ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಡಿಸೆಂಬರ್ 9 ರಿಂದ 13 ರ ತನಕ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ನಡೆಯಲಿರುವ ವಿಶ್ವ ತುಳುವೆರೆ ಆಯನದ ಪ್ರಚಾರದ ಭಾಗವಾಗಿ ಬಸ್ರೂರು ತುಳುವೇಶ್ವರದಿಂದ ಕಾಸರಗೋಡು ತುಳುವನದವರೆಗೆ ಮೂರು ತಿಂಗಳುಗಳ ಕಾಲ ನಡೆಯುವ ರಥಯಾತ್ರೆಗೆ ವ್ಯೆಭವಯುತ ಸ್ವಾಗತ ನೀಡಲಾಯಿತು. ಮಾರಣಕಟ್ಟೆ ಕ್ಷೇತ್ರದ ಆನುವಂಶಿಕ ಆಡಳಿತ ಮುಕ್ತೇಸರರಾದ ಸಿ. ಸೀತಾರಾಮ ಶೆಟ್ಟಿ ಮಾತನಾಡಿ ತುಳುನಾಡಿನ ಸಂಸ್ಕ್ರತಿಯ ಸಂರಕ್ಷಣೆಗಾಗಿ ನಡೆಯುತ್ತಿರುವ ತುಳುವೆರೆ ಆಯನೋ ಯಶಸ್ವಿಯಾಗಲಿ ಎಂದು ಶುಭಹಾರಸಿದರು. ಈಸಂದಭ೯ದಲ್ಲಿ ಶ್ರೀಕ್ಷೇತ್ರದ ಅಕ್ಔಟೆಂಟ್ ಕೆ.ನಾರಾಯಣ ಶೆಟ್ಟಿ , ನಿವೖತ್ತ ಅಧ್ಯಾಪಕ ಕೆ ಶಂಕರ ಶೆಟ್ಟಿ , ದೇವಳದ ಸಿಬ್ಬಂದಿಗಳು ಉಪಸ್ತಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ರಾಷ್ಟ್ರೀಯ ಭಾವೈಕ್ಯತಾ ದಿನದ ಅಂಗವಾಗಿ ವಿದ್ಯಾರ್ಥಿಗಳು ಭಾವೈಕ್ಯತಾ ಪ್ರತಿಜ್ಞೆ ಸ್ವೀಕರಿಸಿದರು. ಉಪನ್ಯಾಸಕ ಭಾಸ್ಕರ ಶೆಟ್ಟಿ ಪ್ರತಿಜ್ಞಾ ವಿಧಿ ಭೋಧಿಸಿದರು. ಪ್ರಾಂಶುಪಾಲೆ ಕವಿತಾ ಎಮ್ ಸಿ ಉಪನ್ಯಾಸಕ ವೃಂದದವರು ಪಾಲ್ಗೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಅರ್ಟ್ ಆಫ್ ಲೀವಿಂಗ್ನ ಶ್ರೀ ರವಿಶಂಕರ ಗುರೂಜಿ ತಮ್ಮ ಶಿಷ್ಯರೊಂದಿಗೆ ಮಂಗಳವಾರ ಕೊಲ್ಲೂರಿಗೆ ಭೇಟಿ ನೀಡಿ ಶ್ರೀಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಕಮಲಶಿಲೆಗೆ ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ಪಂಚಭಾಷಾ ಚಲನಚಿತ್ರ ನಟಿ ರಾಧಿಕಾ ತಮ್ಮ ಪತಿ ನಟ ಶರತ್ಬಾಬುಯೊಂದಿಗೆ ದೇವಳಕ್ಕೆ ಆಗಮಿಸಿ ಶ್ರೀ ದೇವಿಗೆ ವಿಶೇಷ ಪೂಜೆ ಹಾಗೂ ಚಂಡಿಕಾಹೋಮ ಸೇವೆ ಸಲ್ಲಿಸಿದರು. ದೇವಳದ ಪರವಾಗಿ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಚ್. ಕೃಷ್ಣಮೂರ್ತಿ ಇವರನ್ನು ಸ್ವಾಗತಿಸಿ ಪ್ರಸಾದ ನೀಡಿ ಗೌರವಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಸನ್ರೈಸ್ನ ಆನ್ಸ್ ಕ್ಲಬ್ನ ಸ್ಥಾಪಕ ಅಧ್ಯಕ್ಷರಾಗಿ ಶೀಲಾ ಚಂದ್ರಶೇಖರ ಆಯ್ಕೆಯಾಗಿದ್ದಾರೆ. ರೋಟರಿ ಕ್ಲಬ್ ಕುಂದಾಪುರ ಸನ್ರೈಸ್ 12 ವರ್ಷಗಳ ನಂತರ ನೂತನವಾಗಿ ಆನ್ಸ್ ಕ್ಲಬ್ನ್ನು ಆರಂಭಿಸುತ್ತಿದ್ದು, ಕಾರ್ಯದರ್ಶಿಯಾಗಿ ಸಹನಾ ನಾವುಡ ಆಯ್ಕೆಯಾಗಿದ್ದಾರೆ ಎಂದು ರೋಟರಿ ಸನ್ರೈಸ್ ಅಧ್ಯಕ್ಷ ಕೆ. ನರಸಿಂಹ ಹೊಳ್ಳ ತಿಳಿಸಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ರಾಮಕ್ಷತ್ರಿಯ ಮಾತೃಮಂಡಳಿ ಆಶ್ರಯದಲ್ಲಿ ಬೈಂದೂರಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಪುಟಾಣಿಗಳಿಂದ ಮುದ್ದು ಕೃಷ್ಣ ಸ್ಪರ್ಧೆ ಜರುಗಿತು. ಸುಮಾರು 60 ಮಕ್ಕಳು ಭಾಗವಹಿಸಿದ್ದರು. ಮಾತೃ ಮಂಢಳಿಯ ಅಧ್ಯಕ್ಷೆ ಆಶಾ ಜಗದೀಶ ಪಟವಾಲ್, ಕಾರ್ಯದರ್ಶಿ ವನಜಾ ಭಾಸ್ಕರ್ ಹಾಗೂ ಸರ್ವ ಸದಸ್ಯರು ಹಾಜರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಅದರಲ್ಲಿ ಭಾಗವಹಿಸಿ ಪ್ರತಿಭೆ ಅನಾವರಣಗೋಳಿಸುವುದು ಮಹತ್ವವಾಗಿದೆ. ಜನಸಂಖ್ಯೆಯಲ್ಲಿ ಭಾರತ ಮುಂದುವರಿದ ರಾಷ್ಟ್ರವಾಗಿದ್ದು, ಕ್ರೀಡಾ ಕ್ಷೇತ್ರದಲ್ಲಿ ಹಿಂದುಳಿದಿರುವುದು ದುರದೃಷ್ಟಕರ ಎಂದು ತಾಪಂ ಸದಸ್ಯ ಜಗದೀಶ ದೇವಾಡಿಗ ಹೇಳಿದರು. ಬಿಜೂರು ಪ್ರೌಢ ಶಾಲೆಯಲ್ಲಿ ನಡೆದ ವಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು. ನಮ್ಮಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದು ಅವರಿಗೆ ಪ್ರೋತ್ಸಾಹದ ಜತೆ ಸೂಕ್ತ ತರಬೇತಿ ನೀಡುವ ವ್ಯವಸ್ಥೆ ಆಗಬೇಕಾಗಿದೆ. ಗ್ರಾಮೀಣ ಮಟ್ಟದಲ್ಲಿ ಪ್ರತಿಭೆಗಳನ್ನು ಗುರುತಿಸುವ ಮೂಲಕ ಸರಕಾರ ಕ್ರೀಡೆಗಾಗಿ ಪ್ರತೇಕ ಅನುದಾನದ ನೀಡುವ ಅವಶ್ಯಕತೆ ಇದೆ ಎಂದ ಅವರು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಭಾಗವಹಿಸುತ್ತಿರುವ ಕ್ರೀಡಾಪಟುಗಳಿಗೆ ಶುಭಕೋರಿದರು. ಬಿಜೂರು ಗ್ರಾಪಂ ಮಾಜಿ ಅಧ್ಯಕ್ಷ ಕೃಷ್ಣ ಮೂರ್ತಿ ಆಧ್ಯಕ್ಚತೆ ವಹಿಸಿದ್ದರು. ನೂತನವಾಗಿ ನಿರ್ಮಾಣಗೊಂಡ ಪ್ರೌಢ ಶಾಲೆಯ ಅಕ್ಷರದಾಸೋಹ ಕೊಠಡಿಯನ್ನು ಎಸ್ಡಿಎಂಸಿ ಕಾರ್ಯಾಧ್ಯಕ್ಷ ಬಿ. ರಘರಾಮ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಜೂರು ಗ್ರಾಪಂ ಆಧ್ಯಕ್ಷೆ ಲೋಲಾಕ್ಷಿ ದೇವಾಡಿಗ, ಸದಸ್ಯ ಕೆ.ಟಿ ರಾಜೇಶ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಡಾ.ಬಿ.ಆರ್.ಅಂಬೇಡ್ಕರ್ ಯುವಕ ಮಂಡಲ, ಅಮೃತಾ ಯುವತಿ ಮಂಡಲ, ಅರ್ಚನಾ ಮಹಿಳಾ ಮಂಡಲ ಮೇಲ್ಗಂಗೊಳ್ಳಿ ಮತ್ತು ಪಂಚಗಂಗಾವಳಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 6ನೇ ವರ್ಷದ ‘ಮುದ್ದು ಕೃಷ್ಣ’ ವೇಷ ಸ್ಪರ್ಧೆಯು ಮೇಲ್ಗಂಗೊಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜರಗಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಚೆಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಮಾಜಿ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ಶುಭಾಶಂಸನೆಗೈದರು. ಸವಿತಾ ಸಮಾಜದ ಉಡುಪಿ ಜಿಲ್ಲಾ ಸಂಘಟಕ ಮಂಜುನಾಥ ಸಾಲಿಯಾನ್ ಮಕ್ಕಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಮಹಿಳಾ ಮಂಡಲದ ಅಧ್ಯಕ್ಷೆ ವಿನೋದಾ ಕೆ., ತೀರ್ಪುಗಾರರಾದ ಆಶಾ, ಜ್ಯೋತಿ ಉಪಸ್ಥಿತರಿದ್ದರು. ಯುವತಿ ಮಂಡಲದ ಸದಸ್ಯೆ ನಯನಾ ಸ್ವಾಗತಿಸಿದರು. ಯುವತಿ ಮಂಡಲದ ಕಾರ್ಯದರ್ಶಿ ಸಹನಾ ಕೆ. ಕಾರ್ಯಕ್ರಮ ನಿರೂಪಿಸಿದರು. ಯುವಕ ಮಂಡಲದ ಸ್ಥಾಪಕ ಅಧ್ಯಕ್ಷ ಭಾಸ್ಕರ ಎಚ್.ಜಿ. ವಂದಿಸಿದರು. ಸ್ಪರ್ಧೆಯಲ್ಲಿ ಸುಮಾರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಗುರುಕುಲ ಪದವಿ ಪೂರ್ವ ಕಾಲೇಜು ಇವರ ಸಹಯೋಗದೊಂದಿಗೆ ಜರುಗಿದ ತಾಲ್ಲೂಕು ಅಂತರ್ ಕಾಲೇಜು ಮಟ್ಟದ ಪುಟ್ಬಾಲ್ ಪಂದ್ಯಾವಳಿಯು ವಕ್ವಾಡಿ ಗುರುಕುಲ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಜರುಗಿತು. ಪಂದ್ಯಾಟದ ಉದ್ಘಾಟನೆಯನ್ನು ಜಿಲ್ಲಾ ಕ್ರೀಡಾ ಸಂಯೋಜಕ ಶ್ರೀಧರ ಶೆಟ್ಟಿ ಇವರು ನೆರವೇರಿಸಿದರು. ಅಧ್ಯಕ್ಷತೆಯನ್ನು ಗುರುಕುಲ ಕಾಲೇಜಿನ ಪ್ರಾಂಶುಪಾಲ ಚನ್ನಬಸಪ್ಪ. ಬಿ ಇವರು ವಹಿಸಿದ್ದರು. ಅತಿಥಿಗಳಾಗಿ ನಾಗರಾಜ್ ಶೆಟ್ಟಿ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಾಂಡ್ಯ ಎಜುಕೇಶನಲ್ ಟ್ರಸ್ಟ್ನ ಜಂಟಿ ಕಾರ್ಯನಿರ್ವಾಹಕ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ ಕ್ರೀಡಾಪಟುಗಳ ಸಾಧನೆಯನ್ನು ಶ್ಲಾಘಿಸಿದರು. ಮುಖ್ಯ ಅತಿಥಿಯಾಗಿ ಗುರುಕುಲ ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲ ಸಾಯಿಜು ಕೆ. ಆರ್. ನಾಯರ್ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕ ನಾಗೇಶ್ ಸ್ವಾಗತಿಸಿದರು ಹಾಗೂ ಉಪನ್ಯಾಸಕಿ ಪವಿತ್ರಾರವರು ವಂದನಾರ್ಪಣೆ ಮಾಡಿದರು. ಪಂದ್ಯಾಟದಲ್ಲಿ ಗ್ರೀನ್ ವ್ಯಾಲಿ ಪದವಿ ಪೂರ್ವ ಕಾಲೇಜಿನ ತಂಡ ಜಯಶಾಲಿಯಾಗಿದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಗುರುಕುಲ…
ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ತಾಲೂಕು ಹವ್ಯಕಸಭಾದ ೧೬ನೆ ವಾರ್ಷಿಕೋತ್ಸವವು ರವಿವಾರ ಉಪ್ಪುಂದದ ರಾಘವೇಂದ್ರ ಮಠದ ಆವರಣದಲ್ಲಿ ನಡೆಯಿತು. ಸಭಾದ ಅಧ್ಯಕ್ಷ ಎಂ. ನಾಗರಾಜ ಭಟ್ ಅಧ್ಯಕ್ಷತೆ ವಹಿಸಿ, ಅತಿಥಿಗಳನ್ನು ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿದ್ದ ಕರ್ನಾಟಕ ಬ್ಯಾಂಕ್ ಮಹಾ ಪ್ರಬಂಧಕ ಯು. ಸುಭಾಶ್ಚಂದ್ರ ಪುರಾಣಿಕ್ ಮಾತನಾಡಿ ಸಮುದಾಯ ಸಂಘಟನೆಯ ಗಾತ್ರಕ್ಕಿಂತ ಅದು ನಡೆಸುವ ಚಟುವಟಿಕೆ ಹೆಚ್ಚು ಪ್ರಸ್ತುತವೆನಿಸುತ್ತದೆ. ಅದು ಸಭೆ, ಸಮಾರಂಭಗಳಿಗೆ ಸಮಯ, ಹಣ ವಿನಿಯೋಗಿಸುವ ಬದಲು ಧಾರ್ಮಿಕ ಕಾರ್ಯಕ್ರಮಗಳಿಗೆ ಒತ್ತು ನೀಡಬೇಕು. ಸದಸ್ಯರಲ್ಲಿ ಸಂಸ್ಕೃತಿ ಮತ್ತು ಧರ್ಮ ಜಾಗೃತಿಗೆ ಕ್ರಮ ಕೈಗೊಳ್ಳಬೇಕು. ಯುವಜನರು ಧನಾತ್ಮಕ ಮನೋಧರ್ಮ ಹೊಂದುವಂತೆ, ಕ್ರಿಯಾಶೀಲರಾಗುವಂತೆ ಅವರಿಗೆ ಪ್ರೇರಣೆ, ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು. ಇನ್ನೋರ್ವ ಮುಖ್ಯ ಅತಿಥಿ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಪ್ರಾಧ್ಯಾಪಕ ಜಿ. ಎಸ್. ಹೆಗಡೆ ಅವರು ಶುಭ ಹಾರೈಸಿದರು. ಸುಭಾಶ್ಚಂದ್ರ ಪುರಾಣಿಕ್ ಮತ್ತು ಮರವಂತೆ ದುರ್ಗಾಯಕ್ಷೇಶ್ವರಿ ದೇವಸ್ಥಾನದ ಆಡಳಿತ ಧರ್ಮದರ್ಶಿ ಎಂ. ಜಗದೀಶ ಅವಭೃತ್ ಅವರನ್ನು ಸನ್ಮಾನಿಸಲಾಯಿತು. ಕಳೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಅಂಜುಮಾನ್ ಶಬಾಬುಲ್ ಇಸ್ಲಾಂ ವೆಲ್ಫೇರ್ ಟ್ರಸ್ಟ್ ವತಿಯಿಂದ ಉಚಿತ ರಕ್ತ ತಪಾಸಣಾ ಶಿಬಿರ ನಡೆಯಿತು. ಸಂಸ್ಥೆಯ ಸ್ಥಾಪಕ ಹಾಗೂ ಅಧ್ಯಕ್ಷ ಸಯ್ಯದ್ ಅಲಿ ಕೋಯಾ ಶಿಬಿರ ಉದ್ಘಾಟಿಸಿ ಮಾತನಾಡಿ, ಸಂಸ್ಥೆಯು ಕಳೆದ ೨೫ ವರ್ಷಗಳಿಂದ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ನಿರಂತರವಾಗಿ ಒಂದಿಲ್ಲೊಂದು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬರುತ್ತಿದೆ. ಇದೇ ಮೊದಲ ಬಾರಿಗೆ ಉಚಿತ ರಕ್ತ ತಪಾಸಣಾ ಶಿಬಿರವನ್ನು ಆಯೋಜಿಸಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಸ್ವಾತಂತ್ರ್ಯ ತಂದುಕೊಡಲು ಹೋರಾಡಿದ ಮಹನೀಯರನ್ನು ಸ್ಮರಿಸಿದರು. ಸಭೆಯಲ್ಲಿ ಜಾಮೀಯಾ ಮಸೀದಿ ಇಮಾಮ್ ಫೈಝುಲ್ ಬಾರಿ, ಮೌಲಾನ ತಯ್ಯಬ್ ನೂರಿ, ಹಾಗೂ ಟ್ರಸ್ಟಿಗಳಾದ ಶೇಖ್ ಜಾಫರ್ ಸಾದಿಕ್, ಎಸ್. ಅಬ್ದುಲ್ ಖಾದರ್, ಮಹಮ್ಮದ್ ಸುಲ್ತಾನ್, ಹಾಗೂ ಶೇಖ್ ಫೈಸಲ್ ಹಾಜರಿದ್ದರು. ಶಿಬಿರದಲ್ಲಿ ಟ್ರಸ್ಟಿನ ಸರ್ವ ಸದಸ್ಯರು ಹಾಜರಿದ್ದು ಸುಮಾರು ೭೩ ಮಂದಿ ಸ್ತ್ರೀ, ಪುರುಷರು ಶಿಬಿರದ ಪ್ರಯೋಜನ ಪಡೆದುಕೊಂಡರು.
