ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಆತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ರಾಜ್ಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ಉಡುಪಿಯಲ್ಲಿ ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್, ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನ್ಯುಫ್ಯಾಕ್ಚರಿಂಗ್ ನಲ್ಲಿ ಬಾಕಿ ಉಳಿದ ಸೀಟುಗಳ ಹಂಚಿಕೆಗೆ ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರುವ ವಿದ್ಯಾರ್ಥಿಗಳು ಜಿ.ಟಿ.ಟಿ.ಸಿ.ಯಲ್ಲಿ ವಿವಿದ ಕೋರ್ಸುಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರದಲ್ಲಿ 3+1 ವರ್ಷದ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ ಮತ್ತು ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಪ್ಯಾಕ್ಚರಿಂಗ್ ಕೋರ್ಸ್ ಗಳಿಗೆ ಸೀಟು ಲಭ್ಯವಿದೆ. ಹೊರ ಜಿಲ್ಲೆ ಹಾಗೂ ಜಿಲ್ಲೆಯ ತೀರ ಗ್ರಾಮೀಣ ಭಾಗದ (ನಿತ್ಯ ಬಂದು ಹೋಗಲು ಸಾಧ್ಯವಾಗದವರಿಗೆ) ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಸ್ಟೆಲ್ ವ್ಯವಸ್ಥೆಯೂ ಇದೆ. ಎಲ್ಲ ಆತ್ಯಾಧುನಿಕ ಉಪಕರಣಗಳನ್ನು ಹೊಂದಿರುವ ಕಂಪ್ಯೂಟರೈಸ್ಡ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೆಸ್ಕಾಂ ವ್ಯಾಪ್ತಿಯಲ್ಲಿ ಸಮಾನಾಂತರ ವಿದ್ಯುತ್ ವಿತರಣೆಗೆ ಟಾಟಾ ಪವರ್ ಕಾರ್ಪೊರೇಷನ್ ಲಿಮಿಟೆಡ್ ಸಲ್ಲಿಸಿರುವ ಅರ್ಜಿಯನ್ನು ರದ್ದುಪಡಿಸಬೇಕು ಹಾಗೂ ವಿದ್ಯುತ್ ಕ್ಷೇತ್ರದ ಖಾಸಗಿಕರಣವನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿ ಕರ್ನಾಟಕ ವಿದ್ಯುತ್ ಮಂಡಳಿಯ ನೌಕರರು ಮತ್ತು ಸಂಘಗಳ ಒಕ್ಕೂಟದ ಪದಾಧಿಕಾರಿಗಳು ಶುಕ್ರವಾರ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿ ರಣ್ ಕುಮಾರ್ ಕೊಡ್ಗಿ ಅವರಿಗೆ ಮನವಿ ಸಲ್ಲಿಸಿದರು. ಶಾಸಕರ ಕಚೇರಿಗೆ ಭೇಟಿ ನೀಡಿದ ನೌಕರರ ನಿಯೋಗವು ವಿದ್ಯುಚ್ಛಕ್ತಿ ಕಾಯ್ದೆ 108ನೇ ಪರಿಚ್ಛೇದದ ಪ್ರಾವಧಾನ ಬಳಸಿ ರಾಜ್ಯ ಸರಕಾರವು ಟಾಟಾ ಪವರ್ ಅರ್ಜಿಯನ್ನು ರದ್ದುಪಡಿಸುವಂತೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದೆ. ರೈತರು, ಬಡವರು, ಮಧ್ಯಮ ವರ್ಗ, ಮಹಿಳೆಯರು, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ-ಪಂಗಡ ಹಾಗೂ ಗ್ರಾಮೀಣ ಗ್ರಾಹಕರ ಹಿತದೃಷ್ಟಿಯಿಂದ ಮತ್ತು ಮೆಸ್ಕಾಂ ನೌಕರರ ಪರವಾಗಿ ಸರಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು. ಶಾಸಕರು ಇದ್ದಕ್ಕೆ ಪೂರಕವಾಗಿ ಸ್ಪಂದಿಸಿ ಸಂಬಂಧಪಟ್ಟ ಇಲಾಖೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆ / ಸಿ.ಬಿ.ಎಸ್.ಇ ಶಾಲೆಯಲ್ಲಿ ಶನಿವಾರ ಅಂತರಾಷ್ಟ್ರೀಯ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಹರಿ ಎಮ್. ಹಾಗೂ ಗೌರವ ಅತಿಥಿಗಳಾಗಿ ಆಗಮಿಸಿದ ಶಾಲಾ ಮ್ಯಾನೇಜಿಂಗ್ ಟ್ರಸ್ಟಿ ಪ್ರೇಮಾ ಕ್ಲಿನಿಕ್ ವೈದ್ಯರಾದ ಡಾ. ಕುಸುಮಾಕರ ಶೆಟ್ಟಿ ಅವರು ವಿವಿಧ ಯೋಗಾಸನಗಳನ್ನು ಮಾಡಿ ಯೋಗ ಪ್ರಾತ್ಯಕ್ಷತೆಯನ್ನು ನೀಡಿದರು. ಆರೋಗ್ಯ ಪೂರ್ಣ ಜೀವನ ನಡೆಸಲು ಮನುಷ್ಯನ ಶರೀರಕ್ಕೆ ಯೋಗ ಬಹಳ ಮುಖ್ಯ ಎಂದು ತಿಳಿಸಿದರು. ವಿವಿಧ ಕಾಯಿಲೆಗಳನ್ನು ತಡೆಗಟ್ಟುವ ವಿವಿಧ ಆಸನಗಳು ಹಾಗೂ ಅದರ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಯೋಗಾಭ್ಯಾಸವನ್ನು ಮೈಗೂಡಿಸಿಕೊಂಡಲ್ಲಿ ಆರೋಗ್ಯಪೂರ್ಣ ಜೀವನ ನಡೆಸಲು ಅನುಕೂಲವೆಂದು ತಿಳಿಸಿದರ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಮಾಡಿ ಯೋ ದಿನದ ಮಹತ್ವವನ್ನು ಅರಿತುಕೊಂಡರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಸಂದೀಪ ಪುತ್ರನ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಒತ್ತು ಕೊಡುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ನಿರ್ಧಾರವನ್ನು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಸ್ವಾಗತಿಸಿದ್ದಾರೆ. ಗೋವಾ ಹಾಗೂ ಕೇರಳ ಕರಾವಳಿಗಿಂತ ಕರ್ನಾಟಕದ ಕರಾವಳಿ ಪ್ರವಾಸೋದ್ಯಮಕ್ಕೆ ಅತ್ಯಂತ ಹೆಚ್ಚು ಅವಕಾಶಗಳನ್ನು ಹೊಂದಿದೆ. ಕರ್ನಾಟಕದ ಕರಾವಳಿಯ ಸಮುದ್ರ ಕಿನಾರೆಗಳು ಮಾತ್ರವಲ್ಲದೆ ನದಿಗಳ ಹಿನ್ನಿರು ಕೂಡ ಪ್ರವಾಸೋದ್ಯಮ ಅಭಿವೃದ್ಧಿಗೆ ಉಪಯುಕ್ತವಾಗಿವೆ. ಇವತ್ತು ಹಿನ್ನಿರು ಪ್ರವಾಸೋದ್ಯಮದಲ್ಲಿ ದೇಶದಲ್ಲೇ ಹೆಸರುವಾಸಿಯಾಗಿರುವ ಪ್ರದೇಶ ಕೇರಳದ ಕುಮಾರಗಂ. ಆದರೆ ಕರ್ನಾಟಕದ ಕರಾವಳಿಯಲ್ಲಿ ಕುಮಾರಗಂಕ್ಕಿಂತ ಹೆಚ್ಚು ಹಿನ್ನಿರು ಪ್ರವಾಸೋದ್ಯಮಕ್ಕೆ ಉಪಯುಕ್ತವಾದ ನದಿಗಳು ಇವೆ. ಇವುಗಳನ್ನು ಪ್ರವಾಸೋದ್ಯಮ ಕೇಂದ್ರಗಳಾಗಿ ಮಾರ್ಪಾಡು ಮಾಡುವ ಮಾನ್ಯ ಮುಖ್ಯಮಂತ್ರಿಗಳ ನಿರ್ಧಾರ ಕೇವಲ ಪ್ರವಾಸೋದ್ಯಮ ಅಭಿವೃದ್ಧಿ ಮಾತ್ರವಲ್ಲದೆ ಕರಾವಳಿಯ ಆರ್ಥಿಕ ಅಭಿವೃದ್ಧಿ ಕೂಡ ಸಹಾಯವಾಗುತ್ತದೆ. ಅದರ ಜೊತೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗ ಸೃಷ್ಟಿಯಾಗುವುದರಿಂದ ಲಕ್ಷಾಂತರ ದುಡಿಯುವ ಕೈಗಳಿಗೆ ಶಕ್ತಿ ಸಿಗುತ್ತದೆ. ಮಾನ್ಯ ಮುಖ್ಯಮಂತ್ರಿಗಳು ಕರಾವಳಿ ಪ್ರವಾಸೋದ್ಯಮದ ರೂಪುರೆಷೆಗಳನ್ನು ರಚಿಸುವಾಗ ಕರಾವಳಿಯ ಸಂಸ್ಕಾರ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಕ್ತದಾನವು ಜೀವ ಉಳಿಸುವ ಮಹತ್ವದ ಕಾರ್ಯವಾಗಿದೆ. ಅತ್ಯಮೂಲ್ಯ ರಕ್ತವನ್ನು ಸಂಗ್ರಹಿಸುವ ಮಹತ್ವದ ಕಾರ್ಯದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಸೇವೆ ಶ್ಲಾಘನೀಯ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶನಿವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಭಂಡಾರ್ಕಾರ್ಸ್ ಕಾಲೇಜಿನ ಸಹಯೋಗದಲ್ಲಿ ನಡೆದ ರಕ್ತದಾನಿಗಳ ದಿನಾಚರಣೆ – 2026ನ್ನು ಉದ್ಘಾಟಿಸಿ ಮಾತನಾಡಿದರು. ರಕ್ತದಾನವು ಜೀವ ಉಳಿಸುವ ನಿಟ್ಟಿನಲ್ಲಿ ಅತ್ಯಂತ ಪ್ರಾಮಾಣಿಕ ಕಾರ್ಯವಾಗಿದೆ., ಯುದ್ಧ ಹಾಗೂ ಅವಘಡಗಳ ಸಂದರ್ಭದಲ್ಲಿ ಅಗತ್ಯ ರಕ್ತವನ್ನು ನೀಡುವುದು ಮತ್ತು ಆರೋಗ್ಯ ಸೇವೆಗಳ ಮೂಲಕ ರೆಡ್ ಕ್ರಾಸ್ ಸಂಸ್ಥೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದೆ. ಜಗತ್ತಿನಲ್ಲಿ ಶಾಂತಿ, ನೆಮ್ಮದಿ, ಪ್ರೀತಿ, ಮತ್ತು ಮಾನವೀಯತೆಯನ್ನು ಪಸರಿಸುವ ಕೆಲಸವನ್ನು ರೆಡ್ ಕ್ರಾಸ್ ಸಂಸ್ಥೆ ಮಾಡುತ್ತಿದೆ. ರಕ್ತದಾನದ ಬಗ್ಗೆ ಸಾಕಷ್ಟು ಜಾಗೃತಿ, ಮೂಡಿಸುವುದು ಮತ್ತು ರಕ್ತದಾನಿಗಳ ಸಂಖ್ಯೆ ಹೆಚ್ಚಾಗಲಿ ಎಂದು ಆಶಿಸಿದರು. …
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿಯ ಉಪ್ಪೂರು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು ಎಂ.ಟೆಕ್ / ಬಿ.ಇ ( ಮೆಕ್ಯಾನಿಕಲ್ ಇಂಜಿನಿಯರಿಂಗ್, ಇ&ಇ, ಇ&ಸಿ) ಎಂ.ಎಸ್ಸಿ (ಎಲೆಕ್ಟಾçನಿಕ್ಸ್, ಫಿಸಿಕ್ಸ್) ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಹತ್ತಿರ, ಕೊಳಲಗಿರಿ ಉಪ್ಪೂರು ಉಡುಪಿ, ದೂರವಾಣಿ ಸಂಖ್ಯೆ: 9880510585, 8618760169, ಇ-ಮೇಲ್: gttcudupi@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿಯಲ್ಲಿ ಜಿಲ್ಲೆಯ ಕಂದಾಯ ಉಪವಿಭಾಗಕ್ಕೆ ಒಂದರಂತೆ ವೃದ್ಧಾಶ್ರಮವನ್ನು ಪ್ರಾರಂಭಿಸಲು ಅರ್ಹ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೃದ್ಧಾಶ್ರಮ ಪ್ರಾರಂಭಿಸುವ ಸ್ವಯಂ ಸೇವಾ ಸಂಸ್ಥೆಯು ಅಸ್ತಿತ್ವಕ್ಕೆ ಬಂದು ಕನಿಷ್ಠ 2 ವರ್ಷಗಳಾಗಿರಬೇಕು ಹಾಗೂ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಕಛೇರಿ, ರಜತಾದ್ರಿ, ಮಣಿಪಾಲ ಇಲ್ಲಿಂದ ಪಡೆದು ಸೂಕ್ತ ಲಗತ್ತುಗಳೊಂದಿಗೆ ಭರ್ತಿ ಮಾಡಿ ದ್ವಿಪ್ರತಿಯಲ್ಲಿ ಈ ಕಚೇರಿಗೆ ಜೂನ್.30 ರ ಒಳಗಾಗಿ ಸಲ್ಲಿಸಬಹುಧಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://dwdsc.karnataka.gov.in ಅಥವಾ ಇಲಾಖೆಯ ದೂರವಾಣಿ ಸಂಖ್ಯೆ: 0820-2574810, 2574811 ಗೆ ಕರೆಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಕೆನರಾ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ಕಛೇರಿಯನ್ನು ಖುದ್ದಾಗಿಯೂ ಸಂಪರ್ಕಿಸಬಹುದಾಗಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಶಿಕ್ಷಕರಾದ ಚಂದ್ರಶೇಖರ್ ಲಗಳೂರು ಅವರಿಗೆ 2006-07 ಹಳೆ ವಿದ್ಯಾರ್ಥಿಗಳಿಂದ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ ಇತ್ತೀಚಿಗೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಅವರು ಅಧ್ಯಕ್ಷತೆ ವಹಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀ ಲಕ್ಷ್ಮಿ ಹಾಗೂ ವೀರೇಶ್ ಮತ್ತು 2006-2007 ಬ್ಯಾಚಿನ ಹಳೆ ವಿದ್ಯಾರ್ಥಿಗಳಾದ ಶ್ರೀಕಾಂತ್, ನಾಗರಾಜ್, ರಾಘವೇಂದ್ರ, ವಿಘ್ನೇಶ್, ಯೋಗೇಶ್, ಗಿರೀಶ್, ಪ್ರಸನ್ನ, ಸತೀಶ್, ಮನಿಷಾ, ಆಶಾ, ಸುಮಿತ್ರ, ಶರಾವತಿ, ಅಶ್ವಿನಿ, ಪೂರ್ಣಿಮಾ ಉಪಸ್ಥಿತರಿದ್ದರು. ಉಪನ್ಯಾಸಕ ಗಣೇಶ್ ಅವರು ಕಾರ್ಯಕ್ರಮವನ್ನು ನಿರೂಸಿ, ಉಪನ್ಯಾಕಿ ಸಾವಿತ್ರಿ ಸ್ವಾಗತಿಸಿ, ಉಪನ್ಯಾಸಕ ನಾಗೇಶ್ ಧನ್ಯವಾದ ಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕು ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಶಿಥಿಲಗೊಂಡ ಹಳೆ ಕಟ್ಟಡ ತೆರವು ಮಾಡಿ, ಹೊಸ ಕಟ್ಟಡ ನಿರ್ಮಾಣ ಹಾಗೂ ಹೆಚ್ಚುವರಿ ಅಗತ್ಯದ 30 ಕೆಎಲ್ಡಿ ಸಾಮರ್ಥ್ಯದ ಎಸ್ಟಿಪಿ ರಚನೆ ಸಂಬಂಧ ಇಲಾಖೆಯ ಎಂಜಿನಿಯರ್ಗಳು ಪರಿಶೀಲಿಸಿ, ಅಂದಾಜು ಪಟ್ಟಿಯ ವರದಿ ಸಲ್ಲಿಸಬೇಕು ಎಂದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದ್ದಾರೆ. ಅವರು ಕುಂದಾಪುರದ ಉಪ ವಿಭಾಗೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಆರೋಗ್ಯ ರಕ್ಷಾ ಸಮಿತಿಯ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಮಾಲಿನ್ಯ ಮಂಡಳಿಯ ಕಾರ್ಯಸೂಚಿ ಪ್ರಕಾರ 55 ಕೆಎಲ್ ಡಿ ಸಾಮರ್ಥ್ಯದ ಎಸ್ಟಿಪಿ ಇರಬೇಕು. ಸದ್ಯ 25 ಕೆಎಲ್ಡಿ ನಿರ್ವಹಣೆಯಲ್ಲಿದೆ. ಅದಕ್ಕಿಂತ ಹಿಂದಿನ 30 ಕೆಎಲ್ಡಿಯ ಎಸ್ಟಿಪಿ ಕಾರ್ಯ ನಿರ್ವಹಿಸುತ್ತಿಲ್ಲ. ಅದರ ದುರಸ್ತಿ, ಮೋಟಾರು, ಪೈಪ್ಲೈನ್ಗೆ ಅಂದಾಜು 20 ಲಕ್ಷ ರೂ. ಅಗತ್ಯವಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಚಂದ್ರ ಮರಕಾಲ ಸಭೆಗೆ ತಿಳಿಸಿದರು. ಈ ಬಗ್ಗೆ ಇಂಜಿನಿಯರ್ಗಳು ವರದಿ ಸಲ್ಲಿಸಲಿ. ಆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಇತ್ತೀಚೆಗೆ ಸಂಸ್ಕೃತ ಭಾಷಾ ಮಾಹಿತಿ ಕಾರ್ಯಾಗಾರವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಬಾರಕೂರಿನ ನ್ಯಾಷನಲ್ ಹೈಸ್ಕೂಲಿನ ಮುಖ್ಯ ಶಿಕ್ಷಕಿಯಾದ ಹೇಮಾವತಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಬಾರಕೂರಿನ ನ್ಯಾಷನಲ್ ಹೈಸ್ಕೂಲು, ಸಂಸ್ಕೃತ ಹಾಗೂ ಇಂಗ್ಲಿಷ್ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಜಿ.ಪಿ. ಪ್ರಭಾಕರ ತುಮರಿ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಮಾಹಿತಿಯನ್ನು ನೀಡಿದರು. ಸುಮಾರು ಒಂದು ಗಂಟೆಗಳ ಕಾಲ ನಡೆದ ತಮ್ಮ ಉಪನ್ಯಾಸದಲ್ಲಿ ಸಂಸ್ಕೃತ ಭಾಷೆಯ ಇತಿಹಾಸ, ಅದರ ಬೆಳವಣಿಗೆಯ ಪಥ, ಇತರೆ ಭಾಷೆಗಳ ಮೇಲೆ ಸಂಸ್ಕೃತದ ಪ್ರಭಾವ, ಭಾರತೀಯ ಜ್ಞಾನ ಪರಂಪರೆಯಲ್ಲಿ ಸಂಸ್ಕೃತದ ಸ್ಥಾನಮಾನ, ನಿಸರ್ಗಸ್ನೇಹಿ ಜೀವನಕ್ಕೆ ಪೂರಕವಾದ ಆಯುರ್ವೇದದ ಅಂಶಗಳು ಹಾಗೂ ನಮ್ಮ ದೈನಂದಿನ ಜೀವನದಲ್ಲಿ ಬಳಕೆಯಾಗುವ ಸಂಸ್ಕೃತ ಪದಗಳ ಮಹತ್ವದ ಕುರಿತು ವಿವರವಾಗಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಆಚಾರ್ಯ ಅವರು ಸಂಸ್ಕೃತ ಶ್ಲೋಕವನ್ನು ಪಠಿಸುವ ಮೂಲಕ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಾಗಾರದ ರೂಪುರೇಷೆಗಳನ್ನು…
