ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯವೂ, ಟೆಂಡರ್ ಪಡೆದ ಕಂಪೆನಿಗಳ ಮಾಹಿತಿ ಕೊರತೆಯೋ ಆದರೆ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಕೋಟೇಶ್ವರ, ಕುಂಭಾಶಿಯ ಪಶುಚಿಕಿತ್ಸಾ ಕೇಂದ್ರದ ಎದುರು, ತೆಕ್ಕಟ್ಟೆ, ಕೋಟ ಮುಂದಾದೆಡೆ ಕೂಡು ರಸ್ತೆಗಳಿರುವಲ್ಲಿ ಅಳವಡಿಸಿರುವ ನಾಮಫಲಕಗಳು ಪ್ರಯಾಣಿಕರ ಗೊಂದಲ ಹುಟ್ಟಿಸುತ್ತವೆ. ಸುರತ್ಕಲ್ನಿಂದ ಕುಂದಾಪುರದ ತನಕ ರಾಷ್ಟ್ರೀಯ ಹೆದ್ದಾರಿ-66ರ ಚಥುಷ್ಪತ ಕಾಮಗಾರಿಯನ್ನು ನವಯುಗ ಕಂಪೆನಿ ವಹಿಸಿಕೊಂಡಿದ್ದು ಕಳೆದ ನಾಲ್ಕು ವರ್ಷಗಳಿಂದ ಮಂದಗತಿಯಲ್ಲಿ ಸಾಗುತ್ತಿದೆ. ಅಂಡರ್ ಪಾಸ್, ಡಿವೈಡರ್, ಟರ್ನಿಂಗ್ ಪಾಯಿಂಟ್ಗಳನ್ನು ಜನಸಂದಣಿಯಗೆ ಅನುಗುಣವಾಗಿ ನೀಡದೇ ತಮ್ಮದೇ ಲೆಕ್ಕಾಚಾರದಲ್ಲಿ ಹೆದ್ದಾರಿ ಪ್ರಾಧಿಕಾರವು ಕಾಮಗಾರಿಯನ್ನು ನಡೆಸುತ್ತಿರುವುದು ಒಂದೆಡೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದರೇ, ಅಲ್ಲಲ್ಲಿ ಹಾಕಿರುವ ನಾಮಫಲಕಗಳು ಗೊಂದಲ ಹುಟ್ಟುಹಾಕಿದೆ. ವಿಷ್ಯ ಏನಪ್ಪಾ ಅಂದ್ರೆ, ನವಯುಗ ಕಂಪೆನಿಯವರಿಗೆ ಸುರತ್ಕಲ್ ನಿಂದ ಕುಂದಾಪುರದವರೆಗೆ ಟೆಂಡರ್ ನೀಡಲಾಗಿದೆ. ಹಾಗಾಗಿ ಕುಂದಾಪುರದಿಂದ ಮಂಗಳೂರು ತೆರಳುವವರಿಗೆ ಕೋಟೇಶ್ವರ, ಕುಂಭಾಶಿ, ತೆಕ್ಕಟ್ಟೆ ಹೀಗೆ ಸುರತ್ಕಲ್ ತನವೂ ಕೂಡರಸ್ತೆಗಳಿರುವಲ್ಲಿಯೂ ಮಾರ್ಗಸೂಚಿ ಹಾಕಲಾಗಿದೆ. (ಕುಂಭಾಶಿಯ ಪಶು ಆಸ್ಪತ್ರೆಯ ಎದುರು ಬೋರ್ಡ್ ಹಾಕಲಾಗಿದೆ.) ಆ ಮಾರ್ಗಸೂಚಿಗಳಲ್ಲಿ ಎತ್ತ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಲಾವಿದರನ್ನು ಸೃಷ್ಠಿಸುವುದೆಂದರೇ ಉತ್ತಮ ಸಮಾಜವನ್ನು ಸೃಷ್ಠಿಸಿದಂತೆ. ಕಲೆಯ ಮೂಲಕ ಮಾತ್ರ ಸದ್ವಿಚಾರಗಳನ್ನು ಜನರಿಗೆ ತಲುಪಿಸಲು ಹಾಗೂ ಸಮಾಜವನ್ನು ಸದಾ ಜಾಗೃತ ಸ್ಥಿತಿಯಲ್ಲಿಡಲು ಸಾಧ್ಯವಿದೆ ಎಂದು ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ ಹೇಳಿದರು. ಪರಿಶಿಷ್ಟ ಪಂಗಡದ ಕಲಾವಿದರ ರಂಗತಂಡ ಸಂಚಲನ ರಿ. ಹೊಸೂರು ಆಶ್ರಯದಲ್ಲಿ, ಬೆಂಗಳೂರು ಕರ್ನಾಟಕ ನಾಟಕ ಅಕಾಡೆಮಿ ಸಹಕಾರದೊಂದಿಗೆ ಬೈಂದೂರು ರೋಟರಿ ಭವನದಲ್ಲಿ ಆಯೋಜಿಸಲಾದ ಸತ್ರೂ ಅಂದ್ರೆ ಸಾಯ್ತಾರಾ ನಾಟಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ಟಿ.ವಿ, ಸಾಮಾಜಿಕ ತಾಣಗಳ ಪ್ರಭಾವದಿಂದಾಗಿ ಯುವಕರು ಜ್ಞಾನವಂತರಾಗುತ್ತಿದ್ದಾರೆ ಆದರೆ ವಿಚಾರವನ್ನು ಅರ್ಥೈಸಿಕೊಳ್ಳುವ ಹಾಗೂ ವಾಸ್ತವವನ್ನು ವಿಮರ್ಷಿಸುವ ಸಾಮಾನ್ಯ ಪ್ರಜ್ಞೆಯನ್ನು ಮರೆಯುತ್ತಿದ್ದಾರೆ. ರಂಗಕಲೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮನುಷ್ಯ ಮನುಷ್ಯರ ನಡುವಿನ ಸಂಬಂಧ ಗಟ್ಟಿಗೊಳ್ಳಲು ಸಾಧ್ಯವಿದೆ ಎಂದರು. ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಉಮೇಶ್ ಸಾಲಿಯಾನ್ ಮಾತನಾಡಿ ಪರಿಶಿಷ್ಟ ಪಂಗಡದವರು ಎಲ್ಲರೊಂದಿಗೆ ಸಮಾನವಾಗಿ ಕೂಡಿ ಬಾಳಲು, ಸಾಂಸ್ಕೃತಿಕವಾಗಿ ಬೆಳೆಯಲು ನಾಟಕ ಅಕಾಡೆಮಿ ಹತ್ತು ಹಲವು ಯೋಜನೆಗಳನ್ನು ಹಾಕಿಕೊಂಡಿದೆ. ನಾಟಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರತಿಯೊಬ್ಬ ಪ್ರಜೆಯು ಪಾರದರ್ಶಕವಾಗಿ ಆದಾಯ ಘೋಷಣೆ ಮಾಡಿದಲ್ಲಿ ದೇಶದ ಆರ್ಥಿಕ ಸ್ಥಿತಿ ಸಮತೋಲನ ಸಾಧಿಸುವುದರಲ್ಲಿ ಸಂಶಯವಿಲ್ಲ ಆದುದರಿಂದ ಆದಾಯ ಘೋಷಣೆ 2016ರ ಕಾಯಿದೆಯನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಆದಾಯ ತೆರಿಗೆ ಕಮಿಷನರ್ ಸಿದ್ದಪ್ಪಾಜಿ ಹೇಳಿದರು. ಅವರು ರೋಟರಿ ಕ್ಲಬ್ ಕುಂದಾಪುರ ಸನ್ರೈಸ್, ಅಸೋಸಿಯೇಟ್ ಆಫ್ ಕನ್ಸೆಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಆಂಡ್ ಆರ್ಕಿಟೆಕ್ಟ್ ಕುಂದಾಪುರ, ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಮತ್ತು ಆಡಿಷನಲ್ ಕಮಿಷನರ್ ಆಫ್ ಇನ್ಕಮ್ ಟ್ಯಾಕ್ಸ್ ಆಫೀಸ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಆದಾಯ ಘೋಷಣೆ ೨೦೧೬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ರೋಟರಿ ಕ್ಲಬ್ ಕುಂದಾಪುರ ಸನ್ರೈಸ್ ಅಧ್ಯಕ್ಷರಾದ ಕೆ. ನರಸಿಂಹ ಹೊಳ್ಳ ಸ್ವಾಗತಿಸಿದರು. ರೋಟರಿ ಸನ್ರೈಸ್ ಸ್ಥಾಪಕಾಧ್ಯಕ್ಷರಾದ ದಿನಕರ ಆರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇಂಜಿನಿಯರ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ವಿಠಲ ಆಚಾರ್ಯ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ರೋಟರಿ ದಕ್ಷಿಣದ ಅಧ್ಯಕ್ಷರಾದ ಒಜೊಲಿನ್ ರೆಬೆಲ್ಲೊ ಉಪಸ್ಥಿತರಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಪತ್ರಿಕೋದ್ಯಮ ಎಂಬುದು ಜ್ಞಾನದ ಕ್ಷೇತ್ರ. ಜ್ಞಾನವನ್ನು ಗಳಿಸುವುದು ಹಾಗೂ ಅದನ್ನು ಶ್ರೀಸಾಮಾನ್ಯನಿಗೆ ತಲುಪಿಸುವುದು ಪರ್ತಕರ್ತನ ಕೆಲಸ. ಆದರೆ ಜ್ಞಾನ ಪ್ರಸರಣದ ಸಮಯದಲ್ಲಿಯೇ ಸಮಾಜದ ನೋವಿಗೆ ಸ್ಪಂದಿಸುವುದು ಹಾಗೂ ಸಾಮಾಜಿಕ ಕಳಕಳಿಯನ್ನು ತೋರಿಸುವುದು ಅತೀ ಮುಖ್ಯ ಎಂದು ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಯ ಮಂಗಳೂರು ವಿಭಾಗದ ಮುಖ್ಯಸ್ಥ ಎಂ. ರಘುರಾಮ್ ಹೇಳಿದರು. ಆಳ್ವಾಸ್ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಪತ್ರಕರ್ತರಾದವರಿಗೆ ಸೂಕ್ಷ್ಮ ಒಳನೋಟಗಳಿರಬೇಕು. ತನ್ನ ಸುತ್ತಮುತ್ತ ಏನಾಗುತ್ತಿದೆ ಎಂಬ ಅರಿವಿನ ಜೊತೆಗೆ ಪರೀಕ್ಷಕ ಬುದ್ಧಿಯಿರಬೇಕು. ಆಗ ಮಾತ್ರ ವ್ಯವಸ್ಥೆಯಲ್ಲಡಗಿರುವ ಲೋಪಗಳನ್ನು ಪತ್ತೆ ಹಚ್ಚಲು, ಅವುಗಳಿಗೆ ಒಂದು ತಾರ್ಕಿಕ ಅಂತ್ಯ ನೀಡಲು ಸಾಧ್ಯ. ಪತ್ರಿಕೋದ್ಯಮ ವಿದ್ಯಾರ್ಥಿಗಳು ತಮ್ಮ ಬರವಣಿಗೆಯ ಶೈಲಿಯನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ‘ಸಂಪಾದಕರಿಗೆ ಪತ್ರ’ ಅಂಕಣ ವಿದ್ಯಾರ್ಥಿಗಳಿಗಿರುವ ಅತೀ ದೊಡ್ಡ ವೇದಿಕೆ. ಗಮನಾರ್ಹ ವಿಷಯಗಳ ಬಗ್ಗೆ ಪತ್ರಗಳನ್ನು ಬರೆಯುವದರಿಂದ ಸಾಮಾಜಿಕ ಕ್ರಾಂತಿಗೆ ವಿದ್ಯಾರ್ಥಿಗಳು ಮುಂದಾಗಬಹುದು ಎಂದರು. ನಂತರ ಸಂವಾದ ನಡೆಸಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಸನ್ರೈಸ್ ಆಶ್ರಯದಲ್ಲಿ ಕುಂದಾಪುರದ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂಟರ್ಯಾಕ್ಟ್ ಕ್ಲಬ್ ಪದಪ್ರದಾನ ಸಮಾರಂಭ ಜರುಗಿತು. ರೋಟರಿ ಸನ್ರೈಸ್ ಅಧ್ಯಕ್ಷ ಕೆ. ನರಸಿಂಹ ಹೊಳ್ಳ ಅವರು ಇಂಟರ್ಯಾಕ್ಟ್ ಕ್ಲಬ್ನ ಅಧ್ಯಕ್ಷೆ ಶ್ರೇಯಾ ಎಸ್. ಪೂಜಾರಿ, ಕಾರ್ಯದರ್ಶಿ ಆಶೀಷ್ ಚಂದ್ರನ್, ಖಜಾಂಚಿ ಧನ್ವಿ ಎಸ್. ಜೋಗಿ ಅವರಿಗೆ ಪದಪ್ರದಾನ ನೆರವೇರಿಸಿದರು. ಅತಿ ವಂದನೀಯ ಫಾದರ್ ಅನಿಲ್ ಡಿ,ಸೋಜಾ ಅವರು ಅಧ್ಯಕ್ಷತೆವಹಿಸಿದ್ದರು. ಇಂಟರ್ಯಾಕ್ಟ್ ಕ್ಲಬ್ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ರೋಟರಿ ಸನ್ರೈಸ್ ಸದಸ್ಯ ಉಲ್ಲಾಸ್ ಕ್ರಾಸ್ತಾ ಕೊಡಮಾಡಿದ ೫ಸಾವಿರ ರೂ.ಗಳನ್ನು ಹಸ್ತಾಂತರಿಸಲಾಯಿತು. ರೋಟರಿ ಜೋನಲ್ ಲೆಫ್ಟಿನೆಂಟ್ ಅಬುಶೇಖ್ ಸಾಹೇಬ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇಂಟರ್ಯಾಕ್ಟ್ ಕ್ಲಬ್ ಛೇರ್ಮೆನ್ ಜಗದೀಶ್ ಚಂದ್ರನ್, ಶಾಲೆಯ ಇಂಟರ್ಯಾಕ್ಟ್ ಕೋ ಆರ್ಡಿನೆಟರ್ ಲೂಯಿಸ್ ಪ್ರಶಾಂತ ರೆಬೆರೋ, ಸಿಸ್ಟರ್ ಜೋಯ್ಸ್ಲಿನ್ ಎ.ಸಿ, ರೋಟರಿ ಸನ್ರೈಸ್ ಸದಸ್ಯರಾದ ಸದಾನಂದ ಉಡುಪ, ಡುಂಡಿರಾಜ್, ದಿನೇಶ್ ಗೋಡೆ, ಕಲ್ಪನಾ ಭಾಸ್ಕರ್, ಉಲ್ಲಾಸ್ ಕ್ರಾಸ್ತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್ನಿಂದ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಕೇವಲ ಮಾತಿನಲ್ಲೇ ಕಾಲಹರಣ ಮಾಡಲಾಗುತ್ತಿದೆ. ಸದಸ್ಯರ ನಡುವಿನ ಕಚ್ಚಾಟದಿಂದ ಅಭಿವೃದ್ಧಿ ಕಾರ್ಯ ಸ್ಥಗಿತಗೊಂಡಿದೆ. ತಮ್ಮ ಕೆಲಸಕಾರ್ಯಗಳಿಗೆ ಜನರು ಪಂಚಾಯತ್ಗೆ ಅಲೆದು ಅಲೆದು ಸುಸ್ತಾಗಿದ್ದಾರೆ. ಗಂಗೊಳ್ಳಿ ಗ್ರಾಮ ಪಂಚಾಯತ್ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಎಂದು ಗ್ರಾಮಸ್ಥರು ಗ್ರಾಮ ಪಂಚಾಯತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಜರಗಿದ ಗಂಗೊಳ್ಳಿ ಗ್ರಾಮ ಪಂಚಾಯತ್ನ ೨೦೧೬-೧೭ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯಲ್ಲಿ ಪಂಚಾಯತ್ ಆಡಳಿತದ ಮತ್ತು ಕಾರ್ಯವೈಖರಿ ವಿರುದ್ಧ ಗ್ರಾಮಸ್ಥರು ಹರಿಹಾಯ್ದರು. ಗ್ರಾಮಸಭೆಗಳಲ್ಲಿ ಕೈಗೊಂಡ ನಿರ್ಣಯ ಯಾವುದೂ ಅನುಷ್ಠಾನಗೊಳ್ಳುತ್ತಿಲ್ಲ. ಗ್ರಾಮಸಭೆಯ ನಿರ್ಣಯಗಳಿಗೆ ಯಾವುದೇ ಬೆಲೆ ಇಲ್ಲ. ನಿರ್ಣಯಗಳು ಕೇವಲ ಪುಸ್ತಕದಲ್ಲಿ ಮಾತ್ರ. ಗ್ರಾಮಸ್ಥರ ಬೇಡಿಕೆಗಳಿಗೆ ಸ್ಥಳೀಯಾಡಳಿತ ಸ್ಪಂದಿಸುತ್ತಿಲ್ಲ. ದಾರಿದೀಪ, ಸ್ವಚ್ಛತೆ, ಕುಡಿಯುವ ನೀರು ವಿಚಾರದಲ್ಲಿ ಸ್ಥಳೀಯಾಡಳಿತ ಸಂಪೂರ್ಣ ನಿರ್ಲಕ್ಷ್ಯ ವಹಿಸುತ್ತಿದೆ. ಸಕಾಲದಲ್ಲಿ ನೀಡಿದ ಅರ್ಜಿಗಳನ್ನು ಗ್ರಾಮ ಪಂಚಾಯತ್ನಲ್ಲಿ ಸ್ವೀಕರಿಸುತ್ತಿಲ್ಲ. ಜನರನ್ನು ಅನಗತ್ಯವಾಗಿ ಪಂಚಾಯತ್ಗೆ ಸುತ್ತಾಡಿಸಲಾಗುತ್ತಿದೆ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ಕಾಟಕ ಅಮಾವಾಸ್ಯೆ ಪ್ರಯುಕ್ತ ನದಿ-ಕಡಲ ಸಂಗಮದ ಅಪೂರ್ವ ತಾಣ ಮರವಂತೆಯ ಪುರಾಣ ಪ್ರಸಿದ್ಧ ಮಹಾರಾಜ ಶ್ರೀ ವರಾಹ ಸ್ವಾಮಿ ದೇವಸ್ಥಾನದಲ್ಲಿ ಸಮುದ್ರ ಸ್ನಾನ ಹಾಗೂ ವಾರ್ಷಿಕ ಜಾತ್ರೆ ಮಹೋತ್ಸವವು ಸಂಭ್ರಮ-ಸಡಗರದಿಂದ ನಡೆಯಿತು. ನಸುಕಿನಿಂದಲೇ ಆಸುಪಾಸಿನ ಊರುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಮರವಂತೆಗೆ ಆಗಮಿಸಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಾಚೆಗಿನ ಸಮುದ್ರದಲ್ಲಿ ಸ್ನಾನಗೆ„ದು ಬಳಿಕ ಶ್ರೀ ವರಾಹ ಸ್ವಾಮಿ ದೇವಸ್ಥಾನದ ಬಳಿಯಿರುವ ಸೌಪರ್ಣಿಕಾ ನದಿಯಲ್ಲಿ ಸ್ನಾನಗೈದು ಶ್ರೀದೇವರ ದರ್ಶನ ಪಡೆದು ಹರಕೆ ಸಲ್ಲಿಸಿದರು. ಕರ್ಕಾಟಕ ಅಮಾವಾಸ್ಯೆ ಜಾತ್ರೆಯ ಸಂಪ್ರದಾಯದಂತೆ ನವವಧುವರರು, ಕೃಷಿಕರು ಹಾಗೂ ಸ್ಥಳೀಯ ಭಾಗದ ಮೀನುಗಾರರು (ಮರವಂತೆ) ಭಾರೀ ಸಂಖ್ಯೆಯಲ್ಲಿ ಆಗಮಿಸಿ ಶ್ರೀವರಾಹ ಸ್ವಾಮಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಕ್ಷೇತ್ರದ ಭಕ್ತರು ಈ ಸಂದರ್ಭದಲ್ಲಿ ವರ್ಷದ ಹರಕೆಯನ್ನು ಒಪ್ಪಿಸಿದರು. ಭಕ್ತರು ಶ್ರೀ ದೇವರ ದರ್ಶನ, ಪೂಜೆ-ಪುನಸ್ಕಾರದಲ್ಲಿ ಸುಸೂತ್ರವಾಗಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ದೇವಸ್ಥಾನದ ಆಡಳಿತ ಮಂಡಳಿಯು ವ್ಯವಸ್ಥೆ ಮಾಡಿತ್ತು. ಶ್ರೀದೇವರ ದರ್ಶನ ಪಡೆಯುವುದಕ್ಕಾಗಿ ಭಕ್ತಾದಿಗಳು ಸುಮಾರು ಅರ್ಥ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗ್ರೂಪ್ ಜಿಎಸ್ಬಿ ಹೆಲ್ಪ್ಲೈನ್ ಚಾರೀಟೇಬಲ್ ಟ್ರಸ್ಟ್ ವತಿಯಿಂದ ಹೆಚ್.ಐ.ವಿ ಬಾದಿತ ಬಡಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಧನ ಸಹಾಯ ಮಾಡಲಾಯಿತು. ಶ್ರೀಮತಿ ಕವಿತಾ ಶ್ಯಾನುಬಾಣ್ ರವರು ತಮ್ಮ ತಂದೆಯ ಸ್ಮರಣಾರ್ಥ ನೀಡಿದ ಬ್ಯಾಗ್ಗಳನ್ನು ಮಕ್ಕಳಿಗೆ ವಿತರಿಸಲಾಯಿತು. ಟ್ರಸ್ಟಿಗಳಲ್ಲೊರ್ವರಾದ ಜಯಶ್ರೀ ಭಟ್ ಧನ ಸಹಾಯ ಹಸ್ತಾಂತರಿಸಿದರು. ಜಿಲ್ಲೆಯ ಹೆಚ್.ಐ.ವಿ ಸೋಂಕಿತ ಪರ ಹೋರಾಟಗಾರ ಸಂಜೀವ ವಂಡ್ಸೆಯವರು ಉಪಸ್ಥಿತರಿದ್ದರು. ವರದಿ : ರಕ್ಷಿತ ಕುಮಾರ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರತಿಯೊಬ್ಬ ವ್ಯಕ್ತಿಯೂ ಇನ್ನೋಬ್ಬರಿಗಿಂತ ಭಿನ್ನನಾಗಿರುತ್ತಾನೆ ಈ ಭಿನ್ನತೆಯೇ ಒಬ್ಬರನ್ನು ಉಳಿದವರಿಗಿಂತ ಶ್ರೇಷ್ಠನನ್ನಾಗಿ ಪರಿಗಣಿಸುವಂತೆ ಮಾಡುತ್ತದೆ ಕೆಲಸದಲ್ಲಿ ಶ್ರಧ್ಧೆ ಪರಿಸರದ ಕುರಿತು ಕಾಳಜಿ ಲೋಕೋತ್ರತರ ದೃಷ್ಠಿಯಿಂದ ಸಕಲ ಜೀವಿಗಳ ಒಳಿತನ್ನು ಬಯಸುವುದು ಮಹಾತ್ಮರ ಲಕ್ಷಣ ಜೀವನದ ನಡಿಗೆ ಆ ದಿಸೆಯಲ್ಲಿರುವುದು ಲೇಸು ವ್ಯಕ್ತಿ ನಶ್ವರ ಸಾಧನೆ ಶಾಶ್ವತ ಶ್ರೇಷ್ಠ ತತ್ವಗಳನ್ನು ಶ್ರೇಷ್ಠ ಸಾಧಕರನ್ನು ಗೌರವಿಸುವುದು ನಮ್ಮ ಕರ್ತವ್ಯ ಎಂದು ಬೈಂದೂರು ವಲಯ ಶ್ರೀಮದ್ ಭಗವದ್ಗೀತಾ ಜಯಂತಿ ಆಚರಣ ಸಮಿತಿಯ ಗೌರವಾಧ್ಯಕ್ಷ ಉಪ್ಪುಂದ ಚಂದ್ರಶೇಖರ ಹೊಳ್ಳ ಹೇಳಿದರು. ಉಪ್ಪುಂದ ಶಂಕರ ಕಲಾಮಂದಿರದಲ್ಲಿ ಸ್ವರ್ಣವಲ್ಲಿ ಸೋಂದಾ ಗಂಗಾದರೇಂದ್ರ ಸರಸ್ವತಿ ಸ್ವಾಮೀಜಿಯವರು ಹಮ್ಮಿಕೊಂಡ ಶ್ರೀ ಭಗವದ್ಗೀತಾ ಸಪ್ತಾಹ ಆಚರಣೆಯ ರೂಪುರೇಷೆ ಕುರಿತು ಸಮಾಲೋಚನಾ ಸಭೆಯಲ್ಲಿ ಭಗವದ್ಗೀತಾ ಜಯಂತಿ ಆಚರಣ ಸಮಿತಿಯ ಹೊಳ್ಳ ದಂಪತಿಗಳಿಗೆ ನೀಡಿದ ಗೌರವ ಸ್ವೀಕರಿಸಿ ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಶ್ರೀಮದ್ ಭಗವದ್ಗೀತಾ ಜಯಂತಿ ಆಚರಣ ಸಮಿತಿಯ ಸಂಯೋಜಕ ಬಿ.ರಾಮಕೃಷ್ಣ ಶೇರುಗಾರ್ ವಹಿಸಿದ್ದರು ವೇದಿಕೆಯಲ್ಲಿ ಮುಖ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಆಶ್ರಯದಲ್ಲಿ ನಡೆಯುವ ತಿಂಗಳ ಕಾರ್ಯಕ್ರಮದ ಅಂಗವಾಗಿ ತಲ್ಲೂರು ವಿಠಲ ಭಜನಾ ಮಂಡಳಿ ಸದಸ್ಯರಿಂದ ಭಜನೋತ್ಸವ ಹಾಗೂ ಸುಗಮ ಸಂಗೀತ ಜರಗಿತು. ಇದೇ ಸಂದರ್ಭದಲ್ಲಿ ಖ್ಯಾತ ಗಾಯಕಿ ಶ್ರೀಮತಿ ಪ್ರಮೀಳಾ ಕುಂದಾಪುರ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ವಿಕ್ರಮ್ ಮೇಲಾಡಿ ಯು.ಆರ್. ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಉದ್ಯಮಿ ಟಿ.ಎನ್. ಪ್ರಭು ತಲ್ಲೂರು, ಪದ್ಮನಾಭ ಪ್ರಭು, ಸೂರ್ಯನಾರಾಯಣ ಮಯ್ಯ, ಯು. ವೆಂಕಟರಮಣ ಹೊಳ್ಳ, ಉದಯ ಭಂಡಾರ್ಕಾರ್, ನಾಗೇಶ್ ಶ್ಯಾನುಭಾಗ್, ರಮೇಶ್ ಮೇಲಾಡಿ, ಸದಾಶಿವ ಐತಾಳ್, ಅಕಾಡೆಮಿಯ ಅಧ್ಯಕ್ಷ ಭಾಸ್ಕರ ಕೊಗ್ಗ ಕಾಮತ್, ಭಜನಾ ಮಂಡಳಿಯ ಸದಸ್ಯರಾದ ಮಮತಾ ಪ್ರಭು, ದೇವಕಿ ಪ್ರಭು, ರಜನಿ ಪ್ರಭು ಇನ್ನಿತರರು ಉಪಸ್ಥಿತರಿದ್ದರು.
