Rajaram Polymers koteshwara – Sunrise icon multi use tanks manufactured first time in India
Author: ಸುನಿಲ್ ಹೆಚ್. ಜಿ. ಬೈಂದೂರು
ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ನೂರಾರು ವರ್ಷಗಳ ಇತಿಹಾಸ ಹೊಂದಿರುವ, ಐತಿಹಾಸಿಕ ಕಂಬಳ ನಡೆಯುವ ತಗ್ಗರ್ಸೆ ಕಂಠದಮನೆ ಕುಟುಂಬಸ್ಥರಿಗೆ ಸೇರಿದ ಕಂಬಳಗದ್ದೆಯಲ್ಲಿ ಪ್ರತಿವರ್ಷದಂತೆ ಸಾಂಪ್ರದಾಯಿಕ ಕೃಷಿ ಚಟುವಟಿಕೆಗಳು ಆರಂಭಗೊಂಡಿದ್ದು, ನಾಟಿ ಕಾರ್ಯ ಪೂರ್ಣಗೊಂಡಿದೆ. ಕಂಠದ ಮನೆಯ ಕುಂಟುಂಬಿಕರಲ್ಲಿ ಹಿರಿಯವರಾದ ಟಿ. ನಾರಾಯಣ ಹೆಗ್ಡೆ ಅವರ ಮಾರ್ಗದರ್ಶನಲ್ಲಿ ನೂರಾರು ಮಂದಿ ಕೃಷಿ ಕಾರ್ಮಿಕರಿಂದ ವಾಡಿಕೆಯಂತೆ ಒಂದೇ ದಿನಲ್ಲಿ ಕೃಷಿ ಕಾರ್ಯ ಪೂರ್ಣಗೊಂಡಿದೆ. ಜಿಪಂ ಸದಸ್ಯ ಬಾಬು ಶೆಟ್ಟಿ, ಗ್ರಾಪಂ ಸದಸ್ಯ ಬಾಲಕೃಷ್ಣ ಹೆಗ್ಡೆ, ಉದಯ ಹೆಗ್ಡೆ, ಅರ್ಜುನ ಹೆಗ್ಡೆ, ಮೊದಲಾದವರು ಸಾಂಪ್ರದಾಯಿಕ ಕೃಷಿ ಕಾರ್ಯಕ್ಕೆ ಚಾಲನೆ ನೀಡುವ ವೇಳೆಗೆ ಉಪಸ್ಥಿತರಿದ್ದರು. ಕುಂದಾಪ್ರ ಡಾಟ್ ಕಾಂ. ಸಾಂಪ್ರದಾಯಿಕ ಕೃಷಿ ಕಾರ್ಯ ಕಂಠದಮನೆಯ ಎದುರೇ 5.14 ಎಕರೆ ವಿಸ್ತೀರ್ಣವಾದ ಕಂಬಳಗದ್ದೆ ಇದ್ದು, ಇದು ದೇವರಗದ್ದೆ ಎಂಬ ನಂಬಿಕೆ ಸ್ಥಳೀಯರಲ್ಲಿದೆ. ಇಲ್ಲಿರುವ ವೀರಗಲ್ಲು, ಶಾಸನಗಳು ಇದು ಪುರಾತನವಾದುದು ಎಂಬುದಕ್ಕೆ ಪುಷ್ಠಿ ನೀಡುತ್ತದೆ. ಇಂದಿಗೂ ಕೂಡ ಇಲ್ಲಿ ಹಳೆಯ ಸಂಪ್ರದಾಯವನ್ನು ಆಚರಿಸಿಕೊಂಡು ಬರಲಾಗುತ್ತಿದ್ದು ಮಳೆಗಾಲ ಆರಂಭವಾಗುತ್ತಿದ್ದಂತೆ ನಾಟಿ ಕಾರ್ಯಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕುಂದಾಪುರ ದಕ್ಷಿಣದ 2016-17 ನೇ ಸಾಲಿನ ಅಧ್ಯಕ್ಷರಾಗಿ ಕೆನರಾ ಕೆಟರರ್ಸ್ ಮಾಲಕ ಒಝಲಿನ್ ರೆಬೆಲ್ಲೊ ಆಯ್ಕೆಯಾಗಿದ್ದಾರೆ. ಉತ್ತಮ ಸಮಾಜ ಸೇವಕರು, ಸಂಘಟಕರು ಆಗಿರುವ ಇವರು ಗಂಗೊಳ್ಳಿಯಲ್ಲಿ ಪೆರಿಶ್ ಚರ್ಚ್ನ ಕೆಥೋಲಿಕ್ ಸಭಾ ಅಧ್ಯಕ್ಷರಾಗಿ, Iಅಙಒ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸ್ಥಾಪಕ ನಿರ್ದೇಶಕರಾಗಿ,ವಂದೇ ಮಾತರಂ ವಿವಿಧ್ದೋದೇಶ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಕಾರ್ಯದರ್ಶಿ ಫ್ಲೈವನ್ ಡಿ’ಸೋಜಾ ನೇಮಕಗೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಮ್ಮ ನಡುವೆಯೇ ದೊರೆಯಬಹುದಾದ ಹಲವು ಶೈಕ್ಷಣಿಕ ಸಂಗತಿಗಳನ್ನು ಕಳೆದುಕೊಳ್ಳುತ್ತಾ ದಿಢೀರನೆ ಆಗುವ ಚಟುವಟಿಕೆಗಳಿಗೆ ಮಕ್ಕಳನ್ನು ತುರುಕಿಸುತ್ತಿರುವ ಆಂತಕದ ಸಂಗತಿಗಳ ನಡುವೆ ಸಾಂಸ್ಕೃತಿಕ ಕ್ರಿಯೆ ಹೆಚ್ಚುಚ್ಚು ನಡೆಯಬೇಕಾಗಿರುವುದು ಇಂದಿನ ಅಗತ್ಯತೆ ಎಂದು ರಂಗ ನಿರ್ದೇಶಕ ಡಾ. ಶ್ರೀಪಾದ ಭಟ್ ಹೇಳಿದರು. ಸಂಚಲನ ರಿ. ಹೊಸೂರು ಆಶ್ರಯದಲ್ಲಿ ಬೈಂದೂರು ಗ್ರಾಪಂ ವ್ಯಾಪ್ತಿಯ ಹೊಸೂರಿನ ಹೊಂಗಿರಣ ರಂಗಮಂದಿರದಲ್ಲಿ ಚಾಲನೆಗೊಂಡ ನಾಲ್ಕು ದಿನಗಳ ಕಾರ್ಯಕ್ರಮ ಕಾನನದೊಳಗೊಂದು ರಂಗಸುಗ್ಗಿ ‘ಶರತ್ ರಂಗ ಸಂಚಲನ -2016’ರಲ್ಲಿ ಶುಭಶಂಸಗೈದರು. ರಂಗಭೂಮಿ ಎಂಬುದು ಭೂಮಿಯ ಜೊತೆಗಿನ ಸಂಬಂಧವನ್ನು, ನಮ್ಮದೇ ಕಥೆಯನ್ನು ನಮಗೆ ಅರಹುವ ಒಂದು ಪ್ರಕ್ರಿಯೆ. ನಾಟಕ ಹಾಗೂ ನಮ್ಮ ಬದುಕಿನ ಜೊತೆಗಿನ ನಂಟನ್ನು ಬೇರ್ಪಡಿಸಿ ನೋಡಲು ಸಾಧ್ಯವಾಗುವುದೇ ಇಲ್ಲ ಈ ಪ್ರಕ್ರಿಯೆಯೊಳಕ್ಕೆ ಎಲ್ಲರೂ ನಮ್ಮವಾಗಿಬಿಡುವ, ಎಲ್ಲವನ್ನೂ ಹಂಚಿಕೊಳ್ಳುವ ಕ್ರಿಯೆ ಮಹತ್ವದ್ದೆನಿಸಿದೆ ಎಂದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಹಿರಿಯ ಕಲಾವಿದ ರವೀಂದ್ರ ಕಿಣಿ ಮಾತನಾಡಿ ಸಂಸ್ಥೆಯೊಂದನ್ನು ಕಟ್ಟುವುದಲ್ಲದೇ ಹಳ್ಳಿಯ ಜನರನ್ನು ಸಾಂಸ್ಕೃತಿಕವಾಗಿ ಒಗ್ಗೂಡಿಸುವ ಕೆಲಸ ಈ ಭಾಗದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾಗೂರಿನ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯಿಂದ ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ಕುಳಿತ ಧರ್ಮಶ್ರೀ ಶೆಟ್ಟಿ ಮರು ಮೌಲ್ಯಮಾಪನದಲ್ಲಿ 13 ಅಂಕ ಹೆಚ್ಚಿಗೆ ಗಳಿಸಿದ್ದಾಳೆ. 602 ಇದ್ದ ಅವಳ ಅಂಕದ ಮೊತ್ತ ಈಗ 615ಕ್ಕೆ ಏರಿದೆ. ಮೊದಲು ಬಂದಿದ್ದ ಫಲಿತಾಂಶದಂತೆ ಅವಳಿಗೆ ಕನ್ನಡದಲ್ಲಿ 125, ಇಂಗ್ಲಿಷ್ ಮತ್ತು ಹಿಂದಿಯಲ್ಲಿ ತಲಾ 95, ಗಣಿತದಲ್ಲಿ 85, ವಿಜ್ಞಾನದಲ್ಲಿ 99 ಮತ್ತು ಸಮಾಜ ವಿಜ್ಞಾನದಲ್ಲಿ 97 ಅಂಕಗಳು ಬಂದಿದ್ದುವು. ಈ ಫಲಿತಾಂಶದಿಂದ ತೃಪ್ತಳಾಗದ ಅವಳು ನಾಲ್ಕು ವಿಷಯಗಳ ಮರುಮೌಲ್ಯ ಮಾಪನಕ್ಕೆ ಕೋರಿಕೆ ಸಲ್ಲಿಸಿದ್ದಳು. ಇದೀಗ ಅದರ ಫಲಿತಾಂಶ ಬಂದಿದ್ದು, ಅದರಂತೆ ಆ ನಾಲ್ಕೂ ವಿಷಯಗಳಲ್ಲಿ ಅಂಕ ಪರಿಷ್ಕರಣೆ ಆಗಿದೆ. ಹಿಂದಿ ಮತ್ತು ವಿಜ್ಞಾನದಲ್ಲಿ ಒಂದೊಂದು ಅಂಕ ಏರಿಕೆಯಾದರೆ, ಗಣಿತದಲ್ಲಿ 8 ಹಾಗೂ ಸಮಾಜ ವಿಜ್ಞಾನದಲ್ಲಿ 3 ಏರಿಕೆಯಾಗಿದೆ. ಹಿಂದೆ ಅವಳ ಸರಾಸರಿ ಅಂಕ ಶೇ. 96.32 ಆಗಿದ್ದರೆ ಈಗ ಅದು ಶೇ. 98.4 ಆಗಿದೆ. ಪರಿಷ್ಕೃತ ಫಲಿತಾಂಶದಿಂದಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಲೇರಿಯಾ ಜ್ವರದಿಂದಾಗಿ ತಾಲೂಕಿನ ಕೊಲ್ಲೂರಿನ ಯುವತಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟ ಘಟನೆ ವರದಿಯಾಗಿದೆ. ಮಾಜಿ ತಾಪಂ ಸದಸ್ಯ ಗೋಪಾಲಕೃಷ್ಣ ಅಡಿಗರ ಏಕೈಕ ಪುತ್ರಿಯಾದ ಭಾಗೀರತಿ ಅಡಿಗ (22) ಮೃತ ಯುವತಿ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಅನುವಂಶೀಯ ಅರ್ಚಕ ಕುಟುಂಬದ ಗೋಪಾಲಕೃಷ್ಣ ಅಡಿಗ ಮಗಳಾದ ಭಾಗೀರಥಿಗೆ ಜ್ವರ ಕಾಣಿಸಿಕೊಂಡು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಲೇರಿಯಾ ರೋಗವೆಂಬುದನ್ನು ಖಚಿತಪಡಿಸಿಕೊಂಡು ಚಿಕಿತ್ಸೆ ನೀಡಲಾಗಿತ್ತು. ಸೋಮವಾರ ರಾತ್ರಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಯುವತಿ ಮಂಗಳವಾರ ಮಧ್ಯಾಹ್ನ ಮೃತಪಟ್ಟಿದ್ದಾಳೆ. ಕುಟುಂಬದಲ್ಲಿ ಎಲ್ಲರ ಪ್ರೀತಿಪಾತ್ರಳಾಗಿದ್ದ ಭಾಗೀರಥಿಯ ಅಗಲಿಕೆ ಕುಟುಂಬಕ್ಕೆ ತೀವ್ರ ಆಘಾತವನ್ನುಂಟುಮಾಡಿದೆ. ಬಿಎಸ್ಸಿ ಪದವಿಯ ಬಳಿಕ ಎಂಬಿಎಂ ಸ್ನಾತಕೋತ್ತರ ಪದವಿ ಪೂರೈಸಿದ್ದರೆನ್ನಲಾಗಿದೆ. ಕುಂದಾಪುರ ತಾಲೂಕಿನಲ್ಲಿ ಎರಡು ವರ್ಷಗಳ ಬಳಿಕ ಮಲೇರಿಯಾ ಜ್ವರಕ್ಕೆ ಯುವತಿ ಬಲಿಯಾಗಿರುವುದು ತೀವ್ರ ಆತಂಕ ಮೂಡಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷರಾಗಿ ಸದಾನಂದ ಶೇರುಗಾರ್ ಉಪ್ಪಿನಕುದ್ರು ಇವರನ್ನು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ನೇಮಕಗೊಳಿಸಿದ್ದಾರೆ. ಸದಾನಂದ ಶೇರುಗಾರ್ ಅವರು ತಲ್ಲೂರು ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷರಾಗಿ, ಬಿಜೆಪಿ ತ್ರಾಸಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಹಾಗೂ ಬೈಂದೂರು ಬಿಜೆಪಿ ಕ್ಷೇತ್ರ ಸಮಿತಿಯ ಪ್ರಧಾನ ಸಮಿತಿಯ ಕಾರ್ಯದರ್ಶಿಯಾಗಿ ಮತ್ತು ಪಕ್ಷದಲ್ಲಿ ತಳಮಟ್ಟದಿಂದ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿಕೊಂಡು ಬಂದಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಅಸಹಿಷ್ಟುತೆಯ ನೆಪವೊಡ್ಡಿ ಪ್ರಶಸ್ತಿ ವಾಪಾಸಿ ಚಳುವಳಿಗಳಲ್ಲಿ ಮುಂಚೂಣಿಯಲ್ಲಿದ್ದ ಸಾಹಿತಿಗಳು ಇಂದು ಮತ್ತೆ ಪ್ರಶಸ್ತಿ ಪಡೆಯವ ಹಪಹಪಿಯಲ್ಲಿದ್ದಾರೆ. ಸಣ್ಣತನದ ಮನಸ್ಥಿತಿ ಹೊಂದಿರುವ ಹಾಗೂ ಅಪ್ರಾಮಾಣಿಕ ಸಾಹಿತಿಗಳಿಂದಾಗಿ, ಸಾಹಿತ್ಯ ಕ್ಷೇತ್ರವೇ ಕುಲಗೆಟ್ಟು ಹೋಗಿದೆ. ಇಲ್ಲಿ ಕೆಲಸಮಾಡುವುದು ಕೇವಲ ಪ್ರಶಸ್ತಿಗಾಗಿ ಎಂಬ ಭಾವನೆಯಿದೆ, ಜನರು ಇಲ್ಲಿನ ಪ್ರಶಸ್ತಿಗಳ ಬಗ್ಗೆ ನಂಬಿಕೆ ಕಳೆದುಕೊಂಡಿದ್ದಾರೆ, ಬದಲಾಗಿ ಲೇವಡಿ ಮಾಡುವ ಪರಿಸ್ಥಿತಿ ಎದುರಾಗಿದೆ, ಇದು ಹೀಗೆ ಮುಂದುವರಿದರೇ ಇಡೀ ಸಾಹಿತ್ಯ ಕೇತ್ರಕ್ಕೆ ಗಂಡಾಂತರ ಕಾದಿದೆ ಎಂದು ಹಿರಿಯ ಸಾಹಿತಿ ಡಾ. ಮೊಗಸಾಲೆ ಹೇಳಿದರು. ಉಪ್ಪುಂದ ಶಂಕರಕಲಾ ಮಂದಿರದಲ್ಲಿ ಕುಂದ ಅಧ್ಯಯನ ಕೇಂದ್ರ ಉಪ್ಪುಂದ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಘಟಕ ಹಾಗೂ ಸ್ಥಳೀಯ ಸಂಘಟನೆಗಳ ಸಹಕಾರದೊಂದಿಗೆ ಸಹಕಾರದೊಂದಿಗೆ ಉಪ್ಪುಂದದ ಹೊಳಪು ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಕುಂದಶ್ರೀ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಉಪ್ಪುಂದ ಚಂದ್ರಶೇಖರ ಹೊಳ್ಳ ದಂಪತಿ ಅನನ್ಯವಾದುದು. ಹೊಳ್ಳರು ನಿಜಕ್ಕೂ ಸಂತಸದ ಸಂತರು. ಎಲ್ಲಾ…
ಕರ್ನಾಟಕದಲ್ಲಿ ಜುಲೈ 1ನ್ನು ಪತ್ರಿಕಾ ದಿನಾಚರಣೆಯಾನ್ನಾಗಿ ಆಚರಿಸಲಾಗಿತ್ತಿದೆ. ಕನ್ನಡದ ಮೊದಲ ಪತ್ರಿಕೆ ”ಮಂಗಳೂರು ಸಮಾಚಾರ” ಜುಲೈ 1, ಕ್ರಿ.ಶ.1843ರಲ್ಲಿ ರೆವರೆಂಡ್ ಫಾದರ್ ಹರ್ಮನ್ ಮೊಗ್ಲಿಂಗ್ ಇವರ ಸಂಪಾದಕತ್ವದಲ್ಲಿ ಆರಂಭಗೊಂಡಿತು. ಈ ದಿನದ ನೆನಪಾಗಿ ಕರ್ನಾಟಕದಲ್ಲಿ ಜುಲೈ 1ನ್ನು ಪತ್ರಿಕಾ ದಿನವನ್ನಾಗಿ ಆಚರಿಸಲಾಗುತ್ತಿದೆ. 1982 ರಲ್ಲಿ ಅಸ್ತಿತ್ವಕ್ಕೆ ಬಂದ ಮಾದ್ಯಮ ಅಕಾಡೆಮಿ ಪತ್ರಿಕಾ ದಿನಾಚರಣೆಯ ಮುಂದಾಳತ್ವವನ್ನು ವಹಿಸುತ್ತಿದೆ. 1996 ರಿಂದ ಪ್ರತಿ ವರ್ಷ ಈ ಆಚರಣೆ ನಡೆಯುತ್ತಿರುವುದು ಗಮನಾರ್ಹ. ಹರ್ಮನ್ ಮೊಗ್ಲಿಂಗ್: ಕನ್ನಡದ ಮೊದಲ ಪತ್ರಿಕೆಯನ್ನು ಆರಂಭಿಸಿದ ಹರ್ಮನ್ ಮೊಗ್ಲಿಂಗ್ ಅವರನ್ನು ಕನ್ನಡ ಪತ್ರಿಕೆಯ ಪಿತಾಮಹ ಎಂದು ಕರೆಯಲಾಗಿದೆ. 1811ರಲ್ಲಿ ಜರ್ಮನಿಯ ಬ್ರಾಕನ್ ಹೀಮ್ ಎಂಬಲ್ಲಿ ಜನಿಸಿದ ರೆವರೆಂಡ್ ಹರ್ಮನ್ ಮೊಗ್ಲಿಂಗ್ ವಿದೇಶಿಗನಾದರೂ ಕನ್ನಡದಲ್ಲಿ ಅಪಾರ ಪ್ರೇಮವನ್ನಿಟ್ಟು ಕನ್ನಡಕ್ಕೆ ಸಂಬಂಧಿಸಿದ ಅನೇಕ ವಿಷಯಗಳಲ್ಲಿ ಮೊದಲಿಗನಾದವನು. 4 ಪುಟಗಳ ಪಾಕ್ಷಿಕ ಪತ್ರಿಕೆಯಾಗಿ ಹೊರಬಂದ ”ಮಂಗಳೂರು ಸಮಾಚಾರ” ಕನ್ನಡದ ಮೊದಲ ಪತ್ರಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಕಲ್ಲಚ್ಚಿನಲ್ಲಿ ಮುದ್ರಿತಗೊಳ್ಳುತ್ತಿದ್ದ ಪತ್ರಿಕೆಯ ಬೆಲೆ ಆ 2 ಪೈಸೆಯಾಗಿತ್ತು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ನಮ್ಮ ಸಾಮರ್ಥ್ಯದ ಬಗೆಗೆ ಭ್ರಮೆಗಳನ್ನು ಸೃಷ್ಟಿಸಿಕೊಳ್ಳದೆ ವಾಸ್ತವದ ಒಳಹೊಕ್ಕು ಸತ್ಯವನ್ನು ಅರಿತುಕೊಳ್ಳಬೇಕು.ನಮ್ಮ ಬುದ್ದಿವಂತಿಕೆ ಎನ್ನುವುದು ಸಮಾಜದ ಒಳಿತಿಗೆ ತೆರೆದುಕೊಂಡಾಗ ಮಾತ್ರ ಬದುಕಿನ ಸಾರ್ಥಕತೆ ಸಾಧ್ಯ ಎಂದು ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಸುಬ್ರಮಣ್ಯ ಭಟ್ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ವಾರ್ಷಿಕ ಸಂಚಿಕೆ ದೃಷ್ಟಿ ಬಿಡುಗಡೆಗೊಳಿಸಿ ಮಾತನಾಡಿದರು. ಕನ್ನಡದಲ್ಲಿ ಸ್ತ್ರೀ ಸಾಹಿತ್ಯಕ್ಕೆ ಮತ್ತಷ್ಟು ಮನ್ನಣೆ ಸಿಗಬೇಕಿದೆ.ಸಾಹಿತ್ಯದಿಂದ ಬದುಕಿನ ನಿಜವಾದ ಸಂತೋಷವನ್ನು ಅನುಭವಿಸಲು ಸಾಧ್ಯ.ಆ ದಿಸೆಯಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಸರಸ್ವತಿ ವಿದ್ಯಾಲಯ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ. ಅಧ್ಯಕ್ಷತೆ ವಹಿಸಿದ್ದರು. ಸರಸ್ವತಿ ವಿದ್ಯಾಲಯ ವಿದ್ಯಾ ಸಂಸ್ಥೆಗಳ ಕಾರ್ಯದರ್ಶಿ ಎನ್ ಸದಾಶಿವ ನಾಯಕ್ ಶುಭ ಹಾರೈಸಿದರು.ವಿದ್ಯಾರ್ಥಿನಿ ಸುರಕ್ಷಾ ಭಾವಗೀತೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕನ್ನಡ ಉಪನ್ಯಾಸಕ ಎಚ್ ಸುಜಯೀಂದ್ರ ಹಂದೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿನಿ…
