Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ದುಬೈ: ಯು.ಎ.ಇ ಸೇರಿದಂತೆ ಕೊಲ್ಲಿ ರಾಷ್ಟ್ರಗಳಲ್ಲಿ ಕೋರೋನ ಭೀತಿ ಹೆಚ್ಚುತ್ತಿರುವ ಸಂದರ್ಭದಲ್ಲಿ ಅಲ್ಲಿನ ಕೆಲವು ಕನ್ನಡಿಗರು ಆರೋಗ್ಯ, ಉದ್ಯೋಗ ಕಳೆದುಕೊಳ್ಳುವ ಆತಂಕ ಸೇರಿದಂತೆ ವಿವಿಧ ಸಮಸ್ಯೆಗಳನ್ನು  ಎದುರಿಸುತ್ತಿದ್ದು, ಅವರು ಕರ್ನಾಟಕಕ್ಕೆ ಮರಳಲು ಶೀಘ್ರ ವಿಮಾನಯಾನ ಸೇವೆ ಆರಂಭಿಸುವ ಕುರಿತು ರಾಜ್ಯ ಸರಕಾರ ಗಮನಹರಿಸುವಂತೆ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ – ಯುಎಇ, ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದೆ. ಕೊಲ್ಲಿ ರಾಷ್ಟ್ರಗಳಲ್ಲಿರುವ ಕೆಲವು ಕನ್ನಡಿಗರು, ಪ್ರವಾಸಕ್ಕಾಗಿ ಬಂದಿರುವ ಹಿರಿಯರು, ಉದ್ಯೋಗ ಆರಿಸಿ ಬಂದವರು ಸೇರಿದಂತೆ ಹಲವರು, ವಿಮಾನಯಾನ ಸೇವೆ ಸ್ಥಗಿತಗೊಂಡಿರುವುದರಿಂದ ಭಾರತಕ್ಕೆ ಮರಳಲು ಸಾಧ್ಯವಾಗದೆ ಕೊರೋನಾ ಆತಂಕ ಎದುರಿಸುತ್ತಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಕ್ವಾರಂಟೈನ್‌ಗೆ ಸಹಕಾರ ನೀಡುವ ಭರವಸೆ: ಕರ್ನಾಕಕ್ಕೆ ಮರಳುವ ಅನಿವಾಸಿ ಕನ್ನಡಿಗರಿಗೆ ಕ್ವಾರಂಟೈನ್ ವ್ಯವಸ್ಥೆ ಮಾಡಲು ರಾಜ್ಯ ಸರಕಾರಕ್ಕೆ ಅಗತ್ಯವಿರುವ ಆರ್ಥಿಕ ನೆರವನ್ನು ಅನಿವಾಸಿ ಉದ್ಯಮಿಗಳು, ಕನ್ನಡಪರ ಸಂಸ್ಥೆಗಳು, ಕನ್ನಡಪರ ಸಂಘಟನೆಗಳು, ಕನ್ನಡಪರ ಸಾಮಾಜಿಕ ಕಾರ್ಯಕರ್ತರು ಇವರೆಲ್ಲರೊಂದಿಗೆ ಕೆಎನ್‌ಆರ್‌ಐ – ಯುಎಇ ಪೋರಂ ಮೂಲಕ ಕೈಜೋಡಿಸಿ ಸಾಧ್ಯವಾಗುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊರೋನಾ ತಡೆಗಟ್ಟಲು ಅವಿರತವಾಗಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಆಲೂರು ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಪ್ರೋತ್ಸಾಹಧನ ನೀಡಿ, ಅವರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷರಾದ ಮಂಜಯ್ಯ ಶೆಟ್ಟಿ, ಉಪಾಧ್ಯಕ್ಷರಾದ ಎನ್. ಸಂತೋಷ ಕುಮಾರ್ ಶೆಟ್ಟಿ ನಿರ್ದೇಶರುಗಳಾದ ಚಂದ್ರಶೇಖರ ಶೆಟ್ಟಿ, ರತ್ನಾಕರ ಆಚಾರ್ಯ, ಗಂಗಾಧರ ಆಚಾರ್ಯ, ಸುಬ್ಬ ಪೂಜಾರಿ, ಎಚ್. ಶಂಕರ ಶೆಟ್ಟಿ, ಹರೀಶ್, ಲಲಿತಾ ಕುಲಾಲ್, ಅಕ್ಕಣಿ ಪೂಜಾರ‍್ತಿ, ಅಮರನಾಥ ಶೆಟ್ಟಿ, ಸುರೇಂದ್ರ, ರಾಜೇಶ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವರಾಮ ಯಡ್ತರೆ, ವ್ಯವಸ್ಥಾಪಕರಾದ ಸಂಜೀವ ಪೂಜಾರಿ ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಲಯನ್ಸ್ ಕ್ಲಬ್ ಬಂದೂರು -ಉಪ್ಪುಂದ, ರೋಟರಿ ಕುಂದಾಪುರ ಮಿಡ್‌ಟೌನ್ ಹಾಗೂ ಕೊಕ್ಕೇಶ್ವರೀ ಭಜನಾ ಮಂಡಳಿ ವತಿಯಿಂದ ಹಳಗೇರಿಯ ನಿವಾಸಿಗಳಿಗೆ ಇತ್ತಿಚಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಲಾಯಿತು. ಕಿಟ್ ವಿತರಿಸಿದ ಬೈಂದೂರು ಪೊಲೀಸ್ ಉಪನಿರೀಕ್ಷಕಿ ಸಂಗೀತಾ ಮಾತನಾಡಿ, ಜನರ ಸಹಕಾರದಿಂದ ಮಾತ್ರವೇ ಕೊರೋನಾ ಹರಡುವಿಕೆ ತಡೆಗಟ್ಟಲು ಸಾಧ್ಯವಿದೆ. ಪೊಲೀಸರು, ವೈದ್ಯರು ಸೇರಿದಂತೆ ಹಲವರು ಜನರ ಸುರಕ್ಷತೆಗಾಗಿಯೇ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗಾಗಿ ಜನರು ಮನೆಯಲ್ಲಿದ್ದು ಆರೋಗ್ಯದ ಜಾಗೃತಿ ಮಾಡಿಕೊಳ್ಳುವುದು ಅಗತ್ಯ ಎಂದರು. ಹಳಗೇರಿ ಹಾಗೂ ಸುತ್ತುಮುತ್ತಲಿನ ಪ್ರದೇಶ ಸುಮಾರು 60 ಮಹಿಳೆಯರಿಗೆ ರೂ. 60,000 ಮೌಲ್ಯದ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರಭಾಕರ ಶೆಟ್ಟಿ, ರೋಟರಿ ಕ್ಲಬ್ ಕುಂದಾಪುರ ಮಿಡ್‌ಟೌನ್ ಅಧ್ಯಕ್ಷ ನಳಿನ್ ಕುಮಾರ್ ಶೆಟ್ಟಿ, ಲಯನ್ಸ್ ಕ್ಲಬ್ ಕೋಶಾಧಿಕಾರಿ ಸುನೀಲ್ ಪೂಜಾರಿ, ಜಯಶೀಲ ಶೆಟ್ಟಿ, ಗೋಪಾಲ ಶೆಟ್ಟಿ, ರಾಜೇಂದ್ರ ಹಳಗೇರಿ, ರವಿರಾಜ್ ಶೆಟ್ಟಿ, ರಾಮಕೃಷ್ಣ ಕಾರಂತ, ಶಿಕ್ಷಕ ವಿಶ್ವನಾಥ ಶೆಟ್ಟಿ ಮೊದಲಾದವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಉಪವಿಭಾಗ ವ್ಯಾಪ್ತಿಯ ಯಾವುದೇ ಪ್ರದೇಶಗಳನ್ನೂ ಸೀಲ್‌ಡೌನ್ ಮಾಡುವುದಿಲ್ಲ. ಈಗಾಗಲೇ ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯ ಗಡಿಯಲ್ಲಿ ಮಾತ್ರವೇ ಭಾಗಶಃ ಸೀಲ್‌ಡೌನ್ ಮಾಡಲಾಗಿದೆ. ಈ ಬಗ್ಗೆ ಗೊಂದಲ ಬೇಡ ಎಂದು ಕುಂದಾಪುರ ಎಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ. ಅವರು ತಮ್ಮ ಕಛೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತರು ಚೇತರಿಸಿಕೊಂಡಿದ್ದು, ಜಿಲ್ಲೆಯ ಒಳಗೆ ಕೊರೊನಾ ಭೀತಿಯಿಲ್ಲ. ಆದರೆ ಹೊರ ಜಿಲ್ಲೆಗಳಿಂದ ಬಂದವರಿದ್ದರೆ ಅಂತಹ ಸಂದರ್ಭದಲ್ಲಿ ಅಚಾತುರ್ಯ ಸಂಭವಿಸಬಾರದು ಎನ್ನುವ ದೃಷಿಯಿಂದ ಲಾಕ್‌ಡೌನ್ ಮುಂದುವರೆಯಲಿದೆ. ಆದರೆ ಸೀಲ್‌ಡೌನ್ ಮಾಡುವ ಯಾವುದೇ ಪ್ರಸ್ತಾಪಗಳಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. Watch Video ಕುಂದಾಪುರ ಪೊಲೀಸ್ ಉಪವಿಭಾಗದ ವ್ಯಾಪ್ತಿಯ ಕೆಲವೊಂದು ಪ್ರದೇಶಗಳಲ್ಲಿ ದಿನಬಳಕೆಯ ವಸ್ತುಗಳ ಖರೀದಿ ಕಷ್ಟವಾಗುತ್ತಿದೆ ಎನ್ನುವ ದೂರುಗಳು ಕೇಳಿ ಬಂದಿವೆ. ಇನ್ನು ಕೆಲವು ಕಡೆ ಹಿರಿಯ ನಾಗರಿಕರಿಗೆ ಖರೀದಿಗೆ ಬರುವುದು ಸಾಧ್ಯವಾಗುತ್ತಿಲ್ಲ. ವಿಕಲಚೇತನರೂ ಸಮಸ್ಯೆಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ ಗ್ರಾಮೀಣ ಭಾಗದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು : ಜಾತ್ಯತೀತ ಜನತಾ ಪಕ್ಷದ ಧುರೀಣ ಮರವಂತೆಯ ಮನ್ಸೂರ್ ಇಬ್ರಾಹಿಂ ಮತ್ತು ಅವರ ಸಹೋದರರು ಲಾಕ್‌ಡೌನ್‌ನಿಂದ ಬಾಧಿತರಾದ ಸುಮಾರು 250 ಕುಟುಂಬಗಳಿಗೆ ಕೆಲವು ದಿನಗಳಿಗಾಗುವ ದವಸ, ಧಾನ್ಯ ಮತ್ತು ಅಡುಗೆ ಸಾಮಗ್ರಿಗಳಿರುವ ಕಿಟ್‌ಗಳನ್ನು ವಿತರಿಸಿದರು. ಅದರ ಭಾಗವಾಗಿ ಅಲ್ಲಿನ ೨೪ ರಿಕ್ಷಾ ಚಾಲಕರಿಗೆ ಶನಿವಾರ ಕಿಟ್ ಹಸ್ತಾಂತರಿಸುವ ಮೂಲಕ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್. ಜನಾರ್ದನ ವಿತರಣೆಗೆ ಚಾಲನೆ ನೀಡಿ ಮನ್ಸೂರ್ ಕುಟುಂಬದ ಮಾನವೀಯ ಔದಾರ್ಯವನ್ನು ಶ್ಲಾಘಿಸಿದರು. ಊರಿನ ಆಶಾ ಕಾರ್ಯಕರ್ತರಿಗೆ ಹಾಗೂ ಆಯ್ದ ಬಡ ಕುಟುಂಬಗಳ ಮನೆಗೆ ತೆರಳಿ ಮನ್ಸೂರ್ ಸಹೋದರರು ಕಿಟ್‌ಗಳನ್ನು ನೀಡಿದರು.

Read More

ಕುಂದಾಪುರ ಉಪವಿಭಾಗದ 65ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎ.13ರಿಂದಲೇ ಜಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರೋನಾ ವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ವಿಧಿಸಲಾಗಿರುವ ಲಾಕ್‌ಡೌನ್ ಹೊರತಾಗಿಯು ಅಗತ್ಯ ವಸ್ತುಗಳ ಖರೀದಿಗಾಗಿ ಅಂಗಡಿ-ಮಾರುಕಟ್ಟೆಗೆ ಜನರು ತೆರಳುತ್ತಿರುವುದನ್ನು ತಡೆಯುವ ಸಲುವಾಗಿ ಕುಂದಾಪುರ ಉಪವಿಭಾಗ ವ್ಯಾಪ್ತಿಯಲ್ಲಿ ಕೋವಿಡ್ ಟಾಸ್ಕ್ ಪೋರ್ಸ್ ಮೂಲಕ ಮನೆ ಬಾಗಿಲಿಗೇ ದಿನಬಳಕೆಯ ಸಾಮಾಗ್ರಿಗಳನ್ನು ತಲುಪಿಸುವ ಪ್ರಾಯೋಗಿಕ ಯೋಜನೆಯನ್ನು ಎಪ್ರಿಲ್ 13ರ ಸೋಮವಾರದಿಂದಲೇ ಜಾರಿಗೆ ತರಲಾಗುತ್ತಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಉಪವಿಭಾಗದ ಎಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದು, ಉಡುಪಿ ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹ್ಲೋಟ್ ಅವರ ಮಾರ್ಗದರ್ಶನದಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕು ಇಓ, ಗ್ರಾಮ ಪಂಚಾಯತಿಗಳ ಪಿಡಿಓ ಹಾಗೂ ಪ್ರತಿ ವಾರ್ಡಿನ ಒಬ್ಬರು ಸದಸ್ಯರನ್ನೊಳಗೊಂಡ ಕೋವಿಡ್ -19 ಟಾಸ್ಕ್ ಪೋರ್ಸ್ ಮೂಲಕ ಮನೆ ಬಾಗಿಲಿಗೆ ಅಗತ್ಯ ವಸ್ತುಗಳನ್ನು (ತರಕಾರಿ & ದಿನಸಿ) ತಲುಪಿಸಲಾಗುತ್ತದೆ. ಹೋಮ್ ಡೆಲಿವರಿ ಹೇಗೆ? ಎಲ್ಲಾ 65 ಗ್ರಾಮ ಪಂಚಾಯತ್‌ನ ಎಲ್ಲಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಪರಿಸರದ ಸೋಶಿಯಲ್ ಮೀಡಿಯಾ ಪೇಜ್ ‘ಟ್ರೋಲ್ ಕುಂದಾಪ್ರದ್ ಕುಡಿ’ ಕುಂದಾಪುರದ ಪ್ರತಿಭೆಗಳನ್ನು ಬೆಳಕಿಗೆ ತರುವ ಹಾಗೂ ಕುಂದಗನ್ನಡ ಪಸರಿಸುವ ನಿಟ್ಟಿನಲ್ಲಿ ಕುಂದಗನ್ನಡ ವಿಡಿಯೋ ಚಾಲೆಂಜ್ ಎಂಬ ಸೋಶಿಯಲ್ ಮೀಡಿಯಾ ಅಭಿಯಾನವನ್ನು ಆರಂಭಿಸಿದೆ. ‘ಟ್ರೋಲ್ ಕುಂದಾಪ್ರದ್ ಕುಡಿ’ಯ ಈ ವಿಭಿನ್ನ ಪ್ರಯತ್ನ ಕುಂದಗನ್ನಡ ವೀಡಿಯೋ ಚಾಲೆಂಜ್‌ಗೆ ಈಗಾಗಲೇ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಕುಂದಗನ್ನಡ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಹೆಸರು ಮಾಡಿರುವ ಕುಂದಾಪುರ ಭಾಗದ ಕಲಾವಿದರೂ ಕೂಡ ಕುಂದಾಪ್ರ ಕನ್ನಡ ಚಾಲೆಂಜ್ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ. ಕುಂದಾಪ್ರ ಕನ್ನಡ ಚಾಲೆಂಜ್‌ನಲ್ಲಿ ಭಾಗವಹಿಸುವವರು ಸ್ವದೇಶಿ ಆಪ್ ಹಾಗೂ ಮೊಬೈಲ್ ಕ್ಯಾಮರಾ ಬಳಸಿ ವಿಡಿಯೋ ಮಾಡಿ ಎಂದು ಪೇಜ್ ಅಡ್ಮಿನ್‌ಗಳು ಮನವಿ ಮಾಡಿಕೊಂಡಿದ್ದಾರೆ. ಜನರು ಬಿಡುವಿನ ಸಮಯದಲ್ಲಿ ಮನೋರಂಜನೆಗಾಗಿ ವಿಡಿಯೋ ಮಾಡಲು ಬೇರೆ ಬೇರೆ ಭಾಷೆಗಳಲ್ಲಿನ ಡೈಲಾಗ್ ಅಥವಾ ಹಾಡುಗಳಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಅದೇ ಪ್ರಯತ್ನವನ್ನು ನಮ್ಮ ಕುಂದಗನ್ನಡದಲ್ಲಿ ಮಾಡಿದಾಗ ಇತರರಿಗೂ…

Read More

ಕುಂದಾಪ್ರ ಡಾಟ್ ಕಾಂ ವರದಿ. ಉಡುಪಿ: ಬ್ರಹ್ಮಾವರದಲ್ಲಿನ ಮನೆಯಲ್ಲಿ ಇಬ್ಬರೇ ಇರುವ ವೃದ್ಧ ದಂಪತಿ, ಲಾಕ್ ಡೌನ್ ಕಾರಣ ಅಂಗಡಿಗಳು ಕ್ಲೋಸ್, ಮನೆಯಿಂದ ಹೊರ ಹೋಗುವ ಹಾಗಿಲ್ಲ, ಗಂಡನಿಗೆ ಸಕ್ಕರೆ ಕಾಯಿಲೆ ಜೊತೆಗೆ ಹೃದಯ ಸಂಬಂದಿ ಸಮಸ್ಯೆ, ದಂಪತಿಗೆ ಬ್ರೆಡ್ ಮತ್ತು ರಸ್ಕ್ ಅವಶ್ಯಕತೆಯಿದೆ, ಈ ಬಗ್ಗೆ ಸಮಸ್ಯೆ ಕೋರಿದ ದಂಪತಿಗೆ 20 ನಿಮಿಷದಲ್ಲಿ ಬ್ರೆಡ್ ಮತ್ತು ರಸ್ಕ್ ನೊಂದಿಗೆ ಅವರು ಕೋರಿದ ಇತರೆ ಅಗತ್ಯ ವಸ್ತುಗಳು ಯುವತಿಯೊಬ್ಬರಿಂದ ಪೂರೈಕೆಯಾಗುತ್ತದೆ.. ಕಾರ್ಕಳದ ಗ್ರಾಮೀಣ ಪ್ರದೇಶದಲ್ಲಿನ ರೋಗಿಗೆ ಅಗತ್ಯ ಔಷಧಿಗಳು ತುರ್ತಾಗಿ ಬೇಕಿದೆ, ಆ ಔಷದಗಳು ಉಡುಪಿಯಲ್ಲಿ ಮಾತ್ರ ದೊರೆಯುವುದು, ಮನೆಯಲ್ಲಿ ಉಡುಪಿಗೆ ಹೋಗಿ ಔಷಧ ತರುವ ವ್ಯಕ್ತಿಗಳು ಯಾರೂ ಇಲ್ಲ, ರೋಗಿಯ ಸಮಸ್ಯೆ ಅರಿತ ಯುವಕನಿಂದ ಅವರಿಗೆ ಸಕಾಲದಲ್ಲಿ ಅಗತ್ಯ ಔಷಧಗಳು ಪೂರೈಕೆಯಾಗುತ್ತವೆ.. ದಿನಸಿ ವಸ್ತುಗಳು ಮತ್ತು ಪಡಿತರ ವಿತರಣೆ ನಡೆಯುತ್ತಿದೆ, ಸರದಿಯಲ್ಲಿ ನಿಂತಿರುವ ಸಾರ್ವಜನಿಕರಿಲ್ಲಿ ಸಾಮಾಜಿಕ ಅಂತರ ಎಂಬುದೇ ಇಲ್ಲ, ಆದರೆ ಅಲ್ಲಿಗೆ ಆಗಮಿಸುವ ಒಬ್ಬ ವ್ಯಕ್ತಿ ಸರದಿಯಲ್ಲಿದ್ದ ಎಲ್ಲರಿಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೊರೋನಾ ವೈರಸ್ ತಡೆಗಟ್ಟುವಲ್ಲಿ ಉಡುಪಿ ಜಿಲ್ಲೆಯಲ್ಲಿ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮದಿಂದಾಗಿ ಜಿಲ್ಲೆಯಲ್ಲಿ ವೈರಸ್ ಸರಪಣಿ ಕಡಿತಗೊಂಡು ಸಕಾರಾತ್ಮಕದ ಸ್ಪಂದನೆ ದೊರಕಿದ್ದು, ಜಿಲ್ಲೆಗೆ ದೊಡ್ಡ ರಿಲೀಫ್ ದೊರಕಿದಂತಾಗಿದೆ. ಜಿಲ್ಲೆಯಲ್ಲಿ ಈವರೆಗೆ ವರದಿಯಾಗಿದ್ದ ಮೂರು ಕೊರೋನಾ ಪಾಸಿಟಿವ್ ಪ್ರಕರಣಗಳಲ್ಲಿ ಮೂವ ವ್ಯಕ್ತಿಗಳೂ ಗುಣಮುಖರಾಗಿದ್ದು ಸದ್ಯದಲ್ಲೇ ಅವರನ್ನು ಬಿಡುಗಡೆಗೊಳಿಸಲಾಗುತ್ತಿದೆ. ಆದರೆ ಜಿಲ್ಲೆಯ ಎಲ್ಲಾ ಗಡಿಗಳನ್ನು ಈಗಾಗಲೇ ಸೀಲ್‌ಡೌನ್ ಮಾಡಲಾಗಿದ್ದು, ಜಿಲ್ಲೆಗೆ ಬರುವುದು ಮತ್ತು ಜಿಲ್ಲೆಯಿಂದ ತೆರಳುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. ಲಾಕ್‌ಡೌನ್ ಘೋಷಣೆಯಾದ ದಿನದಿಂದ ಜಿಲ್ಲೆಯಲ್ಲಿ ಕೊರೋನಾ ತಡೆಗಟ್ಟುವಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡ ಮುತುವರ್ಜಿಯಿಂದಲೇ ಕಾರ್ಯನಿರ್ವಹಿಸಿದ್ದು, ಲಾಕ್‌ಡೌನ್ ಆದೇಶ ಪಾಲನೆಗೆ ಒತ್ತು ನೀಡುವುದರ ಜೊತೆಗೆ, ಜನಸಾಮಾನ್ಯರಿಗೆ ಆಗುತ್ತಿದ್ದ ತೊಂದರೆ ನಿವಾರಣೆಗೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಈ ಎಲ್ಲಾ ಕಟ್ಟುನಿಟ್ಟಿನ ಕ್ರಮದಿಂದಾಗಿ ಉಡುಪಿ ಜಿಲ್ಲೆ ದೊಡ್ಡ ಗಂಡಾಂತರದಿಂದ ಪಾರಾಗಿದ್ದು, ಲಾಕ್‌ಡೌನ್ ಬಳಿಕವೂ ಹಂತ ಹಂತವಾಗಿ ನಿರ್ಬಂಧ ತೆರವುಗೊಳಿಸಿದರೆ ಕೊರೋನಾ ಆತಂಕದಿಂದ ಸಂಪೂರ್ಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಲಾಕ್‌ಡೌನ್ ಆದೇಶ ಉಲ್ಲಂಘಿಸಿ, ಪಡುಕೋಣೆಯ ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಗ್ಗೆ ಪ್ರಕರಣ ದಾಖಲಾಗಿದೆ. ಬೈಂದೂರು ತಾಲೂಕಿನ ನಾಡ ಗ್ರಾಮದ ಪಡುಕೋಣೆ ಸಂತ ಅಂತೋನಿ ಚರ್ಚ್‌ನಲ್ಲಿ ಜನರು ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿರುವ ಬಗ್ಗೆ ಸಾರ್ವಜನಿಕ ದೂರವಾಣಿ ಕರೆಯ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಾರ್ಥನೆ ಸಲ್ಲಿಸುತ್ತಿದ್ದ ಚರ್ಚ್‌ನ ಫಾದರ್ ಫ್ರೆಡ್ ಮಸ್ಕರಿಯನ್ ಹಾಗೂ ಇತರ ಆರು ಮಂದಿಯ ಮೇಲೆ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಕೊರೋನಾ ವೈರಸ್ ತಡೆಗಟ್ಟುವಿಕೆ ನಿಟ್ಟಿನಲ್ಲಿ ಜಾತ್ರೆ, ಸಭೆ ಸಮಾರಂಭಗಳು ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ನಿಷೇಧಿಸಿ ಹೊರಡಿಸಿರುವ ಆದೇಶವನ್ನು ಉಲ್ಲಂಘಿಸಿ, ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದರಿಂದ ಬೈಂದೂರು ತಹಶಿಲ್ದಾರ್ ಬಸಪ್ಪ ಪಿ. ಪೂಜಾರಿ ಅವರು ನೀಡಿದ ದೂರಿನ್ವಯ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/

Read More