ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ವಿದ್ಯಾರ್ಥಿ ಸಾಹಿತ್ಯ ಸಂಸ್ಕøತಿ ಸಮ್ಮೇಳನ ಆಳ್ವಾಸ್ ವಿದ್ಯಾರ್ಥಿಸಿರಿ 2016 ಇದರ ಉದ್ಘಾಟನೆಗೆ ಖ್ಯಾತ ರಂಗಭೂಮಿ ಕಲಾವಿದೆ ಡಾ. ಬಿ. ಜಯಶ್ರೀ ಆಗಮಿಸಲಿದ್ದಾರೆ. ನವೆಂಬರ್ 179.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ತಿಳಿಸಿದ್ದಾರೆ. ಸಮ್ಮೇಳನ ಅಧ್ಯಕ್ಷತೆಯನ್ನು ಎಸ್.ಡಿ.ಎಂ. ಪ್ರೌಢಶಾಲೆ ಬೆಳ್ತಂಗಡಿಯ ವಿದ್ಯಾರ್ಥಿನಿ ಕುಮಾರಿ ಅನನ್ಯ ವಹಿಸಲಿದ್ದಾರೆ. ಆಳ್ವಾಸ್ ವಿದ್ಯಾರ್ಥಿ ಸಿರಿ ಪುರಸ್ಕಾರವನ್ನು ಪ್ರಧಾನ ಮಾಡಲಾಗುವುದು. ಪ್ರಸಿದ್ಧ ಮಕ್ಕಳ ಸಾಹಿತಿ ಸಂಘಟಕ ಕಾಸರಗೋಡಿನ ವಿ.ಬಿ.ಕುಳವರ್ಮ ಕುಂಬಳೆ, ಮಂಗಳೂರಿನ ಅನೌಪಚಾರಿಕ ಶಿಕ್ಷಣ ಪ್ರಯೋಗ ಕೇಂದ್ರವಾದ ಗೋಪಾಡ್ಕರ್ ಸ್ವರೂಪ ಅಧ್ಯಯನ ಕೇಂದ್ರ ಹಾಗೂ ಬಾಲ ಪ್ರತಿಭೆ ಚಿಕ್ಕಮಗಳೂರು ಸೈಂಟ್ ಮೇರೀಸ್ ಇಂಟರ್ನ್ಯಾಷನಲ್ ಶಾಲೆಯ ವೈಷ್ಣವಿ ಎನ್.ರಾವ್ ಇವರಿಗೆ ಈ ಬಾರಿಯ ಆಳ್ವಾಸ್ ವಿದ್ಯಾರ್ಥಿಸಿರಿ ಪುರಸ್ಕಾರವನ್ನು ನೀಡಲಾಗುವುದು. ಸಮ್ಮೇಳನದಲ್ಲಿ ಬೆಂಗಳೂರಿನ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಜಾನಕಿ ಸುಂದರೇಶ್ ಇವರು ಯುವಜನತೆ ಮತ್ತು ಸವಾಲುಗಳು ಎನ್ನುವ…
Author: Kundapra.com
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಚಿತ್ರಕಲೆಯ ಕುರಿತು ಜನಜಾಗೃತಿಗಾಗಿ ವ್ಯವಸ್ಥಿತ ರೀತಿಯಲ್ಲಿ ಚಿತ್ರಸಂತೆಯನ್ನು ಆಯೋಜಿಸಿದ್ದು, ನಾಡಿನ ಚಿತ್ರಕಲಾವಿದರಿಗೆ ಭಾಗವಹಿಸಲು ಅವಕಾಶವನ್ನು ಕಲ್ಪಿಸಿದೆ. ನವಂಬರ್ 18ರಿಂದ 20ರವರೆಗೆ ಮೂಡಬಿದಿರೆಯ ವಿದ್ಯಾಗಿರಿಯಲ್ಲಿ ನಡೆಯಲಿರುವ ಆಳ್ವಾಸ್ ನುಡಿಸಿರಿಯ ಸಂದರ್ಭದಲ್ಲಿ ಏರ್ಪಡಿಸಲಾಗಿರುವ ಈ ಚಿತ್ರಕಲಾ ಮೇಳವು ನೋಡುಗರನ್ನು ಆಕರ್ಷಿಸಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ತಿಳಿಸಿದರು. ರಾಜ್ಯದ ವಿವಿಧ ಜಿಲ್ಲೆಗಳ ಚಿತ್ರಕಲಾವಿದರು ತಮ್ಮ ಕಲಾಕೃತಿಗಳ ಪ್ರದರ್ಶನದ ಜೊತೆಗೆ ಸ್ಥಳದಲ್ಲೇ ಮಾರಾಟವನ್ನೂ ಮಾಡಬಹುದು. ಕಲಾ ಶಾಲೆಗಳ ವಿದ್ಯಾರ್ಥಿಗಳೂ ತಮ್ಮ ಶಾಲಾ ಮುಖ್ಯಸ್ಥರ ಅನುಮತಿ ಪತ್ರದೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. ಒಬ್ಬರು ಗರಿಷ್ಟ ಎರಡು ಮಳಿಗೆಗಳನ್ನು ಪಡೆಯಲು ಅವಕಾಶವಿದೆ. ಕಲಾಕೃತಿಗಳ ಪ್ರದರ್ಶನಕ್ಕಾಗಿ 7 ಅಡಿ ಎತ್ತರ ಹಾಗೂ 10 ಅಡಿ ಅಗಲ ವಿಸ್ತಾರದ ಸಮತಳ ಮಳಿಗೆಗಳನ್ನು ನೀಡಲಾಗುವುದು. ಉಳಿದಂತೆ ಪ್ರದರ್ಶನಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಚಿತ್ರಕಲಾವಿದರೇ ತರಬೇಕಾಗುತ್ತದೆ. 18-11-2016ರ ಬೆಳಿಗ್ಗೆ 9ಗಂಟೆಯೊಳಗೆ ಮಳಿಗೆಗಳಲ್ಲಿ ತಮ್ಮ ಕಲಾಕೃತಿಗಳ ಪ್ರದರ್ಶನ ಸಂಪೂರ್ಣಗೊಳಿಸಿರಬೇಕು.…
