ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯೋಗೀಂದ್ರ ಮರವಂತೆ ಒಬ್ಬ ಸಂವೇದನಾಶೀಲ ಬರಹಗಾರ. ’ಲಂಡನ್ ಡೈರಿ-ಅನಿವಾಸಿಯ ಪುಟಗಳು’ ಹೆಸರಿನ ಅವರ ಲೇಖನಗಳ ಸಂಗ್ರಹದಲ್ಲಿ ಇಂಗ್ಲಂಡ್ನ ಜನರ ಬದುಕು ಮತ್ತು ಸನ್ನಿವೇಶಗಳೆಡೆಗಿನ ಒಳನೋಟಗಳಿಂದ ಕೂಡಿದ ಮನಸ್ಸಿಗೆ ಮುದ ನೀಡುವ ಲಲಿತ ಪ್ರಬಂzsಗಳಿವೆ ಎಂದು ಹಿರಿಯ ಲೇಖಕ ಡಾ. ಬಿ. ಜನಾರ್ದನ ಭಟ್ ಹೇಳಿದರು. ಕುಂದಾಪುರದ ಹೋಟೆಲ್ ಹರಿಪ್ರಸಾದದಲ್ಲಿಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಡೆದ ಸಮಾರಂಭದಲ್ಲಿ ಹೊಸಪೇಟೆಯ ಯಾಜಿ ಪ್ರಕಾಶನ ಹೊರತಂದಿರುವ ಯೋಗೀಂದ್ರ ಅವರ ಬಿಡಿಲೇಖನಗಳ ಸಂಗ್ರಹ ’ಲಂಡನ್ ಡೈರಿ’ಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಭಾರತೀಯ ಬದುಕಿನ ಹಿನ್ನೆಲೆಯಿಂದ ಇಂಗ್ಲಂಡ್ ಜನಜೀವನದೊಂದಿಗೆ ಮುಖಾಮುಖಿ ಆಗುವಾಗ ಹುಟ್ಟುವ ದ್ವಂದ್ವದ ವೇಳೆ ಅವರು ತೀರ ಸೂಕ್ಷ್ಮಗ್ರಾಹಿಗಳಾಗಿ ಅದ್ಭುತ ಚಿತ್ರಗಳನ್ನು ಕಟ್ಟಿಕೊಡುತ್ತಾರೆ. ಅವುಗಳಲ್ಲಿ ವಿಷಯದ ಮೂಲಕ್ಕೆ ಹೋಗುವ ಗುಣ, ಪತ್ರಕರ್ತನ ಶೋಧಕ ದೃಷ್ಟಿ ಇರುತ್ತದೆ. ಇವು ಒಬ್ಬ ಪ್ರಬುದ್ಧ ಬರಹಗಾರನಲ್ಲಿ ಮಾತ್ರಕಾಣಬಹುದಾದ ಕೌಶಲ. ಅವರು ತಮ್ಮ ಬರಹಕ್ಕೆ ತಾವು ಪಳಗಿಸಿಕೊಂಡ ಚೇತೋಹಾರಿಯಾದ ಭಾಷೆಯನ್ನು ಬಳಸುತ್ತಾರೆ. ಅದಕ್ಕೆ ಓದುಗನನ್ನು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು, ಅ.14:ಕಳೆದು ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಕೊಲ್ಲೂರು ದೇವಸ್ಥಾನದ ಹೆಣ್ಣಾನೆ ಇಂದಿರಾ ಮಂಗಳವಾರ ರಾತ್ರಿ ಅಸುನೀಗಿದ್ದು, ಬುಧವಾರ ಸಂಜೆ ಇಲ್ಲಿನ ಕಲ್ಯಾಣಗುಡ್ಡೆಯಲ್ಲಿರುವ ಆನೆಯ ಶಡ್ ಬಳಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಕಳೆದ 22 ವರ್ಷಗಳ ಹಿಂದೆ ಕೊಲ್ಲೂರು ದೇವಳಕ್ಕೆ ದಾನವಾಗಿ ಬಂದಿದ್ದ ಹೆಣ್ಣಾನೆ ದೇವಳದ ಭಕ್ತರ ಪ್ರೀತಿಗೆ ಪಾತ್ರವಾಗಿತ್ತು. ಆನೆ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಭಕ್ತರು ಹಾಗೂ ಸಾರ್ವಜನಿಕರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಕೊಲ್ಲೂರು ಪೇಟೆಯಲ್ಲಿ ರಿಕ್ಷಾ ಜೀಪುಗಳನ್ನು ಸ್ಥಗಿತಗೊಳಿಸಿ, ಬಹುತೇಕ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಶ್ರದ್ಧಾಂಜಲಿ ಸಲ್ಲಿಸಿದ್ದು ವಿಶೇಷವಾಗಿತ್ತು. ಬಾಳೆಹೊನ್ನೂರಿನ ಮಧು ಎನ್ನುವವರು ದಾನ ನೀಡಿದ್ದ ಆನೆಗೆ ಐಯಣ್ಣ ಮಾವುತರಾಗಿದ್ದರು. ದೇವಸ್ಥಾನದ ಅಂದಿನ ಮೊಕ್ತೆಸರರಾಗಿದ್ದ ಬಿ. ಅಪ್ಪಣ್ಣ ಹೆಗ್ಡೆ ಅವರ ಅವಧಿಯಲ್ಲಿ ಇಂದಿರಾ ಎಂಬ ನಾಮಕರಣ ಮಾಡಲಾಗಿತ್ತು. ಪ್ರತಿದಿನ ಬೆಳಿಗ್ಗೆ ದೇವಸ್ಥಾನದ ಮುಖ್ಯ ದ್ವಾರದ ಮೂಲಕ ಪ್ರವೇಶಿಸಿ ದೇವಿಗೆ ಮೂರು ಸುತ್ತು ಪ್ರದಕ್ಷಿಣೆ ಹಾಕಿ, ಧ್ವಜಕ್ಕೆ ವಂದಿಸಿ, ಅಧಿಕಾರಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುವವಾಹಿನಿ ರಿ. ಮಂಗಳೂರು ಇದರ ಪುತ್ತೂರು ಘಟಕದ ಆಶ್ರಯದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಎದುರು ಭಾನುವಾರ ಜರುಗಿದ 32ನೇ ವಾರ್ಷಿಕ ಸಮಾವೇಶದಲ್ಲಿ ಯಶಸ್ವಿ ಉದ್ಯಮಿ ಹಾಗೂ ಸಾಧಕ ಗೋವಿಂದ ಬಾಬು ಪೂಜಾರಿ ಅವರಿಗೆ ‘ಯುವ ಸಾಧನಾ’ ಪುರಸ್ಕಾರ ಪ್ರದಾನ ಮಾಡಲಾಯಿತು. ಪುತ್ತೂರು ಉಪವಿಭಾಗ ಸಹಾಯಕ ಕಮಿಷನರ್ ಹೆಚ್. ಕೆ. ಕೃಷ್ಣಮೂರ್ತಿ, ರಾಜ್ಯದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ, ಆರ್ಥಿಕ ಹಾಗೂ ಶಿಕ್ಷಣ ತಜ್ಞ ಸಿ. ಕೆ. ಅಂಚನ್, ಚಲನಚಿತ್ರ ನಿರ್ಮಾಪಕ, ನಟ ಡಾ. ರಾಜಶೇಖರ್ ಕೋಟ್ಯಾನ್, ನಟಿ ನವ್ಯ ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿ ರಿ. ಮಂಗಳೂರು ಇದರ ಅಧ್ಯಕ್ಷ ಜಯಂತ ನಡುಬೈಲು, ಪ್ರಧಾನ ಕಾರ್ಯದರ್ಶಿ ಸುನಿಲ್ ಅಂಚನ್, ೩೨ನೇ ವಾರ್ಷಿಕ ಸಮಾವೇಶದ ಸಂಚಾಲಕ ನಾರಾಯಣ ಪೂಜಾರಿ ಕುರಿಕ್ಕಾರು, ಯುವವಾಹಿನಿಯ ವಿವಿಧ ಘಟಕಗಳು ಪದಾಧಿಕಾರಿಗಳು ಸೇರಿದಂತೆ ಇತರರು ವೇದಿಕೆಯಲ್ಲಿದ್ದರು. ಮಣಿಪಾಲದ ಉದಯ ಸಮೂಹ ಸಂಸ್ಥೆಗಳ ಪ್ರವರ್ತಕ ರಮೇಶ್ ಎ. ಬಂಗೇರ ಅವರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಶಿಧರ ಹೆಮ್ಮಾಡಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಾಗರಾಜ ರಾಯಪ್ಪನಮಠ ಪುನರಾಯ್ಕೆಯಾಗಿದ್ದಾರೆ. ಸಂಘದ ಉಪಾಧ್ಯಕ್ಷರುಗಳಾಗಿ ಎಸ್. ಎಂ. ಮಝರ್, ಸಂತೋಷ ಕುಂದೇಶ್ವರ, ಕೋಶಾಧಿಕಾರಿಯಾಗಿ ಸತೀಶ ಆಚಾರ್ ಉಳ್ಳೂರು, ಜತೆ ಕಾರ್ಯದರ್ಶಿಯಾಗಿ ರಾಘವೇಂದ್ರ ಬಳ್ಕೂರು, ಕಾರ್ಯಕಾರಿ ಮಂಡಳಿ ಸದಸ್ಯರಾಗಿ ರಾಘವೇಂದ್ರ ಪೈ, ಉದಯ ಕುಮಾರ ತಲ್ಲೂರು, ವಿನಯ ಪಾಯಸ್, ಜಿ. ಎಂ. ಶೆಣೈ, ಬರ್ನಾಡ್ ಡಿಕೋಸ್ಟ್, ಜಯಶೇಖರ ಮಡಪ್ಪಾಡಿ, ಚಂದ್ರಮ ತಲ್ಲೂರು, ಭಾಸ್ಕರ ಶೆಟ್ಟಿ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರೂರು ಅಳ್ವೆಗದ್ದೆ ಬಂದರಿನ ಸಂಪರ್ಕ ರಸ್ತೆ ದುರಸ್ತಿಗಾಗಿ ೮೦ ಲಕ್ಷ ರೂ ಮಂಜೂರಾಗಿದ್ದು, ಕಾಮಗಾರಿಗೆ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ತಾ. ಪಂ ಸದಸ್ಯ ಪುಪ್ಪರಾಜ ಶೆಟ್ಟಿ, ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ದೀಪಕಕುಮಾರ ಶೆಟ್ಟಿ, ಶಿರೂರು ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ರಾಮ ಎಂ. ಮೊಗೇರ್, ಇಂಜಿನೀಯರ್ ವಿಜಯ ಶೆಟ್ಟಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ಸಂಕಷ್ಟಕ್ಕೆ ಮಿಡಿದ ಬೈಂದೂರು ಯುವ ಕಾಂಗ್ರೆಸ್ ಕಾರ್ಯಕರ್ತರ ತಂಡ ಭಾನುವಾರ ಮಾಜಿ ಶಾಸಕ ಗೋಪಾಲ ಪೂಜಾರಿಯವರ ಸೂಚನೆ ಮೇರೆಗೆ ಬೈಂದೂರು ಪೇಟೆಯಲ್ಲಿ ಪರಿಹಾರ ಸಾಮಾಗ್ರಿ ಸಂಗ್ರಹಣೆ ಕಾರ್ಯ ನಡೆಸಿತು. ಈ ಸಂದರ್ಭ ಬ್ಲಾಕ್ ಅಧ್ಯಕ್ಷ ಮದನ್ ಕುಮಾರ್, ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಮುಖಂಡರುಗಳಾದ ಎಸ್. ರಾಜು ಪೂಜಾರಿ, ಪ್ರಕಾಶ್ಚಂದ್ರ ಶೆಟ್ಟಿ, ಮೋಹನ್ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಶೇಖರ್ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯ ಜಗದೀಶ್ ದೇವಾಡಿಗ, ಯಡ್ತರೆ ಪಂಚಾಯತ್ ಅಧ್ಯಕ್ಷೆ ಮೂಕಾಂಬು ದೇವಾಡಿಗ, ಸದಸ್ಯ ಉಮೆಶ್ ದೇವಾಡಿಗ, ವಾಸು ಪೂಜಾರಿ, ದೀಪಕ್ ನಾವುಂದ, ಸನತ್ ಬಳೆಗಾರ್ ಕೊಲ್ಲೂರು, ಪ್ರಶಾಂತ್ ಪೂಜಾರಿ ಕರ್ಕಿ, ವಿಜಯ್ ನಾಗೂರು, ಜಯಂತ್ ಬಡಾಕೆರೆ, ಹರೀಶ್ ಮರವಂತೆ, ವಿನಾಯಕ್ ಕೊಲ್ಲೂರು, ಸೋಮಶೇಖರ್ ಮೊದಲಾದವರು ಪಾಲ್ಗೊಂಡರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಿನ್ನೆ ಸುರಿದ ಬಾರಿ ಮಳೆಗೆ ತಾಲೂಕಿನ ಕೆರ್ಗಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದನವನ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿದು ಅಪಾರ ಹಾನಿ ಸಂಭವಿಸಿದೆ. ಶಾಲೆಯ ಮಧ್ಯಭಾಗದ ಕಟ್ಟಡದ ಗೋಡೆ ಕುಸಿದಿದ್ದು, ಛಾವಣಿ ಹಾರಿ ಹೋಗಿ ಸಂಪೂರ್ಣ ನೆಲಸಮವಾಗಿದೆ. ಇನ್ನೊಂದು ಭಾಗದ ಗೋಡೆಯೂ ಶಿಥಿಲಗೊಂಡಿದ್ದು ಉರುಳುವ ಭೀತಿ ಇದೆ. ಕಳೆದೊಂದು ವಾರದಿಂದ ನಿರಂತರವಾಗಿ ಗಾಳಿಮಳೆ ಸುರಿಯುತ್ತಿದ್ದ ಪರಿಣಾಮ ಶಾಲಾ ಕಟ್ಟಡ ಕುಸಿದಿತ್ತು. ಶಾಲೆಯಲ್ಲಿ 1 ರಿಂದ 5 ತನಕ ಒಟ್ಟು 15 ಮಕ್ಕಳಿದ್ದಾರೆ. ರಾತ್ರಿ ವೇಳೆಯಾದ್ದರಿಂದ ಮತ್ತು ಕಳೆದ ಮೂರು ದಿನದಿಂದ ಶಾಲೆಗೆ ರಜೆ ಇದ್ದ ಕಾರಣ ಯಾವುದೇ ಪ್ರಾಣಹಾನಿಯಾಗಿಲ್ಲ. ಶಾಲಾಗೆ 100 ವರ್ಷದ ಇತಿಹಾಸವಿದ್ದು, ಕಟ್ಟಡ ಶಿಥಿಲಾವಸ್ಥೆಯಲ್ಲಿತ್ತು. ಕುಂದಾಪ್ರ ಡಾಟ್ ಕಾಂ ಸುದ್ದಿ. ,
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ,ಅ10 : ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜೀವ ಹಾನಿ ಮತ್ತು ಆಸ್ತಿ ಪಾಸ್ತಿ ನಷ್ಟಕ್ಕೊಳಗಾದವರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ, ಅಗತ್ಯ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಿ, ಪರಿಹಾರ ವಿತರಣೆ ಸಂದರ್ಭದಲ್ಲಿ ಸಂತ್ರಸ್ಥರಿಗೆ ಗರಿಷ್ಠ ಪರಿಹಾರ ಒದಗಿಸುವಂತೆ ಸಂಬಂಧ ಪಟ್ಟ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಉಡುಪಿ-ಚಿಕ್ಕಮಗಳೂರು ಜಿಲ್ಲೆಯ ಸಂಸದೆ ಶೋಭಾ ಕರಂದ್ಲಾಜೆ ಸೂಚನೆ ನೀಡಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯ ಸಂಸದರ ಸಭಾಂಗಣದಲ್ಲಿ ನಡೆದ ನೆರೆ ಹಾವಳಿ ಮತ್ತು ಪ್ರಾಕೃತಿಕ ವಿಕೋಪ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ಮಳೆಯಿಂದ ಉಂಟಾಗಿರುವ ಹಾನಿಯನ್ನು ಸಮರ್ಥವಾಗಿ ನಿಭಾಯಿಸಲು ಎಲ್ಲಾ ಅಧಿಕಾರಿಗಳೂ ದಿನದ ಇಪ್ಪತ್ತನಾಲ್ಕು ಘಂಟೆಯೂ ಸಾರ್ವಜನಿಕರ ಜೊತೆ ಸಂಪರ್ಕದಲ್ಲಿರಬೇಕು ಮತ್ತು ತುರ್ತು ಸಂಧರ್ಭದಲ್ಲಿ ಜನರ ನೆರವಿಗೆ ಧಾವಿಸಲು ಜಿಲ್ಲಾಧಿಕಾರಿ ಸಹಿತ ಅರಣ್ಯ ಇಲಾಖೆ, ಆರೋಗ್ಯ ಇಲಾಖೆ, ಪೋಲೀಸ್ ಇಲಾಖೆ, ಅಗ್ನಿಶಾಮಕ ದಳದವರು ಮತ್ತು ಸಂಬಂಧಪಟ್ಟ ಎಲ್ಲಾ ಇಲಾಖೆಗಳೂ ಸರ್ವ ಸನ್ನದ್ಧರಾಗಿರಬೇಕು ಎಂದರು. ಜಿಲ್ಲೆಯಲ್ಲಿ ಮಳೆ ಮತ್ತು ನೆರೆಯಿಂದ ಹಾನಿಗೊಳಗಾದವರಿಗೆ ಮಾನವೀಯ ನೆಲೆಯಲ್ಲಿ…
ಕುಂದಾಪ್ರ ಡಾ ಕಾಂ ಸುದ್ದಿ. ಕುಂದಾಪುರ: ಪ್ರಗತಿಪರ ವೈರುದ್ಯಗಳ ನಡುವಿನಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟ ರಾಜ್ಯಕ್ಕೆ ಪ್ರಥಮ ಹಾಗೂ ರಾಷ್ಟ್ರದಲ್ಲಿ ೨ನೇ ಸ್ಥಾನದಲ್ಲಿದ್ದೇವೆ ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾದ ಕೊಡವೂರು ರವಿರಾಜ ಹೆಗ್ಡೆಯವರು ತಿಳಿಸಿದರು. ಕುಂದಾಪುರ ರಾಮ ಮಂದಿರದ ಸಭಾ ಭವನದಲ್ಲಿ ನಡೆದ ಕುಂದಾಪುರ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಸಮಾಲೋಚನಾ ಸಭೆಯಲ್ಲಿ ಮಾತನಾಡಿ ಈ ಹಿಂದಿನಂತೆ ವಿವಿಧ ತಾಂತ್ರಿಕ ಸೌಲಭ್ಯಗಳಿಗೆ ಅನುದಾನ ಮುಂದುವರಿಸಿದ್ದು ಇದಲ್ಲದೆ ರೈತ ಕಲ್ಯಾಣ ಟ್ರಸ್ಟ್ ಮೂಲಕ ಜಾನುವಾರು ಹಾಗೂ ಉತ್ಪಾದಕ ಸದಸ್ಯರು ಮರಣ ಹೊಂದಿದಾಗ, ಉತ್ಪಾದಕ ಸದಸ್ಯರು ಆಸ್ಪತ್ರೆಗೆ ದಾಖಲಾಗಿ ಆದ ವೆಚ್ಚದ ಬಾಬ್ತು ಆರ್ಥಿಕ ಸಹಾಯ ನೀಡುತ್ತಿದೆ ಅಲ್ಲದೆ ೧೦೦೦೦ ಜಾನುವಾರುಗಳನ್ನು ವಿಮೆಗೊಳಪಡಿಸುವ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಿಳಿಸಿದರು. ಸಭೆಯಲ್ಲಿ ಒಕ್ಕೂಟದ ಉಪಾಧ್ಯಕ್ಷರು ಶ್ರೀ ಪ್ರಕಾಶ್ಚಂದ್ರ ಶೆಟ್ಟಿ ವ್ಯವಸ್ಥಾಪನ ನಿರ್ದೇಶಕರಾದ ಡಾ. ಜಿ.ವಿ ಹೆಗ್ಡೆಯವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕರುಗಳಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಶ್ರೀ ಸಾಯಿ ಗ್ರಾಮೀಣಾಭಿವೃಧ್ಧಿ ಟ್ರಸ್ಟ್ (ರಿ) ಮುಳ್ಳಿಕಟ್ಟೆ ಇವರ ವತಿಯಿಂದ ಸಮಾಜದಲ್ಲಿ ಅಬಾಲರು ಮತ್ತು ವೃದ್ದರು ಯೋಗಕ್ಷೇಮ ಕಾರ್ಯಕ್ರಮದಡಿಯಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹೊಲಿಕ್ರಾಸ್ ಕಾನ್ವೆಂಟ್ ವೃದ್ದಾಶ್ರಮ ತ್ರಾಸಿ ಇಲ್ಲಿನ ವಯೋವೃದ್ದರ ಜೊತೆಗೆ ಕೇಕ್ ತಿನ್ನಿಸಿ ಅವರ ಜೊತೆ ಸಣ್ಣ ಸಣ್ಣ ಆಟೋಟಗಳನ್ನು ಏರ್ಪಡಿಸಿ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ನ ಚೆರ್ಮನ್ ಭಾಸ್ಕರ ಬಿಲ್ಲವ ಕೇಕ್ ತಿನ್ನಿಸಿ ಉದ್ಘಾಟಿಸಿದರು. ಮುಖ್ಯ ಅಥಿತಿಯಾಗಿ ಬೇಬಿ ಕೊಠಾರಿ ಕೆರ್ಗಾಲ್, ಹರೀಶ ಖಾರ್ವಿ ಉಪ್ಪುಂದ, ಕಾನ್ವೆಂಟ್ನ ಸಿಸ್ಟರ್ಸ್ ಮತ್ತು ವಿವಿಧ ಸ್ವ.ಸಹಾಯ ಸಂಘದ ಪದಾಧಿಕಾರಿಗಳಾದ ನಾಗರತ್ನ ಹೆಮ್ಮಾಡಿ, ಲಕ್ಷ್ಮಿ ಕಟ್ಬೇಲ್ತೂರು, ಪವಿತ್ರಾ, ಶೋಭಾ, ಸುಷನ್ಯ, ಸುವೀಷ ಕುಮಾರ, ಧನ್ಯ, ಮತ್ತು ಶ್ರೀ ಸಾಯಿ ಮಹಿಳಾ ಆರ್ಥಿಕ ಸೇವಾ ಸಹಕಾರ ಸಂಘದ ಸಿಬ್ಬಂದಿಗಳಾದ ರೇಖಾ, ಸಂತೋಷ ಮತ್ತು ಪ್ರತಿಭಾ ಉಪಸ್ಥಿತರಿದ್ದರು.
