ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವಿದ್ಯಾರ್ಥಿಗಳಿಗೆ ಡಿಜಿಟಲ್ ಮಾರ್ಕೆಟಿಂಗ್ನಲ್ಲಿರುವ ಉದ್ಯೋಗ ಅವಕಾಶಗಳ ಮತ್ತು ಡಿಜಿಟಲ್ ಮಾರ್ಕೆಟ್ನ ಪ್ರಯೋಜನಗಳನ್ನು ಹುಬ್ಬಳ್ಳಿ ಜ್ಞಾನ ಸಂಸ್ಥೆಯ ಸ್ಥಾಪಕ ಮಯೂರ ಹತ್ವಾರ್ ತಿಳಿಸಿದರು. ಇವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ಆಯೋಜನೆಯಲ್ಲಿ ಅಂತಿಮ ಬಿ.ಕಾಂ. ಹಾಗೂ ಬಿ.ಬಿ.ಎ. ವಿದ್ಯಾರ್ಥಿಗಳಿಗೆ ನಡೆಸಿದ ಡಿಜಿಟಲ್ ಮಾರ್ಕೆಟ್ನ ಅವಕಾಶಗಳ ಕುರಿತು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಫ್ರಿಲೆನ್ಸ್ ಸಲಹೆಗಾರ ಮತ್ತು ತರಬೇತುದಾರ ವರದರಾಜ್ ಕೆ. ಭಟ್, ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ರಾಜೇಶ್ ಶೆಟ್ಟಿ ವಕ್ವಾಡಿ ವಂದಿಸಿ, ವಾಣಿಜ್ಯ ಉಪನ್ಯಾಸಕ ಸಂತೋಷ್ ಎ. ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯ ಬೈಂದೂರು ತಾಲೂಕು ಶಿರೂರು ಗ್ರಾಮದ ಗಡಿಯಿಂದ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಗಡಿಯವರೆಗೆ ಖಾಸಗೀ ಜಮೀನುಗಳನ್ನು ರಾಷ್ಟ್ರೀಯ ಹೆದ್ದಾರಿ 66(17) ಅಗಲೀಕರಣದ ಬಗ್ಗೆ ಭೂ ಸ್ವಾಧೀನಗೊಳಿಸಿದ ಜಮೀನುಗಳ ಮಾಲಕರಿಗೆ ಸೂಕ್ತ ದಾಖಲೆಗಳನ್ನು ಹಾಜರುಪಡಿಸಿ, ಪರಿಹಾರವನ್ನು ಪಡೆದುಕೊಳ್ಳಲು ನೋಟೀಸ್ ಮೂಲಕ ತಿಳುವಳಿಕೆ ನೀಡಿದ್ದರೂ, ಈವರೆಗೆ ಹಲವಾರು ಭೂ ಮಾಲಕರು ಸೂಕ್ತ ದಾಖಲೆಗಳನ್ನು ಹಾಜರುಪಡಿಸಿ ಪರಿಹಾರ ಪಡೆದುಕೊಂಡಿರುವುದಿಲ್ಲ. ಆದ್ದರಿಂದ ಪ್ರಕಟಣೆಯ ದಿನಾಂಕದಿಂದ ಒಂದು ತಿಂಗಳ ಅವಧಿಯೊಳಗೆ ಸಕ್ಷಮ ಪ್ರಾಧಿಕಾರಿಯವರು ರಾಷ್ಟ್ರೀಯ ಹೆದ್ದಾರಿ 66(17) ಹಾಗೂ ಕುಂದಾಪುರ ಸಹಾಯಕ ಕಮೀಷನರ್ ಇವರಿಗೆ ಅಗತ್ಯ ದಾಖಲೆಗಳನ್ನು ಹಾಜರುಪಡಿಸಿ ನಿಗದಿಪಡಿಸಿದ ಪರಿಹಾರ ಪಡೆಯುವಂತೆ ಸಕ್ಷಮ ಪ್ರಾಧಿಕಾರಿಗಳು ರಾ.ಹೆ. 66(17) ಹಾಗೂ ಕುಂದಾಪುರ ಸಹಾಯಕ ಕಮೀಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಫೆಬ್ರುವರಿ 29ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಿಜ್ಞಾನ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅತಿಥಗಲಾಗಿ ಆಗಮಿಸಿದ್ದ ನಿವೃತ್ತ ಪ್ರಾಧ್ಯಾಪಕ ಡಾ| ಅರವಿಂದ ಹೆಬ್ಬಾರ್ ಅವರು ಸಸ್ಯಲೋಕದ ವಿಸ್ಮಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಸಸ್ಯಲೋಕವೆಂಬುದು ವಿಸ್ಮಯ ಮತ್ತು ಅದ್ಭುತಗಳ ಆಗರ. ನಾವು ನೋಡದ ಕೇಳದ ಎಷ್ಟೋ ವಿಚಾರಗಳು ಸಂಗತಿಗಳು ಪ್ರಕೃತಿಯ ಮಡಿಲಲ್ಲಿ ಹುದುಗಿದೆ. ಅದನ್ನು ತಿಳಿಯುವುದೇ ವಿಜ್ಞಾನದ ಅದ್ಭುತವಾಗಿದೆ ಎಂದು ಕೆಲವು ಮಾಹಿತಿಗಳನ್ನು ತಿಳಿಸಿದರು. ಇನ್ನೊಬ್ಬ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕುಂದಾಪುರದ ಜ್ಞಾನಭಾರತಿ ಐ.ಟಿ.ಐ ಕಾಲೇಜಿನ ಪ್ರಾಂಶುಪಾಲ ರಾಘವೇಂದ್ರ ಅವರು ಮಾತನಾಡಿ ನಿi ವಿಷಯಗಳ ಕಲಿಯುವಿಕೆಯೊಂದಿಗೆ ನಿi ಕೌಶಲ ಹೆಚ್ಚಿಸುವ ಯಾವುದೇ ವಿಷಯದ ಕುರಿತು ವಿಶೇಷ ತರಬೇತಿ ಪಡೆದಿರಬೇಕು. ಅದು ಮುಂದೆ ನಿಮ್ಮ ಭವಿಷ್ಯಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ| ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ| ಲಲಿತಾದೇವಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸೌಮ್ಯ,…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಹಾಗೂ ಅವರ ಪಟ್ಟಶಿಷ್ಯ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರು ಗುಡ್ಡೆಅಂಗಡಿ ನಾಡ ಶ್ರೀ ರಾಮ ಮಂದಿರದಲ್ಲಿ ಮೊಕ್ಕಾಂ ಮಾಡಿ ಆಶೀರ್ವಚನ ನೀಡಿದರು. ಗಂಗೊಳ್ಳಿ ಮೊಕ್ಕಾಂನಿಂದ ಮಂಗಳವಾರ ಆಗಮಿಸಿದ ಶ್ರೀಗಳವರನ್ನು ವೈಭವದ ಪುರಮೆರರವಣಿಗೆ ಮೂಲಕ ಗುಡ್ಡೆಅಂಗಡಿ ನಾಡ ಶ್ರೀ ರಾಮ ಮಂದಿರ ಕರೆ ತರಲಾಯಿತು. ಶ್ರೀಗಳ ಮೊಕ್ಕಾಂ ಸಂದರ್ಭ ಮಧ್ಯಾಹ್ನ ಶ್ರೀ ಸಂಸ್ಥಾನ ದೇವರಿಗೆ ಮಹಾಪೂಜೆ, ಗುರುಭಿಕ್ಷೆ, ಉಭಯ ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ಧರ್ಮಸಭೆ ಜರುಗಿತು. ಗಂಗೊಳ್ಳಿ ಶ್ರೀ ವೀರವಿಠಲ ಭಜನಾ ಮಂಡಳಿ ಗಂಗೊಳ್ಳಿ ಇವರಿಂದ ಭಜನ ಗಂಗಾ ಕಾರ್ಯಕ್ರಮ ನಡೆಯಿತು. ಪುರೋಹಿತರಾದ ಜಿ.ವೇದವ್ಯಾಸ ಕೆ.ಆಚಾರ್ಯ ನೇತೃತ್ವದಲ್ಲಿ ಉಭಯ ಶ್ರೀಗಳವರ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಸಮಿತಿಯ ಅಧ್ಯಕ್ಷ ಸತೀಶ ಎಂ.ನಾಯಕ್, ಕಾರ್ಯದರ್ಶಿ ಪ್ರಶಾಂತ ಪೈ, ಸಮಿತಿಯ ಸದಸ್ಯರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು,…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕಾಲೇಜಿನ ಯುಥ್ ರೆಡ್ಕ್ರಾಸ್ ವಿಂಗ್, ಎನ್.ಎಸ್.ಎಸ್, ಎನ್.ಸಿ.ಸಿ ರೆಡ್ ರಿಬ್ಬನ್ ಕ್ಲಬ್, ರೆಡ್ಕ್ರಾಸ್, ಕುಂದಾಪುರ ಮತ್ತು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ರೆಡ್ಕ್ರಾಸ್, ಕುಂದಾಪುರ ಇದರ ಸಬಾಪತಿಗಳಾದ ಜಯಕರ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ| ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಸುಮಾರು 371 ಯುನಿಟ್ ರಕ್ತವನ್ನು ರಕ್ತದಾನಿಗಳಿಂದ ಸಂಗ್ರಹಿಸಲಾಯಿತು. ಮುಖ್ಯವಾಗಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಯುಥ್ ರೆಡ್ಕ್ರಾಸ್ ವಿಂಗ್ ಅಧಿಕಾರಿ ಪ್ರೊ.ಸತ್ಯನಾರಾಯಣ, ಮತ್ತು ವಿದ್ಯಾರಾಣಿ ಮತ್ತು ಎನ್.ಎಸ್.ಎಸ್ ಅಧಿಕಾರಿ ಅರುಣ ಎ.ಎಸ್. ಮತ್ತು ರಾಮಚಂದ್ರ ಆಚಾರಿ, ಎನ್.ಸಿ.ಸಿ ಅಧಿಕಾರಿಗಳಾದ ಶರಣ್ ಎಸ್.ಜೆ, ಮತ್ತು ಅಂಜನ್ ಕುಮಾರ್, ಮಣಿಪಾಲದ ರಕ್ತಬ್ಯಾಂಕ್ ಇದರ ವೈಧ್ಯಾಧಿಕಾರಿ ಡಾ| ಶೀತಲ್ ಭಾಗವಹಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಮೇಲ್ಗಂಗೊಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ (ಹವೇ) ಶಾಲೆಯ ಪೂರ್ವ ಪ್ರಾಥಮಿಕ ಶಾಲೆಯ ವತಿಯಿಂದ ತಾಯಂದಿರಿಂದ ಮಕ್ಕಳಿಗೆ ಕೈತುತ್ತು ನೀಡುವ ಕಾರ್ಯಕ್ರಮ ಗುರುವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ರಥಬೀದಿ ಗಂಗೊಳ್ಳಿಯ ಮುಖ್ಯಶಿಕ್ಷಕಿ ಚಂದ್ರಕಲಾ ಮಾತನಾಡಿ ಭಾರತೀಯ ಪರಂಪರೆಯಲ್ಲಿ ತಾಯಿ-ಮಗುವಿನ ಸಂಬಂಧ ಶ್ರೇಷ್ಠವಾದುದು. ಇದು ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹೇಳಿದರು. ಶಾಲೆಯ ಮುಖ್ಯ ಶಿಕ್ಷಕ ರಮೇಶ ಮಹಾಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರ ಕೆ., ಗೌರವ ಶಿಕ್ಷಕಿ ಸುನೀತಾ ದಿನೇಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಈಶ್ವರ ಜಿ., ಕಿರಣ್ ಎಂ.ಜಿ., ನಟರಾಜ್ ಎಂ.ಜಿ., ಜಗದೀಶ ಮೇಲ್ಗಂಗೊಳ್ಳಿ, ಸಂದೀಪ ಮೇಲ್ಗಂಗೊಳ್ಳಿ, ಎಸ್ಡಿಎಂಸಿ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು. ರಮೇಶ ಮಹಾಲೆ ಸ್ವಾಗತಿಸಿದರು. ಸಹಶಿಕ್ಷಕಿ ಲಲಿತಾ ಕಾರ್ಯಕ್ರಮ ನಿರ್ವಹಿಸಿದರು. ಸುನೀತಾ ದಿನೇಶ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕನ್ನಡ ವಿಭಾಗ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಸಹಯೋಗದಲ್ಲಿ ಮಾನವಿಕ ಶಾಸ್ತ್ರದಲ್ಲಿ ಸಾಹಿತ್ಯದ ಹೂರಣ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸುರೇಂದ್ರ ಶೆಟ್ಟಿ ಮಾತನಾಡಿ ಮಾನವಿಕ ಶಾಸ್ತ್ರ ಎನ್ನುವುದು ಒಂದು ಅಧ್ಯಯನವಾಗಿರದೇ ಅದು ಕಲಿಯುವಿಕೆಯ ಆಸಕ್ತಿಯನ್ನು ಮೂಡಿಸಬೇಕು. ಇದರಲ್ಲಿ ಸಾಹಿತ್ಯದ ಮೇಳೈಸುವಿಕೆ ಇದ್ದಾಗ ಒಬ್ಬ ವಿದ್ಯಾರ್ಥಿಗೆ ಓದಿನ ರುಚಿಯನ್ನು ಅರ್ಥೈಸುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಮಾನವಿಕ ಶಾಸ್ತ್ರದ ಕಲಿಯುವಿಕೆ ಜಟಿಲವಾಗದಂತೆ ಮತ್ತು ತಿಳಿದುಕೊಳ್ಳಲು ಸಾಹಿತ್ಯವೆನ್ನುವುದು ಬೇಕೆಬೇಕು. ಅದನ್ನು ನಾವು ಅಳವಡಿಸಿಕೊಳ್ಳಬೇಕು. ಸಾಹಿತ್ಯಕ್ಕೆ ಯಾವುದೇ ದೇಶ ಭಾಷೆ, ಸಂಸ್ಕೃತಿ, ಶಾಸ್ತ್ರಗಳ ಮೇರೆ ಇಲ್ಲ. ಎಲ್ಲೆಂದರಲ್ಲಿ ಸಾಹಿತ್ಯ ಸ್ಪುರಿಸುತ್ತದೆ. ಅದನ್ನು ನಾವು ಮೊದಲು ತಿಳಿದುಕೊಳ್ಳಬೇಕು. ಅಲ್ಲದೇ ಒಳ್ಳೆಯ ಸಾಹಿತ್ಯದ ಓದುಗರಾಗಬೇಕು. ಯಾಕೆಂದರೆ ನಮ್ಮ ಆಲೋಚನಾಲಹರಿ ಅದು ಚುರುಕನ್ನು ಮುಟ್ಟಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ| ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಬಿ.ಬಿ.ಹೆಗ್ಡೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಗಂಗೊಳ್ಳಿಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ಇಕೋ ಕ್ಲಬ್ನ ವಿದ್ಯಾರ್ಥಿಗಳು ಗಂಗೊಳ್ಳಿ ಗ್ರಾಮದ ಎಸ್.ಎಲ್.ಆರ್.ಎಂ. ಘಟಕಕ್ಕೆ ಗುರುವಾರ ಭೇಟಿ ನೀಡಿದರು. ಎಸ್.ಎಲ್.ಆರ್.ಎಂ. ಘಟಕದಲ್ಲಿ ಘನ ಮತ್ತು ದ್ರವ ತ್ಯಾಜ್ಯಗಳನ್ನು ವಿಂಗಡಿಸಿ, ಸ್ವಚ್ಛಗೊಳಿಸುವ ವಿಧಾನ, ಘಟಕದ ಕಾರ್ಯನಿರ್ವಹಣೆ, ತ್ಯಾಜ್ಯ ಸಂಗ್ರಹ ಮತ್ತಿತರ ಚಟುವಟಿಕೆಗಳನ್ನು ವೀಕ್ಷಿಸಿ, ಇದರ ಸಮಗ್ರ ಮಾಹಿತಿ ಪಡೆದುಕೊಂಡರು. ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದ ಗ್ರಾಪಂ ಸಿಬ್ಬಂದಿ ಉದಯಕುಮಾರ್, ಸ್ವಚ್ಛ ಸುಂದರ ಪರಿಸರ ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ನಾವು ಮನೆಯಲ್ಲಿರುವ ತ್ಯಾಜ್ಯಗಳನ್ನು ನದಿ, ಸಮುದ್ರಕ್ಕೆ ಎಸೆಯುವುದರಿಂದ ಜಲಚರಗಳಿಗೆ ಹಾನಿಯಾಗುತ್ತದೆ. ನೀರು ಮಲಿನವಾಗಿ ಕಾಯಿಲೆ ಬರುವ ಸಾಧ್ಯತೆ ಇದೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಇತರರಿಗೆ ಮಾದರಿಯಾಗಬೇಕು ಎಂದು ಹೇಳಿದ ಅವರು, ಎಸ್.ಎಲ್.ಆರ್.ಎಂ ಘಟಕದ ಕಾರ್ಯ ನಿರ್ವಹಣೆ, ತ್ಯಾಜ್ಯಗಳನ್ನು ಬೇರ್ಪಡಿಸಿ ಸ್ವಚ್ಛಗೊಳಿಸುವುದು, ತ್ಯಾಜ್ಯ ಸಂಗ್ರಹಣೆ ವಿಧಾನ ಮತ್ತಿತರ ವಿಷಯಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ಶಾಲೆಯ ಮುಖ್ಯ ಶಿಕ್ಷಕಿ ಝೀಟಾ ರೆಬೆರೊ, ನೋಡೆಲ್ ಶಿಕ್ಷಕ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಆಂತರಿಕ ಗುಣಮಟ್ಟ ಕೋಶ ಹಾಗೂ ಕರಿಯರ್ ಗೈಡನ್ಸ ಹಾಗೂ ಪ್ಲೇಸ್ಮೆಂಟ್ ಸೆಲ್ ವತಿಯಿಂದ How to Plan your Preparation for Civil Service Examination ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ಡಿವಿಸನ್ ಉಪ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ ಶಂಕರ ಐ.ಪಿ.ಎಸ್ ಆಗಮಿಸಿ ನಾಗರಿಕ ಸೇವಾ ಪರೀಕ್ಷಾ ತಯಾರಿ ಕುರಿತು, ತಾವು ಪರೀಕ್ಷಾ ತಯಾರಿಯ ವೇಳೆ ಓದಿರುವ ಪುಸ್ತಕಗಳ ವಿವರ ಮತ್ತು ಸಂದರ್ಶನದ ಸಮಗ್ರ ಮಾಹಿತಿ ನೀಡಿದರು. ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಹುದ್ದೆ ಏರಬೇಕೆಂಬ ಆಶಾ ಭಾವನೆಯನ್ನು ವ್ಯಕ್ತಪಡಿಸಿದರು. ಪ್ರಾಂಶುಪಾಲರಾದ ಡಾ| ರಘು ನಾಯ್ಕ ರವರು ಅಧ್ಯಕ್ಷತೆಯನ್ನು ವಹಿಸಿದ್ದರು. ಆಂತರಿಕ ಗುಣಮಟ್ಟ ಕೋಶ ಸಂಚಾಲಕ ಡಾ| ಅಶ್ವತ್ಥ ಡಿ ನಾಯ್ಕ ಹಾಗೂ ಕರಿಯರ್ ಗೈಡನ್ಸ ಹಾಗೂ ಪ್ಲೇಸ್ಮೆಂಟ್ ಸೆಲ್ ನ ಸಂಚಾಲಕ ವಿನೋದ ಬಸುಪಟ್ಟದ ಕನ್ನಡ ವಿಭಾಗದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರ ಗಮನಕ್ಕೆ ತರುವುದೇನೆಂದರೆ, ಸರ್ಕಾರಿ ನೌಕರರು/ವೇತನವನ್ನು ಗಣನೆಗೆ ತೆಗೆದುಕೊಳ್ಳದೇ , ಎಲ್ಲಾ ಖಾಸಗಿ ನೌಕರರು/ಸರ್ಕಾರಿ ಅನುದಾನಿತ ನೌಕರರು/ನಿಗಮಗಳು/ ಮಂಡಳಿಗಳು/ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ/ ಸೇವಾ ತೆರಿಗೆ/ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು, ನಗರ ಪ್ರದೇಶದಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಕುಟುಂಬಗಳು, ಕುಟುಂಬದ ವಾರ್ಷಿಕ ಆದಾಯವು 1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು, ಒಂದೇ ಕುಟುಂಬದಲ್ಲಿದ್ದರೂ/ ಒಟ್ಟಿಗೆ ವಾಸಿಸುತ್ತಿದ್ದರೂ ಪ್ರತ್ಯೇಕ ಪ್ರತ್ಯೇಕ ಪಡಿತರ ಚೀಟಿ ಹೊಂದಿರುವುದು, ಮೇಲ್ಕಂಡ…
