ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ವಿಕಲಚೇತನರ ಇಲಾಖೆ ಉಡುಪಿ ಜಿಲ್ಲೆ, ಎಪಿಡಿ ಸಂಸ್ಥೆ ಬೆಳಗಾವಿ, ಗ್ರಾಮ ಪಂಚಾಯತ್ ಹಾಲಾಡಿ ಹಾಗೂ ಗ್ರಾಮ ಪಂಚಾಯತ್ ಹಾರ್ದಳ್ಳಿ ಮಂಡಳ್ಳಿ ಆಶ್ರಯದಲ್ಲಿ ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮ ಹಾಲಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಮಂಜುನಾಥ ಹೆಬ್ಬಾರ್ ಮಾತನಾಡಿ ವಿಶೇಷ ಚೇತನರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿ ಸಂಸ್ಥೆಯ ಜಿಲ್ಲಾ ನೋಡಲ್ ಅಧಿಕಾರಿಗಳಾದ ಹರೀಶ ಶೆಟ್ಟಿ ಮಾತನಾಡಿ, ನಮ್ಮ ಸಂಸ್ಥೆ 1959 ರಲ್ಲಿ ಸ್ಥಾಪನೆಯಾಗಿ ವಿಶೇಷ ಚೇತನರಿಗೆ ಸ್ವಾವಲಂಬಿ ಬದುಕು ಕಲ್ಪಿಸುವ ಕೆಲಸ ಮಾಡುತ್ತಿದೆ ಮತ್ತು ಅವರಿಗೆ ಇಷ್ಟವಾಗುವ ತರಬೇತಿ ನೀಡಿ, ಗ್ರಾಮೀಣ ಮಟ್ಟದಲ್ಲಿ ವಿಶೇಷ ಚೇತನರು ಪೂರಕ ಜೀವನ ಸಾಗಿಸಲು ನಮ್ಮ ಸಂಸ್ಥೆ ಸಹಕಾರಿಯಾಗುತ್ತಿದೆ ಎಂದರು. ಡಿಎನ್ಎ ಸಂಸ್ಥೆಯ ವ್ಯವಸ್ಥಾಪಕಿ ರೂಪ ಲಕ್ಷ್ಮೀ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶೇಷ ಚೇತನರು ಸಾಕಷ್ಟು ಕ್ಷೇತ್ರದಲ್ಲಿ ಸಾಧನೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೆರಾಡಿ ವರಸಿದ್ಧಿ ವಿನಾಯಕ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಾದ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶಿಕ್ಷಣದ ಪ್ರವೇಶ ಪರೀಕ್ಷೆಗಳಆದ ನೀಟ್, ಸಿಇಟಿ ಮತ್ತು ಜೆಇಇ ಪರೀಕ್ಷೆ ಎದುರಿಸಲು ಒಂದು ದಿನದ ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿ ಎಮ್. ಎಸ್. ರಾಮಚಂದ್ರ ಐಐಟಿ ರೂರ್ಕೆ ಅವರು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿಯನ್ನು ನೀಡಿದರು. ಕಾಲೇಜಿನ ಸಂಚಾಲಕರಾದ ಕೆರಾಡಿ ಚಂದ್ರಶೇಖರ ಶೆಟ್ಟಿ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದು, ಪ್ರಾ0ಶುಪಾಲರಾದ ಪ್ರಸಾದ್ ಕುಮಾರ್ ಆರ್ ಪ್ರಾಸ್ತವಿಕ ಮಾತುಗಳನ್ನಾಡಿದರು. ಉಪನ್ಯಾಸಕಿ ಶ್ವೇತಾ ಕಾರ್ಯಕ್ರಮ ನಿರೂಪಿಸಿ, ಚೈತ್ರ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾಗಮ ಹಾಗೂ ಕರ್ನಾಟಕದ ನಾಲ್ಕು ರೋಟರಿ ಜಿಲ್ಲೆಗಳ ಪ್ರಯೋಜಕತ್ವದ ಮಹತ್ವಾಕಾಂಕ್ಷಿ, ಕನ್ನಡ ಮಾಧ್ಯಮದಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿರುವ ವಿದ್ಯಾರ್ಥಿಗಳ ಪ್ರೋತ್ಸಾಹಕ ‘ವಿದ್ಯಾಸೇತು’ ಪುಸ್ತಕಗಳ ವಿತರಣಾ ಕಾರ್ಯಕ್ರಮ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಗಂಗೊಳ್ಳಿ ರೋಟರಿ ಅಧ್ಯಕ್ಷ ರಾಜೇಶ್ ಎಂ. ಜಿ., ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ. ವಿದ್ಯಾರ್ಥಿಗಳು ಈ ಪುಸ್ತಕದ ಸದುಪಯೋಗಪಡಿಸಿಕೊಂಡು ಮುಂಬರುವ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸುವಲ್ಲಿ ಪ್ರಯತ್ನಿಸಬೇಕು ಎಂದರು. ವಲಯ ಸೇನಾನಿ ಕೆ.ರಾಮನಾಥ್ ನಾಯಕ್ ಮತ್ತು ಉಪಪ್ರಾಂಶುಪಾಲ ಉಮೇಶ್ ಕರ್ಣಿಕ್ ರೋಟರಿಯ ಕಾರ್ಯವನ್ನು ಶ್ಲಾಘಿಸಿ ಕೃತಜ್ಞತೆ ಸಲ್ಲಿಸಿದರು. ಶಿಕ್ಷಕರಾದ ಗೋಪಾಲ ದೇವಾಡಿಗ, ಶ್ರೀಲತಾ, ಲವೀನಾ, ಕಚೇರಿ ಸಹಾಯಕ ಶ್ರೀಧರ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು. ರೋಟರಿ ಕಾರ್ಯದರ್ಶಿ ನಾರಾಯಣ ಇ. ನಾಯ್ಕ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಟಿಟ್ಯೂಟ್ ಆಫ್ ಚಾರ್ಟರ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ ಸಿಎ ಅಂತಿಮ ಮತ್ತು ಸಿಎ ಪೌಂಡೇಶನ್ ಪರೀಕ್ಷೆಯಲ್ಲಿ ಶಿಕ್ಷಪ್ರಭಾ ಅಕಾಡಮಿ ಆಫ್ ಕಾಮರ್ಸ್ ಏಜುಕೇಶನ್ (ಸ್ಪೇಸ್) ಸಿಎ/ಸಿಎಸ್/ಸಿಎಂಎ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆಯು ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ವಿಲಾಸ್ ಶೆಟ್ಟಿ, ಸಿಎ ಅಂತಿಮ ಪರೀಕ್ಷೆಯಲ್ಲಿ 528 ಅಂಕ ಗಳಿಸುವುದರೊಂದಿಗೆ ಸಿ.ಎ. ಕೋರ್ಸ್ ಪೂರ್ಣಗೊಳಿಸಿ ಲೆಕ್ಕ ಪರಿಶೋಧಕರಾಗಿ ಆಯ್ಕೆಯಾಗಿದ್ದಾರೆ. ಪುನೀತ್ ಶೆಟ್ಟಿ 215 ಅಂಕಗಳೊಂದಿಗೆ ಸಿ.ಎ. ಅಂತಿಮ ಪರೀಕ್ಷೆಯ ಪ್ರಥಮ ಗ್ರೂಪಿನಲ್ಲಿ ತೇರ್ಗಡೆ ಹೊಂದಿದ್ದಾರೆ. ಸಿ.ಎ. ಪೌಂಡೇಶನ್ ಪರೀಕ್ಷೆಯಲ್ಲಿ ಅನುಷ್ಕಾ ಎ. ಕುಂದರ್ – 332, ಅಭಿಷೇಕ್ ಡಿ. 302, ಕಿರಣ್ ಕಾಮತ್ 299, ಆದಿತ್ಯ ದೇವಾಡಿಗ -298, ಜೆಸಿತಾ ಡಿ. -284, ರಾಮನಾಥ ಶೆಣೈ -282, ಸುಪ್ರೀತಾ- 274, ಶ್ರೇಯಾ ಭಟ್ -268, ರೋಹನ್ ಶೆಟ್ಟಿ- 266, ಅಭಿಶ್ರೀ- 263, ಮಂದಾರಾ – 260, ಭುವನ್ ರಾಜ್ ಶೆಟ್ಟಿ -252, ಹರೀಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಶಿಕ್ಷಣ ನೀತಿ – 2020 ವಿದ್ಯಾರ್ಥಿ ಕೇಂದ್ರಿತ ನೀತಿಯಾಗಿದ್ದು, ಇದರಲ್ಲಿನ ಪ್ರತಿ ಅಂಶವನ್ನೂ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ರೂಪಿಸಲಾಗಿದೆ. ಹೊಸ ಶಿಕ್ಷಣ ನೀತಿಯ ಮೂಲಕ ಆಸಕ್ತಿ-ಕೌಶಲ್ಯ ಆಧಾರಿತ ಕಲಿಕೆ ಹಾಗೂ ದೇಶದ ಮಾನವ ಸಂಪನ್ಮೂಲದ ಸದ್ಬಳಕೆ ನಿಜಾರ್ಥದಲ್ಲಿ ಆಗಲಿದೆ ಎಂದು ಮಣಿಪಾಲ ಎಂಐಟಿಯ ಪ್ರಾಧ್ಯಾಪಕ ಹಾಗೂ ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಪ್ರೋ. ಕರುಣಾಕರ ಕೊಟೇಗಾರ್ ಹೇಳಿದರು. ಅವರು ಗುರುವಾರ ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟೀಯ ಶಿಕ್ಷಣ ನೀತಿ ಕುರಿತು ಆಯೋಜಿಸಲಾದ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಶಿಕ್ಷಣ ವ್ಯವಸ್ಥೆ ಸರಿಯಿದ್ದಲ್ಲಿ ದೇಶ ಅಭಿವೃದ್ಧಿ ಹೊಂದುವುದರಲ್ಲಿ ಯಾವುದೇ ಸಂಶಯವಿಲ್ಲ. ಎಳು ದಶಕಗಳ ಹಳೆಯದಾದ ಪಾಶ್ಚಾತ್ಯರ ಪಳೆಯುಳಿಕೆಯಂತಿರುವ ಶಿಕ್ಷಣ ನೀತಿಯು ಭಾರತೀಯರ ವ್ಯಕ್ತಿತ್ವನ್ನು ರೂಪಿಸಲು ಸಾಧ್ಯವಿಲ್ಲ. ಹಾಗಾಗಿಯೇ ದೇಶದಲ್ಲಿ ನೂತನ ಶಿಕ್ಷಣ ನೀತಿ ಜಾರಿಗೊಳಿಸಲಾಗಿದೆ ಎಂದರು. ಅಂಕ ಗಳಿಸುವುದಕ್ಕಾಗಿ ಪಡೆಯುವ ಶಿಕ್ಷಣಕ್ಕೂ, ಅಂತಹ ಶಿಕ್ಷಣದ ಹೊರತಾಗಿ ಪಡೆಯುವ ಕೌಶಲ್ಯಕ್ಕೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಇಂಜಿನಿಯರಿಂಗ್ ವಿಸ್ತಾರವಾದ ಕ್ಷೇತ್ರವಾಗಿದ್ದು, ವಿವಿಧ ಕೌಶಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿ ತೊಡಗಿಸಿಕೊಂಡಾಗ ಹೆಚ್ಚಿನ ಅವಕಾಶಗಳು ಲಭಿಸಲಿವೆ ಎಂದು ಮಂಗಳೂರಿನ ಎನ್ಎಚ್ಎಐ ಪ್ರೊಜೆಕ್ಟ್ ಡೈರೆಕ್ಟರ್ ಶಿಶು ಮೋಹನ್ ತಿಳಿಸಿದರು. ಮಿಜಾರಿನ ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ವಿಭಾಗದ ಆಶ್ರಯದಲ್ಲಿ ನಡೆದ ‘ರಾಷ್ಟ್ರೀಯ ಇಂಜಿನಿಯರ್ಸ್ ಡೇ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ರಾಷ್ಟ್ರ ನಿರ್ಮಾಣದಲ್ಲಿ ಇಂಜಿನಿಯರಿಂಗ್ಗಳ ಕೊಡುಗೆ ಮಹತ್ವದಾಗಿದೆ. ವಿದ್ಯಾರ್ಥಿಗಳು ವಿವಿಧ ತರಬೇತಿಗಳಲ್ಲಿ ಪಾಲ್ಗೊಳ್ಳುವ ಮೂಲಕ ಪ್ರಾಯೋಗಿಕ ಜ್ಞಾನವನ್ನು ಪಡೆದು ತಮ್ಮ ವೃತ್ತಿಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಇಂಜಿನಿಯರ್ಸ್ ಡೇ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ. ಪೀಟರ್ ಫೆನಾಂಡಿಸ್, ಆಳ್ವಾಸ್ ಕಾಲೇಜಿನ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಲತಿಕಾ ಸ್ವಾಗತಿಸಿದರು, ಅಭಿಷೇಕ್ ವಂದಿಸಿದರು, ರಮ್ಯಶ್ರೀ ಶೆಟ್ಟಿ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವನಿತಾ ದೇವಾಡಿಗ ಅವರ ಸಾಮಾಜಿಕ ರಂಗದ ಸೇವೆಯನ್ನು ಗುರುತಿಸಿ ಇಂಡಿಯನ್ ಎಂಪೈರ್ ವಿಶ್ವ ವಿದ್ಯಾನಿಲಯವು ಅ.2ರಂದು ತಮಿಳುನಾಡಿನ ಹೊಸೂರಿನಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಿದೆ. ಅವರು ಪ್ರಸ್ತುತ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಕೇಂದ್ರ ಸರಕಾರಿ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಟ್ಟಡ ಮತ್ತು ಇತರೆ ನಿಮಾ೯ಣ ಕಾರ್ಮಿಕರ ಕಲ್ಯಾಣ ಮಂಡಳಿ, ಕಾರ್ಮಿಕ ಇಲಾಖೆಯ ವತಿಯಿಂದ ಕಾಮಿ೯ಕರ ಸಮಸ್ಯೆಗಳನ್ನು ಆಲಿಸಲು ಹಾಗೂ ಪರಿಹಾರ ಒದಗಿಸಲು ಕುಂದಾಪುರ, ಬೈಂದೂರು ತಾಲೂಕಿನ ಕಾಮಿ೯ಕರ ಅದಾಲತ್ ಕಾರ್ಯಕ್ರಮ ಇಲ್ಲಿನ ರಾಘವೇಂದ್ರ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ನಡೆಯಿತು. ಉದ್ಘಾಟಿಸಿ ಮಾತನಾಡಿದ ಉಡುಪಿ ಜಿಲ್ಲಾಕಾರ್ಮಿಕ ಅಧಿಕಾರಿ ಬಿ. ಆರ್. ಕುಮಾರ್ , ಕಾಮಿ೯ಕರ ಸಮಸ್ಯೆಗಳ ಕುರಿತಂತೆ ಬಾಕಿ ಇರುವ ಅಜಿ೯ಗಳನ್ನು ಇತ್ಯಥ೯ ಪಡಿಸಲಾಗುವುದು. ಕಾಮಿ೯ಕ ಇಲಾಖೆ ಕಾಮಿ೯ಕರ ಬೆನ್ನೆಲುಬಾಗಿ ಸದಾ ನಿಮ್ಮ ಸೇವೆಗೆ ಬದ್ಧವಾಗಿರುತ್ತದೆ ಎಂದು ಹೇಳಿದರು. ಈ ಸಂದರ್ಭ ಕುಂದಾಪುರ, ಬೈಂದೂರು ತಾಲೂಕಿನ ಕಾಮಿ೯ಕರ ದೂರು, ಅಜಿ೯, ಅಹವಾಲುಗಳನ್ನು ಕಾರ್ಮಿಕ ಅದಾಲತ್ನಲ್ಲಿ ಸ್ವೀಕರಿಸಲಾಯಿತು. ಕಾಮಿ೯ಕ ಮುಖಂಡ ವೆಂಕಟೇಶ್ ಕೋಣಿ ಉಪಸ್ಥಿತರಿದ್ದರು. ಕುಂದಾಪುರ ವೃತ್ತ ಕಾಮಿ೯ಕ ನಿರೀಕ್ಷಕರಾದ ಎಂ.ಪ್ರಸನ್ನ ಕುಮಾರ್ ಸ್ವಾಗತಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿ ದಿನವೂ ಒಂದೊಂದು ಹೊಸ ಹಿಂದಿ ಶಬ್ಧವನ್ನು ಕಲಿಯುವುದರ ಮೂಲಕ ರಾಷ್ಟ್ರಭಾಷಾ ಸಂಪತ್ತನ್ನು ಹೆಚ್ಚಿಸಿಕೊಳ್ಳಬೇಕು. ದಿನನಿತ್ಯದ ಸಂವಹನದಲ್ಲಿ ಬಳಸುವ ಮೂಲಕ ಮಾತ್ರ ಭಾಷೆಯೊಂದು ಸದಾ ಜೀವಂತವಾಗಿರುವುದಲ್ಲದೇ, ಸತತ ವೃದ್ಧಿಗೊಳ್ಳುವುದು ಎಂದು ಬಸ್ರೂರಿನ ನಿವೇದಿತಾ ಪ್ರೌಢ ಶಾಲೆಯ ಮಾಜಿ ಮುಖ್ಯೋಪಾಧ್ಯಾಯರು, ಹಿಂದಿ ಶಿಕ್ಷಕರಾದ ದಿನಕರ್ ಆರ್. ಶೆಟ್ಟಿ ಹೇಳಿದರು. ಅವರು ಕುಂದಾಪುರದ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ‘ಹಿಂದಿ ದಿವಸ್’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈ ಅತಿಥಿಗಳನ್ನು ಸ್ವಾಗತಿಸಿ, ಪ್ರಸ್ತಾವನಾ ನುಡಿಗಳಲ್ಲಿ ನಮ್ಮೆಲ್ಲರ ಅಭಿಮಾನದ ರಾಷ್ಟ್ರಭಾಷೆ ಹಿಂದಿಯ ಬೆಳವಣಿಗೆಯ ಅಗತ್ಯತೆಯನ್ನು ತಿಳಿಸಿದರು. ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಹಿಂದಿ ಭಾಷೆಯು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಯಶಸ್ವಿಯಾಗಲು ಹೇಗೆ ಸಹಕಾರಿಯಾಗುವುದೆಂದು ಎಂದು ಹೇಳಿದರು. ಈ ಸಂದರ್ಭದಲ್ಲಿ ಹಿಂದಿ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾದ ಹಿಂದಿ ಪ್ರಬಂಧ ಮತ್ತು ಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೆಲ್ಕೋ ಫೌಂಡೇಶನ್ ವತಿಯಿಂದ ಆರ್.ಎಮ್.ಬಿ ಯೋಜನೆಯಡಿಯಲ್ಲಿ ವಿದ್ಯುತ್ ವಂಚಿತ ಆಶಾಲತಾ ತೆಕ್ಕಟ್ಟೆ ಅವರ ಅಂಗಡಿಗೆ ಪ್ರಿಡ್ಜ್, ಸೋಲಾರ್ ಹೊಲಿಗೆಯಂತ್ರ ಮತ್ತು ಸೋಲಾರ್ ಪ್ರಿಂಜರ್ಗೆ ಸಹಾಯಧನ ನೀಡಲಾಯಿತು. ತೆಕ್ಕಟ್ಟೆ ಪಂಚಾಯತ್ ಅಧ್ಯಕ್ಷರಾದ ಮಮತಾ ದೇವಾಡಿಗ ಉದ್ಘಾಟಿಸಿ, ಆಶಾಲತಾ ಅವರು ಎಲ್ಲಾ ಮಹಿಳೆಯರಿಗೆ ಮಾದರಿಯಾಗಲಿ ಎಂದು ಹೇಳಿದರು. ಸೆಲ್ಕೋ ಸಂಸ್ಥೆಯ ಡಿಜಿಎಮ್ ಗುರುಪ್ರಕಾಶ ಶೆಟ್ಟಿ ಮಾತನಾಡಿ, ಸೆಲ್ಕೋ ಸಂಸ್ಥೆಯ ಕಾರ್ಯವೈಖರಿ, ಮಹಿಳಾ ಸಬಲೀಕರಣ ಸಾಮಾಜಿಕ ಕಾಳಜಿ ಮತ್ತು ಸೆಲ್ಕೋನ ವಿವಿಧ ಯೋಜನೆಯ ಬಗ್ಗೆ ತಿಳಿಸಿದರು. ಒಟ್ಟು 1,25,000 ಮೊತ್ತದಲ್ಲಿ 42,000 ಮೊತ್ತವನ್ನು ಸೆಲ್ಕೋ ಫೌಂಡೇಶನ್ ಸಹಾಯಧನವಾಗಿ ನೀಡಿದೆ ಎಂದು ತಿಳಿಸಿದರು. ಈ ಸಂದರ್ಭ ತೆಕ್ಕಟ್ಟೆ ಪಂಚಾಯತ್ನ ಮಾಜಿ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಕೋಮೆ ವ್ಯವಸಾಯ ಸೊಸೈಟಿಯ ಗೋಪಾಲ ಪೂಜಾರಿ, ಕೆನರಾ ಬ್ಯಾಂಕ್ನ ಮ್ಯಾನೇಜರ್ ಚಂದ್ರಶೇಖರ, ನಿವೃತ್ತ ಅಧ್ಯಾಪಕಿ ವಿಶಾಲಾಕ್ಷೀ ಶೆಟ್ಟಿ, ಸೆಲ್ಕೋ ಸಂಸ್ಥೆಯ ವಲಯ ಹಿರಿಯ ಪ್ರಬಂಧಕರಾದ ಶೇಖರ ಶೆಟ್ಟಿ, ಶಾಖಾ ಪ್ರಬಂಧಕರಾದ ಮಂಜು ನಾಡ, ಸ್ಥಳೀಯರಾದ…
