Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಂಟರ ಯಾನೆ ನಾಡವರ ಸಂಘದ ಆಶ್ರಯದಲ್ಲಿ ದಕ್ಷ ಪ್ರಾಮಾಣಿಕ ಐಪಿಎಸ್ ಅಧಿಕಾರಿ ದಿವಂಗತ ಮಧುಕರ ಶೆಟ್ಟಿಯವರಿಗೆ ನುಡಿನಮನ ಹಾಗೂ ರೋಗಿಗಳಿಗೆ ನೆರವು ಕಾರ್ಯಕ್ರಮ ಸಂಘದ ಅಧ್ಯಕ್ಷ ಬಿ. ಜಗನ್ನಾಥ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಕ್ಲಾಡಿ ಪ್ರೌಡಶಾಲಾ ಮುಖ್ಯ ಶಿಕ್ಷಕ ಡಾ|| ಕಿಶೋರ ಕುಮಾರ್ ಶೆಟ್ಟಿ ದಿ. ಮಧುಕರ ಶೆಟ್ಟಿಯ ಜೀವನಾದರ್ಶನಗಳನ್ನು ಅಳವಡಿಸಿಕೊಳ್ಳುವಂತೆ ಯುವಕರಿಗೆ ಕg ನೀಡುತ್ತಾ ನುಡಿ ಗೌರವ ಸಲ್ಲಿಸಿದರು. ಕುವೈಟ್ ಬಂಟರ ಸಂಘದ ವತಿಯಿಂದ ಮಧುಕರ ಶೆಟ್ಟಿ ಸಾಮಾಜಿಕ ಕಳಕಳಿ ಆದರ್ಶವಾಗಿರುವ ನಿಟ್ಟಿನಲ್ಲಿ ಉನ್ನತ ವಿದ್ಯಾಬ್ಯಾಸ ಪಡೆಯುತ್ತಿರುವ ಬಡಕುಟುಂಬದ ವಿದಾರ್ಥಿಗಳಿಗೆ ಹಾಗೂ ನೆರವು ಬಯಸಿ ಬಂದ ರೋಗಿಗಳಿಗೆ ರೂ.೭೫,೦೦೦ ಮೊತ್ತದ ಧನ ಸಹಾಯವನ್ನು ಕುವೈಟ್ ಬಂಟರ ಸಂಘದ ಅಧ್ಯಕ್ಷ ಪ್ರೊಪೆಸರ್ ಶೇಖರ ಶೆಟ್ಟಿ ತಂತ್ರಾಡಿ ವಿತರಿಸಿದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರುಗಳಾದ ನಾರಾಯಣ ಶೆಟ್ಟಿ ಚುಚ್ಚಿ, ಜಗನ್ನಾಥ ಶೆಟ್ಟಿ ನಾಕಟ್ಟೆ, ಕೆ. ವಿಠ್ಠಲ ಶೆಟ್ಟಿ ಎಚ್. ವಸಂತ ಹೆಗ್ಡೆ ಉದ್ಯಮಿ ಗೋಕಲ್ ಶೆಟ್ಟಿ ಉಪ್ಪುಂದ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪತಂಜಲಿ ಯೋಗ ಪೀಠ ಹರಿದ್ವಾರ, ಪತಂಜಲಿ ಯೋಗ ಸಮಿತಿ ಶಿರೂರು, ಉಡುಪಿ, ಜೆಸಿಐ ಶಿರೂರು ಸಹಭಾಗಿತ್ವದಲ್ಲಿ ರಥ ಸಪ್ತಮಿ ಪ್ರಯುಕ್ತ ಶಿರೂರು ವೆಂಕಟ್ರಮಣ ಸಭಾಭವನದಲ್ಲಿ 108 ಸೂರ್ಯ ನಮಸ್ಕಾರ ನಡೆಯಿತು. ದೀಪ ಪ್ರಜ್ವಲಿಸಿದ ಯೋಗ ಸಹ ಶಿಕ್ಷಕರಾದ ಶ್ರೀನಿವಾಸ್ ಶೆಣೈ ಮಾತನಾಡಿ ಸಕಲ ಜೀವ ರಾಶಿಗಳಿಗೆ ಚೈತನ್ಯವನ್ನು ತುಂಬಿದ ಸೂರ್ಯ ಜಯಂತಿಯನ್ನು ನಾವು ನಿರೋಗಿಗಳಾಗಿ ಬಾಳುವಂತಾಗಲಿ ಎಂದು ಹಾರೈಸಿದರು. ಯೋಗದಿಂದ ಏಕಾಗ್ರತೆ, ಜೊತೆಗೆ ನಮ್ಮಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಈ ಸಮಯದಲ್ಲಿ ಪತಂಜಲಿ ಯೋಗ ಸಮಿತಿ ಅಧ್ಯಕ್ಷ ರಘುರಾಮ್ ಮೆಸ್ತ, ಸಂಚಾಲಕ ಮೋಹನ್ ರೇವಂಕರ್, ಜೆಸಿಐ ಅಧ್ಯಕ್ಷ ನಾಗೇಶ್ ಕೆ, ಪತ್ರಕರ್ತ ಅರುಣಕುಮಾರ್ ಶಿರೂರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ವಿದ್ಯಾರ್ಥಿಗಳಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಯನ್ನು ಹೊರಹಾಕಲು ಅವಕಾಶಗಳ ಜೊತೆಯಲ್ಲಿ, ಪೂರಕ ಮತ್ತು ಸಮರ್ಪಕ ಪರಿಕರಗಳು ಕೂಡ ಅತೀ ಅವಶ್ಯ, ಆ ನಿಟ್ಟಿನಲ್ಲಿ ನಮ್ಮ ಕಾಲೇಜಿಗೆ ನೀಡಿದ ಕ್ರೀಡಾ ಸಾಮಗ್ರಿಗಳ ಕೋಡುಗೆ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವುದಲ್ಲದೆ, ವಿದ್ಯಾರ್ಥಿಗಳನ್ನು ಉನ್ನತ ವ್ಯಾಸಂಗದತ್ತ ಸೆಳೆಯಲು ಸಹಕಾರಿ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರಿನ ಪ್ರಾಚಾರ್ಯರಾದ ಬಿ ಏ ಮೇಳಿಯವರು ಕಾರ್ಯಕ್ರಮದ ಅಧ್ಯಕ್ಷೀಯ ನುಡಿಯನ್ನು ಆಡಿದರು. ದಿವಂಗತ ವೆಂಕಟೇಶ ಅನಂತ ಪ್ರಭು ಪ್ರಭುಕೇರಿ ನಾಯ್ಕನಕಟ್ಟೆರವರ ಸ್ಮರಣಾರ್ಥ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಸಿ,ಎ.ಎನ್. ರಮಾನಂದ ಪ್ರಭು ಮಸ್ಕತ್ ಇವರು ದೇಣಿಗೆ ನೀಡಿದ ಕ್ರೀಡಾ ಸಾಮಗ್ರಿಗಳ ಸ್ವೀಕಾರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉದ್ಯಮಿಗಳು ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಮುತ್ತಯ್ಯ ಪೂಜಾರಿ ಕಳವಾಡಿ, ಹಾಗೂ ಹರೀಶ ಬೈಂದೂರು ಅತಿಥಿಗಳ ನೆಲೆಯಲ್ಲಿ ಉಪಸ್ಥಿತರಿದ್ದು, ಕ್ರೀಡಾ ಸಾಮಗ್ರಿಗನ್ನು ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು. ಹಾಗೂ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಕ್ರೀಡಾ ಸಂಘದ ಸಂಚಾಲಕರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಷ್ಟ್ರದ ಕುರಿತಾದ ಅಭಿಮಾನ, ವಿವಿಧತೆಯಲ್ಲಿ ಏಕತೆಯನ್ನು ಕಾಪಾಡುವ ಮನಸ್ಥಿತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಸಂವಿಧಾನ ತಿಳಿಸಿರುವ ಮೂಲಭೂತ ಕರ್ತವ್ಯವನ್ನು ಯುವಜನತೆ ನ್ಯಾಯಯುತವಾಗಿ ಪಾಲಿಸಿದರೆ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಬಿ.ಬಿ.ಹೆಗ್ಡೆ ಕಾಲೇಜು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರವೀಣ್ ಮೊಗವೀರ ಗಂಗೊಳ್ಳಿ ಹೇಳಿದರು. ಕುಂದಾಪುರ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತೆ ದಿನಾಚರಣೆಯಲ್ಲಿ ಮಾತನಾಡಿ ವೈಯಕ್ತಿಕ ನೆಲೆಯಲ್ಲಿ ರಾಷ್ಟ್ರದ ಕುರಿತಾದ ಸಕರಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳುವುದರ ಜೊತೆಗೆ ಬದುಕನ್ನು ರಾಷ್ಟ್ರಕ್ಕೆ ಸಮರ್ಪಿಸಬೇಕು ಎಂದರು. ಕಾಲೇಜು ನಿರ್ದೇಶಕ ಪ್ರೊ. ದೋಮ ಚಂದ್ರಶೇಖರ್, ಪ್ರಭಾರ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಕಾಲೇಜು ಎನ್.ಎಸ್.ಎಸ್. ಯೋಜನಾಧಿಕಾರಿ ಸತೀಶ್ ಶೆಟ್ಟಿ ಹೆಸ್ಕತ್ತೂರು ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಕೇವಲ ಪರೀಕ್ಷೆಯಲ್ಲಿ ಗಳಿಸುವ ಅಂಕಗಳಷ್ಟೇ ಪ್ರಮುಖವಲ್ಲ ಆದರೆ ಪ್ರತೀ ವಿದ್ಯಾರ್ಥಿಯು ನಮ್ಮ ದೇಶದ ಸಂಸ್ಕೃತಿ ಮತ್ತು ಸನಾತನತೆಯನ್ನು ಕಾಪಾಡುವ ಮುಂದಿನ ಭಾವೀ ಪ್ರಜೆಗಳು ಈ ಮೌಲ್ಯವನ್ನು ವಿದ್ಯಾರ್ಥಿಗಳಲ್ಲಿ ತುಂಬುವಲ್ಲಿ ಶಿಕ್ಷಣ ಸಂಸ್ಥೆ, ಶಿಕ್ಷಕರು ಹಾಗೂ ಪಾಲಕರು ಶ್ರಮ ವಹಿಸಬೇಕು ಎಂದು ಗುರುಕುಲ ವಿದ್ಯಾಸಂಸ್ಥೆಯ ಜಂಟಿ ಕಾರ್ಯನಿರ್ವಾಹಕ ಸುಭಾಶ್ಚಂದ್ರ ಶೆಟ್ಟಿ ತಮ್ಮ ಅಧ್ಯಕ್ಷೀಯ ಮಾತುಗಳನ್ನಾಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಅರವಿಂದ ಮರಳಿಯವರು ವಾರ್ಷಿಕ ಪರೀಕ್ಷೆಯನ್ನು ವಿದ್ಯಾರ್ಥಿಗಳು ಹೇಗೆ ಯಶಸ್ವಿಯಾಗಿ ಬರೆಯಬೇಕು ಮತ್ತು ೨೦೧೯-೨೦ನೇ ಶೈಕ್ಷಣಿಕ ವರ್ಷದಲ್ಲಿ ಪರಿಚಯಿಸುವ ಪುಸ್ತಕದ ಬಗ್ಗೆ ಪಾಲಕರಿಗೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಜಂಟಿ. ಕಾರ್ಯನಿರ್ವಾಹಕರಾದ ಅನುಪಮಾ ಎಸ್. ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ಶಿಕ್ಷಕಿಯರಾದ ಸುಮನ್ ಹಾಗೂ ಬಬಿತ ಕ್ರಮವಾಗಿ ನಿರೂಪಿಸಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಕೊಲೆ ಆರೋಪಿಗಳಿಗೆ ಸಹಕರಿಸಿದ ಆರೋಪದಲ್ಲಿ, ಜಿಲ್ಲಾ ಪಂಚಾಯ್ತಿ ಸದಸ್ಯ ಸೇರಿದಂತೆ ಡಿಎಆರ್​ನ ಇಬ್ಬರು ಪೊಲೀಸ್​ ಪೇದೆಗಳನ್ನ ಬಂಧಿಸಲಾಗಿದೆ. ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್, ಪೇದೆಗಳಾದ ಪವನ್ ಅಮೀನ್, ವೀರೇಂದ್ರ ಆಚಾರ್ಯ ಬಂಧಿತರು. ಕಳೆದ ತಿಂಗಳ ಜನವರಿ 27 ರಂದು ಕೋಟದಲ್ಲಿ ಭರತ್ ಹಾಗೂ ಯತೀಶ್ ಎಂಬುವವರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಆರೋಪಿಗಳ ಜೊತೆ ಪೇದೆಗಳು ನಿಕಟ ಸಂಪರ್ಕ ಹೊಂದಿದ್ದರು ಹಾಗೂ ಹೆಬ್ರಿಯ ಕುಚ್ಚೂರಿನಲ್ಲಿರುವ ಪವನ್ ಅಮೀನ್ ಮನೆಯಲ್ಲೇ ಆರೋಪಿಗಳು ತಂಗಿದ್ದರು. ಇನ್ನು ಆರೋಪಿಗಳಿಗೆ ಮೊಬೈಲ್ ಹಾಗೂ ಹೊಸ ಸಿಮ್ ಕಾರ್ಡ್​ ಕೊಡಿಸಿದ್ದೂ ಅಲ್ಲದೇ ಕಾನ್​ಸ್ಟೇಬಲ್ ವೀರೇಂದ್ರ ಜೊತೆ ಸೇರಿ ಕಾರಿನ ವ್ಯವಸ್ಥೆಯನ್ನು ಪವನ್​ ಮಾಡಿಕೊಟ್ಟು, ಆಗುಂಬೆಯಲ್ಲಿರುವ ಸಂಬಂಧಿಕರ ಮನೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದ. ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್ ಕುಮ್ಮಕ್ಕಿನಂತೆ ಕೊಲೆ ನಡೆದಿತ್ತು. ಇದನ್ನೂ ಓದಿ: ► ಕೋಟದಲ್ಲಿ ಯುವಕರಿಬ್ಬರ ಬರ್ಬರ ಕೊಲೆ – https://kundapraa.com/?p=30959 . ► ಕೋಟದಲ್ಲಿ ಸ್ನೇಹಿತರಿಬ್ಬರ ಕೊಲೆ:…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ಸ್ಟೇಟ್ ಕೋ-ಆಪರೇಟಿವ್ ಅಪೆಕ್ಸ್ ಬ್ಯಾಂಕ್‌ನ ಮಾಜಿ ನಿರ್ದೇಶಕ ಸಿದ್ಧರಾಜು ಅವರು ಶ್ರಿರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‌ನ ಪ್ರಧಾನ ಕಛೇರಿಗೆ ಭೇಟಿ ನೀಡಿ ಸಹಕಾರಿಯ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಸಹಕಾರಿ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರನ್ನು ಗೌರವಿಸಿದರು. ನಿರ್ದೇಶಕ ಶಿವರಾಮ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ ಪಿ. ಯಡ್ತರೆ ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮೀಪದ ಜೆಸಿಐ ಶಿರೂರು ಘಟಕದ ವತಿಯಿಂದ ಅರಮನೆಹಕ್ಲು ಸನ್ನಿ ಕ್ರಿಕೆಟರ್ಸ್ ತಂಡಕ್ಕೆ ಕ್ರೀಡೋಪಕರಣ ವಿತರಣೆ ಮಾಡಲಾಯಿತು. ಈ ಸಂದರ್ಭ ಶಿರೂರು ಜೆಸಿಐ ಅಧ್ಯಕ್ಷರಾದ ನಾಗೇಶ್ ಕೆ., ಕಾರ್ಯದರ್ಶಿ ನಾಗೇಂದ್ರ ಪ್ರಭು, ಗಿರಿಶ್ ಮೇಸ್ತ, ವಿನೋದ್ ಮೇಸ್ತ ಶಿರೂರು ಮೊದಲಾದವರು ಹಾಜರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮೀಪದ ಜೆಸಿಐ ಶಿರೂರು ಘಟಕದ ವತಿಯಿಂದ ಶಿರೂರು ಪರಿಸರದಲ್ಲಿ ಸ್ವಚ್ಛತೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಶಿರೂರು ಜೆಸಿಐ ಅಧ್ಯಕ್ಷರಾದ ನಾಗೇಶ್ ಕೆ., ಕಾರ್ಯದರ್ಶಿ ನಾಗೇಂದ್ರ ಪ್ರಭು, ಗಿರಿಶ್ ಮೇಸ್ತ, ವಿನೋದ್ ಮೇಸ್ತ ಶಿರೂರು ಮೊದಲಾದವರು ಹಾಜರಿದ್ದರು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕಿ ಮತ್ತು ಲೇಖಕಿ ಡಾ. ಪಾರ್ವತಿ ಜಿ.ಐತಾಳ್ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಕೊಡಮಾಡುವ 2018ನೇ ಸಾಲಿನ ಸಾಹಿತ್ಯಶ್ರೀ ಪ್ರಶಸ್ತಿ ಲಭಿಸಿದೆ. ಕನ್ನಡ, ಇಂಗ್ಲಿಷ್, ಹಿಂದಿ, ಮಲೆಯಾಳ ಮತ್ತು ತುಳು-ಹೀಗೆ ಐದು ಭಾಷೆಗಳಲ್ಲಿ ಬರೆಯುವ ಪಾರ್ವತಿ ಐತಾಳ್ ಈ ಭಾಷೆಗಳ ನಡುವೆ ಪ್ರಸಿದ್ಧ ಲೇಖಕರ ಹಲವಾರು ಕೃತಿಗಳನ್ನು ಅನುವಾದಿಸಿದ್ದಾರಲ್ಲದೆ, ಸ್ವತಂತ್ರವಾಗಿಯೂ ಸಣ್ಣಕಥೆ, ಕಾದಂಬರಿ, ವಿಮರ್ಶೆ, ನಾಟಕ ಮತ್ತು ವೈಚಾರಿಕ ಪ್ರಬಂಧ ಕೃತಿಗಳನ್ನು ಪ್ರಕಟಿಸಿದ್ದಾರೆ. ಇದುವರೆಗೆ 40 ಅನುವಾದಿತ ಕೃತಿಗಳು, 23 ಸ್ವತಂತ್ರ ಕೃತಿಗಳು, ನಾಲ್ಕು ಸಂಪಾದಿತ ಮತ್ತು ಸಹಲೇಖಕರಾಗಿ ೯ಕೃತಿಗಳನ್ನು ಪ್ರಕಟಿಸಿದ್ದಾರೆ. ೮ ಕೃತಿಗಳು ಪ್ರಕಟಣೆಯ ಹಂತದಲ್ಲಿವೆ. ಹಲವಾರು ರಾಜ್ಯ ಮತ್ತು ರಾಷ್ಟ್ರಮಟ್ಟದ ಕಾರ್ಯಾಗಾರ ಮತ್ತು ವಿಚಾರ ಸಂಕಿರಣಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯ ನಿರ್ವಹಿಸಿದ್ದಾರೆ. ಮಾರ್ಚ್ 3 ರಂದು ಜರಗಲಿರುವ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಇವರು ಆಯ್ಕೆಯಾಗಿದ್ದಾರೆ.

Read More