Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ‘ದೇಶದಲ್ಲಿ ನಡೆಯುತ್ತಿರುವ ವ್ಯಾಪಾರಿ ಪ್ರವೃತ್ತಿಯ ರಾಜಕಾರಣಿಗಳ ಆಡಳಿತದಿಂದ ಪ್ರಜಾತಂತ್ರ ವ್ಯವಸ್ಥೆ ಅರ್ಥ ಕಳೆದುಕೊಂಡಿದೆ. ಅದರ ಸ್ಥಾನದಲ್ಲಿ ಪ್ರಜೆಗಳ ಆಡಳಿತ ಅಥವಾ ಪ್ರಜಾಕೀಯ ನೆಲೆಗೊಳಿಸಬೇಕು ಎನ್ನುವುದು ಚಿತ್ರನಟ ಉಪೇಂದ್ರ ಸಾರಥ್ಯದ ‘ಉತ್ತಮ ಪ್ರಜಾಕೀಯ ಪಕ್ಷ’ದ ಉದ್ದೇಶ’ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ  ಪಕ್ಷದ ಅಭ್ಯರ್ಥಿ ವೆಂಕಟೇಶ ಆರ್. ಹೇಳಿದರು. ಬುಧವಾರ ಇಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಇಂದಿನ ಚುನಾವಣೆ ಮತ್ತು ರಾಜಕೀಯದಲ್ಲಿ ಹಣ ಮತ್ತು ತೋಳ್ಬಲ ಮೇಲುಗೈ ಸಾಧಿಸುತ್ತಿವೆ. ಅಭ್ಯರ್ಥಿ ಚುನಾವಣೆ ಗೆಲ್ಲಲು ಹಣ ಹೂಡಿದಾಗ ಗೆದ್ದ ಬಳಿಕ ಲಾಭಸಹಿತ ಹಿಂಪಡೆಯುವ ಅನಿವಾರ್ಯತೆ ಇದ್ದೇ ಇರುತ್ತದೆ. ಇದು ಆಡಳಿತ ವ್ಯವಸ್ಥೆಯ ಮೇಲೆ ಮಾಡುವ ದುಷ್ಪರಿಣಾಮವನ್ನು ಕಾಣುತ್ತಿದ್ದೇವೆ. ಭ್ರಷ್ಟಾಚಾರದ ಸಾಂಸ್ಥೀಕರಣ ಆಗಿಬಿಟ್ಟಿದೆ. ಪ್ರಜಾಕೀಯ ಇದಕ್ಕೆ ಪರ್ಯಾಯ ಎನಿಸಿದೆ. ಅದು ಜನರ ಆಶೋತ್ತರಗಳನ್ನು, ಬೇಡಿಕೆಗಳನ್ನು ಈಡೇರಿಸುವ ಆಡಳಿತ ನೀಡಲು ಬದ್ಧವಾಗಿದೆ. ಅದು ಯಾವುದೇ ಪ್ರಣಾಳಿಕೆಯನ್ನು ಹೊಂದಿಲ್ಲ. ಪ್ರಚಾರಕ್ಕೆ ವೆಚ್ಚ ಮಾಡುವುದಿಲ್ಲ. ಭ್ರಷ್ಟಾಚಾರ ಮುಕ್ತ ಆಡಳಿತ ಅದರ ಗುರಿ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಯಡ್ತರೆ ಶ್ರೀ ಪಾಣ್ತಿಗರಡಿ ಹೈಗುಳಿ ಮತ್ತು ಪರಿವಾರ ದೈವಸ್ಥಾನದಲ್ಲಿ ಎಪ್ರಿಲ್ 16ರಿಂದ 19ರ ತನಕ ಶ್ರೀ ಪಾಣ್ತಿಗರಡಿ ಹೈಗುಳಿ ಮತ್ತು ಪರಿವಾರ ದೈವಗಳ ಪುನರ್‌ಪ್ರತಿಷ್ಠಾ ಬ್ರಹ್ಮಕಶಾಭಿಷೇಕ ಮಹೋತ್ಸವ ಜರುಗಲಿದೆ. ವೇ. ಮೂ. ಜ್ಯೋತಿಷಿ ಭಟ್ಕಳ ರಮೇಶ ಭಟ್ಟರ ಆದ್ವರ್ಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ. ದಿನಾಂಕ ಎ.16ರ ಮಂಗಳವಾರ ಬೆಳಿಗ್ಗೆ ಸಾಮೂಹಿಕ ದೈವ ದೇವರ ಪ್ರಾರ್ಥನೆ, ಮಹಾಸಂಕಲ್ಪ, ಧ್ವಜಾರೋಹಣ, ಗಣಹೋಮ ಮೊದಲಾದ ಧಾರ್ಮಿಕ ಕಾರ್ಯಗಳು, ಸಂಜೆ ವಿವಿಧ ಹೋಮ ಹವನಾದಿಗಳು ಇರಲಿವೆ. ಎ.17ರ ಬುಧವಾರ ಬೆಳಿಗ್ಗೆ ಶ್ರೀ ನಾಗ ದೇವರ ಬಿಂಬ ಪ್ರತಿಷ್ಠೆ, ವಿವಿಧ ಪೂಜೆ ಹಾಗೂ ಹೋಮಗಳು ನಡೆಯಲಿದೆ. ಎ.18ರ ಗುರುವಾರ ಬೆಳಿಗ್ಗೆ ಬಿಂಬ ಶುದ್ಧಿ ಹೋಮ, ಕಲಶ ಸ್ಥಾಪನೆ, ಸಂಜೆ ಶ್ರೀ ದೈವಗಳ ಬಿಂಬ ಪ್ರತಿಷ್ಠಾ ಸಹಿತ ಜೀವ ಕುಂಭಾಭಿಷೇಕ, ಪ್ರತಿಷ್ಠಾ ಕಲಶಾಭಿಷೇಕ, ಪ್ರಾಣ ಪ್ರತಿಷ್ಠೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ಜರುಗಲಿದೆ. ಮೂರು ದಿನಗಳ ಕಾಲ ಅನ್ನಸಂತರ್ಪಣೆ ನಡೆಯಲಿದೆ. ದಿನಾಂಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಶಾಲೆಯ ಹಳೆ ವಿದ್ಯಾರ್ಥಿ, ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಶಾಲಾ ಮುಖ್ಯೋಪಧ್ಯಾಯ ಜನಾರ್ದನ್ ಇದ್ದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ, ಸದಸ್ಯರು ಮೊದಲಾದವರು ವೇದಿಕೆಯಲ್ಲಿದ್ದರು. ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತಿ ಅಗತ್ಯ. ಸರಕಾರಿ ಶಾಲೆಗಳಲ್ಲಿ ಅವಶ್ಯವಾದ ಮೂಲಭೂತ ಸೌಕರ್ಯವನ್ನು ಒದಗಿಸಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಗ್ರಾಮಸ್ಥರು ಹಾಗೂ ಹಳೆ ವಿದ್ಯಾರ್ಥಿಗಳ ಸಹಕಾರವೂ ಮುಖ್ಯವಾದುದು ಎಂದು ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಹೇಳಿದರು. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಉಪ್ಪುಂದ ಇದರ ಪ್ರತಿಭಾ ಪುರಸ್ಕಾರ 2019 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಶಾಲೆಯಲ್ಲಿ ಹಳೆವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಒಂದಾಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿರುವು ಸಂತಸದ ವಿಷಯ ಎಂದು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀಧರ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಹಳೆ ವಿದ್ಯಾರ್ಥಿ ಪಲ್ಲವಿ ಇಡೂರು, ರಾಘವೇಂದ್ರ ಉಪ್ಪುಂದ, ಬೈಂದೂರು ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ, ಗ್ರಾಮಸ್ಥರಾದ ಶ್ರೀನಿವಾಸ ಉಬ್ಜೇರಿ, ಉಪ್ಪುಂದ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಶ್ರೀಗಣೇಶ್, ಸಮೂಹ ಸಂಪನ್ಮೂಲ ವ್ಯಕ್ತಿ ಸುಬ್ರಹ್ಮಣ್ಯ ಜಿ.…

Read More

ಕುಂದಾಪ್ರ ಡಾಟ್ ಕಾಂ ವರದಿ. ಪ್ರಜಾಪ್ರಭುತ್ವ ವ್ಯವಸ್ಥೆಯ ಜೀವಾಳವೇ ಮತದಾನ. ಯಾವುದೇ ಧರ್ಮ, ಅಂತಸ್ತು, ಲಿಂಗ ಬೇಧವಿಲ್ಲದೇ ಪ್ರತಿಯೊಬ್ಬ ನಾಗರೀಕರೂ ಸಮಾನವಾಗಿ ಪಡೆದಿರುವ ಮತದಾನದ ಹಕ್ಕು , ತಮ್ಮ ಆಯ್ಕೆಯ ಯೋಗ್ಯ ಪ್ರತಿನಿಧಿಯನ್ನು ಆರಿಸಲು ದೊರೆತಿರುವ ಮುಕ್ತ ಸ್ವಾತಂತ್ರ. ಈ ಮತದಾನ ಪ್ರಕ್ರಿಯೆಯಲ್ಲಿ, ಮತದಾರರು ಚಲಾಯಿಸುವ ಮತ ತಮ್ಮ ಆಯ್ಕೆಯ ವ್ಯಕ್ತಿಗೆ ದೊರೆತಿದೆ ಎಂಬುದನ್ನು ಖಾತರಿ ಪಡಿಸಲು ಚುನಾವಣಾ ಆಯೋಗ ಒದಗಿಸಿರುವ ವಿವಿ ಪ್ಯಾಟ್ (Voter Verifiable Paper Audit Trail) ಯಂತ್ರ ಮತದಾನದ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ವಿಶ್ವಾಸಾರ್ಹತೆ ಮೂಡಿಸುತ್ತದೆ. ಹಿಂದೆ ಮತದಾನ ಸಂದರ್ಭದಲ್ಲಿ ಮತಪತ್ರಗಳನ್ನು ಬಳಸುತ್ತಿದ್ದು, ಇದರಿಂದ ಚುನಾವಣಾ ಪ್ರಕ್ರಿಯೆ ಅತ್ಯಂತ ನಿಧಾನಗತಿಯಲ್ಲಿ ನಡೆಯುತ್ತಿತ್ತು ಇದನ್ನು ಸರಿಪಡಿಸುವ ಉದ್ದೇಶದಿಂದ ಚುನಾವಣಾ ಆಯೋಗ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಬಳಕೆಯನ್ನು ಜಾರಿಗೆ ತಂದಿತು, ಇದರಿಂದ ಶೀಘ್ರದಲ್ಲಿ ಮತದಾನ ಮುಗಿದು ಮತ್ತು ಅತ್ಯಂತ ನಿಖರವಾಗಿ ಮತ್ತು ತ್ವರಿತಗತಿಯಲ್ಲಿ ಅಭ್ಯರ್ಥಿಯ ಆಯ್ಕೆ ಘೋಷಣೆ ನಡೆಯಲು ಸಾದ್ಯವಾಯಿತು. ಆದರೆ ಎಲೆಕ್ಟ್ರಾನಿಕ್ ಮತಯಂತ್ರಗಳ ಬಗೆಗಿನ ಅಪಪ್ರಚಾರದಿಂದ ಮತದಾರರು ಗೊಂದಲಕ್ಕೊಳಗಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಕೊಟ್ಟ ಭರವಸೆಗಳನ್ನು ಈಡೇರಿಸಿ ಜನರಲ್ಲಿ ವಿಶ್ವಾಸ ಮೂಡಿಸಿರುವುದಲ್ಲದೇ, ವಿಶ್ವದ ಮುಂದೆ ಭಾರತ ತಲೆಯೆತ್ತುವಂತೆ ಮಾಡಿದ್ದಾರೆ. ಹಾಗಾಗಿ ನಮ್ಮ ನಾಯಕನ ಹೆಸರನ್ನು ಹೇಳಿಯೇ ಚುನಾವಣೆ ಎದುರಿಸಲು ನಮಗೆ ಹೆಮ್ಮೆ ಇದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಹೇಳಿದರು. ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿಯ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದೇಶದಲ್ಲಿ ೩೦೦ ಲೋಕಸಭಾ ಕ್ಷೇತ್ರಗಳನ್ನು, ಕರ್ನಾಟಕದಲ್ಲಿ ಕನಿಷ್ಠ ೨೨ ಲೋಕಸಭಾ ಕ್ಷೇತ್ರಗಳನ್ನು ಗೆದ್ದು ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುತ್ತಾರೆ ಎಂದರು. ನರೇಂದ್ರ ಮೋದಿಯವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುಂಚೆ ಭ್ರಷ್ಟಾಚಾರ ಮುಕ್ತ ಸರಕಾರ, ಶ್ರೀಸಾಮಾನ್ಯರಿಗೆ ತಲುಪುವಂತಹ ಅಭಿವೃದ್ಧಿ ಕಾರ್ಯ, ದೇಶದ ಗಡಿಗಳ ರಕ್ಷಣೆ, ವಿದೇಶದಲ್ಲಿ ಭಾರತದ ಗೌರವ ಹೆಚ್ಚುವ ರೀತಿಯಲ್ಲಿ ಮುನ್ನಡೆಯುದಾಗಿ ಹೇಳಿದ್ದರು. ಅದರಂತೆಯೇ ನಡೆದಿದ್ದಾರೆ. ಜನರ ವಿಶ್ವಾಸವನ್ನು ಉಳಿಸಿಕೊಂಡಿದ್ದಾರೆ ಎಂದರು. ಕುಮಾರಸ್ವಾಮಿ ನೇತೃತ್ವದ ಭ್ರಷ್ಟಾಚಾರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದೇಶದಲ್ಲಿ 300 ಲೋಕಸಭಾ ಕ್ಷೇತ್ರಗಳನ್ನು, ಕರ್ನಾಟಕದಲ್ಲಿ ಕನಿಷ್ಠ 22 ಲೋಕಸಭಾ ಕ್ಷೇತ್ರಗಳನ್ನು ಗೆದ್ದು ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಬೈಂದೂರಿನ ಹೋಟೆಲ್ ಅಂಬಿಕಾ ಇಂಟರ್‌ನ್ಯಾಷನಲ್‌ನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ ನರೇಂದ್ರ ಮೋದಿಯವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುಂಚೆ ಭ್ರಷ್ಟಾಚಾರ ಮುಕ್ತ ಸರಕಾರ, ಶ್ರೀಸಾಮಾನ್ಯರಿಗೆ ತಲುಪುವಂತಹ ಅಭಿವೃದ್ಧಿ ಕಾರ್ಯ, ದೇಶದ ಗಡಿಗಳ ರಕ್ಷಣೆ, ವಿದೇಶದಲ್ಲಿ ಭಾರತದ ಗೌರವ ಹೆಚ್ಚುವ ರೀತಿಯಲ್ಲಿ ಮುನ್ನಡೆಯುದಾಗಿ ಹೇಳಿದ್ದರು. ಅದರಂತೆಯೇ ನಡೆದಿದ್ದಾರೆ. ಜನರ ವಿಶ್ವಾಸವನ್ನು ಉಳಿಸಿಕೊಂಡಿದ್ದಾರೆ ಎಂದರು. ಕುಮಾರಸ್ವಾಮಿ ನೇತೃತ್ವದ ಭ್ರಷ್ಟಾಚಾರ ಸರಕಾರದಿಂದ ಜನರು ಬೇಸತ್ತಿದ್ದಾರೆ. ಸಚಿವ ರೇವಣ್ಣ ಕಾಮಗಾರಿಯೇ ನಡೆಸದೇ ಸರಕಾರದ ಹೊಡೆಯುವ ಕೆಲಸ ಮಾಡಿದ್ದಾರೆ. ಜನರು ಇದನ್ನೆಲ್ಲಾ ಗಮನಿಸುತ್ತಿದ್ದಾರೆ ಎಂದರು. ರಾಜ್ಯದಲ್ಲಿ ಮೋದಿ ಅಲೆ ಇದ್ದು, ಮೈತ್ರಿ ಅಭ್ಯರ್ಥಿಗಳಿಗೆ ಕಂಟಕ ಎದುರಾಗಿದೆ. ನಿಶ್ಚಿತವಾಗಿ ಈ ಭಾರಿ ಬಹುಮತದಿಂದ ಬಿಜೆಪಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುತ್ತೇವೆಂದು ಹೇಳಿಕೊಂಡು ಚುನಾವಣೆ ಎದುರಿಸುತ್ತಿದ್ದ ಬಿಜೆಪಿ ಪಕ್ಷವೀಗ ರಾಮಮಂದಿರವನ್ನು ಮರೆತುಬಿಟ್ಟಿದೆ. ರಾಮ ಈಗ ಬಿಜೆಪಿ ಪಕ್ಷದಲ್ಲಿಲ್ಲ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದರು. ಅವರು ಮರವಂತೆ ಸಾಧನಾ ಸಭಾಭವನದಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ರಾಮಮಂದಿರ ಕಟ್ಟುತ್ತೇನೆಂದವರು ಈಗ ಮರೆತಿರುವುದ್ಯಾಕೆ ಎಂದು ಪ್ರಶ್ನಿಸಿದ ಅವರು ಇತರ ಪಕ್ಷದವರ‍್ಯಾರೂ ಹಿಂದುಗಳಲ್ಲ ಎಂದು ಬಿಂಬಿಸುತ್ತಿದ್ದ ಬಿಜೆಪಿ ಹಿಂದುತ್ವವನ್ನು ಬಿಟ್ಟುಬಿಟ್ಟಿದೆ ಎಂದರು. ನಾವೆಲ್ಲ ಹಿಂದುಗಳೇ ಆದರೂ ಎಲ್ಲಾ ಧರ್ಮದವರೊಂದಿಗೆ ಸೌಹಾರ್ದಯುತವಾಗಿ ಬದುಕುತ್ತಿದ್ದೇವೆ. ಧರ್ಮದ ಹೆಸರಿದಲ್ಲಿ ದ್ವೇಷ ಬಿತ್ತುವ ಕೆಲಸ ಮಾಡಿಲ್ಲ ಎಂದರು. ಬಿಜೆಪಿ 4,500 ಕೋಟಿ ಉದ್ಯಮಿಗಳ ಸಾಲವನ್ನು ಮನ್ನ ಮಾಡಿದೆ. ಆದರೆ ಕುಮಾರಸ್ವಾಮಿ ಅವರು ಕರ್ನಾಟಕದ ರೈತರ ಸಾಲ ಮನ್ನ ಮಾಡಿದರೆ ಇದು ಪಾಪದ ಕೆಲಸ ಎಂದು ಪ್ರಧಾನಿ ಲೇವಡಿ ಮಾಡುತ್ತಾರೆ. ಅವರದ್ದು ಭಾರತೀಯ ಜನತಾ ಪಾರ್ಟಿಯೂ ಅಥವಾ ಬ್ಯುಸಿನೆಸ್ ಜನತಾ ಪಾರ್ಟಿಯೋ ಎಂದು ತಿಳಿಯುತ್ತಿಲ್ಲ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಮುಖ್ಯರಸ್ತೆಯ ಸಿಟಿ ಪಾಯಿಂಟ್‌ನಲ್ಲಿ ಯುಗಾದಿಯಂದು ಶುಭಾರಂಭಗೊಂಡ ’ರುಪೀ ಮಾಲ್’ನಲ್ಲಿ ಗ್ರಾಹಕ ಗಿರೀಶ್ ಗಾಣಿಗ ಅವರಿಗೆ ಕ್ರೆಡಿಟ್ ಕಾರ್ಡ್ ವಿತರಿಸುವ ಮೂಲಕ ಕ್ರೆಡಿಟ್ ಕಾರ್ಡ್ ಸೌಲಭ್ಯಕ್ಕೆ ಚಾಲನೆ ನೀಡಲಾಯಿತು. ಕಾಮಾಕ್ಷೀ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ. ವೆಂಕಟೇಶ ಕಿಣಿ ಹಾಗೂ ರುಪೀ ಮಾಲ್‌ನ ಪ್ರವರ್ತಕರಾದ ಸಿ. ರಾಜೀವ್ ಕುಮಾರ್ ಹೆಸರು ನೊಂದಾಯಿಸಿದ ಗ್ರಾಹಕರಿಗೆ ಕ್ರೆಡಿಟ್ ಕಾರ್ಡ್‌ಗಳನ್ನು ಸಾಂಕೇತಿಕವಾಗಿ ವಿತರಿಸಿದರು. ರುಪೀ ಮಾಲ್‌ನ ಪ್ರವರ್ತಕ ಸಿ. ರಾಜೀವ ಕುಮಾರ್ ಬಳಿಕ ಮಾತನಾಡಿ ಕಾಮಾಕ್ಷೀ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸಹಯೋಗದಿಂದಗೆ ವಿತರಿಸಲಾಗುತ್ತಿರು ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ರುಪೀ ಮಾಲ್‌ನ ಗ್ರಾಹಕರು ಪಡೆದುಕೊಳ್ಳಬಹುದಾಗಿದ್ದು, ತಮ್ಮ ಅಗತ್ಯ ಉತ್ಪನ್ನಗಳನ್ನು ಕೊಂಡುಕೊಳ್ಳಬುದಾಗಿದೆ. ಇದರಲ್ಲಿ ಇಎಂಐ ಸೌಲಭ್ಯವೂ ಇರುವುದರಿಂದ ಗ್ರಾಹಕರಿಗೆ ಹೆಚ್ಚು ಅನುಕೂಲವಾಗಲಿದೆ ಎಂದರು. ಯುಗಾದಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಶೇ.50ರಷ್ಟು ರಿಯಾಯಿತಿ ನೀಡಲಾಗುತ್ತಿದ್ದು, ಎಲ್ಲಾ ವಿಭಾಗದ ವಸ್ತುಗಳು ಮೆಟ್ರೋ ನಗರಗಳಿಗಿಂತ ಕಡಿಮೆ ದರದಲ್ಲಿ ಲಭ್ಯವಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಂದರ್ಭದಲ್ಲಿ ಮಂಗಳೂರು ವಿ.ವಿ. ತಂಡವನ್ನು ಪ್ರತಿನಿದಿಸಿ ಉತ್ಕೃಷ್ಟ ಸಾಧನೆಗೈದ ಕ್ರೀಡಾ ಸಾಧಕ ವಿದ್ಯಾರ್ಥಿಗಳಾದ ದಿನಕರ- ತೃತೀಯ ಬಿ.ಕಾಂ. ’ಬಿ’ (ಸಾಫ್ಟ್‌ಬಾಲ್), ಶಶಿಕಾಂತ್ ಶೆಟ್ಟಿ, ತೃತೀಯ ಬಿ.ಸಿ.ಎ. (ಸಾಫ್ಟ್‌ಬಾಲ್), ಸುಷ್ಮಾ , ತೃತೀಯ ಬಿ.ಸಿ.ಎ. (ಸಾಫ್ಟ್‌ಬಾಲ್), ಸುಕನ್ಯಾ ಶೆಟ್ಟಿ, ತೃತೀಯ ಬಿ.ಕಾಂ. ’ಸಿ’ ( ಚೆಸ್ – ವಿ.ವಿ. ತಂಡದ ನಾಯಕಿ), ರೂಪಾ ಶೆಟ್ಟಿ, ದ್ವಿತೀಯ ಬಿ.ಕಾಂ. ’ಬಿ’ (ಚೆಸ್), ಶ್ರಾವ್ಯ – ದ್ವಿತೀಯ ಬಿ.ಕಾಂ. ’ಸಿ’, ಸುಬ್ರಹ್ಮಣ್ಯಾ – ಪ್ರಥಮ ಬಿ.ಕಾಂ. ’ಡಿ’ (ನೆಟ್‌ಬಾಲ್ ಮತ್ತು ಕುಸ್ತಿಯಲ್ಲಿ ರಜತ ಪದಕ) ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಮುಖ್ಯ ಅತಿಥಿಗಳಾದ ಕುಂದಾಪುರ ನ್ಯೂ ಮೆಡಿಕಲ್‌ನ ವ್ಯವಸ್ಥಾಪಕ ನಿರ್ದೇಶಕ ದಿನಕರ ಶೆಟ್ಟಿ ಕಂದಾವರ, ಕಾಲೇಜು ಆಡಳಿತ ಮಂಡಳಿಯ ಉಪಾಧ್ಯಕ್ಷ ಪ್ರೊ. ಎ.ಪಿ. ಮಿತಂತ್ತಾಯ, ಆಡಳಿತ ಮಂಡಳಿಯ ಸದಸ್ಯರುಗಳಾದ ವಿನತಾ ಪಿ. ರೈ, ಅರುಣ್ ಕುಮಾರ್…

Read More