Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ನಮ್ಮ ದೇಶವು ಬಲಿಷ್ಠ ದೇಶವಾಗಿ ರೂಪುಗೊಳ್ಳಬೇಕಾದರೆ ಯುವ ಜನರ ಪ್ರಯತ್ನ ಅತ್ಯಗತ್ಯ. ಸಂಘ ಸಂಸ್ಥೆಗಳ ಮೂಲಕ ಯುವಕರು ಸಮಾಜಮುಖಿ ಚಟುವಟಿಕೆಗಳನ್ನು ನಡೆಸುವುದರ ಮೂಲಕ ದೇಶದ ಅಭಿವೃದ್ಧಿಗೆ ಮುಂದಾಗಬೇಕು. ಸ್ವಹಿತಕ್ಕಾಗಿ ದುಡಿಯದೇ ಸಮಾಜದ ದೇಶದ ಒಳಿತಿಗಾಗಿ ಎಲ್ಲರೂ ಒಂದಾಗಿ ದುಡಿಯಬೇಕು. ಯುವಜನರ ಇಂತಹ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗಬೇಕು. ಕಳೆದ ೨೩ವರ್ಷಗಳಿಂದ ಶೈಕ್ಷಣಿಕ, ಸಾಮಾಜಿಕ ಸಮಾಜಮುಖಿ ಕಾರ್ಯಕ್ರಮ ನಡೆಸುತ್ತಿರುವ ಗಂಗೊಳ್ಳಿಯ ಪಂಚಗಂಗಾವಳಿ ಬಳಗ ಎಲ್ಲರಿಗೂ ಮಾದರಿಯಾಗಿದೆ ಎಂದು ಬೈಂದೂರಿನ ಮಾನವ ಹಕ್ಕು ಜನಜಾಗೃತಿ ಸಮಿತಿ ಅಧ್ಯಕ್ಷ ನವೀನಚಂದ್ರ ಉಪ್ಪುಂದ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ಪಂಜುರ್ಲಿ ದೇವಸ್ಥಾನದ ವಠಾರದಲ್ಲಿ ಜರಗಿದ ಗಂಗೊಳ್ಳಿಯ ಪಂಚಗಂಗಾವಳಿ ಬಳಗದ ೨೩ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಿವಾನಂದ ಪೂಜಾರಿ ಹಾಗೂ ಶ್ರೀ ಪಂಜುರ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಜಿ.ಪುರುಷೋತ್ತಮ ಆರ್ಕಾಟಿ ಶುಭಾಶಂಸನೆಗೈದರು. ಹಕ್ಲಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಂಜಿತ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರದ ಕೇಂದ್ರಭಾಗದಲ್ಲಿರುವ ದಿನಸಿ ಅಂಗಡಿ ನಾಯಕ್ ಸ್ಟೋರ‍್ಸ್‌ಗೆ  ರಾತ್ರಿ ಬೆಂಕಿ ತಗುಲಿ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದೆ. ಅಕಸ್ಮಿಕವಾಗಿ ಬೆಂಗಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿ ಶಾಮಕದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಅವಘಡದಿಂದಾಗಿ ಲಕ್ಷಾಂತರ ಮೌಲ್ಯದ ರೂಪಾಯಿ ನಷ್ಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಬಡಾಕೆರೆ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನ ಬಳಿ ಸೋಮವಾರ ಸಂಭವಿಸಿದ ಸ್ಪೋಟ, ನಾಗರಿಕರನ್ನು ಕೆಲಕಾಲ ಆಂತಕಕ್ಕೀಡುಮಾಡಿತು. ಸ್ಪೋಟದ ಶಬ್ದ ಕೇಳಿ ಬಾಂಬ್ ಸ್ಪೋಟ ಸಂಭವಿಸಿರಬಹುದು, ಬಡಾಕೆರೆಯ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನ ಬಳಿ ಬಾಂಬ್ ಇಡಲಾಗಿದೆ ಎಂಬ ಮಾತುಗಳು ಕೇಳಿಬಂದವು. ಪೊಲೀಸರಿಗೂ ಮಾಹಿತಿ ತಲುಪಿ ಸ್ಥಳಕ್ಕೆ ಬಂದು ಪರಿಶೀಲಿಸಿದ ಬಳಿಕ ನಿಜಾಂಶ ಅರಿವಿಗೆ ಬಂದಿದೆ. ಕಿಡಿಗೇಡಿಗಳು ಐಸ್‌ಕ್ರೀಮ್ ಬಾಲ್‌ನಲ್ಲಿ ಪಟಾಕಿಯ ಮದ್ದುತುಂಬಿಸಿ ಬಟ್ಟೆ ಸುತ್ತಿ ಕಸದ ರಾಶಿ ಬಳಿ ಇಟ್ಟಿದ್ದರು. ಬೆಳಿಗ್ಗೆ ಮಹಿಳೆಯೋರ್ವರು ಕಸದ ರಾಶಿಯನ್ನು ಒಟ್ಟುಮಾಡಿ ಬೆಂಕಿ ಹಚ್ಚಿದಾಗ ಅದರ ಮಧ್ಯೆ ಇದ್ದ ಸಿಡಿಮದ್ದು ತುಂಬಿದ ಬಾಲ್‌ಗೆ ಬೆಂಕಿ ತಗುಲು ಸ್ಪೋಟಗೊಂಡು ದೊಡ್ಡ ಸದ್ದು ಮಾಡಿತ್ತು. ಇದು ಬಾಂಬ್ ಇರಬಹುದು ಎಂಬ ಗಾಳಿಸುದ್ದಿ ಹರಡಿ ಪರಿಸರದ ಜನರನ್ನು ಆತಂಕಕ್ಕೀಡು ಮಾಡಿತ್ತು. ಪೊಲೀಸರು ಬಂದು ಪರಿಶೀಲಿಸಿ ನಿಜಾಂಶ ಬಯಲಿಗೆಳೆದಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಂಗಭೂಮಿ ರೀತಿಯ ಕಲಾಪ್ರಕಾರಗಳು ಸಮಾಜಕ್ಕೆ ಬಹುಮುಖ್ಯದುದು. ಮನುಷ್ಯ, ಸಮುದಾಯ, ಭಾಷೆ ಮುಂತಾದವುಗಳ ನಡುವಿನ ಅರ್ಥೈಸುವಿಕೆಗೆ ನಾಟಕ ಪ್ರಮುಖ ಮಾಧ್ಯಮವಾಗಿದೆ. ನಾಟಕ ಕೇವಲ ನಟನೆ ಮಾತ್ರವೇ ಆಗಿ ಉಳಿಯದೇ ನಟನೊಬ್ಬ ತನ್ನನ್ನು ತಾನು ಅರಿತುಕೊಳ್ಳುವ, ಸಮಾಜವನ್ನು; ಸುತ್ತಲಿನ ಭೌದ್ದಿಕ ಸ್ಥಿತಿಯನ್ನು ಅರಿಯುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಎಂದು ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಪ್ರದೀಪ್ ಶೆಟ್ಟಿ ಕೆಂಚನೂರು ಹೇಳಿದರು. ಅವರು ಲಾವಣ್ಯ ರಿ. ಬೈಂದೂರು ಆಶ್ರಯದಲ್ಲಿ 40ಸಂಭ್ರಮದ ಅಂಗವಾಗಿ ಆಯೋಜಿಸಿದ ರಂಗಲಾವಣ್ಯ 2017 ಕಲಾಮಹೋತ್ಸವದ ಮೂರನೇ ದಿನದ ಕಾರ್ಯಕ್ರಮದಲ್ಲಿ ಶುಭಶಂಸನೆಗೈದರು. ಎಪ್ಪತ್ತರ ದಶಕದ ನಂತರದ ರಾಜಕೀಯ ವ್ಯವಸ್ಥೆಗಳು ಸಮಾಜದ ಜನರ ಮಾನಸಿಕ, ಭೌದಿಕ ಹಾಗೂ ಸೃಜನಶೀಲತೆಯನ್ನು ನಾಶಮಾಡಿವೆ. ರಂಗಭೂಮಿಯಲ್ಲಿನ ವ್ಯಕ್ತಿಗಳು ಸಾಮಾಜಿಕ ಹಾಗೂ ರಾಜಕೀಯ ವ್ಯವಸ್ಥೆಯನ್ನು ವಿರೋಧ ಪಕ್ಷದ ರೀತಿಯಲ್ಲಿ ನೋಡುವ ದೃಷ್ಠಿಕೋನವಿದ್ದರೆ ಸಮಾಜ ಸ್ವಾಸ್ಥ್ಯ ಕಾಪಾಡಲು ಸಾಧ್ಯವಿದೆ ಎಂದ ಅವರು, ಕ್ರೀಯಾಶೀಲ ಚಟುವಟಿಕೆಗಳು ಇಲ್ಲದೇ ಹೋದರೆ ಸಮಾಜ ಬೇಗನೆ ಬಿದ್ದು ಹೋಗುತ್ತದೆ. ಸಮುದಾಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಐವತ್ತಕ್ಕೂ ಹೆಚ್ಚು ಯಕ್ಷಗಾನದ ವೃತ್ತಿ ಮೇಳಗಳು, ಹತ್ತು ಹಲವು ಸಂಘ-ಸಂಸ್ಥೆಗಳು ದಿನಂಪ್ರತಿ ನೂರಾರು ಯಕ್ಷಗಾನ ಪ್ರದರ್ಶನಗಳು, ಸಾವಿರಾರು ಪ್ರೇಕ್ಷಕರು ನಿತ್ಯ ಸಾಂಸ್ಕೃತಿಕ ಸಮಾರಾಧನೆ ನಡೆಯುವ ಅವಿಭಜಿತ ದಕ್ಷಿಣಕನ್ನಡ ಜಿಲ್ಲೆ ನಿಜಾರ್ಥದಲ್ಲಿ ಸಾಂಸ್ಕೃತಿಕ ರಾಜಧಾನಿಯಾಗಿದೆ. ಯಕ್ಷಗಾನದ ಮೂಲ ಸ್ವರೂಪ ಬದಲಾಗುತ್ತಿರುವ ಈ ಹೊತ್ತಿನಲ್ಲಿ ಯಕ್ಷಾಂತರಂಗವನ್ನು ಪರಿಚಯಿಸಿ ಕೊಡುವ ಈ ಪ್ರಾತ್ಯಕ್ಷಿಕೆ ಹೊಸ ಪ್ರೇಕ್ಷಕರನ್ನು ಸೆಳೆಯುವಲ್ಲಿ ಪ್ರಧಾನ ಪಾತ್ರವಹಿಸುತ್ತದೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಯಕ್ಷದೇಗುಲ ಸಂಸ್ಥೆಯ ಪ್ರಯತ್ನ ಶ್ಲಾಘನೀಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು. ಅವರು ಎಡಬೆಟ್ಟಿನ ವಿದ್ಯೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಹಕಾರದಿಂದ ೫ ದಿನ ಯಕ್ಷಗಾನ ಪ್ರಾತ್ಯಕ್ಷಿಕೆಯನ್ನು ಯಕ್ಷಗಾನ ದಿವಟಿಕೆಗೆ ದೀಪ ಹಚ್ಚುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಗಾಯನ, ವಾದನ, ನರ್ತನ, ಮಾತು ಮತ್ತು ಆಕರ್ಷಕ ವೇಷ ಭೂಷಣಗಳೆಂಬ ಪಂಚಾಗದ ಮೇಲೆ ನಿಂತಿರುವ ಭವ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯ ತಾಲೂಕು ಹೋರಾಟ ಸಮಿತಿಯು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತು. ಫೆಬ್ರವರಿ ೮ ೨೦೧೩ ರಂದು ಬಜೆಟ್‌ನಲ್ಲಿ ಘೋಷಣೆಯಾದ ಎಲ್ಲಾ ೪೩ ತಾಲೂಕುಗಳನ್ನ ಒಂದೇ ಹಂತದಲ್ಲಿ ಅನುಮೋದಿಸಬೇಕೆಂದು ಈ ಸಂಧರ್ಭದಲ್ಲಿ ಒತ್ತಾಯಿಸಲಾಯಿತು. ಕಂದಾಯ ಸಚಿವರ ಹೇಳಿಕೆ ಆದ್ಯತೆ ಮೇಲೆ ಕೇವಲ ೩೩ ತಾಲೂಕುಗಳನ್ನ ರಚಿಸುವ ವಿಚಾರವನ್ನ ಕೈಬಿಟ್ಟು ಯಾವುದೇ ಕಾರಣಕ್ಕೂ ಘೋಷಣೆಯಾದ ೪೩ ತಾಲೂಕುಗಳನ್ನು ತುಂಡರಿಸುವ ವಿಚಾರಕ್ಕೆ ರಾಜ್ಯ ಸಮಿತಿ ವಿರೋಧ ವ್ಯಕ್ತಪಡಿಸಿತು. ಈ ಸಂಧರ್ಭದಲ್ಲಿ ಕಂದಾಯ ಸಚಿವರು ಅನುದಾನದ ಸಮಸ್ಯೆ ಮತ್ತು ಬೇರೆಲ್ಲಾ ವಿಚಾರಗಳನ್ನ ವಿಮರ್ಶೆ ಮಾಡಿ ಸರಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬ ಅಭಿಪ್ರಾಯವನ್ನು ರಾಜ್ಯ ಸಮಿತಿಗೆ ನೀಡಿದರು. ಮನವಿಯಲ್ಲಿ ರಾಜ್ಯ ಸಮಿತಿಯೂ ಸರಕಾರದ ಹೊಸ ತಾಲೂಕುಗಳಿಗೆ ಕನಿಷ್ಟ ಅನುದಾನವನ್ನ ನೀಡಿದರೂ ಕೂಡಾ ಯಾವುದೇ ತಾಲೂಕು ಕೂಡಾ ವಿರೋಧ ವ್ಯಕ್ತ ಪಡಿಸುವುದಿಲ್ಲ ಎನ್ನುವ ಭರವಸೆಯನ್ನು ನೀಡಿತು. ಈ ಸಂಧರ್ಭದಲ್ಲಿ ಸಚಿವರು ಎಲ್ಲಾ ವಿಚಾರಗಳನ್ನ ಪರಿಶೀಲಿಸುತ್ತೇವೆ ಎನ್ನುವ ಭರವಸೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತವಿಲ್ಲದೇ ಬದುಕಲು ಸಾಧ್ಯವಿಲ್ಲ ಎಂದು ಜಗತ್ತಿಗೆ ಅರಿವಾಗಿದೆ. ಅಂತಹ ವಿಶೇಷ ಪ್ರಭೆಯೊಂದನ್ನು ಸ್ವಾಮಿ ವಿವೇಕಾನಂದರು ಹರಿಸಿದ್ದಾರೆ. ಅವರ ೧೫೪ನೇ ಜನ್ಮದಿನಾಚರಣೆಯ ಸಂದಭದಲ್ಲಿ ಭಾರತ ಹೊಸ ದಿಕ್ಕಿನತ್ತ ಸಾಗುತ್ತಿದ್ದು, ಅಂದು ಕಂಡ ಕನಸು ನನಸಾಗುತ್ತಿದೆ ಎಂದು ಖ್ಯಾತ ವಾಗ್ಮಿ, ಅಂಕಣಗಾರ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಅವರು ಸಮರ್ಥ ಭಾರತ ಬೈಂದೂರು ಆಶ್ರಯದಲ್ಲಿ ಶನಿವಾರ ನಡೆದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ೧೫೪ನೇ ಜನ್ಮದಿನಾಚರಣೆ ’ವಿವೇಕ ಪರ್ವ’ ಬೃಹತ್ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದರು. ನೂರಾರು ವರ್ಷಗಳಿಂದ ಈ ದೇಶ ಪರಕೀಯರಿಂದ ಆಕ್ರಮಣಕ್ಕೀಡಾದರೂ ಇಂದಿಗೂ ತನ್ನ ‘ವ್ಯ ಇತಿಹಾವನ್ನು ಕಾಪಾಡಿಕೊಂಡು ಬಂದಿದೆ. ಪರಕೀಯ ಆಕ್ರಮಣದಿಂದ ನಮ್ಮ ಸಂಪತ್ತು ಲೂಟಿಯಾದ ಬಗ್ಗೆ ಯೋಚನೆ ಮಾಡುವುದಿಲ್ಲ, ಆದರೆ ೭೦ ವರ್ಷಗಳಿಂದ ದೇಶದ ಸಂಪತ್ತನ್ನು ಈ ದೇಶದ ನಾಯಕರೇ ಲೂಟಿ ಮಾಡಿದ ಬಗ್ಗೆ ಚಿಂತನೆ ಮಾಡಬೇಕಾಗಿದೆ ಎಂದ ಅವರು ದೇಶದ ಮೇಲಾದ ಸಾಂಸ್ಕೃತಿಕ ಆಕ್ರಮಣಗಳು ಸಾಮಾನ್ಯವಾದುದಲ್ಲ. ನಮ್ಮ ವೇಶಭೂಷಣ, ಊಟ ತಿಂಡಿ, ಮಾತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉತ್ತಮ ಶಿಕ್ಷಣವನ್ನು ಪಡೆಯುವಲ್ಲಿ ಇಂದು ಯಾವ ಪ್ರದೇಶವೂ ಹಿಂದೆ ಬಿದ್ದಿಲ್ಲ. ಆದರೆ ಶಿಕ್ಷಣದೊಂದಿಗೆ ಉತ್ತಮ ಮನಸ್ಸನ್ನು ಕಟ್ಟುವ ಕಟ್ಟುವ ಕೆಲಸವಾಗಬೇಕು. ನಾಟದಿಂದ ಜಾಗೃತಿ, ಸಂಸ್ಕಾರ, ಸೌಂದರ್ಯಪ್ರಜ್ಞೆ ಹಾಗೂ ಮನಸ್ಸನ್ನು ಕಟ್ಟುವ ಕೆಲಸವಾಗುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು. ಅವರು ಲಾವಣ್ಯ ರಿ. ಬೈಂದೂರು ೪೦ನೇ ವರ್ಷದ ಸಂಭ್ರಮದಲ್ಲಿ ಆಯೋಜಿಸಿದ ರಂಗ ಲಾವಣ್ಯ – ಕಲಾಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಸೌಂದರ್ಯಪ್ರಜ್ಞೆ ಇರುವವರು ದೇಶ, ಪರಿಸರ, ಕಲೆ ಹಾಗೂ ಕಲಾವಿದರನ್ನು ಪ್ರೀತಿಸುತ್ತಾರೆ. ಸಂಸ್ಕಾರ ಹಾಗೂ ಸಮಾಜದ ಪರಿಕಲ್ಪನೆ ಇರುವ ವ್ಯಕ್ತಿಯಿಂದ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಅಂತಹ ಪ್ರೀತಿ ಹಾಗೂ ವ್ಯಕ್ತಿತ್ವನ್ನು ಒಳಗೊಂಡರೇ ಮಾತ್ರ ಸಮಾಜದಲ್ಲಿಯೂ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯವಿದೆ ಎಂದರು. ಡಾ. ಎ.ವಿ ಬಾಳಿಗ ಸ್ಮಾರಕ ಆಸ್ವತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪಿ.ವಿ ಭಂಡಾರಿ ಶುಭಶಂಸನೆಗೈದು, ನಾಟಕಗಳು ಮಕ್ಕಳ ಮನಪರಿವರ್ತನೆಯಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ನಮ್ಮೊಳಗಿನ ಒತ್ತಡವನ್ನೂ ನಿವಾರಿಸುತ್ತದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಸಿಡುಬು, ದಡಾರ ರೋಗಕ್ಕಿಂತ ಹೆಚ್ಚು ಅಪಾಯಕಾರಿಯಾಗಿರುವ ರುಬೆಲ್ಲಾ ರೋಗವನ್ನು ನಿಯಂತ್ರಿಸಲು ಸರಕಾರ ಫೆಬ್ರವರಿ ೭ರಿಂದ ಮಾರ್ಚ್ ೧ರವರೆಗೆ ಮಕ್ಕಳಿಗೆ ಚುಚ್ಚುಮದ್ದು ನೀಡುವ ಕಾರ್ಯಕ್ರಮ ನಡೆಸುತ್ತಿದೆ. ೯ ತಿಂಗಳಿನಿಂದ ೧೫ ವರ್ಷದ ಎಲ್ಲಾ ಮಕ್ಕಳಿಗೆ ಸಿಡುಬು ರೋಗ, ದಡಾರ ಹಾಗೂ ಮಾರಣಾಂತಿಕ ರುಬೆಲ್ಲಾ ರೋಗವನ್ನು ನಿಯಂತ್ರಿಸುವ ಚುಚ್ಚುಮದ್ದನ್ನು ಕಡ್ಡಾಯವಾಗಿ ಹಾಕಿಸಬೇಕು. ಈ ಹಿಂದೆ ಮಕ್ಕಳಿಗೆ ಈ ಚುಚ್ಚುಮದ್ದನ್ನು ಹಾಕಿಸಿದ್ದರೂ ಪುನ: ಇದನ್ನು ನೀಡಬೇಕು ಎಂದು ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ವೇತಾ ಹೇಳಿದರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಪೋಷಕರಿಗಾಗಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಿಸೆಲ್ಸ್ ಮತ್ತು ರುಬೆಲ್ಲಾ ರೋಗದ ಚುಚ್ಚುಮದ್ದಿನಿಂದ ಮಕ್ಕಳ ಮೇಲೆ ಯಾವುದೇ ಅಡ್ಡಪರಿಣಾಮ ಆಗುವುದಿಲ್ಲ ಮತ್ತು ಪ್ರತಿ ಪರಿಣಾಮ ಆಗುವ ಯಾವುದೇ ಭಯ ಬೇಡ. ಈ ಚುಚ್ಚುಮದ್ದು ಮಕ್ಕಳ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಸಂತಮೇರಿ ಶಾಲೆಯ ಪ್ರಾಥಮಿಕ ತರಗತಿಗಳಿಂದ ಆರಂಭಿಸಿ ೧೯೮೦ರ ತನಕ ಪ್ರೌಢ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಹಾಗೂ ಕಲಿಸಿದ ಶಿಕ್ಷಕರ ಅಪೂರ್ವ ಸಮ್ಮಿಲನವು ಕೋಟೆಶ್ವರದ ಸಹನಾ ಮಿನಿ ಸಭಾಂಗಣದಲ್ಲಿ ಜರಗಿತು. ತಮ್ಮ ಸಂಸಾರದೊಂದಿಗೆ ಬಹತೇಕ ಗುರುಶಿಷ್ಯರು ಈ ಪುನರ್ಮಿಲನ ೧೯೮೦ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಸಭಾ ಕಾರ್ಯಕ್ರಮಕ್ಕೂ ಮುನ್ನ ತಮ್ಮ ಅಂದಿನ ವಿದ್ಯಾರ್ಥಿ ಜೀವನದಲ್ಲಿ ಜತೆಗಿದ್ದು ಅಕಾಲದಲ್ಲಿ ತಮ್ಮನ್ನು ಅಗಲಿರುವ ಸಹಪಾಠಿ ಹಾಗೂ ಶಿಕ್ಷಕರಿಗೆ ಮೌನ ಸ್ಮರಣೆಯ ಮೂಲಕ ಸಂತಾಪ ಸಲ್ಲಿಸಿದ ಗುರುಶಿಷ್ಯರು ತದ ನಂತರ ಅರಂಭಗೊಂಡ ಸಭಾ ಕಾರ್ಯಕ್ರಮದಲ್ಲಿ ಅಂದಿನ ಪ್ರಾಥಮಿಕ ಶಾಲೆಯ ಬೋಧಕರಾದ ನೆಲ್ಲಿ ಟೀಚರ್, ಜೋನ್, ಕೊಗ್ಗ ಮಾಸ್ತರ್ ಶೀನ ಸರ್ ಸಹಿತ ಪ್ರೌಡ ಶಾಲೆಯ ಅಧ್ಯಾಪಕರುಗಳಾದ ಸೂರ್ಯನಾರಾಯಣ ಶರ್ಮ, ಗಂಗಾಧರ ಐತಾಳ್, ಲೂವಿಸ್ ಫೆರ್ನಾಂಡಿಸ್, ವಾಲ್ಟರ್ ಡಿಸೋಜಾ, ಶಂಕರ್ ಶೆಟ್ಟಿ, ಶ್ಯಾಮ್ ಸುಂದರ್ ಅರೆ ಹೊಳೆ, ಝೀಟಾ ಟೀಚರ್ ಭಾಗವಹಿಸಿದ್ದರು. ಹಳೆ ವಿದ್ಯಾರ್ಥಿ ಹಾಗೂ ಇದೀಗ ಉಡುಪಿ ಮಹಿಳಾ ಕಾಲೇಜಿನಲ್ಲಿ…

Read More