Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ, ಜು.26: ಕುಂದಾಪ್ರ ಕನ್ನಡ ಭಾಷಿಕರ ಸಂಭ್ರಮ 4ನೇ ವರ್ಷದ ವಿಶ್ವ ಕುಂದಾಪ್ರ ಕನ್ನಡ ದಿನ ವಿಶ್ವದ ವಿವಿಧೆಡೆ ಪ್ರತಿ ವರ್ಷ ಆಚರಿಸಲಾಗುತ್ತಿದೆ. ಶಿರೂರಿನಿಂದ ಹೆಬ್ರಿ ಬ್ರಹ್ಮಾವರದ ತನಕ ವಿಸ್ತರಿಸಿರುವ ಕುಂದಾಪ್ರ ಕನ್ನಡ ಭಾಷಾ ಸೊಬಗಿನ ವಿಶಿಷ್ಟತೆಯನ್ನು ಹಂಚಿಕೊಳ್ಳುತ್ತಾ ಸಂಭ್ರಮಿಸುವ ಸಲುವಾಗಿ 2019ರಿಂದ ಆಸಾಡಿ ಅಮವಾಸ್ಯೆ ದಿನ ವಿಶ್ವ ಕುಂದಾಪ್ರ ಕನ್ನಡ ದಿನ ಆಚರಣೆಗೆ ಚಾಲನೆ ನೀಡಲಾಗಿದ್ದು, ಈ ಭಾರಿ ಜೂನ್ 28ರಂದು ಆಚರಿಸಲಾಗುತ್ತಿದೆ. ಕುಂದಾಪುರ ತಾಲೂಕಿನ ವಿವಿಧೆಡೆ ಸಂಭ್ರಮ:ಜು.28ರಂದು ಕುಂದಾಪುರದಲ್ಲಿ ವಿಠಲವಾಡಿ ಫ್ರೆಂಡ್ಸ್ ವತಿಯಿಂದ ಹಾಡುಗಳ ಸ್ವರ್ಧೆ ಆಯೋಜಿಸಲಾಗಿದೆ. ತೆಕ್ಕಟ್ಟೆಯ ಹಯಗ್ರೀವ ಕಲ್ಯಾಣ ಮಂಟಪದಲ್ಲಿ ಯಕ್ಷದೀಪ ಕಲಾ ಟ್ರಸ್ಟ್ ವತಿಯಿಂದ ಕುಂದಾಪ್ರ ಕನ್ನಡತಿ ನಾಟ್ಯವಲ್ಲಿ ಎಂಬ ಯಕ್ಷಗಾನ ಪ್ರದರ್ಶನ ಜರುಗಲಿದೆ. ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಮಕ್ಕಳಿಗಾಗಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ. ಮಿತ್ರ ಸಂಗಮ ಬೀಜಾಡಿ ವತಿಯಿಂದ ಮಿತ್ರ ಸೌಧದಲ್ಲಿ ಗಾಯಕಿ ಸುಷ್ಮಾ ಆಚಾರ್ಯ ಅವರಿಂದ ‘ಗೀತಾ ಗಾಯನ’, ವಿಶೇಷ ಲಘು ಉಪಹಾರ ಇರಲಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಬದಲಾದ ಜಗದಲ್ಲಿ ಜೀವಂತಿಕೆಯ ಬರಹ ಅಗತ್ಯವಿದ್ದು, ಓದು ಮತ್ತು ಬರಹ ವ್ಯಕ್ತಿಯನ್ನು ಉತ್ತಮದೆಡೆಗೆ ಕೊಂಡೊಯ್ಯುತ್ತದೆ ಎಂದು ನಿರಂತರ ಪ್ರಗತಿ ಮ್ಯಾಗಝಿನ್ ಸಂಪಾದಕ ಡಾ. ಚಂದ್ರಹಾಸ ಚಾರ್ಮಾಡಿ ಹೇಳಿದರು ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಅಭಿವ್ಯಕ್ತಿ ಫೋರಂ ವತಿಯಿಂದ ಆಯೋಜಿಸಿದ್ದ ’ಬದಲಾದ ದುನಿಯಾದಲ್ಲಿ ಬರಹ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ಬರವಣಿಗೆ ಬರೀ ಅಕ್ಷರ ಮಾತ್ರವಲ್ಲದೆ ಬರಹಗಾರನ ಒಳ-ಹೊರ ಪ್ರಚೋಧಿಸುವ ಅಭಿವ್ಯಕ್ತಿ. ವಸ್ತು ಸ್ಥಿತಿ ನಕಾರಾತ್ಮಕವಾಗಿದ್ದರೂ ಬರಹಗಾರನ ಯೋಚನೆ ಸಕಾರಾತ್ಮಕವಾಗಿರಬೇಕು, ನಮ್ಮ ಬರಹ ಸಮಸ್ಯೆಗೆ ಒಳಗಾದ ವ್ಯಕ್ತಿಯ ಬದುಕನ್ನು ಕಟ್ಟಿಕೊಡುವ ನಿಟ್ಟಿನಲ್ಲಿರಬೇಕು. ಬದಲಾದ ಜಗತ್ತಿನಲ್ಲಿ ಸಂದರ್ಭಕ್ಕೆ ಅನುಸಾರವಾದ ವಿಷಯಗಳನ್ನು ಬರಹಗಾರರು ಆಯ್ದುಕೊಳ್ಳಬೇಕು ಎಂದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ಬರಹ ಮತ್ತು ಬದುಕಿನ ವೈರುಧ್ಯಗಳು ಸಮ್ಮಿಳಿತಗೊಂಡಾಗ ವ್ಯಕ್ತಿ ಪರಿಪೂರ್ಣನಾಗುತ್ತಾನೆ. ಒಂದು ಕಾಲಘಟ್ಟದ ಬರಹಗಳು ಇನ್ನೊಂದು ಕಾಲಕ್ಕೆ ಅನ್ವಯಿತವಾಗದೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2022ನೇ ಸಾಲಿನ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯು ಲೇಖಕಿ ಕಾವ್ಯ ಕಡಮೆ ಅವರ “ಮಾಕೋನ ಏಕಾಂತ” ಸಂಕಲನಕ್ಕೆ ದೊರೆತಿದೆ. ಕನ್ನಡದ ಪ್ರಮುಖ ಲೇಖಕರುಗಳಾದ ಡಾ. ಕೆ.ವೈ.ನಾರಾಯಣ ಸ್ವಾಮಿ, ರೇಣುಕಾ ನಿಡಗುಂದಿ, ಕಮಲಾಕರ ಭಟ್ ಕಡವೆ ಇವರುಗಳು ಪ್ರಶಸ್ತಿ ಆಯ್ಕೆಯ ನಿರ್ಣಾಯಕರಾಗಿ ಸಹಕರಿಸಿದ್ದಾರೆ. ಪ್ರಶಸ್ತಿ ಹದಿನೈದು ಸಾವಿರ ನಗದಿನೊಂದಿಗೆ ಪ್ರಶಸ್ತಿ ಫಲಕವನ್ನೊಳಗೊಂಡಿದೆ. ಆಗಸ್ಟ್ 13ರಂದು ಕಾಲೇಜಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಕಾಲೇಜಿನ ಪ್ರಕಟಣೆ ತಿಳಿಸಿದೆ. ಕಾವ್ಯಾ ಕಡಮೆ ಉತ್ತರ ಕನ್ನಡ ಜಿಲ್ಲೆಯ ಕಡಮೆಯವರು. ಬಿಎಸ್ಸಿ ನಂತರ ಕರ್ನಾಟಕ ವಿವಿಯಿಂದ ಆರು ಚಿನ್ನದ ಪದಕಗಳೊಂದಿಗೆ ಪತ್ರಿಕೋದ್ಯಮ ಎಂ.ಎ ಪದವಿ. 2013 ರಿಂದ ಅಮೆರಿಕಾದ ನ್ಯೂಜೆರ್ಸಿಯಲ್ಲಿ ವಾಸ. ‘ಧ್ಯಾನಕೆ ತಾರೀಖಿನ ಹಂಗಿಲ್ಲ’, ‘ಜೀನ್ಸ್ ತೊಟ್ಟ ದೇವರು’ ಪ್ರಕಟಿತ ಕವನ ಸಂಕಲನಗಳು. ‘ಪುನರಪಿ’ ಕಾದಂಬರಿ. ‘ಆಟದೊಳಗಾಟ ಮತ್ತು ಡೋರ್ ನಂಬರ್ ಎಂಟು’ ನಾಟಕಗಳ ಸಂಕಲನ. ‘ದೂರ ದೇಶವೆಂಬ ಪಕ್ಕದ ಮನೆ’ ಪ್ರಬಂಧ ಸಂಕಲನ. ಇವರ ಕೃತಿಗಳಿಗೆ ಕೇಂದ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾವು ದೇಶದ ಆಸ್ತಿಯಾಗಬೇಕು. “ಆಜಾದಿ ಕಾ ಅಮೃತ ಮಹೋತ್ಸವ” ಈ ಸಂದರ್ಭದಲ್ಲಿ ಯುವಜನತೆ ದೇಶದ ಅಖಂಡತೆ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಕಟಿಬದ್ದರಾಗಬೇಕು ಎಂದು ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ್ ವಿ. ನಾಯಕ್ ಅವರು ಕರೆ ನೀಡಿದರು. ಅವರು ಜುಲೈ 26ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮತ್ತು ಭಂಡಾರ್ಕಾರ್ಸ್ ಕಾಲೇಜಿನ ಸಹಯೋಗದಲ್ಲಿ ನಡೆದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ವಿಶ್ವವಿದ್ಯಾಲಯ ಮಟ್ಟದ ದೇಶಭಕ್ತಿ ಗೀತೆ ಗಾಯನ ಮತ್ತು ಸ್ವಾತಂತ್ರ್ಯ ಓಟದ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಯುವಜನತೆ 75 ವರ್ಷಗಳಲ್ಲಿ ಸಾಧನೆಯನ್ನು ಸಿಂಹಾವಲೋಕನ ಮಾಡಿ, ಮುಂದಿನ 25 ವರ್ಷಗಳಲ್ಲಿ ಸಾಧಿಸುವ ಕಾರ್ಯಗಳ ಬಗ್ಗೆ ಅವಲೋಕನ ಮಾಡಬೇಕು. ಭಾರತದ ಜನಸಂಖ್ಯೆಯ 40% ಭಾಗ ಯುವಕರು. ಅವರಿಂದಲೇ ದೇಶದ ಭವಿಷ್ಯ ನಿರ್ಧರಿತವಾಗಿದೆ. ನಾವುಗಳು ಉದ್ಯೋಗ ತೆಗೆದುಕೊಳ್ಳುವುದಲ್ಲದೇ ಉದ್ಯೋಗ ನೀಡುವಂತವರಾಗಿ ಉದ್ಯಮಶೀಲರಾಗಬೇಕು. ಅದಕ್ಕೆ ತಕ್ಕಂತೆ ತಯಾರಿಯನ್ನು ಮಾಡಿಕೊಳ್ಳಬೇಕು. ಜೊತೆಗೆ ಪೂರಕ ಮಾಹಿತಿ ಮತ್ತು ಕಾರ್ಯಕ್ರಮಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ ನಡೆಯಿತು. ನಿವೃತ್ತ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಅಧಿಕಾರಿ ಜೋಷಿ ಪಿ. ಪಿ. ಅವರು ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ತಾವು ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ನೆನಪುಗಳೊಂದಿಗೆ ಯುದ್ಧದ ಕುರಿತಾದ ಸಂಪೂರ್ಣ ಮಾಹಿತಿ ನೀಡಿದರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಉಪಾಧ್ಯಕ್ಷರು ಹಾಗೂ ರಸಾಯನಶಾಸ್ತ್ರ ಉಪನ್ಯಾಸಕರಾಗಿರುವ ಡಾ. ಮಂಜುನಾಥ ಗಾಣಿಗ, ಆಡಳಿತ ಮಂಡಳಿಯ ಕಾರ್ಯದರ್ಶಿ ಹಾಗೂ ಜೀವಶಾಸ್ತ್ರ ಉಪನ್ಯಾಸಕರಾಗಿರುವ ಸುನಿಲ್ ಚಿತ್ತಾಲ್, ಆಡಳಿತ ಮಂಡಳಿಯ ಕೋಶಾಧಿಕಾರಿ ಹಾಗೂ ಭೌತಶಾಸ್ತ್ರ ಉಪನ್ಯಾಸಕರಾಗಿರುವ ಕಾರ್ತೀಕೇಯ ಎಮ್. ಎಸ್., ಆಡಳಿತಾಧಿಕಾರಿಗಳು ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾಗಿರುವ ಪ್ರದೀಪ್ ಕುಮಾರ್ ಶೆಟ್ಟಿ, ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳವಾರ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರು ಸ್ವಾಗತಿಸಿ, ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿರುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವೃತ್ತಿಗೆ ಅನುಗುಣವಾಗಿ ಸಂಘಟನೆಗಳ ಸದಸ್ಯರ ವೃತ್ತಿ ಕೌಶಲ್ಯ ಹೆಚ್ಚಿಸಲು ಅಗತ್ಯ ತರಬೇತಿ ಹಾಗೂ ಮಾರ್ಗದರ್ಶನ ಅತ್ಯಗತ್ಯ. ಧ್ವನಿ – ಬೆಳಕು ವೃತ್ತಿ ನಿರತರು ಅಪಾಯದ ನಡುವೆ ಕೆಲಸ ಮಾಡಬೇಕು. ಅವರಲ್ಲಿ ವೃತ್ತಿ ಕೌಶಲ್ಯಗಳಿದ್ದರೆ ಅದರ ಬಗೆಗೆ ಮುನ್ನೆಚ್ಚರಿಕೆ ವಹಿಸಬಹುದು ಮತ್ತು ಗ್ರಾಹಕರ ನಿರೀಕ್ಷೆಯ ಮಟ್ಟದ ಸೇವೆ ನೀಡಬಹುದು ಎಂದು ರಾಜ್ಯ ವೈದ್ಯ ಸಂಘ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ. ಸುಬ್ರಹಣ್ಯ ಭಟ್ ಹೇಳಿದರು. ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಭಾನುವಾರ ಬೈಂದೂರು ವಲಯದ ಧ್ವನಿ ಮತ್ತು ಬೆಳಕು ಸಂಯೋಜಕರ ಸಂಘಟನೆಯ ದಶಮಾನೋತ್ಸವ ಸಮಾರಂಭ ಹಾಗೂ 11ನೇ ಮಹಾಸಭೆ ಉದ್ಘಾಟಿಸಿ ಮಾತನಾಡಿದರು. ಯಾವುದೇ ಕಾರ್ಯಕ್ರಮದ ಯಶಸ್ಸಿನ ಹಿಂದೆ ಈ ಸಂಘಟನೆ ಕೆಲಸ ಮಾಡುತ್ತದೆ. ಧ್ವನಿ ಇಲ್ಲದವರ ಧ್ವನಿಯಾಗುವ ಹಾಗೂ ವೇದಿಕೆಯಲ್ಲಿರುವವರ ಧ್ವನಿಯನ್ನು ಸಮಾಜಕ್ಕೆ ತಲುಪಿಸುವ ಕೆಲಸ ಮಾಡುತ್ತಿದೆ. ಹಾಗಂತ ಮೆಹಂದಿ, ಧಾರ್ಮಿಕ ಹಾಗೂ ಇತರೇ ಉತ್ಸವಗಳಲ್ಲಿ ಹೆಚ್ಚು ಧ್ವನಿ (ಡಿಜೆ ಮೂಲಕ) ಏರಿಸಿದರೂ ಕೂಡ ಇದರಿಂದ ಸಮಾಜಕ್ಕೆ ಸಮಸ್ಯೆಯಾಗುತ್ತದೆ. ಇದರಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಬೈಂದೂರು ಸೈಂಟ್ ಥಾಮಸ್ ಶಾಲೆಯ ವಿದ್ಯಾರ್ಥಿ ಸೃಜನ್ ಕುಮಾರ್ ಶೇ.93.20 ಫಲಿತಾಂಶ ಪಡೆದಿದ್ದು, ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾನೆ. ಸೃಜನ್ ಕುಮಾರ್ ಬೈಂದೂರು ಅಂಚೆ ಕಛೇರಿಯಲ್ಲಿ ಉದ್ಯೋಗಿಯಾಗಿರುವ ಸುರೇಶ್ ಕುಮಾರ್ ಹಾಗೂ ಗೀತಾ ಎಸ್. ಅವರ ಪುತ್ರನಾಗಿದ್ದಾರೆ. ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯನಾಗಿರುವ ಸೃಜನ್ ಅನೇಕ ಯಕ್ಷಗಾನ ಪ್ರದರ್ಶನ ನೀಡಿದ್ದಾನೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಮಕ್ಷತ್ರಿಯ ಸಮಾಜ ಸಣ್ಣ ಸಮುದಾಯವಾಗಿದ್ದು, ಸಮಾಜದಲ್ಲಿ ಗುರುತಿಸುವಂತೆ ಬೆಳೆದು ನಿಲ್ಲುವ ಜವಾಬ್ದಾರಿ ಯುವ ಪೀಳಿಗೆಯ ಮೇಲಿದೆ. ನಾವು ಬೆಳೆಯುತ್ತಾ ನಮ್ಮಿಂದಾದ ಸಹಕಾರವನ್ನು ಸಮಾಜಕ್ಕೆ ನೀಡುತ್ತಾ ಬದುಕುವ ಗುಣ ಮುಖ್ಯ ಎಂದು ಮಂಗಳೂರು ರಾಮಕ್ಷತ್ರಿಯ ಸೇವಾ ಸಂಘದ ಗೌರವಾಧ್ಯಕ್ಷರಾದ ಜೆ.ಕೆ. ರಾವ್ ಹೇಳಿದರು. ಇಲ್ಲಿನ ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಭಾನುವಾರ ಶ್ರೀರಾಮ ವಿವಿಧೋದ್ದೇಶ ಟ್ರಸ್ಟ್ ಬೈಂದೂರು ಇದರ 10ನೇ ವರ್ಷದ ಟ್ರಸ್ಟ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಭೂಮಿಯ ಮೇಲೆ ಬಾಡಿಗೆಗೆ ಬಂದವರು ಎಂಬ ಅರಿವಿದ್ದರೇ ಪರಸ್ಪರ ಸಹಾಯದ ಮನೋಭಾವ ನಮ್ಮದಾಗುತ್ತದೆ ಎಂದ ಅವರು ಆಧುನಿಕ ಸಮಾಜದ ಜಂಜಾಟದ ನಡುವೆ ತಂದೆ ತಾಯಿಯರನ್ನು ವೃದ್ಧಾಶ್ರಮಕ್ಕೆ ಸೇರಿಸುವ ಪ್ರವೃತ್ತಿ ಹೆಚ್ಚುತ್ತಿರುವುದು ಖೇದಕರ. ವಿದ್ಯಾವಂತರಾಗುವಂತೆ ಸಂಬಂಧಗಳನ್ನು ಗಟ್ಟಿಗೊಳಿಸುವ ಗುಣವೂ ವಿದ್ಯಾರ್ಥಿಗಳಲ್ಲಿ ಬೆಳೆಯಲಿ ಎಂದರು. ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಬಿ. ರಾಮಕೃಷ್ಣ ಶೇರೆಗಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ರಾಮಕ್ಷತ್ರಿಯ ಸಮುದಾಯದ ಅಭ್ಯುದಯಕ್ಕಾಗಿ ಒಂದು ದಶಕದ ಹಿಂದೆ…

Read More

ದೇಹದಲ್ಲಿ ಕೆಂಪು ರಕ್ತ ಕಣಗಳು ಕಡಿಮೆ ಆದಾಗ ರಕ್ತಹೀನತೆ ಸಮಸ್ಯೆ ತಲೆದೂರುತ್ತದೆ. ಹಿಮೋಗ್ಲೋಬಿನ್ ಕೊರತೆಯಿಂದಾಗಿ, ರೋಗಗಳ ವಿರುದ್ಧ ಹೋರಾಡುವ ಸಾಮರ್ಥ್ಯವು ಕಡಿಮೆಯಾಗಲು ಪ್ರಾರಂಭಿಸುತ್ತದೆ. ಇದರಿಂದಾಗಿ ಅನೇಕ ಗಂಭೀರ ಕಾಯಿಲೆಗಳು ವ್ಯಕ್ತಿಯನ್ನು ಸುತ್ತುವರಿಯಲು ಪ್ರಾರಂಭಿಸುತ್ತವೆ. ಆಗ ದೇಹದಲ್ಲಿ ಕಬ್ಬಿಣದ ಅಂಶವನ್ನು ಹೆಚ್ಚಿಸುವ ಮೂಲಕ, ವ್ಯಕ್ತಿಯ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚು ಮಾಡಬಹುದು. ದೇಹದಲ್ಲಿ ಕಬ್ಬಿಣದ ಕೊರತೆಯನ್ನು ನಿವಾರಿಸಲು ಸಹಾಯ ಮಾಡುವ ಕೆಲವು ನೈಸರ್ಗಿಕ ಮನೆಮದ್ದುಗಳನ್ನ ತಿಳಿದುಕೊಳ್ಳುವುದು ಮುಖ್ಯ. ಹಿಮೋಗ್ಲೋಬಿನ್ ಕೊರತೆಗೆ ಕಾರಣ: ಹೊಟ್ಟೆಗೆ ಸಂಬಂಧಿಸಿದ ಸೋಂಕುಗಳಿಂದ ಹಿಮೋಗ್ಲೋಬಿನ್ ಕೊರತೆ ಉಂಟಾಗುವುದು.ಆಹಾರದಲ್ಲಿ ಪೌಷ್ಠಿಕಾಂಶದ ಕೊರತೆಯಿಂದ ಅಗತ್ಯ ಪ್ರಮಾಣದ ಕಬ್ಬಿಣ ಸಿಗದೇ ಇದ್ದಾಗ, ದೇಹದಿಂದ ಅಧಿಕ ಪ್ರಮಾಣದ ರಕ್ತಸ್ರಾವ ಆದಾಗಗಂಭೀರ ಕಾಯಿಲೆಯಿಂದಾಗಿ ದೇಹದಲ್ಲಿ ರಕ್ತದ ಕೊರತೆ. ರಕ್ತದ ಕೊರತೆಯಿಂದಾಗುವ ಸಮಸ್ಯೆ?: ದೇಹ, ತಲೆ ಮತ್ತು ಎದೆಯಲ್ಲಿ ನೋವುರಕ್ತಹೀನತೆಯಿಂದ ಹೃದಯ,ಕಿಡ್ನಿ ಮತ್ತು ಪಿತ್ತಜನಕಾಂಗಕ್ಕೆ ಸಂಬಂಧಿಸಿದ ಕಾಯಿಲೆಗಳ ಉದ್ಭವಸ್ನಾಯುವಿನ ದೌರ್ಬಲ್ಯಚರ್ಮದ ಬಣ್ಣ ಬದಲಾವಣೆಗಾಯಗಳು ಬೇಗನೆ ಗುಣವಾಗುವುದಿಲ್ಲ, ಮುಟ್ಟಿನ ಅವಧಿಗಳಲ್ಲಿ ಹೆಚ್ಚು ನೋವುಕೈಕಾಲುಗಳು ತಣ್ಣಗಾಗುವುದು ಹಿಮೋಗ್ಲೋಬಿನ್ ಕೊರತೆ ಲಕ್ಷಣ: ಬೇಗ ಆಯಾಸ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕ ನೆಲ್ಯಾಡಿ ಮೂಲದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ಸಮೀಪದ ಅಂಕದಕಟ್ಟೆಯಲ್ಲಿ ನಡೆದಿದೆ. ಕಡಬ ಸಮೀಪದ ನೆಲ್ಯಾಡಿ ನಿವಾಸಿ ಆನಂದ ಗೌಡ (33) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕುಂದಾಪುರದ ಖಾಸಗಿ ಕಾಲೇಜೊಂದರ ಗಣಿತ ಉಪನ್ಯಾಸಕರಾಗಿದ್ದ ಆನಂದ ಗೌಡ ಶುಕ್ರವಾರ ರಾತ್ರಿ ಪರೀಕ್ಷೆಗೆಂದು ಪ್ರಶ್ನೆಪತ್ರಿಕೆ ಸಿದ್ಧಪಡಿಸಿಟ್ಟು ಮಲಗಿದ್ದರು. ಶನಿವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅವರ ಪತ್ನಿ ಅಡುಗೆ ಮನೆಗೆ ಬಂದು ನೋಡಿದಾಗ ಅಡುಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಎರಡು ತಿಂಗಳ ಹಿಂದೆಯಷ್ಟೇ ಹೆಬ್ರಿ ಮೂಲದ ಉಪನ್ಯಾಸಕಿಯನ್ನು ಮದುವೆಯಾಗಿ ಅಂಕದಕಟ್ಟೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಈ ಹಿಂದೆ ಮೂಡಬಿದ್ರೆಯ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ ಆನಂದ್ ಗೌಡ ಇತ್ತೀಚೆಗೆ ಅವರು ಹೊಸದಾಗಿ ಕಾರು ಖರೀದಿಸಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More