Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 855 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 7 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 324, ಕುಂದಾಪುರ, ಬೈಂದೂರು ತಾಲೂಕಿನ 380, ಕಾರ್ಕಳ, ಹೆಬ್ರಿ ತಾಲೂಕಿನ 141 ಮಂದಿಗೆ ಹಾಗೂ ಹೊರ ಜಿಲ್ಲೆಯ 10 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 855 ಪ್ರಕರಣಗಳಲ್ಲಿ 15 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 840 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 63 ವರ್ಷದ ವೃದ್ಧ, 70 ವರ್ಷದ ವೃದ್ಧ, 60 ವರ್ಷದ ವೃದ್ಧ, 45 ವರ್ಷದ ಪುರುಷ, 53 ವರ್ಷದ ಮಹಿಳೆ ಕಾರ್ಕಳದ 60 ವರ್ಷದ ವೃದ್ಧ, 60 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 1223 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5960 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2424…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದು, ಜೂನ್ 7ರ ತನಕ ಲಾಕ್‌ಡೌನ್ ಮುಂದುವರಿಯಲಿದೆ. ಕೋವಿಡ್ ಪರಿಸ್ಥಿತಿ ಮತ್ತು ಲಾಕ್ಡೌನ್ ವಿಸ್ತರಣೆ ಕುರಿತು ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಈ ನಿರ್ಧಾರ ಪ್ರಕಟಿಸಿದ್ದಾರೆ. ಲಾಕ್ಡೌನ್ನಿಂದ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದು, ಜನರ ಹಿತದೃಷ್ಟಿಯಿಂದ ಮತ್ತೆ ಲಾಕ್‌ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಜನ ಸಹಕರಿಸಬೇಕು. ಕೊರೊನಾ ನಿಯಂತ್ರಣಕ್ಕೆ ಮತ್ತೆ ಎರಡು ವಾರಗಳ ಕಾಲ ಲಾಕ್‌ಡೌನ್ ವಿಧಿಸಲಾಗುತ್ತಿದ್ದು, ಮೇ 24 ರಿಂದ ಜೂನ್ 7ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಹಿಂದಿನ ಲಾಕ್‌ಡೌನ್ ಮಾರ್ಗಸೂಚಿಗಳೇ ಮುಂದುವರಿಯುತ್ತವೆ ಎಂದು ಲಾಕ್ಡೌನ್ ಮಾರ್ಗಸೂಚಿಗಳ ಕುರಿತು ಎಂದು ಸಿಎಂ ತಿಳಿಸಿದ್ದಾರೆ. ಬೆಳಗ್ಗೆ 10 ಗಂಟೆ ನಂತರ ಸಹ ಜನ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, 9 ಗಂಟೆಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ,ಮೇ 21: ಆರೋಗ್ಯ ಪ್ರಾಧಿಕಾರಗಳು /ವಾರ್ಡ್ ಕಾರ್ಯಪಡೆ / ಗ್ರಾಮ ಕಾರ್ಯಪಡೆಯ ಅಭಿಪ್ರಾಯದಂತೆ ಮನೆಯ ಪ್ರತ್ಯೇಕತೆಗೆ ಅಗತ್ಯವಾದ ಸೌಲಭ್ಯಗಳನ್ನು ಮನೆಗಳಲ್ಲಿ ಹೊಂದಿರದ ಕೋವಿಡ್-19 ರೋಗಿಗಳು ಸಾಂಸ್ಥಿಕ ಪ್ರತ್ಯೇಕತೆಗೆ (ಕೋವಿಡ್ ಕೇರ್ ಸೆಂಟರ್) ಕಡ್ಡಾಯವಾಗಿ ಸ್ಥಳಾಂತರಗೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಸರಕಾರವು ಕೋವಿಡ್ -19 ಪಾಸಿಟಿವ್ ರೋಗಿಗಳನ್ನು ಪರೀಕ್ಷಿಸಲು, ವೈದ್ಯಕೀಯ ನೆರವಿನ ಅಗತ್ಯತೆಯನ್ನು ಪರಿಶೀಲಿಸಿ, ಅಸ್ಪತ್ರೆಗೆ ದಾಖಲಿಸುವುದು ಅವಶ್ಯಕವೆಂದೆನಿಸಿದಲ್ಲಿ ಮಾತ್ರವೇ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್’ಗಳ ಅಧಾರದ ಮೇಲೆ, ಆಸ್ಪತ್ರೆಗಳಲ್ಲಿ ದಾಖಲಿಸುವಂತೆ ಹಾಗೂ ಉಳಿದ ಪ್ರಕರಣಗಳಲ್ಲಿ ರೋಗಿಯ ಮನೆಯಲ್ಲಿಯೇ ಲಭ್ಯವಿರುವ ಸೌಲಭ್ಯಗಳ ಆಧಾರದ ಮೇಲೆ ಹೋಮ್ ಐಸೋಲೆಶನ್ (ಮನೆ ಪ್ರತ್ಯೇಕತೆ) ಅಥವಾ ಸಾಂಸ್ಥಿಕ ಪ್ರತ್ಯೇಕತೆಯನ್ನು ನೀಡುವುದು ಸೂಕ್ತವೆಂದು ಸೂಚಿಸಿದೆ. ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಉಡುಪಿಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗುತ್ತಿದ್ದು, ಈ ಮಧ್ಯೆ ಮನೆಯಲ್ಲಿ ಅಗತ್ಯವಾದ ಸೌಲಭ್ಯಗಳಿಲ್ಲದಿದ್ದರೂ ಇನ್ಸಿಟ್ಯೂಷನಲ್ ಐಸೋಲೇಶನ್ (ಸಾಂಸ್ಥಿಕ ಪ್ರತ್ಯೇಕತೆ) ಮಾಡಿಸಿಕೊಳ್ಳಲು ನಿರಾಕರಿಸುತ್ತಿರುವ ಬಗ್ಗೆ, ರೋಗಿಗಳಿಂದ ಪ್ರತಿರೋಧವ ಎದುರಾಗುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ. ರೋಗಿಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕೋವಿಡ್ ಪಾಸಿಟಿವಿಟಿ ರೇಟ್ ಹೆಚ್ಚಾಗಿದ್ದು, ಜನರು ಕೋವಿಡ್ ನಿರ್ಲಕ್ಷಿಸಿ ಊರೆಲ್ಲಾ ಸುತ್ತಾಡುತ್ತಿದ್ದಾರೆ. ಕರೋನಾ ಸೋಂಕಿತರು ಮತ್ತು ಪ್ರಾಥಮಿಕ ಸಂಪರ್ಕಿಕರು ಹೊರಗಡೆ ತಿರುಗುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದೆ. ಕರೋನಾ ಇನ್ನೂ ಹೆಚ್ಚು ಹರಡದಂತೆ ತಡೆಯುವ ಉದ್ದೇಶದಿಂದ ಕರೋನಾ ಕೇಸ್‌ಗಳು ಹೆಚ್ಚಾಗಿರುವ ಪರಿಸರದಲ್ಲಿನ ಜನರ ಕೋವಿಡ್ ಪರೀಕ್ಷೆ ಮಾಡಲಾಗುವುದು. ಕೋವಿಡ್ ಲಕ್ಷಣ ಇದ್ದವರು ಕೂಡಲೇ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗಿರೀಶ ಕುಲಕರ್ಣಿ ಹೇಳಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ಜರಗಿದ ಗಂಗೊಳ್ಳಿ ಗ್ರಾಮ ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಸೋಂಕಿತರು ಹಾಗೂ ಪ್ರಾಥಮಿಕ ಸಂಪರ್ಕಿತರು ಹೊರಗಡೆ ತಿರುಗಾಡಿದರೆ ಪ್ರಕರಣ ದಾಖಲಿಸಲಾಗುವುದು. ಗಂಗೊಳ್ಳಿಯಲ್ಲಿ ಬೆಳಗಿನ ಸಮಯದಲ್ಲಿ ಜನರ ಹಾಗೂ ವಾಹನ ಸಂಚಾರಕ್ಕೆ ಕಡಿವಾಣ ಹಾಕಲು ಪೊಲೀಸ್ ಗಸ್ತು ಹೆಚ್ಚಿಸಬೇಕು. ಅಂಗಡಿ, ಮೀನು ಮಾರುಕಟ್ಟೆ ಮುಂತಾದೆಡೆ ಜನರು ಗುಂಪು ಸೇರದಂತೆ ಅಗತ್ಯ ಕ್ರಮಕೈಗೊಳ್ಳಬೇಕು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ಸಾಯಿ ಮಹಿಳಾ ಆರ್ಥಿಕ ಸರಕಾರಿ ಸಂಘ ಮುಳ್ಳಿಕಟ್ಟೆ ಹೊಸಾಡು ಇವರಿಂದ ಕರೋನಾ ರೋಗ ಹರಡುವಿಕೆ ತಡೆಗಟ್ಟುವ ನೆಲೆಯಲ್ಲಿ ಲಾಕ್‌ಡೌನ್ ಘೋಷಣೆಯಾದ ಸಮಯದಿಂದ ತನ್ನ ಸದಸ್ಯರಿಗೆ ಬ್ಯಾಂಕಿಂಗ್ ಸೇವೆಯನ್ನು ಮನೆ ಬಾಗಿಲಿಗೆ ನೀಡುತ್ತಿದೆ. ಸದಸ್ಯರು ಕರೆಮಾಡಿ ತಿಳಿಸಿದಾಗ ಅವರ ಮನೆಗೆ ಸಂಸ್ಥೆಯ ಸಿಬ್ಬಂದಿಗಳು ಭೇಟಿ ನೀಡಿ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿದ್ದಾರೆ. ಮತ್ತು ಇದೇ ಸಂದರ್ಭದಲ್ಲಿ ಸದಸ್ಯರಿಗೆ ಸಾಮಾಜಿಕ ಅಂತರ, ಪರಿಸರ ಸ್ವಚ್ಚತೆ, ಆದಷ್ಟು ಅನಗತ್ಯ ಸಂಚಾರ ಮಾಡದೇ ಇರುವ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಂಸ್ಥೆಯ ಸಿಬ್ಬಂದಿಗಳಾದ ಮುಖ್ಯಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ಬಿಲ್ಲವ, ರೇಖಾ, ಪ್ರತಿಭಾ, ಗಿರೀಶ್, ಮಂಜುನಾಥ್ ಈ ಸೇವೆ ಸಲ್ಲಿಸುತ್ತಿದ್ದಾರೆ. ಸಂಸ್ಥೆಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳ ಈ ಕಾರ್ಯವೈಖರಿಯು ಅಂತ್ಯಂತ ಸಮಯೋಚಿತ ಮತ್ತು ಉಪಯುಕ್ತವಾಗಿದ್ದು ಎಂದು ಸದಸ್ಯರೆಲ್ಲರೂ ಶ್ಲಾಘಿಸುತ್ತಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಲಾಕ್‌ಡೌನ್ ಕಾರಣದಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ವಿವಿಧ ದುಡಿಯುವ ವರ್ಗಗಳಿಗೆ ಮುಖ್ಯ ಮಂತ್ರಿಗಳು ನೆರವಿನ ಪ್ಯಾಕೇಜ್ ಘೋಷಿಸಿದ್ದಾರೆ. ಈ ವೇಳೆ ದುಡಿಮೆ ಕಳೆದುಕೊಂಡು, ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಅಸಂಘಟಿತ ವಲಯಕ್ಕೆ ಸೇರಿರುವ ಕರಾವಳಿ ಮೀನುಗಾರರಿಗೂ ನೆರವು ನೀಡಬೇಕು ಎಂದು ಬೈಂದೂರು ಬ್ಲಾಕ್ ಕಾಂಗ್ರೆಸ್ ಮೀನುಗಾರಿಕಾ ಘಟಕದ ಅಧ್ಯಕ್ಷ ನಾಗೇಶ ಖಾರ್ವಿ ಅಳ್ವೆಕೋಡಿ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ. ಲಾಕ್‌ಡೌನ್‌ನಿಂದ ಮೀನುಗಾರರು ದುಡಿಮೆ ಕಳೆದುಕೊಂಡಿದ್ದಾರೆ. ಅದಕ್ಕಿಂತ ಹಿಂದಿನ ನಾಲ್ಕು ತಿಂಗಳ ಕಾಲ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುವ ಮೀನುಗಾರರು ಮತ್ಸ್ಯಕ್ಷಾಮದಿಂದ ಕಂಗೆಟ್ಟಿದ್ದಾರೆ. ಈಚಿಗಿನ ತೌಕ್ತೆ ಚಂಡಮಾರುತದಿಂದ ಮೀನುಗಾರಿಕಾ ಸಲಕರಣೆಗಳಿಗೂ ಹಾನಿಯಾಗಿದೆ. ಅವರ ವಸತಿ ಪ್ರದೇಶಗಳು ಕಡಲ್ಕೊರೆತದಿಂದ ನಲುಗಿವೆ. ಮೀನುಗಾರಿಕೆಯನ್ನೇ ಅವಲಂಬಿಸಿರುವ ಅವರಿಗೆ ಇವೆಲ್ಲದರಿಂದ ದೊಡ್ಡ ಹೊಡೆತ ಬಿದ್ದಿದೆ. ದೋಣಿ, ಬಲೆ, ಎಂಜಿನ್, ಇತರ ಸಲಕರಣೆಗಳನ್ನು ಖರೀದಿಸಲು ಬ್ಯಾಂಕ್ ಸಾಲ ಪಡೆದವರು ಸಾಲ ಮರುಪಾವತಿ ಮಾಡಲಾರದೆ ಬಡ್ಡಿಯ ಹೊರೆ ಹೊರುವಂತಾಗಿದೆ. ಕೃಷಿಕರಂತೆ ಮೀನುಗಾರರು ಜನರಿಗೆ ಆಹಾರ ಪೂರೈಸುತ್ತಾರೆ. ಅವರ ಸಂಕಷ್ಟ ಕಾಲದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಲಾಕ್‌ಡೌನ್ ಹಾಗೂ ಅಕಾಲಿಕ ಮಳೆಯಿಂದಾಗಿ ಕಲ್ಲಂಗಡಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಸಾಲ ಮಾಡಿ ಬೆಳೆದ ಬೆಳೆಯನ್ನು ಮಾರಾಟ ಮಾಡಲು ಸಾಧ್ಯವಾಗದೇ ಕಲ್ಲಂಗಡಿ ಹಣ್ಣು ಕೊಳೆತು ಹೋಗಿ ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಶಿರೂರಿನಿಂದ ಹೆಮ್ಮಾಡಿಯ ತನಕ ಸುಮಾರು 150 ಹೆಕ್ಟೇರ್‌ಗೂ ಅಧಿಕ ಕೃಷಿ ಭೂಮಿಯಲ್ಲಿ ಎರಡನೇ ಬೆಳೆಯಾಗಿ ಕಲ್ಲಂಗಡಿ ಬೆಳೆಯುತ್ತಿದ್ದಾರೆ. ಕಿರಿಮಂಜೇಶ್ವರ, ಹೇರೂರು ಕಂಬದಕೋಣೆ ಗ್ರಾಮದಲ್ಲಿ ಬಹುತೇಕ ಕೃಷಿಕರು ಎರಡನೇಯ ಬೆಳೆಯಾಗಿ ಕಲ್ಲಂಗಡಿ ಬೆಳೆಯುತ್ತಿದ್ದಾರೆ. ಈ ಭಾರಿ ಕಟಾವಿನ ಸಂದರ್ಭದಲ್ಲಿಯೇ ಲಾಕ್‌ಡೌನ್ ಘೋಷಣೆಯಾದ್ದರಿಂದ ಕಲ್ಲಂಗಡಿಗೆ ಮಾರುಕಟ್ಟೆ ಸಮಸ್ಯೆ ಎದುರಾಗಿದೆ. ಹೊರ ರಾಜ್ಯ ವಹಿವಾಟಿಗೆ ಹೊಡೆತ ಬಿದ್ದಿರುವುದರಿಂದ ಎಲ್ಲಾ ಬೆಳೆಯನ್ನು ಸ್ಥಳೀಯವಾಗಿ ಮಾರಾಟ ಮಾಡಬೇಕಿದೆ. ಆದರೆ ಲಾಕ್‌ಡೌನ್‌ನಿಂದಾಗಿ ಹೋಟೆಲ್ ಹಾಗೂ ಜ್ಯೂಸ್ ಅಂಗಡಿಗಳಿಗೆ ಬೀಗ ಬಿದ್ದಿರುವುದರಿಂದ ಕಲ್ಲಂಗಡಿ ಬೆಳೆ ಕೇಳುವವರಿಲ್ಲದಂತಾಗಿದೆ. ಪರಿಣಾಮ ದರ ಕುಸಿದಿದೆ. ಸ್ಥಳೀಯ ಪ್ರಮುಖ ವಾಣಿಜ್ಯ ಬೆಳೆಗಳಲ್ಲೊಂದಾದ ಕಲ್ಲಂಗಡಿಗೆ ಮಾರುಕಟ್ಟೆ ಸಮಸ್ಯೆಯಿಂದಾಗಿ ರೈತರಿಗೆ ಸೂಕ್ತ ಬೆಲೆ ಸಿಗದೇ ಮಧ್ಯವರ್ತಿಗಳ ಪಾಲಾಗುತ್ತಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರ್ಕಾರ ಜನರಿಗೆ ಆರೋಗ್ಯ ಸೇವೆ ಒದಗಿಸಲು ಗಣನೀಯ ಪ್ರಮಾಣದ ವೆಚ್ಚ ಮಾಡುತ್ತಿದೆ. ಆದರೆ ಅದಕ್ಕೆ ಬೇಕಾಗಿರುವ ಎಲ್ಲ ಅಗತ್ಯಗಳನ್ನು ಪೂರೈಸಲು ಸರ್ಕಾರಕ್ಕೆ ಸಾಧ್ಯವಾಗುವುದಿಲ್ಲ. ಈ ನಿಟ್ಟಿನಲ್ಲಿ ಸಾರ್ವಜನಿಕರು ಮತ್ತು ಸಂಘಟನೆಗಳು ಮುಂದೆ ಬಂದರೆ ಆರೋಗ್ಯ ಸೇವೆಯನ್ನು ಇನ್ನಷ್ಟು ವಿಸ್ತರಿಸಲು ಸಾಧ್ಯವಾಗುತ್ತದೆ ಎಂದು ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ ಹೇಳಿದರು. ಮರವಂತೆ-ನಾವುಂದ ವ್ಯಾಪ್ತಿಯ ‘ನಮ್ಮ ಗ್ರಾಮ ನಮ್ಮ ಆರೋಗ್ಯ’ ತಂಡ ಗುರುವಾರ ಕೇಂದ್ರಕ್ಕೆ ಒದಗಿಸಿದ 30 ಪಲ್ಸ್ ಒಕ್ಸಿಮೀಟರ್ ಮತ್ತು ಒಂದು ನೆಬ್ಯುಲೈಸರ್ ಸ್ವೀಕರಿಸಿ ಅವರು ಮಾತನಾಡಿದರು. ತಂಡದ ಸದಸ್ಯ ವೆಂಕಟೇಶ ನಾವುಂದ ಮಾತನಾಡಿ ಎರಡು ಗ್ರಾಮದ ಸಮಾನ ಮನಸ್ಕರು ಇಲ್ಲಿನ ಆರೋಗ್ಯ ಕುರಿತಾದ ಕಾಳಜಿಯಿಂದ ತಂಡ ರೂಪಿಸಿಕೊಂಡಿದ್ದಾರೆ. ತಂಡದಲ್ಲಿ ದೇಶ ಮತ್ತು ವಿದೇಶದಲ್ಲಿ ಇರುವ ಊರಿನ ಯುವಕರು ಇದ್ದಾರೆ. ಅದು ಇಲ್ಲಿನ ಕೊರತೆ ನೀಗಲು, ಜನರಲ್ಲಿ ಆರೋಗ್ಯ ರಕ್ಷಣೆಯೆಡೆಗೆ ಅರಿವು ಮೂಡಿಸಲು ಆರೋಗ್ಯ ಕೇಂದ್ರ ಕೇಂದ್ರಿತವಾಗಿ ಕೆಲಸ ಮಾಡಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಳವಾಗುತ್ತಿದ್ದು, ಕೋವಿಡ್ ಸೋಂಕಿತರುಕೊನೆಯಕ್ಷಣದಲ್ಲಿಆಸ್ಪತ್ರೆಗೆದಾಖಲಾಗುತ್ತಿದ್ದಾರೆ. ಸಾರ್ವಜನಿಕರು ಪ್ರಾರಂಭದಲ್ಲಿ ಸ್ಥಳೀಯ ಕ್ಲಿನಿಕ್/ಡಾಕ್ಟರ್ ಹತ್ತಿರ ಹೋಗಿ ಕೋವಿಡ್ ಸೋಂಕಿನ ಲಕ್ಷಣವಾದಜ್ವರ, ಶೀತ,ಕೆಮ್ಮು, ಮುಂತಾದವುಗಳಿಗೆ ಮದ್ದನ್ನು ವೈದ್ಯರಿಂದ ಪಡೆಯುತ್ತಿದ್ದು, ನಂತರ ರೋಗ ಉಲ್ಬಣಗೊಂಡು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಅಲ್ಲದೆ ಕೆಲವು ರೋಗಿಗಳು ತುಂಬಾ ಉಲ್ಬಣಗೊಂಡ ನಂತರ ದಾಖಲಾಗುವುದರಿಂದ ಮರಣ ಹೊಂದುತ್ತಿದ್ದಾರೆ. ಕೋವಿಡ್ರೋಗ ಲಕ್ಷಣವಾದ ಕೆಮ್ಮು, ಜ್ವರ, ಮೈ ಕೈ ನೋವು ಮುಂತಾದವುಗಳು ಕಂಡು ಬಂದತಕ್ಷಣ ಪರೀಕ್ಷೆ ಮಾಡಿಸಿಕೊಳ್ಳುವುದು ಅತೀಅವಶ್ಯಕವಾಗಿದ್ದು, ಕೋವಿಡ್ ದೃಡಪಟ್ಟಲ್ಲಿ ಅದಕ್ಕೆ ಚಿಕಿತ್ಸೆ ನೀಡಿ ಗುಣಮುಖರನ್ನಾಗಿ ಮಾಡುವುದು ಸಾಧ್ಯವಾಗುತ್ತದೆ. ಆದರೆ ಪ್ರಾರಂಭದಲ್ಲಿ ಸ್ಥಳೀಯ ವೈದ್ಯರಿಂದ ತಾತ್ಕಾಲಿಕ ಉಪಶಮನ ಪಡೆಯುವುದರಿಂದ ತಾತ್ಕಾಲಿಕವಾಗಿ ಪರಿಹಾರ ಸಿಕ್ಕಿದರೂ, ದಿನ ಕಳೆದಂತೆ ರೋಗ ಲಕ್ಷಣಗಳು ಉಲ್ಬಣಗೊಂಡು ಕೊನೆಯ ಹಂತದಲ್ಲಿ ಆಸ್ಪತ್ರೆಗೆ ದಾಖಲಾಗಲು ತಡವಾಗಿರುತ್ತದೆ. ರೋಗಿಗಳಲ್ಲಿ ಕೋರೋನಾ ಸೋಂಕು ಲಕ್ಷಣಕಂಡು ಬಂದಲ್ಲಿ ವೈದ್ಯರು ತಾತ್ಕಾಲಿಕ ಉಪಶಮನ ಚಿಕಿತ್ಸೆ ನೀಡದೆ, ನೇರವಾಗಿ ಕೊರೋನಾ ಸೋಂಕಿನ ಬಗ್ಗೆ ಪರೀಕ್ಷೆ ಮಾಡಿ ವರದಿ ಪಡೆಯಲು ಕಡ್ಡಾಯವಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್ ಪಾಸಿಟಿವ್ ಆಗಿ, ಹೋಂ ಐಸೋಲೇಷನ್ನಲ್ಲಿರುವವರು, ಅನಗತ್ಯವಾಗಿ ಮನೆಯಿಂದ ಹೊರಬಂದು , ಸಾರ್ವಜನಿಕವಾಗಿ ಸ್ಥಳಗಳಲ್ಲಿ ತಿರುಗಾಡಿ, ಆರೋಗ್ಯವಂತರಿಗೆ ಕೋವಿಡ್ ಸೋಂಕು ಹರಡುವುದನ್ನು ತಪ್ಪಿಸುವ ಉದ್ದೇಶದಿಂದ, ಹೋಂ ಐಸೋಲೇಷನ್ ನಲ್ಲಿರುವವರನ್ನು ಗುರುತಿಸಲು ಸಾಧ್ಯವಾಗುವಂತೆ, ಅವರ ಕೈಗೆ ಸೀಲ್ ಹಾಕುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ. ರೇಜು ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಆಗಿ , ಹೋಂ ಐಸೋಲೇಶನ್ ನಲ್ಲಿರುವ ವ್ಯಕ್ತಿಗಳು , ಐಸೋಲೇಷನ್ ನಿಯಮಗಳನ್ನು ಉಲ್ಲಂಘಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಅನಗತ್ಯವಾಗಿ ತಿರುಗಾಡುತ್ತಿರುವ ಕುರಿತು ದೂರುಗಳು ಬರುತ್ತಿರುವ ಕುರಿತು ಜಿಲ್ಲಾಧಿಕಾರಿ ಜಿ.ಜಗದೀಶ್ ಉಸ್ತುವಾರಿ ಕಾರ್ಯದರ್ಶಿಗಳ ಗಮನಕ್ಕ ತಂದರು, ಈ ಕುರಿತಂತೆ ಪ್ರತಿಕ್ರಿಯಿಸಿದ ಡಾ. ಎಂ.ಟಿ.ರೇಜು ಸೋಂಕಿತರ ಕೈಗಳಿಗೆ ಸೀಲ್ ಹಾಕುವ ಮೂಲಕ, ಅವರು ಮನೆಯಿಂದ ಹೊರಬರದಂತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡದಂತೆ ಅಗತ್ಯ ಕ್ರಮ ಕೈಗೊಳ್ಳಿ…

Read More