Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ತಾಲೂಕಿನ ಮುಲ್ಲಿಬಾರು ಸ.ಹಿ.ಪ್ರಾ ಶಾಲೆಯ ವಿದ್ಯಾರ್ಥಿನಿ ಸುಚಿತ್ರಾ ಪರಮೇಶ್ವರ ಮರಾಠಿ ನ್ಯಾಶನಲ್ ಮಿನ್ಸ್ ಕಮ್ ಮೆರೀಟ್ ಸ್ಕಾಲರ್‌ಶಿಪ್ ಪರೀಕ್ಷೆಯಲ್ಲಿ (NMMS)ಯಲ್ಲಿ ತೇರ್ಗಡೆಯಾಗಿದ್ದಾಳೆ. ಬೈಂದೂರು ವಲಯದ ಸುಮಾರು ಮೂರು ಸಾವಿರ ವಿದ್ಯಾರ್ಥಿಗಳ ಪೈಕಿ 11 ಮಂದಿ ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿನಿಯನ್ನು ಆಕೆಯ ನಿವಾಸದಲ್ಲಿ ಗೌರವಿಸಲಾಯಿತು. ಈ ಸಂದರ್ಭ ಮುಲ್ಲಿಬಾರು ಶಾಲೆಯ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದ, ಎಸ್‌ಡಿಎಂಸಿ ಅಧ್ಯಕ್ಷರು, ಸಂಚಲನದ ಪದಾಧಿಕಾರಿಗಳು, ಕಂಬದಕೋಣೆ ಕ್ಲಸ್ಟರ್ ಸಿಆರ್‌ಪಿ, ಕ್ಯಾಕೋಡ್ ಶಾಲೆಯ ಮುಖ್ಯ ಶಿಕ್ಷಕರು ಮೊದಲಾದವರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಧುನಿಕ ತಂತ್ರಜ್ಞಾನ ಭರಿತ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಮಷೀನ್ ಲರ್ನಿಂಗ್ ತಂತ್ರಜ್ಞಾನ ದ ಹೊಸ ಕೋರ್ಸ್ ಅನ್ನು ಪ್ರಾರಂಭಿಸಲು ಅನುಮೋದನೆ ದೊರಕಿದ್ದು, ಇದೇ ಸಾಲಿನಲ್ಲಿ ಪ್ರವೇಶ ಪಡೆಯಲು ಅವಕಾಶವಿರುತ್ತದೆ. ಆಧುನಿಕ ಯುಗದಲ್ಲಿ ಇಂಜಿನಿಯರಿಂಗ್ ಒಳಗೊಳ್ಳುವಿಕೆ ಇಲ್ಲದೆ ಇರುವುದನ್ನು ಊಹಿಸಲೇ ಕಷ್ಟವಾಗಿದ್ದು, ಸ್ವಯಂಚಾಲಿತವಾಗಿ ಕಾರ್ಯ ನಿರ್ವಹಿಸುವ ಉತ್ಪನ್ನಗಳಿಗೆ ಬಹಳ ಬೇಡಿಕೆ ಇರುವುದರಿಂದ ಕೃತಕ ಬುದ್ದಿಶಕ್ತಿ ತಂತ್ರಜ್ಞಾನ ಕಲಿಕೆ ಪ್ರಮುಖ ಪಾತ್ರವಹಿಸುತ್ತದೆ. ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್ ಕಂಮ್ಯುನಿಕೇಷನ್ಸ್, ಸಿವಿಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಕೋರ್ಸ್ ಗಳು ಈಗಾಗಲೇ ಕಾರ್ಯ ನಿರ್ವಹಿಸುತ್ತಿದ್ದು, ಈಗ ಹೊಸ ಕೋರ್ಸ್ನ ಸೇರ್ಪಡೆಯಿಂದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ಸಿಕ್ಕಂತಾಗಿದೆ. ವಿದ್ಯಾರ್ಥಿಗಳಿಗೆ ಕಂಪನಿಯಲ್ಲಿ ಉದ್ಯೋಗವಕಾಶಕ್ಕೆ ಅನುಕೂಲವಾಗುವ ಸಲುವಾಗಿ ಕಾಲೇಜು ಈಗಾಗಲೇ ಮೈಕ್ರೋಸಾಫ್ಟ್ನ ಟ್ರೈನಿಂಗ್ ಪಾರ್ಟ್ನರ್ ಮತ್ತು ಎಡೆಕ್ಸ್ ಕಂಪನಿಗಳ ಜೊತೆ ಒಪ್ಪಂದ ಮಾಡಿ ಕೊಂಡಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಕೂಡ ಪಡೆಯಲು ಅವಕಾಶ ಇರುತ್ತದೆ. 2020-2021 ಸಾಲಿನಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕು ಆಡಳಿತದ ವತಿಯಿಂದ ವಿಕಲಚೇತನ ಮನೆಗಳಿಗೆ ತೆರಳಿ ಆಧಾರ್ ಕಾರ್ಡ್ ನೊಂದಣಿ ಮಾಡುವ ಪ್ರಕ್ರಿಯೆಗೆ ಬೈಂದೂರಿನಲ್ಲಿ ಶುಕ್ರವಾರ ಚಾಲನೆ ನೀಡಲಾಗಿದೆ. ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿ ಎಚ್. ಎಸ್ ಅವರ ನೇತೃತ್ವದಲ್ಲಿ ತಾಲೂಕಿನ ವಿವಿಧ ಗ್ರಾಮಗಳಲ್ಲಿರುವ ನಡೆದಾಡಲು ಸಾಧ್ಯವಿಲ್ಲದ ಹಾಗೂ ಹಾಸಿಗೆಯಲ್ಲಿಯೇ ಇರುವ ವಿಕಲಚೇತನರನ್ನು ಗುರುತಿಸಿ ಅವರ ಮನೆಗಳಿಗೆ ತೆರಳಿ ಆಧಾರ್ ನೊಂದಣಿ ಮಾಡಲಾಗುತ್ತಿದೆ. ಬೈಂದೂರು ತಾಲೂಕಿನಲ್ಲಿ ಗುರುತಿಸಲಾಗಿರುವ ಸುಮಾರು 22 ವಿಕಲಚೇತನರ ಮನೆಗಳಿಗೆ ತಹಶೀಲ್ದಾರರು ಹಾಗೂ ತಾಲೂಕು ಕಛೇರಿಯಲ್ಲಿರುವ ಆಧಾರ್ ನೊಂದಣಿ ಸಿಬ್ಬಂದಿಗಳು ಲ್ಯಾಪ್‌ಟಾಪ್, ಕ್ಯಾಮರಾ, ಪ್ರಿಂಟರ್, ಆಧಾರ್ ಸ್ಪ್ಯಾನರ್ ಸಹಿತ ತೆರಳಿ ನೊಂದಣಿ ಕಾರ್ಯ ನಡೆಸಿಸುತ್ತಿದ್ದಾರೆ. ಆಧಾರ್ ಕೇಂದ್ರಗಳಿಗೆ ಬರಲು ಸಾಧ್ಯವಿಲ್ಲದ ವಿಕಲಚೇತನರ ಮನೆಗೆ ತೆರಳಿ ಆಧಾರ್ ನೊಂದಣಿ ಮಾಡಿಸುವಂತೆ ಜಿಲ್ಲಾಡಳಿತದ ಸೂಚನೆಯಿದ್ದು ಅದರಂತೆ ಬೈಂದೂರು ತಾಲೂಕಿನ 22 ಮನೆಗಳಿಗೆ ತೆರಳಿ ಆಧಾರ್ ನೊಂದಣಿ ಮಾಡಲಾಗುತ್ತಿದೆ. ತೀರಾ ಇಂಟರ್‌ನೆಟ್ ಸಮಸ್ಯೆ ಇರುವ ಗ್ರಾಮಗಳಲ್ಲಿ ವಿಕಲಚೇತನರನ್ನು ಸಮೀಪವಿರುವ ಗ್ರಾಮ ಪಂಚಾಯತಿಗೆ ಕರೆಯಿಸಿ ಆಧಾರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಗರ್ಭಪೂರ್ವ ಮತ್ತು ಪ್ರಸವ ಪೂರ್ವಭ್ರೂಣ ಲಿಂಗ ಪತ್ತೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಕಾನೂನಿನ ಅಡಿಯಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪ್ರಸೂತಿ ತಜ್ಞ ಹಾಗೂ ಜಿಲ್ಲಾ ಪಿಸಿ & ಪಿಎನ್ಡಿಟಿ ಸಲಹಾ ಸಮಿತಿ ಅಧ್ಯಕ್ಷ ಡಾ. ಪ್ರತಾಪ್ ಕುಮಾರ್ ಹೇಳಿದರು. ಅವರು ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಸಾವ ಪೂರ್ವ ಭ್ರೂಣ ಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾಜದಲ್ಲಿ ಪುರುಷ ಮತ್ತು ಮಹಿಳೆಯರ ಸಮಾನ ಅನುಪಾತ ಕಾಪಾಡುವ ದೃಷ್ಟಿಯಿಂದ ಸರಕಾರ ಕಾನೂನನ್ನು ಜಾರಿಗೆ ತಂದಿದೆ. ಭ್ರೂಣಲಿಂಗ ಪತ್ತೆ ಮಾಡುವುದು ಕಾನೂನಿನ ಅಡಿಯಲ್ಲಿ ಅಪರಾಧವಾಗಿದ್ದು, ಇದನ್ನು ಉಲ್ಲಂಘಿಸುವವರಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದರು. ಪ್ರಸ್ತುತ ಜಿಲ್ಲೆಯಲ್ಲಿ 1000 ಜನ ಪುರುಷರಿಗೆ, 957 ಜನ ಹೆಣ್ಣು ಮಕ್ಕಳಿದ್ದಾರೆ ಎಂದ ಅವರು ಜಿಲ್ಲೆಯಲ್ಲಿ ಗಂಡು ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅಡುಗೆ ಅನಿಲ,ತೈಲ ಬೆಲೆ ಏರಿಕೆ ವಿರೋಧಿಸಿ ಸಿಐಟಿಯುನಿಂದ ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಕೊರೊನಾ ಪರಿಹಾರ ಪ್ರತಿ ಕಾಮಿ೯ಕರಿಗೆ 10000ರೂ. ನೀಡಬೇಕು. ಮೊದಲಾದ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸೆಂಟರ್ ಆಪ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು)ರಾಜ್ಯ ಸಮಿತಿಯ ಕರೆಯ ಮೇರೆಗೆ ಬೈಂದೂರು ತಾಲೂಕು ಸಿಐಟಿಯು ಕಾಮಿ೯ಕ ಸಂಘಗಳ ನೇತೃತ್ವದಲ್ಲಿ ಇಂದು ಬೈಂದೂರು ತಹಶೀಲ್ದಾರ್ ಕಚೇರಿ ಎದುರು ಕಾಮಿ೯ಕರ ಬೃಹತ್ ಪ್ರತಿಭಟನೆ ನಡೆಯಿತು. ಮುಖ್ಯಮಂತ್ರಿಗಳಿಗೆ ಸಲ್ಲಿಸುವ ಬೇಡಿಕೆಗಳಮನವಿಯನ್ನು ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿ ಅವರಿಗೆ ಹಸ್ತಾಂತರಿಸಲಾಯಿತು. ಸಿಐಟಿಯು ಮುಖಂಡರಾದ ಗಣೇಶ ತೊಂಡೆಮಕ್ಕಿ,ರೊನಾಲ್ಡ್ ರಾಜೇಶ್ ಕ್ವಾಡ್ರಸ್, ಶೀಲಾವತಿ, ರಾಜೀವಪಡುಕೋಣೆ, ವೆಂಕಟೇಶ ಕೋಣಿ, ನಾಗರತ್ನ ನಾಡ, ಮಂಜುಪಡುವರಿ, ಗಣೇಶ ಮೊಗವೀರ ಬೈಂದೂರು, ಮಾಧವ ಪೂಜಾರಿ ಉಪ್ಪುಂದ, ಲಕ್ಷ್ಮಣ ಯಡ್ತರೆ,ಹರೀಶ್ ಬೈಂದೂರು, ರಾಮ ಬಡಾಕೆರೆ, ಮೊದಲಾದವರು ಹೋರಾಟದ ನೇತೃತ್ವ ವಹಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯ ಕೋವಿಡ್ -19 ಪಾಸಿಟಿವಿಟಿ ದರದ ಆಧಾರದ ಮೇಲೆ ಆರ್ಥಿಕ ಮತ್ತು ಇತರೆ ಚಟುವಟಿಕೆಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸಂತೆಗಳನ್ನು ನಡೆಸಲು ಅನುಮತಿ ನೀಡಲಾಗಿರುತ್ತದೆ. ಅದರಂತೆ ವಾರದ ಸಂತೆಗಳನ್ನು ನಡೆಸುವಾಗ ಜನಜಂಗುಳಿ ಹೆಚ್ಚಾಗಿ ಉಂಟಾಗುವುದನ್ನು ನಿಯಂತ್ರಿಸುವ ಸಲುವಾಗಿ ವಿಶಾಲ ಪ್ರದೇಶಗಳಲ್ಲಿ ಸಂತೆಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಕಚೇರಿಯಿಂದ ನಿರ್ದೇಶನ ನೀಡಲಾಗಿರುತ್ತದೆ. ಆದರೆ ಜಿಲ್ಲೆಯಲ್ಲಿ ವಾರದ ಸಂತೆಗಳನ್ನು ತೀರ ಇಕ್ಕಟ್ಟಿನ ಸ್ಥಳಗಳಲ್ಲಿ ನಡೆಸುತ್ತಿರುವುದು ಕಂಡುಬಂದಿದ್ದು, ಇದರಿಂದಾಗಿ ಸಂತೆಗಳಲ್ಲಿ ಸಾಮಾನು ಖರೀದಿಸಲು ಬರುವ ಜನರು ಸೂಕ್ತ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದರಿಂದ ಕೋವಿಡ್-19 ರ ನಿಯಮಗಳು ಉಲ್ಲಂಘನೆಯಾಗುತ್ತಿದ್ದು, ಕೊರೋನಾ ಸೋಂಕು ಹರಡುವಿಕೆಯ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಆದುದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಸಂತೆಗಳನ್ನು ನಡೆಸುವಾಗ ಸಾರ್ವಜನಿಕರ ನಡುವೆ ಸಾಮಾಜಿಕ ಅಂತರ ಹಾಗೂ ಇತರೆ ಕೋವಿಡ್-19 ಸಂಬಂಧಿತ ನಿಯಮಗಳು ಪಾಲನೆಯಾಗುವ ಬಗ್ಗೆ ನೋಡಿಕೊಳ್ಳಲು ನಗರಸಭೆಯ ಆಯುಕ್ತರು, ಪುರಸಭೆ ಹಾಗೂ ಪಟ್ಟಣ ಪಂಚಾಯತ್ಗಳ ಮುಖ್ಯಾಧಿಕಾರಿಗಳು, ಕೃಷಿ ಉತ್ಪನ್ನ ಮಾರುಕಟ್ಟೆಗಳ ಕಾರ್ಯದರ್ಶಿಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ತಲ್ಲೂರು ಗ್ರಾಮದ ಉಪ್ಪಿನಕುದ್ದರು ನಿವಾಸಿ ರಾಜೇಶ್ ಶೇರಿಗಾರ್(46) ಬುಧವಾರ ಸಂಜೆ ಹೃದಯಾಘಾತದಿಂಧ ಸ್ವಗೃಹದಲ್ಲಿ ನಿಧನರಾದರು. ಅವರು ಕುಂದಾಪುರದ ಕಾವೇರಿ ಮೀನು ಹೋಟೆಲ್ ಹಾಗೂ ಪ್ರೀತಿ ಪುಡ್ ಪ್ರಾಡಕ್ಸ್ ವ್ಯವಹಾರ ನಡೆಸುತ್ತಿದ್ದರು. ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ ದುಡಿಯುತ್ತಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬಗ್ವಾಡಿಯ ಸುಬ್ರಹ್ಮಣ್ಯ ಮೊಗವೀರ ಅವರ ಮನೆಗೆ ಬೈಂದೂರಿನ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭ ಅವರು ಮೀನುಗಾರಿಕೆ ಇಲಾಖೆಯಿಂದ ಶೀಘ್ರವಾಗಿ ಮನೆ ನಿರ್ಮಿಸಿಕೊಡುವ ಭರವಸೆ ನೀಡಿ, ಮನೆ ನಿರ್ಮಿಸಲು ಅಗತ್ಯವಿರುವ ಸಲಕರಣೆಗಳನ್ನು ಸ್ಥಳೀಯ ಮುಖಂಡರ ಮೂಲಕ‌ ಒದಗಿಸಿಕೊಡುವುದಾಗಿ ತಿಳಿಸಿದರು. ಕಲಾವಿದನಿಗೆ ಆರ್ಥಿಕ ಸಹಾಯ ಮಾಡಿದರು. ಈ ಸಂದರ್ಭ ಬಿಜೆಪಿಯ ಪ್ರಮುಖರು ಜೊತೆಗಿದ್ದರು.

Read More

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಮಾರುಕಟ್ಟೆಯಲ್ಲಿ ದೊರೆಯುವ ಹತ್ತಾರು ಬಗೆಯ ಹಣ್ಣು, ತರಕಾರಿಗಳನ್ನು ನಮ್ಮ ತೋಟದಲ್ಲಿಯೂ ಬೆಳೆಸಬಹುದಲ್ವಾ. ತೆಂಗು, ಹಲಸು, ಗೇರು ಮುಂತಾದ ತೋಟಗಾರಿಕಾ ಬೆಳೆಗಳಿಂದ ಹಿಡಿದು ಕೈದೋಟದಲ್ಲಿ ಅರಳುವ ಸುಂದರ ಹೂವಿನ ಗಿಡಗಳನ್ನು ನಾವೂ ಬೆಳೆಸಬಹುದಲ್ವ. ಹೀಗೊಂದು ಯೋಚನೆ ಸಾಕಷ್ಟು ಭಾರಿ ನಿಮಗೂ ಬಂದಿದೆಯೇ. ಹಾಗಿದ್ದರೆ ನಿಮ್ಮ ಯೋಜನೆಗಳನ್ನು ಸಾಕಾರಗೊಳಿಸಲು ಇದೇ ಸರಿಯಾದ ಸಮಯ. ಬೈಂದೂರು ವತ್ತಿನಣೆ ಬಳಿ ಬರುವ ಕರ್ನಾಟಕ ನರ್ಸರಿಯಲ್ಲಿ ನೂರಾರು ಬಗೆಯ ಫಲ-ಪುಪ್ಪದ ಗಿಡಗಳ ಸಂಗ್ರಹವಿದೆ. ಇಲ್ಲಿ 5,000ಕ್ಕೂ ಅಧಿಕ ಅಪೂರ್ವ ಸಸ್ಯ ಸಂಕುಲವಿದ್ದು ಈ ಪೈಕಿ 400ಕ್ಕೂ ಹೆಚ್ಚು ಪ್ರಭೇದದ ಹಣ್ಣಿನ ಗಿಡಗಳು, ಶುದ್ದ ಕಾಂಡದ ಕಸಿ ಮಾಡಿದ ಗಿಡ, ಹೈಬ್ರೀಡ್ ಗಿಡಗಳು, ಒಳಾಂಗಣ ಹಾಗೂ ಹೊರಾಂಗಣಕ್ಕೆ ಹೊಂದಿಕೊಳ್ಳುವ ಅಲಂಕಾರಿಕ ಹೂವಿನ ಗಿಡಗಳು ನರ್ಸರಿಯಲ್ಲಿವೆ. ಯಾವೆಲ್ಲ ಗಿಡಗಳಿವೆ? ಮೂರು ಕೆ.ಜಿ ತೂಕದ ಹಣ್ಣು ನೀಡುವ ಮಾವಿನ ಗಿಡ, ಒಂದು ಕೆ.ಜಿ ಹಣ್ಣು ನೀಡುವ ಸೀತಾಫಲ ಗಿಡ, ಥಾಯ್ಲೆಂಡ್ ಹಣ್ಣುಗಳು, ಶುಗರ್ ಕಡಿಮೆ ಮಾಡುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇವರ ಆಶ್ರಯಲ್ಲಿ ವೈದ್ಯರ ದಿನಾಚರಣೆ ಪ್ರಯುಕ್ತ ಇಬ್ಬರು ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ವೈದ್ಯರಾದ ಡಾ.ಕಾಶೀನಾಥ ಪೈ ಮತ್ತು ಡಾ. ಕೃಪಾಶ್ರೀ ಅವರನ್ನು ಗೌರವಿಸಲಾಯಿತು. ಗಂಗೊಳ್ಳಿ ರೋಟರಿ ಕ್ಲಬ್‌ನ ಸದಸ್ಯರು ಉಪಸ್ಥಿತರಿದ್ದರು. ಗಂಗೊಳ್ಳಿ ರೋಟರಿ ಕ್ಲಬ್‌ನ ನೂತನ ಅಧ್ಯಕ್ಷ ರಾಜೇಶ್ ಎಂ.ಜಿ ಸ್ವಾಗತಿಸಿದರು. ರೋಟರಿ ಜಿಲ್ಲೆ ವಲಯ ೧ರ ಜೋನಲ್ ಅಸಿಸ್ಟೆಂಟ್ ಕೆ.ರಾಮನಾಥ ನಾಯಕ್ ಪ್ರಾಸ್ತಾವಿಕ ಮಾತನಾಡಿದರು. ರೋಟರಿ ಕಾರ್ಯದರ್ಶಿ ನಾರಾಯಣ ಈ. ನಾಯ್ಕ ವಂದಿಸಿದರು.

Read More