ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿಟ್ಟೆ ಎನ್. ಎಂ.ಎ.ಎಂ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಹಾಯಕ ಪ್ರಾಧ್ಯಾಪಕ ಸವಿಧನ್ ಶೆಟ್ಟಿ ಸಿ.ಎಸ್. ಅವರಿಗೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಸುರತ್ಕಲ್ ಡಾಕ್ಟರೇಟ್ ಪದವಿ ನೀಡಿದೆ. ಇತ್ತೀಚೆಗೆ ನಡೆದ 23ನೇ ವಾರ್ಷಿಕ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ಅವರು ಮಂಡಿಸಿದ ಎನ್. ಚಾನೆಲ್ ಮಾಡೆಲ್ಗಳು ಮತ್ತು ಕಾರ್ಯಕ್ರಮತೆಯ ವಿಶ್ಲೇಷಣೆಯ ವೈವಿಧ್ಯತೆಯ ಪ್ರಸಾರ ಮತ್ತು ದೋಷ ನಿಯಂತ್ರಣ ಕೋಡಿಂಗ್ ಯೋಜನೆಗಳು ನೀರಿನ ಅಡಿಯಲ್ಲಿ ಲಂಬವಾದ ವೈರ್ಲೆಸ್ ಅಪ್ಟಿಕಲ್ ಸಂವಹನ ಲಿಂಕ್ಗಳು” ಎಂಬ ವಿಷಯಕ್ಕೆ ಪ್ರೊ. ಯು. ಶ್ರೀಪತಿ ಅಚಾರ್ಯ ಅವರು ಮಾರ್ಗದರ್ಶನ ಪಡೆದು ಪ್ರಬ೦ಧ ಮಂಡಿಸಿದ್ದರು. ಸವಿಧನ್ ಶೆಟ್ಟಿ ಅವರು ಪಿಡಬ್ಲ್ಯೂಡಿ, ನಿವೃತ್ತ ಶೆಟ್ಟಿ ಎಕ್ಸಿಕ್ಯೂಟಿವ್ ಇಂಜೀನಿಯರ್ ಮೇಪು ಶಶಿಧರ ಶೆಟ್ಟಿ ಮತ್ತು ಹೊಳಗೆ ವಿಮಲಾ ಎಸ್. ಶೆಟ್ಟಿಯವರ ಪುತ್ರ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದ.ಕುಂದಾಪುರ: ಉಡುಪಿ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು 2025-26ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಶಿಕ್ಷಣ ಹಂತದ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಾದ ಜಾನಪದ ಗೀತೆಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ಈ ಕೆಳಕಂಡ ವಿವಿಧ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ರೈತರಿಗೆ ಕಾಳುಮೆಣಸು, ಗೇರು, ಅಂಗಾಂಶ ಬೆಳೆ, ಹೈಬ್ರಿಡ್ ತರಕಾರಿ ಹೊಸ ತೋಟಗಳ ಸ್ಥಾಪನೆಗೆ ಶೇ. 50 ರ ಸಹಾಯಧನ, ಪ್ಲಾಸ್ಟಿಕ್ ಹೊದಿಕೆ ಅಳವಡಿಸಲು ಶೇ. 50 ರ ಸಹಾಯಧನ, ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಗರಿಷ್ಠ 0.75 ಲಕ್ಷ ರೂ.ಗಳ ಸಹಾಯಧನ ಲಭ್ಯವಿದೆ. ತೋಟಗಾರಿಕೆ ಬೆಳೆಗಳಲ್ಲಿ ನೀರಿನ ಸಮರ್ಪಕ ಬಳಕೆಗಾಗಿ ಹನಿ ನೀರಾವರಿ/ತುಂತುರು ನೀರಾವರಿ ಅಳವಡಿಕೆಗೆ ರೈತರಿಗೆ ಶೇ. 90 ರಷ್ಟು ಸಹಾಯಧನ ಲಭ್ಯವಿದ್ದು, ಮೊದಲ 5 ಎಕರೆ ವರೆಗೂ ಶೇ.90 ರಷ್ಟು ಹಾಗೂ ನಂತರ 5 ಎಕರೆಯಿಂದ 12.50 ಎಕರೆ ವರೆಗೂ ಮಾರ್ಗಸೂಚಿಯನ್ವಯ ಶೇ. 45 ರಂತೆ ಸಹಾಯಧನ ನೀಡಲಾಗುವುದು. ಭವಿಷ್ಯದ ಬೆಳೆಯಾದ ತಾಳೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನಗರ ಹಾಗೂ ಗ್ರಾಮೀಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವೇತನ ಸೇರಿದಂತೆ ಮತ್ತಿತರ ಸೌಲಭ್ಯಗಳು ವಿಳಂಬವಿಲ್ಲದೇ ಪ್ರತಿ ತಿಂಗಳು ಪಾವತಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿಯ ನಾಲ್ಕನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಲೋಡರ್, ಕ್ಲೀರ್ಸ್ ಹಾಗೂ ವಾಹನ ಚಾಲಕರುಗಳಿಗೆ ಪ್ರತಿ ಮಾಹೆಯ ವೇತನವನ್ನು ವಿಳಂಬವಿಲ್ಲದೇ ಕಾಲಕಾಲಕ್ಕೆ ಪಾವತಿಸಬೇಕು ಹಾಗೂ ಅವರುಗಳಿಗೆ ಪಿ.ಎಫ್ ಹಾಗೂ ಇ.ಎಸ್.ಐ ಕಟಾವಣೆ ಆಗುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು ಹೊರ ಗುತ್ತಿಗೆದಾರರಿಗೆ ಮಾಸಿಕ ಬಿಲ್ಗಳನ್ನು ಪಾವತಿಸಬೇಕೆಂದು ತಿಳಿಸಿದರು. ಸಫಾಯಿ ಕರ್ಮಚಾರಿ ಹಾಗೂ ಗುರುತಿಸಲ್ಪಟ್ಟ ಮಾನ್ಯುಯಲ್ ಸ್ಕ್ಯಾವೆಂಜರ್ಗಳು ಹಾಗೂ ಮೃತಪಟ್ಟ ಮಾನ್ಯುಯಲ್ ಸ್ಕ್ಯಾವೆಂಜರ್ಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ಜಂಟಿ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಖೋ-ಖೋ ಟೂರ್ನಮೆಂಟ್ 2025-26ರಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ತಂಡ ಜಾಕೆ ಪರಮೇಶ್ವರ್ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಪಿಯನ್ನು ಸತತ 19ನೇ ಬಾರಿ ಹಾಗೂ ಮಹಿಳೆಯರ ತಂಡ ಹೆಚ್.ವಿ.ಕಮಲೇಶ್ ರೋಲಿಂಗ್ ಟ್ರೋಫಿಯನ್ನು ಸತತ 16ನೇ ಬಾರಿ ಪಡೆದು ಅವಳಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಪುರುಷರ ವಿಭಾಗದಲ್ಲಿ ಆಳ್ವಾಸ್ ಪುರುಷರ ಖೋ-ಖೋ ತಂಡ 17-3 ಅಂಕಗಳ ಅಂತರದಿಂದ ಬ್ರಹ್ಮಾವರದ ಎಸ್.ಎಮ್.ಎಸ್ ಕಾಲೇಜಿನ ವಿರುದ್ಧ 14 ಅಂಕ ಹಾಗೂ ಇನ್ನಿಂಗ್ಸ್ ನೊಂದಿಗೆ ಗೆಲುವು ಸಾಧಿಸಿದರೆ, ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ತಂಡ 17-2 ಅಂಕಗಳ ಅಂತರದಲ್ಲಿ ಬೆಳ್ತಂಗಡಿಯ ಜಿ.ಎಫ್.ಜಿ.ಸಿ ಕಾಲೇಜು ವಿರುದ್ಧ 15 ಅಂಕ ಹಾಗೂ ಇನ್ನಿಂಗ್ಸ್ನೊಂದಿಗೆ ಗೆಲುವು ಸಾಧಿಸಿ ಎರಡು ವಿಭಾಗದಲ್ಲಿ “ಸಮಗ್ರ ಪ್ರಶಸ್ತಿ”ಗೆ ಭಾಜನವಾಯಿತು. ವೈಯಕ್ತಿಕ ಪುರುಷರ ಚಾಂಪಿಯನ್ಶಿಪ್ ನಲ್ಲಿ “ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿ”ಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಮಹಿಳಾ ನಿಲಯವನ್ನು ಸ್ವಾಗತ ದ್ವಾರ, ಮದುವೆ ಚಪ್ಪರ, ಮಾವಿನ ತಳಿರು-ತೋರಣ, ಬಣ್ಣ-ಬಣ್ಣದ ರಂಗೋಲಿ ಚಿತ್ತಾರಗಳಿಂದ ಅಲಂಕರಿಸಲಾಗಿದ್ದು, ಯಾವುದೇ ಖಾಸಗಿ ಮದುವೆಗೆ ಕಡಿಮೆಯಿಲ್ಲ ಎಂಬಂತೆ ರಾಜ್ಯ ಮಹಿಳಾ ನಿಲಯದಲ್ಲಿ ನಡೆದ ವಿವಾಹ ಕಾರ್ಯಕ್ರಮವು ನೋಡುಗರನ್ನು ಆಕರ್ಷಿಸುತ್ತಿತ್ತು. ಮದುವೆಗೆ ಆಗಮಿಸಿದ ಗಣ್ಯರನ್ನು, ಅಧಿಕಾರಿಗಳನ್ನು ತಂಪು ಪಾನೀಯ ಹಾಗೂ ಗುಲಾಬಿ ಹೂವುಗಳನ್ನು ನೀಡಿ, ನಿಲಯದ ಸಿಬ್ಬಂದಿಗಳು ಆದರದಿಂದ ಬರಮಾಡಿಕೊಳ್ಳುತ್ತಿರುವ ದೃಶ್ಯ ಮದುವೆಗೆ ಮತ್ತಷ್ಟು ಮೆರುಗು ನೀಡಿತ್ತು. ಇವೆಲ್ಲವೂ ಕಂಡುಬಂದಿದ್ದು, ಇಂದು ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ನಡೆದ ನಿವಾಸಿನಿಯರೇ ವಿವಾಹ ಕಾರ್ಯಕ್ರಮದಲ್ಲಿ ಎನ್ನುವುದೇ ವಿಶೇಷ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಮಹಿಳಾ ನಿಲಯ ಉಡುಪಿ ಇವರ ಸಹಯೊಗದಲ್ಲಿ ಸಂಸ್ಥೆಯ ನಿವಾಸಿನಿಯರಾದ ಚಿ.ಸೌ ಮಲ್ಲೇಶ್ವರಿ ಅವರ ವಿವಾಹವು ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಬಪ್ಪನಾಡು ಇಲ್ಲಿನ ವಾಸಿ ಸತೀಶ್ ಪ್ರಭು ಅವರ ಪುತ್ರ ಚಿ.ಸಂಜಯ ಪ್ರಭು ಅವರೊಂದಿಗೆ ಹಾಗೂ ಇನ್ನೊರ್ವ ನಿವಾಸಿನಿಯಾದ ಚಿ.ಸೌ.ಸುಶೀಲ ಅವರ ವಿವಾಹವು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಬಹುಮಾನ ವಿತರಣಾ ಸಮಾರಂಭವು ಅದ್ಧೂರಿಯಾಗಿ ನಡೆಯಿತು. ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಗಣೇಶ್ ಮೊಗವೀರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯು ಕೇವಲ ನಾಲ್ಕು ಗೋಡೆಗೆ ಸೀಮಿತವಾಗಿರದೆ, ಅವರಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ತೋರ್ಪಡಿಸಲು ಇದೊಂದು ವೇದಿಕೆಯಾಗಿದೆ. ಜೀವನದಲ್ಲಿ ಎದುರಾಗುವ ಸೋಲು ಗೆಲುವನ್ನು ಸಮದೂಗಿಸಿಕೊಂಡು ಹೋಗುವುದನ್ನು ವಿದ್ಯಾರ್ಥಿ ಜೀವನದಲ್ಲಿಯೇ ಅಳವಡಿಸಿಕೊಳ್ಳಬೇಕು ಎಂದರು. ಈ ಸಮಾರಂಭವನ್ನು ಉಡುಪಿ ನೌಕರರ ಸಂಘದ ಅಧ್ಯಕ್ಷರಾದ ಬಸ್ರೂರಿನ ನಿವೇದಿತ ಪ್ರೌಢಶಾಲೆಯ ಶಿಕ್ಷಕರಾದ ಪ್ರದೀಪ್ ಕುಮಾರ್ ಶೆಟ್ಟಿ ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳು ಪಠ್ಯದ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ದೈಹಿಕ ಹಾಗೂ ಮಾನಸಿಕ ಸ್ಥಿರತೆಯನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳನ್ನು ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳಿಸುವಲ್ಲಿ ಸದಾ ಈ ಸಂಸ್ಥೆಯು ಮುಂಚೂಣಿಯಲ್ಲಿದೆ ಎಂದು ತಿಳಿಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಉಡುಪಿ ಜಿಲ್ಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕ್ಷೇತ್ರದಲ್ಲಿ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಬೈಂದೂರು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಜೇಂದ್ರ ಬೇಲೆಮನೆ ಆರೋಪಿಸಿದ್ದಾರೆ. ಬೈಂದೂರು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಜೇಂದ್ರ ಎಸ್ ಬೇಲೆಮನೆ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಕಾಂಗ್ರೇಸ್ ಸರಕಾರದ ಗ್ಯಾರಂಟಿ ಯೋಜನೆಯಿಂದ ಇವತ್ತು ರಾಜ್ಯದಲ್ಲಿ ಮೂಲಭೂತ ಸೌಕರ್ಯಗಳಿಗೆ ಕುಂದುಕೊರತೆಗಳಾಗುತ್ತಿವೆ. ಅದರಲ್ಲಿ ಮುಖ್ಯವಾಗಿ ಸರಕಾರಿ ಉಪ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆರೋಗ್ಯ ಕೇಂದ್ರ, ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಸೇವೆ, ಸಿಬ್ಬಂದಿ ಮತ್ತು ವೈದ್ಯರ ವ್ಯವಸ್ಥೆಯನ್ನು ಸರಿಯಾಗಿ ಕಲ್ಪಿಸುವಂತೆ ಅವರು ಆಗ್ರಹಿಸಿದ್ದಾರೆ. ಸರಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಲು & ಮೂಲಭೂತ ಸೌಕರ್ಯ ಒದಗಿಸಲು ಆಗ್ರಹ: ಸುದ್ದಿಗೊಷ್ಠಿಯಲ್ಲಿ ಬೈಂದೂರು ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಪ್ರದೀಪ್ ಉಪ್ಪುಂದ, ಜಗದೀಶ್ ಆಲoದೂರು, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಆಜ್ರಿ, ಬೈಂದೂರು ಬಿಜೆಪಿ ಮಂಡಲ ಕಾರ್ಯದರ್ಶಿ ರಾಜೇಂದ್ರ ಬಿಜೂರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕುಂಭಾಶಿಯ ವಿಶ್ವಕರ್ಮ ಕರಕುಶಲ ಶಿಲ್ಪ ಕಲಾ ಕೇಂದ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಗುರುವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅಲ್ಲಿನ ಕರಕುಶಲ ಕಾರ್ಯಶೈಲಿ ಹಾಗೂ ಚಟುವಟಿಕೆಗಳನ್ನು ಕಾರ್ಯವೈಕರಿಯ ಬಗ್ಗೆ ಶ್ಲಾಘಿಸಿದ ಅವರು ರಥ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಹಾಗೂ ಪುತ್ರ ರಾಜಗೋಪಾಲ ಆಚಾರ್ಯ ಅವರೊಂದಿಗೆ ಚರ್ಚಿಸಿದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯ, ಪುತ್ರ ರಾಜಗೋಪಾಲ್ ಆಚಾರ್ಯ ಜಿಲ್ಲಾಧಿಕಾರಿ ಅವರನ್ನು ಶಾಲು ಹೋದಿಸಿ ಫಲಪುಷ್ಭ ನೀಡಿ ಗೌರವಿಸಿದರು. ಈ ವೇಳೆ ರಾಜಗೋಪಾಲ ಆಚಾರ್ಯ ಪುತ್ರಿ ಹಾಗೂ ಸಹೋದರ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಿಕ್ಷಕ ಮತ್ತು ವಿದ್ಯಾರ್ಥಿಗಳ ಸಂಬಂಧ ಅವಿನಾಭಾವ ಸಂಬಂಧ. ವಿದ್ಯಾರ್ಥಿ ದಿಸೆಯಲ್ಲಿ ಪಡೆದ ಅನುಭವ ಜೀವನಕ್ಕೆ ಪ್ರೇರಣೆಯಾಗುತ್ತದೆ. ವಿದ್ಯಾರ್ಥಿಗಳಿಗೆ ಜೀವನದಲ್ಲಿ ಸಾಧಿಸುವ ಛಲ ಹೊಂದಿರಬೇಕು. ಪೈಪೋಟಿಯ ಸ್ಪರ್ಧಾತ್ಮಕ ಯುಗದಲ್ಲಿ ಅಂಕಗಳ ಜೊತೆಯಲ್ಲಿ ಕೌಶಲ್ಯ ಬೇಕು. ಮಾತನಾಡುವ ಕಲೆ, ಪರಿಸ್ಥಿತಿಯನ್ನು ಎದುರಿಸುವ ಧೈರ್ಯ ಇರಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಸಿ. ಸುರೇಶ ತುಂಗ ಹೇಳಿದರು. ಅವರು ಗಂಗೊಳ್ಳಿಯ ಸ.ವಿ. ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಶುಕ್ರವಾರ ಜಿ.ಎಸ್.ವಿ. ಅಸೋಸಿಯೇಶನ್ ಗಂಗೊಳ್ಳಿ ಪ್ರಾಯೋಜಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಹಾಗೂ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ನಾವು ಬೆಳೆಯಬೇಕಾದರೆ ನಾವು ಬದಲಾಗಬೇಕು. ಬದಲಾಗಬೇಕಾದರೆ ಕಲಿಯಬೇಕು. ಕಲಿಯಬೇಕಾದರೆ ತೆರೆದುಕೊಳ್ಳಬೇಕು. ನಮ್ಮನ್ನು ನಾವು ಹೊರ ಜಗತ್ತಿಗೆ ಸಮರ್ಪಿಸಿಕೊಳ್ಳಬೇಕು. ಪ್ರತಿಯೊಬ್ಬರಲ್ಲೂ ಉತ್ಸಾಹ ಮತ್ತು ಹಂಬಲ ಇರಬೇಕು. ನಮ್ಮ ಸುತ್ತಮುತ್ತಲು ಇರುವ ಅವಕಾಶಗಳನ್ನು ನೋಡುತ್ತಿರಬೇಕು. ಇವೆಲ್ಲದರ ಮಧ್ಯೆ ತಾಳ್ಮೆ ಅವಶ್ಯಕ. ಮಾತು ಸಾಧನೆಯಾಗಬಾರದು. ಸಾಧನೆ ಮಾತು…
