ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತ ಕಲಾ ಸಂಘದ ಆಶ್ರಯದಲ್ಲಿ ಖ್ಯಾತ ರಾಷ್ಟ್ರ ಮಟ್ಟದ ಕರಾಟೆ ಪಟು ಕಾರ್ತಿಕ್ ಕಟೀಲು ಮತ್ತು ಅವರ ತಾಯಿ ಶೋಭಲತಾ ಕಟೀಲು ಮಹಿಳೆಯರು ಸ್ವರಕ್ಷಣೆ ಮಾಡುವ ಕೆಲವು ಸುಲಭ ಕೌಶಲ್ಯಗಳನ್ನು ಪ್ರಾತ್ಯಕ್ಷಿತೆಯ ಮೂಲಕ ತೋರಿಸಿದರು. ಸುಮಾರು ಏಳು ನೂರಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಭಾಗವಹಿಸಿ, ಇದೇ ಸಂದರ್ಭದಲ್ಲಿ ಕಾರ್ತಿಕ್ ಕಟೀಲು ಜೊತೆ ಸಂವಾದ ನಡೆಸಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಾಜೇಶ್ ಶೆಟ್ಟಿ, ಲಲಿತ ಕಲಾ ಸಂಘದ ಸಂಯೋಜಕಿ ಸ್ಫೂರ್ತಿ ಎಸ್. ಫೆರ್ನಾಂಡಿಸ್, ಸಹ ಸಂಯೋಜಕಿ ಅನ್ವಿತಾ, ವಿದ್ಯಾರ್ಥಿ ಪ್ರತಿನಿಧಿಗಳಾದ ವೆಂಕಟೇಶ್, ಶಿಲ್ಪಾ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪ್ರಶಾಂತಿ ಸ್ವಾಗತಿಸಿದರು, ರಜತ್ ಅತಿಥಿಗಳನ್ನು ಪರಿಚಯಿಸಿದರು, ಬ್ರಿಟಾ ಡಿ’ಸೋಜಾ ವಂದಿಸಿದರು, ವಿಸ್ಮಿತಾ ಕಾರ್ಯಕ್ರಮ ನಿರೂಪಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆರಳೆಣಿಕೆಯಷ್ಟು ಗ್ರಾಮಸ್ಥರಿಂದ ನಡೆಯುತ್ತಿದ್ದ ಮೊಳ್ಳಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮಸಭೆಯಲ್ಲಿ ಈ ಬಾರಿ ಸಭಾಂಗಣ ತುಂಬಿ ಹೋಗಿದ್ದು ಮೊದಲ ಇತಿಹಾಸವಾದರೆ ಕೇವಲ ಮೂರು ಇಲಾಖೆಯ ಅಧಿಕಾರಿಗಳು ಮಾತ್ರ ಗ್ರಾಮಸಭೆಗೆ ಹಾಜರಾಗುವ ಮೂಲಕ ನಿಯಮ ಉಲ್ಲಂಘಿಸಿದ ಘಟನೆ ಮಂಗಳವಾರ ಮೊಳ್ಳಹಳ್ಳಿ ಗ್ರಾಮ ಪಂಚಾಯತಿ ಸಭಾಗಣದಲ್ಲಿ ಮಂಗಳವಾರ ನಡೆಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ, ಪಶುಸಂಗೋಪನಾ ಇಲಾಖಾಧಿಕಾರಿ ಹಾಗೂ ಅರಣ್ಯ ಇಲಾಖೆ ಬಿಟ್ಟರೆ ಮತ್ಯಾವುದೇ ಅಧಿಕಾರಿಗಳು ಗ್ರಾಮಸಭೆಗೆ ಹಾಜರಾಗದೇ ಇರುವುದರ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆಯಿತು. ಸಭೆಯಲ್ಲಿ ಅಧಿಕಾರಿಗಳ ಗೈರಾಗಿರುವುದರಿಂದ ಮೂವರು ಅಧಿಕಾರಿಗಳು ಮಾಹಿತಿ ನಿಡಿದ ತಕ್ಷಣ ಮೊಳಹಳ್ಳಿಯ ಸರ್ವೇ ನಂಬ್ರ ೨೫೨ರಲ್ಲಿ ಅಕ್ರಮ ಕ್ರಶರ್ ನಡೆಯುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಪ್ರತಾಪ್ ಶೆಟ್ಟಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಒಂದೂವರೆ ವರ್ಷದಿಂದ ಪರವಾನಿಗೆ ನವೀಕರಣ ಆಗದೇ ಇದ್ದರೂ ಅಲ್ಲಿ ಕಲ್ಲು ಕೋರೆ ಕೆಲಸ ಮಾಡುತ್ತಿದೆ.…
19ಕ್ಕೂ ಹೆಚ್ಚು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲೆರಿಕಲ್ ಕೇಡರ್ನ ಹುದ್ದೆಗಳಿವೆ – ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ಕುಂದಾಪ್ರ ಡಾಟ್ ಕಾಂ ಮಾಹಿತಿ ರಾಜ್ಯದಲ್ಲಿ 1,467 ಹುದ್ದೆಗಳು ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) 19ಕ್ಕೂ ಹೆಚ್ಚು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲೆರಿಕಲ್ ಕೇಡರ್ನ ಹುದ್ದೆಗಳಿವೆ. ಒಟ್ಟು 19,243 ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, ರಾಜ್ಯದಲ್ಲಿಯೇ 1,467 ಹುದ್ದೆಗಳು ಖಾಲಿ ಇವೆ. ಕಳೆದ ಬಾರಿಯಂತೆ ಈ ಬಾರಿಯೂ ಐಎಎಸ್, ಕೆಎಎಸ್ ಮಾದರಿಯಲ್ಲಿ ಎರಡು ಲಿಖಿತ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಈ ಬಾರಿಯೂ ಸಂದರ್ಶನ ಇರುವುದಿಲ್ಲ. ಮುಖ್ಯಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕ ನಡೆಯಲಿದೆ. ಅರ್ಹತೆ ಏನು? : ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಈ ಪರೀಕ್ಷೆ ಬರೆಯಬಹುದು. ಕೇಂದ್ರ ಸರ್ಕಾರದ ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿಗೆ ಸರಿಸಮನಾದ ಕೋರ್ಸ್ ಮಾಡಿದವರಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಭ್ಯರ್ಥಿಯು ಕಂಪ್ಯೂಟರ್ನಲ್ಲಿ ಕಾರ್ಯ ನಿರ್ವಹಿಸುವ ಜ್ಞಾನ ಹೊಂದಿರುವುದು ಕಡ್ಡಾಯ. ಹೀಗಾಗಿ ಕಂಪ್ಯೂಟರ್ ಕಲಿಕೆಯ ಬಗ್ಗೆ ದೃಢೀಕರಣ ಪತ್ರವನ್ನು ಕೂಡ ಅಭ್ಯರ್ಥಿಯು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಇಂಡಿಯ ಲಿಟ್ರಸಿ ಮಿಷನ್ ಅಡಿಯಲ್ಲಿ ಆಶಾಕಿರಣ ಯೋಜನೆ ಅನ್ವಯ ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ವತಿಯಿಂದ ನಡೆದ ಆಶಾಕಿರಣ ಯೋಜನೆಯ ವಲಯ ಮಟ್ಟದ ಮಾಹಿತಿ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ ಮಾತನಾಡಿ ರೂ.೨೧೦೦ ನೀಡಿ ಉತ್ತರ ಭಾರತದ ಒಂದು ಮಗುವನ್ನು ದತ್ತು ತೆಗೆದುಕೊಂಡು ಆ ಮಗುವಿನ ಉಜ್ವಲ ಭವಿಷ್ಯವನ್ನು ರೂಪಿಸುವ ಯೋಜನೆಯೇ ಆಶಾಕಿರಣ ಯೋಜನೆ ಎಂದರು. ರೋಟರಿ ಸನ್ ರೈಸ್ ಅಧ್ಯಕ್ಷ ಕೆ.ನರಸಿಂಹ ಹೊಳ್ಳ ಸ್ವಾಗತಿಸಿ, ರೋಟರಿ ಸನ್ರೈಸ್ ಎಂಟು ಮಕ್ಕಳನ್ನು ದತ್ತು ತೆಗೆದುಕೊಳ್ಳುವ ಮೂಲಕ ಯೋಜನೆಗೆ ಚಾಲನೆ ನೀಡಿದರು. ರೋಟರಿ ವಲಯ ಒಂದರ ಸಹಾಯಕ ಗವರ್ನ್ರ್ ಮಧುಕರ ಹೆಗ್ಡೆ ಪ್ರಾಸ್ತಾವಿಕ ಮಾತನಾಡಿದರು. ವಲಯ ಸೇನಾನಿ ಅಬುಶೇಖ ಸಾಹೇಬ್, ವಲಯ ಲಿಟ್ರಸಿ ಚೇರ್ಮನ್ ಲುಯಿಸ್ ಜೆ ಫೆರ್ನಾಂಡಿಸ್ , ರೋಟರಿ ಸನ್ರೈಸ್ ಸ್ಥಾಪಕ ಅಧ್ಯಕ್ಷ ದಿನಕರ ಆರ್ ಶೆಟ್ಟಿ, ಹಾಗೂ ವಲಯ ಒಂದರ ಎಲ್ಲಾ ಏಳು ಅಧ್ಷಕ್ಷರು ಮತ್ತು ಕಾರ್ಯದರ್ಶಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದ ಸಮರೋಪ ಸಮಾರಂಭ ಇತ್ತಿಚಿಗೆ ನಡೆಯಿತು. ಉಡುಪಿ ಜಿಲ್ಲೆ ಕರ್ನಾಟಕದಲ್ಲಿಯೇ ಮಾದರಿ ಜಿಲ್ಲೆ, ವಿದ್ಯಾರ್ಥಿ ಜೀವನದಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಎಲ್ಲಾ ವಿದ್ಯಾರ್ಥಿಗಳ ಕರ್ತವ್ಯವಾಗಬೇಕು, ಬಹುಮಾನ ಬರಲಿ, ಬಾರದೇ ಇರಲಿ ಸ್ಪರ್ಧೆಯಲ್ಲಿ ಭಾಗವಹಿಸುವುದು ಬಹಳ ಮುಖ್ಯವಾದುದು. ಬಹುಮಾನ ವಿಜೇತ ಎಲ್ಲಾ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರಮಟ್ಟದಲ್ಲಿ ಜಿಲ್ಲೆಯ ಕೀರ್ತಿಯನ್ನು ಎತ್ತಿ ಹಿಡಿಯಬೇಕು ಎಂದು ಸಮಾರಂಭದ ಅಧ್ಯಕ್ಷತೆ ವಹಿಸಿದ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಜಿ. ಎಂ. ಗೊಂಡ ಮಾತನಾಡಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್ ಪಿ ನಾರಾಯಣ ಶೆಟ್ಟಿ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡಿ ಕೊಡಲಾಗಿದೆ, ಅದರ ಉಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು, ಇಂದು ನಡೆದ ಜಿಲ್ಲಾಮಟ್ಟದ ಕುಸ್ತಿ ಪಂದ್ಯಾಯಾಟದಲ್ಲಿ ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳು ಮತ್ತು ದೈಹಿಕ ಶಿಕ್ಷಣ ನಿರ್ದೇಶಕರುಗಳಿಗೆ ಶುಭ ಹಾರೈಸಿ ಮತ್ತೊಮ್ಮೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಂಘ ಸಂಸ್ಥೆಗಳು ಗ್ರಾಮ ಪಂಚಾಯತ್ ಜೊತೆಗೆ ಸಹಭಾಗಿತ್ವದ ಯೋಜನೆಯನ್ನು ರೂಪಿಸಿದಲ್ಲಿ ಬಲಿಷ್ಠ ಸಮಾಜ ನಿರ್ಮಾಣ ಸಾಧ್ಯ ಎಂದು ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಮಡಿವಾಳ ಸಂದೇಶ್ ಹೇಳಿದರು. ಸ್ವಚ್ಛ ಭಾರತ್ ಫ್ರೆಂಡ್ಸ್ ಚಿತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಮ್ಮಿಕೊಂಡ “ಗ್ರಾಮ ಅಭ್ಯುದಯ ಅಭಿಯಾನ”ದ ಉದ್ಘಾಟಿಸಿ ಮಾತನಾಡಿದರು. ಜಾಗೃತಿ ಕರಪತ್ರವನ್ನು ಬಿಡುಗಡೆ ಮಾಡಿ ಮಾತನಾಡಿದ ಚಿತ್ತೂರು ಗ್ರಾಮ ಪಂಚಾಯತ್ ಪಿ.ಡಿ.ಓ. ಸಂದೇಶ್ ಶೆಟ್ಟಿ, ಪ್ರತಿಯೊಬ್ಬನೂ ತನ್ನ ಸಾಮಾಜಿಕ ಜವಾಬ್ದಾರಿಯನ್ನರಿತು ಕಾರ್ಯಪ್ರವತ್ತನಾದರೆ, ದೇಶದ ಸರ್ವಾಂಗೀಣ ಅಭಿವ್ರದ್ಧಿ ಸಾಧ್ಯ ಎಂದರು. ಸಂಘ ಸಂಸ್ಥೆಗಳು ಗ್ರಾಮ ಪಂಚಾಯತ್ ಜೊತೆಗೆ ಜನಸ್ನೇಹಿ ಕಾರ್ಯಕ್ರಮಗಳನ್ನು ಮಾಡಿದರೆ, ಸಂಪನ್ಮೂಲಗಳ ಸದ್ಬಳಕೆಯಿಂದ ಸರಕಾರದ ಸೌಲಭ್ಯಗಳು ಸರಿಯಾಗಿ ಜನರಿಗೆ ತಲುಪಿ, ತನ್ಮೂಲಕ ಪಂಚಾಯತ್ ರಾಜ್ ವ್ಯವಸ್ಥೆ ಬಲಗೊಳ್ಳುವುದು, ಸ್ವಚ್ಛ ಭಾರತ್ ಫ್ರೆಂಡ್ಸ್ ನವರು ಚಿತ್ತೂರು ಗ್ರಾಮವನ್ನು ಆಯ್ಕೆ ಮಾಡಿ ಮುಂದಿನ ಮೂರು ತಿಂಗಳುಗಳ ಕಾಲ ವಿವಿಧ ಕಾರ್ಯಕ್ರಮವನ್ನು ಮಾಡಲಿದ್ದು ಅವರಿಗೆ ಗ್ರಾಮಸ್ಥರು ಸಹಕರಿಸಬೇಕು ಎಂದು ಹೇಳಿದರು. ಚಿತ್ತೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀಮಂತರು ತಮ್ಮ ಮನೆಯಲ್ಲೇ ನೀರು ಶುದ್ಧೀಕರಣ ವ್ಯವಸ್ಥೆ ಹೊಂದುತ್ತಾರೆ. ಬಡವರಿಗೆ ಆ ಸಾಮರ್ಥ್ಯ ಇಲ್ಲ. ಆ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸುಮಾರು 10 ಸಾವಿರ ರೂಪಾಯಿ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಮುಂದಾಗಿದೆ. ಈಗಾಗಲೇ ಕೆಲವು ಕಡೆ ಇದು ಆರಂಭವಾಗಿದ್ದು ಹಂತಹಂತವಾಗಿ ಎಲ್ಲೆಡೆ ಸ್ಥಾಪನೆಯಾಗಲಿದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಮರವಂತೆ ಗ್ರಾಮ ಪಂಚಾಯತ್ನಲ್ಲಿ ಅವರು ಘಟಕ ಉದ್ಘಾಟಿಸಿದ ಬಳಿಕ ಮಾತನಾಡಿದರು. ಹೆಚ್ಚಿನ ಕಾಯಿಲೆಗಳು ಕಷ್ಮಲಯುಕ್ತ ನೀರು ಕುಡಿಯುವುದರಿಂದ ಬರುತ್ತದೆ. ಆದುದರಿಂದ ಗ್ರಾಮ ಪಂಚಾಯತ್ ಈ ಬಗ್ಗೆ ಜಾಗೃತಿ ಮೂಡಿಸಿ ಜನರು ಕುಡಿಯಲು ಈ ನೀರು ಬಳಸುವಂತೆ ಮಾಡಬೇಕು. ಪ್ರತಿದಿನ ಈ ಘಟಕದಲ್ಲಿ 8000 ಲಿಟರ್ ನೀರು ಶುದ್ಧವಾಗುತ್ತದೆ. ಒಂದು ರೂಪಾಯಿಗೆ ಹತ್ತು ಲಿಟರ್ ನೀರು ಸಿಗುತ್ತದೆ ಎಂದರು. ಮುಂದಿನ ದಿನದಲ್ಲಿ ರೂ 20 ಕೋಟಿ ವೆಚ್ಚದಲ್ಲಿ ಮರವಂತೆ, ನಾವುಂದ, ಕಿರಿಮಂಜೇಶ್ವರ, ಹೇರೂರು ಗ್ರಾಮಗಳನ್ನು ಒಳಗೊಂಡ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದ್ಯಾರ್ಥಿಗಳು ಸೇವಾ ಮನೋಭಾವನೆಯಿಂದ ಸತ್ಕಾರ್ಯದಲ್ಲಿ ತೊಡಗಿಸಿಕೊಂಡಾಗ ಸಾಮಾಜಿಕ ಜವಾಬ್ದಾರಿ ಮತ್ತು ನಾಯಕತ್ವದ ಗುಣಗಳು ಬೆಳೆಯಲು ಸಾಧ್ಯ. ಪಠ್ಯೇತರ ಚಟುವಟಿಕೆಗಳಿಂದ ದೈಹಿಕ ಮತ್ತು ಮಾನಸಿಕ ಚಟುವಟಿಕೆಗಳು ಹೆಚ್ಚಾದಂತೆ ಮನೋಬಲ ವೃದ್ಧಿಸುತ್ತದೆ. ಸೇವೆಯಲ್ಲಿ ಸಕ್ರೀಯರಾದಾಗ ಒತ್ತಡದ ಜೀವನದಿಂದ ಮುಕ್ತರಾಗಿ ಪ್ರೀತಿ ಸಹಬಾಳ್ವೆಯಿಂದ ಉತ್ತಮ ಜೀವನ ನಿರ್ವಹಿಸಲು ಸಾದ್ಯ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ೨೦೧೬-೧೭ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಬದುಕಿನಲ್ಲಿ ಶಿಸ್ತು ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣವು ಸಮಗ್ರ ವ್ಯಕ್ತಿತ್ವವನ್ನು ರೂಪಿಸುವ ಪ್ರಕ್ರೀಯೆ ಎಂಬುದನ್ನು ಸಾಧಿಸಿ ತೋರಿಸಬೇಕು ಎಂದ ಶಾಸಕರು, ಎನ್ಎಸ್ಎಸ್ನಿಂದ ಪಡೆದ ಉತ್ತಮ ಅನುಭವಗಳು ನಿಮ್ಮ ಭವಿಷ್ಯದ ಬಾಳಿಗೆ ದಾರಿದೀಪವಾಗಲಿ ಎಂದು ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಪಾಲಾಕ್ಷ ಟಿ. ಅಧ್ಯಕ್ಷತೆವಹಿಸಿದ್ದರು. ಮಣಿಪಾಲ ಎಂಐಟಿ ಪ್ರೊಫೆಸರ್ ಬಾಲಕೃಷ್ಣ ಮದ್ದೋಡಿ, ಸಿಕ್ಕಿಂ ಮಣಿಪಾಲ ವಿಶ್ವವಿದ್ಯಾಲಯದ ಪ್ರೊಫೆಸರ್ ಕೆನ್ಯೂಟ್ ಎಫ್. ರೊಡ್ರಿಗಸ್ ಎನ್ಎಸ್ಎಸ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಇಲ್ಲಿಯ ವಿದ್ಯಾರ್ಥಿಗಳು ಸ.ಪ್ರಾ.ಶಾಲೆ ಕಿರಿಮಂಜೇಶ್ವರದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ 39 ಸ್ಪರ್ಧಾಳುಗಳು ಪ್ರಥಮ ಸ್ಥಾನವನ್ನು, 32 ದ್ವಿತೀಯ ಹಾಗೂ 6 ತೃತೀಯ ಸ್ಥಾನವನ್ನು ಪಡೆಯುವುದರೊಂದಿಗೆ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುತ್ತಾರೆ. ಅಲ್ಲದೇ ಪ್ರಥಮ ಸ್ಥಾನವನ್ನು ಪಡೆದ 39 ವಿದ್ಯಾರ್ಥಿಗಳು ವಲಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಶಾಲೆಗೆ ಕೀರ್ತಿತಂದ ಈ ಮಕ್ಕಳಿಗೆ ಶಾಲಾ ಸಂಸ್ಥಾಪಕರಾದ ಡಾ|| ಎನ್.ಕೆ.ಬಿಲ್ಲವ, ಶಾಲಾ ಮುಖ್ಯೋಪಾಧ್ಯಾಯರಾದ ಪ್ರವೀಣ್ ಕುಮಾರ್ ಕೆ.ಪಿ, ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೈಂದೂರು: ದೇಶಾದ್ಯಂತ ಅಖಿಲ ಭಾರತ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಮುಷ್ಕರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಕುಂದಾಪುರ ತಾಲೂಕಿನಲ್ಲಿಯೂ ಬಂದ್ ಬಹುಪಾಲು ಯಶಸ್ವಿಯಾಗಿದೆ. ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವೆಡೆ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ವಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ದೇಶದ 11 ವಿವಿಧ ಕಾರ್ಮಿಕ ಸಂಘಟನೆಗಳು 17 ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಂದ್ಗೆ ಕರೆನೀಡಿದ್ದು, ಬೆಳಿಗ್ಗಿನಿಂದಲೇ ಮುಷ್ಕರಕ್ಕೆ ಪೂರಕ ವಾತಾವರಣ ಉಂಟಾಗಿದ್ದು, ಪ್ರಯಾಣಿಕರು ಮಾತ್ರ ಪರದಾಡುವಂತಾಯಿತು. ಬಸ್ಸು, ಆಟೋವಿಲ್ಲ: ಮುಷ್ಕರಕ್ಕೆ ಖಾಸಗಿ ಬಸ್, ಟೆಂಪೊ ಮಾಲಿಕ ಚಾಲಕರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು ಬೆಳಿಗ್ಗಿನಿಂದ ಯಾವುದೇ ಬಸ್ಸುಗಳು ಬಿದಿಗಿಳಿಯಲಿಲ್ಲ. ಕುಂದಾಪುರ ನಗರ ಭಾಗದಲ್ಲಿ ಆಟೋ ಚಾಲಕರೂ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದರಿಂದ ಆಟೋ ಸಂಚಾರವೂ ಇರಲಿಲ್ಲ. ಬೈಂದೂರು ಭಾಗಗಳಲ್ಲಿ ಆಟೋ ಸಂಚಾರವಿತ್ತು. ಖಾಸಗಿ ವಾಹನಗಳು, ದ್ವಿಚಕ್ರ ವಾಹನಗಳು, ವಿರಳ ಸಂಖ್ಯೆಯಲ್ಲಿ ಲಾರಿಗಳು ಸಂಚರಿಸುತ್ತಿದ್ದುದು ಕಂಡುಬಂತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಕಾರಿ ಬಸ್ಸುಗಳ ಸಂಚಾರ…
