ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಮಂಡಿಸಲಾಗಿದ್ದ ಅವಿಶ್ವಾಸ ಗೊತ್ತುವಳಿ ನಿರ್ಣಯ ಕೋರಂ ಅಭಾವದ ಹಿನ್ನಲೆಯಲ್ಲಿ ತಿರಸ್ಕೃತಗೊಂಡಿದೆ. ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕುಂದಾಪುರ ಸಹಾಯಕ ಕಮೀಷನರ್ ಚಾರುಲತಾ ಸೋಮಲ್ ಅಧ್ಯಕ್ಷತೆಯಲ್ಲಿ ಜರಗಿದ ಗ್ರಾಪಂ ಅಧ್ಯಕ್ಷರ ವಿರುದ್ಧ ಸಲ್ಲಿಸಲಾಗಿರುವ ಅವಿಶ್ವಾಸ ಸೂಚನೆ ಪರ್ಯಾಲೋಚನಾ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಹೊರ ಬಿದ್ದಿದೆ. ಸಭೆಯಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯತ್ನ 33 ಸದಸ್ಯರಲ್ಲಿ ಕೇವಲ ನಾಲ್ಕು ಜನ ಸದಸ್ಯರು ಹಾಜರಾಗಿರುವ ಹಿನ್ನಲೆಯಲ್ಲಿ ಕೋರಂ ಅಭಾವದಿಂದ ಅಧ್ಯಕ್ಷರ ವಿರುದ್ಧ ನಡೆದ ಅವಿಶ್ವಾಸ ಗೊತ್ತುವಳಿಯ ನಿರ್ಣಯವನ್ನು ಕರ್ನಾಟಕ ಪಂಚಾಯತ್ರಾಜ್ ಅಧಿನಿಯಮ 1993 ಪ್ರಕರಣ 49ರಂತೆ ತಿರಸ್ಕರಿಸಿ ಸಭೆಯಲ್ಲಿ ಘೋಷಣೆ ಮಾಡಲಾಯಿತು. ಗಂಗೊಳ್ಳಿ ಗ್ರಾಪಂ ನ 33 ಸದಸ್ಯರಲ್ಲಿ 19 ಮಂದಿ ಬಿಜೆಪಿ ಬೆಂಬಲಿಯ ಹಾಗೂ 14 ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ. ಗ್ರಾಪಂ ಅಧ್ಯಕ್ಷರು ಸೇರಿದಂತೆ 15 ಮಂದಿ ಬಿಜೆಪಿ ಬೆಂಬಲಿತ ಮತ್ತು ಕಾಂಗ್ರೆಸ್ ಬೆಂಬಲಿತ ಎಲ್ಲಾ 14 ಮಂದಿ ಸದಸ್ಯರು ಸಭೆಗೆ ಗೈರು ಹಾಜರಾಗಿದ್ದರು.…
Author: ನ್ಯೂಸ್ ಬ್ಯೂರೋ
ಕುಂದಾಪುರ: ವಿದ್ಯಾರ್ಥಿಗಳು ಋಣಾತ್ಮಕ ಮತ್ತು ಸ್ಥಿರ ಮನೋಭಾವನೆಯಿಂದ ಹೊರಬಂದು ಆತ್ಮವಿಶ್ವಾಸದಿಂದ ಮುನ್ನೆಡೆದಾಗ ಉನ್ನತ ಮಟ್ಟದದಲ್ಲಿ ಸಾಧಿಸಬಹುದು ಎಂದು ಬಸ್ರೂರು ಶ್ರೀ ಶಾರದಾ ಕಾಲೇಜಿನ ಪ್ರಾಂಶುಪಾಲ ಪ್ರೋ. ಕೆ.ರಾಧಾಕೃಷ್ಣ ಹೇಳಿದರು. ಅವರು ಹೆಮ್ಮಾಡಿ ಶ್ರೀ ವಿ.ವಿ.ವಿ.ಮಂಡಳಿ ಅಧೀನಕ್ಕೆ ಒಳಪಟ್ಟ ಹೆಮ್ಮಾಡಿ ಜನತಾ ಪ್ರೌಢ ಶಾಲೆ ಮತ್ತು ಜನತಾ ಪ.ಪೂ.ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ನಿಯೋಜಿನ ಭಾಷಣ ಮಾಡುತ್ತಾ ಮಾತನಾಡಿದರು. ನಾವು ಮಾತ್ರ ಬದಲಾವಣೆಯಾದರೆ ಸಾಲದು. ಎಲ್ಲಾ ಕಡೆಯಿಂದ ಬರುವ ಜ್ಷಾನವನ್ನು ಸ್ವೀಕರಿಸಿ, ಶಿಕ್ಷಣದ ಸಂಕೀರ್ಣತೆಯಿಂದ ಹೊರಬಂದು ಸದಾ ಮುನ್ನುಗ್ಗುವ ಪ್ರವೃತ್ತಿ ಇದ್ದರೆ ಗುರಿ ತಲುಪಬಹುದು ಎಂದರು. ಆಡಳಿತ ಮಂಡಳಿಯ ಸಂಘಟನಾ ಕಾರ್ಯದರ್ಶಿ ಶಂಕರ.ಎ.ಪಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಹೆಮ್ಮಾಡಿ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜು ದೇವಾಡಿಗ ಅವರು ದ್ವಜಾರೋಹಣ ನೆರವೇರಿಸಿ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿದರು. ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ಶುಭಾಂಶಸನೆಗೈದರು. ಮರವಂತೆ ಸರಕಾರಿ ಪ್ರೌಢ ಶಾಲಾ ಶಿಕ್ಷಕ ಚಂದ್ರ.ಡಿ ಸ್ವಸ್ತಿ ವಾಚನಗೈದರು. ಬೈಂದೂರು ರತ್ತು ಬಾ ಜನತಾ…
ಗಂಗೊಳ್ಳಿ: ಯಾವುದೇ ಶೈಕ್ಷಣಿಕ ಸಂಸ್ಥೆ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕಾದರೆ ಕ್ರೀಡೆ ಅತ್ಯವಶ್ಯ. ಹೀಗಾಗಿ ಶೈಕ್ಷಣಿಕ ಸಂಸ್ಥೆಗಳು ಸದಾ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಾ ಕ್ರೀಡಾಪಟುಗಳನ್ನು ಹುರಿದುಂಬಿಸಬೇಕು. ಕ್ರೀಡಾಪಟುಗಳು ಯಾವುದೇ ಜಾತಿ ಮತ ಪಂಥಗಳ ಬೇಧ ಮಾಡದೆ ಕ್ರೀಡಾಸ್ಪೂರ್ತಿಯಿಂದ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಗಂಗೊಳ್ಳಿಯ ಶ್ರೀ ಸಿದ್ಧಿ ಫ್ರೀಜರ್ಸ್ ಎಂಡ್ ಎಕ್ಸ್ಪೋರ್ಟ್ಸ್ನ ಜನರಲ್ ಮ್ಯಾನೇಜರ್ ಎಂ.ಎಂ.ಸುವರ್ಣ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿ ಜಿಎಸ್ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಉಪಸ್ಥಿತರಿದ್ದರು. ಎಸ್.ವಿ. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಆರ್. ಎನ್.ರೇವಣಕರ್ ಸ್ವಾಗತಿಸಿದರು. ಉಪನ್ಯಾಸಕ ಭಾಸ್ಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ವಾಮನದಾಸ ಭಟ್ ವಂದಿಸಿದರು.
ಕುಂದಾಪುರ: ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಹಕ್ಲಾಡಿ ಶ್ರೀ ಕೊಳ್ಕೆಬೈಲು ಸೂರಪ್ಪ ಶೆಟ್ಟಿ ಸರಕಾರಿ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದ ವೇದಿಕೆ 2ರಲ್ಲಿ ಸುವರ್ಣ ಸಂಚಿಕೆಯನ್ನು ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮಂಜುನಾಥ ಭಂಡಾರಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸುವರ್ಣ ಮಹೋತ್ಸವ ಸಮಿತಿ ಕಾರ್ಯಧ್ಯಕ್ಷ ಸಂತೋಷಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಮ್ಯಾಪ್ಸ್ ಕಾಲೇಜಿನ ಅಧ್ಯಕ್ಷ ದಿನೇಶ್ ಕುಮಾರ್ ಆಳ್ವ, ಶ್ರೀ ಕ್ಷೇತ್ರ ಮಾಣಿಕೊಳಲು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಚ್. ಜಗದೀಶಯ್ಯ ಹಲ್ಸನಾಡು, ಶ್ರೀ ಕ್ಷೇತ್ರ ಸೌಕೂರು ಮಾಜಿ ಧರ್ಮದರ್ಶಿ ಅಶೋಕ್ ಕುಮಾರ್ ಶೆಟ್ಟಿ ಕಾವ್ರಾಡಿ, ವಕೀಲ ಟಿ.ಬಿ. ಶೆಟ್ಟಿ, ಧ.ಗ್ರಾ.ಯೋ. ಕುಂದಾಪುರ ಯೋಜನಾಧಿಕಾರಿ ಅಮರಪ್ರಸಾದ್ ಶೆಟ್ಟಿ, ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ದಿವಾಕರ ಶೆಟ್ಟಿ, ನೂಜಾಡಿ ಸಂತೋಷಕುಮಾರ್ ಶೆಟ್ಟಿ, ಉಪ್ರಳ್ಳಿ ಶ್ರೀ ಕಾಳಿಕಾಂಬ ದೇವಳದ ಅಧ್ಯಕ್ಷ ಬಡಾಕೆರೆ ಮಂಜುನಾಥ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲೆಯಲ್ಲಿ ಕಳೆದ 50ವರ್ಷಗಳಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರುಗಳನ್ನು ಗೌರವಿಸಲಾಯಿತು. ಶಾಲೆ ಮುಖ್ಯೋಪಧ್ಯಾಯ ಡಾ. ಕಿಶೋರ್ ಕುಮಾರ್ ಶೆಟ್ಟಿ, ಹೊಸಂಗಡಿ ಸ.ಪ.ಪೂ.…
ಕುಂದಾಪುರ: ಲಾಭವನ್ನು ಯೋಚಿಸಿ ಸಂಸ್ಥೆಗಳನ್ನು ಕಟ್ಟಿ ಬೆಳೆಸುವ ದಿನಗಳಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಬಗೆಗೆ ಚಿಂತಿಸದೇ ಮುಂದಿನ ಪೀಳಿಗೆಯ ಉತ್ತಮ ಭವಿಷ್ಯದ ಕನಸು ಕಂಡಿದ್ದ ಶಾಲೆಯ ಪ್ರವರ್ತಕರನ್ನು ಎಂದಿಗೂ ಸ್ಮರಿಸಲೇಬೇಕು. ತಾನು ಗಳಿಸಿದ್ದು ಮಣ್ಣಿನಲ್ಲಿಯೇ ತನ್ನ ಸೇವೆಯೂ ಇರಬೇಕೆಂಬ ಕೃತಾಜ್ಞತೆ ಭಾವ ವ್ಯಕ್ತಿಯನ್ನು ಎತ್ತರಕ್ಕೆ ಕೊಂಡೊಯ್ಯತ್ತದೆ ಎಂದು ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದರು. ಅವರು ಹಕ್ಲಾಡಿ ಶ್ರೀ ಕೊಳ್ಕೆಬೈಲು ಸೂರಪ್ಪ ಶೆಟ್ಟಿ ಸರಕಾರಿ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸುವರ್ಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಶಿಕ್ಷಣದಿಂದ ಮಾತ್ರ ಜಗತ್ತಿನಲ್ಲಿ ಬದಲಾವಣೆ ತರಲು ಸಾಧ್ಯ. ಉತ್ತಮ ಶಿಕ್ಷಣ ನೀಡಿದರೇ ಉತ್ತಮ ಸಮಾಜ ನಿರ್ಮಾಣಗೊಳ್ಳುತ್ತದೆ. ಹುಟ್ಟು ಸಾವುಗಳ ನಡುವಿನ ಜೀವನ ಅರ್ಥಪೂರ್ಣವಾಗಬೇಕಾದರೇ ಉತ್ತಮ ಸಮಾಜಕ್ಕೆ ನಮ್ಮ ಕೊಡುಗೆ ನೀಡಬೇಕಾಗುತ್ತದೆ ಎಂದವರು ಹೇಳಿದರು. ಸುವರ್ಣ ಮಹೋತ್ಸವ ಸಮಿತಿ ಕಾರ್ಯಧ್ಯಕ್ಷ ಸಂತೋಷಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಮ್ಯಾಪ್ಸ್ ಕಾಲೇಜಿನ ಅಧ್ಯಕ್ಷ ದಿನೇಶ್ ಕುಮಾರ್ ಆಳ್ವ, ಶ್ರೀ ಕ್ಷೇತ್ರ ಮಾಣಿಕೊಳಲು ವ್ಯವಸ್ಥಾಪನಾ ಸಮಿತಿ…
* ನಿಮ್ಮ ಕೂದಲು ನೈಸರ್ಗಿಕ ಹೊಳಪು ಪಡೆಯಬೇಕಾದರೆ, ದಾಸವಾಳದ ಎಲೆಯನ್ನು ಮೊಸರಿನ ಜೊತೆ ಸೇರಿಸಿ ರುಬ್ಬಿ ಹಚ್ಚಿ 30 ನಿಮಿಷ ಬಿಟ್ಟು ತೊಳೆಯಿರಿ. * ಕೂದಲಿನಲ್ಲಿ ಪದೇ ಪದೇ ಜಿಡ್ಡಿನಾಂಶ ಕಾಣಿಸಿಕೊಳ್ಳುತ್ತಿದ್ದರೆ, ನಿಂಬೆರಸವನ್ನು ಬಳಸಿ ಕೂದಲನ್ನು ತೊಳೆಯಿರಿ. * ಕೂದಲು ಉದುರುವುದು, ತಲೆ ತುರಿಕೆ, ತಲೆ ಹೊಟ್ಟು ನಿವಾರಣೆಗೆ ರಾಮಬಾಣ ನೆಲ್ಲಿಕಾಯಿ. ನೆಲ್ಲಿಕಾಯಿಯನ್ನು ಪೇಸ್ಟ್ ಮಾಡಿ ಹಚ್ಚಬಹುದು ಅಥವಾ, ಅದನ್ನು ಎಣ್ಣೆಯ ಜೊತೆಗೆ ಕುದಿಸಿ ನಂತರ ಆ ಎಣ್ಣೆಯನ್ನು ಹಚ್ಚಬಹುದಾಗಿದೆ. * ಶುದ್ಧವಾದ ತೆಂಗಿನ ಎಣ್ಣೆಯನ್ನು ಸಮರ್ಪಕವಾಗಿ ಬಳಸುತ್ತ ಬಂದರೆ, ಕೂದಲಿನ ಸೌಂದರ್ಯ ಹೆಚ್ಚುತ್ತದೆ. (ಕುಂದಾಪ್ರ ಡಾಟ್ ಕಾಂ) * ಮೆಂತೆಕಾಳನ್ನು ನೆನೆಸಿ ಅದನ್ನು ರುಬ್ಬಿ ತಲೆಗೆ ಪ್ಯಾಕ್ ಹಾಕಿ ತೊಳೆಯುತ್ತ ಬಂದರೆ, ಒಣ ತ್ವಚೆಯ ಕಡಿಮೆಯಾಗುವುದರ ಜೊತೆಗೆ ಹೊಟ್ಟು ನಿವಾರಣೆಯಾಗುತ್ತದೆ. * ಮೊಟ್ಟೆಯ ಬಿಳಿ ಭಾಗವನ್ನು ವಾರಕೊಮ್ಮೆ ತಲೆಗೆ ಹಚ್ಚಿ ಅರ್ಧಗಂಟೆಯ ನಂತರ ಅದನ್ನು ತೊಳೆಯಿರಿ. ಹೀಗೆ ಮಾಡುತ್ತ ಬಂದರೆ ಕೂದಲ ಗುಣಮಟ್ಟ ಹೆಚ್ಚುತ್ತದೆ. * ಲೋಳೆಸರ(ಅಲೋವೆರಾ) ಕೂದಲು ಕವಲು…
ಕುಂದಾಪುರ: ಸಂವಿಧಾನದ ಮೂರು ಅಂಗಗಳು ಇಂದು ಪರಿಸ್ಥಿತಿಗೆ ಅನುಗುಣವಾಗಿ ರಾಜಿಯಾಗಿ ತನ್ನ ಮೌಲ್ಯ ಕಳೆದುಕೊಳ್ಳುತ್ತಿರುವ ದಿನಗಳಲ್ಲಿ ನಾಲ್ಕನೇ ಅಂಗವಾದ ಪತ್ರಿಕಾರಂಗ ತತ್ವಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕುಂದಾಪುರದ ಹಿರಿಯ ಪತ್ರಕರ್ತ ಜಾನ್ ಡಿಸೋಜಾ ಹೇಳಿದರು. ಅವರು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಮಹಾತ್ಮಾ ಗಾಂಧಿ ಸಭಾಭವನದಲ್ಲಿ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಸಮಾಜ ವಿಜ್ಞಾನ ಸಂಘ ಮತ್ತು ಬ್ರಹ್ಮಾವರ ವಲಯ ಕಾರ್ಯನಿರತ ಪತ್ರಕರ್ತರ ಸಂಘ ಸಹಯೋಗದಲ್ಲಿ ಆಯೋಜಿಸಲಾದ ಪತ್ರಿಕೋದ್ಯಮ ಪ್ರವೇಶ ಏಕೆ ಮತ್ತು ಹೇಗೆ ಎನ್ನುವ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪತ್ರಿಕೆಗಳು ಇಂದು ಸೇವೆಯ ಚೌಕಟ್ಟನ್ನು ಮೀರಿ ಉದ್ಯಮವಾಗಿ ಬೆಳೆದು ನಿಂತಿದೆ. ಒಂದು ಪತ್ರಿಕೆ ಅಥವಾ ದೃಶ್ಯ ಮಾಧ್ಯಮ ಪ್ರಾರಂಭವಾದರೆ ಅಲ್ಲಿ ಸಾಕಷ್ಟು ಉದ್ಯೋಗವಕಾಶಗಳ ತೆರೆದುಕೊಳ್ಳತ್ತದೆ, ಪತ್ರಿಕೋದ್ಯಮ ಪ್ರವೇಶಕ್ಕೆ ಪತ್ರಿಕೋದ್ಯಮ ಕೋರ್ಸ್ ಮಾಡಬೇಕೆಂಬ ನಿಯಮವಿಲ್ಲ. ಆದರೆ ಇಂದು ಪತ್ರಿಕೋದ್ಯಮ ಪದವಿ ಅಥವಾ ಕೋರ್ಸ್ಗಳ ಮಾಡಿಯೂ ಅಲ್ಲಿ ಉದ್ಯೋಗವನ್ನು ಸುಲಭವಾಗಿ ಗಿಟ್ಟಿಸಬಹುದು. ಬರೆಯುವ, ಪ್ರಶ್ನಿಸುವ ಮನೋಭಾವ ಮತ್ತು ಸಾಮಾಜಿಕ…
ಕುಂದಾಪುರ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಭವಿಷ್ಯದ ಭದ್ರ ಬುನಾದಿಯಾದ ಹಕ್ಲಾಡಿ ಸೂರಪ್ಪ ಶೆಟ್ಟಿ ಸರಕಾರಿ ಪ್ರೌಢಶಾಲೆ ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿದೆ. ಸುವರ್ಣ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಶಾಲೆಯ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಶಿಕ್ಷಕರು, ಎಸ್.ಡಿ.ಎಂ.ಸಿ ಸದಸ್ಯರು, ಊರವರು ಒಂದಾಗಿ ನಿಂತಿದ್ದು ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ಜರುಗಲಿದೆ. ಡಿಸೆಂಬರ್ 5ರ ಬೆಳಿಗ್ಗೆ 8ಗಂಟೆಗೆ ಮಾಣಿಕೊಳಲು ಶ್ರೀಚನ್ನಕೇಶ್ವರ ದೇವಸ್ಥಾನದಿಂದ ಕುಂದರಬಾಡಿ ಮಾಸ್ತಿಕಟ್ಟೆಯವರೆಗೆ ಸುವರ್ಣ ಪುರಮೆರವಣಿಗೆ ನಡೆಯಲಿದೆ. 9ಗಂಟೆಗೆ ಸುವರ್ಣ ಮಹೋತ್ಸವದ 1ನೇ ವೇದಿಕೆಯಲ್ಲಿ ಆರಂಭಗೊಳ್ಳುವ ಕಾರ್ಯಕ್ರಮಕ್ಕೆ ಗೌರಿ ದೇವಾಡಿಗ ಚಾಲನೆ ನೀಡಲಿದ್ದಾರೆ, ಶಾಲಾ ಮುಖಮಂಟಪವನ್ನು ಆನಗಳ್ಳಿ ಶ್ರೀ ನರಸಿಂಹ ಶೆಟ್ಟಿ ಬಾಳೆಮನೆ ಉದ್ಘಾಟಿಸಲಿದ್ದಾರೆ. ರಾತ್ರಿ 7ಗಂಟೆಗೆ ಸುವರ್ಣ ಮಹೋತ್ಸವ 2ನೇ ವೇದಿಕೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ವಹಿಸಲಿದ್ದು, ಉಸ್ತುವಾರಿ ಮತ್ತು ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ಸುವರ್ಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಹೂವಿ ನಾಟಕ, ಹಿರಿಯ ವಿದ್ಯಾರ್ಥಿಗಳಿಂದ…
ಕುಂದಾಪುರ: ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿಯೇ ಶಿಕ್ಷಣದೊಂದಿಗೆ ಅಪರಾಧ ತಡೆಯ ಬಗ್ಗೆ ಅರಿವು ಹಾಗೂ ಜಾಗೃತಿ ಮೂಡಿಸುವುದು ಅತ್ಯಗತ್ಯ. ಪಠ್ಯಪುಸ್ತಕಗಳಲ್ಲಿ ಈ ಬಗ್ಗೆ ಒಂದು ಪಠ್ಯವನ್ನು ಮೀಸಲಿಡುವತ್ತ ಶಿಕ್ಷಣ ತಜ್ಞರು ಹಾಗೂ ಸರಕಾರ ಮನಸ್ಸು ಮಾಡಬೇಕಿದೆ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಶೇಖರ ವಿ. ಪಾಟೀಲ್ ಹೇಳಿದರು. ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಇಲ್ಲಿನ ಜ್ಯೂನಿಯರ್ ಕಾಲೇಜು ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ಅಪರಾಧ ತಡೆ ಮಾಸಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ವ್ಯಕ್ತಿ, ವಿಚಾರ, ವ್ಯಕ್ತಿತ್ವದಲ್ಲಿ ವೈವಿಧ್ಯತೆ ವ್ಯತ್ಯಾಸ ಇದ್ದೇ ಇರುತ್ತದೆ. ವ್ಯತ್ಯಾಸವಿದ್ದಲ್ಲಿ ಸಂಘರ್ಷ ಸಾಮಾನ್ಯ. ಇದನ್ನು ಹೊರತಾದ ಸಮಾಜವನ್ನು ಕಾಣಲು ಸಾಧ್ಯವಿಲ್ಲ. ಸಂಪೂರ್ಣ ಅಪರಾಧರಹಿತ ಸಮಾಜವನ್ನು ನಿರೀಕ್ಷಿಸುವುದು ಸಾಧ್ಯವಿಲ್ಲ. ಆದರೆ ಅಪರಾಧ ನಿಯಂತ್ರಣ ಸಾಧ್ಯವಿದೆ. ಈ ಬಗ್ಗೆ ಅರಿವು ಮೂಡಿಸುವುದು ಜಾಗೃತಿ ಮೂಡಿಸುವುದು ಅಗತ್ಯ ಎಂದವರು ಹೇಳಿದರು. ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷೆ ಡಾ| ಭವಾನಿ, ಜ್ಯೂನಿಯರ್ ಕಾಲೇಜಿನ ಪ್ರಾಂಶುಪಾಲರಾದ ಸುಬ್ರಮಣ್ಯ ಜೋಷಿ ಅತಿಥಿಗಳಾಗಿ ಉಪಸ್ಥಿತರಿದ್ದರು. ಬೈಂದೂರು ವೃತ್ತ ನಿರೀಕ್ಷಕ ಸುದರ್ಶನ ವೇದಿಕೆಯಲ್ಲಿದ್ದರು. ಕುಂದಾಪುರ…
ಭಂಡಾರ್ಕಾರ್ಸ್ ಕಾಲೇಜಿನ ಸಂಸ್ಥಾಪಕರ ಸಂಸ್ಮರಣೆ ಮತ್ತು ನವೀಕೃತ ಆರ.ಎನ್.ಶೆಟ್ಟಿ ಸಭಾಂಗಣವನ್ನು ಉದ್ಘಾಟನೆ ಕುಂದಾಪುರ: ಶಿಕ್ಷಣವೆನ್ನುವುದು ಬದುಕಿಗೆ ದಾರೀಪವಾಗುವುದಲ್ಲದೇ ಸಮೃದ್ಧ ಬದುಕನ್ನು ಕಟ್ಟಿಕೊಡುತ್ತದೆ. ಅಂತಹ ಶಿಕ್ಷಣಕ್ಕೆ ಅವಕಾಶ ಮಾಡಿಕೊಟ್ಟವರನ್ನು ಸ್ಮರಿಸುವುದು ಅತ್ಯಗತ್ಯ ಎಂದು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ನ ಅಧ್ಯಕ್ಷ ಡಾ. ಹೆಚ್. ಎಸ್. ಬಲ್ಲಾಳ್ ಹೇಳಿದರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಸಂಸ್ಥಾಪಕರ ಸಂಸ್ಮರಣೆ ಮತ್ತು ನವೀಕೃತ ಆರ.ಎನ್.ಶೆಟ್ಟಿ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿನಾಡಿದ ಅವರು ಜನನ ಮರಣಗಳ ನಡುವಿನ ಕಿರು ಅವಧಿಯ ಬದುಕಿನಲ್ಲಿ ಪರೋಪಕಾರಿಯಾಗದಿದ್ದರೇ ಬದುಕಿದ್ದೂ ಇಲ್ಲದಂತಾಗುತ್ತದೆ ಎಂದರು. ಕಾರ್ಯಕ್ರಮದ ಮುಖ್ಯಅತಿಥಿಗಲಾಗಿ ಆಗಮಿಸಿದ್ದ ಯುವಜನ ಮತ್ತು ಮೀನುಗಾರಿಕೆ ಸಚಿವ ಅಭಯಚಮದ್ರ ಜೈನ್ ಮಾತನಾಡಿ ಶಿಕ್ಷಣವೆನ್ನುವುದು ಮರೀಚಿಕೆಯಾಗಿದ್ದ ಕಾಲದಲ್ಲಿ ಶಿಕ್ಷಣಸಂಸ್ಥೆಗಳನ್ನು ಸ್ಥಾಪಿಸಿ ಜನರ ವಿದ್ಯಾವಂತರಾಗಬೇಕು ಮತ್ತು ಉದ್ಯೋಗಿಗಲಾಗಬೇಕೆಂಬ ಕನಸನ್ನು ನನಸಾಗಿಸಿದ ಸ್ಥಾಪಕರಿಗೆ ಕೃತಜ್ಞರಾಗಿರುವುದು ನಮ್ಮ ಕರ್ತವ್ಯ. ಜನರ ಸೇವೆಗಾಗಿ ಪರೋಪಕಾರಿಗಳಾಗಿ ಬದುಕಬೇಕು. ಅಲ್ಲದೇ ವಿದ್ಯಾಸಂಸ್ಥೆಗಳ ಪರಿಪೂರ್ಣ ಅಭಿವೃದ್ಧಿಗಾಗಿ ಕಾಯಕಲ್ಪವನ್ನು ತೊಡಬೇಕು ಮತ್ತು ಶ್ರಮಿಸಬೇಕು ಎಂದು ಕರೆ ನೀಡಿದರು. ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್…
