Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ರೈಲು ಡಿಕ್ಕಿಯಾಗಿ ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನದ ವೇಳೆ ಶಿರೂರು ಗ್ರಾಮದ ನಿರೋಡಿ ಸಮೀಪ ನಡೆದಿದೆ. ಶಿರೂರು ಮುದ್ರುಮಕ್ಕಿ ನಿವಾಸಿ ನರಸಿಂಹ ಪೂಜಾರಿ ಎಂಬುವವರ ಪುತ್ರ ಸಂಪತ್ ಪೂಜಾರಿ (17) ಮೃತ ದುರ್ದೈವಿ. ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಯಾದ ಸಂಪತ್, ಮಧ್ಯಾಹ್ನ ವೇಳೆ ನಿರೋಡಿಯ ತನ್ನ ಅಜ್ಜಿಯ ಮನೆಯಿಂದ ಮುದ್ರುಮಕ್ಕಿಯ ತಂದೆಯ ಮನೆಗೆ ಹೋಗುವ ಸಲುವಾಗಿ ರೈಲು ಹಳಿಯ ಮೇಲೆ ತೆರಳಿದ್ದಾನೆ. ಈ ವೇಳೆ ಹೆಡ್ ಪೋನ್ ಹಾಕಿಕೊಂಡಿದ್ದರಿಂದ ರೈಲು ಹಿಂದಿನಿಂದ ಬಂದಿರುವುದು ತಿಳಿಯದೇ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ನಾಳೆ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ಇದ್ದುದರಿಂದ ಇಂದು ಕಾಲೇಜಿಗೆ ರಜೆ ನೀಡಲಾಗಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಮಾಹಿತಿ ಕಲೆಹಾಕಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ, ಕೊಲ್ಲೂರು ಶ್ರೀ ಮೂಕಾಂಬಿಕಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಪದವಿಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಸುಣ್ಣಾರಿಯ ಎಕ್ಸಲೆಂಟ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಾನಸ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿ ಜೀವನದಲ್ಲಿ ನಮ್ಮ ಗುರಿ ತುಂಬಾ ಆಳವಾಗಿರಬೇಕು ಮತ್ತು ತುಂಬಾ ದೊಡ್ಡ ಕನಸುಗಳನ್ನು ಹೊಂದಿರಬೇಕು. ಅದಕ್ಕೆ ತಕ್ಕಂತೆ ನಮ್ಮ ಕಠಿಣ ಪರಿಶ್ರಮ ಮತ್ತು ಹೋರಾಟವಿದ್ದರೆ ಗುರಿ ಬೇಗ ತಲುಪಬಹುದು ಎಂದು ಕುಂದಾಪುರ ಉಪವಲಯದ ಅರಣ್ಯ ಅಧಿಕಾರಿ ಹಸ್ತಾ ಶೆಟ್ಟಿ (ಎಸಿಎಫ್) ಹೇಳಿದರು. ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ ಸಿಎ/ಸಿಎಸ್ ತರಬೇತಿ ಶಿಕ್ಷಣ ಸಂಸ್ಥೆ ಮತ್ತು ಲಯನ್ಸ್ ಕ್ಲಬ್ ತಲ್ಲೂರು ಜಂಟಿ ಆಶ್ರಯದಲ್ಲಿ ಶಿಕ್ಷ ಪ್ರಭ ಅಕಾಡೆಮಿಯ ಆಡಿಟೋರಿಯಂನಲ್ಲಿ ಆಯೋಜಿಸಲಾದ ವಿದ್ಯಾರ್ಥಿಗಳಿಗೆ ಹಣ್ಣಿನ ಗಿಡ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಾಧನೆಗೆ ಬಡತನ ಅಡ್ಡಿಯಾಗಲಾರದು. ಹಾಗಿದ್ದರೆ ನಾನು ಈ ಸಾಧನೆ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದರು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ತಲ್ಲೂರಿನ ಅದ್ಯಕ್ಷರಾಗಿರುವ ಬಿ. ಗೋಪಾಲ ಶೆಟ್ಟಿಯವರು ತಲ್ಲೂರು ಲಯನ್ಸ್ ಕ್ಲಬ್ ಖಜಾಂಚಿ ಟಿ. ನಾರಾಯಣ ಶೆಟ್ಟಿ, ಶಿಕ್ಷ ಪ್ರಭ ಸಂಸ್ಥೆಯ ಸಂಸ್ಥಾಪಕರಾದ ಪ್ರತಾಪಚಂದ್ರ ಶೆಟ್ಟಿ, ಭರತ್ ಶೆಟ್ಟಿ ಉಪಸ್ಥಿತರಿದ್ದರು. 150ಕ್ಕೂ ಹೆಚ್ಚು ಅಧಿಕ ಹಣ್ಣಿನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಆ.24: ಸೈಂಟ್ ಕ್ಷೇವಿಯರ್ ಆಂಗ್ಲ ಮಾದ್ಯಮ ಸ್ಕೂಲ್ ಉದ್ಯಾವರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ದೆಯಲ್ಲಿ ಕುಂದಾಪುರದ ಶ್ರೀ ಸಿದ್ಧಿವಿನಾಯಕ ಚೆಸ್ ಅಕಾಡೆಮಿಯ ಒಂಬತ್ತು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ವಿದ್ಯಾರ್ಥಿಗಳಾದ ಯಶಸ್ವಿ ಪೂಜಾರಿ, ವರ್ನಿತ ಕುಂದರ್, ಜೋಷ್ವಿನ್, ಶ್ರೀದನ್ ಇವರೆಲ್ಲ ಹೈಸ್ಕೂಲ್ ವಿಭಾಗದಲ್ಲಿ ಶ್ರಾವ್ಯ, ಜೋಶ್ವಿನ್, ನಮಿಶ್ ಪೂಜಾರಿ, ಪ್ರದ್ಯುಮ್ನ ಅಡಿಗ, ವರ್ಷಿನಿ ಕುಂದರ್ ಪ್ರೈಮರಿ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಆ.24: ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನಗೊಂಡ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಬೈಂದೂರು ತಾಲೂಕು ಕೇಂದ್ರ ಸಮಿತಿ ಮತ್ತು ಬೈಂದೂರು ತಾಲೂಕು ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬೈಂದೂರು ತಾಲೂಕು ಕೇಂದ್ರ ಸಮಿತಿ ಅಧ್ಯಕ್ಷರಾದ ರಘುರಾಮ ಕೆ. ಪೂಜಾರಿ, ಭಜನಾ ಪರಿಷತ್ ಅಧ್ಯಕ್ಷರಾದ ಕೃಷ್ಣ ಪೂಜಾರಿ ಶಿರೂರು, ನಿಕಟಪೂರ್ವ ಕೇಂದ್ರ ಸಮಿತಿ ಅಧ್ಯಕ್ಷರಾದಕೃಷ್ಣ ಪೂಜಾರಿ, ವಂಡ್ಸೆ ವಲಯಅಧ್ಯಕ್ಷರಾದ ವೀಣಾ ಆಚಾರ್ಯ, ಕಿರಿಮಂಜೇಶ್ವರ ವಲಯಾಧ್ಯಕ್ಷರಾದ ದಿನೇಶ್ ಆಚಾರ್ಯ, ತ್ರಾಸಿ ವಲಯ ಅಧ್ಯಕ್ಷರಾದ ನಾಗರಾಜ ಖಾರ್ವಿ, ಕೊಲ್ಲೂರು ವಲಯಾಧ್ಯಕ್ಷರಾದ ಜಯರಾಮ್ ಪೂಜಾರಿ, ಗೋಳಿಹೊಳೆ ವಲಯಾಧ್ಯಕ್ಷರಾದ ಮಂಜುನಾಥ್ ಪೂಜಾರಿ, ಹಟ್ಟಿಯಂಗಡಿ ವಲಯಾಧ್ಯಕ್ಷರಾದ ನಿತ್ಯಾನಂದ ಆಚಾರ್ಯ, ಭಜನಾ ಪರಿಷತ್ ವಲಯ ಸಂಯೋಜಕರಾದ ಮಂಜುನಾಥ್ ಉಪ್ಪುಂದ, ಮಂಜುನಾಥ್ ಕಿರಿಮಂಜೇಶ್ವರ, ಕಿರಿಮಂಜೇಶ್ವರ ವಲಯದ ನಿಕಟಪೂರ್ವ ಅಧ್ಯಕ್ಷರಾದ ಸುಮಾ ಆಚಾರ್ಯ, ಬೈಂದೂರು ತಾಲ್ಲೂಕು ಯೋಜನಾಧಿಕಾರಿ ಕೆ. ವಿನಾಯಕ್ ಪೈ, ಬೈಂದೂರು ವಲಯ ಮೇಲ್ವಿಚಾರಕ ರಾಮಚಂದ್ರ, ಬೈಂದೂರು ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಆ.24: ಕುಂದಾಪುರದ ಫೈಓವರ್ ತಡೆಗೋಡೆಯಲ್ಲಿ ವಿದ್ಯುತ್ ಸಂಚಾರವಾಗುತ್ತಿರುವ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಆತಂಕಕ್ಕೆ ಕಾರಣವಾಗಿತ್ತು. ದಾರಿದೀಪಕ್ಕಾಗಿ ವಿದ್ಯುತ್ ಸಂಪರ್ಪ ಕಲ್ಪಿಸುವ ವೇಳೆ ಮಾಡಲಾಗಿರುವ ತಾಂತ್ರಿಕ ದೋಷವೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಸ್ಪಷ್ಟನೆ ನೀಡಿರುವ ಮೆಸ್ಕಾಂ ಅಧಿಕಾರಿಗಳು, ವಿದ್ಯುತ್ ಸಂಪರ್ಕ ಕಲ್ಪಿಸುವ ವೇಳೆ ತಾಂತ್ರಿಕ ಸಮಸ್ಯೆಯಿಂದ ಈ ರೀತಿಯಾಗಿದೆ. ಮುಂಜಾಗೃತಾ ಕ್ರಮವಾಗಿ ತಕ್ಷಣ ಹೆದ್ದಾರಿ ದಾರಿದೀಪದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ ಎಂದಿದ್ದಾರೆ. ಕುಂದಾಪುರ ಉಪವಿಭಾಗಾಧಿಕಾರಿ ಕೆ. ರಾಜು ಘಟನೆಯ ಬಗ್ಗೆ ಪ್ರತಿಕ್ರಿಯಿಸಿ ಹೆದ್ದಾರಿ ದಾರಿದೀಪದ ನಿರ್ವಹಣೆ ನವಯುಗ ಕಂಪೆನಿ ಜವಾಬ್ದಾರಿಯಾಗಿದ್ದು ಅವರಿಗೆ ಸೂಚನೆ ನೀಡಲಾಗಿದೆ. ತಕ್ಷಣ ಸಮಸ್ಯೆ ಪರಿಹರಿಸುವ ಬಗ್ಗೆ ಆದೇಶ ನೀಡಲಾಗಿದೆ ಎಂದಿದ್ದಾರೆ. ಮಳೆಯ ಹಿನ್ನೆಲೆ ವಾಹನ ಸವಾರರು ಫೈಓವರ್ ಮೇಲೆ ನಿಂತಿದ್ದ ಸಂದರ್ಭ ಫೈಓವರ್ ತಡೆಗೋಡೆ ಭೀಮ್ ನಲ್ಲಿ ಒಂದು ಕಡೆ ವಿದ್ಯುತ್ ಪ್ರವಹಿಸುತ್ತಿರುವ ಅನುಭವವಾಗಿದೆ ಎನ್ನಲಾಗಿದೆ. ಟೆಸ್ಟರ್ ಮೂಲಕ ಪರಿಶೀಲಿಸಿದಾಗ ಟೆಸ್ಟರ್ ನಲ್ಲಿ ಬೆಳಕು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಮಾಜಿ ಶಾಸಕರಾದ ಕೆ. ಲಕ್ಷ್ಮೀನಾರಾಯಣ ಅವರು 84ನೇ ಹುಟ್ಟುಹಬ್ಬವನ್ನು ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಿರೂರಿನಲ್ಲಿ ಪ್ರತ್ಯೇಕವಾಗಿ ಮಂಗಳವಾರ ಅವರ ಅಭಿಮಾನಿಗಳು ಆಚರಿಸಿದರು. ಮಾದರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಸಿಹಿತಿಂಡಿ ಹಾಗೂ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಕಲಿಕಾ ಉಪಕರಣಗಳನ್ನು ವಿತರಿಸಿ ಮಾತನಾಡಿದ ಅವರು, ಮಕ್ಕಳಿಗೆ ಸುಂದರ ಜೀವನ ರೂಪಿಸಿಕೊಳ್ಳುವುದಕ್ಕೆ ವಿದ್ಯಾರ್ಥಿ ಜೀವನ ಅಮೂಲ್ಯ ಅವಕಾಶ. ಉತ್ತಮ ನಡವಳಿಕೆ ಮೂಲಕ ಅದರ ಸದುಪಯೋಗಪಡಿಸಿಕೊಳ್ಳಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಸದಾಶಿವ ಡಿ. ಪಡುವರಿ, ಶಾಲಾ ಅಭಿವೃದ್ಧಿ ಹಾಗೂ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಸಂಜಯ್ ದೇವಾಡಿಗ, ಸಿಟಿ ಜೆಸಿಐನ ಪೂರ್ವಾಧ್ಯಕ್ಷರಾದ ಶ್ರೀಧರ ಆಚಾರ್ಯ, ಶಾಲಾ ಅಭಿವೃದ್ಧಿ ಸಮಿತಿಯ ಭಾಸ್ಕರ್ ದೇವಾಡಿಗ, ದಯಾನಂದ ಉಪಸ್ಥಿತರಿದ್ದರು. ಸಹ ಶಿಕ್ಷಕಿ ಸರಸ್ವತಿ ಸ್ವಾಗತಿಸಿದರು. ಶಾಲಾ ಪದವೀಧರ ಮುಖ್ಯೋಪಾಧ್ಯಾಯರಾದ ಜನಾರ್ದನ ದೇವಾಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ವೀಣಾ ಹೆಗಡೆ ವಂದನಾರ್ಪಣೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ಯಾನ ಬಾಡಬೆಟ್ಟು ಶ್ರೀ ಶನೀಶ್ವರ ಮತ್ತು ಶ್ರೀ ಚೌಡೇಶ್ವರಿ ಟ್ರಸ್ಟ್ ನೇತೃತ್ವದಲ್ಲಿ ಮಣಿಪಾಲ ಕೆಎಂಸಿ ರಕ್ತನಿಧಿ ವಿಭಾಗ ಹಾಗೂ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಸಹಕಾರದೊಂದಿಗೆ ತಲ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.21ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಕುಂದಾಪುರ ಮನೀಶ್ ಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀ ತಜ್ಞೆ ಡಾ. ಪ್ರಮೀಳಾ ನಾಯಕ್ ಉದ್ಘಾಟಿಸಿದರು. ವಕೀಲರಾದ ಟಿ.ಬಿ. ಶೆಟ್ಟಿ, ಶ್ರಿ ಶನಿಶ್ವರ ಮತ್ತು ಚೌಡೇಶ್ವರಿ ದೇವಸ್ಥಾನ ಬಾಡಬೆಟ್ಟು ಕನ್ಯಾನದ ಧರ್ಮದರ್ಶಿಗಳಾದ ಜಯರಾಮ, ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಡಾ.ರಂಗನಾಥ್ ವೈ ಪಿ., ತಲ್ಲೂರು ಗ್ರಾಪಂ ಅಧ್ಯಕ್ಷೆ ಭೀಮವ್ವ, ಸದಸ್ಯರಾದ ಉದಯಕುಮಾರ್ ತಲ್ಲೂರು, ರಕ್ತದ ಆಪತ್ಭಾಂಧವ ಸತೀಶ್ ಸಾಲ್ಯಾನ್, ರಕ್ತದಾನ ಶಿಬಿರದ ಆಯೋಜಕರಾದ ಪ್ರಶಾಂತ್ ತಲ್ಲೂರು ಹಾಗೂ ಅರವಿಂದ್ ಉಪ್ಪಿನಕುದ್ರು ಉಪಸ್ಥಿತ್ತರಿದ್ದರು. ಈ ಸಂದರ್ಭದಲ್ಲಿ ರಕ್ತದಾನಿಗಾದ ವಿಜಯ್ ಕುಂದಾಪುರ, ಚೇತನ್ ಖಾರ್ವಿ ಹಾಗೂ ಕರಣ ಉಪ್ಪಿನಕುದ್ರು ಅವರನ್ನು ಸನ್ಮಾನಿಸಲಾಯಿತು. ಅರುಣ್ ಉಪ್ಪಿನಕುದ್ರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ವಿಶ್ವನಾಥ್ ಉಪ್ಪಿನಕುದ್ರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಹಕಾರಿ ಸಂಸ್ಥೆಯ ಲಾಭ ಗಳಿಸುವ ಜೊತೆಗೆ ಸಾಮಾಜಿಕ ಕಾರ್ಯಗಳಿಗೆ ಅದನ್ನು ವಿನಿಯೋಗಿಸುವ ಮೂಲಕ ತನ್ನ ಸಾಮಾಜಿಕ ಬದ್ಧತೆಯನ್ನು ಪ್ರದರ್ಶಿಸುತ್ತಿರುವುದು ಶ್ಲಾಘನಾರ್ಹ ಎಂದು ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಹೇಳಿದರು. ಅವರು ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ವತಿಯಿಂದ ಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿಯ ಕುಟುಂಬಕ್ಕೆ ಆರ್ಥಿಕ ನೆರವು ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯಿಂದ ಪ್ರೋತ್ಸಾಹ ಪಡೆದವರು ಅದನ್ನು ನೆನಪಿಸಿರಿಸಿಕೊಂಡು ಹೆಚ್ಚಿನ ಸಾಧನೆ ಮಾಡುವಂತಾಗಬೇಕು ಮತ್ತು ಅದು ಮತ್ತೊಬ್ಬರಿಗೆ ಸ್ಪೂರ್ತಿಯಾಗಬೇಕು ಎಂದ ಅವರು ಶ್ರೀ ರಾಮ ಸೌಹಾರ್ದ ಸಂಸ್ಥೆ ಕಳೆದ ಒಂದು ದಶಕದಿಂದ ಜನಮಾನಸದಲ್ಲಿ ಗುರುತಿಸುವಂತ ಕಾರ್ಯ ಮಾಡುತ್ತಿದೆ ಎಂದರು. ಈ ವೇಳೆಯಲ್ಲಿ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಸಾಧಕ ಗುರುರಾಜ ಪೂಜಾರಿ ಹಾಗೂ ಸೈನ್ಯಕ್ಕೆ ಸೇರ್ಪಡೆಗೊಂಡ ಉಡುಪಿ ಜಿಲ್ಲೆಯ ಪ್ರಥಮ ಯುವತಿ ವಿದ್ಯಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ನೂತನ ಪಿಎಸ್ಐ ಆಗಿ ಪವನ್ ನಾಯಕ್ ಅವರು ಅಧಿಕಾರ ಸ್ವೀಕರಿದ್ದಾರೆ. 2016 ಬ್ಯಾಚಿನ ಅಧಿಕಾರಿಯಾಗಿರುವ ಪವನ್ ನಾಯಕ್ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲದವರು. ಈ ಹಿಂದೆ ಉಪ್ಪಿನಂಗಡಿಯಲ್ಲಿ ಪ್ರೊಬೇಷನರಿ ಅವಧಿ ಮುಗಿಸಿ ಧರ್ಮಸ್ಥಳ ಹಾಗೂ ಬೈಂದೂರಿನಲ್ಲಿ ತಲಾ ಒಂದೂವರೆ ವರ್ಷಗಳ ಕಾಲ ಪಿಎಸ್ಐ ಆಗಿ ಸೇವೆ ಸಲ್ಲಿಸಿದ್ದರು. ಗ್ರಾಮಾಂತರ ಠಾಣೆಯ ಪಿಎಸ್ಐ ಆಗಿದ್ದ ನಿರಂಜನ್ ಗೌಡ ಅವರನ್ನು ಬೈಂದೂರು ಠಾಣೆಗೆ ವರ್ಗಾವಣೆಗೊಳಿಸಿ ಅವರ ಸ್ಥಾನಕ್ಕೆ ಪವನ್ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರು ಆದೇಶಿಸಿದ್ದರು.

Read More