ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಸರ್ಕಾರ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಉದ್ಯೋಗ ಮತ್ತು ತರಬೇತಿ ಇಲಾಖೆ, ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಭಾಸ್ಕರ್ ಅಮೀನ್ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯಾಭಿವೃದ್ಧಿಯ ಅವಶ್ಯಕತೆಯ ಬಗ್ಗೆ ಕೆಲವು ಮಾಹಿತಿಗಳನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ರಾಜೇಂದ್ರ ನಾಯಕ್ ಮಾತನಾಡಿ ವರು ವಿದ್ಯಾರ್ಥಿಗಳಿಗೆ ಕೈಗಾರಿಕಾ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳು ಮತ್ತು ಉದ್ಯೋಗ ಸಾಮರ್ಥ್ಯದ ನಡುವಿನ ಅಂತರವನ್ನು ಕಡಿಮೆ ಮಾಡಿ ದೇಶದಲ್ಲಿನ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಬೇಕಾದರೆ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಠಾನಗೊಳ್ಳಬೇಕಾಗಿದೆ ಎಂದರು. ಕಾರ್ಯಕ್ರಮದಲ್ಲಿ ಜಗತ್, ಆಪ್ತ ಸಮಾಲೋಚಕರು ಮತ್ತು ತರಬೇತುದಾರರು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎಸ್.ಡಬ್ಲ್ಯೂ.ಒ ಡಾ. ಉಷಾದೇವಿ ಜೆ.ಎಸ್, ಐ.ಕ್ಯು.ಎ.ಸಿ ಸಂಚಾಲಕರಾದ ಗಣೇಶ ಪೈ ಎಂ., ಉದ್ಯೋಗ ಮಾರ್ಗದರ್ಶನ ಅಧಿಕಾರಿಗಳಾದ ಡಾ ಸುಬ್ರಮಣ್ಯ ಮತ್ತು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾರ್ಪೋರೇಟ್ ಕಂಪೆನಿಗಳು ದೇಶದ ಕೃಷಿ ಕ್ಷೇತ್ರವನ್ನು ಆಳುತ್ತಿವೆ. ಆಧೂ ಕೃಷಿಯ ಬೀಜ, ಗೊಬ್ಬರ, ನೀರು, ಮಾರುಕಟ್ಟೆ, ಸಾರಿಗೆ ಹೀಗೆ ಎಲ್ಲದರ ಹಿಡಿತ ಸಾಧಿಸಿದ್ದು, ರೈತನ ಶ್ರಮಕ್ಕೆ ತಕ್ಕಂತೆ ಬೆಲೆ ನಿರ್ಧರಿಸುವ ಹಕ್ಕನ್ನೇ ಕಸಿದುಕೊಂಡಿವೆ ಎಂದು ಮ್ಯಾಗ್ಸೇಸೆ ಪುರಸ್ಕೃತ ಪತ್ರಕರ್ತ ಪಿ. ಸಾಯಿನಾಥ್ ಹೇಳಿದರು. ಅವರು ಕುಂದಾಪುರದ ಕಲಾಮಂದಿರದಲ್ಲಿ ಶುಕ್ರವಾರ ಸಂಜೆ ಸಮುದಾಯ ಕುಂದಾಪುರದ ಆಶ್ರಯದಲ್ಲಿ, ತಲ್ಲೂರು ಫ್ಯಾಮಿಲಿ ಟ್ರಸ್ಟ್ನ ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ’ಕಾರ್ಪೋರೇಟ್ ಫಾರ್ಮಿಂಗ್ ಮತ್ತು ಭಾರತದ ಕೃಷಿ ಬಿಕ್ಕಟ್ಟುಗಳು’ ಎನ್ನುವ ವಿಷಯದ ಕುರಿತು ಉಪನ್ಯಾಸ ನೀಡಿ ರೈತರಿಗಾಗಿ ಇರಬೇಕಾದ ಕೃಷಿ ವಿಶ್ವವಿದ್ಯಾಲಯಗಳು ಇಂದು ಬಂಡವಾಳ ನೀಡುವ ಕಾರ್ಪೋರೇಟ್ ವಲಯದ ಪರವಾಗಿರುವುದರಿಂದಾಗಿ ವಿಶ್ವವಿದ್ಯಾಲಯಗಳ ಮೇಲೆ ವಿಶ್ವಾಸ ಕಳೆದುಕೊಳ್ಳುವಂತಾಗಿದೆ ಎಂದರು. ದೇಶದಲ್ಲಿ ಉದಾರೀಕರಣ ನೀತಿಯ ಬಳಿಕ ರೈತಾಪಿ ವರ್ಗದ ಸ್ಥಿತಿ ದೈನಸಿ ಸ್ಥಿತಿ ಬಂದು ನಿಂತಿದೆ. ರೈತಾಪಿ ವರ್ಗ ಪರಿಸ್ಥಿತಿಯ ಒತ್ತಡದಿಂದಾಗಿ ಪರಾವಿಲಂಭಿಗಳಾಗುತ್ತಿದ್ದಾರೆ. ಬೀಜ, ರಸಗೊಬ್ಬರ, ವಿದ್ಯುತ್, ನೀರು ಸೇರಿದಂತೆ ಕೃಷಿಕರ ಅಗತ್ಯತೆಗಳ ಬೆಲೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ರಾಜ್ಯದ ವಿವಿಧ ಎ ದರ್ಜೆಯ ದೇವಾಲಯಗಳಲ್ಲಿ ಮುಜರಾಯಿ ಇಲಾಖೆವತಿಯಿಂದ ಏಪ್ರಿಲ್ ೨೬ ರಂದು ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮದ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮಗಳನ್ನು ಆಯೋಜಿಸಲಗುವುದು ಎಂದು ರಜ್ಯದ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಕೊಲ್ಲೂರು ನಲ್ಲಿ ಸಾಮೂಹಿಕ ಸರಳ ವಿವಾಹ ಕುರಿತು ನಡೆದ ಸಭೆಯಲ್ಲಿ ಮಾತನಾಡಿ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಕುರಿತಂತೆ ರಾಜ್ಯದ ಎಲ್ಲಾ ಸಂಸದರು, ವಿಧಾನ ಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ , ನಗರಸಭೆ ಗಳ ಅಧ್ಯಕ್ಷರು ಉಪಾಧ್ಯಕರಿಗೆ ವೈಯಕ್ತಿಕವಾಗಿ ಪತ್ರ ಬರೆದು ತಮ್ಮ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಸಹಕರ ನೀಡುವಂತೆ ಕೋರಲಾಗಿದೆ, ಎಲ್ಲರೂ ಪಕ್ಷ ಬೇಧ ಮರೆತು ಕಾರ್ಯಕ್ರಮ ಆಯೋಜಿಸುವಂತೆ ಕೋರಲಾಗಿದೆ ಎಂದು ಸಚಿವ ಕೋಟ ತಿಳಿಸಿದರು. ಈ ಸಾಮೂಹಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಡಾ. ಹೆಚ್. ಶಾಂತಾರಾಮ್ ವಾಚನ ಪ್ರಶಸ್ತಿಯನ್ನು ಹೆಚ್. ಯಜ್ಞೇಶ ಆಚಾರ್ ಸುರತ್ಕಲ್ ಮತ್ತು ವ್ಯಾಖ್ಯಾನ ಪ್ರಶಸ್ತಿಯನ್ನು ಡಾ.ಜ್ಯೋತಿ ಶಂಕರ್, ಮೈಸೂರು ಇವರಿಗೆ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇದರ ಆಡಳಿತಾಧಿಕಾರಿ ಹೆಚ್. ಶಾಂತಾರಾಮ್ ಅವರು ಪ್ರದಾನ ಮಾಡಿದರು. ಬಳಿಕ ಅವರು ಮಾತನಾಡಿ ಗಮಕ ಕಲೆ ಮಾನವತ್ವದಿಂದ ದೈವತ್ವದೆಡೆಗೆ ನಮ್ಮನ್ನು ಕರೆದುಕೊಂಡು ಹೋಗುತ್ತದೆ. ಹಾಗೆ ಶಿಕ್ಷಣವೂ ಸಹ ಒಳ್ಳೆಯ ದಾರಿಯತ್ತ ಕರೆದುಕೊಂಡು ಹೋಗುತ್ತದೆ. ಶಿಕ್ಷಣ ಕೇವಲ ವೃತ್ತಿಯಲ್ಲ ಅಥವಾ ಕಲಿಯುವಿಕೆಯಲ್ಲ್. ವ್ಯಕ್ತಿತ್ವ ವಿಕಸನನದ ಸೆಲೆಯಾಗಿದೆ. ಶಿಕ್ಷಣ ನಿಜವಾದ ಜೀವನ ಶಿಕ್ಷಣವನ್ನು ಬೆಳೆಸಬೇಕು. ಇದನ್ನು ಅರಿಯಬೇಕೆಂದರೆ ಅದಕ್ಕೆ ಸಾಧನವಾದ ಇಂತಹ ಸಾಂಸ್ಕೃತಿಕ ಕಲೆಗಳ ಅರಿವು ಇರಬೇಕು. ಇದನ್ನು ವಿದ್ಯಾರ್ಥಿಗಳು ತಿಳಿಯಬೇಕು. ಅಲ್ಲದೇ ಅರಿಯುವ ಪ್ರಯತ್ನ ಮಾಡಬೇಕು. ಹಾಗೆಯೇ ವಿದ್ಯಾರ್ಥಿಗಳು ಗಮಕ ಕಲೆಯನ್ನು ಪರಿಶ್ರಮ ಪಟ್ಟು ಕಲಿಯಲಿ. ಮತ್ತು ಗಮಕವನ್ನು ಕಲೆಯನ್ನು ಕಲಿಸುವವರು ಮುಂದೆ ಬರಬೇಕು ಎಂದು ಹೇಳಿದರು. ಪ್ರಶಸ್ತಿ ಪುರಸ್ಕೃತ ಹೆಚ್.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ನಾಗೂರಿನ ಕುಸುಮ ಫೌಂಡೇಶನ್ ನಡೆಸುತ್ತಿರುವ ಬ್ಲಾಸಂ ಸಂಗೀತ ನೃತ್ಯ ಶಾಲೆಯ ಫೆಬ್ರವರಿ ತಿಂಗಳ ’ಗಾನಯಾನ-5’ ಕಾರ್ಯಕ್ರಮದಲ್ಲಿ ಸಂಗೀತದ ಬದಲು ಶ್ರೋತೃಗಳಿಗೆ ಹಿಂದೂಸ್ಥಾನಿ ಸಂಗೀತವನ್ನು ಪರಿಚಯಿಸುವ ಪ್ರಾತ್ಯಕ್ಷಿಕೆ ನಡೆಸಲಾಯಿತು. ಭಾನುವಾರದ ಈ ಕಾರ್ಯಕ್ರಮದಲ್ಲಿ ಹಾಜರಿದ್ದವರು ಹೆಚ್ಚು ಆಸಕ್ತರೂ, ಸಹೃದಯಿ ಶ್ರೋತೃಗಳೂ ಆಗಬೇಕೆನ್ನುವುದು ಅದರ ಉದ್ದೇಶವಾಗಿತ್ತು. ಗೋಪಾಡಿಯಲ್ಲಿ ನೆಲೆಸಿ ಗುರುಪರಂಪರಾ ಸಂಗೀತ ಪ್ರತಿಷ್ಠಾನದ ಆಶ್ರಯದಲ್ಲಿ ಸಂಗೀತ ಕಲಿಸುತ್ತಿರುವ, ಪಂ. ಗಣಪತಿ ಭಟ್ ಹಾಸಣಗಿ ಅವರ ಶಿಷ್ಯರೂ, ಆಕಾಶವಾಣಿ ಗ್ರೇಡ್ ಕಲಾವಿದರೂ ಆಗಿರುವ ವಿದ್ವಾನ್ ಸತೀಶ ಭಟ್ ಮಾಳಕೊಪ್ಪ-ಪ್ರತಿಮಾ ಭಟ್ ಮಾಳಕೊಪ್ಪ ದಂಪತಿ ತಮ್ಮ ಹಿರಿಯ ಕಿರಿಯ ಶಿಷ್ಯರನ್ನು ಕೂಡಿಕೊಂಡು ಸಂಗೀತದ ವಿವಿಧ ಮಜಲು ಮತ್ತು ಆಯಾಮಗಳನ್ನು ಶ್ರೋತೃಗಳ ಮುಂದೆ ತೆರೆದಿಟ್ಟರು. ಜತೀಂದ್ರ ಮರವಂತೆ ಮತ್ತು ಗುರುದಂಪತಿಯ ನಡುವಿನ ಸಂವಾದ ಮತ್ತು ವಿಷಯಕ್ಕೆ ಪೂರಕವಾಗಿ ವಿದ್ಯಾರ್ಥಿಗಳ ಹಾಡುಗಾರಿಕೆ, ಶಶಿಕಿರಣ ಮಣಿಪಾಲ ಅವರ ತಬಲಾ ವಾದನದ ಮೂಲಕ ನಡೆದ ಕಾರ್ಯಕ್ರಮ ಸೇರಿದ್ದ ಸಂಗೀತಾಸಕ್ತರ ಕುತೂಹಲ ಮತ್ತು ಜಿಜ್ಞಾಸೆ ತಣಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಂಗಭೂಮಿ ಧರ್ಮ, ಜಾತಿ, ಸ್ಥಳ ಮೀರಿದ ಪ್ರಕ್ರಿಯೆ. ಅದು ತನ್ನ ಚಟುವಟಿಕೆಗಳ ಮೂಲಕ ಸಾಮಾಜಿಕ ಬದಲಾವಣೆಯ ಗುರಿ ಹೊಂದಿದೆ ಎಂದು ಹಿರಿಯ ರಂಗಕರ್ಮಿ ಬಾಸುಮ ಕೊಡಗು ಹೇಳಿದರು. ಇಲ್ಲಿನ ಸುರಭಿ ಸಂಸ್ಥೆ ನಡೆಸುತ್ತಿರುವ 7 ದಿನಗಳ ಶಿಶಿರ ನಾಟಕೋತ್ಸವದ ಅಂಗವಾಗಿ ಶನಿವಾರ ಸುರಭಿ ಕಲಾ ಗ್ರಾಮದಲ್ಲಿ ಆಯೋಜಿಸಿದ್ದ ’ರಂಗಭೂಮಿಯಲ್ಲಿ ಸಂಘಟನೆಯ ಪಾತ್ರ’ ಕುರಿತು ರಂಗಸಂವಾದ ಕಾರ್ಯಕ್ರಮದಲ್ಲಿ ಅವರು ತಮ್ಮ ವಿಚಾರ ಮಂಡಿಸಿದರು. ರಂಗಭೂಮಿಯ ಯಶಸ್ಸಿನಲ್ಲಿ ಅದರ ಹಿಂದಿರುವ ಸಂಘಟನೆಯ ಪಾತ್ರ ನಿರ್ಣಾಯಕವಾದುದು. ಅದರ ಸದಸ್ಯರಿಗೆ ರಂಗಚಟುವಟಿಕೆಯಲ್ಲಿ ಇರುವ ಬದ್ಧತೆಯೇ ಅದರ ಬಲ. ಅದರ ಎಲ್ಲ ಸದಸ್ಯರಿಗೆ ತಮ್ಮನ್ನು ಜನ ಗುರುತಿಸಬೇಕು ಎಂಬ ಹಂಬಲ ಇರುತ್ತದೆ. ಆಗ ಪರಸ್ಪರ ಅಸೂಯೆಯೂ ಇರುತ್ತದೆ. ಎಲ್ಲರಿಗೆ ಆಯ್ಕೆಯ ಸ್ವಾತಂತ್ರ್ಯ ಮತ್ತು ಅವಕಾಶ ನೀಡುವ ಮೂಲಕ ಅದನ್ನು ಮೀರಬಹುದು. ಅದರಲ್ಲಿ ಹೊಣೆಗಳ ವಿಭಜನೆ ಆಗಬೇಕು. ಸಂಘಟನೆಯ ಪರಿಣಾಮಕಾರಿ ನಿರ್ವಹಣೆಯೂ ಅದಕ್ಕೆ ಯಶಸ್ಸು ತಂದುಕೊಡುತ್ತದೆ. ಅದು ಶುದ್ಧ ಚಾರಿತ್ರ್ಯ ಹೊಂದಿರಬೇಕು ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಪರಿ ಸಂಸ್ಥೆಯ ಮುಖ್ಯಸ್ಥ ಮ್ಯಾಗ್ಸಸೆ ಪುರಸ್ಕೃತ ಪತ್ರಕರ್ತ ಪಿ. ಸಾಯಿನಾಥ ಇದೇ 14 ರಂದು ಸಂಜೆ 5.30ಕ್ಕೆ ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಲಾಮಂದಿರದಲ್ಲಿ ‘ಕಾರ್ಪೋರೇಟ್ ಫಾರ್ಮಿಂಗ್ ಮತ್ತು ಭಾರತದ ಕೃಷಿ ಬಿಕ್ಕಟ್ಟುಗಳು’ ಕುರಿತು ಉಪನ್ಯಾಸ ನೀಡಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಮುದಾಯ ಕುಂದಾಪುರದ ಕಾರ್ಯದರ್ಶಿ ಸದಾನಂದ ಬೈಂದೂರು, ‘ಕೃಷಿ ಬಿಕ್ಕಟ್ಟುಗಳು ಹೆಚ್ಚುತ್ತಾ ಹೋಗುತ್ತಿದ್ದು, ರೈತರು ಆತ್ಮಹತ್ಯೆಯತ್ತ ಮುಖ ಮಾಡುತ್ತಿದ್ದಾರೆ. ‘ಕೃಷಿಕರ ಆದಾಯ ದುಪ್ಪಟ್ಟು ಮಾಡುವ ಉದ್ದೇಶ ಹೊಂದಿದ್ದೇವೆ’ ಎಂದು ಸರ್ಕಾರಗಳು ಹೇಳುತ್ತಿವೆ. ಜೊತೆಗೆ ಕಾರ್ಪೋರೇಟ್ ಫಾರ್ಮಿಂಗ್ಗೆ ಪ್ರೋತ್ಸಾಹ ನೀಡುವ ಕ್ರಮಗಳು ವೇಗ ಪಡೆದುಕೊಳ್ಳುತ್ತಿದೆ. ಇಂತಹದೊಂದು ಸನ್ನಿವೇಶದಲ್ಲಿ ರೈತನ ಪಾತ್ರ ಏನು? ಈ ವಿಚಾರಗಳಿಗೆ ರೈತ ಹೇಗೆ ಮುಖಾಮುಖಿ ಆಗಬಹುದು? ಎನ್ನುವ ಬಗ್ಗೆ ರೈತ ಸಮುದಾಯದ ಜೊತೆ ಸಂವಾದ ನಡೆಸುವುದು ಈ ಉಪನ್ಯಾಸದ ಉದ್ದೇಶ’ ಎಂದರು. ‘ಕುಂದಾಪುರಕ್ಕೆ ಮೊದಲ ಬಾರಿ ಬರುತ್ತಿರುವ ಪಿ.ಸಾಯಿನಾಥ ಅವರು, ಮಹಾರಾಷ್ಟ್ರದ ಮರಾಠವಾಡಾ, ವಿದರ್ಭ ಪ್ರಾಂತ್ಯಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗಾಣಿಗ ಸಮಾಜ ಸೇವಾ ಸಂಘ, ತಗ್ಗರ್ಸೆ ಗ್ರಾಮ ಇದರ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭವು ಚಂದಣ ಶ್ರೀ ಸೋಮಲಿಂಗೇಶ್ವರ ದೇವಸ್ಥಾನ ಜರುಗಿತು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರಮೇಶ ಗಾಣಿಗ ಕೊಲ್ಲೂರು ಇವರು ಉದ್ಘಾಟಿಸಿದರು. ನೂತನ ಅಧ್ಯಕ್ಷರಾದ ರಾಜು ಗಾಣಿಗ ಹುಳುವಾಡಿಯವರಿಗೆ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ ಇದರ ಅಧ್ಯಕ್ಷರಾದ ಪ್ರಭಾಕರ ಗಾಣಿಗ ಕುಂಭಾಶಿ ಪದಗ್ರಹಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ನಾಗರಾಜ್ ಗಾಣಿಗ ಬೈಂದೂರು, ಗಾಣಿಗ ಯುವ ಸಂಘಟನೆ, ಬೈಂದೂರು ವಲಯದ ಅಧ್ಯಕ್ಷರಾದ ಗಣೇಶ ಗಾಣಿಗ ಉಪ್ಪುಂದ, ಗ್ರಾಮ ಪಂಚಾಯತ್ ಸದಸ್ಯರಾದ ಭವಾನಿ, ನಾಗರಾಜ್ ಹಾಲಂಬೇರು, ಗೌರವಾಧ್ಯಕ್ಷರಾದ ಗೋವಿಂದ ಗಾಣಿಗ ಹೆಗ್ಗೇರಿ, ಭಜನಾ ಮಂಡಳಿ ಅಧ್ಯಕ್ಷರಾದ ರಂಗ ಗಾಣಿಗ ಮತ್ತು ಸಮಾಜ ಬಾಂದವರು ಉಪಸ್ಥಿತರಿದ್ದರು. ನೂತನ ಕಾರ್ಯದರ್ಶಿ ವೀರಭದ್ರ ಗಾಣಿಗ ಹಾಲಂಬೇರು ಸ್ವಾಗತಿಸಿ, ತಗ್ಗರ್ಸೆ ತಿಮ್ಮಪ್ಪ ಗಾಣಿಗ ಮತ್ತು ನೂತನ ಖಜಾಂಚಿ ಗಣೇಶ್ ಗಾಣಿಗ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜರ ಕಾಲದಿಂದ ಇಂದಿನತನಕವೂ ಕಲಾ ಪ್ರಕಾರಗಳು ಆಶ್ರಯದಲ್ಲಿಯೇ ಬೆಳೆದು ಬರುತ್ತಿವೆ. ಆದರೆ ಕಲೆಗೆ ಸ್ವಾಯತ್ತತೆ ದೊರೆಯುವ ಅವಕಾಶ ಮಾಡಿಕೊಟ್ಟಾಗ ಅದು ಮತ್ತುಷ್ಟು ಗಟ್ಟಿಗೊಳ್ಳುತ್ತವೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕ್ ಹೇಳಿದರು. ಅವರು ಸುರಭಿ ರಿ. ಬೈಂದೂರು ಹಾಗೂ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಿ. ಬೈಂದೂರು ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ರಂಗ ಸುರಭಿ ೨೦೨೦ – ಶಿಶಿರ ನಾಟಕೋತ್ಸವದ ಮೂರನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು. ಚಂಡೆ ಹಾಗೂ ತಬಲ ವಾದಕ ಗೋಪಾಲಕೃಷ್ಣ ಜೋಷಿ ಉಪ್ಪುಂದ ಅವರನ್ನು ಸನ್ಮಾನಿಸಲಾಯಿತು. ರತ್ತೂಬಾಯಿ ಜನತಾ ಪ್ರೌಢಶಾಲೆಯ ಮುಖ್ಯೋಪಧ್ಯಾಯ ಮಂಜು ಕಾಳಾವರ ಅಧ್ಯಕ್ಷತೆ ವಹಿಸಿದ್ದರು. ಉಪ್ಪುಂದದ ವೈದ್ಯ ಎ.ಎಸ್. ಉಡುಪ, ಸುರಭಿ ಬೈಂದೂರು ಅಧ್ಯಕ್ಷ ಸತ್ಯನಾ ಕೊಡೇರಿ, ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಉಪ್ಪುಂದ ಉಪಸ್ಥಿತರಿದ್ದರು. ನಿರ್ದೇಶಕ ಸುಧಾಕರ ಪಿ. ಕಾರ್ಯಕ್ರಮ ನಿರೂಪಿಸಿದರು. ಬಳಿಕ ರಂಗಾಯಣ ಮೈಸೂರು ಪ್ರಸ್ತುತಿಯ, ಶರವಣ್ ಕುಮಾರ್ ರಚಿಸಿ ನಿರ್ದೇಶಿಸಿದ ರೆಕ್ಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಉಪ್ಪುಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ಈಗ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ಎನ್.ಕೆ ಬಿಲ್ಲವ ಹಾಗೂ ಅವರ ಪತ್ನಿ ಜ್ಯೋತಿ ಅವರನ್ನು ಶಾಲೆಯ ಶಿಕ್ಷಕರು, ಎಸ್.ಡಿ.ಎಂ.ಸಿ ಸದಸ್ಯರು ಸನ್ಮಾನಿಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಸುನೀತಾ ಅಧ್ಯಕ್ಷತೆ ವಹಿಸಿದ್ದರು. ಎನ್.ಕೆ ಬಿಲ್ಲವರ ಬಗ್ಗೆ ಮುಖ್ಯಶಿಕ್ಷಕರಾದ ವೆಂಕ್ಟ ಉಪ್ಪಾರರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಹಶಿಕ್ಷಕರಾದ ಭಾರತಿ ಸ್ವಾಗತಿಸಿದರು, ಭಾಸ್ಕರ್ ಪ್ರಭು ಹಾಗೂ ಸಂತೋಷ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ರಾಘವೇಂದ್ರ ದೇವಾಡಿಗ ಸಹಕರಿಸಿದರು.
