ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಕ್ಕಳಲ್ಲಿರುವ ಪ್ರತಿಭೆ ಅನಾವರಣಕ್ಕೆ ಸಂಘಟನೆಗಳು ಮುಂದೆ ಬಂದು ವೇದಿಕೆ ಕಲ್ಪಿಸಿಕೊಟ್ಟಾಗ ಸಣ್ಣ ಹಳ್ಳಿಯ ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಂಡು ಮುಂದೊಂದು ದಿನ ಸಾಧನೆಯ ಹೆಜ್ಜೆಯನ್ನಿಡಲು ಸಾಧ್ಯ, ಮಕ್ಕಳಲ್ಲಿರುವ ಪ್ರತಿಭೆ ಗುರುತಿಸುವಿಕೆ ಪೋಷಕರಿಂದ ಆರಂಭವಾಗಲಿ ಎಂದು ಯುವವಾಹಿನಿ ರಿ. ಯಡ್ತಾಡಿ ಘಟಕದ ಅಧ್ಯಕ್ಷ ರಾಜು ಪೂಜಾರಿ ಅವರು ಹೇಳಿದರು. ಅವರು ಯುವವಾಹಿನಿ ರಿ. ಯಡ್ತಾಡಿ ಘಟಕದ ವತಿಯಿಂದ ಗುಲಾಬಿ ಪೂಜಾರ್ತಿ ಅವರ ಮನೆ ವಠಾರದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಆಟೋಟ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಇಂದಿನ ಮಕ್ಕಳೇ ಮುಂದಿನ ಸುಶಿಕ್ಷಿತ ಸಮಾಜ ನಿರ್ಮಾಣದ ಶಿಲ್ಪಿಗಳು, ಅವರನ್ನು ಸುಂದರ ಶಿಲ್ಪಿಗಳನ್ನಾಗಿ ರೂಪಿಸುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಬಾರ್ಕೂರು ಸ್ವಾಗತ್ ವಿವಿದ್ದೋದೇಶ ಸಹಕಾರಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಪೂಜಾರಿ ಅವರು ಹೇಳಿದರು. ಈ ಸಂದರ್ಭದಲ್ಲಿ ನಡೂರು ಬ್ರಿಕ್ಸ್ನ ಮಾಲಕರಾದ ಸಂದೀಪ್ ಪೂಜಾರಿ, ಯುವವಾಹಿನಿಯ ಕಾರ್ಯದರ್ಶಿ ಅಜಿತ್ ಪೂಜಾರಿ, ಸಾಂಸ್ಕೃತಿಕ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಜಿ.ಪಿ.ಎಸ್ ಆಧಾರಿತ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಖಾಸಗಿ ನಿವಾಸಿಗಳ ಮೂಲಕ ಕೈಗ್ಗೊಳ್ಳಲಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ನಮೂದಾದ ಬೆಳೆಗಳ ಬಗ್ಗೆ ರೈತರಿಗೆ ಆಕ್ಷೇಪಣೆ ಇದ್ದಲ್ಲಿ ಬೆಳೆ ದರ್ಶಕ್ ಮೊಬೈಲ್ ಆಪ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದ್ದು, Bele Darshak Karnataka – 2021-22 ಆಪ್ ಅನ್ನು ಗೂಗಲ್ ಪ್ಲೇಸ್ಟೋರ್ನಿಂದ ಡೌನ್ಲೋಡ್ ಮಾಡಿಕೊಂಡು ಅಥವಾ ರೈತರು ಲಿಖಿತವಾಗಿ ತಮ್ಮ ಆಕ್ಷೇಪಣೆಗಳನ್ನು ಕೃಷಿ, ಕಂದಾಯ ಹಾಗೂ ತೋಟಗಾರಿಕಾ ಇಲಾಖೆಗಳಲ್ಲಿಯು ಸಹ ಸಲ್ಲಿಸಬಹುದಾಗಿದೆ. ರೈತರಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಸಂಬಂಧಿಸಿದ ಗ್ರಾಮದ ಮೇಲ್ವಿಚಾರಕರಿಂದ ಪರಿಶೀಲಿಸಿ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಕ್ಕಳಿಗೆ ಬಾಲ್ಯದಲ್ಲಿಯೇ ಉತ್ತಮ ಆರೋಗ್ಯದಾಯಕ ವಾತಾವರಣ ಕಲ್ಪಿಸಿ, ಶಿಕ್ಷಣವನ್ನು ನೀಡುವುದರೊಂದಿಗೆ ಅವರನ್ನು ಭವಿಷ್ಯದಲ್ಲಿ ಉತ್ತಮ ಪ್ರಜೆಯನ್ನಾಗಿಸುವ ಜವಾಬ್ದಾರಿ ನಾಗರಿಕ ಸಮಾಜದ ಹೊಣೆಯಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಜಿಲ್ಲಾಡಳಿತ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ, ಮಕ್ಕಳ ಸಹಾಯವಾಣಿ 1098, ಇವರ ಸಂಯುಕ್ತ ಆಶ್ರಯದಲ್ಲಿ ನಡೆದ, ಮಕ್ಕಳ ದಿನಾಚರಣೆ ಮತ್ತು ಚೈಲ್ಡ್ಲೈನ್ ಸೇ ದೋಸ್ತಿ ವೀಕ್ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಮಕ್ಕಳ ರಕ್ಷಣೆಗೆ ಅನೇಕ ಕಾನೂನುಗಳನ್ನು ಜಾರಿಗೆ ತರುವುದರೊಂದಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಆದರೂ ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿ, ಭಿಕ್ಷಾಟನೆ, ಬಾಲ್ಯ ವಿವಾಹ, ಸೇರಿದಂತೆ ಮತ್ತಿತರ ಅನಿಷ್ಟ ಪದ್ಧತಿಗಳು ಅಲ್ಪಪ್ರಮಾಣದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ಕೃಷ್ಣಭವನ ಕನ್ವೆನ್ಷನ್ ಹಾಲ್ನಲ್ಲಿ ಜರುಗಿದ ಕರ್ನಾಟಕ ರಾಜ್ಯ ಸೀನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ ನಲ್ಲಿ ಆಳ್ವಾಸ್ ಕಾಲೇಜು ಮೂಡಬಿದಿರೆ ಮಹಿಳಾ ವಿಭಾಗ ದಲ್ಲಿ ಪ್ರಥಮ ತಂಡ ಪ್ರಶಸ್ತಿ ಪಡೆದರೆ ಪುರುಷರ ವಿಭಾಗದಲ್ಲಿ ದ್ವಿತೀಯ ತಂಡ ಪ್ರಶಸ್ತಿ ಪಡೆದುಕೊಂಡಿದೆ. ಕರ್ನಾಟಕ ರಾಜ್ಯ ಪವರ್ಲಿಫ್ಟಿಂಗ್ ಸಂಸ್ಥೆ ಆಶ್ರಯದಲ್ಲಿ ನಡೆದ ಈ ಚಾಂಪಿಯನ್ಶಿಪ್ನಲ್ಲಿ ಪುರುಷರ ವಿಭಾಗದ ತಂಡ ಪ್ರಶಸ್ತಿ ಬಾಲಂಜನೇಯ ಜಿಮ್ ಮಂಗಳೂರು ಪಡೆದರೆ, ಮಹಿಳಾ ವಿಭಾಗದ ದ್ವಿತೀಯ ತಂಡ ಪ್ರಶಸ್ತಿ ಐರನ್ ಎನ್ ಡೆನ್ ಬೆಂಗಳೂರು ತಂಡ ಪಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪೋಷಕರು ತಾವು ಪೋಷಕರು ಎನ್ನುವ ಅಧಿಕಾರದಿಂದ ಮಕ್ಕಳ ಮೇಲೆ ಒತ್ತಡ ಹೇರದೆ ಮಕ್ಕಳಲ್ಲಿನ ಆಸಕ್ತಿ ಕ್ಷೇತ್ರ ಗುರುತಿಸಿ ಅದರಲ್ಲಿ ಅವರನ್ನು ತೊಡಗಿಸಿಕೊಳ್ಳುವುದಕ್ಕೆ ಪ್ರೇರೇಪಿಸುವ ಕೆಲಸ ಮಾಡಬೇಕು. ಮಕ್ಕಳಲ್ಲಿನ ಸೂಕ್ತ ಪ್ರತಿಭೆ ಹೊರಹೊಮ್ಮಲು ಸೂಕ್ತವಾದ ವೇದಿಕೆ ಅಗತ್ಯ, ಈ ನಿಟ್ಟಿನಲ್ಲಿ ಕಾರಂತ ಥೀಮ್ ಪಾರ್ಕ್ ಕಾರ್ಯವೆಸಗುತ್ತಿರುವುದು ಶ್ಲಾಘನೀಯ ಎಂದು ಸಾಂಸ್ಕೃತಿಕ ಚಿಂತಕಿ ದಿವ್ಯಲಕ್ಷ್ಮೀ ಪ್ರಶಾಂತ್ ಕುಂದರ್ ಅವರು ಹೇಳಿದರು. ಅವರು ಡಾ. ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನ ರಿ. ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್, ವತಿಯಿಂದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ಕೋಟದಲ್ಲಿ ನಡೆದ ಮಕ್ಕಳ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಚಿಲುಮೆ-೨೦೨೧(ಭರವಸೆಯ ತಂಗಾಳಿ) ಕಾರ್ಯಕ್ರಮದಲ್ಲಿ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ವಿಶ್ವ ವಿನಾಯಕ ಆಂಗ್ಲ ಮಾಧ್ಯಮ ಶಾಲೆ ಕುಂಭಾಶಿ ವಿದ್ಯಾರ್ಥಿನಿ ಶ್ಲಾಘ ಸಾಲಿಗ್ರಾಮ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಕ್ಕಳನ್ನು ಬಾಲ ಕಾರ್ಮಿಕರನ್ನಾಗಿ ದುಡಿಸಿಕೊಳ್ಳುವುದು, ಬಾಲ್ಯ ವಿವಾಹಗಳಿಗೆ ಒಳಪಡಿಸುವುದು ಸೇರಿದಂತೆ ಮಕ್ಕಳ ಮೇಲೆ ನಡೆಯುವ ಶೋಷಣೆಗಳ ಕುರಿತು ಮಾಹಿತಿ ಇದ್ದಲ್ಲಿ , ಸಾರ್ವಜನಿಕರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ,ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ಕೂಡಲೇ ಮಾಹಿತಿ ನೀಡುವುದರ ಮೂಲಕ, ಮಕ್ಕಳನ್ನು ಶೋಷಣೆಯಿಂದ ತಪ್ಪಿಸಲು ಸಾಧ್ಯ ಎಂದು ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಜೆ.ಎನ್. ಸುಬ್ರಮಣ್ಯ ಹೇಳಿದರು. ಅವರು ವಿದ್ಯೋದಯ ಪಬ್ಲಿಕ್ ಸ್ಕೂಲ್ ನಲ್ಲಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ರಿ. ಪೊಲೀಸ್ ಇಲಾಖೆ,ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ 1098, ವಿದ್ಯೋದಯ ಪಬ್ಲಿಕ್ ಸ್ಕೂಲ್ ಸಹಯೋಗದಲ್ಲಿ ನಡೆದ , ಮಕ್ಕಳ ದಿನಾಚರಣೆ 2021 ಹಾಗೂ 75 ನೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಿರಿಮಂಜೆಶ್ವರ ಶುಭದಾ ಆಂಗ್ಲ ಮಾಧ್ಯಮ ಶಾಲೆಯ ಗ್ರಂಥಾಲಯಕ್ಕೆ ಸಂಸ್ಥೆಯ ಹಿತೈಷಿ ಹಾಗೂ ಮುಂಬೈನ ಹರಡಿನ್ ಕೊಲಿನ್ಸ್ ಪಬ್ಲೀಷರ್ಸ್ ಇಂಡಿಯಾ ಲಿಮಿಟೆಡ್ ಇದರ ಉಪ ವ್ಯವಸ್ಥಾಪಕರಾದ ದಿವಂಗತ ವಿನಯ್ ಅಂಚನ್ ಕುಟುಂಬಿಕರು ಶಾಲೆಯ ಗ್ರಂಥಾಲಯಕ್ಕೆ 6,500 ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ನಾಗೂರಿನ ಸಮಾಜ ಸೇವಕರು ಹಾಗೂ ವಡೇರಮಠ ಮಾಲಕರಾದ ಮಂಜುನಾಥ ಉಡುಪ ಅವರು ಗ್ರಂಥಾಲಯಕ್ಕೆ ಪುಸ್ತಕಗಳನ್ನು ಹಸ್ತಾಂತರಿಸಿದರು. ಈ ಸಂಧರ್ಭ ಶಾಲಾ ಆಡಳಿತ ಮಂಡಳಿ ಸದಸ್ಯರಾದ ರಾಮಕೃಷ್ಣ ಬಿಲ್ಲವ, ರಾಜೀವ ಶೆಟ್ಟಿ ಮುಖ್ಯ ಶಿಕ್ಷಕರಾದ ರವಿದಾಸ ಶೆಟ್ಟಿ, ಪಾಲಕರು, ವಿದ್ಯಾರ್ಥಿ ಪ್ರತಿನಿದಿ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಅತ್ಯಗತ್ಯ. ಏನೇ ಸಮಸ್ಯೆಯಿದ್ದರೂ, ಯಾವುದೇ ಬಗೆಯ ಸವಾಲು- ತೊಂದರೆಗಳಿದ್ದರೂ ವಿದ್ಯಾರ್ಥಿಗಳು ಅದನ್ನು ವ್ಯಕ್ತಪಡಿಸಬೇಕು. ಭಾವನೆಗಳನ್ನು ವ್ಯಕ್ತಪಡಿಸದಿದ್ದರೆ ಮುಂದೆ ಅದು ಮಾನಸಿಕವಾಗಿ ಮಾತ್ರವಲ್ಲದೇ ದೈಹಿಕವಾಗಿಯೂ ಪರಿಣಾಮ ಬೀರುವ ಸಾಧ್ಯತೆಗಳಿರುತ್ತದೆ. ಆದ್ದರಿಂದ ಸಮಸ್ಯೆಗಳಿದ್ದಾಗ ಯಾವುದೇ ಹಿಂಜರಿಕೆಯಿಲ್ಲದೆ ಸಂಬಂಧ ಪಟ್ಟವರಿಗೆ ಅದನ್ನು ತಿಳಿಸುವ ಪ್ರಯತ್ನ ಮಾಡಬೇಕು. ಆಂತರಿಕ ದೂರು ನಿರ್ವಹಣಾ ಸಮಿತಿಗಳು ವಿದ್ಯಾರ್ಥಿಗಳಿಗೆ ಈ ನಿಟ್ಟಿನಲ್ಲಿ ದೊಡ್ಡ ಸಹಾಯ ಮಾಡಬಲ್ಲವು. ಎಂದು ಮಂಗಳೂರಿನ ಮನ:ಶಾಂತಿ ಕೌನ್ಸಿಲಿಂಗ್ ಸಂಸ್ಥೆಯ ಮೆಂಟಲ್ ಹೆಲ್ತ್ ಪ್ರೊಫೆಶನಲ್ ಹಾಗೂ ಟ್ರೈನರ್ ಡಾ. ರಮೀಲಾ ಶೇಖರ್ ಹೇಳಿದರು. ಅವರು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಆಂತರಿಕ ದೂರು ನಿರ್ವಹಣಾ ಸಮಿತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಮಾನಸಿಕ ಒತ್ತಡದಿಂದ ಹೇಗೆ ಹೊರಬರಬಹುದು ಎಂಬುದರ ಬಗ್ಗೆ ಸಲಹೆಗಳನ್ನು ನೀಡಿದ ಡಾ.ರಮೀಲಾ, ನಿತ್ಯ ವ್ಯಾಯಾಮ, ಆತ್ಮವಿಶ್ವಾಸಪೂರ್ವಕ ನಡೆ ನುಡಿ ಮಾನಸಿಕ ಸದೃಢತೆಯನ್ನು ಒದಗಿಸುತ್ತದೆ. ಜೊತೆಗೆ ನಾವು ಮಾಡುವ ಒಳ್ಳೆಯ ಕೆಲಸಗಳು, ಇ?ದ ಜವಾಬ್ದಾರಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇತ್ತೀಚೆಗೆ ನಿಧನರಾದ ಪುನೀತ್ ರಾಜ್ಕುಮಾರ್ ಅವರಿಗೆ ಗಂಗೊಳ್ಳಿಯ ಮೇಲ್ಗಂಗೊಳ್ಳಿ ಸರಕಾರಿ ಕಿರಿಯ ಪ್ರಾಥಮಿಕ (ಹವೇ) ಶಾಲೆಯ ವಿದ್ಯಾರ್ಥಿಗಳು ನೃತ್ಯರೂಪಕದ ಮೂಲಕ ಪುಷ್ಪಾಂಜಲಿ, ದೀಪಾಂಜಲಿ ಅರ್ಪಿಸಿದರು. ನೃತ್ಯಪಟು ನಟರಾಜ್ ನಿರ್ದೇಶನದಲ್ಲಿ ಶಾಲೆಯ ವಿದ್ಯಾರ್ಥಿಗಳು ಬೊಂಬೆ ಹೇಳುತೈತೆ ಗಾಯನಕ್ಕೆ ನೃತ್ಯದ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು. ನೃತ್ಯದ ಕೊನೆಯಲ್ಲಿ ಬಾವಪರವಶರಾದ ಮಕ್ಕಳು ಪುನೀತ್ ಭಾವಚಿತ್ರಕ್ಕೆ ಮುತ್ತನ್ನು ನೀಡಿ ಅಗಲಿದ ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಿದರು. ಶಾಲೆಯ ಮುಖ್ಯ ಶಿಕ್ಷಕ ರಮೇಶ ಮಹಾಲೆ, ಸಹಶಿಕ್ಷಕಿ ಲಲಿತಾ, ಲೈಟ್ಹೌಸ್ ಹಿಲ್ ಫ್ರೆಂಡ್ಸ್ ಸದಸ್ಯರು ಹಾಗೂ ಶಾಲೆಯ ಹಳೆ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಹಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಸಿದ್ಧಿವಿನಾಯಕ ಚೆಸ್ ಆಕಾಡೆಮಿ ಬೈಂದೂರು ಇವರ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಚೆಸ್ ಸ್ಪರ್ಧೆ ಇಲ್ಲಿನ ರತ್ತುಬಾಯಿ ಜನತಾ ಪ್ರೌಢಶಾಲೆಯಲ್ಲಿ ನಡೆಯಿತು. ಬೈಂದೂರು ತಾಲೂಕಿನ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮುಖ್ಯೋಪಾಧ್ಯಾಯರಾದ ಆನಂದ ಮದ್ದೋಡಿ ಸಭಾಧ್ಯಕ್ಷತೆಯನ್ನು ವಹಿಸಿ, ಚೆಸ್ ಆಟ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅತ್ಯಂತ ಸಹಕಾರಿ ಎಂದರು. ಈ ಸಂದರ್ಭ ಶಿಕ್ಷಕರಾದ ರಾಘವೇಂದ್ರ, ದೈಹಿಕ ಶಿಕ್ಷಕರಾದ ಗುರುರಾಜ ಎಸ್, ಚಂದ್ರ ದೇವಾಡಿಗ ಉಪಸ್ಥಿತರಿದ್ದರು. ಚೆಸ್ ಆಕಾಡೆಮಿಯ ಅಧ್ಯಕ್ಷರಾದ ಬಾಬು ಜೆ. ಪೂಜಾರಿ ಕಾರ್ಯಕ್ರಮವನ್ನು ನಿರ್ವಸಿದರು. ಚೆಸ್ ಸ್ಪರ್ಧೆಯಲ್ಲಿ ಹನ್ನೆರಡು ವರ್ಷದ ವಿಭಾಗದ ಹುಡುಗಿಯರಲ್ಲಿ ಪ್ರಥಮ, ಮಧು ಮಯೂರಿ ಗ್ರೀನ್ ವ್ಯಾಲಿ ಆಂಗ್ಲ ಶಾಲೆ, ದ್ವಿತೀಯ, ಜೈನಿಕ್ ಸೈಂಟ್ ಥೋಮಸ್ ಸ್ಕೂಲ್ ಬೈಂದೂರು, ತ್ರತಿಯ, ಸಾನಿಕ ಮಾದರಿ ಸ್ಕೂಲ್ ಬೈಂದೂರು, ಹುಡುಗರ ವಿಭಾಗದಲ್ಲಿ ಆದ್ರಿತ್. ಸಂದೀಪನ್ ಆಂಗ್ಲ ಶಾಲೆ ನಾಗೂರು, ಶ್ರೀಚರಣ್ . ಸಂದೀಪನ್ ಆಂಗ್ಲ ಮಾಧ್ಯಮ ಶಾಲೆ ನಾಗೂರು, ವಿಖ್ಯಾತ. ಸೈಂಟ್…
