ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನ ಎಂಬುವುದು ಮಹತ್ತರವಾದ ಘಟ್ಟ. ಈ ಆರಂಭಿಕ ಶೈಕ್ಷಣಿಕ ದಿನಗಳನ್ನು ನೈಜವಾಗಿ ಸದ್ಭಳಕೆ ಮಾಡಿಕೊಳ್ಳಿ ಎಂದು ಕೋಟದ ಶೈಕ್ಷಣಿಕ ಪ್ರೋತ್ಸಾಹಕ, ಉದ್ಯಮಿ ಆನಂದ್ ಸಿ. ಕುಂದರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೋಟ-ಪಡುಕರೆ ಇದರ 2025-26ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ತಮ್ಮ ಗೀತಾನಂದ ಫೌಂಡೇಶನ್ ವತಿಯಿಂದ ಕೊಡಮಾಡಿದ ವಿದ್ಯಾನಿಧಿಯನ್ನು ಹಸ್ತಾಂತರಿಸಿ ಮಾತನಾಡಿದರು. ಗ್ರಾಮೀಣ ಪರಿಸರದ ಮಕ್ಕಳ ವಿದ್ಯಾರ್ಜನೆಯಿಂದ ವಂಚಿತಗೊಳ್ಳಬಾರದೆಂದು ಈ ಭಾಗದಲ್ಲಿ ಶಿಕ್ಷಣ ಸಂಸ್ಥೆಯನ್ನು ಅಭಿವೃದ್ಧಿಗೊಳಿಸಲಾಗಿದೆ.ಗೀತಾನಂದ ಫೌಂಡೇಶನ್ ನಿರಂತರವಾಗಿ ಶೈಕ್ಷಣಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡುತ್ತಿದೆ ಸರಕಾರಿ ವ್ಯವಸ್ಥೆಯನ್ನು ಪ್ರತಿಯೊರ್ವರು ಸದ್ಭಳಕೆ ಮಾಡಿಕೊಳ್ಳಿ ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನಲ್ಲಿ ಉನ್ನತ ಶ್ರೇಣಿಯಲ್ಲಿ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್ ವತಿಯಿಂದ ವಿಧ್ಯಾನಿಧಿಯನ್ನು ಹಸ್ತಾಂತರಿಸಲಾಯಿತು.ಅಲ್ಲದೆ ಉಪನ್ಯಾಸಕಿ ಡಾ. ಸುನಿತಾ ವಿ.ಸುಬ್ರಹ್ಮಣ್ಯ ಅವರು ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವೇದಿಕೆಯಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ ಸಂಘಟನೆಗಳಲ್ಲೊಂದಾದ ಕರ್ನಾಟಕ ಸಂಘ ಕತಾರ್ನ 2026–2028ನೇ ಸಾಲಿನ ನೂತನ ಆಡಳಿತ ಸಮಿತಿಯನ್ನು ಐಸಿಸಿ ಸಭಾಂಗಣದಲ್ಲಿ ನಡೆದ ವಾರ್ಷಿಕ ಸರ್ವಸದಸ್ಯರ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು. ಸಂಘದ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಸಭೆಯಲ್ಲಿ ಉಪಸ್ಥಿತರಿದ್ದ ಅಪಾರ ಸಂಖ್ಯೆಯ ಸದಸ್ಯರು ಅವರ ನಾಯಕತ್ವದ ಮೇಲೆ ಅಪಾರ ವಿಶ್ವಾಸ ಮತ್ತು ಬೆಂಬಲ ವ್ಯಕ್ತಪಡಿಸಿದರು. ಕರ್ನಾಟಕ ಮೂಲದ ಕುಂದಾಪುರ ತಾಲ್ಲೂಕಿನ ಬೈಂದೂರಿನವರಾದ ಸುಬ್ರಮಣ್ಯ ಹೆಬ್ಬಾಗಿಲು ಅವರು ಭಾರತೀಯ ಸಮುದಾಯದಲ್ಲಿ ಸಾಮಾಜಿಕ ಮತ್ತು ಸಮುದಾಯ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಅವರು ಹಲವು ವರ್ಷಗಳಿಂದ ಮಾನವೀಯ, ಸಾಂಸ್ಕೃತಿಕ ಹಾಗೂ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರು ಸಮುದಾಯದ ಗೌರವಾನ್ವಿತ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಸುಬ್ರಮಣ್ಯ ಹೆಬ್ಬಾಗಿಲು ಅವರು ಈ ಹಿಂದೆ ಭಾರತೀಯ ಸಾಂಸ್ಕೃತಿಕ ಕೇಂದ್ರದ (ICC) ಉಪಾಧ್ಯಕ್ಷರಾಗಿ, ಭಾರತೀಯ ಕ್ರೀಡಾ ಕೇಂದ್ರದ (ISC) ಸಲಹಾ ಮಂಡಳಿ ಸದಸ್ಯರಾಗಿ ಹಾಗೂ ಭಾರತೀಯ ಸಮುದಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಆರ್ಥಿಕ ವರ್ಷ 2013-14 ರಿಂದ 2018-19ನೇ ಸಾಲಿನಲ್ಲಿ ಅರಿವು, ಶ್ರಮಶಕ್ತಿ, ಸ್ವಾವಲಂಬನಾ, ಎನ್.ಎಂ.ಎಫ್.ಡಿ.ಸಿ ನೇರ ಸಾಲ, ಮೈಕ್ರೋ ಕಿರುಸಾಲ, ಪಶುಸಂಗೋಪನಾ ಯೋಜನೆ ಮುಂತಾದ ವಿವಿಧ ಯೋಜನೆಗಳಡಿ ನೀಡಲಾಗಿರುವ ಸಾಲದ ಮೊತ್ತವನ್ನು ಪೂರ್ಣವಾಗಿ ಅಸಲು ಪಾವತಿಸುವ ಫಲಾನುಭವಿಗಳಿಗೆ ಸರ್ಕಾರದ ಆದೇಶದಂತೆ ಒಂದಾವರ್ತಿ ತೀರುವಳಿ ಯೋಜನೆ(ಒ.ಟಿ.ಎಸ್) ಮೂಲಕ ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆ. ಈ ಯೋಜನೆಯಡಿ ಫಲಾನುಭವಿಯು ಸಾಲದ ಖಾತೆಯಲ್ಲಿ ಬಾಕಿ ಉಳಿದಿರುವ ಮೊತ್ತದ ಶೇ.25 ರಷ್ಟು ಮೊತ್ತವನ್ನು ಪಾವತಿಸಿ, ಯೋಜನೆಯಡಿ ನೋಂದಾಯಿಸಿಕೊಂಡು 2026 ರ ಮೇ 1 ರಿಂದ ಜುಲೈ 31 ರವರೆಗೆ ಬಾಕಿ ಉಳಿದ ಪೂರ್ಣ ಮೊತ್ತವನ್ನು ಪಾವತಿಸಿ ಸರ್ಕಾರದ ಒಟಿಎಸ್ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ನಿಗದಿತ ಸಮಯದಲ್ಲಿ ಸಾಲವನ್ನು ಪಾವತಿಸದಿದ್ದಲ್ಲಿ ನಿಗಮದ ನಿಯಮಾವಳಿಯಂತೆ ಮರುಪಾವತಿಸಿದ ಮೊತ್ತವನ್ನು ಸಾಲದ ಖಾತೆಗೆ ಸರಿಹೊಂದಿಸಲಾಗುವುದು. ಒ.ಟಿ.ಎಸ್ ಬಡ್ಡಿಯನ್ನು ಮನ್ನಾ ಯೋಜನೆ ಅಪೇಕ್ಷಿಸುವ ಫಲಾನುಭವಿಗಳು ನಿಗಮದ ವೆಬ್ಸೈಟ್ https://kmdconline.karnataka.gov.in/Portal/ots-repayment ಮೂಲಕ ಅಥವಾ ನಿಗಮದ ಕಚೇರಿಯಾದ ಮೌಲಾನಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪಿ.ಯು.ಸಿ ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದ್ದು, ಹೊಸ ಅರ್ಜಿಗಳನ್ನು ತಾಲೂಕು ಕಲ್ಯಾಣ ಅಧಿಕಾರಿಗಳು ಪರಿಶೀಲನೆ ಮಾಡಲು ಜೂ.17 ಕೊನೆಯ ದಿನ, ಜೂ.19 ರಂದು ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು. ಜೂ. 25 ರ ವರೆಗೆ ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಕೊನೆಯ ದಿನವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೇ.26 ರಿಂದ ಮುಂಗಾರು ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಸೇರಿದಂತೆ ಮತ್ತಿತರ ಅವಘಡಗಳ ಪರಿಸ್ಥಿತಿಗಳನ್ನು ಎದುರಿಸಲು ಎಲ್ಲಾ ಇಲಾಖಾ ಅಧಿಕಾರಿಗಳು ರಕ್ಷಣಾ ಸಾಮಾಗ್ರಿಗಳೊಂದಿಗೆ ಸನ್ನದ್ಧರಾಗಿ, ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಪ್ರಕೃತಿ ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆ (ಮಾನ್ಸೂನ್) ಪ್ರಾರಂಭವಾಗಲಿರುವ ಹಿನ್ನೆಲೆ, ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಗಾರು ಮಳೆ ಪ್ರಾರಂಭಕ್ಕೂ ಮುನ್ನ ಚರಂಡಿ, ತೋಡುಗಳನ್ನು ಸ್ವಚ್ಛಗೊಳಿಸಿ, ಮಳೆಯ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮಗಳನ್ನು ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಕೈಗೊಳ್ಳುವಂತೆ ನೋಡಿಕೊಳ್ಳಬೇಕು ಇದರಿಂದ ರೋಗ ರುಜಿನಗಳು ಹರಡದಂತೆ ತಡೆಯಲು ಸಾಧ್ಯ ಎಂದ ಅವರು, ಅತಿವೃಷ್ಠಿ ಸಂಭವಿಸಿದಾಗ ತುರ್ತು ವಿಪತ್ತು ನಿರ್ವಹಣೆಗಾಗಿ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಬೇಕೆಂದು ಸೂಚನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟಿಸಿದ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶದಲ್ಲಿ ಕುಂದಾಪುರದ ಯಡಾಡಿ-ಮತ್ಯಾಡಿಯ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯು ಉತ್ತಮ ಸಾಧನೆ ಮಾಡಿದೆ. ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಒಟ್ಟು 625 ಅಂಕಗಳಿಗೆ 621 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಮಟ್ಟದಲ್ಲಿ 5ನೇ ರ್ಯಾಂಕ್ ಪಡೆದು ಶಾಲೆಗೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ಈ ಬಾರಿ ಪರೀಕ್ಷೆಗೆ ಹಾಜರಾದ ಶಾಲೆಯ ಒಟ್ಟು 129 ವಿದ್ಯಾರ್ಥಿಗಳ ಪೈಕಿ ಎಲ್ಲರೂ ಉತ್ತೀರ್ಣರಾಗುವ ಮೂಲಕ ಶಾಲೆಗೆ ಶೇ. 100ರಷ್ಟು ಫಲಿತಾಂಶ ಲಭಿಸಿದೆ. ಶ್ರೇಯಸ್ ಎಸ್ ಚಿಕ್ಕಮಠ (615) ಆಯಿಷ ಆನಾಮ್ (611) ಮನ್ವಿತ್ ಬಿ (611) ಅಭಿಕ್ಷಾ(610) ಸೂರ್ಯಪ್ರಕಾಶ್ ಬಿ.ಗಾಣಿಗ (610) ನಿವೇದಿತಾ ಚಂದ್ರ ಮೌಳೇಶ್ವರ ಬಾದಾಮಿ (609) ಶ್ರೀಹರಿ ಮನೀಷ್ (607) ಸನ್ವಿತ್ ಜಿ ಪೂಜಾರಿ (607) ಚಾರ್ವಿ ಪಿ ಶೆಟ್ಟಿ (605) ಕೌಶಿಕ್ ಶೆಣೈ (600) ಶ್ರೇಯಾ (599)…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶಂಕರನಾರಾಯಣದ ಮದರ್ ತೆರೆಸಾ ಪಿಯು ಕಾಲೇಜಿನಲ್ಲಿ ವಿಜ್ಞಾನಾಧಾರಿತ ಶಿಕ್ಷಣವನ್ನು ಸ್ಪರ್ಧಾತ್ಮಕ ಯುಗದ ಅಗತ್ಯಗಳಿಗೆ ತಕ್ಕಂತೆ ರೂಪಿಸುತ್ತಾ ಬರಲಾಗುತ್ತಿದ್ದು, ವಿದ್ಯಾರ್ಥಿಗಳ ವಿಶ್ಲೇಷಣಾತ್ಮಕ ಚಿಂತನೆ ಹಾಗೂ ಲಕ್ಷ್ಯಾಧಾರಿತ ಅಭ್ಯಾಸಕ್ಕೆ ಒತ್ತು ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಉತ್ತಮ ಸಾಧನೆಗೈಯುತ್ತಿದ್ದಾರೆ. PCMB ಹಾಗೂ PCMCs ಸಂಯೋಜನೆಗಳ ಮೂಲಕ ಪಿಯು ಬೋರ್ಡ್ ಪಠ್ಯಕ್ರಮದ ಜೊತೆಗೆ JEE Mains, NEET ಹಾಗೂ KCET ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಮನ್ವಯಿತ ತರಬೇತಿ ನೀಡಲಾಗುತ್ತಿದೆ. ಅಧ್ಯಾಯವಾರು ಅಭ್ಯಾಸ, ನಿಯಮಿತ Mock Testಗಳು ಹಾಗೂ ತೀವ್ರ ತರಬೇತಿ ಮೂಲಕ ವಿದ್ಯಾರ್ಥಿಗಳ ಸಿದ್ಧತೆಯನ್ನು ಬಲಪಡಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಯಾವುದೇ ಒತ್ತಡ ನೀಡದೆ, ಸ್ವಾಭಾವಿಕವಾಗಿ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತಾ ಉತ್ತಮ ಫಲಿತಾಂಶ ಸಾಧನೆಗೆ ಶ್ರಮಿಸಲಾಗುತ್ತಿದೆ. ಜೊತೆಗೆ ಪಿಯು ಬೋರ್ಡ್ ಪರೀಕ್ಷೆಗೂ ಸಮಾನ ಮಹತ್ವ ನೀಡಲಾಗುತ್ತಿದ್ದು, ಪಠ್ಯಕ್ರಮದ ಅವಿಭಾಜ್ಯ ಭಾಗವಾದ ಪ್ರಯೋಗಾಲಯ ತರಗತಿಗಳನ್ನು ಯಾವುದೇ ತಾತ್ಕಾಲಿಕ ಕ್ರಮಕ್ಕೆ ಸೀಮಿತಗೊಳಿಸದೆ, ವರ್ಷಪೂರ್ತಿ ನಿಯಮಿತವಾಗಿ ಹಾಗೂ ಕ್ರಮಬದ್ಧವಾಗಿ ನಡೆಸಲಾಗುತ್ತಿದೆ. ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ಸಮತೋಲಿತ ಸಾಧನೆಗೆ ಒತ್ತು ನೀಡಲಾಗುತ್ತಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ.ಏ.23: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 5 ರಡಿ ಹಾಗೂ 308 (ಇ) (ಎಫ್) ರ ಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಉಡುಪಿ ಜಿಲ್ಲೆಯ ಏಳು ತಾಲೂಕುಗಳಿಂದ ಆಯ್ಕೆಯಾಗುವ ಗ್ರಾಮ ಪಂಚಾಯಿತಿ ಚುನಾಯಿತ ಸದಸ್ಯರ ಸಂಖ್ಯೆಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ. ಕುಂದಾಪುರ ತಾಲೂಕು ಗ್ರಾಮ ಪಂಚಾಯಿತಿಗಳು : ಆಲೂರು ಮತ್ತು ಕೆರಾಡಿ ತಲಾ -14, ಚಿತ್ತೂರು-8, ವಂಡ್ಸೆ-7, ಹಕ್ಲಾಡಿ-16, ತ್ರಾಸಿ-8, ಗುಜ್ಜಾಡಿ-16, ಹೆಮ್ಮಾಡಿ-11, ತಲ್ಲೂರು-16, ಹಟ್ಟಿಯಂಗಡಿ-14, ಕರ್ಕುಂಜೆ-11, ಆಜ್ರಿ-19, ಹೊಸಂಗಡಿ-13, ಸಿದ್ಧಾಪುರ-19, ಶಂಕರನಾರಾಯಣ -18, ಅಂಪಾರು-13, ಕಾವ್ರಾಡಿ-16, ಬಳ್ಕೂರು-8, ಬಸ್ರೂರು-17, ಆನಗಳ್ಳಿ-8, ಹಂಗಳೂರು-12, ಕೋಣಿ-10, ಕೋಟೇಶ್ವರ-26, ಬೀಜಾಡಿ-16, ಕುಂಭಾಶಿ ಹಾಗೂ ತೆಕ್ಕಟ್ಟೆ ತಲಾ-14, ಬೇಳೂರು-9, ಕೆದೂರು-10, ಕಾಳಾವರ ಹಾಗೂ ಹೊಂಬಾಡಿ ಮಂಡಾಡಿ ತಲಾ-17, ಮೊಳಹಳ್ಳಿ-11, ಹಾರ್ದಳ್ಳಿ ಮಂಡಳ್ಳಿ-13, ಹಾಲಾಡಿ-11, ಹೆಂಗವಳ್ಳಿ-9, ಅಮಾಸೆಬೈಲು-19, ಇಡೂರು ಕುಂಜ್ಞಾಡಿ-12, ಹೊಸಾಡು-15, ಕಟ್ ಬೆಲ್ತೂರು ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮದರ್ ತೆರೆಸಾ ಪಿಯು ಕಾಲೇಜು, ಶಂಕರನಾರಾಯಣವು ಮೌಲ್ಯಾಧಾರಿತ ಶಿಕ್ಷಣಕ್ಕೆ ಹೆಸರುವಾಸಿಯಾಗಿದ್ದು, ಅಂಕಗಳ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ಸಮಾನ ಆದ್ಯತೆ ನೀಡುತ್ತಾ ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ನಾಗರಿಕರಾಗಿ ರೂಪಿಸುತ್ತಾ ಬರುತ್ತಿದೆ. ಹೊರಗಿನ ಹೋಲಿಕೆಗಳಿಗಿಂತ, ತನ್ನದೇ ಹಿಂದಿನ ಸಾಧನೆಗಳನ್ನು ಮೀರಿಸುವುದೇ ಸಂಸ್ಥೆಯ ಪ್ರಮುಖ ಧ್ಯೇಯವಾಗಿದೆ ಹಾಗೂ ಪ್ರವೇಶಾತಿ ಸಮಯದಲ್ಲಿ ಅಂಕಗಳ ಮಿತಿ ಇಲ್ಲದೆ ಎಲ್ಲಾ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುತ್ತಿದ್ದು, ಕಡಿಮೆ ಅಂಕ ಗಳಿಸಿ ಬಂದವರೂ ಕೂಡ ಇಲ್ಲಿ ಉನ್ನತ ಸಾಧನೆ ಮಾಡುವಂತಹ ವಾತಾವರಣವನ್ನು ಕಲ್ಪಿಸಲಾಗುತ್ತದೆ. ಇಲ್ಲಿನ ವಾಣಿಜ್ಯ ವಿಭಾಗದಲ್ಲಿ EBACs ಹಾಗೂ EBAS ಸಂಯೋಜನೆಗಳು ಲಭ್ಯವಿದ್ದು, ವಿಭಾಗದ ಮುಖ್ಯಸ್ಥರು ಹಾಗೂ ಕಾಲೇಜಿನ ಉಪಪ್ರಾಂಶುಪಾಲರಾದ ಕುಮಾರಿ ಗೀತಾ ಇವರ ನೇತೃತ್ವದಲ್ಲಿ ನುರಿತ ಶಿಕ್ಷಕವೃಂದವನ್ನು ವಿಭಾಗವು ಹೊಂದಿಕೊಂಡಿದೆ. ಈ ಅನುಭವಿ ಉಪನ್ಯಾಸಕರ ಮಾರ್ಗದರ್ಶನದ ಮೂಲಕ ಸಂಸ್ಥೆಯು ವಿದ್ಯಾರ್ಥಿಗಳಲ್ಲಿನ ಸಾಮರ್ಥ್ಯವನ್ನು ಹೊರತೆಗೆದು, ಅವರನ್ನು ರಾಜ್ಯಮಟ್ಟದ ಸಾಧನೆ ಮಾಡುವ ದಿಕ್ಕಿನೆಡೆಗೆ ಪ್ರೇರೇಪಿಸುತ್ತಿದೆ. ಈ ವರ್ಷದ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದ 65 ವಿದ್ಯಾರ್ಥಿಗಳಲ್ಲಿ 64 ಮಂದಿ ತಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲ ಮೇಲ್ಗಂಗೊಳ್ಳಿ ಗಂಗೊಳ್ಳಿ ಇದರ 39ನೇ ವಾರ್ಷಿಕೋತ್ಸವ, ಅಮೃತಾ ಯುವತಿ ಮಂಡಲ ಮತ್ತು ಅರ್ಚನಾ ಮಹಿಳಾ ಮಂಡಲ ಮೇಲ್ಗಂಗೊಳ್ಳಿ ಇದರ 39ನೇ ವಾರ್ಷಿಕೋತ್ಸವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಮೇಲ್ಗಂಗೊಳ್ಳಿಯ ಪೋರ್ಟ್ ಬಂಗ್ಲೆ ಬಳಿ ಮಂಗಳವಾರ ನಡೆಯಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ಚಂದ್ರ ಖಾರ್ವಿ ಧ್ವಜಾರೋಹಣ ನೆರವೇರಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಗಂಗೊಳ್ಳಿ ಜೈ ಭೀಮ್ ಸಂಘಟನೆಯ ಪ್ರಧಾನ ಸಂಚಾಲಕ ಜಗದೀಶ ಗಂಗೊಳ್ಳಿ, ಬೈಂದೂರು ಯುವ ಬಂಟರ ಸಂಘದ ಅಧ್ಯಕ್ಷ ಗುರುರಾಜ್ ಶೆಟ್ಟಿ ಶುಭ ಹಾರೈಸಿದರು. ಈ ಸಂದರ್ಭ ಸಮಾಜಸೇವಕ ಕೊತ್ವಾಲ್ ಪದ್ಮನಾಭ ಶೇರುಗಾರ್, ರಾಷ್ಟ್ರ ಮಟ್ಟದ ಕ್ರೀಡಾಪಟು ಕೀರ್ತನಾ ಎಸ್. ಕಿರಿಮಂಜೇಶ್ವರ, ಯಕ್ಷಗಾನ ಭಾಗವತ ಶಂಕರ ಬಾಳ್ಕುದ್ರು, 2025ರ ಸಾಲಿನ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ರ್ಯಾಂಕ್ ಪಡೆದ…
