ಕುಂದಾಪುರ: ಡಿ.10 ರಿಂದ 13ವರೆಗೆ ಕುಂದಾಪುರದ ಕಲಾಮಂದಿರದಲ್ಲಿ ಜರುಗುವ ಕಾರ್ಟೂನ್ ಹಬ್ಬದಲ್ಲಿ ನಾಡಿನ ಖ್ಯಾತ ವೃತ್ತಿಪರ ವ್ಯಂಗ್ಯಚಿತ್ರಕಾರರೊಂಗಿದೆ ಸಂವಾದಿಸುವ ಅವಕಾಶ ಕಲ್ಪಿಸಲಾಗಿದೆ. ರಂಗಕರ್ಮಿ ಸುರೇಶ್ ಆನಗಳ್ಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಡಿ.12ರ ಶನಿವಾರ ಬೆಳಿಗ್ಗೆ 11ಗಂಟೆಗೆ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಖ್ಯಾತ ವ್ಯಂಗ್ಯಚಿತ್ರಕಾರರಾದ ಪಿ. ಮಹಮ್ಮದ್, ಪ್ರಕಾಶ್ ಶೆಟ್ಟಿ, ಸತೀಶ್ ಆಚಾರ್ಯ ಹಾಗೂ ಇತರ ಖ್ಯಾತನಾಮರೊಂದಿಗೆ ಮಾಸ್ಟರ್ ಸ್ಟ್ರೋಕ್ ನಡೆಯಲಿದೆ. ಲೈವ್ ರಾಜಕೀಯ ಕಾರ್ಟೂನ್ ರಚನೆ ಹಾಗೂ ಕಾರ್ಟೂನ್ ಪ್ರೀಯರೊಂದಿಗೆ ನೇರ ಸಂವಾದವನ್ನು ಏರ್ಪಡಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
Author: ಸುನಿಲ್ ಹೆಚ್. ಜಿ. ಬೈಂದೂರು
ಕುಂದಾಪುರ: ಡಿ.10 ರಿಂದ 13ವರೆಗೆ ಕುಂದಾಪುರದ ಕಲಾಮಂದಿರದಲ್ಲಿ ಖ್ಯಾತ ವ್ಯಂಗ್ಯಚಿತ್ರಚಾರ ಸತೀಶ್ ಆಚಾರ್ಯ ಅವರ ನೇತೃತ್ವದಲ್ಲಿ ಜರುಗುವ ಕಾರ್ಟೂನ್ ಹಬ್ಬದಲ್ಲಿ ಡಿ.11ರಂದ ರೋಟರಿ ಕ್ಲಬ್ ಕುಂದಾಪುರ ಸಹಭಾಗಿತ್ವದಲ್ಲಿ ಚಿತ್ರನಿಧಿ-ಕ್ಯಾರಿಕೇಚರ್ ಬಿಡಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ. ಲೈವ್ ಕ್ಯಾರಿಕೇಚರ್ನಿಂದ ಬರುವ ಹಣವನ್ನು ವಂಡ್ಸೆ ಸರಕಾರಿ ಶಾಲೆಗೆ ದೇಣಿಗೆಯಾಗಿ ನೀಡಲು ನಿರ್ಧರಿಸಲಾಗಿದೆ. ಡಿ.11ರ ಶುಕ್ರವಾರ ಮಧ್ಯಾಹ್ನ 3ಗಂಟೆಯ ಡಾ. ರಂಜನ್ ಶೆಟ್ಟಿ ಚಿತ್ರನಿಧಿಯನ್ನು ಉದ್ಘಾಟಿಸಲಿದ್ದು, ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಅವರಿಂದಲೇ ಕ್ಯಾರಿಕೇಚರ್ ಬಿಡಿಸಿಕೊಳ್ಳುವ ಸುವರ್ಣಾವಕಾಶವಿದೆ. ಕಾರ್ಟೂನ್ ಪ್ರೀಯರು ಕೂಪನ್ಗಳಿಗಾಗಿ ರೋಟರಿ ಅಧ್ಯಕ್ಷ ಪ್ರಶಾಶ್ಚಂದ್ರ ಶೆಟ್ಟಿ (9845766055)ಅವರನ್ನು ಸಂಪರ್ಕಿಸಬಹುದು ಎಂದು ಸಂಘಟಕರು ತಿಳಿಸಿದ್ದಾರೆ.
ಕುಂದಾಪುರ: ಕುಂದಾಪುರದ ಖ್ಯಾತ ವ್ಯಂಗ್ಯಚಿತ್ರಚಾರ ಸತೀಶ್ ಆಚಾರ್ಯ ಅವರ ನೇತೃತ್ವದಲ್ಲಿ ಇಲ್ಲಿನ ಕಲಾಮಂದಿರದಲ್ಲಿ ಡಿ.10-13ವರೆಗೆ ಕಾರ್ಟೂನ್ ಹಬ್ಬ ಜರುಗಲಿದ್ದು ಉದ್ಯಮಿ ಆನಂದ ಸಿ. ಕುಂದರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಟೂನ್ ಹಬ್ಬ ಹಾಸ್ಯದ ಹೈವೇ ಎಂಬ ನಾಲ್ಕು ದಿನಗಳ ಕಾರ್ಯಕ್ರಮದಲ್ಲಿ ಕಾರ್ಟೂನ್ ಪ್ರದರ್ಶನ, ಖ್ಯಾತ ವ್ಯಂಗ್ಯಚಿತ್ರಕಾರರೊಂದಿಗೆ ಸಂವಾದ, ವಿದ್ಯಾರ್ಥಿನಿಯರಿಗೆ ಮಾಯಾ ಕಾಮತ್ ಕಾರ್ಟೂನ್ ಸ್ವರ್ಧೆ, ವೈದ್ಯರುಗಳಿಗಾಗಿ ಡೂಡ್ಲಿಂಗ್ ವಿತ್ ಡಾಕ್ಟರ್, ವಿದ್ಯಾರ್ಥಿಗಳಿಗೆ ವ್ಯಂಗ್ಯಚಿತ್ರ ಸ್ವರ್ಧೆ, ಸಾರ್ವಜನಿಕರಿಗೆ ಕಾರ್ಟೂನ್ ಡೈಲಾಗ್ ಬರೆಯೋ ಸ್ವರ್ಧೆ, ಸೆಲ್ಫಿ ಕಾರ್ನ್ರ್, ಲೈವ್ ಕ್ಯಾರಿಕೇಚರ್ ಬರೆಯುವುದು ವಿವಿಧ ಸ್ವರ್ಧೆ, ಕಾರ್ಯಾಗಾರ, ಕಾರ್ಟೂನ್ ಸಂಬಂಧಿತ ಮಾತುಕತೆ, ಪ್ರದರ್ಶನ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪುರ: ತಾಲೂಕಿನ ಬೆಳ್ವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಮ್ಮೊಲ – ಹಳ್ನೀರು ಎಂಬಲ್ಲಿನ ಸೀತಾನದಿಯ ದಡದಲ್ಲಿ ಸೋಮವಾರ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಕಂದಾವರ ಗ್ರಾಮದ ನೆಚ್ಚೂರು ನಿವಾಸಿ ಉಷಾ ಶೆಟ್ಟಿ ಕೊಲೆ ಮಾಡಲಾಗಿತ್ತು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ. ಅಣ್ಣಾಮಲೈ ಹೇಳಿದ್ದಾರೆ. ಈ ಬಗ್ಗೆ ಕುಂದಾಪುರದಲ್ಲಿ ಕರೆಯಲಾದ ಸುದ್ಧಿಗೋಷ್ಟಿಯಲ್ಲಿ ಅವರು ಮಾಧ್ಯಮದ ಜೊತೆ ಮಾತನಾಡಿದರು. ಮರಣೋತ್ತರ ಶವ ಪರೀಕ್ಷೆಯ ನಂತರ ಬಂದ ವರದಿಯ ಪ್ರಕಾರ ಶವ ಪತ್ತೆಯಾಗುವ ಏಳು ದಿನಗಳ ಹಿಂದೆ ಕೊಲೆಯಾಗಿದ್ದು, ಮುಖ ಹಾಗೂ ತಲೆಗೆ ಗಾಯಗಳಾಗಿರುವುದು ಪತ್ತೆಯಾಗಿತ್ತು. ಅಲ್ಲದೇ ಸ್ಥಳೀಯವಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ ಸಂದರ್ಭ ಉಷಾಳ ಸಂಪರ್ಕದಲ್ಲಿದ್ದ ಏಳು ಜನ ವ್ಯಕ್ತಿಗಳನ್ನು ತನಿಖೆಗೊಳಪಡಿಸಲಾಗಿತ್ತು. ಇವರುಗಳ ಪೈಕಿ ಗುಮ್ಮೊಲದ ನಿವಾಸಿ ವಿಶ್ವನಾಥ ನಾಯ್ಕ್ ಎಂಬಾತನ್ನು ಕೊನೆಯ ಭಾರಿ ಸಂಪರ್ಕಿಸಿದ್ದು ಪೊಲೀಸರು ಈತನ ಬಗೆಗೆ ಸಂಶಯ ಬಲಗೊಂಡಿತ್ತು. ತನಿಕೆಯನ್ನು ಮುಂದುವರಿಸಿದಾಗ ಕೊಲೆಯ ಹಿಂದಿನ ಸತ್ಯ ಹೊರಬಿದ್ದಿದೆ. ಸುಮಾರು ಎಂಟು ವರ್ಷಗಳಿಂದ ಉಷಾಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ವಿಶ್ವನಾಥ ನಾಯ್ಕ…
ಬೈಂದೂರು: ಸಮೀಪದ ಶಿರೂರು ಕೋಣನಮಕ್ಕಿ ನಿವಾಸಿಯಾಗಿರುವ ವಿದ್ಯಾರ್ಥಿಯೊಬ್ಬ ತನ್ನ ಮನೆಯ ಸಮೀಪದ ಅಕೇಶಿಯಾ ಪ್ಲಾಂಟಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ. ರತ್ತೂಬಾಯಿ ಜನತಾ ಪ್ರೌಢಶಾಲೆಯ 9ನೇ ತರಗತಿಯಲ್ಲಿ ಕಲಿಯುತ್ತಿದ್ದ ಶಶಾಂಕ್ (15) ಮೃತ ವಿದ್ಯಾರ್ಥಿ. ಕೋಣನಮಕ್ಕಿ ನಿವಾಸಿ ಈಶ್ವರ ಎಂಬುವವರ ಮಗನಾದ ಶಶಾಂಕ್ ಪ್ರತಿನಿತ್ಯ ಬೆಳಿಗ್ಗೆ ವಾಕಿಂಗ್ ಗೆ ತೆರಳುವ ಅಭ್ಯಾಸ ಹೊಂದಿದ್ದ ಎನ್ನಲಾಗಿದೆ. ಇಂದು ಬೆಳಿಗ್ಗೆಯೂ ವಾಕಿಂಗ್ ಗೆ ತೆರಳಿದ್ದ ಶಶಾಂಕ್ ಶಾಲೆಗೆ ತೆರಳುವ ಸಮಯವಾಗಿದ್ದರೂ ವಾಪಾಸು ಬಾರದೇ ಇದ್ದುದರಿಂದ ಆತಂಕಗೊಂಡ ಮನೆಯವರು ಹುಡುಕಾಟ ನಡೆಸಿದಾಗ ಸಮೀಪದ ಅಕೇಶಿಯಾ ಪ್ಲಾಂಟೆಶನ್ ನಲ್ಲಿ ಶಶಾಂಕ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ನನ್ನ ಸಾವಿಗೆ ನಾನೇ ಕಾರಣ ಎಂದು ತನ್ನ ಬಲಗೈ ಮೇಲೆ ಬರೆದುಕೊಂಡಿರುವು ಮಾರ್ಕರ್ ಪೆನ್ನಿನಿಂದ ಬರೆದುಕೊಂಡಿದ್ದಾನೆ. ಬೈಂದೂರು ರತ್ತೂಬಾಯಿ ಜನತಾ ಪ್ರೌಢಶಾಲೆಯಲ್ಲಿ 9 ತರಗತಿ ಅಭ್ಯಸಿಸುತ್ತಿದ್ದ ಶಶಾಂಕ್ ಡಿಸ್ಟಿಂಕ್ಷನ್ ವಿದ್ಯಾರ್ಥಿಯಾಗಿದ್ದ. ವಿದ್ಯಾರ್ಥಿಯಾಗಿದ್ದ. ಎಲ್ಲರೊಂದಿಗೆ ಬೆರೆಯುವ ಗುಣ ಹೊಂದಿದ್ದ ಎನ್ನಲಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಮ್ಮಾಡಿ ಜನತಾ ಪ್ರೌಢ ಶಾಲೆ ಮತ್ತು ಕಾಲೇಜು ಕ್ರೀಡೋತ್ಸವ ಕುಂದಾಪುರ: ಕ್ರೀಡೆಯ ಮೂಲಕ ದೈಹಿಕ ಮತ್ತು ಮಾನಸಿಕ ಸದೃಢತೆಯಿಂದ ಪಠ್ಯ ಚಟುವಟಿಕೆಗಳಿಗೆ ಪೂರಕವಾಗಿದೆ. ಮನೋಬಲ ವೃದ್ಧಿಗಾಗಿ ಕ್ರೀಡೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಿ ಎಂದು ಹೆಮ್ಮಾಡಿ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜು ದೇವಾಡಿಗ ಹೇಳಿದರು. ಅವರು ಹೆಮ್ಮಾಡಿ ಶ್ರೀ.ವಿ.ವಿ.ವಿ. ಮಂಡಳಿಯ ಅಧೀನಕ್ಕೆ ಒಳಪಟ್ಟ ಜನತಾ ಪ್ರೌಢ ಶಾಲೆ ಮತ್ತು ಜನತಾ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಸಾಧು.ಎಸ್.ಬಿಲ್ಲವ ಸಭೆಯ ಅಧ್ಯಕ್ಷತೆ ವಹಿಸಿ, ಕ್ರೀಡಾ ದ್ವಜವನ್ನು ಅರಳಿಸಿದರು. ನಂತರ ಅವರು ಮಾತನಾಡಿ, ವಿದ್ಯಾರ್ಥಿಗಳು ಅತಿಯಾಗಿ ಮೊಬೈಲ್ ಮತ್ತು ಆಧುನಿಕ ತಾಂತ್ರಿಕತೆಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುವುದರಿಂದ ಆಂತರಿಕ ಮತ್ತು ಬಾಹ್ಯ ಒತ್ತಡಕ್ಕೆ ಒಳಗಾಗುತ್ತಾರೆ.ವ್ಯಸನಗಳನ್ನು ಬಿಟ್ಟು ಕ್ರೀಡೆಯ ಮೂಲಕ ಸದೃಢ ಆರೋಗ್ಯವಂತರಾಗಿ, ಸುಂದರ ಬದುಕಿಗಾಗಿ ಪಠ್ಯ-ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ ಎಂದರು. ಜನತಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಧಾಕರ ವಕ್ವಾಡಿ ವಿದ್ಯಾರ್ಥಿಗಳಿಗೆ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು.…
ಕುಂದಾಪುರ: ರೋಟರಿ ಮಿಡ್ ಟೌನ್ ತನ್ನ ರೋಟರಿ ಮಿಡ್ ಟೌನ್ ಹಾಲ್ನಲ್ಲಿ ಆಯೋಜಿಸಿದ್ದ ಕುಟುಂಬ ಸಮ್ಮಿಲನದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಜುಳಾ ವಿ ಪ್ರಸಾದ್ ಇವರು ನೆರೆದ ರೋಟರಿ ಕುಟುಂಬದ ಸದಸ್ಯರನ್ನು ಮತ್ತು ಆಹ್ವಾನಿತರನ್ನು ಉದ್ದೇಶಿಸಿ ಮೂಡನಂಬಿಕೆಗಳ ಬಗ್ಗೆ ಹಾಗೂ ಅವುಗಳ ನಿರ್ಮೂಲನೆಯ ಕುರಿತು ಹಾಗೂ ವೈಜ್ಣಾನಿಕ ಪ್ರಜ್ಞೆಯನ್ನು ಅಳವಡಿಸಿಕೊಳ್ಳುವ ಬಗ್ಗೆ, ಸಮಾಜದಲ್ಲಿ ಮಕ್ಕಳನ್ನು ಸತ್ಪ್ರಜೆಗಳಾಗಿ ಉತ್ತಮ ನಾಗರಿಕರಾಗಿ ಬೆಳೆಸುವ ಬಗ್ಗೆ ಹಾಗೂ ಪ್ರಸ್ತುತ ಸಮಾಜದಲ್ಲಿ ಹೆಣ್ಣು ಮಕ್ಕಳ ಪ್ರಾಮುಖ್ಯತೆ, ಹಣೆಗೆ ತಿಲಕ ಇಡುವ ಸಂಪ್ರದಾಯದ ಹಿಂದಿನ ಮಹತ್ವ ಇನ್ನಿತರ ವಿಷಯಗಳ ಬಗ್ಗೆ ಮಾತನಾಡಿದರು. ಸಭೆಯಲ್ಲಿ ೨೦೧೭-೧೮ನೇ ಸಾಲಿನಲ್ಲಿ ರಚನೆಯಾದ ರೋಟರಿಯ ಹೊಸ ಜಿಲ್ಲೆ-೩೧೮೨ಯ ಮೊದಲ ಗವರ್ನರ್ ಆಗಿ ಘೋಷಣೆಯಾದ ಬಳಿಕ ನಮ್ಮ ಕ್ಲಬ್ಗೆ ಅತಿಥಿಯಾಗಿ ಪ್ರಥಮವಾಗಿ ಬೇಟಿಯಿತ್ತ ಅಭಿನಂದನ್ ಶೆಟ್ಟಿಯವರನ್ನು ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು ಸಮ್ಮಿಲನ ಸಭೆಯಲ್ಲಿ ಮುಖ್ಯ ಅತಿಥಿ ಮಂಜುಳಾ ವಿ ಪ್ರಸಾದ್, ಅಭಿನಂದನ್ ಶೆಟ್ಟಿ ಹಾಗೂ ಜೋನಲ್ ಲೆಪ್ಟಿನೆಂಟ್ ಮಂಜುನಾಥ್ ಮಹಾಲೆಯವರು ಉಪಸ್ಥಿತರಿದ್ದರು. ರೋಟರಿ ಮಿಡ್ ಟೌನ್ನ ಅಧ್ಯಕ್ಷರಾದ…
ಗಂಗೊಳ್ಳಿ: ಬಾಯಿಯ ಆರೋಗ್ಯ ಸ್ವಸ್ಥವಾಗಿದ್ದರೆ ದೇಹದ ಆರೋಗ್ಯವು ಸುಧೃಡವಾಗಿರುತ್ತದೆ. ಆದುದರಿಂದ ಹಲ್ಲು ವಸಡುಗಳ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಬೇಕಿದೆ. ಆರೋಗ್ಯದ ಬಗ್ಗೆ ಮುತುವರ್ಜಿವಹಿಸುವ ಪ್ರತಿಯೊಬ್ಬರು ಬಾಯಿ, ದಂತ, ವಸಡುಗಳ ಬಗ್ಗೆ ಹೆಚ್ಚಿನ ಗಮನ ಕೊಟ್ಟಾಗ ಬಾಯಿಯಿಂದ ಹರಡುವ ರೋಗರುಜಿನಗಳಿಂದ ಮುಕ್ತಿ ಪಡೆದುಕೊಳ್ಳ ಬಹುದು ಇಂತಹ ದಂತ ಚಿಕಿತ್ಸೆ ಶಿಬಿರದ ಸದುಪಯೋಗವನ್ನು ಪಡಿಸಿಕೊಂಡು ಉತ್ತಮ ಆರೋಗ್ಯಪೂರ್ಣ ಜೀವನವನ್ನು ಹೊಂದಿರಿ ಎಂದು ರೋಟರಿ ಕ್ಲಬ್ ಕುಂದಾಪುರ ಸನ್ರೈಸ್ ಅಧ್ಯಕ್ಷ ದಿನಕರ ಪಟೇಲ್ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್, ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ದಂತ ವಿಜ್ಞಾನ ವಿಶ್ವವಿದ್ಯಾನಿಲಯ ಮಣಿಪಾಲದ ಸಹಯೋಗದೊಂದಿಗೆ ನುರಿತ ವೈದ್ಯರಿಂದ ಗಂಗೊಳ್ಳಿಯ ಶ್ರೀ ವಿಜಯ ವಿಠಲ ಮಂಟಪದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಮಾತನಾಡಿ ರೋಟರಿ ಕ್ಲಬ್ ಹತ್ತು ಹಲವು ಸಾಮಾಜಿಕ ಚಟುವಟಿಕೆಗಳನ್ನು ಆಯೋಜಿಸಿಕೊಂಡು ಬರುತ್ತಿದ್ದು ಸಾರ್ವಜನಿಕ ಸಹಕಾರ ಭಾಗವಹಿಸುವಿಕೆಯಿಂದ…
ಬೈಂದೂರು: ಮಾನವ ಸಂಘಜೀವಿಯಾಗಿದ್ದು, ಸಂಘಟನೆಗಳು ಪ್ರಾಮಾಣಿಕ, ಸತ್ಯ, ನಿಷ್ಠೆ ಮತ್ತು ಸಮಾಜಮುಖಿ ಚಿಂತನೆಗಳನ್ನು ಅಳವಡಿಸಿಕೊಂಡಾಗ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ. ಸಂಘಟಿತ ಸಮಾಜ ನಿರ್ಮಾಣವಾಗಬೇಕಾದರೆ, ಸಂಘ ಸಂಸ್ಥೆಗಳ ಪಾತ್ರ ಮಹತ್ವದಾಗಿದೆ. ಜನಪರ ಕಾಳಜಿಯ ಕಾರ್ಯಗಳು ಹಾಗೂ ಸಮಾಜವನ್ನು ಒಗ್ಗೂಡಿಸುವ ಪ್ರಯತ್ನ ಲಯನ್ಸ್ ಸಂಸ್ಥೆಯದಾಗಿದೆ ಎಂದು ಮೂಡಬಿದಿರೆ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ರಮೇಶ್ ಶೆಟ್ಟಿ ಹೇಳಿದರು. ಬೈಂದೂರು-ಉಪ್ಪುಂದ ಲಯನ್ಸ್ ಕ್ಲಬ್ಗೆ ಜಿಲ್ಲೆ 317ಸಿ ಪ್ರಾಂತಿಯ ಅಧ್ಯಕ್ಷ (ರಿಜನಲ್ ಚೇರ್ಮನ್) ಫಿಲಿಪ್ ಡಿ’ಕೊಷ್ಟಾ ಅಧಿಕೃತ ಭೇಟಿಯ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿದರು. ಲಯನ್ಸ್ ಕ್ಲಬ್ ಸಾಮಾಜಿಕ ಕಾರ್ಯಗಳಿಂದ ಜನ ಮನ್ನಣಿಗಳಿಸಿದೆ. ನೂರು ವರ್ಷದ ಸಂಭ್ರಮದಲ್ಲಿರುವ ಲಯನ್ಸ್ ಈ ವರ್ಷ ವಿವಿಧ ಭಾಗಗಳಲ್ಲಿ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಸಂತಸ ತಂದಿದೆ. ಬೈಂದೂರು-ಉಪ್ಪುಂದ ಲಯನ್ಸ್ ಕ್ಲಬ್ನ ಒಡನಾಡಿಗಳು ಜೊತೆ ಸೇರಿ ಒಳ್ಳೆಯ ವಿಚಾರಗಳನ್ನು ಪರಸ್ಪರ ವಿನಿಮಯ ಮಾಡಿಕೊಳ್ಳುವ ಮೂಲಕ ನಿಸ್ವಾರ್ಥ ಸೇವಾ ಮನೋಭಾವನೆಯಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸ್ಪಂದಿಸುತ್ತಾ ಪ್ರಸಕ್ತ ವರ್ಷ ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟಿಸುವುದರ ಮೂಲಕ…
