ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ರಾಜ್ಯದಲ್ಲಿ 11 ಜಿಲ್ಲೆ ಹೊರತುಪಡಿಸಿ ಕೊವೀಡ್ ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಅನ್ ಲಾಕ್, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಗೆ ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ. ಜೂನ್ 14ರಿಂದ ಈ ನಿಯಮಗಳು ಜಾರಿಗೆ ಬರಲಿದ್ದು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ಬೆಂಗಳೂರು ಗ್ರಾಮಾಂತರ, ಕೊಡಗು, ಮಂಡ್ಯ ಮತ್ತು ಬೆಳಗಾವಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಗೆ ಅನ್ವಯವಾಗಲಿದೆ. ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಮಯ ವಿಸ್ತರಣೆ ಮಾಡಲಾಗಿದೆ. ಮಧ್ಯಾಹ್ನ 2 ಗಂಟೆಯವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಶೇ.50ರಷ್ಟು ಸಿಬ್ಬಂದಿ ಬಳಸಿ ಎಲ್ಲಾ ಕಾರ್ಖಾನೆಗಳು ಆರಂಭ. ಕೋವಿಡ್ ಮಾರ್ಗಸೂಚಿ ಪಾಲಿಸಿ ಕೆಲಸ ಮಾಡಬೇಕು. ಗಾರ್ಮೆಂಟ್ಸ್ ಗಳಲ್ಲಿ ಶೇ.30ರಷ್ಟು ಸಿಬ್ಬಂದಿಗೆ ಅವಕಾಶ. ಸಿಮೆಂಟ್, ಸ್ಟೀಲ್ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿಗೆ ಅವಕಾಶ ಮಾಡಕೊಡಲಾಗಿದೆ. ಬಾರ್, ಹೋಟೆಲ್ ಗಳಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯಾದ್ಯಂತ ಉಲ್ಬಣಗೊಳ್ಳುತ್ತಿದ್ದ ಕೋವಿಡ್ ಸೋಂಕಿನ ಪ್ರಸರಣವನ್ನು ನಿಯಂತ್ರಿಸುವಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಮಾರ್ಗಸೂಚಿಗಳನ್ನು ಜಾರಿ ಮಾಡಿದ್ದ ರಾಜ್ಯ ಸರ್ಕಾರ, ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸಲು ರೂಪಿಸಿದ, ‘ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಉಡುಪಿ ಜಿಲ್ಲೆಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಜಾರಿಗೊಳಿಸುವ ಮೂಲಕ, ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುವುದನ್ನು ಗಣನೀಯ ಪ್ರಮಾಣದಲ್ಲಿ ನಿಯಂತ್ರಿಸಲು ಸಹಕಾರಿಯಾಗಿದೆ.. ಜಿಲ್ಲೆಯಲ್ಲಿ ಅನುಷ್ಠಾನ ಮಾಡಿರುವ ‘ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ವೈದ್ಯರು, ಸ್ವಾಬ್ ಸಂಗ್ರಹಗಾರರು, ಗ್ರಾಮೀಣ ಕೋವಿಡ್ ಕಾರ್ಯಪಡೆಯ ಸದಸ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಒಳಗೊಂಡ 73 ತಂಡಗಳನ್ನು ರಚಿಸಿದ್ದು, ತಂಡದ ಎಲ್ಲಾ ಸದಸ್ಯರು ಒಟ್ಟಾಗಿ ಗ್ರಾಮಗಳಿಗೆ ತೆರಳಲು ಅನುಕೂಲವಾಗುವಂತೆ, ಎಲ್ಲಾ ತಂಡಗಳಿಗೆ ಜಿಲ್ಲಾಡಳಿತದ ಮೂಲಕ ಪ್ರತ್ಯೇಕ ವಾಹನ ವ್ಯವಸ್ಥೆ ಒದಗಿಸಲಾಗಿದ್ದು, ರೋಗ ಲಕ್ಷಣಗಳಿರುವವರನ್ನು ಸ್ಥಳದಲ್ಲೇ ಕೋವಿಡ್ ಪರೀಕ್ಷೆ ನಡೆಸಲು ರ್ಯಾಟ್ ಕಿಟ್ ಗಳನ್ನು ಒದಗಿಸಿದ್ದು, ರ್ಯಾಟ್ ಟ್ ಪರೀಕ್ಷೆ ಮೂಲಕ ಸ್ಥಳದಲ್ಲೇ ಸೋಂಕಿತರನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ರಾಜ್ಯ ಸರಕಾರದಿಂದ ‘ಎ’ ದರ್ಜೆಯ 50,000 ಧಾರ್ಮಿಕ ದತ್ತಿ ಇಲಾಖೆಯ ದೇಗುಲಗಳ ಸಿಬ್ಬಂದಿ ಹಾಗೂ ಅರ್ಚಕರಿಗೆ 1,500ರೂ. ಮೌಲ್ಯದ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಲಾಗುತ್ತಿದೆ ಹಾಗೂ ಎಲ್ಲ ಅರ್ಚಕರಿಗೆ ಲಾಕ್ಡೌನ್ ನಿಮಿತ್ತ ೩೦೦೦ರೂ. ಪ್ಯಾಕೇಜ್ ಒದಗಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ವತಿಯಿಂದ ಏರ್ಪಡಿಸಲಾಗಿದ್ದ ಬಡತನ ರೇಖೆಗಿಂತ ಕೆಳಗಿರುವ ೫೫೦ಕ್ಕೂ ಮಿಕ್ಕಿ ಕೊಲ್ಲೂರು ನಿವಾಸಿಗಳಿಗೆ ಆಹಾರ ಕಿಟ್ ವಿತರಿಸಿ ಮಾತನಾಡಿದ ಸಚಿವರು ಜೂ.14ರ ನಂತರ ಲಾಕ್ಡೌನ್ ಹಂತ – ಹಂತವಾಗಿ ತೆರವುಗೊಳಿಸುವ ಬಗ್ಗೆ ಮಾತುಕತೆ ನಡೆಯುತ್ತಿದೆ. ದೇಗುಲಗಳು ತೆರೆಯುವ ಬಗ್ಗೆ ಇನ್ನಷ್ಟೇ ನಿರ್ಧಾರ ಕೈಗೊಳ್ಳಬೇಕಾಗಿದೆ ಭಕ್ತರ ನೂಕು ನುಗ್ಗಲಿನಿಂದ ಮತ್ತೆ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ ಸಾಮಾಜಿಕ ಅಂತರ ಕಾಯ್ದು ದೇಗುಲದ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಇಲಾಖೆಯ ಅಧಿಕಾರಿಗಳೊಡನೆ ಚರ್ಚೆ ನಡೆಯುತ್ತಿದೆ ಎಂದರು. ಉಡುಪಿ ಹಾಗೂ ಮಂಗಳೂರು ಜಿಲ್ಲೆಯಲ್ಲಿ ಕೊರೊನಾ ವೈರಸ್ನ ಸಾಧಕ-ಭಾದಕ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಏಳಜಿತ ಶ್ರೀ ರಾಮಕೃಷ್ಣ ಕುಟೀರದಿಂದ ಪರಿಸರದ ಆಟೋ ಚಾಲಕರಿಗೆ ದಿನಸಿ, ತರಕಾರಿ ಹಾಗೂ ಆಯುರ್ವೇದದ ಔಷದಿಗಳ ಕಿಟ್ ಗುರುವಾರ ಕುಟೀರದ ಆವರಣದಲ್ಲಿ ವಿತರಿಸಲಾಯಿತು. ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಕಿಟ್ ವಿತರಿಸಿ ಮಾತನಾಡಿ, ಕುಟೀರದ ವತಿಯಿಂದ ಈತನಕ ಅಗತ್ಯವುಳ್ಳವರನ್ನು ಗುರುತಿಸಿ 100ಕ್ಕೂ ಹೆಚ್ಚು ಕಿಟ್ಗಳನ್ನು ವಿತರಿಸಲಾಗಿದೆ. ಸಂಕಷ್ಟದ ಸಮಯದಲ್ಲಿ ಸಾಧ್ಯವಾದಷ್ಟು ನೆರವು ನೀಡಲಾಗಿದೆ. ಲಾಕ್ಡೌನ್ ಸಡಿಲಗೊಳಿಸಿರುದರಿಂದ ಕಿಟ್ ವಿತರಣಾ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗುವುದು ಎಂದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡುವ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಹಾಗೂ ಸಮಸ್ಯೆಗಳಿಗೆ ಆಸ್ಪದ ನೀಡದಂತೆ , ಅರ್ಹ ಸಾರ್ವಜನಿಕರಿಗೆ ಸಮರ್ಪಕವಾಗಿ ಲಸಿಕೆಯನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ.ರೇಜು ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ಲಸಿಕೆ ನೀಡುವ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು, ಆದ್ಯತಾ ವಲಯದಲ್ಲಿರುವವರು ಮತ್ತು ದುರ್ಬಲ ವರ್ಗದವರಿಗೆ ಸಮಪರ್ಕವಾಗಿ ಲಸಿಕೆ ನೀಡುವಂತೆ ತಿಳಿಸಿದ ಡಾ.ರೇಜು, ಲಸಿಕೆ ನೀಡುವ ಕುರಿತಂತೆ ಸಾರ್ವಜನಿಕರಿಗೆ ಸಾಕಷ್ಟು ಮುಂಚಿತವಾಗಿ ಮಾಹಿತಿ ನೀಡಿ, ಲಸಿಕಾ ಸ್ಥಳದಲ್ಲಿ ಅನಗತ್ಯವಾಗಿ ಜನದಟ್ಟಣಿ ಉಂಟಾಗದಂತೆ ಹಾಗೂ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಅರ್ಹರಿಗೆ ಲಸಿಕೆ ನೀಡಿ, ಲಸಿಕಾ ಉಸ್ತುವಾರಿಗೆ ನಿಯೋಜಿಸಿರುವ ಅಧಿಕಾರಿಗಳು ಲಸಿಕೆ ನೀಡುವ ಸ್ಥಳದಲ್ಲಿ ಸಮಸ್ಯೆಗಳು ಕಂಡುಬರದAತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಗುರುವಾರ 289 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 2 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 126, ಕುಂದಾಪುರ, ಬೈಂದೂರು ತಾಲೂಕಿನ 122, ಕಾರ್ಕಳ, ಹೆಬ್ರಿ ತಾಲೂಕಿನ 40 ಮಂದಿಗೆ ಹಾಗೂ ಹೊರ ಜಿಲ್ಲೆಯ ಓರ್ವ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 289 ಪ್ರಕರಣಗಳಲ್ಲಿ 13 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 276 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿ ತಾಲೂಕಿನ 74 ವರ್ಷದ ಪುರುಷ, ಕಾರ್ಕಳ ತಾಲೂಕಿನ 72 ವರ್ಷದ ಮಹಿಳೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 241 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 3812 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3606 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 2146 ಮಂದಿಗೆ ಮೊದಲನೇ ಡೋಸ್, 304 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: 50ಕ್ಕೂ ಮಿಕ್ಕಿ ಕೋವಿಡ್ ಪಾಸಿಟಿವ್ ಇರುವ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರದೇಶವನ್ನು ಜಿಲ್ಲಾಧಿಕಾರಿಯವರ ಆದೇಶದಂತೆ ಜೂ.10ರಿಂದ 14ರವರೆಗೆ ಸಂಪೂರ್ಣ ಲಾಕ್ಡೌನ್ ಮಾಡಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಂದು ಬೆಳಗಿನಿಂದ ಗಂಗೊಳ್ಳಿಯ ಮೇಲ್ಗಂಗೊಳ್ಳಿ ಬಳಿ ಪೊಲೀಸ್ ಚೆಕ್ಪೋಸ್ಟ್ನಲ್ಲಿ ವಾಹನ ತಪಾಸಣೆ ನಡೆಸಿದ ಗಂಗೊಳ್ಳಿ ಪೊಲೀಸರು ತುರ್ತು ಅಗತ್ಯ ವೈದ್ಯಕೀಯ ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ಮಾಡಿಕೊಟ್ಟರು. ಸ್ಥಳೀಯ ಗ್ರಾಮ ಪಂಚಾಯತ್ ಟಾಸ್ಕ್ಪೋರ್ಸ್ ಸಮಿತಿ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಪೊಲೀಸರ ಸಹಕಾರದೊಂದಿಗೆ ಜನರ ಹಾಗೂ ವಾಹನಗಳ ಅನಗತ್ಯ ಸಂಚಾರಕ್ಕೆ ಕಡಿವಾಣ ಹಾಕಿದರು. ಗಂಗೊಳ್ಳಿ ಪ್ರವೇಶಿಸುವವರಿಗೆ ಹಾಗೂ ಹೊರ ಹೋಗುವವರಿಗೆ ನಿರ್ಬಂಧ ಹೇರಲಾಗಿತ್ತು. ಸಂಪೂರ್ಣ ಲಾಕ್ಡೌನ್ ಹಿನ್ನಲೆಯಲ್ಲಿ ಜನರ ಮತ್ತು ವಾಹನ ಸಂಚಾರವಿಲ್ಲದೆ ಮುಖ್ಯರಸ್ತೆ ಬಿಕೋ ಎನ್ನುತ್ತಿತ್ತು. ಎಲ್ಲಾ ಸಹಕಾರಿ ಬ್ಯಾಂಕ್ ಮತ್ತು ಸೌಹಾರ್ದ ಸಹಕಾರಿಯನ್ನು ಮುಚ್ಚಲಾಗಿತ್ತು. ರಾಷ್ಟ್ರೀಕೃತ ಬ್ಯಾಂಕ್ ಮತ್ತು ಅಂಚೆ ಕಛೇರಿ ತೆರೆದಿದ್ದರೂ ಯಾವುದೇ ವಹಿವಾಟು ನಡೆಸಲು…
ನಿಮ್ಮ ಆಹಾರದ ಜೊತೆಗೆ ಮೊಸರು ತಿನ್ನುವುದು ಆಹಾರವನ್ನು ತ್ವರಿತವಾಗಿ ಜೀರ್ಣಿಸಿಕೊಳ್ಳುವುದಲ್ಲದೆ, ದೇಹದ ಉಷ್ಣತೆಯನ್ನು ಶಾಂತಗೊಳಿಸುತ್ತದೆ. ಮೊಸರನ್ನು ಪ್ರತಿದಿನ ತಿನ್ನುವುದರಿಂದ ಬಾಡಿ ಡಿಟಾಕ್ಸ್ ಗೆ ಕಾರಣವಾಗುತ್ತದೆ, ಆದರೆ ಮೊಸರಿನೊಂದಿಗೆ ಸೇವಿಸಬಾರದ ಕೆಲವೊಂದು ಆಹಾರಗಳಿವೆ. ಇವುಗಳನ್ನು ಮೊಸರಿನೊಂದಿಗೆ ತಿನ್ನುವುದರಿಂದ, ದೇಹದಲ್ಲಿ ಜೀವಾಣು ರೂಪುಗೊಳ್ಳುತ್ತದೆ, ಇದು ರೋಗ ನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುತ್ತದೆ. ಮಾವು ಮತ್ತು ಮೊಸರು: ನೀವು ಎಂದಿಗೂ ಮಾವು ಮತ್ತು ಮೊಸರನ್ನು ಒಟ್ಟಿಗೆ ತಿನ್ನಬೇಡಿ. ಇವೆರಡೂ ದೇಹಕ್ಕೆ ವಿಷಕಾರಿಯಾಗಿವೆ. ಏಕೆಂದರೆ ಅವುಗಳ ಪರಿಣಾಮವು ಪರಸ್ಪರ ಭಿನ್ನವಾಗಿರುತ್ತದೆ. ಆದ್ದರಿಂದ ನೀವೇನಾದ್ರೂ ಮೊಸರಿನೊಂದಿಗೆ ಮಾವಿನಹಣ್ಣು ಸೇವಿಸುವುತ್ತಿದ್ದರೆ ಈಗಲೇ ನಿಲ್ಲಿಸಿ. ಇವು ನಿಮ್ಮ ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿವೆ. ಉದ್ದಿನ ಬೇಳೆ ಮತ್ತು ಮೊಸರು: ಉದ್ದಿನ ಬೇಳೆಯನ್ನು ಮೊಸರಿನೊಂದಿಗೆ ತಿನ್ನಬಾರದು, ಎರಡೂ ಹೊಟ್ಟೆಗೆ ಹೋಗಿ ದೇಹಕ್ಕೆ ದೊಡ್ಡ ಹಾನಿ ಉಂಟುಮಾಡುತ್ತದೆ. ಆದ್ದರಿಂದ ಉದ್ದಿನ ಬೇಳೆಯನ್ನು ಮೊಸರಿನೊಂದಿಗೆ ಎಂದಿಗೂ ಸೇವಿಸಬೇಡಿ. ಇದು ಖಂಡಿತ ನಿಮ್ಮಲ್ಲಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಹಾಲು ಮತ್ತು ಈರುಳ್ಳಿ ಅಥವಾ ಮೊಸರು ಮತ್ತು ಈರುಳ್ಳಿ: ಇವುಗಳನ್ನು ಎಂದಿಗೂ ಒಟ್ಟಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಈ ಕುರಿತು ಆಯಾ ತಾಲೂಕು ತಹಶೀಲ್ದಾರರುಗಳು ವೈಯಕ್ತಿಕ ಗಮನಹರಿಸಿ ತಮ್ಮ ತಾಲೂಕು ವ್ಯಾಪ್ತಿಯ ಎಲ್ಲಾ ಸ್ಥಳಗಳಿಗೆ ಭೇಟಿ ನೀಡಿ, ಸರಕಾರಿ ಜಮೀನುಗಳು ಅತಿಕ್ರಮಣವಾಗಿರುವ ಪ್ರಕರಣಗಳನ್ನು ಪತ್ತೆಹಚ್ಚಿ, ಅತಿಕ್ರಮಣವನ್ನು ತೆರವುಗೊಳಿಸಬೇಕು. ಸದ್ರಿ ಜಮೀನನ್ನು ಸರಕಾರದ ವಶಕ್ಕೆ ಪಡೆದು ಸೂಚನಾ ಬೋರ್ಡ್ ಹಾಗೂ ತಡೆಬೇಲಿಯನ್ನು ಅಳವಡಿಸಿ, ಸರ್ಕಾರಿ ಜಮೀನನ್ನು ಅತಿಕ್ರಮಣ ಮಾಡಿದವರ ಮೇಲೆ ಕಾನೂನು ಕ್ರಮ ವಹಿಸಲು ಹಾಗೂ ಇದಕ್ಕೆ ಸಹಕಾರ ನೀಡಿ ಅತಿಕ್ರಮಣಕ್ಕೆ ಕಾರಣರಾದ ಕಂದಾಯ ಇಲಾಖಾ ನೌಕರರ ವಿರುದ್ಧ ಶಿಸ್ತು ಕ್ರಮ ವಹಿಸಲು ಪ್ರಸ್ತಾವನೆ ಸಲ್ಲಿಸಬೇಕು. ಈ ಕುರಿತು ತಹಶೀಲ್ದಾರರುಗಳು ಪ್ರತಿದಿನ ಕೈಗೊಂಡ ಕ್ರಮದ ಬಗ್ಗೆ ವಿಸ್ತೃತ ವರದಿಯನ್ನು ಜೂನ್ 11 ರ ಸಂಜೆ 4 ಗಂಟೆಯ ಒಳಗೆ ಜಿಲ್ಲಾಧಿಕಾರಿ ಕಚೇರಿಗೆ, ಕುಂದಾಪುರ ಸಹಾಯಕ ಕಮೀಷನರ್ ಮೂಲಕ ಇ-ಮೇಲ್ನಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಜೂ.9: ಯಡಮೊಗೆ ಗ್ರಾಮದ ಉದಯ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಮಂದಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಜೂ.6ರಂದು ನಡೆದ ಕೊಲೆ ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಎಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳನ್ನು ಅಂದು ಮಧ್ಯರಾತ್ರಿಯೇ ಬಂಧಿಸಲಾಗಿತ್ತು. ಸೋಮವಾರ ಬೆಳಿಗ್ಗೆ ಇನ್ನೋರ್ವ ಆರೋಪಿ ಬಿಜೆಪಿ ಮುಖಂಡ ಬಾಲಚಂದ್ರ ಭಟ್ ಹಾಗೂ ರಾಜೇಶ್ ಭಟ್ ಎಂಬಾತನನ್ನು ಬಂಧಿಸಲಾಗಿದ್ದು ಮೂವರೂ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜೂ.9ರಂದು ಯಡಮೊಗೆ ನಿವಾಸಿ ಮನೋಜ್ ಕುಮಾರ್, ಯಡಮೊಗೆ ಗ್ರಾಮ ಪಂಚಾಯತ್ ಸದಸ್ಯ ಸದಾಶಿವ ನಾಯ್ಕ್ ಹಾಗೂ ಸ್ಥಳೀಯ ನಿವಾಸಿ ವೇಣುಗೋಪಾಲ ಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಜೂನ್ 29ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ. ಪ್ರಾಣೇಶ್ ಯಡಿಯಾಳ್ ಹಾಗೂ ಆತನ ತಂಡ ಉದಯ್ ಗಾಣಿಗ ಅವರ ಮೈಮೇಲೆ ಕಾರು ಹತ್ತಿಸಿ ಆ ಬಳಿಕ ದೊಣ್ಣೆಯಿಂದ ಹೊಡೆದು ಕೊಲೆಗೈದಿದ್ದಾರೆ ಎಂದು ಉದಯ…
