ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸಿಆರ್ಝೆಡ್ನಲ್ಲಿ ಗುರುತಿಸಲಾಗಿ ರುವ ಮರಳುಗಾರಿಕೆ ದೋಣಿ ಹಾಗೂ ಮರಳು ಸಾಗಾಟ ವಾಹನಗಳಿಗೆ ಅಳವಡಿಸಿರುವ ಜಿಪಿಎಸ್ ತಂತ್ರಾಂಶ ನಿಯಂತ್ರಣ ಹಾಗೂ ಉಲ್ಲಂಘನೆ ಬಗ್ಗೆ ಪರಿಶೀಲಿಸಲು ಜಿಪಿಎಸ್ ಮಾನಿಟರಿಂಗ್ ಸೆಂಟರ್ ಆರಂಭಿಸಲಾಗಿದೆ ಎಂದು ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಅಧ್ಯಕ್ಷ, ಜಿಲ್ಲಾಧಿಕಾರಿ ಕೂರ್ಮಾ ರಾವ್ ತಿಳಿಸಿದ್ದಾರೆ. ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಗಣಿಗಾರಿಕೆ, ಸಾಗಾಣಿಕೆ, ದಾಸ್ತಾನು ಸಂಬಂಧಿಸಿದಂತೆ ಜಿಲ್ಲಾ ಮಟ್ಟದಲ್ಲಿ 24X7 ಅಲರ್ಟ್ ಆಗಿರುವಂತೆ ಈ ಸೆಂಟರ್ನ್ನು ಎನ್ಐಸಿ, ಇ-ಗವರ್ನೆನ್ಸ್ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ವತಿಯಿಂದ ಪ್ರಾರಂಭಿಸಲಾಗಿದೆ. ಈ ಕಂಟ್ರೋಲ್ ರೂಂನ ದೂರವಾಣಿ ಸಂಖ್ಯೆ 0820-2950088 ಆಗಿದ್ದು, ಅನಧಿಕೃತ ಗಣಿಗಾರಿಕೆ, ಸಾಗಾಣಿಕೆ ಹಾಗೂ ದಾಸ್ತಾನು ನಿಯಂತ್ರಿಸುವ ಸಲುವಾಗಿ ಜಿಲ್ಲೆಯಲ್ಲಿ ತಾಲೂಕು ಮಟ್ಟದ ಅಧಿಕಾರಿ ಗಳನೊಳಗೊಂಡ ಚಾಲಿತ ದಳ ರಚಿಸಲಾಗಿದೆ ಎಂದರು. ಕುಂದಾಪುರ, ಬ್ರಹ್ಮಾವರ, ಉಡುಪಿ ತಾಲೂಕು ವ್ಯಾಪ್ತಿಯ ವಾರಾಹಿ, ಸೌಪರ್ಣಿಕಾ, ಸ್ವರ್ಣಾ ಮತ್ತು ಸೀತಾನದಿ ಗಳಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾಠ್ಯ ಹಾಗೂ ನಾನ್ ಸಿಆರ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುರಭಿ ರಿ. ಬೈಂದೂರು ಸಂಸ್ಥೆಯ ವಿಶೇಷ ಸಭೆ ಇತ್ತಿಚಿಗೆ ಬೈಂದೂರು ರೋಟರಿ ಭವನದಲ್ಲಿ ಜರುಗಿತು. ಈ ಸಂದರ್ಭ ರಾಜ್ಯಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ 50ರಿಂದ 60 ವಯೋಮಾನ ವಿಭಾಗದ 400 ಮೀಟರ್ ಓಟದ ಸ್ವರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ ಮಟ್ಟಕ್ಕೆ ಆಯ್ಕೆಯಾದ ಗಂಗಾನಾಡು ಸ.ಹಿ.ಪ್ರಾ ಶಾಲೆ ಸಹಶಿಕ್ಷಕ ನಾಗರಾಜ ಬಿ. ಅವರನ್ನು ಸುರಭಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಸುರಭಿ ಅಧ್ಯಕ್ಷ ನಾಗರಾಜ ಪಿ. ಯಡ್ತರೆ, ಕಾರ್ಯದರ್ಶಿ ಭಾಸ್ಕರ ಬಾಡ, ನಿರ್ದೇಶಕ ಸುಧಾಕರ ಪಿ. ಬೈಂದೂರು, ಸದಸ್ಯರಾದ ಆನಂದ ಮದ್ದೋಡಿ, ವೆಂಕಟೇಶ್ ಮಯ್ಯಾಡಿ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶೋರಿನ್ ರಿಯೂ ಕರಾಟೆ ಅಸೋಸಿಯೇಷನ್ ವತಿಯಿಂದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಇತ್ತೀಚಿಗೆ ಆಯೋಜಿಸಿದ 18ನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆಯ ಕಟಾ ಮತ್ತು ಫೈಟಿಂಗ್, (ಕುಮೆಟಿ) ವಿಭಾಗದಲ್ಲಿ ಅನನ್ಯ ಎಸ್ ಪುರಾಣಿಕ್ ಪ್ರಥಮ ಮತ್ತು ತೃತೀಯ ಸ್ಥಾನಗಳಿಸಿ ಚಿನ್ನದ ಹಾಗೂ ಕಂಚಿನ ಪದಕ ಪಡೆದುಕೊಂಡಿದ್ದಾರೆ ಅವರು, ನಾಗೂರು ಸಂದೀಪನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿನಿಯಾಗಿದ್ದು. ಉಪ್ಪುಂದ ಸೀತಾರಾಮ್ ಪುರಾಣಿಕ್ ಮತ್ತು ಉಷಾ ಪುರಾಣಿಕ್ ರವರ ಪುತ್ರಿ . ಉಪ್ಪುಂದ ಕರಾಟೆ ಶಿಕ್ಷಕ ವಿಶ್ವನಾಥ್ ದೇವಾಡಿಗ ಅವರಲ್ಲಿ ತರಬೇತಿಯನ್ನು ಪಡೆದುಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಜರಗುವ ವಾರ್ಷಿಕ ದೀಪೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಿತು. ದೀಪೋತ್ಸವದ ಅಂಗವಾಗಿ ವನಭೋಜನ, ಧಾತ್ರೆ ಹವನ, ಮಹಾಪೂಜೆ, ಮಹಾಸಮಾರಾಧನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ದೇವಸ್ಥಾನದ ತಾಂತ್ರಿಕ ಜಿ.ರಾಘವೇಂದ್ರ ಆಚಾರ್ಯ ಮತ್ತು ದೇವಳದ ಪ್ರಧಾನ ಅರ್ಚಕ ಜಿ.ಪ್ರದೀಪ ಭಟ್ ನೇತೃತ್ವದಲ್ಲಿ ನಡೆಯಿತು. ದೇವಸ್ಥಾನದ ಆಡಳಿತ ಮೊಕ್ತೇಸರ ಜಿ.ರಘುವೀರ ನಾಯಕ್, ಜಿ.ನರಸಿಂಹ ನಾಯಕ್, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು. ಆಡಳಿತ ಮಂಡಳಿ ಸದಸ್ಯರು, ಸಮಾಜಬಾಂಧವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಮತ್ತು ಸೃಜನಶೀಲತೆಯನ್ನು ಬೆಳೆಸುವ ಉದ್ದೇಶದಿಂದ ಆಸುಪಾಸಿನ ಆಯ್ದ ಪ್ರೌಢಶಾಲೆಯ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸವಿ ಪ್ರತಿಭಾ ಶೋಧ ಶೈಕ್ಷಣಿಕ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಗಂಗೊಳ್ಳಿಯ ಜಿ.ಎಸ್. ವಿ.ಎಸ್ ಅಸೋಸಿಯೇಷನ್ ರಿ. ಅಧ್ಯಕ್ಷ ಡಾ. ಕಾಶಿನಾಥ್ ಪೈ, ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಜಿ ಬಹುಮಾನಗಳನ್ನು ವಿತರಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ ವಹಿಸಿದ್ದರು. ಆಂಗ್ಲಭಾಷಾ ಉಪನ್ಯಾಸಕರಾದ ಥಾಮಸ್ ಪಿ. ಎ ಮತ್ತು ಶಾಲೆಟ್ ಲೋಬೊ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್. ಕೆ ಉಪಸ್ಥಿತರಿದ್ದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮವನ್ನು ನಿರ್ವಹಿಸಿದರು. ಕನ್ನಡ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರತಿಯೊಬ್ಬರೂ ದೈಹಿಕವಾಗಿ ಸದೃಢರಾಗಲು ಕ್ರೀಡೆ ಅತೀ ಅವಶ್ಯಕ. ಕ್ರೀಡೆಯಿಂದ ಆರೋಗ್ಯ ವೃದ್ಧಿಗೊಳ್ಳುವುದಲ್ಲದೆ ಮಾನಸಿಕವಾಗಿ ಶಕ್ತರಾಗುತ್ತೇವೆ. ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಸೌಹಾರ್ದ ಮನೋಭಾವ ಬೆಳೆಯಲು ಸಾಧ್ಯ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ವಿನಾಯಕ್ ಶೆಣೈ ಹೇಳಿದರು. ಅವರು ಜಿಲ್ಲಾ ಗೃಹ ರಕ್ಷಕ ದಳ ಕಚೇರಿಯಲ್ಲಿ, ಗೃಹರಕ್ಷಕ ದಳದ ವತಿಯಿಂದ ನಡೆದ, ಜಿಲ್ಲಾ ಮಟ್ಟದ ವೃತ್ತಿಪರ ಮತ್ತು ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಗೃಹರಕ್ಷಕರು ದೇಶ ಸೇವೆ, ಸಮಾಜ ಸೇವೆಯಲ್ಲಿ ತಲ್ಲೀನರಾದಂತೆ, ಕ್ರೀಡಾ ಕ್ಷೇತ್ರದಲ್ಲೂ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಮುಂದೆ ಜಿಲ್ಲೆ, ರಾಜ್ಯ, ದೇಶವನ್ನು ಪ್ರತಿನಿಧಿಸುವಂತಾಗಬೇಕು ಎಂದರು. ದೇಶ ರಕ್ಷಣೆ ಮಾಡುವ ಸೇನೆ, ಆಂತರಿಕ ಭದ್ರತೆಯನ್ನು ಕಾಪಾಡುವ ಸಿ.ಆರ್.ಪಿ.ಎಫ್ ಹಾಗೂ ಸಮಾಜದ ರಕ್ಷಣೆ ಮಾಡುವ ಆರಕ್ಷಕ ದಳಕ್ಕೆ ಸರಿಸಾಟಿಯಾಗಿ ದೇಶದೆಲ್ಲೆಡೆ ಅಗತ್ಯಕ್ಕನುಗುಣವಾಗಿ ಚುನಾವಣಾ ಸಂದರ್ಭದಲ್ಲಿ, ಯಾವುದೇ ರೀತಿಯ ಅವಘಡಗಳು ಸಂಭವಿಸಿದ ಸಂದರ್ಭದಲ್ಲಿ, ಸರಕಾರದಿಂದ ಕರೆ ಬಂದಾಗ, ಯಾವುದನ್ನೂ ಲೆಕ್ಕಿಸದೆ ದೇಶ ಹಾಗೂ ಸಮಾಜ ಸೇವೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ನಾಡದೋಣಿ ಮೀನುಗಾರರಿಗೆ ಅಕ್ಟೋಬರ್ ತಿಂಗಳಲ್ಲಿ ಬಾಕಿ ಇರುವ ಸೀಮೆಎಣ್ಣೆಯನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಕೋರಿ ಗಂಗೊಳ್ಳಿಯ ಪ್ರಾಥಮಿಕ ಮೀನುಗಾರರ ಸಹಕಾರ ಸಂಘ ಅಧ್ಯಕ್ಷ ಸದಾಶಿವ ಕಂಚುಗೋಡು, ಉಪಾಧ್ಯಕ್ಷ ಸೂರಜ್ ಖಾರ್ವಿ ಹಾಗೂ ನಿರ್ದೇಶಕ ಚಂದ್ರ ಖಾರ್ವಿ ಅವರು ಕರ್ನಾಟಕ ಸರ್ಕಾರದ ಮೀನುಗಾರಿಕೆ ನಿರ್ದೇಶನಾಲಯಲ್ಲಿ ಮೀನುಗಾರಿಕಾ ನಿರ್ದೇಶಕ ರಾಮಾಚಾರಿ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಗಂಗೊಳ್ಳಿ ಮೀನುಗಾರಿಕಾ ಬಂದರಿನ ಕಾಮಗಾರಿಯ ಬಗ್ಗೆ ಚರ್ಚೆ ನಡೆಸಿದ ಅವರು ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯನ್ನು ಆದಷ್ಟು ಬೇಗ ಅನುಷ್ಠಾನಗೊಳಿಸಬೇಕೆಂದು ನಿರ್ದೇಶಕರಲ್ಲಿ ಮನವಿ ಮಾಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಆಳ್ವಾಸ್ ಪಾರಂಪರಿಕ ಔಷಧ ಭಂಡಾರ ಮತ್ತು ಸಂಶೋಧನಾ ಕೇಂದ್ರದ (ಆತ್ಮ ರಿಸರ್ಚ ಸೆಂಟರ್) ಉನ್ನತೀಕರಿಸಿದ ನೂತನ ಪ್ರಯೋಗಾಲಯವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ ಎಂ. ಮೋಹನ್ ಆಳ್ವ ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಅವರು, ಈ ಸಂಶೋದನಾ ಕೇಂದ್ರದ ಮೂಲಕ ವಿವಿಧ ಔಷಧೀಯ ಸಸ್ಯಗಳ ವಿಶೇಷ ಸಂಶೋದನೆ ಮಾಡಿ ಅದರಲ್ಲಿರುವ ರಾಸಾಯನಿಕ ಸಂಘಟನೆಗಳನ್ನು ವಿಘಟಿಸಿ, ಚಿಕಿತ್ಸೆಗೆ ಉಪಯೋಗಿಸುವ ಅಂಶಗಳನ್ನು ಸಂಗ್ರಹಿಸಿ, ಔಷಧಗಳ ಮೂಲಕ ಜನ ಸಾಮಾನ್ಯರಿಗೆ ತಲುಪುವಂತೆ ಮಾಡುವುದು ಇದರ ಉದ್ದೇಶವಾಗಿದೆ. ಆತ್ಮ ರಿಸರ್ಚ ಸೆಂಟರ್ನ ನಿರ್ದೇಶಕ ಡಾ ಸುಬ್ರಮಣ್ಯ ಪದ್ಯಾಣ ಸ್ವಾಗತಿಸಿದರು. ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಡಾ ಸಜಿತ್ ಎಂ, ಆತ್ಮ ರಿಸರ್ಚ ಸೆಂಟರ್ನ ಸಂಯೋಜಕರಾದ ಡಾ ಸೌಮ್ಯ ಸರಸ್ವತಿ, ಡಾ ರೋಹನ್ ಫೆರ್ನಾಂಡೀಸ್, ಡಾ ಅಂಜಲಿ ಕುಮಾರಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗಾಂಜಾ ಸೇವನೆ ಮಾಡಿಕೊಂಡು ಅಮಲಿನಲ್ಲಿ ತೂರಾಡಿಕೊಂಡಿದ್ದ ನಾವುಂದ ಗ್ರಾಮದ ಚಾತನಕೆರೆ ನಿವಾಸಿ ಮಹಮ್ಮದ್ ಸಿಯಾಬ್(20)ನನ್ನು ಬೈಂದೂರು ಪಿಎಸ್ಐ ಪವನ್ ನಾಯಕ್ ವಶಕ್ಕೆ ತೆಗೆದುಕೊಂಡಿದ್ದಾರೆ. ಈತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪವರ್ ಜಿಮ್ ಮತ್ತು ಫಿಟ್ನೆಸ್ ಸೆಂಟರ್ನ ಶಾಖೆ ಉಪ್ಪುಂದದ ವೈಶಾಲಿ ಕಟ್ಟಡದಲ್ಲಿ ಬುಧವಾರ ಶುಭಾರಂಭಗೊಂಡಿತು. ಉಪ್ಪುಂದ ಅಶ್ವಿನಿ ಕ್ಲಿನಿಕ್ ವೈದ್ಯರಾದ ಡಾ. ಪ್ರವೀಣ ಕುಮಾರ್ ಶೆಟ್ಟಿ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ ಅವರು ದೇಹದ ಆರೋಗ್ಯ ಮತ್ತು ಮಾನಸಿಕ ಸ್ಥಿರತೆ ಪ್ರತಿಯೊಬ್ಬರಿಗೂ ಅತ್ಯವಶ್ಯಕವಾಗಿದೆ. ಅತ್ಯಂತ ಒತ್ತಡದ ಬದುಕಿನಲ್ಲಿ ದೇಹದ ಆರೋಗ್ಯ ಕಾಪಾಡಿಕೊಳ್ಳಲು ವ್ಯಾಯಾಮ ಅತ್ಯಗತ್ಯ ಎಂದರು. ದೀಪ ಬೆಳಗಿಸಿ ಮಾತನಾಡಿದ ಕಟ್ಟಡದ ಮಾಲಿಕ ಮತ್ತು ಉದ್ಯಮಿ ವಾಜುರಾಜ್ ಶೆಟ್ಟಿ, ಬೈಂದೂರು ತಾಲೂಕಿನಲ್ಲಿ ಪ್ರಸಿದ್ದಿಗೊಂಡಿರುವ ಪವರ್ ಮಲ್ಟಿ ಜಿಮ್ ಶಾಖೆ ಉಪ್ಪುಂದದಲ್ಲಿ ಆರಂಭವಾಗಿರುವುದ ಇಲ್ಲಿನ ಯುವಜನತೆಗೆ ಉತ್ತಮ ಅವಕಾಶವಾಗಿದೆ. ಸದೃಡ ದೇಹ ಹಾಗೂ ಆರೋಗ್ಯ ಜಾಗೃತಿಗಾಗಿ ನಿತ್ಯ ವ್ಯಾಯಾಮ ಅತ್ಯಗತ್ಯ ಎಂದರು. ಪತ್ರಕರ್ತ ಅರುಣ ಕುಮಾರ್ ಶಿರೂರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೈಂದೂರು ಆರ್.ಎಸ್ ವೆಂಚರ್ಸ್ ಎಂಡಿ ರಾಜೀವ್ ಕುಮಾರ್, ಪಾಲುದಾರ ಸಾಜು ಉಪಸ್ಥಿತರಿದ್ದರು. ಪವರ್ ಜಿಮ್ ಮತ್ತು ಫಿಟ್ನೆಸ್ ಸೆಂಟರ್ನ ವಿಘ್ನೇಶ್ ಸ್ವಾಗತಿಸಿದರು. ಶಿಕ್ಷಕ…
