Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಕರ್ನಾಟಕ ಸರ್ಕಾರ ಮೈಸೂರು ಇವರ ನೇತೃತ್ವದಲ್ಲಿ ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಹೊಸಮಠದ ಕೊರಗರ ಕಾಲೋನಿಯಲ್ಲಿ ಎಸ್‌ಇಪಿ ಮತ್ತು ಟಿಎಸ್‌ಪಿ ಕಾಯ್ದೆಯ ಮಾಹಿತಿ ಕಾರ‍್ಯಗಾರ ನಡೆಯಿತು. ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ರಮೇಶ್ ಕುಲಾಲ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು ಕೆದೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾಧವ ಗ್ರಾಮ ಪಂಚಾಯತ್‌ನಲ್ಲಿ ಕೊರಗರಿಗೆ ಸಿಗುವ ಸೌಲಭ್ಯದ ಕುರಿತು ಮಾಹಿತಿ ನೀಡಿದರು. ಕೋಟ ಆರಕ್ಷಕ ಠಾಣೆಯ ಎಎಸ್‌ಐ ಗಣೇಶ್ ಮಾತನಾಡಿ, ಕೊರಗರ ಮೇಲೆ ದೌರ್ಜನ್ಯ ನಡೆದರೇ ಹೇಗೆ ದೂರು ನೀಡಬೇಕು ಮತ್ತು ಪೊಲೀಸ್ ಇಲಾಖೆಯಲ್ಲಿ ಸಿಗುವ ಸೌಲಭ್ಯದ ಕುರಿತು ಮಾಹಿತಿ ನೀಡಿದರು. ಕೆದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ, ಪಂಚಾಯತ್ ಸದಸ್ಯೆ ಗುಬ್ಬಿ ಉಪಸ್ಥಿತರಿದ್ದರು. ಕುಂಭಾಸಿ ಮಕ್ಕಳ ಮನೆ ಶಿಕ್ಷಕಿ ವಿನುತಾ ಸ್ವಾಗತಿಸಿದರು. ಬುಡಕಟ್ಟು ಸಂಶೋಧನಾ ಕೇಂದ್ರದ ಮನೋಜ್ ಕಾರ್ಯಕ್ರಮ ನಿರೂಪಿಸಿದರು. ಮಕ್ಕಳ ಮನೆ ಸಂಚಾಲಕ ಗಣೇಶ್ ವಿ ಕುಂದಾಪುರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಂದನ ಯುವಕ ಮಂಡಲ ಬೀಜಾಡಿ ಗೋಪಾಡಿ ಇವರ ೧೮ನೇ ವರ್ಷದ ವಾರ್ಷಿಕೋತ್ಸವ ಹಾಗೂ ದಿ.ಬೀಜಾಡಿ ನಾರಾಯಣ ಉಪಾಧ್ಯರ ಸಂಸ್ಮರಣ ಪ್ರಶಸ್ತಿ ಪ್ರಧಾನ ಸಮಾರಂಭ ಬೀಜಾಡಿ ಪೂಜಾ ಟೈಲ್ಸ್ ಅವರಣದಲ್ಲಿ ಜರುಗಿತು. ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ ಮಾರ್ಕೋಡು ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಹಂದಕುಂದ ಅಶೋಕ್ ಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ರಥಶಿಲ್ಪಿ ರಾಜಗೋಪಾಲ ಆಚಾರ್ಯ, ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ಪ್ರಭಾಕರ ಶೆಟ್ಟಿ, ಚಂದನ ಯುವಕ ಮಂಡಲದ ಅಧ್ಯಕ್ಷ ಮಹೇಶ್ ಚಂದನ್, ಕಾರ್ಯದರ್ಶಿ ಗಣೇಶ್ ಆಚಾರ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಯಕ್ಷಲೋಕ ತಿರುಗಾಟದಲ್ಲಿ ೫ ದಶಕಗಳ ಕಾಲ ಸೇವೆ ಸಲ್ಲಿಸಿದ ಬಡಗುತಿಟ್ಟಿನ ಖ್ಯಾತ ಹಾಸ್ಯ ಯಕ್ಷ ಕಲಾವಿದ ಹಳ್ಳಾಡಿ ಜಯರಾಮ ಶೆಟ್ಟಿ ಇವರಿಗೆ ದಿ.ಬೀಜಾಡಿ ನಾರಾಯಣ ಉಪಾಧ್ಯರ ಸಂಸ್ಮರಣ ಪ್ರಶಸ್ತಿ ಪ್ರಧಾನ ಮಾಡಿ ನಗದು ಪುರಸ್ಕಾರ ನೀಡಿ ಗೌರವಿಸಿ ಸನ್ಮಾನಿಸಲಾಯಿತು. ಗಿರಿಧರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗೀತಾ ಜಯಂತಿಯ ಅಂಗವಾಗಿ ಕೋಟೇಶ್ವರದ ಶ್ರೀ ಶಂಕರ ಜಯಂತಿ ಭಜನಾ ಮಂಡಳಿಯವರಿಂದ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಾಲಯದಲ್ಲಿ ಶ್ರೀಮದ್ ಭಗವದ್ಗೀತೆಯ ಸಾಮೂಹಿಕ ಪಠಣ ನಡೆಯಿತು. ಬೆಳಿಗ್ಗೆ ೯ಕ್ಕೆ ಪಠಣ ಆರಂಭಿಸಿದ ತಂಡ ಮಧ್ಯಾಹ್ನ ೧೨ ರವರೆಗೂ ಗೀತೆಯ ಸಮಗ್ರ ಹದಿನೆಂಟು ಅಧ್ಯಾಯಗಳನ್ನು ಪಠಿಸಿದರು. ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ. ಪ್ರಭಾಕರ ಶೆಟ್ಟಿ ಮತ್ತು ಸದಸ್ಯರು ಉಪಸ್ಥಿತರಿದ್ದು ಶುಭ ಕೋರಿದರು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸದಸ್ಯೆ ವಸಂತಿ ಮಿತ್ಯಂತ ಗೀತೆಯ ಶ್ರೇಷ್ಠತೆ ಮತ್ತು ಅದರ ಪಠಣದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸಾಮೂಹಿಕವಾಗಿ ಪೂಜೆ ನೆರವೇರಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ಮತ್ತು ಘಟಕ 2ರ 2021-22ರ ಸಾಲಿನ ಕಾರ್ಯಕ್ರಮಗಳ ಉದ್ಘಾಟನೆ ಇತ್ತಿಚಿಗೆ ನಡೆಯಿತು. ಬೈಂದೂರು ಪೊಲಿಸ್‌ ಠಾಣೆ ಆರಕ್ಷಕ ಉಪನೀರಿಕ್ಷಕರಾದ ಪವನ್‌ ನಾಯಕ್‌ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವ, ಗುರಿಗಳು, ದೇಶ ಕಟ್ಟುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವದ ಬಗ್ಗೆ ಅರಿವು ಮುಡಿಸಿದರು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಯಾವ ತರಹದ ಸಿದ್ಧತೆಯನ್ನು ನಡೆಸಬೇಕು, ಪಠ್ಯಕ್ರಮ ಮತ್ತು ಯಾವ ಪುಸ್ತಕಗಳನ್ನು ಓದಬೇಕು ಅನ್ನುವ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ರಘು ನಾಯ್ಕ ಅವರು ವಹಿಸಿದ್ದರು. ಘಟಕ 2 ರ ಯೋಜನಾಧಿಕಾರಿ ಲತಾ ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ದ್ವಿತೀಯ ಬಿ ಕಾಂ ವಿದ್ಯಾರ್ಥಿನಿ ಕು. ಸುಶ್ಮೀತಾ ನಿರೂಪಿಸಿದರು. ದ್ವಿತೀಯ ಬಿ ಕಾಂ ವಿದ್ಯಾರ್ಥಿನಿ ಮೋನಾಕ್ಷಿ ಸ್ವಾಗತಿಸಿದರು. ಘಟಕ 1 ರ ಯೋಜನಾಧಿಕಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಎನ್ಸಿಸಿ ಆರ್ಮಿ ಘಟಕದ ಆಯೋಜನೆಯಲ್ಲಿ ಕುಂದಾಪುರದಿಂದ ಮರವಂತೆ ತನಕ ಸೈಕಲ್ ಜಾಥಾವನ್ನು ಡಿಸೆಂಬರ್ 18ರಂದು ಬೆಳಿಗ್ಗೆ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ನಾರಾಯಣ ನಾಯ್ಕ್ ಎನ್ಸಿಸಿ ಧ್ವಜ ಏರಿಸುವುದರ ಮೂಲಕ ಜಾಥಕ್ಕೆ ಚಾಲನೆ ನೀಡಿದರು. ನಾಗರಿಕ ಸಮಾಜವನ್ನು ಎಚ್ಚರಿಸುವ ಭಿತ್ತಿ ಪತ್ರಗಳನ್ನು ಹೊಂದಿರುವ, ವಿವಿಧ ಸಾಮಾಜಿಕ ಸಂದೇಶ ಸಾರುವ ಸೈಕಲ್ಗಳಲ್ಲಿ ವಿದ್ಯಾರ್ಥಿಗಳು ಕಾಲೇಜಿನಿಂದ ಮರವಂತೆ ಬೀಚ್ ತನಕ ಪಯಣಿಸಿದರು. ಚಾಲನೆ ವೇಳೆ ಕುಂದಾಪುರಠಾಣಾಧಿಕಾರಿ ಸದಾಶಿವ್ ಆರ್ ಗೌರೋಜಿ, ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ, ಶಿವರಾಜ್ ಸಿ. ಎನ್ಸಿಸಿ ಅಧಿಕಾರಿ ಮತ್ತು ಸಹ ಸಂಯೋಜಕ ಸುಜಯ್ ಹಾಗೂ ಕಾಲೇಜಿನ ಬೋಧಕ ಬೋಧಕೇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ಕುಮಾರಿ ಸೌಮ್ಯ ಕುಂದರ್ ನಿರೂಪಿಸಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಜನ್ಮದಿನ ಹಿನ್ನೆಲೆಯಲ್ಲಿ ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನ ನೀಡುತ್ತಾ ಬಂದಿರುವ ಬಸ್ರೂರು ಅಪ್ಪಣ್ಣ ಹೆಗ್ಡೆ ಕೃಷಿ ಪ್ರಶಸ್ತಿಗೆ ಕುರಿಯಾಜೆ ತಿರುಮಲೇಶ್ವರ ಭಟ್ ಆಯ್ಕೆ ಆಗಿದ್ದಾರೆ. ಬಸ್ರೂರು ಶಾರದಾ ಕಾಲೇಜ್ ಆವರಣದಲ್ಲಿ ಡಿ.24ರ ಸಂಜೆ 4ಕ್ಕೆ ನಡೆಯುವ ಅಪ್ಪಣ್ಣ ಹೆಗ್ಡೆ 87ನೇ ಹುಟ್ಟು ಹಬ್ಬದಲ್ಲಿ ಪ್ರಶಸ್ತಿ ಪ್ರಧಾನ, ವಿದ್ಯಾರ್ಥಿಗಳು, ಅನಾರೋಗ್ಯ ಪೀಡಿತರು ಹಾಗೂ ಅಶಕ್ತರಿಗೆ ದತ್ತಿನಿಧಿ ಸಹಾಯಧನ ವಿತರಿಸಲಾಗುತ್ತದೆ. ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ಅಧ್ಯಕ್ಷತೆ ವಹಿಸಲಿದ್ದು, ಸುಬ್ರಹ್ಮಣ್ಯ ಮಠ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಎಂದು ಕುಂದಾಪುರ ತಾಪಂ ಮಾಜಿ ಉಪಾಧ್ಯಕ್ಷ ರಾಮ್‌ಕಿಶನ್ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುರಿಯಾಜೆ ತಿರುಮಲೇಶ್ವರ ಭಟ್ ಸುಳ್ಯ ತಾಲೂಕು, ಬೆಳ್ಳಾರೆ ಸಮೀಪದ ಕುರಿಯಾಜೆಯವರಾಗಿದ್ದು, ಕಳೆದ ಕೆಲವು ವರ್ಷಗಳಿಂದ ಕೃಷಿಯಲ್ಲಿ ಅದ್ಭುತವಾದ ಸಾಧನೆ ಮಾಡಿದ್ದಾರೆ. ದೇಶ-ವಿದೇಶಗಳಿಂದ ತಂದು ಬೆಳೆಸಿದ ಹಣ್ಣು ಹೂವು ಗಿಡಮೂಲಿಕೆ ಸೇರಿದಂತೆ ನೂರಾರು ಬಗೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿರಿಯ ಚಲನಚಿತ್ರ ನಟ ರಮೇಶ್ ಭಟ್ ಶುಕ್ರವಾರ ಮಂಕಿ ಮೂಲ ಮನಗೆ ಭೇಟಿ ನೀಡುವ ಸಂದರ್ಭ ಬೀಜಾಡಿ ಕಪಿಲಾ ದೇಶೀಹಸುಗಳ ಗೋಶಾಲೆಗೆ ಭೇಟಿ ನೀಡಿ ಗೀರ್ ಹಾಗೂ ಇತರ ಜಾತಿ ಹಸುಗಳ ವೀಕ್ಷಿಸಿದರು. ಈ ಸಂದರ್ಭ ಅವರು ಮಾತನಾಡಿ ನೂರಾರು ದೇಸಿತಳಿ ಹಸುಗಳು ಕಣ್ಮರೆಯಾಗಿ ಬೆರಳೆಣಿಕೆಯಷ್ಟು ಹಸುಗಳ ಮಾತ್ರ ಉಳಿದಿದೆ. ದೇಶೀ ಹಸುಗಳ ರಕ್ಷಣೆ ಮಾಡದಿದ್ದರೆ ಭಾರತೀಯ ಗೋತಳಿಗಳ ಇತಿಹಾಸ ಸೇರಲಿದ್ದು, ಕಪಿಲಾ ಗೋಲೆಯಲ್ಲಿ ಗೀರ್ ಅಲ್ಲದೆ ಬೇರೆ ತಳಿಗಳ ರಕ್ಷಣೆ ಮಾಡುತ್ತಿರುವುದು ಅಭಿನಂದನೀಯ ಎಂದು ಹೇಳಿದರು. ಕಪಿಲಾ ಗೋಶಾಲೆ ಸಂಸ್ಥಾಪಕ ಕುಮಾರ್ ಕಾಂಚನ್ ಅವರು ರಮೇಶ್ ಭಟ್ ಅವರನ್ನು ಬರಮಾಡಿಕೊಂಡು, ಗೋ ತಳಿಗಳ ಬಗ್ಗೆ ಮಾಹಿತಿ ನೀಡಿ, ದೇಶೀಹಸುಗಳಿಂದ ಸಿದ್ದ ಮಾಡುತ್ತಿರುವ ಉತ್ಪನ್ನಗಳ ಬಗ್ಗೆ ಮಾಹಿತಿ ನೀಡಿದರು. ದೇಶೀಹಸುಗಳ ವೀಕ್ಷಿಸಿದ ನಂತರ ರಮೇಶ್ ಭಟ್ ರೋಟರಿ ಕ್ಲಬ್ ಕುಂದಾಪುರಕ್ಕೆ ಭೇಟಿ ನೀಡಿದ್ದು, ಮಾಜಿ ರೋಟರಿ ಸಹಗೌವರ್ನರ್ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ ಹಾಗೂ ಸದಸ್ಯರು ಸನ್ಮಾನಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಧರ್ಮಸ್ಥಳ, ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಬೆಳ್ತಂಗಡಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಂದಾಪುರ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಬಸ್ರೂರಿನ ನಿವೇದಿತ ಪ್ರೌಢಶಾಲೆಯಲ್ಲಿ ಶೌರ್ಯ ವಿಪತ್ತು ನಿರ್ವಹಣ ಸ್ವಯಂ ಸೇವಕರ ತರಬೇತಿ ಕಾರ್ಯಕ್ರಮ ಜರುಗಿತು. ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ, ತಾಲೂಕು ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಬಿ.ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಕರಾವಳಿ ಪ್ರಾದೇಶಿಕ ಕಚೇರಿ ನಿರ್ದೇಶಕ ವಸಂತ್ ಸಾಲಿಯಾನ್ ತರಬೇತಿ ಕಾರ‍್ಯಗಾರ ಉದ್ಘಾಟಿಸಿ ಶುಭ ಹಾರೈಸಿದರು. ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ನವೀನ್ ಅಮೀನ್, ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಉರಗ ತಜ್ಞ ಮಹೇಶ್ ನಾಯಕ್ ಅಂಕೋಲಾ, ಉಡುಪಿ ಜಿಲ್ಲೆಯ ಹಿರಿಯ ನಿರ್ದೇಶಕ ಗಣೇಶ ಬಿ, ಮುಖ್ಯ ಶಿಕ್ಷಕ ಸುಬ್ಬಣ್ಣ ಕೋಣಿ, ತಾಲೂಕಿನ ಹಿರಿಯ ಯೋಜನಾಧಿಕಾರಿ ಮುರುಳೀಧರ ಶೆಟ್ಟಿ, ತಾಲೂಕಿನ ಎಲ್ಲಾ ಮೇಲ್ವಿಚಾರಕರು, ಜ್ಞಾನವಿಕಾಸ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಸ್ಥೆಯು ಪ್ರಸಕ್ತ ಸಾಲಿನಲ್ಲಿ ೧೩,೪೯೪ ಎ ದರ್ಜೆ ಸದಸ್ಯರಿದ್ದು ರೂ. ೨೪.೨೨ ಕೋಟಿ ಠೇವಣಿ ಹೊಂದಿದೆ. ಶೇ. ೯೬.೮೭ ಸಾಲ ವಸೂಲಾತಿಯ ಸಾಧನೆ ಮಾಡಿದೆ. ರೂ. ೬೬.೨೮ ಲಕ್ಷ ನಿವ್ವಳ ಲಾಭ ಗಳಿಸಿದೆ. ಸಂಸ್ಥೆಯು ಮುಂದಿನ ದಿನದಲ್ಲಿ ಶಾಖೆಗಳಿಗೆ ಸ್ವಂತ ಸ್ಥಳ ಖರೀದಿ ಮಾಡುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಈಗಾಗಲೇ ಸದಸ್ಯರಿಗೆ ಶೇ.೧೨ ಡಿವಿಡೆಂಡ್ ನೀಡಲು ತೀರ್ಮಾನಿಸಲಾಗಿದೆ. ವರದಿ ಸಾಲಿನಲ್ಲಿ ಮೃತಪಟ್ಟ ಮೀನುಗಾರರ ವಾರೀಸುದಾರರಿಗೆ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ ರೂ. ೩ ಲಕ್ಷ ಪರಿಹಾರ ಧನ ಸಿಗುವಲ್ಲಿ ಸಹಕರಿಸಿದ್ದು ಹಾಗೂ ಮೀನುಗಾರ ಸದಸ್ಯರಿಗೆ ಸರ್ಕಾರದಿಂದ ೩ ಸಾವಿರ ರೂಪಾಯಿಯಂತೆ ೮೩೬ ಸದಸ್ಯರಿಗೆ ರೂ.೨೫,೦೮,೦೦೦/- ಕೋವಿಡ್ ಪರಿಹಾರವನ್ನು ಒದಗಿಸಿಕೊಟ್ಟಿದ್ದೇವೆ ಎಂದು ಬೀಜಾಡಿ ಮೀನುಗಾರರ ಸಹಕಾರಿ ಸಂಘದ ರತ್ನ ಮೊಗೇರ್ತಿ ಬೀಜಾಡಿ ಹೇಳಿದರು. ಅವರು ಗೋಪಾಡಿ ಚಿಕ್ಕು ಅಮ್ಮ ದೇವಸ್ಥಾನದ ಬ್ರಹ್ಮಲಿಂಗೇಶ್ವರ ಸಭಾಭವನದಲ್ಲಿ ಜರುಗಿದ ಬೀಜಾಡಿ ಮೀನುಗಾರರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಪಾಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.16: ಮೂಕ ಪ್ರಾಣಿಗಳಿಗೆ ಚಿಕಿತ್ಸೆ ನೀಡುವುದು ಸವಾಲಿನ ಕೆಲಸವಾಗಿದ್ದು, ಪಶುವೈದ್ಯರು ಅವುಗಳನ್ನು ಪರೀಕ್ಷಿಸಿ, ಅವುಗಳಿಗೇನಾಗಿದೆ ಎಂಬುದನ್ನು ಸೂಕ್ಷ್ಮವಾಗಿ ಅರಿತು ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಇಂದು ನಗರದ ಪಶುವೈದ್ಯಕೀಯ ಪಾಲಿ ಕ್ಲಿನಿಕ್ನಲ್ಲಿ, ರಾಷ್ಟ್ರೀಯ ಜಾನುವಾರು ರೋಗನಿಯಂತ್ರಣ ಕಾರ್ಯಕ್ರಮದ , ಎರಡನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಗೋಪೂಜೆ ನೆರೆವೇರಿಸುವ ಮೂಲಕ ಉದ್ಘಾಟಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಜಾನುವಾರು ಗಣತಿಯ ಪ್ರಕಾರ ಜಿಲ್ಲೆಯಲ್ಲಿ 2.57 ಲಕ್ಷ ಜಾನುವಾರುಗಳಿದ್ದು, ಎಲ್ಲಾ ಜಾನುವಾರುಗಳಿಗೆ ನಿಗಧಿತ ಅವಧಿಯೊಳಗೆ ಕಾಲು ಬಾಯಿ ಲಸಿಕೆಯನ್ನು ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಲಸಿಕಾ ಕಾರ್ಯಕ್ರಮದ ಕುರಿತು ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಸಾಕಷ್ಟು ಮುಂಚಿತವಾಗಿ ಮಾಹಿತಿ ನೀಡಿ, ಲಸಿಕಾ ಕಾರ್ಯಕ್ಕೆ ಅರ್ಹವಿರುವ ಎಲ್ಲಾ ಜಾನುವಾರುಗಳಿಗೆ ಲಸಿಕೆ ನೀಡಿ, ಶೇಕಡಾ 100 ರಷ್ಟು ಪ್ರಗತಿ ಸಾಧಿಸುವಂತೆ ತಿಳಿಸಿದರು. ಲಸಿಕಾ ಕಾರ್ಯವನ್ನು ಗಣಕೀಕೃತ ವ್ಯವಸ್ಥೆಯಲ್ಲಿ ನಡೆಸುವ ಕುರಿತು ಜಿಲ್ಲಾಧಿಕಾರಿಗಳು ಮೆಚ್ಚುಗೆ…

Read More