ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಉದ್ಯೋಗದೊಂದಿಗೆ ಮನೆಯ ಕೆಲಸದಲ್ಲಿಯೂ ತೊಡಗಿಸಿಕೊಂಡ ಮಹಿಳೆ ಒತ್ತಡದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಟೀಕೆಗಳಿಗೆ ಗಮನ ಕೊಡದೇ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು, ಹಿಂಜರಿಕೆ ಕಾಣದೇ, ತಾಳ್ಮೆ, ಸಹನೆಯಿಂದ ಮುನ್ನುಗ್ಗುವಂತ ಮನೋಭಾವನೆ ಬೆಳೆಸಿಕೊಳ್ಳಬೇಕು. ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸ್ವಾವಲಂಬನೆಯತ್ತಾ ಮಹಿಳೆಯರು ದಿಟ್ಟ ಹೆಜ್ಜೆಯನ್ನಿಡಬೇಕು, ಮಹಿಳೆಯರಿಗೂ ಜ್ಞಾನ ಪೀಠ ಪ್ರಶಸ್ತಿ ದೊರಕಬೇಕು ಎಂದು ಶಿಕ್ಷಕಿ ಹಾಗೂ ಸಾಹಿತಿ ಸುಮಿತ್ರ ಐತಾಳ್ ಹೇಳಿದರು. ಅವರು ಕೋಟ ಡಾ.ಕಾರಂತ ಥೀಂ ಪಾರ್ಕ್ನಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್, ಡಾ.ಶಿವರಾಮ ಕಾರಂತ ಟ್ರಸ್ಟ್,(ರಿ) ಉಡುಪಿ, ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಟಾನದ (ರಿ)ಕೋಟ ಸಹಯೋಗದಲ್ಲಿ ನಡೆದ ಉಡುಪಿ ಜಿಲ್ಲಾ ಮಹಿಳಾ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನ, ಮಣೂರು ಅಶ್ವಿನಿ ಮಧ್ಯಸ್ಥ ಸ್ಮಾರಕ ಸಾಧನಾ ಶ್ರೀ ಮಹಿಳಾ ಪುರಸ್ಕಾರ ಪ್ರದಾನ ಸಮಾರಂಭ ಭಾವಗಾನ-2021(ಸಾಧನೆಯ ತಿಲ್ಲಾನ) ಕಾರ್ಯಕ್ರಮದ ಸಮ್ಮೇಳನಾಧ್ಯಕ್ಷೆ ನೆಲೆಯಲ್ಲಿ ಮಾತನಾಡಿದರು. ಹೆಣ್ಣಿನ ನೋವು ಸಾಹಿತ್ಯದಲ್ಲಿ ಅನಾವರಣಚಲನಶೀಲತೆ ಜೀವಂತಿಕೆ ಗುಣ, ನಿಸರ್ಗದ ಹೊಂದಾಣಿಕೆಯಂತೆ ಕಾಲ ಉರುಳುತ್ತದೆ. ಅದಕ್ಕೆ ತಡೆಯಂಬುದಿಲ್ಲ ಅಂತಹ ಪ್ರಭಾವ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತಾಲೂಕು, ಕೊಲ್ಲೂರು ವಲಯದ ಮೆಕ್ಕೆ ಒಕ್ಕೂಟದಲ್ಲಿ ನೂತನವಾಗಿ ನಾಲ್ಕು ಹೊಸ ತಂಡಗಳ ಉದ್ಘಾಟನಾ ಕಾರ್ಯಕ್ರಮಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೆಕ್ಕೆ ಒಕ್ಕೂಟ ಅಧ್ಯಕ್ಷರಾದ ಎಂ.ಜೆ. ಬೇಬಿ ವಹಿಸಿದ್ದರು. ಕೊಲ್ಲೂರು ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಮಹಾಬಲ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ವಲಯ ಮೇಲ್ವಿಚಾರಕ ರಾಮ್ ಎನ್. ನಾಲ್ಕು ಹೊಸ ತಂಡದ ಸದಸ್ಯರಿಗೆ ದಾಖಲಾತಿ ಹಸ್ತಾಂತರಿಸಿ ತಂಡದ ಸಭಾ ನಡವಳಿಕೆ ಮತ್ತು ಜವಾಬ್ದಾರಿಗಳನ್ನು ತಿಳಿಸಿದರು. ಯೋಜನೆಯ ನಿಕಟವರ್ತಿ ದಿನೇಶ್ ಶಾಸ್ತ್ರೀ, ರಾಜು ನಾಯ್ಕ ಮೇಲ್ ಕೆಂಜಿ, ಒಕ್ಕೂಟದ ಉಪಾಧ್ಯಕ್ಷ ಸೂಲ್ಯ ಪೂಜಾರಿ, ಕಾರ್ಯದರ್ಶಿ ವಿದ್ಯಾ, ಜೊತೆ ಕಾರ್ಯದರ್ಶಿ ಶ್ಯಾಮಲಾ, ಕೋಶಾಧಿಕಾರಿ ಮಂಜುನಾಥ್ ನಾಯ್ಕ ಉಪಸ್ಥಿತರಿದ್ದರು. ಕೊಳಲು ತಂಡದ ಸದಸ್ಯ ಸತೀಶ್ ನಾಯ್ಕ ಅನಿಸಿಕೆ ವ್ಯಕ್ತಪಡಿಸಿದರು. ನೂತನ ನಾಲ್ಕು ತಂಡದ ಸದಸ್ಯರ ಕುಟುಂಬದವರು ಹಿರಿಯ ತಂಡಗಳ ಸದಸ್ಯರು ಹಾಜರಿದ್ದರು. ತಂಡ ಉದ್ಘಾಟನಾ ಸವಿನೆನಪಿಗಾಗಿ ನಾಲ್ಕು ತಂಡಕ್ಕೆ ಗಿಡಗಳನ್ನು ನೀಡಲಾಯಿತು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾವು ನಿರ್ವಹಿಸುವ ಕಾರ್ಯದಲ್ಲಿ ಪ್ರಾಮಾಣಿಕ ಪ್ರಯತ್ನವಿದ್ದರೆ ಬದುಕು ಯಶಸ್ಸಿನತ್ತ ಸಾಗುತ್ತದೆ ಎಂದು ಎಳಜಿತ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ಹೇಳಿದರು. ಬೈಂದೂರು ರೋಟರಿ ಭವನದಲ್ಲಿ ಭಾನುವಾರ ‘ಕುಂದಾಪ್ರ ಡಾಟ್ ಕಾಂ’ ಸುದ್ದಿತಾಣದ ದಶಮಾನೋತ್ಸವ ಅಂಗವಾಗಿ ಸುರಭಿ ರಿ. ಬೈಂದೂರು ಹಾಗೂ ರೋಟರಿ ಕ್ಲಬ್ ಸಹಯೋಗದೊಂದಿಗೆ ಆಯೋಜಿಸಲಾದ ಯಕ್ಷೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬರೂ ಬದುಕಿನಲ್ಲಿ ಕ್ರೀಯಾಶೀಲತೆಯನ್ನು ಕಾಯ್ದುಕೊಳ್ಳುವುದು ಮುಖ್ಯ. ಪತ್ರಿಕಾರಂಗದ ಸವಾಲುಗಳ ನಡುವೆ ಸಂಸ್ಥೆ ದಶಮಾನೋತ್ಸವ ಆಚರಿಸುತ್ತಿರುವುದು ಸಂತಸದ ವಿಚಾರವಾಗಿದೆ ಎಂದು ಶುಭಹಾರೈಸಿದರು. ಕಾರ್ಯಕ್ರಮಕ್ಕೆ ಚಂಡೆ ಭಾರಿಸಿ ಚಾಲನೆ ನೀಡಿದ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಮಾತನಾಡಿ ಇಂದಿನ ಬಹುಪಾಲು ಮಾಧ್ಯಮಗಳಲ್ಲಿ ವರದಿ ಪ್ರಕಟಿಸುವುದಕ್ಕಿಂತ ಹೆಚ್ಚಾಗಿ ಅಭಿಪ್ರಾಯಗಳ ಹೇರಿಕೆಯಾಗುತ್ತಿದೆ. ಓದುಗರಾಗಿ ನಾವು ಮಾಧ್ಯಮದಿಂದ ವಸ್ತುನಿಷ್ಠ ವರದಿಯನ್ನಷ್ಟೇ ನಿರೀಕ್ಷಿಸುತ್ತೇವೆ. ಓದಿದ ಬಳಿಕ ಅಭಿಪ್ರಾಯ ರೂಪಿಸಿಕೊಳ್ಳುವ ಸ್ವಾತಂತ್ರ್ಯ ಓದುಗರಿಗೆ ಬಿಡುವುದು ಒಳ್ಳೆಯದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿಮ್ಮನ್ನು ನೀವು ನಂಬಿ, ನಿಮ್ಮ ಸಾಮರ್ಥ್ಯವನ್ನು ನಂಬಿ, ಅದು ನಿಮ್ಮನ್ನು ಯಶಸ್ಸಿನತ್ತ ಸಾಗಿಸುತ್ತದೆ. ನಿಮ್ಮಿಂದ ಅಸಾಧ್ಯ ಎಂಬುದು ಯಾವುದು ಇಲ್ಲ. ಸಂಪರ್ಕವನ್ನು ಬೆಳೆಸಿ, ಸಾಮರ್ಥ್ಯವನ್ನು ಬಳಸಿಕೊಂಡು ಬದುಕನ್ನು ಕಟ್ಟಿಕೊಳ್ಳಿ. ಹಾಗೆ ಸಹಾಯ ಪಡೆದ ಸಂಸ್ಥೆಯನ್ನು ಸ್ಮರಿಸಿ ಎಂದು ಯುನಿವರ್ಸಲ್ ಗ್ರೂಫ್ ಆಫ್ ಇನ್ಸ್ಟಿಟ್ಯೂಷನ್ನ ಅಧ್ಯಕ್ಷರಾದ ಆರ್. ಉಪೇಂದ್ರ ಶೆಟ್ಟಿ ಹೇಳಿದರು. ಅವರು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು, ಬೈಂದೂರು ಶಾಸಕರಾದ ಬಿ.ಎಮ್. ಸುಕುಮಾರ ಶೆಟ್ಟಿ, ಬದುಕನ್ನು ಕಟ್ಟಿಕೊಳ್ಳುವಲ್ಲಿ ವಿದ್ಯೆಯ ಜೊತೆಜೊತೆಗೆ, ಸಮಾಜದ ಶಿಕ್ಷಣದ ಮಹತ್ವವನ್ನು ತಮ್ಮ ಅನುಭವದೊಂದಿಗೆ ಹಂಚಿಕೊಂಡರು. ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡೆ, ಹೀಗೆ ಸರ್ವಾಂಗೀಣ ಸಾಧನೆಗೆ ಕೊಡಮಾಡುವ ಬಿಎಂಎಸ್ ಗೋಲ್ಡ್ ಮೆಡಲ್ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಕೊಡಮಾಡುವ ಐಕ್ಯೂಎಸಿ ಗೋಲ್ಡ್ ಮೆಡಲ್ ಸೇರಿದಂತೆ ವಿವಿಧ ಪ್ರತಿಭಾವಂತರನ್ನು ಪುರಸ್ಕರಿಸಲಾಯಿತು. ಈ ಸಂದರ್ಭ ಡಾ. ಸಂಪತ್ ಕುಮಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೊಸಾಡು ಗ್ರಾಮದ ಅರಾಟೆ ಜನರ ದೂರ ದೃಷ್ಟಿಯ ಆಲೋಚನೆಯಿಂದ ನಿರ್ಮಾಣಗೊಂಡ ನೂತನ ಬಸ್ ತಂಗುದಾಣಕ್ಕೆ ವಾಜಪೇಯಿ ಅವರ ಹೆಸರನ್ನು ಇಡುವುದರ ಮೂಲಕ ವಿಶೇಷವಾದ ಗೌರವವನ್ನು ಗ್ರಾಮದ ಜನರು ಅವರಿಗೆ ಸಲ್ಲಿಸಿದ್ದಾರೆ. ಇಲ್ಲಿನ ಜನರ ಬಹು ಮುಖ್ಯ ಬೇಡಿಕೆಗಳೊಂದಾದ ಬಸ್ ತಂಗುದಾಣವು ಹೋರಾಟದ ಫಲದಿಂದ ನಿರ್ಮಾಣಗೊಂಡಿದೆ. ಹೊಸಾಡು ಗ್ರಾಮದ ಅಭಿವೃದ್ಧಿಗೆ ಇನ್ನಷ್ಟು ಶ್ರಮಿಸಲಾಗುವುದು ಎಂದು ಬೈಂದೂರು ಕ್ಷೇತ್ರದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಸುಮಾರು 3 ಲಕ್ಷ ರೂ. ವೆಚ್ಚದಲ್ಲಿ ಹೊಸಾಡು ಗ್ರಾಮದ ಅರಾಟೆಯಲ್ಲಿ ರಾ.ಹೆ.66ರ ಸಮೀಪ ನಿರ್ಮಾಣಗೊಂಡ ಸುಸಜ್ಜಿತವಾದ ನೂತನ ಬಸ್ ತಂಗುದಾಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿ ಗ್ರಾಮ ಪಂಚಾಯತಿಗೂ 20ರಿಂದ 25ಮನೆಗಳು ನೀಡುವ ವ್ಯವಸ್ಥೆ ಮಾಡಲಾಗುವುದು. ಈ ಸಂಬಂಧ ಗ್ರಾಮ ಪಂಚಾಯತಿಗಳೊಂದಿಗೆ ವಿಶೇಷ ಸಭೆ ಕರೆಯಲಾಗಿದೆ. 94ಸಿ,95ಸಿಸಿ,53ಮತ್ತು 57 ರ ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಬಿಜೆಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಚೆಸ್ ಅಸೋಸಿಯೇಷನ್ನ ಗೌರವ ಅಧ್ಯಕ್ಷರಾಗಿ ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ನ ಅಧ್ಯಕ್ಷರಾದ ಡಾ.ರಾಜ್ ಗೋಪಾಲ್ ಶೆಣೈ ಅವರು ಆಯ್ಕೆಯಾಗಿದ್ದಾರೆ. ಅವರು ಜಿಲ್ಲೆಯಲ್ಲಿ ಸುಮಾರು ಹತ್ತು ವರ್ಷದಿಂದ ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದ ಚೆಸ್ ಸ್ಪರ್ದೆಗಳನ್ನು ಎರ್ಪಡಿಸಿ ರಾಷ್ಟ್ರಮಟ್ಟದಲ್ಲಿ ಜಿಲ್ಲೆಯ ಹೆಸರನ್ನು ಪಸರಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೆಹರು ಯುವಕೇಂದ್ರ ಕುಂದಾಪುರ ತಾಲೂಕು ಮತ್ತು ಯೂತ್ ರೆಡ್ಕ್ರಾಸ್ ಕುಂದಾಪುರ ಘಟಕ ಇದರ ಸಹಯೋಗದಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ, ಭಾರತ ಕೇಂದ್ರ ಸರ್ಕಾರದ ನಿರ್ದೇಶನದಂತೆ, ಫಿಟ್ ಇಂಡಿಯಾ ಫ್ರೀಡಂ ರನ್ 2.0 ಕಾರ್ಯಕ್ರಮ ಇಲ್ಲಿನ ಭಂಡಾರ್ರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ, ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ. ನಾರಾಯಣ ಶೆಟ್ಟಿ ಸದೃಢ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯೂ ಜವಾಬ್ದಾರನಾಗಿರುತ್ತಾನೆ. ಬಹುಮುಖ್ಯವಾಗಿ ಶಿಕ್ಷಣ ಸಂಸ್ಥೆಗಳ ಪಾತ್ರವು ಅತ್ಯಮೂಲ್ಯವಾಗಿರುತ್ತದೆ ಎಂದರು. ಕಾಲೇಜಿನ ಎನ್ಸಿಸಿ ನೇವಿ ಮತ್ತು ಆರ್ಮಿ, ಎನ್ಎಸ್ಎಸ್, ಯೂತ್ ರೆಡ್ಕ್ರಾಸ್ ಮತ್ತು ಕ್ರೀಡಾ ವಿಭಾಗಗಳ ಸುಮಾರು150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಕುಂದಾಪುರ ಸ್ಥಳೀಯ ಪೋಲೀಸ್ ಇಲಾಖೆಯ ಸಹಕಾರದೊಂದಿಗೆ ಇಲ್ಲಿನ ಪಾರಿಜಾತ ಸರ್ಕಲ್ವರೆಗೆ ವಿದ್ಯಾರ್ಥಿ-ಜಾಥ ಜರುಗಿತು. ಉಡುಪಿ ಯುವಸ್ಪಂದನ ಕೇಂದ್ರದ ನರಸಿಂಹ ಗಾಣಿಗ, ಯೂತ್ ರೆಡ್ ಕ್ರಾಸ್ ಕುಂದಾಪುರ ಘಟಕ ದ ಎಸ್. ಜಯಕರ ಶೆಟ್ಟಿ, ಗಣೇಶ್ ಆಚಾರ್ಯ,…
ಕತಾರ್ ಕರ್ನಾಟಕ ಸಂಘದಿಂದ ಇಂಜಿನೀಯರ್ಸ್ ಡೇ ಆಚರಣೆ ಕುಂದಾಪ್ರ ಡಾಟ್ ಕಾಂ ಸುದ್ದಿ.ದೋಹಾ,ಕತಾರ್: ಕರ್ನಾಟಕ ಸಂಘ ಕತಾರ್ನಲ್ಲಿ ಶ್ರೀ ಸರ್. ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ 171ನೇ ಜನ್ಮಶತಮಾನೋತ್ಸವ ಭಾರತೀಯ ಸಾಂಸ್ಕೃತಿಕ ಕೇಂದ್ರದ ಆವರಣದಲ್ಲಿರುವ ಮುಂಬೈ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಸಂಘ ಕತಾರಿನ ಅಧ್ಯಕ್ಷರಾದ ನಾಗೇಶ್ ರಾವ್ ಅವರು ವಿಶ್ವೇಶ್ವರಯ್ಯನವರ ಈ ಮಾತುಗಳನ್ನು ಸಭಿಕರೊಂದಿಗೆ ಹಂಚಿಕೊಂಡರು. ಕತಾರಿನ ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷರಾದ ಬಾಬೂರಾಜನ್ ಉಪಸ್ಥಿತರಿದ್ದರು. ಕರ್ನಾಟಕ ಮೂಲದ ಮೂರು ಅಭಿಯಂತರರು, ವಿವಿಧ ತಾಂತ್ರಿಕ ವಿಷಯಗಳ ಕುರಿತು ಭಾಷಣ ನೀಡಿದರು. ಕತಾರ್ ಗೇಸ್ ಸಂಸ್ಥೆಯಲ್ಲಿ ಹಿರಿಯ ರಾಸಾಯನಿಕ ಅಭಿಯಂತರರಾದ ಶಂಕರಸ ಧರ್ಮದಾಸ್ ತಾಂತ್ರಿಕ ವಿಷಯ ‘ಕಂಟ್ರೋಲ್ ವಾಲ್ವ’ ಬಗ್ಗೆ ಪ್ರಸ್ತುತಪಡಿಸಿದರು, ಮೆಹೂಲ್ ಕನ್ಸಲ್ಟಿಂಗ್ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸೈಯದ್ ಯಾಸೀನ್ ಅವರು ‘ಕತಾರ್ 2022 ಫುಟ್ಬಾಲ್ ಕ್ರೀಡಾಂಗಣಗಳಿಗೆ ಸಾರಿಗೆ ವ್ಯವಸ್ಥೆ’ ಕುರಿತು ಮಾತನಾಡಿದರು, ಸೇವಿಯಸ್ ಕ್ರಾಸ್ತಾ ಅವರು ‘ಸೇತಿವೆ ನಿರ್ಮಾಣದ ಅಚ್ಚುಗಳ’ ಬಗ್ಗೆ ಪ್ರಸ್ತುತಪಡಿಸಿದರು. ಕರ್ನಾಟಕ ಸಂಘ ಕತಾರ್ ಪ್ರತಿ ವರ್ಷದಂತೆ ಈ…
ಕುಂದಾಪ್ರ ಡಾಟ್ ಕಾ ಸುದ್ದಿ.ಕುಂದಾಪುರ: ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಕಾರ್ಯಾನುಷ್ಠಾನ ಮಂಡಳಿಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಡಾ. ಶುಭಾ ಮರವಂತೆ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗೌರವ ಡಾಕ್ಟರೇಟ್ ಪದವಿ ಪಡೆದ ಪ್ರಸಿದ್ಧ ಜಾನಪದ ಕಲಾವಿದ ಗಣೇಶ ಗಂಗೊಳ್ಳಿ ಅವರನ್ನು ಡಾ.ಬಿ.ಆರ್.ಅಂಬೇಡ್ಕರ್ ಯುವಕ ಮಂಡಲ ಮೇಲ್ಗಂಗೊಳ್ಳಿ, ಅಮೃತಾ ಯುವತಿ ಮಂಡಲ ಮತ್ತು ಅರ್ಚನಾ ಮಹಿಳಾ ಮಂಡಲ ಮೇಲ್ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿ ಮೇಲ್ಗಂಗೊಳ್ಳಿಯ ಡಾ.ಅಂಬೇಡ್ಕರ್ ಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಗಣೇಶ ಗಂಗೊಳ್ಳಿ, ಕಲಾವಿದ ಬೆಳೆಯಬೇಕಾದರೆ ಸಂಘ ಸಂಸ್ಥೆಗಳ, ಕಲಾಭಿಮಾನಿಗಳ ಸಹಕಾರ ಪ್ರೋತ್ಸಾಹ ಬೇಕಿದೆ. ಪೋಷಕರು ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕು ಎಂದರು. ಡಾ. ಬಿ. ಆರ್. ಅಂಬೇಡ್ಕರ್ ಯುವಕ ಮಂಡಲದ ಅಧ್ಯಕ್ಷ ಅಕ್ಷಯ್ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಅಮೃತಾ ಯುವತಿ ಮಂಡಲದ ಅಧ್ಯಕ್ಷೆ ವೇದಾವತಿ ಉಪಸ್ಥಿತರಿದ್ದರು. ಯುವಕ ಮಂಡಲದ ಗೌರವಾಧ್ಯಕ್ಷ ಭಾಸ್ಕರ ಎಚ್.ಜಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯುವತಿ ಮಂಡಲದ ಕಾರ್ಯದರ್ಶಿ ಅನಿತಾ ಕಾರ್ಯಕ್ರಮ ನಿರ್ವಹಿಸಿದರು. ಕ್ರೀಡಾ ಕಾರ್ಯದರ್ಶಿ ಸಹನಾ ವಂದಿಸಿದರು.
