Author: ನ್ಯೂಸ್ ಬ್ಯೂರೋ

ಬೈಂದೂರು: ಅಪ್ರಾಪ್ತರು ಅಪರಾಧ ಮಾಡಿದರೂ ಕೂಡಾ ಅವರಿಗೆ ಎಲ್ಲಾ ರೀತಿ ಕಾನೂನು ಅನ್ವಯಿಸುತ್ತದೆ. ಅಪಘಾತವಾಗುವುದು ಆಕಸ್ಮಿಕವಾದರೂ ಅದು ಕೂಡಾ ಅಪರಾಧದ ಒಂದು ಭಾಗವೇ ಆಗಿದೆ. ಮುಂಜಾಗೃತೆಯಿಂದ ಅಪರಾಧ ತಡೆಯುವ ಪ್ರಯತ್ನ ಮಾಡಬಹುದು. ವಿದ್ಯಾರ್ಥಿಗಳು ಮುಂದೆ ಹೆಜ್ಜೆಯಿಡುವ ಮೊದಲು ಸರಿಯಾಗಿ ಯೋಚಿಸಿ ನಿರ್ಧರಿಸಿ ಎಂದು ಬೈಂದೂರು ವೃತ್ತ ನಿರೀಕ್ಷಕ ಸುದರ್ಶನ್ ಮುದ್ರಾಡಿ ಹೇಳಿದರು. ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಬೈಂದೂರು ಆರಕ್ಷಕ ಠಾಣೆ ವತಿಯಿಂದ ನಡೆದ ಅಪರಾಧ ತಡೆ ಮಾಸಾಚರಣೆ ಹಾಗೂ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸುವ ಸಭೆಯಲ್ಲಿ ಮಾತನಾಡಿದರು. ವಿಶ್ವದಲ್ಲಿ ಸಮಾನ ಮನಸ್ಕರಿದ್ದರೆ ಅಪರಾಧ ಪ್ರಕರಣಗಳು ನಡೆಯುತ್ತಿರಲಿಲ್ಲ. ಗೊತ್ತಿಲ್ಲದೇ ಮಾಡುವ ಅಪರಾಧವೂ ಕೂಡಾ ಶಿಕ್ಷರ್ಹವೆ. ವಿದ್ಯಾರ್ಥಿಗಳಿಗೆ ಕನಿಷ್ಟಪಕ್ಷ ಕಾನೂನಿನ ಬಗ್ಗೆ ಜ್ಞಾನವಿರಬೇಕು ಎಂದರು. ವೇಶ್ಯಾವಾಟಿಕೆ, ಮಾದಕವಸ್ತು ಮಾರಾಟಕ್ಕಾಗಿ ಬಳಸಿಕೊಳ್ಳಲು ದೊಡ್ಡ ನೌಕರಿ ಹೆಚ್ಚು ಸಂಬಳದ ಆಸೆ ತೋರಿಸಿ ಯುವಕ-ಯುವತಿಯರನ್ನು ಹೊರರಾಜ್ಯಕ್ಕೆ ಕಳುಹಿಸುವ ಮಾನವ ಕಳ್ಳ ಸಾಗಾಣಿಕೆ ಹೆಚ್ಚು ನಡೆಯುತ್ತಿದೆ. ಇದರಿಂದ ಕೆಲವರು ಮಾರಕ ರೋಗಗಳಿಗೆ ತುತ್ತಾಗಿ ಆತ್ಮಹತ್ಯೆ ಮಾಡಿಕೊಂಡರೆ…

Read More

ಕುಂದಾಪುರ: ದಿನನಿತ್ಯದ ಜಂಜಾಟದ ಬದುಕಿನ ನಡುವೆ ಕಾರ್ಟೂನ್ ಎಂತವರಲ್ಲೂ ಒಂದು ಕ್ಷಣ ಮಂದಹಾಸ ಮೂಡಿಸಿ ಲವಲವಿಕೆಯಿಂದಿರುವಂತೆ ಮಾಡುತ್ತದೆ ಎಂದು ಮತ್ಸ್ಯೋದ್ಯಮಿ ಆನಂದ ಸಿ. ಕುಂದರ್ ಹೇಳಿದರು. ಅವರು ಕಾರ್ಟೂನ್ ಕುಂದಾಪುರ ಆಶ್ರಯದಲ್ಲಿ ಕಾರ್ಟೂನಿಷ್ಠ ಸತೀಶ್ ಆಚಾರ‍್ಯ ಅವರ ಸಾರಥ್ಯದಲ್ಲಿ ನಡೆಯುತ್ತಿರುವ ನಾಲ್ಕು ದಿನಗಳ ’ಕಾರ್ಟೂನು ಹಬ್ಬ’ವನ್ನು ಕಾರ್ಟೂನು ಬಿಡಿಸಿ ಉದ್ಘಾಟಿಸಿ ಮಾತನಾಡಿ ದೇಶಕ್ಕೆ ಹಲವಡೆ ನೆಲೆಸಿರುವ ಕುಂದಾಪುರ ಮೂಲದ ವ್ಯಂಗ್ಯಚಿತ್ರಕಾರರು ಮತ್ತಷ್ಟು ಹೆಸರು ಮಾಡಲಿ ಎಂದು ಹಾರೈಸಿದರು. (ಕುಂದಾಪ್ರ ಡಾಟ್ ಕಾಂ ಸುದ್ದಿ) ಕಾರ್ಟೂನು ಡೈಲಾಗ್ ಬರೆಯುವ ಸಾರ್ವಜನಿಕ ಸ್ವರ್ಧೆಯನ್ನು ಉದ್ಘಾಟಿಸಿದ ರೋಟರಿ ಮಾಜಿ ಅಸಿಸ್ಟೆಂಟ್ ಗವರ್ನರ್ ಗಣೇಶ್ ಶೆಟ್ಟಿ ಮೊಳಹಳ್ಳಿ ಮಾತನಾಡಿ ಪ್ರಪಂಚದ ೨೦ ಶ್ರೇಷ್ಠ ವ್ಯಂಗ್ಯಚಿತ್ರಕಾರರ ಪೈಕಿ ನಮ್ಮೂರಿನ ಸತೀಶ್ ಆಚಾರ್ಯ ಅವರ ಹೆಸರಿರುವುದು ಹೆಮ್ಮೆಯ ವಿಚಾರ. ಹುಟ್ಟೂರಿನಲ್ಲಿದ್ದುಕೊಂಡೇ ಕಾರ್ಟೂನ್ ಲೋಕದಲ್ಲಿ ತೊಡಗಿಸಿಕೊಂಡು, ಇತರರಿಗೂ ಕಾರ್ಟೂನು ಪ್ರಜ್ಞೆ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು. ಕುಂದಾಪುರ ಟ್ರಾಫಿಕ್ ಎಎಸ್‌ಐ ಸುದರ್ಶನ್ ಸೆಲ್ಫಿ ಕಾರ್ನರ್ ಉದ್ಘಾಟಿಸಿದರು. ಉದ್ಯಮಿ ಕೆ. ಆರ್. ನಾಯ್ಕ್, ಸ.ಪ.ಪೂ.…

Read More

ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ವಿದ್ಯಾರ್ಥಿಗಳನ್ನು ಹೊಂದಿದ್ದ ಉತ್ತಮ ಫಲಿತಾಂಶವನ್ನು ಪಡೆದ ಸರಕಾರಿ ಕಾಲೇಜುಗಳಲ್ಲಿ ಪ್ರಥಮ ಸ್ಥಾನವನ್ನು ಕುಂದಾಪುರ ಸರಕಾರಿ ಪ.ಪೂ.ಕಾಲೇಜು ಪಡೆದಿದ್ದು ಕಾಲೇಜನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ಹಾಗೂ ನಾಡುನುಡಿಯ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕನ್ನಡ ನಾಡು ನುಡಿ, ಸಂಸ್ಕೃತಿಯು ಪ್ರತಿಯೊಬ್ಬ ಕನ್ನಡಿಗನ ಬದುಕಿನಲ್ಲಿ ಒಂದು ನಿಶ್ಚಿತ ಪ್ರಜ್ಞೆಯಾಗಿ ಆವರಿಸಿಕೊಳ್ಳಬೇಕು ಎಂದು ಅಂಕಣಕಾರ ಕೋ.ಶಿವಾನಂದ ಕಾರಂತರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಸರಕಾರಿ ಪ.ಪೂ.ಕಾಲೇಕು ಕುಂದಾಪುರ ನಾಡು-ನುಡಿ ಚಿಂತನೆ ಮತ್ತು ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಕುಂದಪ್ರಭ ಪತ್ರಿಕೆಯ ಸಂಪಾದಕರಾದ ಯು.ಎಸ್.ಶೆಣೈಯವರು ಕನ್ನಡ ಸಾಹಿತ್ಯಕ್ಕೆ ಕುಂದಾಪುರದ ಕೊಡುಗೆಗಳೇನು? ಮತ್ತು ಆ ಮೂಲಕ ಹಿರಿಯರು ಕನ್ನಡವನ್ನು ಕಟ್ಟುವ ಎಷ್ಟು ಕೆಲಸ ಮಾಡಿದ್ದಾರೆ ಎಂಬುದನ್ನು ಸವಿಸ್ತಾರವಾಗಿ ತಿಳಿಸಿದರು. ಕನ್ನಡ ನಾಡು ನುಡಿಯ ಬಗ್ಗೆ ಅತೀವ ಕಾಳಜಿ ಹೊಂದಿದ ಹೆಬ್ರಿಯ ಗಂಗಾಧರ ಅತಿಥಿಗಳಾಗಿ ಆಗಮಿಸಿ ಸ.ಪ.ಪೂ. ಕಾಲೇಜಿನಲ್ಲಿ ಉಡುಪಿ ಜಿಲ್ಲೆಯಲ್ಲೇ ಅತ್ಯಧಿಕ ವಿದ್ಯಾರ್ಥಿಗಳನ್ನು ಹೊಂದಿದ್ದು ಶೇ 97.76 ಫಲಿತಾಂಶ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ…

Read More

ಕುಂದಾಪುರ: ಸಾಧನೆ ಪ್ರತಿಭೆಯ ಪ್ರತಿಬಿಂಬವಲ್ಲ. ಗೆಲುವೇ ಸಾಧನೆಯ ಮಾನದಂಡವಲ್ಲ ಎಂಬ ಸೂಕ್ಷ್ಮವನ್ನರಿತು ವಿದ್ಯಾರ್ಥಿಗಳಲ್ಲಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಬೇಕೆಂದು ಡಾ. ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಬಿ. ಮಹಾಬಲೇಶ್ವರ ರಾವ್ ಕರೆ ನೀಡಿದರು. ಅವರು ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದ ಮಾತನಾಡಿ ಇಂದು ವಿದ್ಯಾರ್ಥಿಗಳು ಸರ್ವಾಂಗೀಣ ಬೆಳವಣಿಗೆಗೆ ಪ್ರಯತ್ನಿಸುತ್ತಾ ಪ್ರಶ್ನಿಸುವ ಮನೋಭಾವದ ಮೂಲಕ ವಾಸ್ತವವನ್ನು ಅರ್ಥ ಮಾಡಿಕೊಳ್ಳಬೇಕು ಭಿನ್ನವಾದ ರೀತಿಯಲ್ಲಿ ಯೋಚಿಸುವುದರೊಂದಿಗೆ ಸೃಜನಾತ್ಮಕವಾದ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ರಕ್ಷಕರು ತಮ್ಮ ಮಕ್ಕಳನ್ನು ಬೌದ್ಧಿಕ ಕೂಲಿಗಳನ್ನಾಗಿ ರೂಪಿಸುವ ಚಿಂತನೆಯಿಂದ ಹೊರಬಂದು ಅವರಲ್ಲಿನ ಪ್ರತಿಭೆ ದಕ್ಷತೆ ಮತ್ತು ಬದ್ಧತೆಗಳ ಬೆಳಸಿಗೆ ಸಾರ, ನೀರೆರೆದು ಪೋಷಿಸಬೇಕೆಂದು ಅಭಿಪ್ರಾಯ ಪಟ್ಟರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಮೋಹನ್ ಕಾಮತ್ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಕಲ್ಪಿಸಲಾದ ಮೂಲಭೂತ ಸೌಕರ್ಯಗಳು ಹಾಗೂ ಶೈಕ್ಷಣಿಕ ಮಾರ್ಗದರ್ಶನದ ತರಬೇತಿಯನ್ನು ಹೆಚ್ಚಿನ ವಿದ್ಯಾರ್ಥಿಗಳು ಪಡೆಯುವಂತಾಗಬೇಕೆಂದು ಆಶಿಸಿದರು. ಸಂಸ್ಥೆಯ ಆಡಳಿತ ಮಂಡಳಿಯ…

Read More

ಕುಂದಾಪುರ: ಇಲ್ಲಿನ ಟಿ.ಟಿ. ರೋಡ್ ನಿವಾಸಿ ವಿ. ನಾಗಪ್ಪಯ್ಯ ಆಚಾರ್ಯ(63) ಅಲ್ಪಕಾಲದ ಅಸೌಖ್ಯದಿಂದ ಡಿ.09ರಂದು ನಿಧನರಾದರು. ಕುಂದಾಪುರದಲ್ಲಿ ಸುಮಾರು ೩೦ ವರ್ಷಗಳಿಗೂ ಅಧಿಕ ಕಾಲ ರಕ್ತ ಪರೀಕ್ಷಕರಾಗಿ ಸೇವೆ ಸಲ್ಲಿಸಿದ್ದು ಪರಿಸರದಲ್ಲಿ ಡಾ. ನಾಗಪ್ಪ ಎಂದೇ ಹೆಸರುಗಳಿಸಿದ್ದರು. ಹತ್ತು ಹಲವು ಸಾಮಾಜಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಜನಾನುರಾಗಿಯಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇರ್ವರು ಪುತ್ರಿಯರನ್ನು ಅಗಲಿದ್ದಾರೆ.

Read More

ಬೈಂದೂರು: ಹಿಂದೆ ಗ್ರಾಮೀಣ ಭಾಗಗಳಲ್ಲಿ ಅಪರಾಧಗಳು ನಡೆಯುತ್ತಿರುವುದು ಕಡಿಮೆಯಾಗಿತ್ತು. ಆದರೆ ಈಗ ಕಾಲ ಬದಲಾಗಿದೆ. ವಿಧ ವಿಧವಾದ ಆಸೆ-ಆಮಿಷಗಳಿಂದ ಹಳ್ಳಿಯ ಮುಗ್ದ ಜನರ ಭಾವನೆಗಳನ್ನು ದುರುಪಯೋಗ ಪಡಿಸಿಕೊಂಡು ಸಮಾಜ ಘಾತುಕರು, ವಿಕೃತ ಮನಸ್ಸಿನವರು ಅಮಾನವೀಯ ಕೃತ್ಯಗಳನ್ನು ಮಢುತ್ತಿದ್ದಾರೆ. ಇದರಿಂದ ಅಮಾಯಕ ಮಹಿಳೆಯರು ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಜಾಗೃತಿ ವಹಿಸಬೇಕಾಗಿದೆ ಎಂದು ಬೈಂದೂರು ವೃತ್ತನಿರೀಕ್ಷಕ ಸುದರ್ಶನ್ ಎಂ ಹೇಳಿದರು. ಕಾಲ್ತೋಡು ಗ್ರಾಪಂ ವ್ಯಾಪ್ತಿಯ ಅತೀ ಹಿಂದುಳಿದ ಪೈನಾಡಿ ಎಂಬ ಕುಗ್ರಾಮದ ಸಕಿಪ್ರಾ ಶಾಲೆಯಲ್ಲಿ ಭಾನುವಾರ ಸಂಜೆ ಬೈಂದೂರು ಆರಕ್ಷಕ ಠಾಣೆ ವತಿಯಿಂದ ನಡೆದ ಅಪರಾಧ ತಡೆ ಮಾಸಾಚರಣೆ ಹಾಗೂ ವಿಶೇಷವಾಗಿ ಮಹಿಳೆಯರಿಗೆ ಕಾನೂನು ಅರಿವು ಮೂಡಿಸುವ ಸಭೆಯಲ್ಲಿ ಮಾತನಾಡಿದರು. ತಾಲೂಕಿನಲ್ಲಿ ಜನವರಿ 2015ರಿಂದ ಡಿಸೆಂಬರ್‌ವರೆಗೆ 25 ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಗಳ ದೂರು ದಾಖಲಾಗಿದ್ದು, ಅದರಲ್ಲಿ ಎಂಟು ಮಹಿಳೆಯರು ತಾಯಾಗಿದ್ದಾರೆ. ಅಲ್ಲದೇ ಏಳು ಮಹಿಳೆಯರ ಕೊಲೆಗಳು ನಡೆದಿದ್ದು, ಅವೆಲ್ಲವೂ ಗ್ರಾಮೀಣ ಭಾಗದಲ್ಲಿ ಸಂಭವಿಸಿದೆ ಎಂದು ಅಂಕಿ-ಅಂಶ ನೀಡಿದ ಅವರು, ಪೋಲಿಸರು ಸಮಾಜ ಕಾಯುವ…

Read More

ಬೈಂದೂರು: ಕುಂದಾಪುರದ ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೀಜಿನ 2015-16ನೇ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಗೋಳಿಹೊಳೆ ಮಹಿಷಮರ್ಧಿನಿ ಸಭಾಂಗಣದಲ್ಲಿ ನಡೆಯಿತು. ಗೋಳಿಹೊಳೆ ಗ್ರಾಪಂ ಅಧ್ಯಕ್ಷ ರಾಜು ಪೂಜಾರಿ ಶಿಬಿರ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಸ್ತು, ಸಮಯಪ್ರಜ್ಞೆ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಇಂತಹ ಶಿಬಿರಗಳು ಸಹಕಾರಿಯಾಗಿದೆ. ಎಲ್ಲಾ ಶಿಬಿರಾರ್ಥಿಗಳು ಇದರ ಸದುಪಯೋಗ ಪಡೆಯಬೇಕು ಎಂದು ಶುಭಹಾರೈಸಿದರು. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಬಿ. ಎಂ. ಸುಕುಮಾರ್ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ರಾಜ್ಯ ಬಿಜೆಪಿ ರೈತಮೋರ್ಚಾ ಉಪಾಧ್ಯಕ್ಷ ದೀಪಕ್‌ಕುಮಾರ್ ಶೆಟ್ಟಿ, ಗ್ರಾಪಂ ಸದಸ್ಯ ಸಾಯಿಕುಮಾರ್, ತಾಪಂ ಮಾಜಿ ಸದಸ್ಯರಾದ ರಾಮ್‌ಕಿಶನ್ ಶೆಟ್ಟಿ, ರಾಜೀವ ಶೆಟ್ಟಿ, ಬೈಂದೂರು ಗ್ರಾಪಂ ಉಪಾಧ್ಯಕ್ಷ ವೆಂಕಟ ಪೂಜಾರಿ ಸಸಿಹಿತ್ಲು, ಬಿಳಿಶಿಲೆ ಶ್ರೀ ವಿನಾಯಕ ದೇವಸ್ಥಾನದ ಮೊಕ್ತೇಸರ ಶಿವರಾಜ್ ಪೂಜಾರಿ, ಮಂಜು ಪೂಜಾರಿ ಸಸಿಹಿತ್ಲು, ನಿವೃತ್ತ ಮುಖ್ಯಶಿಕ್ಷಕ ಜನ್ಮನೆ ಗೋಪಾಲ ಶೆಟ್ಟಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಸನತ್ ಅಡಿಗ, ವಿಜಯಲಕ್ಷ್ಮಿ ಉಪಸ್ಥಿತರಿದ್ದರು. ಪ್ರಾಂಶುಪಾಲೆ ಸೀಮಾ ಪಿ. ಶೆಟ್ಟಿ ಪ್ರಾಸ್ತಾವಿಸಿದರು. ಎನ್.ಎಸ್.ಎಸ್. ಯೋಜನಾಧಿಕಾರಿ ರಕ್ಷಿತ ರಾವ್…

Read More

ಗಂಗೊಳ್ಳಿ : ಗಂಗೊಳ್ಳಿ ವಲಯ ಸವಿತಾ ಸಮಾಜದ ಅಧ್ಯಕ್ಷರಾಗಿ ಎಂ.ಶೇಖರ ಸುವರ್ಣ ಹಕ್ಲಾಡಿ (ಹೊಳ್ಮಗೆ) ಆಯ್ಕೆಯಾಗಿದ್ದಾರೆ. ಇತ್ತೀಚಿಗೆ ಜರಗಿದ ಸಂಘದ ಮಹಾಸಭೆಯಲ್ಲಿ ಇವರನ್ನು ಆಯ್ಕೆ ಮಾಡಲಾಯಿತು. ಕುಂದಾಪುರ ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಸುಭಾಷ್ ಭಂಡಾರಿ ಗುಜ್ಜಾಡಿ, ಕಾರ್ಯದರ್ಶಿ ಸುಜಯ್ ಸುವರ್ಣ ವಕ್ವಾಡಿ ಮತ್ತು ಗಂಗೊಳ್ಳಿ ವಲಯದ ಹಿರಿಯ ವೃತ್ತಿಗಾರ ಮಹಾಬಲ ಭಂಡಾರಿ ಗುಜ್ಜಾಡಿ ಮೊದಲಾದವರು ಉಪಸ್ಥಿತರಿದ್ದರು. ಮಂಜುನಾಥ ಸಾಲಿಯಾನ್ ತ್ರಾಸಿ (ಗೌರವಾಧ್ಯಕ್ಷ), ಶ್ರೀಧರ ಭಂಡಾರಿ ಗುಡ್ಡೆಯಂಗಡಿ (ಉಪಾಧ್ಯಕ್ಷ), ರಾಜೇಶ ಸುವರ್ಣ ಅರಾಟೆ (ಕಾರ್ಯದರ್ಶಿ), ರವೀಶ ಹೆಮ್ಮಾಡಿ (ಜತೆ ಕಾರ್ಯದರ್ಶಿ), ರಕ್ಷತ್ ಸುವರ್ಣ ವಂಡ್ಸೆ (ಕೋಶಾಧಿಕಾರಿ), ಲಕ್ಷ್ಮಣ ಸುವರ್ಣ ಮರವಂತೆ (ಕ್ರೀಡಾ ಕಾರ್ಯದರ್ಶಿ), ನಾಗರಾಜ ಭಂಡಾರಿ ತಲ್ಲೂರು, ರತ್ನಾಕರ ಭಂಡಾರಿ ಹೆಮ್ಮಾಡಿ, ಪ್ರಶಾಂತ ಭಂಡಾರಿ ಹೆಮ್ಮಾಡಿ, ಅಶೋಕ ಭಂಡಾರಿ ತ್ರಾಸಿ, ಶಂಕರ ಸುವರ್ಣ ಕಂಚುಗೋಡು, ಸುಧಾಕರ ಬಂಗೇರ ಗಂಗೊಳ್ಳಿ, ಸಂದೀಪ ಮರವಂತೆ (ಸಂಘಟನಾ ಸಮಿತಿ ಸದಸ್ಯರು), ದಿನೇಶ ಭಂಡಾರಿ ಗುಜ್ಜಾಡಿ, ಸುರೇಶ ಭಂಡಾರಿ ಬೆಣ್ಗೆರೆ, ಶೇಖರ ಸಾಲಿಯಾನ್ ಗಂಗೊಳ್ಳಿ, ಬಾಬು ಭಂಡಾರಿ ಗಂಗೊಳ್ಳಿ…

Read More

ಕುಂದಾಪುರ: ಡಾ. ಸುಬ್ರಹ್ಮಣ್ಯ.ಬಿ ಇವರು ಪ್ರೊ.ಡಿ.ಕೃಷ್ಣ ಭಟ್ ಇವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ‘ ಸಿಂಥೆಸಿಸ್ ಆಫ್ ಗ್ರಾಫೇನ್ ಎಂಡ್ ಇಟ್ಸ್ ಕಾಂಪೊಸಿಟ್ಸ್ ಫಾರ್ ಎನರ್ಜಿ ಎಪ್ಲಿಕೇಶನ್ಸ್’ ಎನ್ನುವ ಮಹಾ ಪ್ರಬಂಧಕ್ಕೆ ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯವು ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ. ಬೈಂದೂರಿನ ಭದ್ರಯ್ಯನ ಮಂಜುನಾಥ ಶೇರುಗಾರ್ ಮತ್ತು ಪಾರ್ವತಿ ಶೇರುಗಾರ್ ದಂಪತಿಯ ಪುತ್ರನಾಗಿದ್ದು, ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು ಮತ್ತು ಬೈಂದೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುತ್ತಾರೆ. ಪ್ರಸ್ತುತ ಇವರು ಮಂಬಯಿಯ ಪ್ರತಿಷ್ಠಿತ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪೋಸ್ಟ್ ಡಾಕ್ಟರಲ್ ಫೆಲೊ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

Read More

ಬೈಂದೂರು: ಶ್ರೀರಾಮ್ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ನಿಯಮಿತ ಬೈಂದೂರು ಇದರ ನೂತನ ನಾಗೂರು ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯುಕ್ತ ಸಹಕಾರಿ ಧುರೀಣ, ಬೈಂದೂರು ಕ್ಷೇತ್ರದ ಮಾಜಿ ಶಾಸಕ ದಿ. ಜಿ.ಎಸ್.ಆಚಾರ್ ಅವರ ಭಾವಚಿತ್ರ ಅನಾವರಣಗೊಳಿಸಲಾಯಿತು. ರಾಜ್ಯಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆನಾಂಡೀಸ್ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿ, ಸಹಕಾರಿ ಕ್ಷೇತ್ರ ಮುನ್ನೆಡೆಯಲು ಭದ್ರ ಬುನಾದಿ ಹಾಕಿದ ಜಿ.ಎಸ್ ಆಚಾರ್ ಅವರನ್ನು ನೆನಪಿಸಿಕೊಳ್ಳುವುದು ಬಹಳ ಮುಖ್ಯ. ಅವರು ಸಹಕಾರಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಮರೆಯುವಂತಿಲ್ಲ. ತನ್ನ ಸಹಕಾರಿ ಸಂಸ್ಥೆಯಲ್ಲಿ ಅವರ ನೆನಪು ಚಿರಸ್ಥಾಯಿಯಾಗುವಲ್ಲಿ ಅವರ ಭಾವಚಿತ್ರವನ್ನು ಅನಾವರಣಗೊಳಿಸಿದ್ದಕ್ಕಾಗಿ ಸಂಸ್ಥೆಯ ಅಧ್ಯಕ್ಷ ಎಸ್. ರಾಜು ಪೂಜಾರಿ ಅಭಿನಂದನಾರ್ಹರು ಎಂದರು. ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಕೇಂದ್ರ ಬ್ಯಾಂಕ್ ನಿರ್ದೇಶಕ ಬಿ. ರಘುರಾಮ ಶೆಟ್ಟಿ, ರಾಜ್ಯ ಕಾಂಗ್ರೆಸ್‌ನ ಕಾರ್ಯದರ್ಶಿ ಎಂ.ಎ ಗಫೂರ್, ತಾಪಂ ಮಾಜಿ ಸದಸ್ಯ ಹೆಚ್. ವಿಜಯ ಶೆಟ್ಟಿ, ಬೈಂದೂರು-ಉಪ್ಪುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಜಿ. ಗೋಕುಲ್ ಶೆಟ್ಟಿ, ಕಿರಿಮಂಜೇಶ್ವರ ಗ್ರಾಪಂ ಮಾಜಿ ಅಧ್ಯಕ್ಷ…

Read More