ ನಡೆಯುತ್ತಿದು, ಇದು ಇಡೀ ರಾಜ್ಯಕ್ಕೆ ಮಾದರಿ ಕಾರ್ಯಕ್ರಮವಾಗಿದೆ, ಜಿಲ್ಲೆಯ ಪ್ರತಿಯೊಬ್ಬ ರೈತರೂ ಸಹ ತಮ್ಮ ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳುವಂತೆ ಕೃಷಿ ಇಲಾಖೆಯ ಮೂಲಕ ಮನವೊಲಿಸಿ, ಪ್ರೋತ್ಸಾಹಿಸಲಾಗುವುದು, ಜಿಲ್ಲೆಯಲ್ಲಿ ಕೊರೋನಾ ನಂತರ ಕೃಷಿ ಚಟುವಟಿಕೆ ನಡೆಸುವವರ ಸಂಖ್ಯೆ ಹೆಚ್ಚಾಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಭಿತ್ತನೆ ಬೀಜ ದೊರೆಯದೇ ಇರುವುದರಿಂದ ಹೆಚ್ಚಿನ ಪ್ರದೇಶದಲ್ಲಿ ಭಿತ್ತನೆ ಕಾರ್ಯ ನಡೆಯುತ್ತಿಲ್ಲ ಆದ್ದರಿಂದ ಜಿಲ್ಲೆಗೆ ಅಗತ್ಯವಿರುವ ಎಂಓ4 ಭಿತ್ತನೆ ಬೀಜವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸರಬರಾಜು ಮಾಡಲು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಡ್ಕಲ್ ಗ್ರಾ.ಪಂ. ವ್ಯಾಪ್ತಿಯ ಮೆಕ್ಕೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಣ್ಯ ಇಲಾಖೆ ಹಾಗೂ ಅರಣ್ಯ ಸಮಿತಿ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಗ್ರಾ.ಪಂ. ಅಧ್ಯಕ್ಷೆ ವನಜಾಕ್ಷಿ ಶೆಟ್ಟಿ ಗಿಡ ನೆಡುವದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುದೂರು ಬ್ಲಾಕ್ ಮೀಸಲು ಅರಣ್ಯ ಪ್ರದೇಶದಲ್ಲಿ ಹೊಸದಾಗಿ ನಿರ್ಮಿಸಿದ ಇಂಗು ಗುಂಡಿಗಳ ಮೇಲೆ ಮಾವು, ಹಲಸು, ಚಾರ, ಹೊಂಗೆ ಮತ್ತು ಇನ್ನಿತರ ವಿವಿಧ ಕಾಡು ಜಾತಿಯ ಬೀಜ ಬಿತ್ತನೆ ಕಾರ್ಯಕ್ರಮ ಮಾಡಲಾಯಿತು. ಅರಣ್ಯ ಇಲಾಖೆಯ ಉಪವಲಯ ಅರಣ್ಯ ಅಧಿಕಾರಿ ಸುನಿಲ್ ವನಮಹೋತ್ಸವದ ಮಾಹಿತಿ ನೀಡಿದರು. ಈ ಸಂದರ್ಭ ಗ್ರಾ.ಪಂ. ಉಪಾಧ್ಯಕ್ಷ ಲಕ್ಷ್ಮಣ್ ಶೆಟ್ಟಿ, ಸದಸ್ಯೆ ಭಾರತಿ ಶೆಟ್ಟಿ, ಅರಣ್ಯ ಸಮಿತಿ ಅಧ್ಯಕ್ಷರಾದ ಸುರೇಂದ್ರ ನಾಯ್ಕ್, ಶಾಲಾ ಸ್ಥಾಪಕ ಅಧ್ಯಕ್ಷ ಎಂ. ಜೆ. ಬೇಬಿ, ಸ್ಥಳ ದಾನಿಗಳಾದ ನಾರಾಯಣ ಪೂಜಾರಿ ಮೆಕ್ಕೆ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ರಾಧಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗದೀಶ್, ಶಾಲಾ ಮುಖ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತುತ ಕೋವಿಡ್-19 ಲಾಕ್ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ಕ.ರಾ.ರ.ಸ.ನಿಗಮದ ವತಿಯಿಂದ ಮಂಗಳೂರು-ಪೂನಾ ಮಾರ್ಗದಲ್ಲಿ ಅಂಬಾರಿ ಡ್ರೀಮ್ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 28 ರಿಂದ ಪುನಃ ಸಂಚಾರವನ್ನು ಪ್ರಾರಂಭಿಸಲಾಗುವುದು. ಸಾರಿಗೆ ಕಾರ್ಯಾಚರಣೆಯ ವಿವರ: ಅಂಬಾರಿ ಡ್ರೀಮ್ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯು ಮಧ್ಯಾಹ್ನ 4 ಗಂಟೆಗೆ ಮಂಗಳೂರಿನಿಂದ ಹೊರಟು ಉಡುಪಿ, ಮಣಿಪಾಲ, ಕುಂದಾಪುರ, ಕುಮಟ, ಬೆಳಗಾವಿ, ಕರಾಡ, ಸತಾರ ಮಾರ್ಗವಾಗಿ ಬೆಳಗ್ಗೆ 6 ಗಂಟೆಗೆ ಪೂನಾ ತಲುಪಲಿದೆ. ಮರು ಪ್ರಯಾಣದಲ್ಲಿ ಸಂಜೆ 6.30 ಕ್ಕೆ ಪೂನಾದಿಂದ ಹೊರಟು ಮರುದಿನ ಬೆಳಗ್ಗೆ 7 ಗಂಟೆಗೆ ಮಂಗಳೂರು ತಲುಪಲಿದೆ. ಉಡುಪಿಯಿಂದ ಹೈದ್ರಾಬಾದ್ಗೆ ಈಗಾಗಲೇ ರಾಜಹಂಸ ಸಾರಿಗೆಗಳನ್ನು ಪ್ರಾರಂಭಿಸಲಾಗಿದ್ದು, ಉಡುಪಿಯಿಂದ ಬೆಳಗ್ಗೆ 11.30 ಕ್ಕೆ ಹೊರಟು ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಹೊಸಪೇಟೆ, ರಾಯಚೂರು, ಮೆಹಬೂಬನಗರ ಮಾರ್ಗವಾಗಿ ಬೆಳಗ್ಗೆ 6 ಗಂಟೆಗೆ ಹೈದ್ರಾಬಾದ್ ತಲುಪಲಿದ್ದು, ಮರು ಪ್ರಯಾಣದಲ್ಲಿ ಸಂಜೆ 5.45 ಕ್ಕೆ ಹೈದ್ರಾಬಾದ್ನಿಂದ ಹೊರಟು ಮರುದಿನ…
