Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮ ಪಂಚಾಯತ್ ಕೊರ್ಗಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊರ್ಗಿ ಹಾಗೂ ಕ್ಷಯ ಘಟಕ ಕುಂದಾಪುರ ಇವರ ಆಶ್ರಯದಲ್ಲಿ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಗ್ರಾಮಕ್ಕಾಗಿ ಸಮುದಾಯದ ಸಹಭಾಗಿತ್ವ ಆಂದೋಲನವನ್ನುಹಮ್ಮಿಕೊಳ್ಳಲಾಯಿತು. ಉಡುಪಿ ಜಿಲ್ಲೆಯ ಕ್ಷಯ ರೋಗ ನಿಯಂತ್ರಣ ಅಧಿಕಾರಿಗಳಾದ ಡಾ. ಚಿದಾನಂದ ಸಂಜು ಅವರ ಮಾರ್ಗದರ್ಶದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೌರೀಶ್ ಹೆಗ್ಡೆ, ಕ್ಷಯ ರೋಗದ ಮಾಹಿತಿಯನ್ನೊಳಗೊಂಡ ಕರಪತ್ರವನ್ನು ಬಿಡುಗಡೆ ಮಾಡಿದರು ಮತ್ತು ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಗಳ ಹಾಗೂ ಸಿಬ್ಬಂದಿಗಳ ಆರೋಗ್ಯ ಸೇವೆಯನ್ನು ಶ್ಲಾಘಿಸಿದರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಎಲ್ಲಾ ಕಾರ್ಯಕ್ರಮಗಳಿಗೂ ಪಂಚಾಯತ್ ನ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜಿಲ್ಲಾ ಕ್ಷಯ ರೋಗ ನಿಯಂತ್ರಣ ಅಧಿಕಾರಿಗಳು ಕ್ಷಯ ರೋಗದ ಬಗ್ಗೆ ಮಾಹಿತಿಯನ್ನು ನೀಡುವುದರೊಂದಿಗೆ ಸಮುದಾಯದಲ್ಲಿ ಕ್ಷಯ ರೋಗವನ್ನು ನಿಯಂತ್ರಿಸಲು ಮಾಡಬೇಕಾದ ಅನಿವಾರ್ಯತೆ ಮತ್ತು ಕೈಗೊಳ್ಳ ಬೇಕಾದ ಕ್ರಮಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಖಾಸಗಿ ಶಿಕ್ಷಕರಿಗೆ ನೀಡಲಾಗುತ್ತಿರುವ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿಯನ್ನು ಕುಂದಾಪುರ ತಾಲೂಕಿನ ಬಳ್ಕೂರು ನಿವಾಸಿ ದೈಹಿಕ ಶಿಕ್ಷಕರಾದ ಉದಯ ಬಳ್ಕೂರು ಅವರು ಪಡೆದುಕೊಂಡಿದ್ದಾರೆ. ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಬಳಗ ರಿ. ಇದರ ವತಿಯಿಂದ ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಜಾನುವಾರು ಕಳವು ಮತ್ತು ಅಕ್ರಮ ಸಾಗಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಾಗೂ ದನದ ದಲ್ಲಾಳಿಗಳನ್ನು ಬುಧವಾರ ಠಾಣೆಗೆ ಕರೆಯಿಸಿ ಪೆರೇಡ್ ನಡೆಸಲಾಯಿತು. ಬೈಂದೂರು ಪೊಲೀಸ್ ಠಾಣೆ ಉಪನಿರೀಕ್ಷಕ ಪವನ್ ನಾಯಕ್ ಮಾತನಾಡಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಎಚ್ಚರಿಕೆ ನೀಡಿ, ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡದೇ ಉತ್ತಮ ಜೀವನ ನಡೆಸುವಂತೆ ಸಲಹೆ ನೀಡಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ, ನಿವೃತ್ತ ಶಿಕ್ಷಕ ಎಸ್. ಜನಾರ್ದನ ಮರವಂತೆ ಅವರು ಹಿರಿಯ ನಾಗರಿಕ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ರಾಜ್ಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಪ್ರತಿವರ್ಷ ಹಿರಿಯ ನಾಗರಿಕರ ದಿನಾಚರಣೆಯಂದು ಕೊಡಮಾಡುವ ಈ ಪ್ರಶಸ್ತಿಗೆ ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಜನಾರ್ದನ ಮರವಂತೆ ಅವರನ್ನು ಆಯ್ಕೆಮಾಡಲಾಗಿದೆ. ರಾಜ್ಯದ ಒಟ್ಟು ಆರು ಮಂದಿ ಹಿರಿಯ ನಾಗರಿಕರಿಗೆ ಹಾಗೂ ಒಂದು ಸಂಸ್ಥೆಗೆ ಅ.1ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಎಸ್. ಜನಾರ್ದನ ಮರವಂತೆ ಅವರು ಶಿಕ್ಷಕರಾಗಿ ಸೇವೆ ಸಲ್ಲಿಸಿದ ಬಳಿಕ ತಮ್ಮ ನಿವೃತ್ತಿಯ ಬದುಕನ್ನು ಸಕ್ರೀಯವಾಗಿ ಕಳೆಯುತ್ತಿದ್ದಾರೆ. ರಾಜಕೀಯ, ಸಾಹಿತ್ಯ, ಸಂಘಟನೆಯಲ್ಲಿ ತೊಡಗಿಸಿಕೊಂಡು ತಮ್ಮ ಮಾದರಿ ಕಾರ್ಯಗಳ ಮೂಲಕ ಖ್ಯಾತಿ ಗಳಿಸಿದ್ದಾರೆ. ಮರವಂತೆ ಪಂಚಾಯತ್ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ರಾಷ್ಟ್ರಮಟ್ಟದಲ್ಲಿ ಮರವಂತೆ ಪಂಚಾಯತ್ ಗುರುತಿಸಿಕೊಳ್ಳಲು ಮಹತ್ತರ ಪಾತ್ರ ವಹಿಸಿದ್ದರು. ಅವರು ಕರ್ನಾಟಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಕೇವಲ ಪಠ್ಯದಿಂದ ಸಂಪೂರ್ಣ ಜ್ಞಾನ ಪಡೆಯಲು ಸಾಧ್ಯವಿಲ್ಲ. ಬದಲಿಗೆ ಅನುಭವದಿಂದಲೇ ಯಾವುದೇ ವಿಷಯದ ಬಗ್ಗೆ ಪರಿಪೂರ್ಣ ಜ್ಞಾನ ಪಡೆಯಲು ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಪದವಿ ಸಮಾಜ ಕಾರ್ಯ ವಿಭಾಗದ ವತಿಯಿಂದ ನಡೆದ ಸ್ಫಟಿಕ ವೇದಿಕೆಯ ವಾರ್ಷಿಕ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಎಲ್ಲಾ ಕೋರ್ಸ್‌ಗಳು ಸಮಾಜದ ಬಗ್ಗೆ ಸ್ಪಷ್ಟ ಪರಿಕಲ್ಪನೆ ನೀಡುವುದಿಲ್ಲ. ಆದರೆ ಸಮಾಜ ಕಾರ್ಯದಂತಹ ಕೋರ್ಸ್‌ಗಳಿಂದ ಮಾತ್ರ ವಿದ್ಯಾರ್ಥಿಗಳಿಗೆ ಸಮಾಜದ ಸ್ಥಿತಿಗತಿಗಳನ್ನು ಅರಿಯಲು ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಸಮಾಜ ಕಾರ್ಯ ವಿಭಾಗದಿಂದ ನಡೆಯುವ ಕಾರ್ಯಕ್ರಮಗಳು ಕೇವಲ ವಿಭಾಗದ ವಿದ್ಯಾರ್ಥಿಗಳಿಗೆ ಸೀಮಿತವಾಗದೇ, ಬೇರೆ ವಿಭಾಗದ ವಿದ್ಯಾರ್ಥಿಗಳಿಗೂ ವಿಸ್ತರಿಸಿರುವುದು ಉತ್ತಮ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು. ಬಳಿಕ, ಸಮಾಜ ಕಾರ್ಯ ವಿಭಾಗದ ಮುಂದಿನ ಯೋಜನೆಗಳು, ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಂತ್ರಿಕವಾಗಿ ಮುಂದುವರಿದ ದೇಶಗಳು ಇಂದು ಪ್ರತಿಯೊಂದು ಮನೆಯಲ್ಲಿ, ಕ್ಷೇತ್ರದಲ್ಲಿ ಅಂತರ್ಜಾಲವನ್ನು ಉಪಯೋಗಿಸುತ್ತಿದೆ. ಶಿಕ್ಷಣ, ಬ್ಯಾಂಕಿಂಗ್, ವ್ಯವಹಾರ ಕ್ಷೇತ್ರ ಅಥವಾ ನಮ್ಮ ಇಂದಿನ ಆಗುಹೋಗುಗಳ ವಿನಿಮಯ ಹಾಗೂ ಬೇರೆ ಬೇರೆ ವಿಚಾರಗಳಿಗೆ ಅಂತರ್ಜಾಲದ ಬಳಕೆ ಹೆಚ್ಚಾಗುತ್ತಿದೆ. ಕೋವಿಡ್‌ನ ಈ ದಿನಗಳಲ್ಲಿ ಇ-ಶಿಕ್ಷಣ ವಿದ್ಯಾರ್ಥಿಗಳಿಗೆ ವರದಾನವಾಗಿ ಪರಿಣಮಿಸಿದೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕುಂದಾಪುರ ವಕೀಲ, ತರಬೇತಿದಾರ ಶ್ರೀಧರ್ ಪಿ.ಎಸ್. ಹೇಳಿದರು. ರೋಟರಿ ಕ್ಲಬ್ ಗಂಗೊಳ್ಳಿ, ಯುವ ಸ್ಪಂದನ ಕೇಂದ್ರ ಉಡುಪಿ, ನಿಮಾನ್ಸ್ ಆಸ್ಪತ್ರೆ ಬೆಂಗಳೂರು, ಸಂಗಮ ಸಂಜೀವಿನಿ ಸ್ವಸಾಯ ಸಂಘ ಒಕ್ಕೂಟ, ನಾವುಂದ ಗ್ರಾಮ ಪಂಚಾಯತ್ ಇವರ ಜಂಟಿ ಆಶ್ರಯದಲ್ಲಿ ರೋಟರಿಯ ಸಾಕ್ಷರತಾ ಮಾಸದ ಕಾರ್ಯಕ್ರಮದ ಭಾಗವಾಗಿ ನಾವುಂದ ಗ್ರಾಪಂ ಸಭಾಂಗಣದಲ್ಲಿ ಆಯೋಜಿಸಲ್ಪಟ್ಟ ಇ-ಶಿಕ್ಷಣ ಸಾಧಕ ಬಾಧಕ ವಿಚಾರ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗಂಗೊಳ್ಳಿ ರೋಟರಿ ಅಧ್ಯಕ್ಷ ರಾಜೇಶ್ ಎಂ. ಜಿ. ಕಾರ್ಯಕ್ರಮ ಉದ್ಘಾಟಿಸಿದರು. ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಪಂಚಾಯತ್ ಸದಸ್ಯೆ ಮುತ್ತು ಮೊಗವೀರ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರೋಟರಿ ಇಂಡಿಯಾ ಮತ್ತು ‘ಆರ್ ಎಸ್ ಎಸ್ ಡಿ ಐ’ ಯೋಜನೆಯಾದ ಒಂದೇ ದಿನದಲ್ಲಿ ಮಿಲಿಯನ್ ಬ್ಲಡ್ ಶುಗರ್ ಟೆಸ್ಟ್ ಮಾಡುವ ಉದ್ದೇಶದಿಂದ ಇಡೀ ಭಾರತದಲ್ಲಿ ಶಿಬಿರ ಹಮ್ಮಿಕೊಂಡಿದ್ದು ಅದರ ಅಂಗವಾಗಿ ಸೈಬ್ರಕಟ್ಟೆ ರೋಟರಿ ಕ್ಲಬ್‌ನಿಂದ ಆರೋಗ್ಯ ಕೇಂದ್ರದಲ್ಲಿ ಉಚಿತ ಮಧುಮೇಹ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ರೋ ವಲಯ 3ರ ಸಹಾಯಕ ಗವರ್ನರ್ ಪದ್ಮನಾಭ್ ಕಾಂಚನ್ ಉದ್ಘಾಟಿಸಿ ಮಾತನಾಡಿ, ಇಂದು ಇಡೀ ಭಾರತದಲ್ಲಿ ರೋಟರಿ ಅವರಿಂದ ಮಿಲಿಯನ್ ಗಟ್ಟಲೆ ಮಧುಮೇಹ ತಪಾಸಣೆ ನಡೆಸಿ ಗಿನ್ನೆಸ್ ರೆಕಾರ್ಡ್ ಮಾಡುವ ಯೋಜನೆ ಇದ್ದು,ಎಲ್ಲ ಸಾರ್ವಜನಿಕರು ಉಪಯೋಗ ಪಡೆದುಕೊಳ್ಳಿ ಮತ್ತು ಭಾರತ ವು ಸಕ್ಕರೆ ಕಾಯಿಲೆ ಯಲ್ಲಿ ವಿಶ್ವದಲ್ಲಿ 2ನೆ ಸ್ಥಾನದಲ್ಲಿದ್ದು ಹೆಚ್ಚು ಹೆಚ್ಚು ವಯಸ್ಸಿನ ಭೇದ ಇಲ್ಲದೆ ಕಾಲ ಕಾಲಕ್ಕೆ ರಕ್ತ ತಪಾಸಣೆ ಮಾಡಿ ಈ ಕಾಯಿಲೆ ತಡೆಗಟ್ಟುವಲ್ಲಿ ಸಫಲಾರಗಬೇಕು ಎಂದು ಸಲಹೆ ನೀಡಿದರು. ಸೈಬ್ರಕಟ್ಟೆಯ ವೈದ್ಯಾಧಿಕಾರಿ ಡಾ. ಜಯಶೀಲ ಆಚಾರ್ ಮಾತನಾಡಿ ಸಕ್ಕರೆ ತುಂಬಾ ಸಿಹಿ ಯಾಗಿದ್ದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕುಂದಾಪುರ, ಬೈಂದೂರು ತಾಲೂಕು ಹವ್ಯಕ ಸಭಾ ರಿ. ಇದರ ಕಾರ್ಯಕಾರಿಣಿ ಸಭೆ ಮತ್ತು ನುಡಿನಮನ ಕಾರ್ಯಕ್ರಮ ಉಪ್ಪುಂದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಜರುಗಿತು. ಹವ್ಯಕ ಸಭಾ ಅಧ್ಯಕ್ಷರಾದ ನಾಗರಾಜ ಭಟ್ ಮಕ್ಕಿ ದೇವಸ್ಥಾನ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ 21ನೇ ಮಹಾಸಭೆಯನ್ನು ನಡೆಸುವ ಬಗ್ಗೆ ನಿರ್ಧರಿಸಲಾಯಿತು. ಇತ್ತೀಚಿಗೆ ನಿಧನರಾದ ಆನಗಳ್ಳಿ ವೇದಮೂರ್ತಿ ವೆಂಕಟರಮಣ ಭಟ್ ಅವರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭ ಮೃತರ ಕುರಿತು ಸಂಸ್ಕೃತ ವಿದ್ವಾನ್ ಉಪ್ಪುಂದ ಶಂಕರನಾರಾಯಣ ಭಟ್ಟರು ಮಾತನಾಡಿ ಮೃತರಾದ ವೆಂಕಟರಮಣ ಭಟ್ಟರು ಪಾರಂಪರಿಕ ವೈದಿಕ ವೃತ್ತಿಯನ್ನು ಬಹಳ ಕಷ್ಟದಿಂದ ಮತ್ತು ಶ್ರದ್ಧೆಯಿಂದ ನಡೆಸಿಕೊಂಡು ಬಂದಿದ್ದರು. ಇವರು ಶ್ರಮಜೀವಿ ಮತ್ತು ಸರಳ ಜೀವ ಶೈಲಿಯನ್ನು ಅನುಸರಿಸಿದ್ದರು, ಅಪಾರ ಶಿಷ್ಯ ವರ್ಗ ಹೊಂದಿರುವ ಇವರ ಅಗಲುವಿಕೆ ಸಮಾಜಕ್ಕೆ ತುಂಲಾರದ ನಷ್ಟ ತಂದಿದೆ ಎಂದು ಹೇಳಿದರು. ವೇದಮೂರ್ತಿ ಕೃಷ್ಣಭಟ್ ಯರುಕೋಣೆ ಮೃತರ ಬಾವಚಿತ್ರಕ್ಕೆ ಪುಪ್ಪಾರ್ಚನೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಸಭೆಯಲ್ಲಿ ಸಮಿತಿ ಸದಸ್ಯರಾದ ಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿವಿಧ ಕಾರಣಗಳಿಂದ ಕಳೆದ ಮೂರು ವರ್ಷಗಳಿಂದ ಮನೆಗಳನ್ನು ನೀಡಲು ಸಾಧ್ಯವಾಗಿರಲಿಲ್ಲ. ಕಳೆದ ವಿಧಾನಸಭಾ ಅಧಿವೇಶನದಲ್ಲಿ ಗ್ರಾಮೀಣ ಭಾಗದ ಜನರ ಸಮಸ್ಯೆ ಹಾಗೂ ವಸತಿ ರಹಿತರಿಗೆ ವಸತಿ ನೀಡುವಂತೆ ಇಲಾಖೆಯ ಸಚಿವರ ಗಮನ ಸೆಳೆದು ಒತ್ತಾಯಿಸಲಾಗಿತ್ತು. ಇದಕ್ಕೆ ಸ್ಪಂದಿಸಿರುವ ರಾಜ್ಯ ಸರಕಾರ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ವಸತಿ ಹಂಚಿಕೆ ಮಾಡಿ ಆದೇಶ ಹೊರಡಿಸಿದೆ.ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 9 ಸಾವಿರ ಮಂದಿ ಮನೆಗೆ ಅರ್ಜಿ ಸಲ್ಲಿಸಿದ್ದು ಆದ್ಯತೆ ಮೇರೆಗೆ ಅರ್ಹರಿಗೆ ವಸತಿ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಹೇಳಿದರು. 2021-22ನೇ ಸಾಲಿಗೆ ವಸತಿ ಯೋಜನೆಯಡಿ ಸರಕಾರದಿಂದ ನಿಗದಿಪಡಿಸಿದ ಗುರಿಗೆ ಫಲಾನುಭವಿಗಳ ಆಯ್ಕೆ ಕುರಿತು ಹೆಮ್ಮಾಡಿಯ ಜಯಶ್ರೀ ಸಭಾಭವನದಲ್ಲಿ ಜರಗಿದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಮುಂದಿನ ಒಂದು ವರ್ಷದೊಳಗೆ ಪ್ರತಿಯೊಂದು ಮನೆ ಮನೆಗೂ…

Read More

ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ತಾಲ್ಲೂಕಿನ ಹೊಸಾಡು ಮತ್ತು ಬೈಂದೂರು ತಾಲ್ಲೂಕಿನ ಮರವಂತೆ ಗ್ರಾಮ ಪಂಚಾಯಿತಿಗಳು ರಾಜ್ಯ ಸರ್ಕಾರ ಪ್ರತಿವರ್ಷ ತಾಲ್ಲೂಕಿಗೊಂದರಂತೆ ನೀಡುವ ಗಾಂಧಿ ಗ್ರಾಮ ಪುರಸ್ಕಾರಕ್ಕೆ 2020-21ರಲ್ಲೂ ಅರ್ಹತೆ ಪಡೆದು ದಾಖಲೆ ಬರೆದಿವೆ. ವರ್ಷದ ಸಮಗ್ರ ನಿರ್ವಹಣೆ ಮತ್ತು ನಾವೀನ್ಯತಾ ಕಾರ್ಯಕ್ರಮಗಳನ್ನು ಪರಿಗಣಿಸಿ ನೀಡುವ ಈ ಪ್ರಶಸ್ತಿ ರೂ 5 ಲಕ್ಷ ಮೊತ್ತದ ಬಹುಮಾನ ಒಳಗೊಂಡಿದೆ. ಈ ಹಿಂದೆ ಮರವಂತೆ 2013-14, 2019-20ರಲ್ಲಿ, ಹೊಸಾಡು 2016-17, 2017-18ರಲ್ಲಿ ಈ ಪ್ರಶಸ್ತಿ ಗಳಿಸಿದ್ದುವು. ನಿರ್ಮಲ ಗ್ರಾಮ ರಾಷ್ಟ್ರೀಯ ಪುರಸ್ಕಾರ, ಪಂಚಾಯತ್ ರಾಜ್ ಸಶಕ್ತೀಕರಣ ರಾಷ್ಟೀಯ ಪುರಸ್ಕಾರ, ರಜತ ನೈರ್ಮಲ್ಯ ಪುರಸ್ಕಾರ ಪಡೆದ ಹಿರಿಮೆ ಮರವಂತೆಯದಾದರೆ (ಬಹುಮಾನದ ಒಟ್ಟು ಮೊತ್ತ ರೂ 20 ಲಕ್ಷ), ಹೊಸಾಡು ‘ನಮ್ಮ ಗ್ರಾಮ ನಮ್ಮ ಯೋಜನೆ’ಯ ರಾಷ್ಟೀಯ ಪುರಸ್ಕಾರದ ಜತೆಗೆ ರೂ 10 ಲಕ್ಷ ಬಹುಮಾನ ಗಳಿಸಿತ್ತು. ಈ ಪಂಚಾಯಿತಿಗಳು ತಮ್ಮ ನಿಗದಿತ ಪ್ರಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಜತೆಗೆ ಮುಂದಿನ ವಿಶೇಷ ಸಾಧನೆ ಮಾಡಿರುವುದು ಅವುಗಳಿಗೆ ಪ್ರಶಸ್ತಿ…

Read More