ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ವಾಮಿ ವಿವೇಕಾನಂದರ 154ನೇ ಜನ್ಮದಿನದ ಅಂಗವಾಗಿ ಬೈಂದೂರಿನಲ್ಲಿ ಜ.28ರಂದು ನಡೆಯುವ ವಿವೇಕ ಪರ್ವ ಕಾರ್ಯಕ್ರಮದಲ್ಲಿ ಹದಿನೈದು ಸಾವಿರಕ್ಕೂ ಮಿಕ್ಕಿ ಜನರು ಸೇರುವ ನಿರೀಕ್ಷೆಯಿದ್ದು ಕಾರ್ಯಕರ್ತರು ತಮ್ಮ ಜವಾಬ್ದಾರಿಯನ್ನು ಎಚ್ಚರಿಕೆಯಿಂದ ನಿಭಾಯಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಾ ಸಂಘದ ಪ್ರಮುಖ ಗೋಪಾಲಕೃಷ್ಣ ಶಿರೂರು ಹೇಳಿದರು. ಅವರು ಬೈಂದೂರು ಸೀತಾರಾಮಚಂದ್ರ ದೇವಸ್ಥಾನದ ಸಭಾಭವನದಲ್ಲಿ ಜರುಗಿದ ಸಮರ್ಥ ಭಾರತ ಬೈಂದೂರು ಸಂಘಟನೆಯ ಪೂರ್ವಭಾರಿ ಸಭೆ ಹಾಗೂ ಬೈಠಕ್ನಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಬೈಂದೂರಿನ ಗಾಂಧಿಮೈದಾನದಲ್ಲಿ ನಡೆಯಲಿರುವ ಬೃಹತ್ ಸಾರ್ವಜನಿಕ ಸಮಾರಂಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಹಸಂಘಚಾಲಕ ಡಾ. ವಾಮನ ಶೆಣೈ ಉಪಸ್ಥಿತರಿರಲಿದ್ದು, ನಟ ಉಪೇಂದ್ರ ಅತಿಥಿಯಾಗಿ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಮುಖ್ಯ ಭಾಷಣಕಾರರಾಗಿ ಉಪಸ್ಥಿತರಿರಲಿದ್ದಾರೆ. ಯಡ್ತರೆಯಿಂದ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಕಾರ್ಯಕ್ರಮಕ್ಕೆ ದೂರದಿಂದ ಆಗಮಿಸುವವರಿಗೆ ವಾಹನದ ವ್ಯವಸ್ಥೆ ಮುಂತಾದ ಪೂರಕ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದವರು ವಿವರಿಸಿದರು. ಸಮರ್ಥ ಭಾರತದ ಕಾರ್ಯಕರ್ತರಿಗೆ ವಿವಿಧ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ವಾಮಿ ವಿವೇಕಾನಂದರ ೧೫೪ನೇ ಜನ್ಮದಿನದ ಅಂಗವಾಗಿ ಬೈಂದೂರಿನಲ್ಲಿ ಜ.೨೮ರಂದು ನಡೆಯುವ ವಿವೇಕ ಪರ್ವ ಕಾರ್ಯಕ್ರಮದ ಪೂರ್ವಭಾವಿ ಸಭೆ ಕಿರಿಮಂಜೇಶ್ವರದ ಗಂಗೆಬೈಲುವಿನಲ್ಲಿ ಜರುಗಿತು. ಸಮರ್ಥ ಭಾರತ ಬೈಂದೂರು ಘಟಕದ ಸಂಚಾಲಕ ಶ್ರೀಧರ ಬಿಜೂರು ವಿವರಿಸಿದರು. ಪ್ರತಿನಿಧಿ ಕೃಷ್ಣ ಕೊಡೇರಿ ಉಪಸ್ಥಿತರಿದ್ದರು. ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿ ಸೌಮ್ಯ ಹೇರಿಕುದ್ರು ಅವರ ’ಜ್ನಾನ ಮೀಮಾಂಸೆಯ ಆಧುನಿಕ ಜಿಜ್ನಾಸೆ: ತೇಜಸ್ವಿ ಕಥನದ ಹಿನ್ನೆಲೆಯಲ್ಲಿ’ ಎಂಬ ಸಂಶೋಧನಾ ಮಹಾಪ್ರಬಂಧಕ್ಕಾಗಿ ಮಂಗಳೂರು ವಿಶ್ವವಿದ್ಯಾನಿಲಯ ಪಿ.ಹೆಚ್.ಡಿ ಪದವಿ ಪ್ರದಾನ ಮಾಡಿದೆ. ಮಂಗಳಗಂಗೋತ್ರಿ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾದ ಡಾ. ಬಿ. ಶಿವರಾಮ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಅವರು ಸಂಶೋಧನಾ ಮಹಾಪ್ರಬಂಧ ಮಂಡಿಸಿದ್ದರು. ಸೌಮ್ಯ ಹೇರಿಕುದ್ರು ಅವರು ನಿವೃತ್ತ ಮುಖ್ಯೋಪಾಧ್ಯಾಯರಾದ ಪಡುವರಿ ಮಂಜಯ್ಯ ಶೆಟ್ಟಿ ಮತ್ತು ಸುಮತಿಯವರ ಪುತ್ರಿಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 94ಸಿ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡದೇ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರಕಾರ ಹಾಗೂ ತಾಲೂಕು ಅಧಿಕಾರಿಗಳ ನಡೆಯನ್ನು ಖಂಡಿಸಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಇಲ್ಲಿನ ತಾಲೂಕು ಪಂಚಾಯತ್ ಎದುರು ಬೃಹತ್ ಸಾರ್ವಜನಿಕ ಸಭೆ ಹಾಗೂ ಕುಂದಾಪುರ ಶಾಸ್ತ್ರೀ ವೃತ್ತದಿಂದ ಪ್ರತಿಭಟನಾ ಮೆರವಣಿಗೆ, ವಿಧಾನಸೌಧ ಮುತ್ತಿಗೆಗೆ ಯತ್ನ ನಡೆಯಿತು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ಕಳೆದ ತಿಂಗಳು ಮಿನಿ ವಿಧಾನಸೌಧದ ಎದುರು ಧರಣಿ ನಡೆಸಿದಾಗ ಹಕ್ಕುಪತ್ರ ವಿತರಣೆ ಮಾಡುತ್ತೇವೆ ಎಂಬ ಭರವಸೆ ನೀಡಿದ್ದರೂ ಈವರೆಗೆ ಒಂದೇ ಒಂದು ಹಕ್ಕುಪತ್ರ ವಿತರಣೆಯಾಗಿಲ್ಲ. ಮಿನಿ ವಿಧಾನಸೌಧ ಬಡವರ ಪಾಲಿಗೆ ದುರಂತ ಕೇಂದ್ರವಾಗಿ ಪರಿವರ್ತನೆಗೊಳ್ಳುತ್ತಿದೆ. ಬಡವರ ಹಕ್ಕುಪತ್ರ ವಿತರಣೆ ಬಗ್ಗೆ ಕಂದಾಯ ಇಲಾಖೆ, ರಾಜ್ಯ ಸರಕಾರ ನಿರ್ಲಕ್ಷ ವಹಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸುಮಾರು 1700 ಅರ್ಜಿಗಳನ್ನು ತಾಲೂಕಿನಲ್ಲಿ ವಿಲೇವಾರಿ ಮಾಡಬಹುದು. ಆದರೆ ಇದರಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುವಶಕ್ತಿ ರಾಷ್ಟ್ರದ ಶಕ್ತಿ. ಯುವಕರಲ್ಲಿ ಅಗಾಧ ಪ್ರತಿಭೆಯಿದ್ದು, ತಮ್ಮ ಪ್ರತಿಭೆಯನ್ನು ಸಮಾಜದ ಅಭ್ಯುದಯಕ್ಕೆ ಬಳಸಿಕೊಳ್ಳಲು ಬದ್ಧತೆ ತೋರಿಸಬೇಕು. ಸಮಾಜದಲ್ಲಿ ಪ್ರತಿಯೊಬ್ಬರು ಸ್ವಾರ್ಥ ದ್ವೇಷ ಮರೆತು ಸತ್ಪ್ರಜೆಗಳಾಗಿ ಬದುಕಬೇಕಿದೆ. ಭಾರತದ ಶ್ರೇಷ್ಠತೆ, ಸನಾತನ ಧರ್ಮದ ಔಚಿತ್ಯವನ್ನು ಜಗತ್ತಿಗೆ ತೋರಿಸುವ ಸಲುವಾಗಿ ನಾವೆಲ್ಲ ಆದರ್ಶ ಜೀವನವನ್ನು ಅಳವಡಿಸಿಕೊಳ್ಳಬೇಕು ಎಂದು ಭಾರತೀಯ ಜೇಸಿಸ್ನ ವಲಯ ೧೫ರ ಪೂರ್ವ ವಲಯಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಹೇಳಿದರು. ಅವರು ಕುಂದಾಪುರದ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ನಡೆದ ಜೇಸಿಐ ಕುಂದಾಪುರ ಸಿಟಿಯ ಪದಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಅಂತರಾಷ್ಟ್ರೀಯ ಖ್ಯಾತೀಯ ಜಾದೂಗಾರ ಓಂಗಣೇಶ್ ಮಾತನಾಡಿ ಜೇಸಿಯಂತಹ ಘಟಕಗಳು ತಾಲೂಕು ಮಟ್ಟದಲ್ಲಿ ಹೆಚ್ಚು ಕ್ರಿಯಾಯೋಜನೆಗಳಲ್ಲಿ ಕ್ರಿಯಾತ್ಮಕವಾಗಿ ಸಮಾಜಮುಖಿ ಕಾರ್ಯಚಟುವಟಿಕೆಯಲ್ಲಿ ತೊಡಗಿಕೊಳ್ಳುವ ಜೊತೆಗೆ ಯುವಕರಿಗೆ ಹೆಚ್ಚಿನ ತರಬೇತಿ, ಮಾರ್ಗದರ್ಶನವನ್ನು ನೀಡಬೇಕು ಎಂದರು. ಜೇಸಿ ವಲಯ೧೫ರ ಉಪಾಧ್ಯಕ್ಷೆ ಸೌಮ್ಯ ರಾಕೇಶ್ ನೂತನ ಸದಸ್ಯರಿಗೆ ಪ್ರಮಾಣ ವಚನ ಭೋಧಿಸಿ, ಜೇಸಿಐ ಕುಂದಾಪುರ ಸಿಟಿಯ ಕಾರ್ಯಚಟುವಟಿಕೆಯನ್ನು ಶ್ಲಾಘಿಸಿದರು. ವೇದಿಕೆಯಲ್ಲಿ ಭಾರತೀಯ ಜೇಸಿಸ್ನ ಪೂರ್ವ ವಲಯಾಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಯುತ್ ರೆಡ್ ಕ್ರಾಸ್ ವಿಭಾಗ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ ಘಟಕಗಳ ಸಹಯೋಗದಲ್ಲಿ ಹದಿಹರೆಯದ ಹೆಣ್ಣುಮಕ್ಕಳ ಸಮಸ್ಯೆಗಳು ಕುರಿತು ಕುಂದಾಪುರದ ಮನೀಶ್ ಆಸ್ಪತ್ರೆಯ ಪ್ರಸೂತಿ ಮೆತ್ತು ಸ್ತ್ರೀರೋಗ ತಜ್ನೆ ಡಾ.ಪ್ರಮೀಯಾ ನಾಯಕ್ ಮಾತನಾಡಿದರು. ಆಧ್ಯಾತ್ಮ ಮತ್ತು ನೈತಿಕ ಶಿಕ್ಷಣದ ಮಹತ್ವವು ಹದಿಹರೆಯದ ಸಮಸ್ಯೆಗಳ ನೀಗಿಸುವಿಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.ಏಕೆಂದರೆ ಜೀವನದ ಗುರಿ ಮತ್ತು ಅದನ್ನು ತಲುಪುವಲ್ಲಿ ನಿರ್ಧಾರಗಳು ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಅವಲಂಬಿಸಿದೆ. ಕಠಿಣ ಪರಿಶ್ರಮ, ಸಾಧಿಸುವ ಛಲ, ದೇವರಲ್ಲಿ ನಂಬಿಕೆ ಸಮಾಜದಲ್ಲಿ ಹೆಣ್ಣಿನ ಪಾತ್ರವನ್ನು ಕುರಿತು ಹೇಳಿದರು. ಅಲ್ಲದೇ ಹದಿಹರೆಯದ ಸಮಸ್ಯೆಗಳಾದ ಖಿನ್ನತೆ, ಮತ್ತು ಅದಕ್ಕೆ ಪರಿಹಾರ, ಸರಳ ಜೀವನಕ್ರಮ, ಋತುಸ್ರಾವದ ಸಮಸ್ಯೆಗಳು ಅದಕ್ಕೆ ಕಾರಣಗಳು ಮತ್ತು ವಿದ್ಯಾರ್ಥಿಗಳ ಆರೋಗ್ಯಕ್ರಮದ ಕುರಿತು ಹೇಳಿದರು. ಈ ಸಂದರ್ಭದಲ್ಲಿ ಭಾರತೀಯ ಯುತ್ ರೆಡ್ ಕ್ರಾಸ್ ಕುಂದಾಪುರ ಘಟಕದ ಮುತ್ತಯ್ಯ ಶೆಟ್ಟಿ, ಕಾಲೇಜಿನಲ್ಲಿ ಯುತ್ ರೆಡ್ ಕ್ರಾಸ್ ಘಟಕದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಬುಧವಾರ ಆಗಮಿಸಿದ್ದ ಅವರು ಕುಂದಾಪುರ ಸಮೀಪದ ವಕ್ವಾಡಿ ನಿವಾಸಿ, ಬೆಂಗಳೂರು ಉದ್ಯಮಿ ವಿ.ಕೆ. ಮೋಹನ್ ಅವರ ಕುಟುಂಬ ಸದಸ್ಯ ವಿ.ಕೆ. ಹರೀಶ್ ನಿವಾಸಕ್ಕೆ ಭೇಟಿ ನೀಡಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ತುಳು ಚಿತ್ರರಂಗ ಇತ್ತೀಚಿನ ದಿನಗಳಲ್ಲಿ ಬೆಳೆಯುತ್ತಿದೆ. ಚಾಲಿ ಪೋಲಿಲು ಚಿತ್ರ ಹಿಟ್ ಆಗಿದೆ. ಚಿತ್ರ ತಂಡವನ್ನು ಭೇಟಿ ಮಾಡಿ ಸಂತಸ ಹಂಚಿಕೊಂಡಿದ್ದೇನೆ. ಚಿತ್ರದ ಹಾಡುಗಳು ಸಖತ್ತಾಗಿವೆ. ಅವಕಾಶ ಸಿಕ್ಕಲ್ಲಿ ಕೋಸ್ಟಲ್ವುಡ್ನಲ್ಲಿ ನಟಿಸುವಾಸೆ ಇದೆ. ತುಳು ಹಾಡುಗಳು ನನಗೆ ಇಷ್ಟ. ತುಳು ಸಂಗೀತ ಕೇಳುವ ಹವ್ಯಾಸ ಇಟ್ಟುಕೊಂಡಿದ್ದೇನೆ. ಅವಕಾಶ ಸಿಕ್ಕರೆ ತುಳು ಹಾಡು ಹಾಡಬೇಕೆಂಬ ಅಸೆ ಎಂದು ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ತಿಳಿಸಿದ್ದಾರೆ. ಕರಾವಳಿಗೂ, ನಮ್ಮ ಕುಟುಂಬಕ್ಕೂ ದೊಡ್ಡ ನಂಟಿದೆ. ತಂದೆಯವರು ಕರಾವಳಿ ಜನರ ಪ್ರೀತಿಗೆ ಪಾತ್ರರಾದವರು. ಚಿಕ್ಕವನಿದ್ದಾಗ ಅವರೊಂದಿಗೆ ಈ ಭಾಗದಲ್ಲಿ ಶೂಟಿಂಗ್ ವೇಳೆ ಭಾಗವಹಿಸಿದ್ದೆ. ವಕ್ವಾಡಿ ವಿ.ಕೆ. ಮೋಹನ್ ಕುಟುಂಬ ನಮಗೆ ಮನೆಯಿದ್ದಂತೆ. ಒಂದು ಮುತ್ತಿನ…
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಅದೊಂದು ಪಕ್ಕಾ ಗ್ರಾಮೀಣ ಕೃಷಿ ಸಂಸ್ಕೃತಿಯನ್ನು ನೆನಪಿಸುವ ಸನ್ನಿವೇಶ. ಕಿಂಡಿ ಅಣೆಕಟ್ಟಿನ ಹಿನ್ನೀರ ಪಕ್ಕದಲ್ಲೇ ಅಡಿಕೆ ಹಿಂಗಾರದ ಘಮ, ಕೆಂಪಡರಿದ ಅಡಿಕೆಗೊನೆ, ಎತ್ತರಕ್ಕೆ ಬೆಳೆದು ನಿಂತ ಕಾಳು ಮೆಣಸು ಬಳ್ಳಿ, ತೆಂಗು. ಅದರ ಕೆಳಗೇ ವಿಚಾರಕ್ಕೊಂದು ವೇದಿಕೆ. ಅಲ್ಲಿ ವೇದಿಕೆ, ಚಪ್ಪರದಿಂದ ಹಿಡಿದು ಕುಟೀರ ಊಟದ ವರೆಗೆ ಎಲ್ಲವೂ ಹಸಿರು ಸ್ನೇಹಿ. ಬಸ್ರೂರು ಬಿ. ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನ ಹಾಗೂ ಕುಂದಾಪುರ ತಾಲೂಕು ಪ್ರಗತಿಪರ ಕೃಷಿಕರ ವೇದಿಕೆ ಭಾಂಡ್ಯ ಇಂದ್ರಪ್ರಸ್ತದಲ್ಲಿ ಆಯೋಜಿಸಿದ ನೆಲ, ಜಲ, ಕೃಷಿ ಉಳಿಸೋಣ ಬನ್ನಿ ಹಸಿರು ಗೋಷ್ಠಿ ಇಂತಹದ್ದೊಂದು ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾದುದಲ್ಲದೇ ರೈತನ ಸಮಸ್ಯೆಗಳ ಬಗೆಗೆ ಬೆಳಕು ಚೆಲ್ಲುತ್ತಾ ವಿಷಯ ತಜ್ಞರಿಂದ ಪರಿಹಾರವನ್ನೂ ಸೂಚಿಸುತ್ತಾ ಸಾರ್ಥಕ್ಯ ಕಂಡುಕೊಂಡಿತು. ಕೃಷಿ ಕಾರ್ಮಿಕರ ಕೊರತೆಯಿಂದ ಹಡಿಲು ಬೀಳುತ್ತಿರುವ ಭತ್ತ ಕೃಷಿ, ಮಾರುಕಟ್ಟೆಯಲ್ಲಿ ಧಾರಣೆಗಳ ಏರಿಳಿತ ತೊಳಲಾಟದಲ್ಲಿ ಯಾವ ಬೆಳೆ ಬೆಳೆಯಬೇಕು ಎಂಬ ಜಿಜ್ಞಾಸೆ, ಹೆಚ್ಚುತ್ತಿರುವ ನೀರಿನ ಸಮಸ್ಯೆ, ಬರ, ಬಹು ಕೃಷಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾರ್ಕಳ ತಾಲೂಕಿನ ಅಜೆಕಾರು ಎಣ್ಣೆಹೊಳೆಯಲ್ಲಿ ಜನವರಿ ೨೫ರಂದು ನಡೆಯುವ ಪ್ರಪ್ರಥಮ ಹೋಬಳಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಿಯುಕ್ತಿಗೊಂಡಿರುವ ಸಾಹಿತಿ, ಪ್ರಕಾಶಕ, ಸಂಘಟಕ ಮುನಿಯಾಲು ಗಣೇಶ ಶೆಣೈ ಅವರನ್ನು ಅವರ ಕಚೇರಿ ನಲಂದಾಕ್ಕೆ ತೆರಳಿ ಆಹ್ವಾನಿಸಲಾಯಿತು. ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ತು ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ಆಹ್ವಾನ ಪತ್ರಿಕೆ ನೀಡಿ ಮತ್ತು ಕನ್ನಡದ ಶಾಲು ಹಾಕಿ ಅವರನ್ನು ಆಹ್ವಾನಿಸಿದರು. ಮುನಿಯಾಲು ಗಣೇಶ ಶೆಣೈ ಅವರು ಸದ್ದಿಲ್ಲದೆ ಸಾಹಿತ್ಯ ರಚನೆ ಮತ್ತು ಸೇವೆ ಮಾಡುತ್ತಾ ಬಂದಿದ್ದಾರೆ ಅವರು ಸಮ್ಮೇಳಾಧ್ಯಕ್ಷತೆ ವಹಿಸಿ ಕೊಂಡಿರುವುದು ನಮಗೆ ಬಹಳ ಸಂತೋಷ ತಂದಿದೆ. ಅವರಿಂದ ಇನ್ನಷ್ಟು ಸೇವೆ ಸಲ್ಲಲಿ ಎಂದು ಹಾರೈಸಿದರು. ನಾನಿನ್ನು ಸಾಹಿತ್ಯ ವಿದ್ಯಾರ್ಥಿ, ನಾಲ್ಕಾರು ದೇಶ ಸುತ್ತಿದ ಮೇಲೆ ನಮ್ಮ ದೇಶದ ಆದಿವಾಸಿಗಳ ಪಾರಂಪರಿಕ ಜ್ಞಾನ ನೋಡಿ ಚಕಿತನಾಗಿ ಅವುಗಳ ಕುರಿತು ಅಧ್ಯಯನ ನಡೆಸುತ್ತಿದ್ದೇನೆ. ವೇದಿಕೆ ಹಂಚಿಕೊಳ್ಳುವುದು, ಪ್ರಶಸ್ತಿ ಪುರಸ್ಕಾರ ಗೌರವಗಳಿಗಿಂತ ಭಿನ್ನವಾದ ಸಂತೋಷವನ್ನು ನಾನು ಕೊಂಡಿದ್ದೇನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಾಳೆಮನೆ ಕುಟುಂಬಸ್ಥರು ನಡೆಸಲಿರುವ ಚತುಷ್ಪಪವಿತ್ರ ನಾಗಮಂಡಲ ಸೇವೆಗೆ ಬೆಳಗ್ಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಗಣಪತಿ ಪೂಜೆ ನಂತರ ಚಪ್ಪರ ಮುಹೂರ್ತ ನಡೆಯಿತು. ಕುಂದಬಾರಂದಾಡಿ ವೇ.ಮೂ.ಚೆನ್ನಕೇಶವ ಉಪಾಧ್ಯ ಹಾಗೂ ಪುರೋಹಿತ ವರ್ಗ ಬೆಳಗ್ಗೆ ಗಣಹೋಮ, ದೇವತಾ ಕಾರ್ಯ, ಬಾಳೆಮನೆ ನಾಗದೇವರ ಬನದಲ್ಲಿ ವಿಶೇಷ ಪೂಜೆ, ಮಂಗಳಾರತಿ ಸಲ್ಲಿಸಿದ ನಂತರ ಚಪ್ಪರ ಮುಹೂರ್ತ ನಡೆಸಲಾಯಿತು. ನಾಗದರ್ಶನ ಮಂಟಪ, ಪಾಕಶಾಲೆ, ಯಜ್ಞಶಾಲೆ, ಹಿಂಗಾರ ಸಂಗ್ರಹ ಗೋಡಾನ್, ಹೊರೆ ಕಾಣಿಗೆ ಹಾಗೂ ಹಸಿರುವಾಣಿ ಸಂಗ್ರಹಲಾಯಕ್ಕೆ ಭೂಮಿ ಪೂಜೆ ನೆರವೇರಿಸಿ, ಕಂಬ ನೆಡುವ ಮೂಲಕ ಚಪ್ಪರ ಮಹೂರ್ತ ಸಂಪನ್ನಗೊಂಡಿತು. ಬಾಳೆಮನೆ ಹಿರಿಯ ಕುಟುಂಬಸ್ಥ ದೀಕ್ಷೆ ಹಿಡಿದ ಬಾಳೆಮನೆ ನರಸಿಂಹ ಶೆಟ್ಟಿ ಹಾಗೂ ಪತ್ನಿ ದೇವಕಿ ಶೆಟ್ಟಿ ಚಪ್ಪರ ಮೂಹೂರ್ತ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಪ್ರಗತಿಪರ ಕೃಷಿಕ ಸಬ್ಲಾಡಿ ಮಂಜಯ್ಯ ಶೆಟ್ಟಿ, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ತಗ್ಗರ್ಸೆ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಮಾಜಿ ಆಡಳಿತ ಧರ್ಮದರ್ಶಿ…
