ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ: ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು, ನವೆಂಬರ್ 30ರ ಒಳಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 5 ಹಾಗೂ 15 ವರ್ಷ ತುಂಬಿದ ಮಕ್ಕಳ ಬಯೋಮೆಟ್ರಿಕ್ ದಾಖಲೆಗಳನ್ನು ಆಧಾರ್ನಲ್ಲಿ ನಮೂದಿಸಿ, ನಂತರ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಬೇಕು. ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಲಭ್ಯವಾಗದಿದ್ದಲ್ಲಿ ಅಂತಹವರ ಮಾಹಿತಿಯನ್ನು ಸಕಾರಣಗಳೊಂದಿಗೆ ನ್ಯಾಯಬೆಲೆ ಅಂಗಡಿಗೆ ಒದಗಿಸಬೇಕು. ನವೆಂಬರ್ 30ರ ಒಳಗೆ ಇ-ಕೆವೈಸಿ ಮಾಡದೇ ಇರುವ ಪಡಿತರ ಚೀಟಿ ಮತ್ತು ಸದಸ್ಯರ ಬಗ್ಗೆ ಸರ್ಕಾರದ ಸೂಕ್ತ ನಿರ್ದೇಶನದಂತೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪಡುವರಿ ಗ್ರಾಮದ ಒತ್ತಿನೆಣೆ ಎಂಬಲ್ಲಿ ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಪಶ್ಚಿಮ ಬಂಗಾಲ ಮೂಲದ ಕಾರ್ಮಿಕ ಅಕಿಲ್ಚಂದ್ರ ಬರಾಯಿ(50) ಮೃತಪಟ್ಟಿದ್ದಾರೆ. ನ.20ರಂದು ಅವರು ಕೋವಿಡ್ ವ್ಯಾಕ್ಸಿನೇಶನ್ ಹಾಕಿಸಿಕೊಂಡಿದ್ದು ನಂತರ ಅವರಿಗೆ ಜ್ವರ ಬಾಧಿಸಿದೆ. ಕಟ್ಟಡದ ರೂಮ್ನಲ್ಲಿ ವಿಶ್ರಾಂತಿ ಪಡೆದುಕೊಂಡಿದ್ದವರು ನ.24ರಂದು ಬೆಳಗ್ಗೆ ಸಹ ಕಾರ್ಮಿಕ ಎಬ್ಬಿಸಿದಾಗ ಮಾತನಾಡದ ಸ್ಥಿತಿಯಲ್ಲಿ ಕಂಡುಬಂದಿದ್ದು, ಕೂಡಲೇ ಬೈಂದೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಸಹ ಕಾರ್ಮಿಕನಾರಾಯಣ ಬರ್ಮನ್ ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕನ್ನಡ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ಎಂ ಪಿ ಶ್ರೀನಾಥ್ ಗುರುವಾರ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ ಎಂ ಮೋಹನ್ ಆಳ್ವವರನ್ನು ಬೇಟಿ ಮಾಡಿದರು ಕಸಾಪದ ಮೂಲಕ ಕನ್ನಡವನ್ನು ಸಮೃದ್ಧಿಗೊಳಿಸುವ ಬಗೆಗೆ ಚರ್ಚಿಸಿ, ಸಲಹೆ ಸೂಚನೆಗಳನ್ನು ಪಡೆದುಕೊಂಡರು. ಭೇಟಿಯ ಮುನ್ನ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಜತೆ ಕೆಲವು ಹೊತ್ತು ಸಂಭಾಷಣೆ ನಡೆಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ೭೪ನೇ ಹುಟ್ಟು ಹಬ್ಬದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ತಾಲ್ಲೂಕು ಇದರ ವತಿಯಿಂದ ಉದ್ಯಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಸಹಯೋಗದೊಂದಿಗೆ ಸ್ವರ್ಣಾಮೃತ ಪ್ರಾಶನ ಕಾರ್ಯಕ್ರಮ ತ್ರಾಸಿ ಯೋಜನಾ ಕಚೇರಿಯಲ್ಲಿ ನಡೆಯಿತು. ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆಯುರ್ವೇದ ಕಾಲೇಜು ವ್ಯವಸ್ಥಾಪಕ ಡಾ.ನಾಗರಾಜ್ ಪೂಜಾರಿ, ಶಾಸ್ತ್ರೋಕ್ತವಾಗಿ ಮಕ್ಕಳಿಗೆ ‘ಸ್ವರ್ಣಾಮೃತ ಪ್ರಾಶನ’ ಎಂಬ ದಿವ್ಯ ಔಷಧಿಯನ್ನು ಪ್ರತಿ ತಿಂಗಳು ಪು? ನಕ್ಷತ್ರದಂದು ನೀಡಲಾಗುತ್ತಿದೆ. ಹುಟ್ಟಿನಿಂದ 16 ವರ್ಷವರೆಗಿನ ಮಕ್ಕಳಿಗೆ ಪ್ರತಿ ತಿಂಗಳು ಹಾಕಿದಲ್ಲಿ ಅತ್ಯುತ್ತಮ ಪರಿಣಾಮ ಬೀರುತ್ತದೆ. ಕನಿಷ್ಠ 21ಬಾರಿ ಪ್ರತಿ ತಿಂಗಳು ಬಿಡದೆ ಹಾಕಿದಲ್ಲಿ ತುಂಬಾ ಪರಿಣಾಮಕಾರಿ ಎಂದು ಹೇಳಿದರು. ಮಕ್ಕಳ ತಜ್ಞ ಡಾ. ಪ್ರಥ್ವಿರಾಜ್ ಪುರಾಣಿಕ್, ಕೇಂದ್ರ ಸಮಿತಿ ಒಕ್ಕೂಟ ಅಧ್ಯಕ್ಷ ರಘುರಾಮ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸಿಆರ್ಝೆಡ್ನಲ್ಲಿ ಗುರುತಿಸಲಾಗಿ ರುವ ಮರಳುಗಾರಿಕೆ ದೋಣಿ ಹಾಗೂ ಮರಳು ಸಾಗಾಟ ವಾಹನಗಳಿಗೆ ಅಳವಡಿಸಿರುವ ಜಿಪಿಎಸ್ ತಂತ್ರಾಂಶ ನಿಯಂತ್ರಣ ಹಾಗೂ ಉಲ್ಲಂಘನೆ ಬಗ್ಗೆ ಪರಿಶೀಲಿಸಲು ಜಿಪಿಎಸ್ ಮಾನಿಟರಿಂಗ್ ಸೆಂಟರ್ ಆರಂಭಿಸಲಾಗಿದೆ ಎಂದು ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಅಧ್ಯಕ್ಷ, ಜಿಲ್ಲಾಧಿಕಾರಿ ಕೂರ್ಮಾ ರಾವ್ ತಿಳಿಸಿದ್ದಾರೆ. ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಗಣಿಗಾರಿಕೆ, ಸಾಗಾಣಿಕೆ, ದಾಸ್ತಾನು ಸಂಬಂಧಿಸಿದಂತೆ ಜಿಲ್ಲಾ ಮಟ್ಟದಲ್ಲಿ 24X7 ಅಲರ್ಟ್ ಆಗಿರುವಂತೆ ಈ ಸೆಂಟರ್ನ್ನು ಎನ್ಐಸಿ, ಇ-ಗವರ್ನೆನ್ಸ್ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ವತಿಯಿಂದ ಪ್ರಾರಂಭಿಸಲಾಗಿದೆ. ಈ ಕಂಟ್ರೋಲ್ ರೂಂನ ದೂರವಾಣಿ ಸಂಖ್ಯೆ 0820-2950088 ಆಗಿದ್ದು, ಅನಧಿಕೃತ ಗಣಿಗಾರಿಕೆ, ಸಾಗಾಣಿಕೆ ಹಾಗೂ ದಾಸ್ತಾನು ನಿಯಂತ್ರಿಸುವ ಸಲುವಾಗಿ ಜಿಲ್ಲೆಯಲ್ಲಿ ತಾಲೂಕು ಮಟ್ಟದ ಅಧಿಕಾರಿ ಗಳನೊಳಗೊಂಡ ಚಾಲಿತ ದಳ ರಚಿಸಲಾಗಿದೆ ಎಂದರು. ಕುಂದಾಪುರ, ಬ್ರಹ್ಮಾವರ, ಉಡುಪಿ ತಾಲೂಕು ವ್ಯಾಪ್ತಿಯ ವಾರಾಹಿ, ಸೌಪರ್ಣಿಕಾ, ಸ್ವರ್ಣಾ ಮತ್ತು ಸೀತಾನದಿ ಗಳಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾಠ್ಯ ಹಾಗೂ ನಾನ್ ಸಿಆರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುರಭಿ ರಿ. ಬೈಂದೂರು ಸಂಸ್ಥೆಯ ವಿಶೇಷ ಸಭೆ ಇತ್ತಿಚಿಗೆ ಬೈಂದೂರು ರೋಟರಿ ಭವನದಲ್ಲಿ ಜರುಗಿತು. ಈ ಸಂದರ್ಭ ರಾಜ್ಯಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ 50ರಿಂದ 60 ವಯೋಮಾನ ವಿಭಾಗದ 400 ಮೀಟರ್ ಓಟದ ಸ್ವರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ ಮಟ್ಟಕ್ಕೆ ಆಯ್ಕೆಯಾದ ಗಂಗಾನಾಡು ಸ.ಹಿ.ಪ್ರಾ ಶಾಲೆ ಸಹಶಿಕ್ಷಕ ನಾಗರಾಜ ಬಿ. ಅವರನ್ನು ಸುರಭಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಸುರಭಿ ಅಧ್ಯಕ್ಷ ನಾಗರಾಜ ಪಿ. ಯಡ್ತರೆ, ಕಾರ್ಯದರ್ಶಿ ಭಾಸ್ಕರ ಬಾಡ, ನಿರ್ದೇಶಕ ಸುಧಾಕರ ಪಿ. ಬೈಂದೂರು, ಸದಸ್ಯರಾದ ಆನಂದ ಮದ್ದೋಡಿ, ವೆಂಕಟೇಶ್ ಮಯ್ಯಾಡಿ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶೋರಿನ್ ರಿಯೂ ಕರಾಟೆ ಅಸೋಸಿಯೇಷನ್ ವತಿಯಿಂದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಇತ್ತೀಚಿಗೆ ಆಯೋಜಿಸಿದ 18ನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆಯ ಕಟಾ ಮತ್ತು ಫೈಟಿಂಗ್, (ಕುಮೆಟಿ) ವಿಭಾಗದಲ್ಲಿ ಅನನ್ಯ ಎಸ್ ಪುರಾಣಿಕ್ ಪ್ರಥಮ ಮತ್ತು ತೃತೀಯ ಸ್ಥಾನಗಳಿಸಿ ಚಿನ್ನದ ಹಾಗೂ ಕಂಚಿನ ಪದಕ ಪಡೆದುಕೊಂಡಿದ್ದಾರೆ ಅವರು, ನಾಗೂರು ಸಂದೀಪನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿನಿಯಾಗಿದ್ದು. ಉಪ್ಪುಂದ ಸೀತಾರಾಮ್ ಪುರಾಣಿಕ್ ಮತ್ತು ಉಷಾ ಪುರಾಣಿಕ್ ರವರ ಪುತ್ರಿ . ಉಪ್ಪುಂದ ಕರಾಟೆ ಶಿಕ್ಷಕ ವಿಶ್ವನಾಥ್ ದೇವಾಡಿಗ ಅವರಲ್ಲಿ ತರಬೇತಿಯನ್ನು ಪಡೆದುಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಜರಗುವ ವಾರ್ಷಿಕ ದೀಪೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಿತು. ದೀಪೋತ್ಸವದ ಅಂಗವಾಗಿ ವನಭೋಜನ, ಧಾತ್ರೆ ಹವನ, ಮಹಾಪೂಜೆ, ಮಹಾಸಮಾರಾಧನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ದೇವಸ್ಥಾನದ ತಾಂತ್ರಿಕ ಜಿ.ರಾಘವೇಂದ್ರ ಆಚಾರ್ಯ ಮತ್ತು ದೇವಳದ ಪ್ರಧಾನ ಅರ್ಚಕ ಜಿ.ಪ್ರದೀಪ ಭಟ್ ನೇತೃತ್ವದಲ್ಲಿ ನಡೆಯಿತು. ದೇವಸ್ಥಾನದ ಆಡಳಿತ ಮೊಕ್ತೇಸರ ಜಿ.ರಘುವೀರ ನಾಯಕ್, ಜಿ.ನರಸಿಂಹ ನಾಯಕ್, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು. ಆಡಳಿತ ಮಂಡಳಿ ಸದಸ್ಯರು, ಸಮಾಜಬಾಂಧವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಮತ್ತು ಸೃಜನಶೀಲತೆಯನ್ನು ಬೆಳೆಸುವ ಉದ್ದೇಶದಿಂದ ಆಸುಪಾಸಿನ ಆಯ್ದ ಪ್ರೌಢಶಾಲೆಯ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸವಿ ಪ್ರತಿಭಾ ಶೋಧ ಶೈಕ್ಷಣಿಕ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಗಂಗೊಳ್ಳಿಯ ಜಿ.ಎಸ್. ವಿ.ಎಸ್ ಅಸೋಸಿಯೇಷನ್ ರಿ. ಅಧ್ಯಕ್ಷ ಡಾ. ಕಾಶಿನಾಥ್ ಪೈ, ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಜಿ ಬಹುಮಾನಗಳನ್ನು ವಿತರಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ ವಹಿಸಿದ್ದರು. ಆಂಗ್ಲಭಾಷಾ ಉಪನ್ಯಾಸಕರಾದ ಥಾಮಸ್ ಪಿ. ಎ ಮತ್ತು ಶಾಲೆಟ್ ಲೋಬೊ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್. ಕೆ ಉಪಸ್ಥಿತರಿದ್ದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮವನ್ನು ನಿರ್ವಹಿಸಿದರು. ಕನ್ನಡ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರತಿಯೊಬ್ಬರೂ ದೈಹಿಕವಾಗಿ ಸದೃಢರಾಗಲು ಕ್ರೀಡೆ ಅತೀ ಅವಶ್ಯಕ. ಕ್ರೀಡೆಯಿಂದ ಆರೋಗ್ಯ ವೃದ್ಧಿಗೊಳ್ಳುವುದಲ್ಲದೆ ಮಾನಸಿಕವಾಗಿ ಶಕ್ತರಾಗುತ್ತೇವೆ. ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಸೌಹಾರ್ದ ಮನೋಭಾವ ಬೆಳೆಯಲು ಸಾಧ್ಯ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ವಿನಾಯಕ್ ಶೆಣೈ ಹೇಳಿದರು. ಅವರು ಜಿಲ್ಲಾ ಗೃಹ ರಕ್ಷಕ ದಳ ಕಚೇರಿಯಲ್ಲಿ, ಗೃಹರಕ್ಷಕ ದಳದ ವತಿಯಿಂದ ನಡೆದ, ಜಿಲ್ಲಾ ಮಟ್ಟದ ವೃತ್ತಿಪರ ಮತ್ತು ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಗೃಹರಕ್ಷಕರು ದೇಶ ಸೇವೆ, ಸಮಾಜ ಸೇವೆಯಲ್ಲಿ ತಲ್ಲೀನರಾದಂತೆ, ಕ್ರೀಡಾ ಕ್ಷೇತ್ರದಲ್ಲೂ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಮುಂದೆ ಜಿಲ್ಲೆ, ರಾಜ್ಯ, ದೇಶವನ್ನು ಪ್ರತಿನಿಧಿಸುವಂತಾಗಬೇಕು ಎಂದರು. ದೇಶ ರಕ್ಷಣೆ ಮಾಡುವ ಸೇನೆ, ಆಂತರಿಕ ಭದ್ರತೆಯನ್ನು ಕಾಪಾಡುವ ಸಿ.ಆರ್.ಪಿ.ಎಫ್ ಹಾಗೂ ಸಮಾಜದ ರಕ್ಷಣೆ ಮಾಡುವ ಆರಕ್ಷಕ ದಳಕ್ಕೆ ಸರಿಸಾಟಿಯಾಗಿ ದೇಶದೆಲ್ಲೆಡೆ ಅಗತ್ಯಕ್ಕನುಗುಣವಾಗಿ ಚುನಾವಣಾ ಸಂದರ್ಭದಲ್ಲಿ, ಯಾವುದೇ ರೀತಿಯ ಅವಘಡಗಳು ಸಂಭವಿಸಿದ ಸಂದರ್ಭದಲ್ಲಿ, ಸರಕಾರದಿಂದ ಕರೆ ಬಂದಾಗ, ಯಾವುದನ್ನೂ ಲೆಕ್ಕಿಸದೆ ದೇಶ ಹಾಗೂ ಸಮಾಜ ಸೇವೆಯಲ್ಲಿ…
