Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮೀನುಗಾರರಿಗೆ ಹಾಗೂ ಮೀನುಗಾರಿಕಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡಲು ಮೀನುಗಾರರ ಕಲ್ಯಾಣ ಮಂಡಳಿಯನ್ನು ರಚಿಸಬೇಕು ಎಂದು ಅಖಿಲ ಭಾರತ ಮೀನುಗಾರರ ಮತ್ತು ಮೀನುಗಾರಿಕಾ ಕಾರ್ಮಿಕರ ಒಕ್ಕೂಟಕ್ಕೆ ಸಂಯೋಜಿಸಲ್ಪಟ್ಟ ಉಡುಪಿ ಜಿಲ್ಲಾ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಕೆ. ಶಂಕರ್ ಸರ್ಕಾರವನ್ನು ಒತ್ತಾಯಿಸಿದರು. ಉಪ್ಪುಂದ ಕಾಸನಾಡಿ ದೈವಸ್ಥಾನ ವಠಾರದಲ್ಲಿ  ಸಂಘಟನೆಯ ಆಶ್ರಯದಲ್ಲಿ ನಡೆದ ಉಪ್ಪುಂದ ಪ್ರದೇಶದ ಮೀನುಗಾರರ ಮತ್ತು ಮೀನುಗಾರಿಕಾ ಕಾರ್ಮಿಕರ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಕೋಣಿ ಮಾತನಾಡಿ, 60 ವರ್ಷ ಪ್ರಾಯ ಮೀರಿದ ಮೀನುಗಾರರಿಗೆ ಹಾಗೂ ಮೀನುಗಾರಿಕಾ ಕಾರ್ಮಿಕರಿಗೆ ತಿಂಗಳಿಗೆ ರೂ 600 ಪಿಂಚಣಿ ನೀಡಬೇಕು ಎಂದು ಆಗ್ರಹಿಸಿದರು. ಮೀನುಗಾರರ ಮತ್ತು ಮೀನುಗಾರಿಕಾ ಕಾರ್ಮಿಕರ 12 ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅ.1ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಜರಗುವ ಪ್ರತಿಭಟನೆ, ಮನವಿ ಸಲ್ಲಿಕೆ ಹೋರಾಟ ಕಾರ್ಯಕ್ರಮದಲ್ಲಿ ಅಧಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ:  ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಬೀಡಿ / ಸುಣ್ಣ ಕಲ್ಲು ಮತ್ತು ಡಾಲೋಮೈಟ್ / ಕಬ್ಬಿಣದ ಗಣಿಗಳು, ಕ್ರೋಮ್, ಮ್ಯಾಂಗನೀಸ್ ಅದಿರಿನ ಗಣಿಗಳು / ಚಲನಚಿತ್ರ ಕ್ಷೇತ್ರ ಇವುಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಮಕ್ಕಳಿಗೆ ಪ್ರಸಕ್ತ ಸಾಲಿನಲ್ಲಿ ಶಿಕ್ಷಣಕ್ಕಾಗಿ ಆರ್ಥಿಕ ನೆರವಿನ ಅನುದಾನ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಂದನೇ ತರಗತಿಯಿಂದ ಪದವಿ ಕೋರ್ಸ್ವರೆಗೆ, ವೃತ್ತಿಪರ ಹಾಗೂ ವೃತ್ತಿಪರ ರಹಿತ, ಐಟಿಐ ಕೋರ್ಸ್ಗಳಿಗೆ ನ್ಯಾಷನಲ್ ಸ್ಕಾಲರ್ ಷಿಪ್ ಪೋರ್ಟಲ್ ಮೂಲಕ https://scholarships.gov.in ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0120-6619540 ಅಥವಾ ಇ-ಮೇಲ್: wclwoblr-ka@nic.in ಸಂಪರ್ಕಿಸುವಂತೆ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಕಲ್ಯಾಣ ಮತ್ತು ಉಪಕರ ಆಯುಕ್ತರ ಕಚೇರಿ ಪ್ರಕಟನೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು:  ಮರವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂದಿನ ವಿದ್ಯಾರ್ಥಿ ಯೋಗೀಂದ್ರ ಮರವಂತೆ ಅವರ ಅಂಕಣ ಬರಹಗಳ ಸಂಕಲನ ’ಲಂಡನ್ ಡೈರಿ’ಗೆ ಸಾಹಿತ್ಯ ಪರಿಷತ್ತಿನ ದತ್ತಿನಿಧಿ ಪ್ರಶಸ್ತಿ ಬಂದ ಸಂದರ್ಭವನ್ನು ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಗೆಳೆಯರು  ವಿಶಿಷ್ಟವಾಗಿ ಸಂಭ್ರಮಿಸಿದರು. ಉದ್ಯೋಗ ನಿಮಿತ್ತ ಇಂಗ್ಲೆಂಡ್‌ನಲ್ಲಿರುವ ಯೋಗೀಂದ್ರ ಅವರನ್ನು ವೆಬೆಕ್ಸ್ ಜಾಲಸಂಪರ್ಕ ಮೂಲಕ ಕೂಡಿಕೊಂಡು ಅಭಿನಂದನ ಕಾರ್ಯಕ್ರಮ ನಡೆಸಿ, ಅವರೊಂದಿಗೆ ಸಂವಾದ ನಡೆಸಿದರು. ಊರ ಸಂಪ್ರದಾಯದಂತೆ ಆರಂಭದಲ್ಲಿ ಅನಿತಾ ಆರ್. ಕೆ. ಪ್ರಾರ್ಥನೆ ಹಾಡಿದರು. ಅಧ್ಯಕ್ಷ ರವಿ ಮಡಿವಾಳ ಸ್ವಾಗತಿಸಿದರು. ಕೋಶಾಧಿಕಾರಿ ಕರುಣಾಕರ ಆಚಾರ್ಯ ಕಾರ್ಯಕ್ರಮದ ಔಚಿತ್ಯ ವಿವರಿಸಿದರು. ಯೋಗೀಂದ್ರ ಆರಂಭಿಕ ಪ್ರತಿಕ್ರಿಯೆಯಲ್ಲಿ ವರ್ಷವೂ ಎರಡು ಬಾರಿ ಊರಿಗೆ ಭೇಟಿನೀಡುತ್ತಿದ್ದ ತಮಗೆ ಕೊರೊನಾ ಸೃಷ್ಟಿಸಿರುವ ಸಂಕಷ್ಟದ ಸ್ಥಿತಿಯಲ್ಲಿ ಅದು ಸಾಧ್ಯವಾಗಿಲ್ಲ. ತಮಗೆ ಪುಟ್ಟ ಪುರಸ್ಕಾರ ದೊರೆತುದನ್ನು ನೆಪವಾಗಿರಿಸಿಕೊಂಡು ಊರ ಗೆಳೆಯರು ನಡೆಸಿದ ಕಾರ್ಯಕ್ರಮ ಆ ಕೊರತೆಯನ್ನು ಕ್ಷಣ ಕಾಲ ಮರೆಯುಂತೆ ಮಾಡಿದೆ ಎಂದರು. ಸಂಘದ ಸದಸ್ಯರಾದ ದಯಾನಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೆ.21ರ ಸೋಮವಾರ 233 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 55, ಉಡುಪಿ ತಾಲೂಕಿನ 111 ಹಾಗೂ ಕಾರ್ಕಳ ತಾಲೂಕಿನ 47 ಮಂದಿಗೆ ಪಾಸಿಟಿವ್ ಬಂದಿದೆ. 20 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 135 ಸಿಂಥಮೇಟಿವ್ ಹಾಗೂ 98 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 140, ILI 78, ಸಾರಿ 6 ಪ್ರಕರಣವಿದ್ದು, 5 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 3 ಮಂದಿ ಹೊರ ಜಿಲ್ಲೆಯಿಂದ, ಓರ್ವ ವ್ಯಕ್ತಿ ಹೊರದೇಶದಿಂದ ಬಂದಿದ್ದಾರೆ. ಇಂದು 66 ಮಂದಿ ಆಸ್ಪತ್ರೆಯಿಂದ ಹಾಗೂ 212 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಕಾರ್ಕಳದ 72 ವರ್ಷದ ವೃದ್ಧೆ, ಉಡುಪಿ 70 ವರ್ಷದ ವೃದ್ಧೆ, 84 ವರ್ಷದ ವೃದ್ಧ, ಕುಂದಾಪುರ 66 ವರ್ಷದ ಪುರುಷ ಮೃತಪಟ್ಟಿದ್ದಾರೆ. 619 ನೆಗೆಟಿವ್: ಈ ತನಕ ಒಟ್ಟು 94320 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 78859 ನೆಗೆಟಿವ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ :  ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ ಇವರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 166ನೇ ಜನ್ಮ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ ಚ್ಯವನಪ್ರಾಶ, ಆಯುಷ್ ಕ್ವಾಥ ಚೂರ್ಣ ಮತ್ತು ರೋಗ ನಿರೋಧಕ ಮಾತ್ರೆಗಳ ವಿತರಣಾ ಕಾರ್ಯಕ್ರಮ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಜರಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಂದಾಪುರದ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ ಆಯುರ್ವೇದದಲ್ಲಿ ಅದ್ಭುತ ಶಕ್ತಿ ಇದೆ. ಗಿಡಮೂಲಿಕೆಗಳ ಮಹತ್ವವನ್ನು ಎಲ್ಲರೂ ಅರಿತುಕೊಂಡು ಯಾವುದೇ ದೇಹದ ಮತ್ತು ಆರೋಗ್ಯದ ಮೇಲೆ ಅಡ್ಡಪರಿಣಾಮ ಬೀರದ ಆಯುರ್ವೇದಿಕ್ ಔಷಧಿಗಳನ್ನು ಹೆಚ್ಚು ಉಪಯೋಗಿಸಬೇಕು ಎಂದು ಹೇಳಿದರು. ಗಂಗೊಳ್ಳಿ ಬಿಲ್ಲವರ ಸಮಾಜ ಸೇವಾ ಸಂಘದ ಅಧ್ಯಕ್ಷ ಶಿವಾನಂದ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಚಿನ್ಮಯಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಉಮೇಶ ಪುತ್ರನ್ ಆಯುಷ್ ಕಿಟ್ ವಿತರಿಸಿದರು. ಜಿಪಂ ಮಾಜಿ ಅಧ್ಯಕ್ಷ ಬಿ.ಎನ್.ಶಂಕರ ಪೂಜಾರಿ, ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ರಾಜು ದೇವಾಡಿಗ, ಗಂಗೊಳ್ಳಿ ಟೌನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ವಿವಿಧ ಆರೋಗ್ಯ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಯನ್ನು ಮಾಸಿಕ 15000 ರೂ. ವೇತನದಂತೆ ಆರು ತಿಂಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಛೇರಿ, ಅಜ್ಜರಕಾಡು, ಉಡುಪಿ ಇಲ್ಲಿಂದ ಪಡೆಯಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 23 ಕೊನೆಯ ದಿನವಾಗಿದೆ. ಸೆಪ್ಟಂಬರ್ 24 ರಂದು 10.30 ಕ್ಕೆ ಸಂದರ್ಶನ ನಡೆಯಲಿದ್ದು, ವಿದ್ಯಾರ್ಹತೆಯ ಎಲ್ಲಾ ಮೂಲ ದಾಖಲೆಯೊಂದಿಗೆ ಹಾಜರಾಗಬೇಕು. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2536650 ನ್ನು ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ,ಸೆ.20: ಜಿಲ್ಲೆಯಲ್ಲಿ  ಒಂದು ದಿನದಲ್ಲಿ 214 ಮೀ.ಮೀ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಸತತವಾಗಿ ಮಳೆಯಾಗುತ್ತಿರುವುದರಿಂದ ಸತತವಾಗಿ ಸುರಿದ ಮಳೆಯಿಂದಾಗಿ ಅಪಾರವಾದ ಆಸ್ತಿ ಪಾಸ್ತಿಗಳು ಹಾನಿಯಾಗಿದೆ. ಉಡುಪಿ, ಕಾಪು, ಕಾರ್ಕಳ ಮತ್ತು ಬ್ರಹ್ಮಾವರ ತಾಲೂಕಿನ ನದಿ ತೀರದ ಗ್ರಾಮಗಳ ಕೆಲವು ತಗ್ಗುಪ್ರದೇಶಗಳು ಜಲಾವೃತಗೊಂಡಿದ್ದು (ನೆರೆ) ಮಳೆ ನೀರು ನುಗ್ಗಿ ಆಸ್ತಿ-ಪಾಸ್ತಿಗಳು ಹಾನಿಗೊಂಡಿದೆ. ಇಂದು ಜಿಲ್ಲೆಯಲ್ಲಿ ಒಟ್ಟು 226 ಮೀ.ಮೀ ಮಳೆಯಾಗಿದ್ದು, ಒಂದೇ ದಿನದಲ್ಲಿ 214 ಮೀ.ಮೀ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ಉಡುಪಿ ತಾಲೂಕಿನಲ್ಲಿ 399 ಮೀ.ಮೀ, ಕುಂದಾಪುರ ತಾಲೂಕಿನಲ್ಲಿ 88 ಮೀ.ಮೀ, ಬೈಂದೂರು ತಾಲೂಕಿನಲ್ಲಿ 41 ಮೀ.ಮೀ, ಬ್ರಹ್ಮಾವರ ತಾಲೂಕಿನಲ್ಲಿ 251 ಮೀ.ಮೀ, ಕಾರ್ಕಳ ತಾಲೂಕಿನಲ್ಲಿ 293 ಮೀ.ಮೀ, ಕಾಪು ತಾಲೂಕಿನಲ್ಲಿ 296 ಮೀ.ಮೀ, ಹೆಬ್ರಿ ತಾಲೂಕಿನಲ್ಲಿ 220 ಮೀ.ಮೀ ಮಳೆಯಾಗಿದೆ. ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗೆ ತಾಲೂಕು ನೋಡಲ್ ಅಧಿಕಾರಿಗಳನ್ನು ಹಾಗೂ ಗ್ರಾಮ ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ. ಮೈಸೂರಿನಿಂದ 22 ಮಂದಿ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯುವಜನರು ಕಲೆಗಳಲ್ಲಿ ತೊಡಗಿಕೊಳ್ಳುವುದರಿಂದ ಅವರು ಅನಪೇಕ್ಷಣೀಯ ಚಟುವಟಿಕೆಗಳಲ್ಲಿ ಸಮಯ ವ್ಯರ್ಥ ಮಾಡುವುದು ನಿಲ್ಲುತ್ತದೆ. ಅವರ ಕಲಾಭಿವ್ಯಕ್ತಿ ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ನಾಗೂರಿನ ಕುಸುಮಾ ಫೌಂಡೇಶನ್ ಸಂಸ್ಥಾಪಕ ಎಚ್. ನಳಿನ್‌ಕುಮಾರ್ ಶೆಟ್ಟಿ ಹೇಳಿದರು. ರಾಜ್ಯ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾ ಘಟಕ ಮತ್ತು ಕುಸುಮಾ ಫೌಂಡೇಶನ್ ಜಂಟಿ ಆಶ್ರಯದಲ್ಲಿ ಭಾನುವಾರ ನಾಗೂರಿನ ಕೆಎಎಸ್ ಆಡಿಟೋರಿಯಂನಲ್ಲಿ ನಡೆದ ಜಿಲ್ಲಾ ಮಟ್ಟದ ರಂಗೋಲಿ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭಾರತೀಯ ರಂಗೋಲಿ ಕಲೆಗೆ ಅಧ್ಯಾತ್ಮ ಮತ್ತು ಧಾರ್ಮಿಕತೆಯೊಂದಿಗೆ ಸಂಬಂಧವಿದೆ. ಮನೆಗಳ ಮುಂದೆ ಹಿಂದಿದ್ದ ರಂಗೋಲಿ ಹಾಕುವ ಕ್ರಮವನ್ನು ಮುಂದುವರಿಸುವುದರಿಂದ ಪರಂಪರೆಯನ್ನು ಎತ್ತಿಹಿಡಿಯಬಹುದು ಎಂದು ಅವರು ಹೇಳಿದರು. ರಂಗೋಲಿ ಸ್ಪರ್ಧೆಯನ್ನು ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಉದ್ಘಾಟಿಸಿದರು. ರಮ್ಯಾ ಪೈ ಪ್ರಾರ್ಥನೆ ಹಾಡಿದರು. ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಗಂಗೊಳ್ಳಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಂಪಾರು ಸಂಜಯ ಗಾಂಧಿ ಪ್ರೌಢಶಾಲೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೆ.20ರ ಭಾನುವಾರ 293 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 95, ಉಡುಪಿ ತಾಲೂಕಿನ 123 ಹಾಗೂ ಕಾರ್ಕಳ ತಾಲೂಕಿನ 70 ಮಂದಿಗೆ ಪಾಸಿಟಿವ್ ಬಂದಿದೆ. 5 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 156 ಸಿಂಥಮೇಟಿವ್ ಹಾಗೂ 137 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 217, ILI 63, ಸಾರಿ 7 ಪ್ರಕರಣವಿದ್ದು, 3 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 2 ಮಂದಿ ಹೊರ ಜಿಲ್ಲೆಯಿಂದ, ಓರ್ವ ವ್ಯಕ್ತಿ ಹೊರದೇಶದಿಂದ ಬಂದಿದ್ದಾರೆ. ಇಂದು 38 ಮಂದಿ ಆಸ್ಪತ್ರೆಯಿಂದ ಹಾಗೂ 177 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. 920 ನೆಗೆಟಿವ್: ಈ ತನಕ ಒಟ್ಟು 94730 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 79160 ನೆಗೆಟಿವ್, 15391 ಪಾಸಿಟಿವ್ ಬಂದಿದ್ದು, 179 ಮಂದಿಯ ವರದಿ ಬರುವುದು ಬಾಕಿ ಇದೆ. 1,415 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 15391 ಕೊರೋನಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು:  ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಇಕೋ ಕ್ಲಬ್, ಐಕ್ಯೂಎಸಿ ಹಾಗೂ ಬೈಂದೂರು ವಲಯ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಬೈಂದೂರು ಉಪವಲಯ ಅರಣ್ಯಾಧಿಕಾರಿ ಶಂಕರಪ್ಪ ಡಿ.ಎಲ್  ಬೈಂದೂರು ಇವರು ಸಸಿ ನೆಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ  ರಘು ನಾಯ್ಕ್,  ಅರಣ್ಯ ರಕ್ಷ ಕ ಮಂಜುನಾಥ ನಾಯ್ಕ್ , ಗುರುರಾಜ್ ಬಿ ಹಾಗೂ ಇತರೆ ಸಿಬ್ಬಂದಿಗಳು ಹಾಜರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಘಟಕ-2 ರ ಯೋಜನಾಧಿಕಾರಿ ಲತಾ ಪೂಜಾರಿ  ಸ್ವಾಗತಿಸಿದರು. ಇಕೋ ಕ್ಲಬ್ ಹಾಗೂ ಐಕ್ಯೂಎಸಿ ಸಂಚಾಲಕ ಡಾ.  ಅಶ್ವಥ್ ಡಿ ನಾಯ್ಕ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಘಟಕ-1 ರ ಯೋಜನಾಧಿಕಾರಿ ನಾಗರಾಜ್ ಶೆಟ್ಟಿ ವಂದಿಸಿದರು. ಈ ವೇಳೆಯಲ್ಲಿ ಎಲ್ಲ ಉಪನ್ಯಾಸಕರು ವಿದ್ಯಾರ್ಥಿಗಳು ಹಾಜರಿದ್ದರು ನಾಯ್ಕ್

Read More