ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಸ್.ಎಸ್.ಎಲ್.ಸಿ.ಫಲಿತಾಂಶದ ಲ್ಲಿ 625ಕ್ಕೆ 625 ಅಂಕಗಳ ಸಾಧನೆ ಮಾಡಿದ ತಾಲೂಕಿನ ಶಂಕರನಾರಾಯಣದ ಮದರ್ ತೆರೆಸಾ ಮೆಮೋರಿಯಲ್ ಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ ಅವರನ್ನು ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಅಭಿನಂದಿಸಿದರು. ಶಾಲೆಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿಯ ಸಾಧನೆಯನ್ನು ಶ್ಲಾಘಿಸಿ ಇವರು ಈ ಯಶಸ್ಸು ಮುಂದಿನ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಲಿ. ಪ್ರೀತಮ್ ಪೂಜಾರಿಯವರ ಮುಂದಿನ ಎಲ್ಲ ಕನಸುಗಳು ಈಡೇರಲಿ ಎಂದರು. ಕಡು ಬಡತನ ನಡುವೆಯೂ ಮಗನ ಶಿಕ್ಷಣಕ್ಕೆ ಬೆನ್ನೆಲುಬಾಗಿ ನಿಂತಿರುವ ತೊಂಬಟ್ಟು ಕಸಿನಪಾಳು ಗಣಪತಿ ಪೂಜಾರಿ ಮತ್ತು ನಾಗರತ್ನ ದಂಪತಿಗಳಿಗೆ ಹಾಗೂ ಶಂಕರ್ ನಾರಾಯಣ ಮದರ್ ತೆರೇಸಾ ಶಾಲಾ ಆಡಳಿತ ಮಂಡಳಿಗೂ ಮತ್ತು ಅಧ್ಯಾಪಕವಂದದವರಿಗೆ ಶುಭ ಹಾರೈಸಿದರು. ಇದನ್ನೂ ಓದಿ – ► ಶಂಕರನಾರಾಯಣ: ಮದರ್ ತೆರೆಸಾ ಶಾಲೆಯ ವಿದ್ಯಾರ್ಥಿ ಎಸ್.ಎಸ್.ಎಲ್.ಸಿಯಲ್ಲಿ ಪ್ರೀತಮ್ ಜಿ. ಪೂಜಾರಿ ರಾಜ್ಯಕ್ಕೆ ಟಾಪರ್ – https://kundapraa.com/?p=97763 .
Author: ಸುನಿಲ್ ಹೆಚ್. ಜಿ. ಬೈಂದೂರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶಂಕರನಾರಾಯಣದ ಮದರ್ ತೆರೆಸಾ ಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625 ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ತಾಲೂಕಿನ ಬಿದ್ಕಲಕಟ್ಟೆಯ ಗಣಪತಿ ಪೂಜಾರಿ ಮತ್ತು ನಾಗರತ್ನ ದಂಪತಿಗಳ ಪುತ್ರ ಪ್ರೀತಮ್ ಪೂಜಾರಿ ಈ ಅತ್ಯುನ್ನತ ಸಾಧನೆ ಮಾಡಿದ್ದಾರೆ. ಎಲ್ ಕೆ ಜಿ ಯಿಂದ 10 ನೇ ತರಗತಿಯವರೆಗೆ ಶಂಕರನಾರಾಯಣದ ಮದರ್ ತೆರೆಸಾ ಮೆಮೋರಿಯಲ್ ಶಾಲೆಯಲ್ಲೇ ಓದಿರುವ ಪ್ರೀತಮ್ ಜಿ ಪೂಜಾರಿಯವರ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಬೋಧಕ ವೃಂದ ಹರ್ಷ ವ್ಯಕ್ತಪಡಿಸಿದೆ. ಇದನ್ನೂ ಓದಿ ► ಮದರ್ ತೆರೆಸಾ ಪಿಯು ಕಾಲೇಜು, ಶಂಕರನಾರಾಯಣ – ವಿಜ್ಞಾನ (PCMB / PCMCs) ವಿಭಾಗದಲ್ಲಿ ಉತ್ತಮ ಶೈಕ್ಷಣಿಕ ಸಾಧನೆ. ಪ್ರವೇಶಾತಿ ಪ್ರಾರಂಭ – https://kundapraa.com/?p=97752 . ತಂದೆ ಬಸ್ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದು ತಾಯಿ ನಾಗರತ್ನ ಗೃಹಿಣಿ. ದಂಪತಿಗಳ ದ್ವಿತೀಯ ಪುತ್ರ ಇದೇ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿದ್ದಾನೆ. ►…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶ ಪ್ರಕಟಗೊಂಡಿದ್ದು, ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಶೇ.94.10 ರಷ್ಟು ಫಲಿತಾಂಶ ಪ್ರಕಟವಾಗಿದೆ. ಈಗಾಗಲೇ ಇಲಾಖೆ ವೆಬ್ ಸೈಟ್ ನಲ್ಲೂ ( https://karresults.nic.in ) ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಿದೆ. SMS, ವಾಟ್ಸಪ್ ಮೂಲಕವೂ ಫಲಿತಾಂಶ ಕಳುಹಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಏಳು ಮಂದಿ ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ದಾವಣಗೆರೆಯ ಭರತ್, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ಸುಖದೇವ್ 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 98.40ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ.ಉಡುಪಿ ಜಿಲ್ಲೆ ಶೇ 98.18 ರ ಫಲಿತಾಂಶದೊಂದಿಗೆ 2ನೇ ಸ್ಥಾನದಲ್ಲಿದೆ.ಉತ್ತರ ಕನ್ನಡ 3ನೇ ಸ್ಥಾನ (ಶೇ 98.09), ಹಾಸನ 4ನೇ ಸ್ಥಾನ (ಶೇ 97.51) ಗಳಿಸಿವೆ.ಮಂಡ್ಯ 5ನೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣತಿ, ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯವರು ಅಕ್ಟೋಬರ್ ತಿಂಗಳಿನಲ್ಲಿ “ಸೈಬರ್ ಸುರಕ್ಷತಾ ಜಾಗೃತಿ” ಬಗ್ಗೆ ಆಯೋಜಿಸಿದ MEMES ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರು, ಪಿಯು ಕಾಲೇಜು ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಎಲ್ಲಾ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಎಸ್.ಬಿ.ಐ ಎಟಿಎಂ ಬಳಿ ಸಿಕ್ಕ ಚಿನ್ನದ ಸರವನ್ನು ಗಮನಿಸಿದ ಪೊಲೀಸ್ ಸಿಬ್ಬಂದಿಯೋರ್ವರು, ವಾರೀಸುದಾರರನ್ನು ಪತ್ತೆ ಹಚ್ಚಿ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಗಂಗಾಧರ್ ಅವರು ಚಿನ್ನದ ಸರ ಬಿದ್ದಿರುವುದನ್ನು ಗಮನಸಿ, ಪರಿಶೀಲಿಸಿ ವಾಸುದಾರರನ್ನು ಪತ್ತೆ ಹಚ್ಚಿ ಸರವನ್ನು ಹಿಂದಿರುಗಿಸಿದ್ದಾರೆ. ಗಂಗಾಧರ್ ಅವರಿಗೆ ಇಲಾಖಾ ಮೇಲಾಧಿಕಾರಿಗಳು ಹಾಗೂ ಸಾರ್ವಜನಿಕರು ಪ್ರಶಂಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ ಜಿಲ್ಲಾ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ವಿಶೇಷ ಚೇತನ ಮಕ್ಕಳು ಶಿಕ್ಷಣದ ಕನಸು ಕಾಣುವುದೇ ದೊಡ್ಡ ವಿಚಾರವಾಗಿರುವಾಗ, ಈ ಗ್ರಾಮದ ಮಕ್ಕಳಿಬ್ಬರು ನಿತ್ಯವೂ ಆಂತರಿಕ ಹಾಗೂ ಬಾಹ್ಯ ಬದುಕಿನ ನಡುವೆ ಸಂಘರ್ಷಕ್ಕಿಳಿದು ಶಿಕ್ಷಣದ ಬೆಳಕು ಕಾಣುತ್ತಿದ್ದಾರೆ. ಆದರೆ ಇದಕ್ಕಾಗಿ ಆ ಕುಟುಂಬದ ಪರಿಪಾಠಲು ದೇವರಿಗೆ ಪ್ರೀತಿ! ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯಳಜಿತ ಗ್ರಾಮದ ಹುಲ್ಕಡಿಕೆ ಗುಡಿಕೇರಿ ಸುರೇಶ್ ಹಾಗೂ ಸುಜಾತ ಎಂಬುವವರು ಕುಟುಂಬದ್ದು ಕರುಣಾಜನಕ ಕಥೆ. ಯಳಜಿತ ಸರಕಾರಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಾತ್ವಿಕ್ ಹಾಗೂ 7ನೇ ತರಗತಿಯಲ್ಲಿ ಓದುತ್ತಿರುವ ಸನ್ನಿಕಾ ಸಹೋದರ ಸಹೋದರಿಯರು 2 ವರ್ಷದವರಿರುವಾಗಲೇ ಎಂಡೋಸಲ್ಪಾನ್ ಪೀಡಿತರಾಗಿ ಕಾಲಿನ ಸ್ವಾಧೀನ ಕಳೆದುಕೊಂಡಿದ್ದಾರೆ. ಕೂಲಿ ಕೆಲಸವನ್ನೇ ಅವಲಂಭಿಸಿ ಬದುಕುತ್ತಿರುವ ಸುರೇಶ್ ಹಾಗೂ ಸುಜಾತ ದಂಪತಿಗಳು ಕಳೆದ 14 ವರ್ಷದಿಂದ ಮಕ್ಕಳ ಪಾಲನೆಯಲ್ಲಿಯೇ ಬಹುಪಾಲು ಸಮಯವನ್ನು ಕಳೆಯುವಂತಾಗಿದೆ. ಕುಟುಂಬದ ಈ ಸಂಕಷ್ಟವನ್ನೂ ದಾಟಿ ಇಬ್ಬರೂ ವಿಕಲಚೇತನ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕೆಂಬ ಪಾಲಕರ…
ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಕುಂದಾಪುರದ ಚಿತ್ರರಸಿಕರನ್ನು ನಾಲ್ಕು ದಶಕಗಳ ಕಾಲ ರಂಜಿಸಿ ಜನಮನ್ನಣೆ ಗಳಿಸಿದ್ದ ಏಕಪರದೆಯ ಶ್ರೀ ವಿನಾಯಕ ಚಿತ್ರಮಂದಿರವು ಇತ್ತಿಚಿಗೆ ಸಿನಿಮಾ ಪ್ರದರ್ಶನವನ್ನು ಖಾಯಂ ಆಗಿ ನಿಲ್ಲಿಸಿದೆ. 1983ರಲ್ಲಿ ಕುಂದಾಪುರದ ಹಂಗಳೂರಿನಲ್ಲಿ ಕೆ. ರಾಮಚಂದ್ರ ರಾವ್ ಅವರು ಆರಂಭಿಸಿದ್ದ ಚಿತ್ರಮಂದಿರವನ್ನು ಮುಂದೆ ಅವರ ಮಗ ಪುಪ್ಪರಾಜ್ ರಾವ್ ಅವರು ಮುನ್ನಡೆಸುತ್ತಿದ್ದರು. ಸಿನಿಮಾ ರಂಗದ ಬಗ್ಗೆ ಇದ್ದ ಆಸಕ್ತಿಯಿಂದಲೇ ಚಿತ್ರಮಂದಿರ ಕಟ್ಟಿದ ರಾಮಚಂದ್ರ ರಾವ್ ಅವರ ವಿನಾಯಕ ಥಿಯೇಟರ್ನಲ್ಲಿ, ಡಾ. ರಾಜಕುಮಾರ್ ಅವರ ಕವಿರತ್ನ ಕಾಳಿದಾಸ ಸಿನಿಮಾ ಮೊದಲ ಪ್ರದರ್ಶನ ಕಂಡಿತ್ತು. ಫಸ್ಟ್ ಕ್ಲಾಸ್ ಸೆಕೆಂಡ್ ಕ್ಲಾಸ್ ಸೇರಿ 250 ಸೀಟು, ಬಾಲ್ಕಾನಿ 176 ಸೀಟು ಸಾಮರ್ಥ್ಯ ಹೊಂದಿದ್ದ ಚಿತ್ರಮಂದಿರದ ಆರಂಭದಲ್ಲಿ ಟಿಕೆಟ್ ಬೆಲೆ ಫಸ್ಟ್ ಕ್ಲಾಸಿಗೆ ರೂ 2.80, ಬಾಲ್ಕನಿಗೆ ರೂ.3.25 ಪೈಸೆಯಾಗಿತ್ತು. /ಕುಂದಾಪ್ರ ಡಾಟ್ ಕಾಂ ಸುದ್ದಿ/ ಆರಂಭದಲ್ಲಿ ಕನ್ನಡ ಭಾಷೆಯ ಸಿನಿಮಾಗಳಿಗೆ ಸೀಮಿತವಾಗಿದ್ದ ಚಿತ್ರಮಂದಿರ ಕ್ರಮೇಣ ತಮಿಳು, ತೆಲುಗು, ಹಿಂದಿ ಭಾಷಾ ಚಿತ್ರಗಳಿಗೂ ತೆರೆದುಕೊಂಡಿತ್ತು. ಕುಂದಾಪುರದಲ್ಲಿದ್ದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: 19ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಕುಪ್ಪಯ್ಯ ಬಿಲ್ಲವ, ಕಾರ್ಯದರ್ಶಿಯಾಗಿ ರಾಘವೇಂದ್ರ ಪೂಜಾರಿ ಅರೆಹೊಳೆ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಧನಂಜಯ ಗೌಡ ಕೆಂಜಿ, ಉಪಾಧ್ಯಕ್ಷರಾಗಿ ಮಂಜುನಾಥ ಗೌಡ ಪೈನಾಡಿ, ಜೊತೆ ಕಾರ್ಯದರ್ಶಿಯಾಗಿ ಗಂಗಾಧರ, ಕೋಶಾಧಿಕಾರಿ ರಾಧಿಕಾ ಕೊಠಾರಿ, ವಿದ್ಯಾ, ಕ್ರೀಡಾ ಕಾರ್ಯದರ್ಶಿಯಾಗಿ ರಮೇಶ ಗೌಡ, ದೀಪಕ್ ಗೌಡ, ಸಾಂಸ್ಕೃತಿಕಕಾರ್ಯದರ್ಶಿಯಾಗಿ ಶಾಂತಿವಸಂತಗೌಡ ಜ್ಯೋತಿ ಕೊಠಾರಿ ಆಯ್ಕೆಯಾಗಿದ್ದಾರೆ. ಗೌರವ ಸಲಹೆಗಾರರಾಗಿ ಮಂಜಯ್ಯ ಪೂಜಾರಿ ಹೊನ್ನುಮನೆ, ನರಸಿಂಹ ಆಚಾರಿ, ಮಹಾಬಲ ಕೊಠಾರಿ, ಪ್ರಭಾಕರ ಕೊಠಾರಿ, ಗಣಪತಿ ಗೌಡ, ಮುಡುರ ಗೌಡ, ರಮೇಶ ಗೌಡ ಕೆಳತೊಡ, ರಂಗು ಮರಾಠಿ, ಶಿವರಾಜ್ ನಾಯ್ಕ್, ಸಂಜೀವ ಗೌಡ ಅರೆಹೊಳೆ, ರಮೇಶ ಪೂಜಾರಿ ಶಾಂತೇರಿ, ರಾಜೇಶ್ ಕೊಠಾರಿ, ನಾಗರಾಜ ಗೌಡ, ನಾರಾಯಣ ಗೌಡ, ನಾಗೇಶ್ ಕೊಠಾರಿ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತ್ರಾಸಿ ಮರವಂತೆ ಬೀಚ್ ವೀಕ್ಷಣೆಗೆ ಸಂದರ್ಭ ಪ್ರವಾಸಿಯೊಬ್ಬರು ಸಮುದ್ರ ಬಿದ್ದು ಮೃತಪಟ್ಟ ಹಿನ್ನೆಯಲ್ಲಿ ಸೋಮವಾರ ಎಚ್ಚರಿಕೆ ನಾಮಫಲಕ ಹಾಗೂ ಕೆಂಪು ರಿಬ್ಬನ್ ಟೇಪ್ ಕಟ್ಟುವ ಮೂಲಕ ಜಾಗೃತಿ ಕಾರ್ಯ ಕೈಗೊಳ್ಳಲಾಗಿದೆ. ಬೀಚ್ ತೀರದಲ್ಲಿ ಅಲ್ಲಲ್ಲಿ ಎಚ್ಚರಿಕೆ ಫಲಕ ಅಳವಡಿಸಿದ್ದರೂ ಪ್ರವಾಸಿಗರ ಹುಚ್ಚಾಟ ಎಲ್ಲೆ ಮೀರುತ್ತಿತ್ತು. ಈ ಹಿನ್ನೆಲೆಯಲ್ಲಿ ಗಂಗೋಳ್ಳಿ ಠಾಣಾಧಿಕಾರಿ ಹರೀಶ್ ನಾಯ್ಕ್ ಸ್ಥಳೀಯರ ಸಹಕಾರದಲ್ಲಿ ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ ರಿಬ್ಬನ್ ಹಾಗೂ ಸೂಚನಾ ಫಲಕ ಅಳವಡಿಸಿದ್ದಾರೆ. ಸಿಬ್ಬಂದಿ ಅಗತ್ಯ:ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗುವ ಪ್ರವಾಸಿಗರು ನಿರಂತರವಾಗಿ ಮರವಂತೆ ಬೀಚಿಗೆ ಭೇಟಿ ನೀಡುವುದರಿಂದ ಅಲ್ಲಿ ಪೊಲೀಸ್ ಇಲಾಖೆ ಅಥವಾ ಪ್ರವಾಸೋದ್ಯಮ ಇಲಾಖೆ ಖಾಯಂ ಸಿಬ್ಬಂದಿಗಳನ್ನು ಇರಿಸಿ ಎಚ್ಚಿರಿಕೆ ನೀಡಬೇಕಾದ ಅನಿವಾರ್ಯತೆ ಇದೆ. ನಾಪಫಲಕಗಳು ಹಾಗೂ ರಿಬ್ಬರ್ ತಾತ್ಕಾಲಿಕವಾಗಿ ಅಷ್ಟೇ ಉಳಿಯುವುದರಿಂದ ಪ್ರವಾಸಿಗರನ್ನು ಸಿಬ್ಬಂದಿಗಳ ಮೂಲಕವೇ ಎಚ್ಚರಿಸುವುದು ಅನಿವಾರ್ಯವಾಗಿದೆ.
