ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂತರಾಷ್ಟ್ರೀಯ ಮಟ್ಟದ ಸಂಸ್ಥೆ ರೋಟರಿ ಸಂಸ್ಥೆ. ಈಗಾಗಲೇ ಜಗತ್ತಿನದ್ಯಾಂತ ಸಾಕಷ್ಟು ಬಹುತೇಕ ಜನೋಪಯೋಗಿ ಸೇವೆಗಳನ್ನು ನೀಡುವ ಮೂಲಕ ರೋಟರಿ ಸಂಸ್ಥೆಯು ಜನಮಾನಸವಾಗಿ ಉಳಿದಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ರೋಟರಿ ಕ್ಲಬ್ ನೇತೃತ್ವದಲ್ಲಿ ನಿರ್ಮಾಣ ಮಾಡಲಾದ ಈ ಸುಸಜ್ಜಿತ ಬಸ್ಸು ತಂಗುದಾಣ ಪ್ರಯಾಣಿಕರ ದಣಿವನ್ನು ನಿವಾರಿಸಿದೆ. ಈ ತಂಗುದಾಣವನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ ಕೋಟೇಶ್ವರ ರೋಟರಿ ಕ್ಲಬ್ ಮತ್ತು ಪ್ರಯೋಜಕರ ಕಾರ್ಯ ಶ್ಲಾಘನೀಯವಾಗಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ಎಂ.ಜಿ.ರಾಮಚಂದ್ರಮೂರ್ತಿ ಹೇಳಿದರು. ಅವರು ಕೋಟೇಶ್ವರ ರೋಟರಿ ಕ್ಲಬ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ೬೬ ರ ರಿಲಿಯನ್ಸ್ ಮಾಲ್ ಎದುರು ನೂತನವಾಗಿ ನಿರ್ಮಿಸಲಾದ ಬಸ್ಸು ತಂಗುದಾಣವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಕೋಟೇಶ್ವರ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪಿಡಿಜಿ ಅಭಿನಂದನ್ ಶೆಟ್ಟಿ, ಕೋಟೇಶ್ವರ ಪಂಚಾಯತ್ ಅಧ್ಯಕ್ಷ ಕೃಷ್ಣಗೊಲ್ಲ, ಬಸ್ಸು ನಿಲ್ದಾಣದ ಪ್ರಯೋಜಕರಾದ ಉದ್ಯಮಿ ಸಹನಾ ಸುರೇಂದ್ರ ಶೆಟ್ಟಿ, ಅಕ್ಷಯ ಶೇಟ್, ವಲಯ ೨ರ ಅಸಿಸ್ಟೆಂಟ್ ಗರ್ವನರ್…
Author: ಸುನಿಲ್ ಹೆಚ್. ಜಿ. ಬೈಂದೂರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ಚಿತ್ರರಂಗದ ಖ್ಯಾತ ನಟ, ರಾಕಿಂಗ್ ಸ್ಟಾರ್ ಯಶ್ ಅವರು ಮಂಗಳವಾರ ಕುಂದಾಪುರ ತಾಲೂಕಿನ ಕೊಲ್ಲೂರು ಹಾಗೂ ಕುಂಭಾಶಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇಂದು ಬೆಳಗ್ಗೆ ಯಶ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಹಾಗೂ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಪಡೆದರು. ಈ ಸಂದರ್ಭ ದೇವಸ್ಥಾನದ ವತಿಯಿಂದ ಅವರನ್ನು ಗೌರವಿಸಲಾಯಿತು. ಈ ಸಂದರ್ಭ ನಿರ್ದೇಶಕ ಪ್ರಶಾಂತ್ ನೀಲ್, ಸಂಗೀತ ನಿರ್ದೇಶಕ ರವಿ ಬಸ್ರೂರು ಮೊದಲಾದವರು ಜೊತೆಗಿದ್ದರು. ಸಂಗೀತ ನಿರ್ದೇಶಕ ರವಿ ಬಸ್ರೂರು ಅವರು ಬಸ್ರೂರಿನ ಸ್ಟುಡಿಯೋದಲ್ಲಿ ಕೆಜಿಎಫ್-2ಗೆ ಅಂತಿಮ ಟಚ್ ಮ್ಯೂಸಿಕ್ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ನಟ ಯಶ್ ಅವರು ಇಲ್ಲಿಗೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ರವಿ ಬಸ್ರೂರು ಅವರ ಮನೆ ಬಳಿಯ ಆಟದ ಮೈದಾನದಲ್ಲಿ ಯಶ್ ಹುಡುಗರೊಂದಿಗೆ ಕೆಲ ಹೊತ್ತು ಕ್ರಿಕೆಟ್ ಆಡಿ ಕಾಲ ಕಳೆದಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತಾಲೂಕಿನ ತ್ರಾಸಿ ವಲಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಪ್ರಾರಂಭಿಸಲಾಗುತ್ತಿರುವ ಸೇವಾ ಸಿಂಧು ಕೇಂದ್ರಗಳಿಗೆ ತ್ರಾಸಿ ವಲಯ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ತ್ರಾಸಿ ವಲಯಾಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ ಸೋಮವಾರ ಚಾಲನೆ ನೀಡಿದರು. ಬೈಂದೂರು ತಾಲೂಕು ಯೋಜನಾಧಿಕಾರಿ ಶಶಿರೇಖಾ ಪಿ., ಸ್ವಸಹಾಯ ಸಂಘಗಳ ತ್ರಾಸಿ ವಲಯ ಅಧ್ಯಕ್ಷ ನಾಗರಾಜ ಖಾರ್ವಿ, ತಾಲೂಕು ನೋಡಲ್ ಅಧಿಕಾರಿ ಕುಮಾರ್, ಸ್ಥಳೀಯ ಒಕ್ಕೂಟದ ಅಧ್ಯಕ್ಷೆ ರೇಣುಕಾ, ಗುಲಾಬಿ, ಒಕ್ಕೂಟದ ಪದಾಧಿಕಾರಿಗಳು, ತ್ರಾಸಿ ವಲಯ ಮೇಲ್ವಿಚಾರಕ ಗಿರೀಶ್, ಸೇವಾ ಪ್ರತಿನಿಧಿಗಳು ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೋಡಿ ಬ್ಯಾರೀಸ್ ಪದವಿ ಕಾಲೇಜಿನ ಐಟಿ ಘಟಕದ ವತಿಯಿಂದ ’ಐಟಿ ಕ್ಷೇತ್ರದ ಪ್ರಾಮುಖ್ಯತೆ ಮತ್ತು ವ್ಯಕ್ತಿತ್ವ ವಿಕಸನ’ ಕುರಿತು ಕಾರ್ಯಕ್ರಮ ನಡೆಯಿತು. ಮೈಸೂರು ಜೆಎಸ್ಎಸ್ ಸೈನ್ನ್ ಆಂಡ್ ಟೆಕ್ನಾಲಜಿ ಯುನಿವರ್ಸಿಟಿ ಪ್ರೊಫೆಸರ್ ಡಾ. ಅನಿಲ್ ಕುಮಾರ್ ಬಿಸಿಎ ಕೋರ್ಸ್ನ ಪ್ರಾಮುಖ್ಯತೆ ಕುರಿತಾಗಿ ಮಾತನಾಡಿದರು. ಇನ್ಫೋಸಿಸ್ ಕಂಪೆನಿಯ ಸೀನಿಯರ್ ಇಂಜಿನಿಯರ್, ಫಾತಿನ್ ಮಿಸ್ಬ ಇವರು ವ್ಯಕ್ತಿತ್ವ ವಿಕಸನದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ, ತಂತ್ರಜ್ಞಾನ ಕ್ಷೇತ್ರದ ಹಲವು ಅನುಭವಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಮೈಸೂರು ಸೈಂಟ್ ಜೋಸೆಫ್ ಸ್ಕೂಲ್ ಪ್ರಾಂಶುಪಾಲರಾದ ವೀಣಾ, ಮೇರಿ, ಸಂಸ್ಥೆಯ ನಿರ್ದೇಶಕ ಪ್ರೊ. ದೋಮ ಚಂದ್ರಶೇಖರ್ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಮೀರ್ ಉಪಸ್ಥಿತರಿದ್ದರು. ಗಣಕ ವಿಜ್ಞಾನ ವಿಭಾಗದ ಮುಖ್ಕಸ್ಥೆ ನೂತನ ಇವರು ಅತಿಥಿ ಗಣ್ಯರನ್ನು ವಂದಿಸಿ ಉಪನ್ಯಾಸಕಿ ಹರ್ಷಿತಾ ಕಾಂiiಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಸಂಸ್ಕೃತ ಉಪನ್ಯಾಸಕಿ ಸುಲೇಖಾ ಆರೀಫ ಅವರು ಕೊಡುಗೆಯಾಗಿ ನೀಡಿದ ನಲವತ್ತೆಂಟು ಸಾವಿರ ರೂಪಾಯಿ ಮೊತ್ತದ ಮೂವತ್ತು ಖುರ್ಚಿಗಳನ್ನು ಕಾಲೇಜಿಗೆ ಹಸ್ತಾಂತರಿಸಲಾಯಿತು. ಈ ಸರಳ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ ಜಿ ಯವರು ವಹಿಸಿದ್ದರು. ಕುರ್ಚಿಯನ್ನು ಹಸ್ತಾಂತರಿಸಿ ಮಾತನಾಡಿದ ಸುಲೇಖಾ ಆರೀಫರವರು ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ನೀಡುವ ಎಲ್ಲ ರೀತಿಯ ಸೇವೆ ಮತ್ತು ಸಹಕಾರಗಳು ದೇವರಿಗೆ ಮಾಡುವ ಸೇವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಾದ ಭುಜಂಗ ಶೆಟ್ಟಿ, ಚಂದ್ರಶೇಖರ, ಶಿವಾನಂದ ನಾಯಕ ಮತ್ತು ಪೂರ್ಣಿಮಾ ನಾಯಕ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಉದಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಂಧ್ಯಾ ನಾಯಕ ವಂದಿಸಿದರು.
ಸಡಗರ, ಸಂಭ್ರಮದ ಕ್ರಿಸ್ಮಸ್ ಮತ್ತೆ ಬಂದಿದೆ. ಶುಭಾಶಯ ವಿನಿಮಯ, ಉಡುಗೊರೆ, ಸಂಗೀತ, ಚರ್ಚ್ ಗಳಲ್ಲಿ ಉತ್ಸವ, ವಿಶೇಷ ಭೋಜನ, ತಿಂಡಿ-ತಿನಿಸುಗಳಿಂದ ಮನೆಗಳನ್ನು ಉತ್ಸವವಾಗಿಸುವ; ಗೋದಲಿ-ಕ್ರಿಸ್ಮಸ್ ಟ್ರೀ ಮೊದಲಾದವುಗಳನ್ನು ದೀಪದಿಂದ ಅಲಂಕರಿಸಿ, ಕ್ರಿಸ್ಮಸ್ ತಾತ ‘ಸಾಂತಾ ಕ್ಲಾಸ್’ರನ್ನು ಬರಮಾಡುವ, ‘ಕ್ರಿಸ್ಮಸ್ ಟೈಡ್’ನ್ನು ಸಂಭ್ರಮ-ಪ್ರಾರ್ಥನೆಗಳಿಂದ ತುಂಬಿತುಳುಕಿಸುವ ವಾರ್ಷಿಕ ಪರ್ವ ಇದು. ಕ್ರಿಸ್ಮಸ್ ಇತಿಹಾಸ ವಿಶ್ವಾದ್ಯಂತ ಈ ದಿನವನ್ನು ಕ್ರೈಸ್ತ ಧರ್ಮದಲ್ಲಿ ದೇವಪುತ್ರ ಎಂದು ನಂಬಲಾಗಿರುವ ಏಸುವಿನ ಜನ್ಮದಿನವಾಗಿ ಆಚರಿಸ ಲಾಗುತ್ತಿದೆ. ಆದರೆ, ಮೂಲತಃ ಏಸುಕ್ರಿಸ್ತ ಹುಟ್ಟಿದ ನಿಖರ ದಿನಾಂಕದ ಬಗ್ಗೆ ವಿವಿಧ ವಾದಗಳಿವೆ. ಆದಾಗ್ಯೂ, ಹಳೆ ಕಾಲದ ಕ್ರಿಸ್ತನ ಅನುಯಾಯಿಗಳು ಪಾಲಿಸುತ್ತಿದ್ದ ಪ್ರಾಚೀನ ರೋಮನ್ ಕ್ಯಾಲೆಂಡರ್ನ ಪ್ರಕಾರ ಉತ್ತರಾಯಣ ಸಂಕ್ರ ಮಣದ 9 ತಿಂಗಳ ಬಳಿಕ(ಅಂದರೆ, ಕ್ರಿಸ್ತನ ಪುನರುಜ್ಜೀವನ ವಾಗಿರುವುದೆಂದು ನಂಬಲಾಗಿರುವ ಮಾರ್ಚ್ 25ರ ಒಂಬತ್ತು ತಿಂಗಳ ಬಳಿಕ) ಅಥವಾ ಪ್ರಾಚೀನ ಚಳಿಗಾಲದಲ್ಲಿನ ಒಂದು ಹಬ್ಬದ ಸಮಯದಲ್ಲಿ ಬೆತ್ಲಹೆಮ್ ನಲ್ಲಿನ ಹಟ್ಟಿಯೊಂದರಲ್ಲಿ ಕನ್ಯಾ ಮೇರಿಯು ಏಸುಕ್ರಿಸ್ತುವಿಗೆ ಜನ್ಮ ನೀಡಿದಳು. ಕ್ರಿಸ್ಮಸ್ ಆಚರಣೆ: ಕ್ರಿಸ್ಮಸ್ ದಿನಾಚರಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ನ.27: ತಾಲೂಕಿನ ಯಡ್ತರೆ ಸಮೀಪದ ರಾಹುತನಕಟ್ಟೆ ಹಾಗೂ ನಾಕಟ್ಟೆ ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ನಡೆದ ನಾಲ್ಕು ಪ್ರತ್ಯೇಕ ಅಪಘಾತದಲ್ಲಿ ನಾಲ್ಕು ದನಗಳು ಸಾವನ್ನಪ್ಪಿದ್ದು, ಎರಡು ದನಗಳು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿರುವ ಘಟನೆ ನಡೆದಿದೆ. ರಾಹುತನಕಟ್ಟೆ ಬಳಿ ಶನಿವಾರ ರಾತ್ರಿ ವೇಳೆಗೆ ಎರಡು ಪ್ರತ್ಯೇಕ ಅಪಘಾತಗಳು ನಡೆದು ಎರಡು ದನಗಳು ಮೃತಪಟ್ಟು ಎರಡು ದನಗಳಿಗೆ ಗಾಯಗಳಾಗಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬೈಕ್ ಹಾಗೂ ಕಾರಿಗೆ ದನಗಳು ಅಡ್ಡಬಂದು ಅಪಘಾತ ನಡೆದಿತ್ತು. ದನಗಳಿಗೆ ಸಣ್ಣಪುಟ್ಟ ಗಾಯಗೊಂದಿಗೆ ಪಾರಾಗಿದ್ದವು. ಬೈಕ್ ಹಾಗೂ ಕಾರಿಗೂ ಹಾನಿಯಾಗಿತ್ತು. ಆ ಬಳಿಕ ಮುರ್ಡೇಶ್ವರಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ಗೆ ಎರಡು ದನಗಳು ಅಡ್ಡ ಬಂದು ಡಿಕ್ಕಿ ಹೊಡೆದಿದ್ದು, ಎರಡೂ ದನಗಳೂ ಸ್ಥಳದಲ್ಲಿಯೇ ಸಾವನ್ನಪ್ಪಿದೆ. ಟಿಟಿ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿತ್ತು. ನಾಕಟ್ಟೆ ಅಂಬಿಕಾ ಉಪಹಾರ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಂದೂರು ಹಾಗೂ ಯಡ್ತರೆ ಕಡೆಗೆ ತೆರಳುವ ಎರಡೂ ಮಾರ್ಗದಲ್ಲಿ ಬೇರೆ ಬೇರೆ ವಾಹನಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಗಳ ಅಧ್ಯಕ್ಷ ವಕ್ವಾಡಿ ಪ್ರವೀಣ ಕುಮಾರ್ ಶೆಟ್ಟಿ ಅವರಿಗೆ ಪ್ರಸಕ್ತ ಸಾಲಿಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ. ದುಬೈ ಹಾಗೂ ಫುಜೈರಾ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಡೆಸುತ್ತಿರುವ ಪ್ರವೀಣ್ ಕುಮಾರ್ ಶೆಟ್ಟಿ ಅವರು ಇತ್ತಿಚಿಗೆ ಹುಟ್ಟೂರಿನಲ್ಲಿ ಹೋಟೆಲ್ ಉದ್ಯಮ ಆರಂಭಿಸಿದ್ದರು. ಹೊರನಾಡ ಕನ್ನಡಿಗರು, ಕನ್ನಡಿಗ ಸಂಸ್ಥೆಗಳ ಹಾಗೂ ಊರಿನ ಹತ್ತಾರು ಸಂಘ ಸಂಸ್ಥೆಗಳಿಗೆ ಪ್ರವೀಣ ಕುಮಾರ್ ಶೆಟ್ಟಿ ಅವರು ನೆರವು ನೀಡುತ್ತಲೇ ಬಂದಿದ್ದಾರೆ. ಕೋವಿಡ್ ಮೊದಲ ಅಲೆಯ ಸಂದರ್ಭ ಕನ್ನಡಿಗರಿಗೆ ಪ್ರವೀಣ್ ಶೆಟ್ಟಿ ಅವರು ಸ್ವಂತ ಖರ್ಚಿನಲ್ಲಿ ಚಾರ್ಟರ್ಡ್ ವಿಮಾನದ ಮೂಲಕ ತಾಯ್ನಾಡಿಗೆ ತಲುಪಿಸುವ ವ್ಯವಸ್ಥೆ ಮಾಡಿದ್ದರು. ಮಾತ್ರವಲ್ಲ ತನ್ನ ಹೋಟೆಲ್ ಮುಚ್ಚಿದ್ದರೂ ಕೂಡ ಎಲ್ಲಾ ಸಿಬ್ಬಂದಿಗಳಿಗೆ ರಜೆ ಸಹಿತ ವೇತನ ನೀಡಿ ಪ್ರವೀಣ್ ಶೆಟ್ಟಿ ಮಾನವೀಯತೆ ಮೆರೆದಿದ್ದರು. ಎರಡನೇ ಅಲೆಯ ವೇಳೆ ಪುಡ್ ಕಿಟ್’ಗಳನ್ನು ವಿತರಿಸಿದ್ದರು. ಜುಲೈ 6, 1967 ರಂದು ಜನಿಸಿದ ಪ್ರವೀಣ ಶೆಟ್ಟಿ ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಡಗುತಿಟ್ಟು ಯಕ್ಷರಂಗದ ಅಪ್ರತಿಮ ಕಲಾವಿದ ತೀರ್ಥಹಳ್ಳಿ ಗೋಪಾಲ ಆಚಾರ್ಯ ಅವರಿಗೆ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ. ಇಳಿವಯಸಿನಲ್ಲಿಯೂ ದಣಿವು ಅರಿಯದ ಚಿರಯುವಕ. ರಂಗಕ್ಕೆ ಅಡಿ ಇಡುತ್ತಲೆ ಮಿಂಚಿನ ಸಂಚಾರ. 65ರ ಅಭಿಮನ್ಯುನಾಗಿ ವೇಷಕಟ್ಟಿದರೂ 20ರ ಅಭಿಮನ್ಯುವಾಗಿ ಅಭಿಮಾನಿ ವರ್ಗದವರಿಗೆ ಸಿಡಿಲಮರಿಯಾಗಿ ಕಾಣಿಸಿಕೊಳ್ಳುವ ಯಕ್ಷರಂಗದ ಅಗ್ರಣಿಗೆ ಪ್ರಶಸ್ತಿ ಒಲಿದು ಬಂದಿರುವುದು ಅವರ ಅಭಿಮಾನಿಗಳಿಗೆ ಸಂತಸ ಉಂಟುಮಾಡಿದೆ. ಗೋಪಾಲ ಆಚಾರ್ಯ ಅವರು ಮಲೆನಾಡಿನ ತೀರ್ಥಹಳ್ಳಿಯ ಕುರುವಳ್ಳಿಯಲ್ಲಿ ವಾಸುದೇವ ಆಚಾರ್ಯ ಹಾಗೂ ಸುಲೋಚನಾ ದಂಪತಿಗಳ 5 ಮಕ್ಕಳಲ್ಲಿ ಎರಡನೆಯವರು. ತನ್ನ ಮೂಲ ಕಸುಬಾದ ಬಡಗಿ ವೃತ್ತಿಯನ್ನು ಬಿಟ್ಟು ಬಡಗುತಿಟ್ಟಿನ ಯಕ್ಷಗಾನವನ್ನು ಆರಿಸಿಕೊಂಡರು. ಊರು ತೀರ್ಥಹಳ್ಳಿಯಾದರೂ ಯಕ್ಷರಂಗದ ಹಾದಿಯನ್ನು ಆಯ್ಕೆ ಮಾಡಿಕೊಂಡದು ಯಕ್ಷಕಾಶಿ ಎನಿಸಿಕೊಂಡ ಕುಂದಾಪುರವನು. ಬೈಂದೂರಿನ ಸಮೀಪದ ನಾಯಕನಕಟ್ಟೆಯಲ್ಲಿ ವಾಸವಾಗಿರುವ ತೀರ್ಥಹಳ್ಳಿ ಯವರು ಓದಿದ್ದು 3ನೇ ತರಗತಿ ಆದರೂ ಅವರ ವಾಗ್ಭಂಢಾರ ಅಪಾರ. ಯಕ್ಷರಂಗದ ಒಂದೊಂದೇ ಮೆಟ್ಟಿಲೇರಿ ಅದ್ಭುತ ನೃತ್ಯ,ಲಯಬದ್ಧ ಹೆಜ್ಜೆಗಾರಿಕೆ ಸಭ್ಯ ಹಾಗೂ ಸುಸ್ಪಷ್ಟ ಮಾತುಗಾರಿಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2021ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದ್ದು ವಿವಿಧ ಕ್ಷೇತ್ರಗಳ ಒಟ್ಟು 35 ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಈ ಪೈಕಿ ಕುಂದಾಪುರ ತಾಲೂಕಿನ ಡಾ. ದಿನೇಶ್ ಶೆಟ್ಟಿ ಅವರಿಗೆ ಸಂಕೀರ್ಣ ಕ್ಷೇತ್ರದಲ್ಲಿ, ಕೆ. ತಿಲಕರಾಜ್ ಬಳ್ಕೂರು ಅವರಿಗೆ ರಂಗಭೂಮಿ ಕ್ಷೇತ್ರದಲ್ಲಿ ಸಾಯಿನಾಥ್ ಶೇಟ್ ಅವರಿಗೆ ಸಮಾಜ ಸೇವೆ ಕ್ಷೇತ್ರ, ಶಿವಾನಂದ ತಲ್ಲೂರು ಅವರಿಗೆ ಸಮಾಜ ಸೇವೆ ಕ್ಷೇತ್ರ, ಡಾ. ಪಾರ್ವತಿ ಜಿ. ಐತಾಳ್ ಅವರಿಗೆ ಸಾಹಿತ್ಯ ಕ್ಷೇತ್ರ, ಆರಾಧ್ಯ ಎಸ್. ಶೆಟ್ಟಿ ಅವರಿಗೆ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ದೊರೆತಿದೆ. ಬೈಂದೂರು ತಾಲೂಕಿನ ರಾಮ ಟೈಲರ್ ಅವರಿಗೆ ರಂಗಭೂಮಿ ಕ್ಷೇತ್ರದಲ್ಲಿ, ಬಾಲಕೃಷ್ಣ ಮದ್ದೋಡಿ ಅವರಿಗೆ ಸಾಮಾಜಿಕ ಸೇವಾ ಕ್ಷೇತ್ರ, ಶ್ರೀಧರ ಗಾಣಿಗ ಉಪ್ಪುಂದ ಯಕ್ಷಗಾನ ಕ್ಷೇತ್ರ, ಕುಷ್ಟ ಕೊರಗ ಹೇರೂರು ಕಲಕುಶಲ ಕ್ಷೇತ್ರ, ಎನ್. ರಮಾನಂದ ಪ್ರಭು ಅವರಿಗೆ ಸಮಾಜ ಸೇವೆ ಕ್ಷೇತ್ರದಲ್ಲಿ ಪ್ರಶಸ್ತಿ ದೊರೆತಿದೆ. ವಿವಿಧ ಕ್ಷೇತ್ರದಲ್ಲಿ ಪ್ರಶಸ್ತಿ ಪಡೆದ ಜಿಲ್ಲೆಯ ಸಾಧಕರು ಹಾಗೂ ಸಂಘಗಳ…
