ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಗಂಗೊಳ್ಳಿಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ಇಕೋ ಕ್ಲಬ್ನ ವಿದ್ಯಾರ್ಥಿಗಳು ಗಂಗೊಳ್ಳಿ ಗ್ರಾಮದ ಎಸ್.ಎಲ್.ಆರ್.ಎಂ. ಘಟಕಕ್ಕೆ ಗುರುವಾರ ಭೇಟಿ ನೀಡಿದರು. ಎಸ್.ಎಲ್.ಆರ್.ಎಂ. ಘಟಕದಲ್ಲಿ ಘನ ಮತ್ತು ದ್ರವ ತ್ಯಾಜ್ಯಗಳನ್ನು ವಿಂಗಡಿಸಿ, ಸ್ವಚ್ಛಗೊಳಿಸುವ ವಿಧಾನ, ಘಟಕದ ಕಾರ್ಯನಿರ್ವಹಣೆ, ತ್ಯಾಜ್ಯ ಸಂಗ್ರಹ ಮತ್ತಿತರ ಚಟುವಟಿಕೆಗಳನ್ನು ವೀಕ್ಷಿಸಿ, ಇದರ ಸಮಗ್ರ ಮಾಹಿತಿ ಪಡೆದುಕೊಂಡರು. ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದ ಗ್ರಾಪಂ ಸಿಬ್ಬಂದಿ ಉದಯಕುಮಾರ್, ಸ್ವಚ್ಛ ಸುಂದರ ಪರಿಸರ ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ನಾವು ಮನೆಯಲ್ಲಿರುವ ತ್ಯಾಜ್ಯಗಳನ್ನು ನದಿ, ಸಮುದ್ರಕ್ಕೆ ಎಸೆಯುವುದರಿಂದ ಜಲಚರಗಳಿಗೆ ಹಾನಿಯಾಗುತ್ತದೆ. ನೀರು ಮಲಿನವಾಗಿ ಕಾಯಿಲೆ ಬರುವ ಸಾಧ್ಯತೆ ಇದೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಇತರರಿಗೆ ಮಾದರಿಯಾಗಬೇಕು ಎಂದು ಹೇಳಿದ ಅವರು, ಎಸ್.ಎಲ್.ಆರ್.ಎಂ ಘಟಕದ ಕಾರ್ಯ ನಿರ್ವಹಣೆ, ತ್ಯಾಜ್ಯಗಳನ್ನು ಬೇರ್ಪಡಿಸಿ ಸ್ವಚ್ಛಗೊಳಿಸುವುದು, ತ್ಯಾಜ್ಯ ಸಂಗ್ರಹಣೆ ವಿಧಾನ ಮತ್ತಿತರ ವಿಷಯಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ಶಾಲೆಯ ಮುಖ್ಯ ಶಿಕ್ಷಕಿ ಝೀಟಾ ರೆಬೆರೊ, ನೋಡೆಲ್ ಶಿಕ್ಷಕ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಆಂತರಿಕ ಗುಣಮಟ್ಟ ಕೋಶ ಹಾಗೂ ಕರಿಯರ್ ಗೈಡನ್ಸ ಹಾಗೂ ಪ್ಲೇಸ್ಮೆಂಟ್ ಸೆಲ್ ವತಿಯಿಂದ How to Plan your Preparation for Civil Service Examination ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ಡಿವಿಸನ್ ಉಪ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ ಶಂಕರ ಐ.ಪಿ.ಎಸ್ ಆಗಮಿಸಿ ನಾಗರಿಕ ಸೇವಾ ಪರೀಕ್ಷಾ ತಯಾರಿ ಕುರಿತು, ತಾವು ಪರೀಕ್ಷಾ ತಯಾರಿಯ ವೇಳೆ ಓದಿರುವ ಪುಸ್ತಕಗಳ ವಿವರ ಮತ್ತು ಸಂದರ್ಶನದ ಸಮಗ್ರ ಮಾಹಿತಿ ನೀಡಿದರು. ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಹುದ್ದೆ ಏರಬೇಕೆಂಬ ಆಶಾ ಭಾವನೆಯನ್ನು ವ್ಯಕ್ತಪಡಿಸಿದರು. ಪ್ರಾಂಶುಪಾಲರಾದ ಡಾ| ರಘು ನಾಯ್ಕ ರವರು ಅಧ್ಯಕ್ಷತೆಯನ್ನು ವಹಿಸಿದ್ದರು. ಆಂತರಿಕ ಗುಣಮಟ್ಟ ಕೋಶ ಸಂಚಾಲಕ ಡಾ| ಅಶ್ವತ್ಥ ಡಿ ನಾಯ್ಕ ಹಾಗೂ ಕರಿಯರ್ ಗೈಡನ್ಸ ಹಾಗೂ ಪ್ಲೇಸ್ಮೆಂಟ್ ಸೆಲ್ ನ ಸಂಚಾಲಕ ವಿನೋದ ಬಸುಪಟ್ಟದ ಕನ್ನಡ ವಿಭಾಗದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರ ಗಮನಕ್ಕೆ ತರುವುದೇನೆಂದರೆ, ಸರ್ಕಾರಿ ನೌಕರರು/ವೇತನವನ್ನು ಗಣನೆಗೆ ತೆಗೆದುಕೊಳ್ಳದೇ , ಎಲ್ಲಾ ಖಾಸಗಿ ನೌಕರರು/ಸರ್ಕಾರಿ ಅನುದಾನಿತ ನೌಕರರು/ನಿಗಮಗಳು/ ಮಂಡಳಿಗಳು/ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ/ ಸೇವಾ ತೆರಿಗೆ/ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು, ನಗರ ಪ್ರದೇಶದಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಕುಟುಂಬಗಳು, ಕುಟುಂಬದ ವಾರ್ಷಿಕ ಆದಾಯವು 1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು, ಒಂದೇ ಕುಟುಂಬದಲ್ಲಿದ್ದರೂ/ ಒಟ್ಟಿಗೆ ವಾಸಿಸುತ್ತಿದ್ದರೂ ಪ್ರತ್ಯೇಕ ಪ್ರತ್ಯೇಕ ಪಡಿತರ ಚೀಟಿ ಹೊಂದಿರುವುದು, ಮೇಲ್ಕಂಡ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿನ ಖಾಸಗಿ ವಾಹನಗಳ ಮೇಲೆ, ಸರ್ಕಾರಿ ಸಂಸ್ಥೆಗಳ ಹೆಸರುಗಳನ್ನು, ಅದರಲ್ಲೂ ಮುಖ್ಯವಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಇನ್ನಿತರ ಸರ್ಕಾರಿ ಸಂಸ್ಥೆಗಳ ಹೆಸರನ್ನು ಅನಧಿಕೃತವಾಗಿ ಅಳವಡಿಸಿಕೊಂಡ ಪ್ರಕರಣಗಳು ಕಂಡುಬಂದಲ್ಲಿ, ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಉಡುಪಿ ರಾಮಕ್ಷತ್ರಿಯ ಯುವ ಸಂಫದ ಶತ ಕಾರ್ಯಕ್ರಮ ಸಂಭ್ರಮ ಸಾಂಸ್ಕ್ರತಿಕ ವೈಭವ 2020 ಪ್ರಯುಕ್ತ ಉಡುಪಿ ಪುರಭವನದಲ್ಲಿ ಏರ್ಪಡಿಸಿದ ರಾಮಕ್ಷತ್ರಿಯರ ಸಂಸ್ಕ್ರತಿ ಸಂಪ್ರದಾಯ ಬಿಂಬಿಸುವ ರಾಜ್ಯ ಮಟ್ಟದ ಕಿರುನಾಟಕ ಸ್ಪರ್ಧೆಯಲ್ಲಿ ಬೈಂದೂರಿನ ರಾಮಕ್ಷತ್ರಿಯರು ಅಭಿನಯಿಸಿದ ನಮ್ಮವರ ಸಂಸ್ಕ್ರತಿ ಪ್ರಥಮ ಸ್ಥಾನ ಪಡೆದು ಶಾಶ್ವತ ಫಲಕ ನಗದು ಬಹುಮಾನ ವಿಜೇತರಾದರು. ನಾಟಕವನ್ನು ನೀನಾಸಂ ಪದವೀಧರ ಶಿಕ್ಷಕ ಗಣಪತಿ ಹೋಬಳಿದಾರ್ ನಿರ್ದೇಶಿಸಿದರು, ಕಲಾವಿದರಾಗಿ ಜಿ ತಿಮ್ಮಪ್ಪಯ್ಯ, ಮಾತೃ ಮಂಡಳಿಯ ಅಧ್ಯಕ್ಷರಾದ ವನಜಾ ಭಾಸ್ಕರ್, ಗಾಯತ್ರಿ ರಾಮ ಸೋಡಿತಾರ್, ಸಾವಿತ್ರಿ ಹನುಮಂತ, ಆಶಾ ದಿನೇಶ್, ಸ್ವಾತಿ ಸತೀಶ ಹೋಬಳಿದಾರ್, ಸುಮಲತಾ ಶ್ರೀಧರ ವಸ್ರೆ, ರಮ್ಯ ಮಹಾಬಲ ಹೋಬಳಿದಾರ್, ಅಮ್ರತಾ ಎನ್, ಅಕ್ಷರಾ ಪಟವಾಲ್ ಅಭಿನಯಿಸಿದರು. ರಂಗ ತಾಲೀಮಿಗೆ ರಾಮಕ್ಷತ್ರಿಯ ಸಮಾಜ ಬೈಂದೂರಿನ ಅಧ್ಯಕ್ಷರಾದ ಪರಮೇಶ್ವರ ಹೋಬಳಿದಾರ್, ಯುವಕ ಸಮಾಜದ ಅಧ್ಯಕ್ಷರಾದ ಗುರುರಾಜ ಹೋಬಳಿದಾರ್, ವಸಂತಿ ನಾರಾಯಣ ಮದ್ದೋಡಿ ಸಹಕರಿಸಿದರು ರಂಗಸಜ್ಜಿಕೆಯನ್ನು ಶ್ರೀಧರ ಎಂ. ಪಿ , ಸುಧಾಕರ ಪಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಯಾವುದೇ ಕಾರ್ಯ ಸಫಲವಾಗಬೇಕಾದರೆ, ಕಾರ್ಯದಲ್ಲಿ ಯಶಸ್ಸು ಸಿಗಬೇಕಾದರೆ ಆತ್ಮವಿಶ್ವಾಸ, ಶ್ರದ್ಧೆ, ಛಲ ಮುಖ್ಯ. ಸಮಾಜಮುಖಿ ಕಾರ್ಯಗಳನ್ನು ಮಾಡುವಾಗ ಟೀಕೆ ಟಿಪ್ಪಣಿಗಳು ಕೇಳಿ ಬರುವುದು ಸಹಜ. ಆದರೆ ಇದರಿಂದ ಕುಗ್ಗದೆ ತಮ್ಮ ಕಾರ್ಯದಿಂದ ವಿಮುಖರಾಗದೆ ನಿರಂತರವಾಗಿ ಸಮಾಜ ಸೇವೆಯನ್ನು ಮಾಡಬೇಕು. ಇದರಿಂದ ಅದೆಷ್ಟೋ ಜನರಿಗೆ ಉಪಯೋಗವಾಗುತ್ತದೆ. ಈ ನಿಟ್ಟಿನಲ್ಲಿ ಗಂಗೊಳ್ಳಿಯ ಶ್ರೀ ಗುರುಜ್ಯೋತಿ ಸ್ಪೋಟ್ಸ್ ಕ್ಲಬ್ ಕಳೆದ ಮೂರು ದಶಕಗಳಿಂದ ಸಮಾಜಮುಖಿ, ಜನರಿಗೆ ಉಪಯೋಗವಾಗುವ ಕೆಲಸ ಕಾರ್ಯಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ಪ್ರಾಧ್ಯಾಪಕಿ ಡಾ.ರೇಖಾ ವಿ.ಬನ್ನಾಡಿ ಹೇಳಿದರು. ಗಂಗೊಳ್ಳಿ ಗಂಗೊಳ್ಳಿಯ ಕೆಎಫ್ಡಿಸಿ ವಠಾರದಲ್ಲಿ ಜರಗಿದ ಗಂಗೊಳ್ಳಿಯ ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್ನ 36ನೇ ವಾರ್ಷಿಕೋತ್ಸವ ಮತ್ತು ಗುರುಜ್ಯೋತಿ ಶಿಕ್ಷಣ ನಿಧಿ ಯೋಜನೆಯ 19ನೇ ವರ್ಷದ ವಿದ್ಯಾರ್ಥಿವೇತನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಂಗೊಳ್ಳಿ ಸ.ವಿ.ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಉಮೇಶ ಕರ್ಣಿಕ್, ಪ್ರಗತಿ ಮಹಿಳಾ ವಿವಿಧೋದ್ದೇಶ ಸಂಘದ ಪ್ರಧಾನ ವ್ಯವಸ್ಥಾಪಕ ರಾಘವೇಂದ್ರ ಕುಲಾಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಆಧುನಿಕ ಜೀವನ ಶೈಲಿ, ಒತ್ತಡದ ಬದುಕು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಯುವ ಜನತೆ ಒತ್ತಡದ ಬದುಕಿನಿಂದ ಮುಕ್ತಿ ಪಡೆಯಲು ಪರಿಹಾರ ಮಾರ್ಗಗಳನ್ನು ಸೂಕ್ತ ಸಮಯದಲ್ಲಿ ಕಂಡುಕೊಳ್ಳಬೇಕು ಎಂದು ನಿಮಾನ್ಸ್ ಆಸ್ಪತ್ರೆ ಬೆಂಗಳೂರು ಇದರ ಕ್ಷೇತ್ರ ಸಂಪರ್ಕಾಧಿಕಾರಿ ದಿವಾಕರ್ ಹೇಳಿದರು. ಇವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ, ನಿಮಾನ್ಸ್ ಆಸ್ಪತ್ರೆ ಬೆಂಗಳೂರು, ಜನ-ಆರೋಗ್ಯ ಕೇಂದ್ರ, ಯುವ ಸ್ಪಂದನ ಕೇಂದ್ರ ಉಡುಪಿ, ಜೇಸಿಐ ಕುಂದಾಪುರ ಸಿಟಿ ಆಯೋಜಿಸಿದ ಬಿಕ್ಕಟ್ಟು ನಿರ್ವಹಣೆ ಮತ್ತು ಆರೋಗ್ಯ ಜೀವನ ಶೈಲಿ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಆರೋಗ್ಯ ಜೀವನ ಶೈಲಿಯ ಮಾಹಿತಿದಾರರಾದ ಗುರುರಾಜ ಕೊತ್ವಾಲ್ರವರು ಹೃದಯ ಸಂಬಂಧಿ ಕಾಯಿಲೆಗಳಿಗೆ ಪ್ರಾಥಮಿಕ ಚಿಕಿತ್ಸೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಜೇಸಿಯ ಕುಂದಾಪುರ ಸಿಟಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವ್ಯಕ್ತಿ, ಉದ್ಯಮ, ಸಂಸ್ಥೆ, ಸರಕಾರ ಯಾವುದೇ ಆಗಲಿ ಆರ್ಥಿಕ ಶಿಸ್ತು ಸರಿಯಾಗಿಲ್ಲದಿದ್ದಲ್ಲಿ ಸಂಪತ್ತಿನ ಕುಸಿತ ಅನಿವಾರ್ಯ. ದೂರದೃಷ್ಟಿ, ಅಧ್ಯಯನವಿಲ್ಲದಿದ್ದರೆ, ಅರ್ಥ ಸಚಿವರೂ ವಿಫಲರಾಗುತ್ತಾರೆ. ಉದ್ಯಮಕ್ಕಾಗಿ ಪಡೆದ ಆರ್ಥಿಕ ನೆರವು ಮರಪಾವತಿಯಲ್ಲಿ ಗಮನ ಹರಿಸದ ಉದ್ಯಮಿಗಳು, ವೃತ್ತಿ, ಉದ್ಯಮಕ್ಕಾಗಿ ಪಡೆದ ಸಾಲವನ್ನು ಅನುಪಯುಕ್ತ ಕಾರ್ಯಕ್ಕೆ ಬಳುವ ಮಾಲಕರು, ಸಾಲ ನೀಡಿಕೆ ಹಾಗೂ ವಸೂಲಾತಿ ವಿಷಯದಲ್ಲಿ ಬೇಜವಾಬ್ದಾರಿತನ ತೋರುವ ಬ್ಯಾಂಕ್ ಆಡಳಿತ ಹಾಗೂ ಅಧಿಕಾರಿಗಳು, ದೇಶದಲ್ಲಿ ಆರ್ಥಿಕ ಕುಸಿತಕ್ಕೆ ಕಾರಣರಾಗುತ್ತಾರೆ. ಬ್ಯಾಂಕುಗಳಲ್ಲಿ ಎನ್ಪಿಎ ಸಮಸ್ಯೆ ಹೆಚ್ಚಲು ಕಾರಣ ಎಂಬ ವಿಷಯವೂ ಸೇರಿದಂತೆ “ಭಾರತದ ಆರ್ಥಿಕ ಸಂರಕ್ಷಣೆಯ ಅನ್ವೇಷಣೆ” ಬಗ್ಗೆ ಹಿರಿಯ ಚಿಂತಕ, ಲೇಖಕ ವಿ.ಮೋಹನರಾವ್ ಅವರ ಲೇಖನಗಳು ವಿಚಾರಪೂರ್ಣವಾಗಿವೆ” ಎಂದು ಮಾಜಿ ಸಚಿವರೂ, ಮಾಜಿ ಸಂಸದರೂ ಆದ ಕೆ.ಜಯಪ್ರಕಾಶ ಹೆಗ್ಡೆ ಹೇಳಿದರು. ಕುಂದಪ್ರಭ ಸಂಸ್ಥೆಯ ಆಶ್ರಯದಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ಕುಂಭಾಶಿ ರಾಧಾಬಾ ವೆಂಕಟರಮಣ ಪ್ರಭು ರಂಗಮಂಟಪದಲ್ಲಿ “ಇನ್ಕ್ವೆಸ್ಟ್ ಆಫ್ ಎ ಸಸ್ಟೈನೆಬಲ್ ಇಂಡಿಯನ್ ಇಕಾನಮಿ” ಎಂಬ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಿಧಾನ ಸಭೆಯಲ್ಲಿ ಮಂಡಿಸಿರುವ 2020-21 ನೇ ಸಾಲಿನ ಕರ್ನಾಟಕ ಬಜೆಟ್ನಲ್ಲಿ ಉಡುಪಿ ಜಿಲ್ಲೆಗೆ ಯಾವೆಲ್ಲಾ ಯೋಜನೆಗಳನ್ನು ಘೋಷಿಸಲಾಗಿದೆ ಎನ್ನುವ ಸಂಕ್ಷಿಪ್ತ ಅಂಶಗಳು ಇಲ್ಲಿವೆ. ಕರಾವಳಿ ಜಿಲ್ಲೆಗಳ ಬಂದರು ಅಭಿವೃದ್ದಿ, ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ, ಅಡಿಕೆ ಬೆಳೆಗಾರರ ಸಾಲಕ್ಕೆ ಬಡ್ಡಿ ವಿನಾಯಿತಿ ಪ್ರಾಶಸ್ತ್ಯ ನೀಡಲಾಗಿದೆ. ಬಜೆಟ್ನಲ್ಲಿರುವ ಕರಾವಳಿಯ ಪ್ರಮುಖ ಅಂಶಗಳು: * ಕರಾವಳಿ ಪ್ರದೇಶದಲ್ಲಿ ಪಶ್ಚಿಮ ಘಟ್ಟದ ನದಿಗಳಿಗೆ ಅಡ್ಡಲಾಗಿ ‘ಕಿಂಡಿ ಅಣೆಕಟ್ಟು ಯೋಜನೆ’ಗಳ ವ್ಯಾಪಕ ಅನುಷ್ಠಾನಕ್ಕೆ ಮಾಸ್ಟರ್ ಪ್ಲಾನ್. * ಮಹಿಳಾ ಮೀನುಗಾರರ ಸಬಲೀಕರಣ ಯೋಜನೆಯಡಿ 1000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು ನೀಡಲು ಐದು ಕೋಟಿ ರೂ. ಅನುದಾನ. * ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಮರವಂತೆಯ ಹೊರ ಬಂದರಿನ ಎರಡನೇ ಹಂತದ ಕಾಮಗಾರಿ ಪೂರ್ಣಗೊಳಿಸಲು 85 ಕೋಟಿ ರೂ. ಅನುದಾನ * ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಜವುಳಿ ಪಾರ್ಕ್. * ಉಡುಪಿಯ ಅಂಗಾರು ಕಟ್ಟೆ ಬಂದರು…
ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಸಿರು ಕೋಟ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ ನಡೆಯುವ ೧೪ ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಹಿರಿಯ ಸಾಹಿತಿ ಅಂಬಾತನ ಮುದ್ರಾಡಿ ಹಾಗೂ ಎ.ಎಸ್.ಎನ್ ಹೆಬ್ಬಾರ್ ಅವರು ಚೇತನ ಫ್ರೌಡ ಶಾಲೆ ಹಂಗಾರಕಟ್ಟೆಯಲ್ಲಿ ಅನಾವರಣಗೊಳಿಸಿದರು. ಅನಾವರಣ ಮಾಡಿದ ಸಾಹಿತಿ ಎ.ಎಸ್.ಎನ್ ಹೆಬ್ಬಾರ್ರವರು ಐರೋಡಿ ಗ್ರಾಮದ ಸಾಧಕರನ್ನು ಸ್ಮರಿಸಿ ವೈದೇಹಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಹಿರಿಯ ಸಾಹಿತಿ ಅಂಬಾತನ ಮುದ್ರಾಡಿ ಅವರು ಕನ್ನಡ ಸಾಹಿತ್ಯ ಹಾದಿಗಳ ಪಲ್ಲಟಗಳ ಬಗ್ಗೆ ವಿವರಿಸಿದರು. ಚೇತನಾ ಫ್ರೌಡ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಭರತ್ ಕುಮಾರ್ ಶೆಟ್ಟಿ ಹಾಗೂ ಕಾರ್ಯದರ್ಶಿ ಇಬ್ರಾಹೀಂ ಸಾಹೇಬ್ ಹಂಗಾರಕಟ್ಟೆ, ರೋಟರಿ ಮುಂದಿನ ವರುಷದ ನಿಯೋಜಿತ ಅಧ್ಯಕ್ಷರಾದ ರೊ.ರಾಜಾರಾಮ ಭಟ್, ಚೇತನಾ ಫ್ರೌಡಶಾಲೆಯ ಮುಖ್ಯೋಪಾಧ್ಯಯರಾದ ಗಣೇಶ್ ಜಿ, ಬಿ.ಡಿ…
