ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಾಂತಿ ಸೌಹಾರ್ದತೆಗೆ ಹೆಸರಾಗಿರುವ ಆನಗಳ್ಳಿ ಗ್ರಾಮದ ಬಗ್ಗೆ ಸಾರ್ವಜನಿಕರಲ್ಲಿ ಗೊಂದಲ ಉಂಟಾಗುವಂತ ಹೇಳಿಕೆ ನೀಡಿರುವ ರಂಗಕರ್ಮಿ ಸುರೇಶ ಆನಗಳ್ಳಿ ಅವರು ಸಾರ್ವಜನಿಕ ಕ್ಷಮೆ ಕೇಳಬೇಕು ಎಂದು ಆನಗಳ್ಳಿ ಗ್ರಾಮಸ್ಥ ಭಾಸ್ಕರ ಬಿಲ್ಲವ ಹೇಳಿದ್ದಾರೆ. ಕುಂದಾಪುರದ ಪ್ರೆಸ್ಕ್ಲಬ್ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುರೇಶ ಆನಗಳ್ಳಿ ಅವರು ಅವರ ಸೋದರನ ಮೇಲೆ ನಡೆದಿರುವ ಹಲ್ಲೆಯನ್ನು ಮುಂದಿಟ್ಟುಕೊಂಡು ಆನಗಳ್ಳಿ ಗ್ರಾಮಕ್ಕೆ ಕೆಟ್ಟ ಹೆಸರು ಕಟ್ಟುವುದು ಸರಿಯಲ್ಲ. ವೈಯಕ್ತಿಕ ವಿಚಾರವನ್ನಿಟ್ಟುಕೊಂಡು ಈ ರೀತಿ ಗೊಂದಲಕಾರಿ ಹೇಳಿಕೆ ನೀಡುವುದು ಸರಿಯಲ್ಲ . ಅವರಿಗೆ ಅನ್ಯಾಯವಾಗಿದ್ದರೆ ಕಾನೂನು ಹೋರಾಟ ನಡೆಸಲಿ. ಅದು ಬಿಟ್ಟು ಆನಗಳ್ಳಿ ಗ್ರಾಮದ ಬಗ್ಗೆ, ಜನಪ್ರತಿನಿಧಿಗಳ ಬಗ್ಗೆ ಕೆಟ್ಟದ್ದಾಗಿ ಮಾತನಾಡಬಾರದು ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಕೆ.ಎಂ.ಗೋಪಾಲ ಮಾತನಾಡಿ ಆನಗಳ್ಳಿಯಲ್ಲಿ ನಾವು ಗೂಂಡಸಂಸ್ಕೃತಿ ಕಂಡಿಲ್ಲ. ಕಪೋಲಕಲ್ಪನೆಯ ವಿಚಾರಗಳನ್ನು ಇಟ್ಟುಕೊಂಡು, ಗ್ರಾಮದ ಬಗ್ಗೆ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಇಲ್ಲಸಲ್ಲದ ಹೇಳಿಕೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಸಮಿತಿಯ ಕರೆಯ ಮೇರೆಗೆ ಮನೆ, ನಿವೇಶನ ರಹಿತ ಅರ್ಜಿದಾರರಿಗೆ, ಸರಕಾರಿ ಜಮೀನು ಗುರುತಿಸಿ ನಿವೇಶನ ಹಕ್ಕು ಪತ್ರ ಮಂಜೂರು ಮಾಡಲು ಆಗ್ರಹಿಸಿ ರಾಜ್ಯಾದ್ಯಂತ ವಿವಿಧ ಕಾರ್ಮಿಕ ಸಂಘಟನೆಗಳ ಬೆಂಬಲದೊಂದಿಗೆ ನಿವೇಶನ ರಹಿತರು ೯೪ಸಿ, ೯೪ಸಿಸಿ ಕಲಂನಡಿಯ ಅರ್ಜಿದಾರರು ನವಂಬರ್ ೧೮ ರಂದು ಜೈಲ್ ಭರೋ ಹೋರಾಟ ಚಳವಳಿ ನಡೆಸುವುದರ ಮೂಲಕ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಉಪಾಧ್ಯಕ್ಷ ಜಿ.ಎನ್. ನಾಗರಾಜ ಕರೆ ನೀಡಿದರು. ಅವರು ಕೃಷಿ ಕೂಲಿಕಾರರ ಸಂಘದ ಕುಂದಾಪುರ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು, ಸಮ್ಮೇಳನದ ಆರಂಭದಲ್ಲಿ ಸಂಘದ ಧ್ವಜಾರೋಹಣವನ್ನು ಉಡುಪಿ ಜಿಲ್ಲಾಧ್ಯಕ್ಷ ಯು. ದಾಸಭಂಡಾರಿ ನೆರವೇರಿಸಿ, ಹುತಾತ್ಮ ಸ್ತಂಭಕ್ಕೆ ಗೌರವ ಅರ್ಪಣೆ ಮಾಡಲಾಯಿತು. ಮನೆ ನಿವೇಶನ ಅರ್ಜಿದಾರರಿಗೆ ಕೂಡಲೇ ಭೂಮಿ ಹಕ್ಕು ಪತ್ರ ವಿತರಣೆ ಮಾಡಬೇಕು. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸಮರ್ಪಕವಾಗಿ ಜ್ಯಾರಿಗೊಳಿಸಬೇಕು. ಭೂಕಂದಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಐರೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಂಗಾರಕಟ್ಟೆಯಲ್ಲಿರುವ ವಾಟರ್ ವೇಸ್ ಶಿಪ್ ಯಾರ್ಡ್ಗೆ ಮಂಗಳವಾರದಂದು ಬ್ರಹ್ಮಾವರ ವಿಶೇಷ ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್ ಭೇಟಿ ನೀಡಿ ಪರಿಶೀಲನೆ ನಡೆಸಿ ತೆರಳಿದ ಬೆನ್ನಲ್ಲೆ ಬುಧವಾರದಂದು ಸ್ಥಳೀಯ ಜಿಲ್ಲಾ ಪಂಚಾಯಿತಿ ಸದಸ್ಯ ರಾಘವೇಂದ್ರ ಕಾಂಚನ್ ಬಾರಿಕೆರೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ವಿಶೇಷ ತಹಶೀಲ್ದಾರ್ ಸಹಿತ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಶೀಘ್ರದಲ್ಲಿ ಮರಳುಗಾರಿಕೆ ಸಂಬಂಧಿತ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಜರುಗಿಸುವಂತೆ ಆಗ್ರಹಪಡಿಸಿದರು. ಶಿಪ್ ನಿರ್ಮಾಣ ಸಂಸ್ಥೆಯಾದ ವಾಟರ್ ವೇಸ್ ಆವರಣದಲ್ಲಿ ಮರಳುಗಾರಿಕೆ ನಡೆಯುತ್ತಿದೆ ಮತ್ತು ಅನಧಿಕೃತವಾಗಿ ಹೂಳೆತ್ತುವ ಕೆಲಸವಾಗುತ್ತಿದೆ ಎನ್ನುವ ಸಾರ್ವಜನಿಕರ ದೂರು ಬರುತ್ತಿದೆ. ತಹಶೀಲ್ದಾರ್ ಅವರು ಭೇಟಿ ನೀಡಿ ಸುಮಾರು 900 ಯುನಿಟ್ ಮರಳು ಇದೆ ಎಂದು ಅಂದಾಜಿಸಿ, ಮರಳನ್ನು ಪಿಡಬ್ಯ್ಲೂಡಿ ಇಲಾಖೆಗೆ ಹಸ್ತಾಂತರಿಸಿದ್ದರು ಮತ್ತು ಅಕ್ರಮ ಮರಳುಗಾರಿಕೆ ನಡೆದಿರುವುದು ಖಚಿತವಾಗಿದ್ದರು ಕೂಡ ಅಧಿಕಾರಿಗಳು ಯಾವುದೇ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಶಾಲೆಬಾಗಿಲಿನ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಮಾರುತಿ ಅಲ್ಟೋ ಕಾರಿಗೆ ತಡರಾತ್ರಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗಲಿದ್ದು ಕಾರು ಸಂಪೂರ್ಣ ಹಾನಿಯಾಗಿದೆ. ಟೈಲರ್ ವೃತ್ತಿಮಾಡಿಕೊಂಡಿರುವ ಕುಮಾರ್ ಗಾಣಿಗ ಎಂಬುವವರು ತಮ್ಮ ಅಂಗಡಿಯ ಮುಂದೆ ನಿಲ್ಲಿಸಿದ ಕಾರಿಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಕ್ಕಪಕ್ಕದವರು ತಕ್ಷಣ ಬೆಂಕಿ ಆರಿಸುವಲ್ಲಿ ನೆರವಾಗಿದ್ದಾರೆ. ಅಷ್ಟರಲ್ಲಾಗಲೇ ಕಾರು ಸಂಪೂರ್ಣ ಬೆಂಗಿಗಾಹುತಿಯಾಗಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಬಸ್ ನಿಲ್ದಾಣದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಇಬ್ಬರು ಚಿಕ್ಕ ಬಾಲಕಿಯರನ್ನು ರಕ್ಷಿಸಿ ಉಡುಪಿ ನಿಟ್ಟೂರಿನ ಮಕ್ಕಳ ಕಲ್ಯಾಣ ಸಮಿತಿ ಬಾಲಕಿಯರ ಬಾಲ ಮಂದಿರದ ಅಧಿಕಾರಿಗಳ ವಶಕ್ಕೆ ನೀಡಿಲಾಗಿದೆ. ಬೈಂದೂರು ಠಾಣಾಧಿಕಾರಿ ಸಂತೋಷ್ ಆನಂದ್ ಕಾಯ್ಕಿಣಿ ಬೆಳಿಗ್ಗೆ ಬಸ್ ನಿಲ್ದಾಣದಲ್ಲಿ ರೌಂಡ್ಸ್ನಲ್ಲಿ ಧಾರವಾಡ ಜಿಲ್ಲೆಯ ಕಲಘಟಗಿಯ ಮಂಜುಳಾ ಎಂಬ ಮಹಿಳೆ 2 ಮಕ್ಕಳ ಜತೆಗೆ ಸಾರ್ವಜನಿಕರಿಂದ ಭಿಕ್ಷಾಟನೆ ಮಾಡುತ್ತಿರುವುದನ್ನು ಗಮನಿಸಿ ಅವರ ಹಿನ್ನೆಲೆಯನ್ನು ವಿಚಾರಿಸಿದ್ದಾರೆ. ಮಾನಸಿಕ ಅಸ್ವಸ್ಥೆಯಂತೆ ವರ್ತಿಸಿದ ಆಕೆ ತನ್ನ ಗಂಡ ಶಂಕರ ಮರಣಹೊಂದಿ ಮೂರು ವರ್ಷವಾಗಿದ್ದು, ಮಕ್ಕಳು ಯಾರೆಂದು ಸರಿಯಾಗಿ ತಿಳಿಸದೇ ವ್ಯತಿರಿಕ್ತ ಹೇಳಿಕೆಯಿಂದ ಅನುಮಾನಗೊಂಡ ಠಾಣಾಧಿಕಾರಿ, ಮಹಿಳೆ ಮತ್ತು ಮಕ್ಕಳನ್ನು ಠಾಣೆಗೆ ಕರೆತಂದು ಭಿಕ್ಷಾಟನೆ ಮಾಡದಂತೆ ಎಚ್ಚರಿಕೆ ನೀಡಿದ್ದಲ್ಲದೇ ಮಹಿಳೆಯೊಂದಿಗೆ ಮಕ್ಕಳನ್ನು ಕಳುಹಿಸಿದರೆ ಪುನಃ ಭಿಕ್ಷಾಟನೆ ಮಾಡುವ ಸಾಧ್ಯತೆಯಿದೆ ಎಂಬ ನೆಲೆಯಲ್ಲಿ ನಿಟ್ಟೂರಿನ ಮಕ್ಕಳ ಕಲ್ಯಾಣ ಸಮಿತಿ ಬಾಲಕಿಯರ ಬಾಲ ಮಂದಿರದ ಅಧಿಕಾರಿಗಳ ವಶಕ್ಕೆ ನೀಡಿದ್ದು, ದಾಖಲೆಗಳೊಂದಿಗೆ ತಂದೆ ತಾಯಿಯರು ಬಂದರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕುಸುಮ ಫೌಂಡೇಶನ್ ನಾಗೂರು ಆಶ್ರಯದಲ್ಲಿ ನಡೆಯಲಿರುವ ‘ಕುಸುಮಾಂಜಲಿ-2016’ ರ ಪೂರ್ವಭಾವಿಯಾಗಿ ನಡೆಯಲಿರುವ ಗಾನಕುಸುಮ-2016 ಗಾಯನ ಸ್ಪರ್ಧೆಯ ಮೊದಲ ಸುತ್ತಿನ ಆಯ್ಕೆ ಸ್ಪರ್ಧೆಯು ದಿನಾಂಕ ನವೆಂಬರ್ 6ರ ಭಾನುವಾರ, ಬೆಳಿಗ್ಗೆ 8:30ಕ್ಕೆ ನಾಗೂರಿನ ಶ್ರೀ ಕೃಷ್ಣ ಲಲಿತ ಕಲಾ ಮಂದಿರದಲ್ಲಿ ನಡೆಯಲಿರುವುದು. ಸ್ಪರ್ಧಿಗಳು ಸಮಯಕ್ಕೆ ಸರಿಯಾಗಿ ಹಾಜರಿದ್ದು ಹೆಸರು ನೋಂದಾಯಿಸಿಕೊಳ್ಳುವಂತೆ ಕೋರಲಾಗಿದೆ. ಸಾಂಸ್ಕೃತಿಕ ಹಾಗೂ ಕಲಾ ಸಿರಿವಂತಿಯ ಸಮ್ಮಿಲನವಾದ ‘ಕುಸುಮಾಂಜಲಿ’ ಗೆ ಪೂರಕವಾಗಿ ಆಯೋಜಿಸಲಾಗುತ್ತಿರುವ ಗಾನಕುಸುಮ ಸ್ವರ್ಧೆಯಲ್ಲಿ ಯಾವುದೇ ಭಾಷೆಯ ಭಾವಗೀತೆ, ಭಕ್ತಿ ಪ್ರಧಾನ ಗೀತೆ, ದೇಶಭಕ್ತಿಗೀತೆ ಹಾಗೂ ಉತ್ತಮ ಅಭಿರುಚಿವುಳ್ಳ ಕಲಾತ್ಮಕ ಚಿತ್ರಗೀತೆಗಳನ್ನು ಆಯ್ದುಕೊಳ್ಳಬಹುದಾಗಿದೆ. ಸ್ಪರ್ಧೆಯು ಜೂನಿಯರ್ ಮತ್ತು ಸೀನಿಯರ್ ವಿಭಾಗವಾಗಿ ನಡೆಯಲಿದೆ. ಪ್ರತೀ ಸ್ಪರ್ಧಿಗೆ ಪಲ್ಲವಿ ಹಾಗೂ ಒಂದು ಚರಣ ಹಾಡಲು ಅವಕಾಶವಿದ್ದು ಗರಿಷ್ಠ 3 ನಿಮಿಷಗಳ ಕಾಲಾವಕಾಶವಿರುತ್ತದೆ. ಮೊದಲ ಸುತ್ತಿನಲ್ಲಿ 30 ಗಾಯಕರನ್ನು ಸೆಮಿಫೈನಲ್ ಸ್ಪರ್ಧೆಗೆ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 9483130844 ನಂಬರ್ಗೆ ಸಂಪರ್ಕಿಸುವಂತೆ ಕುಸುಮಾಂಜಲಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಾವುಂದದ ಅರೆಹೊಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭವಾದ ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಕಲಿಕೆಯ ಜತೆಯಲ್ಲಿ ವ್ಯಕ್ತಿತ್ವ ವಿಕಾಸಕ್ಕೆ ಹೆಚ್ಚು ಒತ್ತು ನೀಡಬೇಕು. ಸೇವಾ ಮನೋಭಾವನೆ ರೂಢಿಸಿಕೊಳ್ಳಬೇಕು. ಅವು ಮುಂದೆ ಉದ್ಯೋಗ ನಡೆಸುವಾಗ ಯಶಸ್ಸು ಗಳಿಸಲು ನೆರವಾಗುತ್ತವೆ. ರಾಷ್ಟ್ರೀಯ ಸೇವಾ ಯೋಜನೆಯ ಸದಸ್ಯರಾಗಿ ಇವುಗಳನ್ನು ಪಡೆಯಬಹುದು ಎಂದರು. ಗ್ರಾಮ ಪಂಚಾಯತ್ ಅಧ್ಯಕ್ಷ ಎನ್. ನರಸಿಂಹ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಟಿ. ಪಾಲಾಕ್ಷ ಸ್ವಾಗತಿಸಿದರು. ಸಮಾಜ ಶಾಸ್ತ್ರ ಉಪನ್ಯಾಸಕ ಹಾಗೂ ಯೋಜನಾಧಿಕಾರಿ ರಾಘವೇಂದ್ರ ಗುಡಿಗಾರ್ ಯೋಜನೆ ಮತ್ತು ಶಿಬಿರದ ಚಟುವಟಿಕೆಗಳನ್ನು ವಿವರಿಸಿದರು. ಅತಿಥಿಗಳಾಗಿದ್ದ ತಾಲೂಕು ಪಂಚಾಯತ್ ಸದಸ್ಯೆ ಶ್ಯಾಮಲಾ ಕುಂದರ್, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಯಂತಿ ಡಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ ಎನ್. ದಾಸ್,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ಕುಂದಾಪುರ ಇವರ ಆಶ್ರಯದಲ್ಲಿ ಜ್ಞಾನ ಭಾರತಿ ತಾಂತ್ರಿಕ ತರಬೇತಿ ಕೇಂದ್ರ ಕುಂದಾಪುರದ ಸಹಯೋಗದೊಂದಿಗೆ ಒಂದು ವಾರಗಳ ಕಾಲ ನಡೆದ ಕರಕುಶಲ ವಸ್ತು ತಯಾರಿಕ ಕಾರ್ಯಾಗಾರದ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಜ್ಞಾನ ಭಾರತಿ ಸಂಸ್ಥೆಯ ಪ್ರಾಂಶುಪಾಲರಾದ ರಾಘವೇಂದ್ರ ಗೋಪಾಡಿ ವಹಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಅಮರ್ ಪ್ರಸಾದ್ ಶೆಟ್ಟಿ, ಸುದ್ದಿಮನೆ ಸಂಪಾದಕ ಸಂತೋಷ ಕೋಣಿ, ಸ್ವ ಉದ್ಯೋಗ ಮತ್ತು ಕರಕುಶಲ ವಸ್ತುಗಳ ಅಗತ್ಯತೆಯ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಸಂಸ್ಥೆಯ ನಿರ್ದೇಶಕಿ ಶ್ರೀಮತಿ ಪದ್ಮಿನಿ ತರಬೇತಿಯ ಬಗ್ಗೆ ಮಾತನಾಡಿದರು. ಜ್ಞಾನ ಭಾರತಿ ಸಂಸ್ಥೆಯ ಉಪನ್ಯಾಸಕಿ ಅಶ್ವಿನಿ ಉಪಸ್ಥಿತರಿದ್ದರು. ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ಕುಂದಾಪುರ ಇದರ ಸಮನ್ವಯಾಧಿಕಾರಿ ಶ್ರೀಮತಿ ಸುಶೀಲ ಕಾರ್ಯಕ್ರಮ ನಿರ್ವಹಿಸಿದರು. ಶಿಬಿರಾರ್ಥಿ ಶ್ರೀಮತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಕೊರಗ ಕಲಾ ಮೇಳದ ಕೊಳಲು ವಾದನದಲ್ಲಿನ ಪರಣತಿಗಾಗಿ ಪ್ರಸಕ್ತ ಸಾಲಿನ ರಾಜ್ಯ ಜಾನಪದ ಅಕಾಡೆಮಿ ಪ್ರಶಸ್ತಿ ಪಡೆದಿರುವ ಮರವಂತೆಯ ಭುಜಂಗ ಕೊರಗರಿಗೆ ಅಲ್ಲಿನ ಸೇವಾ, ಸಾಂಸ್ಕೃತಿಕ ವೇದಿಕೆ ’ಸಾಧನಾ’ ಹುಟ್ಟೂರ ಸನ್ಮಾನ ನೀಡಿ ಅಭಿನಂದಿಸಿತು. ಸಾಧನಾ ಸಮುದಾಯ ಭವನದ ವಿ. ಕೆ. ಕಾಮತ್ ಸಭಾಗೃಹದಲ್ಲಿ ರವಿವಾರ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಸಾಧನಾ ಅಧ್ಯಕ್ಷ ಗುರುದಾಸ್ ವಿ. ಶ್ಯಾನುಭಾಗ್ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ತಾಲೂಕು ಕೊರಗ ಸಂಘಟನೆಯ ಅಧ್ಯಕ್ಷ ವಿ. ಗಣೇಶ್ ಕೊರಗರ ಬಳಿ ವಿಶಿಷ್ಟ ಸಾಂಸ್ಕೃತಿಕ ಸಂಪತ್ತು ಇದೆ. ಅವರ ಕುಲ ಕಸುಬಾದ ಬುಟ್ಟಿ ನೆಯ್ಗೆಯಲ್ಲಿ ಅವರನ್ನು ಮೀರಿಸುವವರಿಲ್ಲ. ಆದರೆ ಶೈಕ್ಷಣಿಕವಾಗಿ ಇನ್ನಷ್ಟೇ ಸಮಾನತೆ ಸಾಧಿಸಬೇಕಾಗಿದೆ ಎಂದು ಹೇಳಿ ಭುಜಂಗ ಕೊರಗರನ್ನು ಎಲ್ಲರಿಗಿಂತ ಮೊದಲು ಗೌರವಿಸಿದ ಸಾಧನಾ ಉಪಕ್ರಮವನ್ನು ಶ್ಲಾಘಿಸಿದರು. ಇನ್ನೋರ್ವ ಮುಖ್ಯ ಅತಿಥಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಆರ್. ಕೆ. ಶುಭ ಹಾರೈಸಿದರು. ಶೇಖರ ಮರವಂತೆ ಕೊರಗ ಕಲಾಮೇಳ ನಡೆದುಬಂದ ದಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಒಂದು ಕಾಲದಲ್ಲಿ ಬಡವರು, ಕಾರ್ಮಿಕರು ಸಹಬಾಳ್ವೆಯಿಂದ ಬದುಕಿದ್ದ ಆನಗಳ್ಳಿ ಇಂದು ಕುಂದಾಪುರದ ರೌಡಿಗಳಿಗೆ ಹಿತ್ತಲಮನೆಯಾಗಿದೆ. ಅಕ್ರಮಗಳ ವಿರುದ್ಧ ಧ್ವನಿಎತ್ತುವವರನ್ನು ಮಣಿಸುವ ವೃತ್ತಿಪರ ರೌಡಿಗಳು ತಂಡವೇ ವ್ಯವಸ್ಥಿತವಾಗಿ ತಲೆಯೆತ್ತುತ್ತಿರುವುದು ತೀರಾ ಆತಂಕಕಾರಿ ಸಂಗತಿ ಖ್ಯಾತ ರಂಗಕರ್ಮಿ, ರಾಷ್ಟ್ರೀಯ ನಾಟಕ ಶಾಲೆಯ ಪ್ರಾದೇಶಿಕ ನಿರ್ದೇಶಕ ಸುರೇಶ್ ಆನಗಳ್ಳಿ ವಿಷಾದ ವ್ಯಕ್ತಪಡಿಸಿದರು. ಕುಂದಾಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಕೆಲ ದಿನಗಳ ಹಿಂದೆ ತನ್ನ ಸಹೋದರ ಸುಧೀಂದ್ರ ಆಚಾರ್ಯ ತನ್ನ ಕಾರಿನಲ್ಲಿ ತೆರಳುತ್ತಿದ್ದಾಗ ರಸ್ತೆಗೆ ಕಲ್ಲು ಅಡ್ಡವಿಟ್ಟು ಇದೇ ತಂಡ ಹಲ್ಲೆನಡೆಸಿ ದರೋಡೆಗೈದಿದ್ದರೂ ಪೊಲೀಸರು ಅದೊಂದು ದೊಂಬಿ ಎಂದು ಪ್ರಕರಣ ದಾಖಲಿಸಿ ಪ್ರಕರಣದ ದಾರಿ ತಪ್ಪಿಸುತ್ತಿದ್ದಾರೆ ಎಂದವರು ಆರೋಪಿಸಿದರು. ಕಾರ್ಯಕ್ರಮವೊಂದರ ಬ್ಯಾನರ್ ವಿಷಯಕ್ಕೆ ಸಂಬಂಧಿಸಿ ಪೂರ್ವದ್ವೇಷವನ್ನಿಟ್ಟುಕೊಂಡಿದ್ದ ವ್ಯಕ್ತಿಯೋರ್ವರು ಅವರ ಬೆಂಬಲಿಗರ ಮೂಲಕ ತನ್ನ ಸಹೋದರ ಸುಧೀಂದ್ರ ಆಚಾರ್ಯ ಅವರಿಗೆ ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆಸಿ ಕೊನೆಗೆ ಅವರೇ ಅವರಿಗೆ ಬೇಕಾದ ಆಸ್ಪತ್ರೆಗೆ ಸೇರಿಸಿ ಗಂಭೀರ ಪ್ರಕರಣ ಅಲ್ಲವೆಂದು ಬಿಂಬಿಸಲು ಹೊರಟ್ಟಿದ್ದರು. ಇಷ್ಟಕ್ಕೆ…
