ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ರಂಗ ಸುರಭಿಯ ಆಶ್ರಯದಲ್ಲಿ ಕರ್ನಾಟಕ ನಾಟಕ ಅಕಾಡೆಮಿಯ ಸಹಕಾರದಲ್ಲಿ ರಂಗ ನಿರ್ದೇಶಕ ಗಣೇಶ್ ಎಂ ನಿರ್ದೇಶನದಲ್ಲಿ ನಡೆಯುತ್ತಿದ್ದ ರಂಗ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮವು ಯಳಜಿತ್ದ ಕಪ್ಸೆಯ ನಾರಾಯಣ ಉಡುಪರ ಮನೆಯ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾಯಣ ಉಡುಪ ವಹಿಸಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅತಿಥಿಗಳಾಗಿ ಬೈಂದೂರು ಶ್ರೀರಾಮ ಸೌಹಾರ್ದ ಕೋ-ಆಪರೇಟಿವ್ನ ಮುಖ್ಯಕಾರ್ಯನಿರ್ವಹಣಾಧಿಕಾರಿ ನಾಗರಾಜ ಪಿ. ಯಡ್ತರೆ ಹಾಗೂ ರಂಗ ನಿರ್ದೇಶಕ ಗಣೇಶ ಮುಂಡಾಡಿ ಇದ್ದರು. ಸುರಭಿಯ ವ್ಯವಸ್ಥಾಪಕ ಕೃಷ್ಣಮೂರ್ತಿ ಉಡುಪ ಸ್ವಾಗತಿಸಿ, ಕಾರ್ಯದರ್ಶಿ ಲಕ್ಷ್ಮಣ ಕೊರಗ ವಂದಿಸಿ ನಿರ್ದೇಶಕ ಸುಧಾಕರ ಪಿ ಬೈಂದೂರು ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ರಂಗ ಶಿಬಿರದ ಸದಸ್ಯರಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರತ ಡಾ. ಕೆ. ಶಿವರಾಮ ಕಾರಂತರ ಕಾದಂಬರಿಯಾದಾರಿತ ನಾಟಕ ಚೋಮನದುಡಿಯ ಪ್ರಾಥಮಿಕ ಪ್ರದರ್ಶನ ನಡೆಯಿತು.
Author: ಸುನಿಲ್ ಹೆಚ್. ಜಿ. ಬೈಂದೂರು
ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಬೈಂದೂರು: ಅಜ್ಜನಿಂದ ಬಳುವಳಿಯಾಗಿ ಬಂದ ಕಲೆ ಮೊಮ್ಮಕ್ಕಳ ಕೈಯಲ್ಲಿ ಇಂದಿಗೂ ಮೂರ್ತರೂಪ ಪಡೆಯುತ್ತಿದೆ. ನೂರಾರು ವರ್ಷಗಳಿಂದಲೂ ನಡೆದು ಬಂದ ಗಣಪತಿಯ ವಿಗ್ರಹ ತಯಾರಿಸುವ ಕಾಯಕ ಅಷ್ಟೆ ನಿಷ್ಠೆಯಿಂದ ಮುಂದುವರಿದಿದೆ. ದೇವರ ಕೈಂಕರ್ಯವೆಂದು ಪ್ರತಿವರ್ಷವೂ ಬೇಡಿಕೆಗನುಸಾರವಾಗಿ ಗಣಪತಿ ವಿಗ್ರಹವನ್ನು ರಚಿಸುತ್ತಾ ಸಂತೃಪ್ತಿಯನ್ನು ಕಾಣಿತ್ತಿದೆ ಬೈಂದೂರು ಬಂಕೇಶ್ವರ ಶಿಲ್ಪಿ ದಿ. ವೆಂಕಟರಮಣ ಆಚಾರರ ಕುಟುಂಬ. ಶತಮಾನದ ಹಿನ್ನೆಲೆ: ಬೈಂದೂರಿನ ಬಂಕೇಶ್ವರದಲ್ಲಿರುವ ಶಿಲ್ಪಿ ದಿ. ವೆಂಕಟರಮಣ ಆಚಾರ್ ಅವರ ಕುಟುಂಬಕ್ಕೆ ಶತಮಾನದಿಂದ ಗಣಪತಿ ವಿಗ್ರಹವನ್ನು ತಯಾರಿಸಿದ ಹಿನ್ನೆಲೆಯಿದೆ. ವೆಂಕಟರಮಣ ಅವರ ತಂದೆ ಬಂಕೇಶ್ವರದ ದಿ. ನಾಗಪ್ಪ ಆಚಾರ್ ಅವರಿಂದ ಆರಂಭಗೊಂಡ ಸೇವಾ ಕೈಂಕರ್ಯವನ್ನು ವೆಂಕಟರಮಣ ಆಚಾರ್ ಅವರು ಮುಂದುವರಿಸಿಕೊಂಡು ಬಂದಿದ್ದು, ಇಂದು ಅವರ ಮಕ್ಕಳಾದ ನಾಗರಾಜ, ಗಂಗಾಧರ ಮತ್ತು ಗಣೇಶ ಅವರಿಂದ ಮೂಲಕ ಜೀವಸೆಲೆ ಪಡೆದಿದೆ. ಇವರ ಕುಟುಂಬ ನೂರು ವರ್ಷಕ್ಕೂ ಹೆಚ್ಚುಕಾಲ ಮೂರ್ತಿ ರಚನೆಯಲ್ಲಿ ತೊಡಗಿಸಿಕೊಂಡದ್ದರೇ, ವೆಂಕಟರಮಣ ಆಚಾರ್ಯರು 65 ವರ್ಷಗಳಿಂದ ಮೂರ್ತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಕ್ಷೇತ್ರಾದ್ಯಂತ ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆಯಿಂದ ಕೃಷಿಕರು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೆಲವೆಡೆ ಕೆಎಸ್ಆರ್ಟಿಸಿ ಬಸ್ ಸಂಚಾರ ಏಕಾಏಕಿ ನಿಲ್ಲಿಸಿದ್ದರ ಪರಿಣಾಮ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ದೀನದಯಾಳು ಯೋಜನೆಯಡಿ ವಿದ್ಯುತ್ ಸಂಪರ್ಕ ವಿಳಂಬಕ್ಕೆ ಅಧಿಕಾರಿಗಳು ನೀತಿ ಸಂಹಿತೆಯ ನೆಪ ಹೇಳಿದ್ದಾರೆ. ಈ ಎಲ್ಲಾ ಸಮಸ್ಯೆಗಳೂ ಶೀಘ್ರ ಪರಿಹಾರ ಕಂಡುಕೊಳ್ಳು ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದೇನೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅವರು ಹೇಳಿದರು. ಬೈಂದೂರು ಕ್ಷೇತ್ರ ವ್ಯಾಕ್ತಿಯಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿಯಿಂದಾಗಿ ಹಲವೆಡೆ ಕೃಷಿಭೂಮಿಗಳಿಗೆ ಹೆದ್ದಾರಿಯ ಮಣ್ಣು ನುಗ್ಗುವ ಸ್ಥಿತಿ ಇದೆ. ಸೂಕ್ತ ಚರಂಡಿ ವ್ಯವಸ್ಥೆ ಇದ್ದಲ್ಲರಿಂದ ರಸ್ತೆಯ ಮೇಲೆಯೇ ನೀರು ಹರಿಯುತ್ತಿದೆ. ಬೈಂದೂರು ಒತ್ತಿನಣೆಯಲ್ಲಿ ನಡೆಸಲಾಗಿರುವ ಕಾಮಗಾರಿಯ ಮತ್ತೆ ಕುಸಿಯುವ ಭೀತಿಯಲ್ಲಿದೆ. ಈ ಎಲ್ಲಾ ಸಮಸ್ಯೆಗಳ ಬಗ್ಗೆ ಈಗಾಗಲೇ ಕಾಮಗಾರಿ ನಡೆಸುತ್ತಿರುವ ಕಂಪೆನಿಯ ಅಧಿಕಾರಿಗಳೊಂದಿಗೆ ಮಾತನಾಡಿ ಎಚ್ಚರಿಕೆಯನ್ನೂ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಪ್ರಾಜೆಕ್ಟ್ ಮ್ಯಾನೆಜರ್ ಅವರೊಂದಿಗೂ ಸಮಾಲೋಚನೆ ನಡೆಸಿದ್ದೇನೆ…
ಅಪಾರ ಉಜಿರೆ | ಕುಂದಾಪ್ರ ಡಾಟ್ ಕಾಂ ಶಾಲೆಯಲ್ಲಿ ದೊಡ್ಡವರಾದ ಮೇಲೆ ಏನಾಗುತ್ತೀರಿ ಎಂದು ಕೇಳಿದಾಗ ಲಾರಿ ಡ್ರೈವರ್ ಆಗುತ್ತೇನೆಂದು ಉತ್ತರಿಸಿದ್ದೆ; ಅಲ್ಲದೆ ಅದು ನನ್ನ ಕನಸೂ ಆಗಿತ್ತು ಎಂಬುದಾಗಿ ನಾಗತಿಹಳ್ಳಿ ಚಂದ್ರಶೇಖರ್ ತಮ್ಮ ನೆನಪುಗಳನ್ನು ತೆರೆದಿಟ್ಟರು. ಆಳ್ವಾಸ್ ನುಡಿಸಿರಿಯ ಎರಡನೆ ದಿನ ನಡೆದ ಸಮ್ಮೇಳನಾಧ್ಯಕ್ಷರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಪ್ರೇಕ್ಷಕರ ಪ್ರಶ್ನೆಗಳಿಗೆ ಉತ್ತರಿಸಿದರು. ನಾಗತಿಹಳ್ಳಿಗೆ ಸೇರಿಕೊಂಡೇ ಹಾದುಹೋಗಿದ್ದ ಹೆದ್ದಾರಿಯಲ್ಲಿ ದಿನನಿತ್ಯವೂ ನೂರಾರು ಲಾರಿಗಳು ಸಂಚರಿಸುತ್ತಿದ್ದುದರಿಂದ ಚಾಲಕನಾದರೆ ಎಲ್ಲ ರಾಜ್ಯಗಳನ್ನು ನೋಡಬಹುದು ಎಂದು ಕನಸು ಕಂಡಿದ್ದೇ ಈ ಕನಸೇ ಮುಂದೆ ನನಗೆ ದೇಶ ವಿದೇಶಗಳನ್ನು ಪಚಿiಟನೆ ಮಾಡಲು ಬುನಾದಿಯಾಯಿತು. ಇದರ ಫಲವಾಗಿಯೇ ಭಾರತದ ಎಲ್ಲ ರಾಜ್ಯಗಳೂ ಸೇರಿದಂತೆ ವಿಶ್ವದ ೪೦ ದೇಶಗಳಿಗೆ ಸ್ವಂತ ಖರ್ಚಿನಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಮಾತ್ರವಲ್ಲದೆ ಮೂರು ಬಾಗಿ ಭೂಮಿಚಿiನ್ನು ಪಚಿiಟನೆ ಮಾಡಿದ್ದೇನೆ ಎಂದರು. ಇಂದು ಮೊಬೈಲ್ಗಳ ಹಾವಳಿಗೆ ಮಕ್ಕಳು ಮಾತ್ರವಲ್ಲದೆ ಪೋಷಕರೂ ಬಲಿಯಾಗಿರುವುದರಿಂದ ಮಕ್ಕಳಲ್ಲಿ ಕುತೂಹಲ ಮೂಡಿಸುವಂತ ಅಂಶಗಳನ್ನು ರೂಢಿಸಿಕೊಳ್ಳುವಂತ ಶಿಕ್ಷಣ ನೀಡಲು ಸಾಧ್ಯವಾಗುತ್ತಿಲ್ಲ, ಈ ಬೆಳವಣಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಕ್ಷೇತ್ರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ತಾಂತ್ರಿಕ ಸಮಸ್ಯೆಗಳು ಬಗೆಹರಿದ ಬಳಿಕ ಬಿಜೆಪಿ ಸೇರ್ಪಡೆ ಖಚಿತವಾಗಿ, ಅವರ ಮರಳಿ ಬಿಜೆಪಿ ಸೇರ್ಪಡೆಯನ್ನು ವಿರೋಧಿಸುವವರು ಪಕ್ಷ ಬಿಟ್ಟು ಹೊರನಡೆಯಲಿ. ಮುಂದಿನ ಕುಂದಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಲಾಡಿಯವರೇ ಆಗಲಿದ್ದಾರೆ ಎಂದು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಹೇಳಿದರು. ಅವರು ಕುಂದಾಪುರದಲ್ಲಿ ಜರುಗಿದ ಬಿಜೆಪಿ ಪರಿವರ್ತನಾ ಯಾತ್ರೆಯನ್ನು ಉದ್ಘಾಟಿಸಿದ ಬಳಿಕ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಸ್ವತಃ ಮುಖ್ಯಮಂತ್ರಿಗಳೇ ಹಲವು ಹಗರಣಗಳಲ್ಲಿ ಭಾಗಿಯಾಗಿದ್ದಾರೆ. ಅಧಿವೇಶನದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ಹಗರಣಗಳನ್ನು ದಾಖಲೆ ಸಹಿತ ಬಹಿರಂಗ ಮಾಡಲಾಗುವುದು. ಭ್ರಷ್ಟಾಚಾರದಲ್ಲಿ ತೊಡಗಿರುವ ಕಾಂಗ್ರೆಸ್ಗೆ ಅತ್ಯಾಚಾರದ ಆರೋಪ ಹೊತ್ತಿರುವ ವೇಣುಗೋಪಾಲ ಉಸ್ತುವಾರಿಯಾಗಿ ಬಂದಿರುವುದು ದುರಂತವೇ ಸರಿ. ಕಾಂಗ್ರೆಸ್ನ ಸದ್ದಡಗಿಸಲು ಮತ್ತೆ ರಾಜ್ಯದಲ್ಲಿ ಬಹುಮತದಿಂದ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವಂತೆ ಮಾಡುವ ಜವಾಬ್ದಾರಿ ಕಾರ್ಯಕರ್ತರಿಗಿದೆ ಎಂದರು. ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ…
ಕುಂದಾಪ್ರ ಡಾಟ್ ಕಾಂ ಲೇಖನ. ಒಂದೇ ನೋಟಕ್ಕೆ ಮನತುಂಬಿದ ನಗು, ಒಮ್ಮೊಮ್ಮೆ ಸೆಡವು, ಬಾಗುವ ರೇಖೆಗೆ ತಕ್ಕಂತೆ ಬದಲಾಗುವ ಭಾವಲಹರಿ. ಕಾರ್ಟೂನ್ ಎಂದರೆ ಹಾಗೆ. ಆಳುವವರಿಗೊಂದು ಚಾಟಿ. ಜನಸಾಮಾನ್ಯನಿಗೆ ನಗುವಿನ ಚಟಾಕಿ. ಕಾರ್ಟೂನಿಷ್ಠರಲಲ್ಲಿ ಕಲಾವಿದ, ಪತ್ರಕರ್ತ ಏಕಕಾಲಕ್ಕೆ ಜಾಗೃತನಾಗಿರುತ್ತಾನೆ. ನೂರು ಪದಗಳಲ್ಲಿ ಹೇಳುವುದನ್ನು ಒಂದು ರೇಖೆಯಲ್ಲಿ ಹೇಳಿ ಮುಗಿಸುವ ಛಾತಿ ಕಾರ್ಟೂನಿಷ್ಠರದ್ದು. ಇಂತಹ ಕಾರ್ಟೂನಿಷ್ಠರನ್ನು ಕಾರ್ಟೂನಿಷ್ಠರ ತವರು, ಕುಂದಾಪುರದಲ್ಲಿ ಒಗ್ಗೂಡಿಸಿ ಕಳೆದ ನಾಲ್ಕು ವರ್ಷಗಳಿಂದ ಆಯೋಜಿಸುತ್ತಿರುವ ಕಾರ್ಟೂನು ಹಬ್ಬ ಮತ್ತೆ ಬಂದಿದೆ. ವಿನೋದ, ಪುಳಕ, ಕಲಿಕೆ, ಸ್ವರ್ಧೆ, ಅರಿವಿನ ಜೊತೆಗೆ ಕಾರ್ಟೂನು ಪ್ರೀಯರಿಗೆ ಭರಪೂರ ಮನೋರಂಜನೆಯನ್ನು ನೀಡುತ್ತಿರುವ ಕಾರ್ಟೂನು ಹಬ್ಬ ಈ ಭಾರಿಯೂ ನವೆಂಬರ್ 16ರಿಂದ ಮೂರು ದಿನಗಳ ಕಾಲ ನಡೆಯಲಿದೆ. ಖ್ಯಾತ ವ್ಯಂಗ್ಯಚಿತ್ರಕಾರ ಕುಂದಾಪುರದ ಸತೀಶ್ ಆಚಾರ್ಯ ಅವರ ಸಾರಥ್ಯದಲ್ಲಿ ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರ ತಂಡದ ಕಾರ್ಟೂನಿಷ್ಠರ ನೇತೃತ್ವದಲ್ಲಿ ಪ್ರತಿ ವರ್ಷ ನಡೆಯುತ್ತಿರುವ ಕಾರ್ಟೂನು ಹಬ್ಬ ಹತ್ತಾರು ವಿಶೇಷತೆಗಳೊಂದಿಗೆ ರಂಗು ರಂಗಾಗಿ ನಡೆಯುತ್ತಿದ್ದು ಈ ಭಾರಿಯೂ ಮೂರು…
ಕುಂದಾಪ್ರ ಡಾಟ್ ಕಾಂ ಲೇಖನ. ಮರವಂತೆ ಮಹಾರಾಜ ಶ್ರೀ ವರಾಹಸ್ವಾಮಿ ದೇವಸ್ಥಾನದಲ್ಲಿ ಶ್ರೀ ವಿಷ್ಣು ಹಾಗೂ ಶ್ರೀ ವಿಷ್ಣುವಿನ ದಶವತಾರಗಳಲ್ಲಿ ಎರಡು ಮುಖ್ಯ ಅವತಾರಗಳಾದ ಶ್ರೀ ವರಾಹ ಮತ್ತು ಶ್ರೀ ನರಸಿಂಹ ದೇವರು ಈ ಮೂರು ದೇವರ ಮೂರ್ತಿಗಳು ಒಂದೇ ಗರ್ಭಗುಡಿಯಲ್ಲಿ ಸಾಲಾಗಿ ಸ್ಥಾಪಿಸಲ್ಪಟ್ಟಿರುವುದು ಈ ದೇವಾಲಯದ ವೈಶಿಷ್ಟ್ಯ. ಮೂರು ಮೂರ್ತಿಗಳಿಗೆ ಪ್ರತ್ಯೇಕ ಪ್ರವೇಶ ದ್ವಾರಗಳಿದ್ದರೂ ಎಡನಾಳಿ ಮತ್ತು ಮುಖಮಟಂಪ ಮಾತ್ರ ಒಂದೇ. ಮೂರು ದೇವರಿಗೆ ಆಗಮವಿದೆಯಂತೆ ಹಗಲು ಮತ್ತು ರಾತ್ರಿ ಪೂಜೆ ನಡೆಯುತ್ತದೆ. ಭರತ ಭೂಮಿಯಲ್ಲಿನ ಏಳು ವರಾಹ ದೇವಸ್ಥಾನಗಳಲ್ಲಿ ಮರವಂತೆಯ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನವು ಒಂದೇನಿಸಿಕೊಂಡಿದೆ. ದೇವಳದ ಐತಿಹ್ಯ: ಮರವಂತೆ ಧಾರ್ಮಿಕವಾಗಿ ಅತ್ಯಂತ ಪವಿತ್ರವಾದ ಕ್ಷೇತ್ರ. ಗತ ಪೂರ್ವದಲ್ಲಿ ದೇವೇಂದ್ರನು ಗೌತಮ ಮುನಿಯ ಪತ್ನಿ ಅಹಲ್ಯೆಯಲ್ಲಿ ಕಾಮಾತುರನಾಗಿ ಗೌತಮ ಋಷಿಯ ಶಾಪಕ್ಕೀಡಾಗಿ ಭೂಲೋಕದ ಸೌಪರ್ಣಿಕ ನದಿಯ ತಟದಲ್ಲಿ ವಾಸಿಸುತ್ತಿದ್ದನು. ಆ ಸಮಯದಲ್ಲಿ ಗುಹೇಶ್ವರ ಲಿಂಗವನ್ನು ಪೂಜಿಸಿ, ತಪಸ್ಸು ಮಾಡುತ್ತಾ, ಸಮಯ ಕಳೆದ ದೇವೇಂದ್ರನು ಶಾಪ ವಿಮುಕ್ತಿಯಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಟಾಲಿವುಡ್ನ ಪ್ರಖ್ಯಾತ ನಟ, ತೆಲುಗು ಸಿನಿಪ್ರೀಯರ ಕಣ್ಮಣಿ, ಜ್ಯೂನಿಯರ್ ಎನ್ಟಿಆರ್ ಕುಂದಾಪುರ ಮೂಲದವರು! ಹೌದು. ಇಂತಹದ್ದೊಂದು ಹುಬ್ಬೇರಿಸುವ ಕಥೆಯನ್ನು ಸ್ವತಃ ಜ್ಯೂನಿಯರ್ ಎನ್ಟಿಆರ್ ಅದೂ ಶುದ್ಧ ಕನ್ನಡದಲ್ಲಿಯೇ ಹೇಳಿಕೊಂಡಿದ್ದಾರೆ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗು ಚಿತ್ರರಂಗದ ಪ್ರಖ್ಯಾತ ನಟ ಎನ್.ಟಿ. ರಾಮ ರಾವ್ ಅವರ ಮೊಮ್ಮಗನಾಗಿರುವ ಜ್ಯೂನಿಯರ್ ಎನ್ಟಿಆರ್ ಐಫಾ ಚಿತ್ರೋತ್ಸವದಲ್ಲಿ ಪ್ರಶಸ್ತಿ ಸ್ವೀಕರಿಸುವ ಸಂದರ್ಭ ಭಾವುಕರಾಗಿ ತಮ್ಮ ಕುಂದಾಪುರದ ನಂಟನ್ನು ಬಿಚ್ಚಿಟ್ಟಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಏನಂದ್ರು ಜ್ಯೂ. ಎನ್ಟಿಆರ್: ಐಫಾ ಚಿತ್ರೋತ್ಸವದ ಕೊನೆಯ ದಿನ ಅವರ ’ಜನತಾ ಗ್ಯಾರೇಜ್’ ಸಿನೆಮಾ ನಟನೆಗೆ ಪ್ರಶಸ್ತಿ ಸ್ವೀಕರಿಸಲು ವೇದಿಕೆ ಹತ್ತಿದ್ದರು. ಕಾಕತಾಳಿಯವೆಂಬಂತೆ ಕರಾವಳಿಯ ನಟ ರಕ್ಷಿತ್ ಶೆಟ್ಟಿ ಅವರಿಗೆ ಪ್ರಶಸ್ತಿ ನೀಡಲು ವೇದಿಕೆಗೆ ಬಂದಿದ್ದರು. ನಿರೂಪಕರು ನಟ ರಕ್ಷಿತ್ ಶೆಟ್ಟಿ ಅವರ ಪರಿಚಯ ಮಾಡುತ್ತಿದ್ದಾಗ ಅವರ ಊರಿನ ಬಗೆಗೆ ಹೇಳುತ್ತಿದ್ದರು. ಆಗ ಜ್ಯೂನಿಯರ್ ಎನ್ಟಿಆರ್ ತನಗೂ ಕರಾವಳಿಗೂ ಇರುವ ನಂಟನ್ನು ಬಿಚ್ಚಿಟ್ಟರು. ನನ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಲ್ಫ್: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಘ್ ಇದರ ಉದ್ಘಾಟನಾ ಸಮಾರಂಭ ಹಾಗೂ ವ್ಯಾಪಾರ ಮತ್ತು ಕಾರ್ಯನಿರ್ವಾಹಕರ ಸಮಾವೇಶ ಮಾಚ್ 31ರ ಬೆಳಿಗ್ಗೆ ಯುಎಐ ಬರ್ದುಬಾಯಿ ರೀಜೆಂಟ್ ಪ್ಯಾಲೇಸ್ ಹೋಟೆಲ್ನಲ್ಲಿ ಜರುಗಲಿದ್ದು ಸಕಲ ಸಿದ್ಧತೆ ನಡೆದಿದೆ. ಕುಂದಾಪುರ ಭಾಷಿಕರನ್ನು ಒಂದುಗೂಡಿಸುವುದರೊಂದಿಗೆ ಒಂದು ಸಾಂಸ್ಥಿಕ ರೂಪ ನೀಡಿ, ಪರಸ್ಪರ ಸಹಾಯ ಸಹಕಾರ ಮಾಡುವ ಸಲುವಾಗಿ ಹುಟ್ಟುಹಾಕಿರುವ ಕುಂದಾಪ್ರ ಕನ್ನಡ ಬಳಗದ ಉದ್ಘಾಟನೆಯೊಂದಿಗೆ ವ್ಯಾಪಾರ ಮತ್ತು ಕಾರ್ಯನಿರ್ವಾಹಕರ ಸಮಾವೇಶದಲ್ಲಿ ಕುಂದಾಪುರ ಮೂಲಕ ವಿವಿಧ ಉದ್ಯಮಿಗಳು ಒಂದೆಡೆ ಸೇರಲಿದ್ದಾರೆ. ಕುಂದಾಪ್ರ ಕನ್ನಡ ಬಳಗ: ಗಲ್ಫ್ ರಾಷ್ಟ್ರದಲ್ಲಿ ನೆಲೆಸಿರುವ ಕುಂದಾಪ್ರ ಭಾಷಿಕರ ಕೂಡಿವಿಕೆ ಒಂದು ವೇದಿಕೆ ದೊರಕಿಸಿಕೊಡುವುದು. ಉದ್ಯೋಗ ಅರಿಸಿ ಬರುವ ಕುಂದಾಪುರಿಗರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸುವುದು, ಕುಂದಾಪುರ ಭಾಷೆಯ ಬದುಕು, ಕಲೆ ಸಾಹಿತ್ಯವನ್ನು ದಾಖಲಿಸುವುದು, ಭಾಷಿಕ ಸಾಧಕರನ್ನು ಗುರುತಿಸಿ ಗೌರವ ಸನ್ಮಾನ ನೀಡುವುದು ಇದರ ಜೊತೆ ಜೊತೆಗೆ ಬಡ ವಿದ್ಯಾರ್ಥಿಗಳಿಗೆ, ಅಶಕ್ತರು ಹಾಗೂ ವಯೋವೃದ್ಧರಿಗೆ ನೆರವು ಸೇರಿದಂತೆ ಹಲವು ಪ್ರಮುಖ…
ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ ಕುಂದಾಪುರ: ಬಿಸಿನೀರಿನಿಂದ ಸ್ನಾನ ಮಾಡಲು ಕಟ್ಟಿಗೆಯನ್ನು ತಂದು ಹಂಡೆ ಬಿಸಿ ಮಾಡಬೇಕೆಂದಿಲ್ಲ. ಸಾವಿರಾರು ರೂಪಾಯಿ ತೆತ್ತು ಗ್ಯಾಸ್ ಗ್ಲಿಝರಿನ್, ಸೋಲಾರ್ ವಾಟರ್ ಹೀಟರ್ಗೆ ಮೊರೆ ಹೋಗಬೇಕೆಂದೂ ಇಲ್ಲ. ಒಂದು ಭಾರಿ ಅತಿ ಕಡಿಮೆ ಬಂಡವಾಳ ವಿನಿಯೋಗಿಸಿದರೆ ಸಾಕು. ಸೌರ ಶಕ್ತಿಯನ್ನು ಉಪಯೋಗಿಸಿಕೊಂಡು ನಿಮ್ಮ ಮನೆ, ಹೋಟೆಲ್ಗಳಿಗೆ ದಿನವಿಡಿ ಸುಲಭವಾಗಿ ಬಿಸಿನೀರು ಪಡೆದುಕೊಳ್ಳುವ ಸರಳ ತಂತ್ರಜ್ಞಾನವನ್ನು ನೀವೆ ಅಳವಡಿಸಿಕೊಳ್ಳಬಹುದು! ಅಂದ ಹಾಗೆ ಈ ಸರಳ ತಂತ್ರಜ್ಞಾನದ ಆವಿಷ್ಕಾರವನ್ನು ಮಾಡಿರುವುದಲ್ಲದೇ, ತನ್ನದೇ ಮನೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಅಳವಡಿಸಿಕೊಂಡು ಅವಶ್ಯಕತೆಗೆ ತಕ್ಕಷ್ಟು ಬಿಸಿನೀರು ಪಡೆದುಕೊಳ್ಳುತ್ತಿದ್ದಾರೆ ಸಾಲಿಗ್ರಾಮದ ನಿವಾಸಿ ದಿನೇಶ್ ಸಿ ಹೊಳ್ಳ. ತನ್ನ ಆವಿಷ್ಕಾರವನ್ನು ’ಪಾಕೆಟ್ ಸ್ನೇಹಿ ಸೋಲಾರ್ ವಾಟರ್ ಹೀಟರ್’ ಎಂದು ಕರೆದಿರುವ ಹೊಳ್ಳರು, ಬಿಸಿನೀರಿಗಾಗಿ ಕಟ್ಟಿಗೆಯನ್ನು ತಂದು ಬೆಂಕಿ ಹೊತ್ತಿಸಿ ಕಾಯಿಸುವುದಲ್ಲದೇ ಅದರ ಹೊಗೆಯನ್ನೂ ಸಹಿಸಿಕೊಳ್ಳಬೇಕು. ಇದು ಪರಿಸರಕ್ಕೂ ಹಾನಿ ಎಂಬುದನ್ನು ಅರಿತು ಬೇರೆನು ಮಾಡಬಹುದು ಎಂದು ಯೋಚಿಸುತ್ತಿರುವಾಗಲೇ ಅವರಿಗೆ ಹೊಳೆದದ್ದು ಈ ಸರಳ ಉಪಾಯ. ಕುಂದಾಪ್ರ…
