Author: ನ್ಯೂಸ್ ಬ್ಯೂರೋ

ಜಿ. ಸುರೇಶ್ ಪೇತ್ರಿ | ಕುಂದಾಪ್ರ ಡಾಟ್ ಕಾಂ ಲೇಖನ. ಚಿನ್ನ, ಬೆಳ್ಳಿ, ತಾಮ್ರ, ಹಿತ್ತಾಳೆ, ಮುಂತಾದ ಲೋಹಗಳಿಂದ ಮೂರ್ತಿ, ದಾರಂದ, ದ್ವಾರ ಬಾಗಿಲು, ಪಲ್ಲಕ್ಕಿ ಮುಂತಾದವುಗಳನ್ನು ತಯಾರಿಸುವ ಮೂಲಕ ಶಿಲ್ಪಕಲಾಲೋಕಕ್ಕೆ ವಿಶೇಷ ಮೆರಗು ನೀಡಿದ ಕಲಾಶಿಲ್ಪಿ ಕೋಟ ಗಣೇಶ ಆಚಾರ್ಯ. ಒಂದು ಕಲೆ ಸಿದ್ಧಿಯಾಗಬೇಕಾದರೆ ಒಂದೋ ವಂಶಪಾರಂಪರ್ಯವಾಗಿ ಬಂದಿರಬೇಕು ಅಥವಾ ತನ್ನ ಸ್ವ ಪ್ರಯತ್ನದಿಂದಾಗಿ ಕಲೆಯನ್ನು ಸಿದ್ಧಿಸಿ ಮುಂದುವರಿಸಿಕೊಂಡು ಬಂದಾಗ ಆ ಕಲೆಯ ಸತ್ವವನ್ನು ಹೀರಿಕೊಳ್ಳಲು ಸಾಧ್ಯ. ಗಣೇಶ ಆಚಾರ್ಯ ರಿಗೆ ಈ ಕಲೆ ವಂಶಪಾರಂಪರ್ಯವಾಗಿ ಬಂದಿದೆ. ಉಡುಪಿ ತಾಲೂಕಿನ ಕೋಟತಟ್ಟುವಿನ ಶಂಕರ ಆಚಾರ್ಯ ಹಾಗೂ ಗಿರಿಜಾ ಆಚಾರ್ಯರ ಮೂರು ಮಕ್ಕಳಲ್ಲಿ ಎರಡನೆಯವರಾಗಿ ಜನಿಸಿದ ಗಣೇಶ ಆಚಾರ್ಯರು ತಂದೆಯ ರಕ್ತಗತವಾದ ಕಲೆಯನ್ನು ಮುಂದುವರಿಸಿಕೊಂಡು ಬಂದ ಕಲಾಕಾರ. ಕಲಾ ಕ್ಷೇತ್ರದಲ್ಲಿ ಸದ್ದಿಲ್ಲದೇ ಸುದ್ದಿ ಆಗುವವರು ಒಂದು ವರ್ಗವಾದರೆ ಇನ್ನೋಂದು ಸದ್ದು ಮಾಡಿ ಸುದ್ದಿ ಆಗುವವರು ಇನ್ನೊಂದು ವರ್ಗ. ಅದರಲ್ಲಿ ಗಣೇಶ ಆಚಾರ್ಯರು ಸದ್ದಿಲ್ಲದ ಸುದ್ದಿ ಆದವರ ಸಾಲಿನಲ್ಲಿ ಸೇರುತ್ತಾರೆ. ಅರ್ಥಾತ್ ಪ್ರಚಾರಕ್ಕೆ ಕಟ್ಟುಬೀಳದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಇಲ್ಲಿನ ಬಸ್ಸು ನಿಲ್ದಾಣ ಸಮೀಪ ವ್ಯಕ್ತಿಯೋರ್ವ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಬಂದ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ವರದಿಯಾಗಿದೆ. ಮೃತರನ್ನು ಗೋಪಾಲ ಮೊಗವೀರ ಹಳವಳ್ಳಿ ಎಂದು ಗುರುತಿಸಲಾಗಿದೆ. ಕೋಟೇಶ್ವರದಲ್ಲಿ ತನ್ನ ಕ್ಯಾಂಟಿನ್ ಕೆಲಸ ಮುಗಿಸಿಕೊಂಡು ಕೋಟದಲ್ಲಿರುವ ಹೆಂಡತಿ ಮನೆಗೆ ತೆರಳುತ್ತಿದ್ದ ಗೋಪಾಲ, ರಸ್ತೆ ದಾಟುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಡಿಕ್ಕಿ ಹೊಡೆದ ಕಾರು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದು, ಹಿಂದೂ ಸಂಘಟನೆಯ ಮುಖಂಡ ಅರವಿಂದ ಕೋಟೇಶ್ವರ ಕಾರನ್ನು ಹಿಂಬಾಲಿಸಿ ಕೋಟೇಶ್ವರ ಪೆಟ್ರೋಲ್ ಬಂಕ್ ಬಳಿ ಅಡ್ಡಗಟ್ಟಿದ್ದಾರೆ. ಮೃತ ಗೋಪಾಲ ಮೊಗವೀರ ಪತ್ನಿ, ತಂದೆ ತಾಯಿ ಅಗಲಿದ್ದಾರೆ.

Read More

ಕುಂದಾಪುರದಲ್ಲಿ ತಿರಂಗ ಯಾತ್ರೆ ಬೈಕ್ ರ‍್ಯಾಲಿ ಸಮಾರೋಪ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಶದ ಅಖಂಡತೆಗೆ ಧಕ್ಕೆ ತರುವ ಯಾವ ಕೆಲಸವನ್ನು ಸಹಿಸಲಾಗದು. ರಾಷ್ಟ್ರ ಉಳಿದರೆ ಮಾತ್ರ ನಾವು, ನೀವು ಸಂಸ್ಕೃತಿ ಉಳಿವು ಸಾಧ್ಯವಿದೆ. ದೇಶದಲ್ಲಿದ್ದುಕೊಂಡೇ ದೇಶವಿರೋಧಿ ಘೋಷಣೆಗಳನ್ನು ಕೂಗುವವರನ್ನು ಹಾಗೂ ರಾಷ್ಟ್ರವಿರೋಧ ಕೃತ್ಯದಲ್ಲಿ ಭಾಗಿಯಾಗುವವರಿಗೆ ಬೆಂಬಲ ನೀಡುವುದನ್ನು ಖಂಡಿಸಬೇಕಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಕುಂದಾಪುರ ಬಿಜೆಪಿ ಆಶ್ರಯದಲ್ಲಿ ಕುಂದಾಪುರ ಶಾಸ್ತ್ರಿ ವೃತ್ತದ ಬಳಿ ನಡೆದ ತಿರಂಗ ಯಾತ್ರೆ ಬೈಕ್ ರ‍್ಯಾಲಿ ಸಮಾರೋಪದಲ್ಲಿ ಅವರು ಮಾತನಾಡಿ, ದೇಶ ಕಾಯುವ ವೀರ ಯೋಧರ ಹಾಗೂ ದೇಶದ ವಿರುದ್ಧವೇ ಘೋಷಣೆ ಕೂಗುವುದನ್ನು ಎಂದಿಗೂ ಸಹಿಸಲಾಗದು. ಬೆಂಗಳೂರಿನಲ್ಲಿ ದೇಶದ ವಿರುದ್ಧ ಘೋಷಣೆ ಕೂಗಿದವರ ತಕ್ಷಣ ಬಂಧಿಸಬೇಕು ಎಂದು ಅವರು ಆಗ್ರಹಿಸಿದರು. ದೇಶದಲ್ಲಿ ಭಯೋತ್ಪಾದನೆ, ನಕ್ಸಲ್ ವಾದ, ಮಾಪಿಯಾ ಅಫಿಮು, ಸಂಸ್ಕೃತಿ ಹೆಚ್ಚುತ್ತಿದ್ದು, ಅದರ ವಿರುದ್ಧ ಯುವ ಜನಾಂಗ ಜಾಗೃತಿ ಮೂಡಿಸಬೇಕು. ಅಖಂಡ ಭಾರತ ಹಿರಿಯರ ಕನಸಾಗಿದ್ದು, ಅದನ್ನು ಸಾಕಾರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರ ಕಲ್ಪನೆಯ ಜನಪ್ರಿಯ ಯೋಜನೆಯಾದ ಮದ್ಯವರ್ಜನ ಶಿಬಿರದಿಂದ ಸಮಾಜದ ಹಲವು ಮದ್ಯ ವ್ಯಸನಿಗಳನ್ನು ಪಾನಮುಕ್ತಗೊಳಿಸಿ ಅವರಿಗೆ ನವಜೀವನ ನಿರ್ಮಾಣಮಾಡಿದೆ ಎಂದು 929ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ನಾಗೂರು ಶಾಂತೇರಿ ಕಾಮಾಕ್ಷಿ ಸಭಾಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ-ಕುಂದಾಪುರ ಹಾಗೂ ವಿವಿಧ ಸಹಕಾರಿ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ 929ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಶಿಬಿರದ ಯಶಸ್ಸಿಗೆ ಆರ್ಥಿಕವಾಗಿ ಸಹಕರಿಸಿದ ಪರಿಸರದ ಸಹಕಾರಿ ಸಂಘಗಳಿಗೆ, ಅರ್ಪಣಾ ಭಾವದಿಂದ ಶ್ರಮವಹಿಸಿ ನಿಸ್ವಾರ್ಥದಿಂದ ದುಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಬಸ್ರೂರು ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭ ಜನಜಾಗೃತಿ ವೇದಿಕೆ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಮತ್ತು ಯೋಗಗುರು ಸುಬ್ಬಯ್ಯ ದೇವಾಡಿಗ ಇವರನ್ನು ಸನ್ಮಾನಿಸಲಾಯಿತು. ಜಿಪಂ ಸದಸ್ಯೆ ಗೌರಿ ದೇವಾಡಿಗ, ತಾಪಂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಒಳ್ಳೆಯ ವಿಚಾರಗಳು ಎಲ್ಲ ಕಡೆಯಿಂದಲೂ ಬರುತ್ತಿರಲಿ ಎಂಬುದು ವೇದಗಳ ಆಶಯ. ಅದು ಎಲ್ಲ ಕಾಲಕ್ಕೂ, ಎಲ್ಲರಿಗೂ ಶ್ರೇಯಸ್ಸನ್ನು ಕರುಣಿಸುವ ದಾರಿ. ಒಮ್ಮುಖ ವಿಚಾರಧಾರೆಗಿಂತ ದ್ವಿಮುಖ, ಬಹುಮುಖೀ ವಿಚಾರ ವಿನಿಮಯಕ್ಕೆ ಅವಕಾಶ ಕಲ್ಪಿಸುವ ವೇದಿಕೆ ಇಂದು ಅವಶ್ಯವಾಗಿದೆ. ದೇಶ, ಕಾಲ, ಪರಿಸ್ಥಿಗಳಿಗೆ ಹೊಂದಿಕೆಯಾಗುವ ಚಿಂತಕರ ಚಾವಡಿ ಕೇವಲ ಬೌದ್ಧಿಕವಾಗಿಲ್ಲದೆ ಭಾವನಾತ್ಮಕ ಸಂಬಂಧಗಳ ಹಿತಮಿತವಾಗಿ ಹೊಂದುವ ಆಶಯದ ಕುಂದ ಅಧ್ಯಯನ ಕೇಂದ್ರದ ಸುವಿಚಾರ ಬಳಗದ ಕಲ್ಪನೆಯೇ ಆಶಾದಾಯಕವೂ ಚೇತೋಹಾರಿಯೂ ಆಗಿದೆ ಎಂದು ಬೆಂಗಳೂರು ಭಾರತೀಯ ವಿದ್ಯಾಭವನದ ಮಾಧ್ಯಮ ಭಾರತೀಯ ನಿರ್ದೇಶಕ ಎಂ. ಜಯರಾಮ ಅಡಿಗ ನುಡಿದರು. ಉಪ್ಪುಂದ ಶಂಕರ ಕಲಾ ಮಂದಿರದಲ್ಲಿ ಕುಂದ ಅಧ್ಯಯನ ಕೇಂದ್ರದ ಸುವಿಚಾರ ಬಳಗದ ಕಾರ್ಯಚಟುವಟಿಕೆಗಳನ್ನು ದೀಪ ಬೆಳಗಿಸಿ ಉದ್ಘಾಟಿಸುತ್ತಾ ನುಡಿದರು. ನಿವೃತ್ತ ಉಪನ್ಯಾಸಕ, ವಿಪ್ರನುಡಿ ಸಂಪಾದಕ ವಿದ್ವಾನ್ ಭಾಸ್ಕರ ಉಡುಪ ವರ್ಷದ ವಿವಿಧ ಮಾಸಗಳಲ್ಲಿ ಆಚರಿಸಬಹುದಾದ ವಿವಿಧ ವೃತಾಚರಣೆಗಳು, ಅವುಗಳ ಹಿನ್ನಲೆ, ಉದ್ದೇಶ ಮತ್ತು ವಿಧಿ ನಿಯಮಗಳ ಕುರಿತು ಉಪನ್ಯಾಸ ನೀಡುತ್ತಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಹೆಚ್ಚಿನ ಯುವಶಕ್ತಿ ಭಾರತ ದೇಶದಲ್ಲಿದೆ. ಆದರೆ ಈ ಶಕ್ತಿಯು ದೇಶದ ಭದ್ರತೆಗೆ ವಿನಿಯೋಗಿಸಲು ಸಿಗುತ್ತಿಲ್ಲ. ಯುವಕರು ಭ್ರಮೆಯ ಗುಂಗಿನಲ್ಲಿ ತೇಲಾಡುತ್ತಿದ್ದಾರೆ. ದೇಶದ ಮುಂದೆ ದೊಡ್ಡ ಸವಾಲುಗಳೇ ಇದ್ದು, ಮುಂದಿನ ದಿನಗಳು ಮತ್ತಷ್ಟು ಕಷ್ಟಕರವಾಗಿದೆ. ಹೀಗಾಗಿ ರಾಷ್ಟ್ರದ ಏಳಿಗೆಗೆ ಒಳಿತಿಗಾಗಿ ನಮ್ಮನ್ನು ಅರ್ಪಿಸಿಕೊಳ್ಳಬೇಕಾಗಿದೆ ಎಂದು ಉಡುಪಿ ಸಂಸ್ಕಾರ ಭಾರತಿಯ ಸಂಚಾಲಕ ವಾಸುದೇವ ಭಟ್ ಹೇಳಿದರು. ಅವರು ಗಂಗೊಳ್ಳಿಯ ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಜರಗಿದ ಅಖಂಡ ಭಾರತ ಸಂಕಲ್ಪ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸೌಹಾರ್ದತೆ ಮತ್ತು ಸಹಬಾಳ್ವೆಯ ಪ್ರತಿಯೊಬ್ಬ ಭಾರತೀಯನ ಕಣಕಣದಲ್ಲಿ ಇದೆ. ರಾಷ್ಟ್ರ ಧರ್ಮವನ್ನು ಮೀರಿದ ಮತ್ತೊಬ್ಬ ಧರ್ಮವು ದೇಶದ ಬೆಳವಣಿಗೆಗೆ ಅಡ್ಡಗಾಲು ಹಾಕುತ್ತಿದೆ. ಇದರ ಕರಾಳ ಮುಖಗಳು ದೇಶ ಕಟ್ಟಲು ನಮಗೆ ತೊಂದರೆಯನ್ನುಂಟು ಮಾಡುತ್ತಿದೆ. ಕೇವಲ ಕೇರಳಕ್ಕೆ ಸೀಮಿತವಾಗಿದ್ದ ಜಿಹಾದಿ ಉಗ್ರವಾದ ಇಂದು ಕರಾವಳಿಯ ಮುಕ್ಕಾಲು ಭಾಗವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಈಜು ಎನ್ನುವುದು ಯಾವುದೇ ದುಶ್ಪರಿಣಾಮ ಇಲ್ಲದ, ಎಲ್ಲರೂ ಮಾಡಬಹುದಾದ ಒಂದು ವ್ಯಾಯಾಮ. ದಿನನಿತ್ಯ ಈಜುವುದರಿಂದ ದೇಹಕ್ಕೆ ಉತ್ತಮ ವ್ಯಾಯಾಮ ದೊರೆಯುದರೊಂದಿಗೆ ಆರೋಗ್ಯವನ್ನು ಸುಸ್ಥಿತಿಯಲ್ಲಿಡಲು ಈಜು ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಸಾಲಿಗ್ರಾಮ ಸ್ವೀಮ್ಮಿಂಗ್ ಕ್ಲಬ್ ಆಯೋಜಿಸಿದ ಈ ಈಜುಸ್ಪರ್ಧೆ ಈಜುಪಡುಗಳಿಗೆ ಪ್ರೋತ್ಸಾಹ ನೀಡುವಂತಹುದು ಎಂದು ಯುವಜನ ಸೇವೆ, ಕ್ರೀಡೆ, ಮೀನುಗಾರಿಕಾ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ಸಾಲಿಗ್ರಾಮ ಶ್ರೀಗುರುನರಸಿಂಹ ದೇವಸ್ಥಾನದ ಪುಷ್ಕರಣಿಯಲ್ಲಿ ಸಾಲಿಗ್ರಾಮ ಸ್ವಿಮ್ಮಿಂಗ್ ಕ್ಲಬ್, ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ, ಮಹಾಲಸಾ ಎಂಟರ್‌ಪ್ರೈಸಸ್ ಮತ್ತು ಏಕದಂತ ಎಂಟರ್‌ಪ್ರೈಸಸ್ ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿ ದೆಸೆಯಲ್ಲಿರುವ ಇಂದಿನ ಮಕ್ಕಳಿಗೆ ಮನೆಯಲ್ಲಿ ಮತ್ತು ಶಾಲೆಯಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಮಕ್ಕಳಲ್ಲಿರುವ ಕ್ರೀಡಾ ಪ್ರತಿಭೆ ಮರೆಯಾಗುತ್ತಿದೆ. ಆದ್ದರಿಂದ ಹೆತ್ತವರು ಮಕ್ಕಳ ಅಭಿರುಚಿಯನ್ನು ಗಮನಿಸಿ ಅವರ ಭವಿಷ್ಯಕ್ಕೆ ಸಹಕಾರ ನೀಡಬೇಕು ಎಂದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ, ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಹಟ್ಟಿಯಂಗಡಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಘಟಕದ ಆಶ್ರಯದಲ್ಲಿ ಹಟ್ಟಿಯಂಗಡಿ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯಲ್ಲಿ ರಕ್ತ ವರ್ಗೀಕರಣ ಶಿಬಿರ ನಡೆಯಿತು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಘಟಕದ ಛೇರ್‌ಮೆನ್ ಜಯಕರ ಶೆಟ್ಟಿ ಶಿಬಿರ ಉದ್ಘಾಟಿಸಿದರು. ಹಟ್ಟಿಯಂಗಡಿ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ರೆಡ್‌ಕ್ರಾಸ್ ಸಂಸ್ಥೆಯ ಶಿವರಾಮ ಶೆಟ್ಟಿ, ಸೀತಾರಾಮ ಶೆಟ್ಟಿ, ರೋಟರಿ ಕ್ಲಬ್ ಕುಂದಾಪುರದ ನಿಕಟಪೂರ್ವಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು, ಸದಸ್ಯರಾದ ಎಚ್. ಎಸ್. ಹತ್ವಾರ್, ಪ್ರವೀಣ್‌ಕುಮಾರ್ ಟಿ ಉಪಸ್ಥಿತರಿದ್ದರು. ಸುಮಾರು 1ಸಾವಿರ ವಿದ್ಯಾರ್ಥಿಗಳು ಶಿಬಿರದ ಪ್ರಯೋಜನ ಪಡೆದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕನ್ನಡದಲ್ಲಿ ಜನಪ್ರಿಯವಾಗಿ ಮನ್ನಣೆ ಪಡೆದ ಭಾವಗೀತೆಗಳನ್ನು ಬಿಟ್ಟು, ವಿಶೇಷವಾಗಿ ಕೆ.ವಿ. ತಿರುಮಲೇಶ, ಬೇಂದ್ರೆಯವರ ಅತ್ಯಂತ ಅರ್ಥ ಸಾಧ್ಯತೆ ಹೊಮ್ಮಿಸುವ ಹಾಡುಗಳನ್ನು ಆಯ್ಕೆ ಮಾಡಿ ಭಿನ್ನ ರೀತಿಯಲ್ಲಿ ಸೃಜನಶೀಲ ಚಿಂತಕ, ಲೇಖಕ ಶ್ರೀ ಗುರುರಾಜ ಮಾರ್ಪಳ್ಳಿ ಹಾಡಿದರು. ಅವರ ಜೊತೆ ಸಹ ಕಲಾವಿದರಾದ ಶ್ರೀ ಗಣೇಶ್ ರಾವ್ ಎಲ್ಲೂರು, ವಿದ್ಯಾರ್ಥಿ ಚಿನ್ಮಯಿ ಸಹಕರಿಸಿದರು. ಅವರು ಕಾಲೇಜಿನ ನೂತನ ಸಭಾಂಗಣದಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಆಶ್ರಯದಲ್ಲಿ ನಡೆದ ಭಾವಗಾನ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಹಾಡಿದರು. ವೇದಿಕೆಯ ಸಂಯೋಜಕ ಮತ್ತು ಪ್ರಭಾರ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರು ಮತ್ತು ಪ್ರಭಾರ ಪ್ರಾಂಶುಪಾಲರಾದ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು. ಸಹಸಂಯೋಜಕಿ ರೇಷ್ಮಾ ಶೆಟ್ಟಿ ಸ್ವಾಗತಿಸಿದರು. ಶ್ರೀಕರ ಅತಿಥಿಗಳನ್ನು ಪರಿಚಯಿಸಿದರು, ರಕ್ಷಾ ವಂದಿಸಿದರು, ಲೋಕೇಶ್ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಸಾಲಿಗ್ರಾಮ ಶ್ರೀಗುರುನರಸಿಂಹ ದೇವಸ್ಥಾನಕ್ಕೆ ಯುವಜನ ಸೇವೆ, ಕ್ರೀಡೆ, ಮೀನುಗಾರಿಕೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರು ಪ್ರಥಮ ಬಾರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಅನಂತ ಪದ್ಮನಾಭ ಐತಾಳ್ ಆದರದಿಂದ ಸ್ವಾಗತಿಸಿದರು. ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಜನಾರ್ದನ ಅಡಿಗ ದೇವರಿಗೆ ವಿಶೇಷ ಪೂಜೆ ನಡೆಸಿ ಸಚಿವರಿಗೆ ಪ್ರಸಾದ ವಿತರಿಸಿ ಆಶೀರ್ವದಿಸಿದರು. ಬಳಿಕ ದೇವಸ್ತಾನದ ವತಿಯಿಂದ ಸಚಿವರನ್ನು ಶಾಲು ಹೊದಿಸಿ ಸನ್ಮಾನಿ ಗೌರವಸಲಾಯಿತು. ಈ ಸಂದರ್ಭ ಕೋಟ ಶ್ರೀ ಅಮೃತೇಶ್ವರೀ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಆನಂದ ಸಿ ಕುಂದರ್, ಉಡುಪಿ ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ, ಸಾಲಿಗ್ರಾಮ ಸ್ವಿಮ್ಮಿಂಗ್ ಕ್ಲಬ್ ಅಧ್ಯಕ್ಷ ಅನಂತ ಶ್ಯಾನುಭೋಗ್, ದೇವಸ್ಥಾನ ಪಿ.ಸಿ.ಹೊಳ್ಳ, ಶ್ರೀಪತಿ ಅಧಿಕಾರಿ, ತಾರಾನಾಥ ಹೊಳ್ಳ, ಚಂದ್ರಶೇಖರ ಅಡಿಗ, ರೋಟರಿ ಅಧ್ಯಕ್ಷ…

Read More