ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಡವರ ಡಾಕ್ಜರ್ ಎಂದೇ ತಾಲೂಕಲ್ಲಿ ಪ್ರಸಿದ್ದರಾಗಿದ್ದ ಜನಾನುರಾಗಿ ಹಂಗಳೂರಿನ ವೈದ್ಯ ಡಾ. ಎ.ಎಸ್. ಕಲ್ಕೂರು (87) ಅಂಕದಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ನಿಧನರಾದರು. ಡಾ.ಕಲ್ಕೂರ ಕಾಲೇಜ್ ವಿದ್ಯಾಭ್ಯಾಸದ ನಂತರ ಸರ್ಕಾರಿ ಆಸ್ಪತ್ರೆಯಲ್ಲಿ ಪಾರ್ಮಸಿಸ್ಟಾಗಿ ವೃತ್ತಿಜೀವನ ಆರಂಭಿಸಿದರು. ವೈದ್ಯರಾಗಿ ಸೇವೆ ಮುಂದುವರಿಸಿ ನಂತರ ಕೆಲಸಕ್ಕೆ ರಾಜಿನಾಮೆ ನೋಡಿ ಕುಂದಾಪುರ ಮುಖ್ಯರಸ್ತೆಯಲ್ಲಿ ಕ್ಲಿನಿಕ್ ತೆರೆದು ವೈದ್ಯ ವೃತ್ತಿ ಆರಂಭಿಸಿದರು. 53 ವರ್ಷ ಕುಂದಾಪುರಲ್ಲಿ ವೈದ್ಯವೃತ್ತಿ ನಂತರ ವಯಸ್ಸಿನ ಹಿನ್ನೆಲೆಯಲ್ಲಿ ಕ್ಲಿನಿಕ್ ಬಂದ ಮಾಡಿ ವಿಶ್ರಾಂತ ಜೀವನ ಸಾಗಿಸುತ್ತಿದ್ದರು. ಇವರು ಕನಿಷ್ಟ 5 ಹಾಗೂ ಗರಿಷ್ಟ 30 ರೂ.ಗಿಂತ ಹೆಚ್ಚಿಗೆ ಶುಲ್ಕ ತೆಗೆದುಕೊಂಡ ದಾಖಲೆಯೇ ಇಲ್ಲ. ಕುಂದಾಪುರದಲ್ಲಿ ಕಡಿಮೆ ಆಸ್ಪತ್ರೆ ವೈದ್ಯರಿದ್ದ ಕಾಲದಲ್ಲಿ ಕೇವಲ ಮಾತ್ರೆ, ಶಿರಪ್ ಮೂಲಕ ನೂರಾರು ಜನರ ಪ್ರಾಣ ಉಳಿಸಿದ್ದು, ಏನಾದರು ಅನಾರೋಗ್ಯ ಕಾಣಿಸಿಕೊಂಡರೆ ಕಲ್ಕೂರು ಡಾಕ್ಟರ್ ಹತ್ರ ಹೋದ್ರೆ ಗುಣ ಮಾಡ್ತ್ರು ಎನ್ನುವಷ್ಟು ಪ್ರಸಿದ್ದರಾಗಿದ್ದರು. ನಾಟಕ ಕಲಾವಿದರು, ಯಕ್ಷಗಾನ ಪ್ರೇಮಿಯಾಗಿದ್ದು, ಸಾಹಿತ್ಯ ಸಂಗೀತ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.8: ಜಿಲ್ಲೆಯಲ್ಲಿ ಜುಲೈ 1ರಿಂದ ಈತನಕ ಇದುವರೆಗೆ 832 ಮಿಮಿ ಮಳೆಯಾಗಿದೆ. ಪ್ರತಿವರ್ಷ ವಾಡಿಕೆ ಮಳೆ 367 ಮಿಮಿ ಇರುತ್ತಿತ್ತು. ಜು.7ರಂದು 127.8 ಮಿ.ಮೀ .ಮಳೆಯಾಗಿದ್ದು, ಕುಂದಾಪುರ – 109.3 ಮಿ.ಮೀ, ಬೈಂದೂರು – 126.1 ಮಿ.ಮೀ, ಹೆಬ್ರಿ – 136.2 ಮಿ .ಮೀ , ಉಡುಪಿ – 78.3, ಬ್ರಹ್ಮಾವರ – 81.5, ಕಾಪು – 65.3, ಕಾರ್ಕಳ – 120.4 ಮಿ.ಮೀ ಮಳೆಯಾಗಿದೆ. ಅತಿವೃಷ್ಟಿಗೆ ಒಟ್ಟು ಅಂದಾಜು 24.73 ಕೋಟಿಯಷ್ಟು ನಷ್ಟವಾಗಿದೆ. ಅತಿವೃಷ್ಟಿಯಿಂದಾಗಿ 250 ಹೆಕ್ಟೇರ್ ಭತ್ತ ಬೆಳೆ ಹಾನಿಯಾಗಿದೆ. ನಗರ ಪ್ರದೇಶದಲ್ಲಿ 93 ಕಿಲೋಮೀಟರ್, ಗ್ರಾಮೀಣ ಭಾಗದ 685 ಕಿಲೋಮೀಟರಿನಷ್ಟು ರಸ್ತೆ, ಜಿಲ್ಲಾ ಹಾಗೂ ರಾಜ್ಯಮಟ್ಟದ 7.5 ಕಿಮೀ ಮುಖ್ಯ ರಸ್ತೆ ಹಾಳಾಗಿದ್ದು, 13 ಸೇತುವೆಗಳು ಹಾನಿ ಉಂಟಾಗಿದೆ. ಜಿಲ್ಲೆಯಲ್ಲಿ 1515 ವಿದ್ಯುಚ್ಛಕ್ತಿ ಕಂಬಗಳು ಬಿದ್ದುಹೋಗಿವೆ, 47 ಕಿಲೋಮೀಟರ್ ರಷ್ಟು ವಿದ್ಯುತ್ ತಂತಿಗಳು ಹಾಳಾಗಿದ್ದು, 64 ಮನೆಗಳಿಗೆ ಭಾಗಶಃ ಹಾನಿಯಾಗಿ ಒಟ್ಟು ಅಂದಾಜು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.8: ಜಿಲ್ಲೆಯಲ್ಲಿ ಜುಲೈ 10 ರಂದು ಆಚರಿಸಲಾಗುವ ಬಕ್ರೀದ್ ಹಬ್ಬ ಆಚರಣೆಯ ಸಂದರ್ಭದಲ್ಲಿ ಅನಧೀಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ನಿಷೇಧಿಸಲಾಗಿದ್ದು, ಗೋಹತ್ಯೆ ನಿಷೇಧ ಕಾಯ್ದೆಯಡಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು ಇರಿಸುವಂತೆ ಸಂಬಂಧಪಟ್ಟ ಇಲಾಖೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದ್ದಾರೆ. ಅವರು ಇಂದು ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ, ಬಕ್ರೀದ್ ಹಬ್ಬ ಆಚರಣೆ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಲು ರಚಿಸಿರುವ ಜಿಲ್ಲಾ ಸಮಿತಿಯೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಾದ್ಯಂತ ಇರುವ ಚೆಕ್ ಪೋಸ್ಟ್ಗಳಲ್ಲಿ ಅನಧಿಕೃತವಾಗಿ ಜಾನುವಾರುಗಳು ಸಾಗಾಣಿಕೆ ಆಗದಂತೆ ನಿಗಾ ಇರಿಸುವಂತೆ ಸೂಚಿಸಿದ ಅವರು, ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ತಿಳಿಸಿದರು. ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳನ್ನು ವಶಪಡಿಸಿಕೊಂಡಲ್ಲಿ ಅವುಗಳ ರಕ್ಷಣೆಗಾಗಿ ಗುರುತಿಸಿದ ಗೋಶಾಲೆಗಳಲ್ಲಿ ಸಂರಕ್ಷಣೆ ಮಾಡುವಂತೆ ಸಂಬಂಧಿಸಿದ ಇಲಾಖೆಗೆ ಸೂಚಿಸಿದರು. ಗೋಹತ್ಯೆ ಜಾನುವಾರು ಸಾಗಾಣಿಕೆ ಕಂಡುಬಂದಲ್ಲಿ ಸಾರ್ವಜನಿಕರು ಹತ್ತಿರದ ಪೋಲೀಸ್ ಠಾಣೆ ಅಧಿಕಾರಿಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.8: ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169 ಮತ್ತು 169ಎ ರಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗಿರುವ ಎಲ್ಲಾ ರಸ್ತೆ ಮೂಲಭೂತ ಸಮಸ್ಯೆಗಳನ್ನು ಹತ್ತು ದಿನಗಳ ಒಳಗೆ ಸಂಪೂರ್ಣವಾಗಿ ಬಗೆಹರಿಸಿ, ಈ ಕುರಿತು ಪೂರ್ಣ ವರದಿಯನ್ನು ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜಿಲ್ಲಾಡಳಿತ ಸೂಚಿಸುವ ಸಭೆಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರ ಸಭೆಗಳಿಗೂ ಸಹ ಗೈರು ಹಾಜರಾಗುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಮತ್ತು ಇತರೆ ಕಾರ್ಯಗಳನ್ನು ಸುಗಮವಾಗಿ ಮಾಡಲು ಜಿಲ್ಲಾಡಳಿತದ ನೆರವು ಬೇಕಿದ್ದಲ್ಲಿ, ಜಿಲ್ಲಾಡಳಿತ ನೀಡುವ ಎಲ್ಲಾ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಪ್ರಸ್ತುತ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಡು ಬರುತ್ತಿರುವ ಸಮಸ್ಯೆಗಳ ಕುರಿತು ನೀಡಿರುವ ಎಲ್ಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುಗಪುರುಷ ಪತ್ರಿಕೆಯ ಸಂಸ್ಥಾಪಕ ಕೊಡತ್ತೂರು ಅನಂತಪದ್ಮನಾಭ ಉಡುಪರ ಸ್ಮರಣಾರ್ಥ ಸ್ಥಾಪಿಸಲಾಗಿರುವ ಕೊ. ಅ. ಉಡುಪ ಪ್ರಶಸ್ತಿಗೆ ಈ ಬಾರಿ ಕವಿ ಸಾಹಿತಿ ಚಿಂತಕ ಡಾ. ವಸಂತಕುಮಾರ ಪೆರ್ಲ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪತ್ರಿಕೆಯ ಪ್ರಕಾಶಕ – ಸಂಪಾದಕ ಕೆ. ಭುವನಾಭಿರಾಮ ಉಡುಪ ತಿಳಿಸಿದ್ದಾರೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು, ಫಲಕ, ಪ್ರಶಸ್ತಿಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ. ಇದೇ ತಿಂಗಳ 24 ರಂದು ಕಿನ್ನಿಗೋಳಿಯಲ್ಲಿ ಜರಗಲಿರುವ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಉಡುಪರು ತಿಳಿಸಿದರು. ಪ್ರತಿಭಾವಂತ ಕವಿಯಾಗಿ, ಸಾಹಿತಿಯಾಗಿ ಚಿಂತಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವ ಡಾ. ವಸಂತಕುಮಾರ ಪೆರ್ಲ ಅವರು ಸಾಹಿತ್ಯದ ಜೊತೆಗೆ ಪತ್ರಿಕೆ, ರೇಡಿಯೋ, ಟಿ. ವಿ. ಮುಂತಾದ ಸಮೂಹ ಮಾಧ್ಯಮಗಳಲ್ಲಿ ಹಾಗೂ ರಂಗಭೂಮಿ, ಸಿನಿಮಾ ಕ್ಷೇತ್ರಗಳಲ್ಲೂ ಪರಿಣಿತರು. ಒಳ್ಳೆಯ ವಾಗ್ಮಿ ಮತ್ತು ವಿದ್ವಾಂಸರೆಂದು ಗುರುತಿಸಲ್ಪಟ್ಟವರು. ಕನ್ನಡ, ತುಳು ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಸಾಹಿತ್ಯ ರಚನೆ ಮಾಡುತ್ತಿರುವ ಡಾ. ಪೆರ್ಲರ ಕವನಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪೋಷಕರ ಮತ್ತು ವಿದ್ಯಾರ್ಥಿಗಳ ಅಭಿರುಚಿ ವಿಭಿನ್ನವಾದರೂ ಸಹ ಸದ್ಯ ವಿದ್ಯಾರ್ಥಿಗಳ ಅಭಿರುಚಿಗೆ ಪ್ರೋತ್ಸಾಹ ದೊರೆಯಬೇಕು. ಹುಟ್ಟೂರಿನಲ್ಲಿ ಒಂದು ಶಾಶ್ವತ ಕೊಡುಗೆ ನೀಡಬೇಕು ಎನ್ನುವ ಉದ್ದೇಶದಿಂದಎರಡು ಶಿಕ್ಷಣ ಸಂಸ್ಥೆಯನ್ನು ಮುನ್ನಡೆಸುವ ಕಾರ್ಯಕ್ಕೆ ಮುಂದಾಗಿದ್ದು, ಇದು ಲಾಭಕ್ಕಾಗಿ ಮಾಡಿದ ವ್ಯವಹಾರವಲ್ಲ. ಈ ಸತ್ಕಾರ್ಯದಿಂದ ಹೃದಯ ತುಂಬಿದೆ. ನಮ್ಮ ಎರಡೂ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮಕ್ಕಳ ಬಗ್ಗೆ ಅತ್ಯಂತ ಹೆಚ್ಚಿನ ಕಾಳಜಿ ವಹಿಸಬೇಕು ಎಂಬ ನೆಲೆಯಲ್ಲಿ ನಮ್ಮ ಸಂಸ್ಥೆಗೆ ನೂತನ ಹದಿನೈದು ಬಸ್ಗಳನ್ನು ಖರೀದಿಸಲಾಗಿದೆ. ಇದು ಈ ಎರಡೂ ಶಾಲೆಗಳನ್ನು ಟ್ರಸ್ಟಿನ ಸುಪರ್ದಿಯಲ್ಲಿ ತೆಗೆದುಕೊಂಡ ಮೊದಲ ದಿನದ ಯೋಚನೆಯಾಗಿತ್ತು ಎಂದು ಯುಬಿಎಸ್ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷ ಯು.ಬಿ. ಶೆಟ್ಟಿ ಹೇಳಿದರು. ಇಲ್ಲಿನ ಯುಬಿಎಸ್ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಗುರುವಾರ ಟಾಟಾ ಸಂಸ್ಥೆಯ ನೂತನ ಐದು ಶಾಲಾ ಬಸ್ಗಳನ್ನು ಲೋಕಾರ್ಪಣೆ ಮಾತನಾಡಿದರು. ನಮ್ಮ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವ್ಯವಸ್ಥಿತವಾದ ಸಾರಿಗೆ ವ್ಯವಸ್ಥೆಯಾಗಬೇಕು ಎಂಬ ನಿಟ್ಟಿನಲ್ಲಿ ವಾಹನವನ್ನು ಖರೀದಿಸಲಾಗಿದೆ. ಮುಂದಿನ ದಿನದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿಯಿಂದ ರಚನಾತ್ಮಕ ಕೆಲಸಗಳ ಜೊತೆಗೆ ನೆಲ, ಜಲ ಪ್ರಕೃತಿಯನ್ನು ಸಂರಕ್ಷಿಸುವ ಕಾರ್ಯ ಇನ್ನಷ್ಟು ಆಗಬೇಕಿದ್ದು, ಪ್ರತಿಯೋರ್ವ ರೋಟರಿ ಸದಸ್ಯರು ಇದರೊಂದಿಗೆ ಕೈಜೋಡಿಸಬೇಕು ಎಂದು ರೋಟರಿ ಜಿಲ್ಲೆ 3182 ಝೋನ್-1 ಇದರ ಸಹಾಯಕ ಗವರ್ನರ್ ಡಾ. ಉಮೇಶ್ ಪುತ್ರನ್ ಹೇಳಿದರು. ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಬುಧವಾರ ಕ್ಲಬ್ನ ಈ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭದಲ್ಲಿ ನೂತನ ಅಧ್ಯಕ್ಷ ಎಚ್. ಉದಯ ಆಚಾರ್ ಅವರಿಗೆ ರೋಟರ್ ಕಾಲರ್ ಹಸ್ತಾಂತರಿಸಿ ಮಾತನಾಡಿದರು. ರೋಟರಿ ಜಿಲ್ಲೆ 3182ನಿಂದ ಪ್ರಸಕ್ತ ಸಾಲಿನಲ್ಲಿ ಕಲಿಕಾ ಸಾಮರ್ಥ ನ್ಯೂನ್ಯತೆ ಇರುವ ಮಕ್ಕಳ ಅಭ್ಯುದಯಕ್ಕೆ ಸಂಬಂಧಿಸಿದ ಯೋಜನೆಗಳು, ಅಂಗಾಂಗ ಹಾಗೂ ಚರ್ಮ ದಾನ, ಸ್ತ್ರೀ ಸಬಲೀಕರಣ, ಇಲೆಕ್ಟ್ರಾನಿಕ್ಸ್ ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಬಗ್ಗೆ ಕಾರ್ಯನಿರ್ವಹಿಸಲಾಗುತ್ತದೆ ಎಂದ ಅವರು ಸೇವಾಕಾಂಕ್ಷಿ ಮಾನವ ಸಂಪನ್ಮೂಲಗಳನ್ನು ಸಮರ್ಥವಾಗಿ ಕ್ರೂಢಿಕರಿಸಿ ಪ್ರಾಮಾಣಿಕವಾಗಿ ಒಳ್ಳೆಯ ಕೆಲಸಗಳನ್ನು ಮಾಡಿದರೆ ಜನ ಗುರುತಿಸುತ್ತಾರೆ. ಒಬ್ಬರಿಂದಾಗದ ಕೆಲಸ ಸಂಸ್ಥೆಯ ಮೂಲಕ ಮಾಡಬಹುದು. ಹೀಗಾಗಿ ಎಲ್ಲರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಾವುದೇ ಸಂಸ್ಥೆ ಬೆಳೆಯಬೇಕಾದರೆ ಸಮಾನ ಮನಸ್ಕ ಸದಸ್ಯರು ಮುಖ್ಯವಾಗಿರಬೇಕು. ಅವರೆಲ್ಲರ ಸತ್ಚಿಂತನೆಗಳ ಜತೆಗೆ ಆಸಕ್ತಿ ಹಾಗೂ ಛಲವಿದ್ದರೆ ಅಸಾಧ್ಯವೆಂಬುವುದು ಯಾವುದೂ ಇಲ್ಲ. ಮನಸಿಗೆ ತೃಪ್ತಿ ನೀಡುವ ಉತ್ತಮ ಸೇವೆಗಳಿಂದ ಸಿಗುವ ಸಂತೋಷ ಶಾಶ್ವತವಾಗಿರುತ್ತದೆ. ಅಲ್ಲದೇ ಜೀವನದ ಜಂಜಾಟದಿಂದ ಸ್ವಲ್ಪ ಮಟ್ಟಿನ ನೆಮ್ಮದಿಯನ್ನು ಇದರಲ್ಲಿ ಕಾಣಬಹುದಾಗಿದೆ ಎಂದು ಕಾಸರಗೋಡಿನ ಬ್ರಹ್ಮಕುಮಾರಿ ಬಿ. ಕೆ. ವಿಜಯಲಕ್ಷ್ಮೀ ಹೇಳಿದರು. ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಬುಧವಾರ ನಡೆದ ಇನ್ನರ್ವೀಲ್ ಕ್ಲಬ್ನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಪರಸ್ಪರ ಗೆಳೆತನದಿಂದ ಕೂಡಿ ಬಾಳುವ ಒಂದು ಕುಟುಂಬದಂತಿರುವ ಇನ್ನರ್ವೀಲ್ ಕ್ಲಬ್ಬಿನಲ್ಲಿ ಎಲ್ಲಾ ಸಹೋದರಿಯರು ಸಂಘಟಿತರಾಗಿ ಸ್ವ-ಬೆಳವಣಿಗೆಯೊಂದಿಗೆ ಊರಿಗೆ ಹಾಗೂ ಸಮಾಜಕ್ಕೆ ಮಾದರಿಯಾಗುವಂತಹ ಕೆಲಸಗಳನ್ನು ಮಾಡುವಂತಾದಾಗ ಮಾತ್ರ ಶತ್ರುತ್ವ ಮರೆಯಾಗಿ ಕತ್ತಲೆಯ ಒಳಗಿರುವ ಜ್ಞಾನ, ಭರವಸೆಗಳೆಂಬ ಬೆಳಕಿನ ಬೀಜದಂತೆ ಭವಿಷ್ಯದ ಬಾಳು ಬೆಳಗುತ್ತದೆ ಎಂದರು. ೨೦೨೨-೨೩ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಆಯ್ಕೆಯದ ಭಾನುಮತಿ ಬಿ. ಕೆ. ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಪಿಂಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.07: ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ತಾಲೂಕಿನ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿದೆ. ಪರಿಣಾಮವಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ. ಬೈಂದೂರು ತಾಲೂಕಿನ ನಾವುಂದ ಗ್ರಾಮದ ಸಾಲ್ಬುಡ, ಕುದ್ರು ಪ್ರದೇಶ ಮುಳುಗಡೆಯಾಗಿದ್ದು, ಸಾಲ್ಬುಡದ ಕುದ್ರು ಗ್ರಾಮದ ಸಂತ್ರಸ್ತರನ್ನು ಎಸ್.ಡಿ.ಆರ್.ಎಫ್ ತಂಡ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಮರವಂತೆ, ಬಡಾಕೆರೆ ಮೊದಲಾದ ಪ್ರದೇಶಗಳಲ್ಲಿಯೂ ನೆರೆ ಕಾಣಿಸಿಕೊಂಡಿದೆ. ನೆರೆಯಿಂದಾಗಿ ಜನರು ಸಂಚಾರಕ್ಕೆ ದೋಣಿಗಳನ್ನು ಬಳಸುವಂತಾಗಿದೆ. ಪಂಚಗಂಗಾವಳಿ ನದಿಗಳು ತುಂಬಿ ಹರಿಯುತ್ತಿರುವ ಪರಿಣಾಮ ಹಲವೆಡೆ ನೆರೆ ಕಾಣಿಸಿಕೊಂಡಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಜು.6ರಂದು ಮಳೆಯಿಂದಾಗಿ ಗಂಗೊಳ್ಳಿ, ಹೊಸಂಗಡಿ, ಬಸ್ರೂರು, ಯಡ್ಯಾಡಿ ಮತ್ಯಾಡಿ, ಕುಳಂಜೆ, ಅಂಪಾರು, ಕೊರ್ಗಿ, ಸಿದ್ದಾಪುರ, ಹೆಮ್ಮಾಡಿ, ಗಂಗೊಳ್ಳಿ, ತೆಕ್ಕಟೆ, ಶಿರೂರು, ನಾವುಂದ ಗ್ರಾಮದ ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಅಂದಾಜು 6.25 ಲಕ್ಷ ರೂ. ಹಾನಿಯಾದ ಬಗ್ಗೆ ವರದಿಯಾಗಿದೆ. ಇನ್ನು ಮರವಂತೆ, ಕಿರಿಮಂಜೇಶ್ವರ, ಗಂಗೊಳ್ಳಿಯ ಕೆಲ ಭಾಗಗಳಲ್ಲಿ ಕಡಲಕೊರೆತ ಕಾಣಿಸಿಕೊಂಡಿದ್ದು, ಸಮುದ್ರ ತಡದ ಜನರು ಭಯದಿಂದ ಬದುಕುವಂತಾಗಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.07: ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ8 ಹಾಗೂ 9ರಂದು ಎಲ್ಲಾ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಕಳೆದ 48 ಗಂಟೆಯ ಅವಧಿಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಅಲ್ಲದೇ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
