Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇವಾಡಿಗ ಅಕ್ಷಯ ಕಿರಣ ಸೇವಾ ಪೌಂಡೇಷನ್‌ನಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ಕುಂದಾಪುರದ ನಾಗರತ್ನ ಅವರ ಮನೆಗೆ ತೆರಳಿ 2,600ರೂ. ವೈದ್ಯಕೀಯ ನೆರವು ನೀಡಲಾಯಿತು. ಈ ಸಂದರ್ಭದಲ್ಲಿ ಸೇವಾದಾರರಾದ ನಾಗರಾಜ ರಾಯಪ್ಪನ ಮಠ, ದಿನೇಶ್ ದೇವಾಡಿಗ, ಮಹಾಲಿಂಗ ದೇವಾಡಿಗ, ರಾಜ್ ದೇವಾಡಿಗ, ಗಿರೀಶ್ ದೇವಾಡಿಗ, ಪುರುಷೋತ್ತಮದಾಸ್, ಜಗದೀಶ್ ದೇವಾಡಿಗ, ಮದುಕರ ದೇವಾಡಿಗ, ರಾಜಾ ಮಠದ ಬೆಟ್ಟು ಮದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಲ್ಪೆಯ ದಿನೇಶ್ ತಿಂಗಳಾಯ ಇವರ ಮೀನುಗಾರಿಕಾ ‘ಶ್ರೀ ಶಿವರಕ್ಷ’ ಬೋಟ್  ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ಆಕಸ್ಮಿಕವಾಗಿ ಸಂಪೂರ್ಣ ಮುಳುಗಡೆಯಾದ ಪರಿಣಾಮ ಬಾಬ್ತು ವಿಮಾ ಪರಿಹಾರವಾಗಿ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪೆನಿಯ ಪರವಾಗಿ ಕುಂದಾಪುರ ಶಾಖೆಯ ಶಾಖಾಧಿಕಾರಿ ಪಿ. ದಿನಕರ್ ಇವರು 40 ಲಕ್ಷದ ವಿಮಾ ಪರಿಹಾರವನ್ನು ಬೋಟಿನ ಮಾಲಕರಾದ ದಿನೇಶ್ ತಿಂಗಳಾಯ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಚೀಫ್ ಅಡ್ವೈಸರ್ ಹೆಚ್ ಸೀತಾರಾಮ ಹೆಗ್ಡೆ, ಬ್ಯುಸಿನೆಸ್ ಎಸೋಸಿಯೇಡ್ ವಿಲ್ಪ್ರೆಡ್ ಡಿ’ಸೋಜಾ ಸಿಬ್ಬಂದಿ ರಾಯಪುಡಿ ಜಗದೀಶ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದರೆ: ಮಾತೃಭಾಷೆಯಿಂದ ವ್ಯಕ್ತಿಯ ವಿಕಾಸ ಸಾಧ್ಯ. ವ್ಯಕ್ತಿಯಲ್ಲಿರುವ ಆತ್ಮಜ್ಞಾನ ವಿಶಿಷ್ಟವಾದದ್ದು. ಅದನ್ನು ಬೇರೆಯವರು ಅಪಹರಿಸಲು ಸಾಧ್ಯವಿಲ್ಲ ಎಂದು ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಟಿ. ಎ. ಎನ್. ಖಂಡಿಗೆ ಹೇಳಿದರು. ಮಿಜಾರಿನ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಕನ್ನಡ ಸಂಘ ಹಾಗೂ ಲಲಿತಕಲಾ ಸಂಘದ ವತಿಯಿಂದ ನಡೆದ ಕಲಾಕಿರಣ- 2021ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಆತ್ಮಜ್ಞಾನ ಮತ್ತು ಆತ್ಮಶಕ್ತಿಗಳನ್ನು ಪ್ರತಿಯೊಬ್ಬ ವ್ಯಕ್ತಿಯೂ ಕಂಡುಕೊಳ್ಳಬೇಕಾದದ್ದು ವ್ಯಕ್ತಿಯ ವಿಕಾಸದ ದೃಷ್ಟಿಯಿಂದ ಮಹತ್ವವಾದದ್ದು. ಈ ಜ್ಞಾನಗಳನ್ನು ಮಾತೃಭಾಷೆಯು ಬೆಳೆಸುತ್ತದೆ. ಇಂತಹ ಕೆಲಸಗಳನ್ನು ಸಾಹಿತ್ಯ ಹಾಗೂ ಕಲಾ ಸಂಘಗಳು ಮಾಡಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆಳ್ವಾಸ್ ಪದವಿ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಯೋಗೀಶ್ ಕೈರೋಡಿ, ಭಾಷೆ ಅಭಿಮಾನವಿರಬೇಕು, ಆದರೆ ಅಂಧಾಭಿಮಾನವಿರಬಾರದು. ಯಾವುದೇ ಭಾ?ಯಾದರೂ ಅದು ವ್ಯಕ್ತಿಯ ಭಾವ ಬುದ್ಧಿಯನ್ನು ವಿಕಾಸಗೊಳಿಸುತ್ತದೆ. ಭಾ?ಗಳ ಬಗ್ಗೆ ಅನಗತ್ಯ ಮಡಿವಂತಿಕೆ ಇರಬಾರದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಮಾವಿನಕಾರು ಗ್ರಾಮದ ಭರತ್‌ಕುಮಾರ್ ಶೆಟ್ಟಿ ಅವರಿಗೆ ಅವರ ಸಮಾಜಸೇವೆ ಗುರುತಿಸಿ ಬೀದರ್‌ನಲ್ಲಿ ಪ್ರತಿಷ್ಠಿತ ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕ್ರತಿಕ ಪ್ರತಿಷ್ಠಾನ ಹಾಗೂ ಮಂದಾರ ಕಲಾ ವೇದಿಕೆಯಿಂದ ನಡೆದ ಸಮಾರಂಭದಲ್ಲಿ ಕಾಯಕ ಚೂಡಾಮಣಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರತಿಷ್ಠಾನದ ಅಧ್ಯಕ್ಷ, ಸಾಹಿತಿ ಡಾ.ಎಂ.ಜಿ.ದೇಶಪಾಂಡೆ, ಮಕ್ಕಳತಜ್ಞ ಡಾ.ಸಿ.ಆನಂದ ರಾವ್, ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿದೇರ್ಶಕ ಡಾ.ಸತೀಶ್ ಕುಮಾರ್ ಹೊಸಮನಿ ಬೆಂಗಳೂರು, ಡಾ.ಜಯಪ್ಪ ಹೊನ್ನಾಳಿ(ಜಯಕವಿ) ಮೈಸೂರು, ಲೇಖಕಿ ಪಾರ್ವತಿ ಸೋನಾಲೆ ಬೀದರ್, ಸಾಹಿತಿ ಗೋಪಾಲಕೃಷ್ಣ ವಂಡ್ಸೆ, ಸಂಘಟಕ ಡಾ. ನಿತೇಶ್‌ಕುಮಾರ್ ಬೀದರ್, ಕವಿ ವಿಶ್ವೇಶ್ವರ ಮೇಟಿ ಮುಂಬೈ ಮೊದಲಾದವರು ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದರೆ: ಆಳ್ವಾಸ್ ಕಾಲೇಜಿನ ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಹಾಗೂ ನ್ಯಾಚುರೋಪಥಿ ವಿದ್ಯಾರ್ಥಿಗಳಿಗೆ ‘ಬರ್ಡ್ ಫೀಡರ್ ಇನ್‌ಸ್ಟಾಲೇಶನ್’ ಕುರಿತು ಒರಿಯೆಂಟೇಶನ್ ಹಮ್ಮಿಕೊಳ್ಳಲಾಯಿತು. ಪ್ರಥಮ ಎಂಎಸ್ಸಿ ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗದ ವಿನುತಾ ಹಕ್ಕಿಗಳ ಸ್ವಭಾವ ಹಾಗೂ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿನಿ ಜೆನಿಫರ್ ಪಿಂಟೋ, ಅನುಪಯುಕ್ತ ವಸ್ತುಗಳನ್ನು ಬಳಸಿಕೊಂಡು ಬರ್ಡ್ ಫೀಡರ್‌ಗಳನ್ನು ತಯಾರಿಸುವ ವಿಧಾನವನ್ನು ವಿವರಿಸಿದರು. ಜೊತೆಗೆ ಈ ಬರ್ಡ್ ಫೀಡರ್‌ಗಳ ಅಳವಡಿಕೆ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಲಾಯಿತು. ಆಳ್ವಾಸ್ ಇಂಜಿಯನಿಯರಿಂಗ್ ಹಾಗೂ ನ್ಯಾಚುರೋಪತಿ ಕಾಲೇಜಿನ 400ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್‌ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗ ಸಂಯೋಜಕಿ ಡಾ. ರಶ್ಮಿ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಭಾರತೀಯ ಜನತಾ ಪಕ್ಷದ ತ್ರಾಸಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ತ್ರಾಸಿ ಮಹಾಶಕ್ತಿ ಕೇಂದ್ರದ ಸಭೆ ತ್ರಾಸಿಯ ಅಣ್ಣಪ್ಪಯ್ಯ ಸಬಾಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ, ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಉದ್ದೇಶದಿಂದ ಬೂತ್ ಪ್ರಮುಖರನ್ನು, ಶಕ್ತಿ ಕೇಂದ್ರದ ಪ್ರಮುಖರನ್ನು ನೇಮಿಸಲಾಗುತ್ತಿದೆ. ರಾಜ್ಯ ಮತ್ತು ಜಿಲ್ಲಾ ಬಿಜೆಪಿ ಸೂಚನೆಯಂತೆ ಬೈಂದೂರು ಮಂಡಲದಲ್ಲಿ ಪಕ್ಷವನ್ನು ಸಂಘಟಿಸಿ ಬಲಪಡಿಸುವ ಕಾರ್ಯ ನಡೆಯುತ್ತಿದೆ. ಮುಂಬರುವ ದಿನಗಳಲ್ಲಿ ವಿವಿಧ ಮೋರ್ಚಾ ಹಾಗೂ ಪ್ರಮುಖರ ಸಮಾವೇಶಗಳನ್ನು ನಡೆಸಿ ಮುಂಬರುವ ತಾಪಂ., ಜಿಪಂ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲಾಗುವುದು ಎಂದು ಹೇಳಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಮಾತನಾಡಿ, ಬಿಜೆಪಿ ಕಾರ್ಯಕರ್ತರು ಪಕ್ಷಕ್ಕಾಗಿ ಸ್ವಲ್ಪ ಸಮಯವನ್ನು ನೀಡಿ ಪಕ್ಷದ ಬೆಳವಣಿಗೆಗೆ ಮುಂದಾಗಬೇಕು. ನಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷದ ಬಲವರ್ಧನೆಗೆ ಸಹಕರಿಸಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಹಗಲಿರುಳು ಶ್ರಮಿಸಬೇಕು ಎಂದರು. ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ:  ಕೊಂಕಣಿ ಜಾನಪದ ಸಂಗ್ರಹ ಶಿಶುಗೀತೆ, ಶೋಭಾನೆ, ಕೊಂಕಣಿ ಗೀತರಚನಾ, ನಾಟಕ, ಕೊಂಕಣಿ ಕವ್ವಾಲಿ, ಕೊಂಕಣಿ ಪಟ್ಟಾಂಗ, ಕೊಂಕಣಿ ಭಜನಾ ರಚನೆ,ಸ್ವತಃ ನಟನೆ ಹಾಗೂ ಖ್ಯಾತ ಉದ್ಯಮಿಯಾಗಿರುವ ಹಾಲಾಡಿ ಲಕ್ಷ್ಮೀದೇವಿ ಕಾಮತ್ ಅವರ ಸಮಾಜ ಸೇವೆಯನ್ನು ಗುರುತಿಸಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯಿಂದ ಕೊಂಕಣಿ ಸಾಹಿತ್ಯ ಸಮ್ಮೆಳನದಲ್ಲಿ ಮಣಿಪಾಲದ ಆರ್ ಎಸ್ ಬಿ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ನಾಡದೋಣಿ ಮೀನುಗಾರರ ಸೀಮೆ ಎಣ್ಣೆಯ ಸಮಸ್ಯೆ ಹಾಗೂ ಗಂಗೊಳ್ಳಿ ಮೀನುಗಾರಿಕಾ ಬಂದರು ಹೊಸ ಜೆಟ್ಟಿಯಲ್ಲಿ ಹೊಳು ತುಂಬಿಕೊಂಡು ಆಗುತ್ತಿರುವ ಸಮಸ್ಯೆಯ ಬಗ್ಗೆ ಮತ್ತು ಮತ್ಸ್ಯಾಶ್ರಯ ಯೋಜನೆಯ ವಿಳಂಬದ ಕುರಿತು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಹಾಗೂ ಉಪಾಧ್ಯಕ್ಷ ಸೂರಜ್ ಖಾರ್ವಿ ಅವರು ರಾಜ್ಯದ ಬಂದರು ಮತ್ತು ಮೀನುಗಾರಿಕೆ ಇಲಾಖೆ ಸಚಿವ ಎಸ್.ಅಂಗಾರ ಮತ್ತು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಿ ಮೀನುಗಾರರಿಗೆ ಅನುಕೂಲ ಮಾಡಿಕೊಡುವಂತೆ ಒತ್ತಾಯಿಸಿದರು. ಈ ಬಗ್ಗೆ ಸಕರಾತ್ಮಕವಾಗಿ ಸ್ಪಂದಿಸಿದ ಸಚಿವ ಎಸ್.ಅಂಗಾರ ಮತ್ತು ಶಾಸಕ ಸುಕುಮಾರ ಶೆಟ್ಟಿ ಅವರು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಸಮಸ್ಯೆಯನ್ನು ಆದಷ್ಟು ಶೀಘ್ರ ಪರಿಹರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಗ್ರಾಮ ಪಂಚಾಯತ್ ವ್ಯಾಪ್ತಿ, ನಗರಸಭೆ ವ್ಯಾಪ್ತಿ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ  ಸಹಾಯಕಿ ಹುದ್ದೆಗೆ 18 ರಿಂದ 35 ವರ್ಷಗೊಳಗಿನ ಕಾರ್ಯಕರ್ತೆ ಹುದ್ದೆಗೆ ಗರಿಷ್ಠ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರುವ ಮತ್ತು ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ ಮತ್ತು ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರುವ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 16 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ https://udupi.nic.in/ ಅನ್ನು ಸಂಪರ್ಕಿಸುವಂತೆ ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಹಾಗೂ ಲಾವಣ್ಯ ರಿ. ಬೈಂದೂರು ಸಹಯೋಗದಲ್ಲಿ ವಿಶ್ವರಂಗಭೂಮಿ ದಿನಾಚರಣೆ 2021 ಮಾ.27ರ ಶನಿವಾರ ಸಂಜೆ5.30ಕ್ಕೆ ಮಯ್ಯಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಾರ್ಥಮಿಕ ಶಾಲೆಯ ವಠಾರದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಉದಯ್ ಆಚಾರ್ ತಿಳಿಸಿದರು. ಬೈಂದೂರು ಪ್ರೆಸ್ ಕ್ಲಬ್‌ನಲ್ಲಿ ಜರುಗಿದ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಉದ್ಘಾಟಿಸಲಿದ್ದು, ರಂಗಭೂಮಿ ದಿನಾಚರಣೆ ಕುರಿತು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ರಘು ನಾಯ್ಕ್ ಉಪನ್ಯಾಸಗೈಯಲಿದ್ದಾರೆ. ಮುಖ್ಯ ಅಥಿತಿಗಳಾಗಿ ಬೈಂದೂರು ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಮಾಲಿನಿ ಕೆ., ಜಿಲ್ಲಾ ಪಂಚಯತ್ ಸದಸ್ಯರಾದ ಶಂಕರ್ ಪೂಜಾರಿ, ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯರಾದ ಎಂ. ಕೆ. ಮಠ ಉಪ್ಪಿನಂಗಡಿ, ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆಯ ಮುಖ್ಯೋಪಾಧ್ಯರಾದ ರಾಜು ಎಸ್. ಇವರು ಉಪಸ್ಥಿತರಿರಲಿದ್ದಾರೆ ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ರಂಗ ನಿರ್ದೇಶಕರಾದ ಕೋ. ಶಿವಾನಂದ ಕಾರಂತ್ ಹಾಗೂ…

Read More