ಗ೦ಗೊಳ್ಳಿ: ಇತ್ತೀಚೆಗೆ ನಾವು೦ದದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕಿಯರ ವಿಭಾಗದ ವಾಲಿಬಾಲ್ ಪ೦ದ್ಯಾಟದಲ್ಲಿ ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಬಾಲಕಿಯರ ತ೦ಡವು ದ್ವಿತೀಯ ಸ್ಥಾನಗಳಿಸಿತು. ಆಟಗಾರ್ತಿಯರಾದ ಸ೦ಪ್ರೀತಾ,ರಶ್ಮಿತಾ,ಅನುಷಾ,ದೀಕ್ಷಿತಾ,ಪ್ರಮಿತಾ,ನಿಶಾ,ದಶಮಿ,ರೋಹಿಣಿ ಅವರೊ೦ದಿಗೆ ದೈಹಿಕ ಶಿಕ್ಷಕ ನಿರ್ದೇಶಕ ನಾಗರಾಜ ಶೆಟ್ಟಿ ಮತ್ತು ಪ್ರಾ೦ಶುಪಾಲ ಆರ್ ಎನ್ ರೇವಣ್ಕರ್ ಉಪಸ್ಥಿತರಿದ್ದಾರೆ. ಚಿತ್ರ ವರದಿ : ನರೇ೦ದ್ರ ಎಸ್ ಗ೦ಗೊಳ್ಳಿ.
Author: ಸುನಿಲ್ ಹೆಚ್. ಜಿ. ಬೈಂದೂರು
ಎಲ್ಲರೊಂದಿಗೆ ಬೆರತು ಬದುಕುವಂತೆ ಮಾಡುವುದೇ ನಮ್ಮ ದೊಡ್ಡ ಜವಾಬ್ದಾರಿ: ಡಾ. ನಾಗತಿಹಳ್ಳಿ ಕುಂದಾಪುರ: ಇಂದು ಪರಸ್ಪರ ಒಬ್ಬರಿಗೊಬ್ಬರು ಆತುಕೊಳ್ಳುತ್ತಾ, ಮೆಚ್ಚಿಕೊಳ್ಳುತ್ತಾ, ಪ್ರಾಮಾಣಿಕವಾಗಿ ವಿಮರ್ಷಿಸುತ್ತಾ ಮುಂದುವರಿಯಬೇಕಾದ ತುರ್ತು ಎದುರಾಗಿದೆ. ಎಲ್ಲರೂ ಬೆರೆತು ಬದುಕುವಂತೆ ಮಾಡುವುದೇ ನಮಗೂ ನಿಮಗೂ ಇರುವ ದೊಡ್ಡ ಜವಾಬ್ದಾರಿಯಾಗಿದೆ. ಅದರ ಅಗತ್ಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂಬುದನ್ನು ನಾವು ಸೂಕ್ಷ್ಮವಾಗಿ ಗಮನಿಸಬೇಕಿದೆ ಎಂದು ಖ್ಯಾತ ಸಾಹಿತಿ ಡಾ. ನಾಗತಿಹಳ್ಳಿ ಚಂದ್ರಶೇಖರ ಹೇಳಿದರು. ಅವರು ಗುಲ್ವಾಡಿಯ ತೋಟದಮನೆಯಲ್ಲಿ ಗುಲ್ವಾಡಿ ಸಾಂಸ್ಕೃತಿಕ ಪ್ರತಿಷ್ಠಾನವು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸಹಕಾರದೊಂದಿಗೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಪತ್ರಕರ್ತ ಸಂತೋಷಕುಮಾರ್ ಗುಲ್ವಾಡಿ ಸ್ಮಾಕರ ಕೊಡಮಾಡುವ ಗುಲ್ವಾಡಿ ಗೌರವ ಪುರಸ್ಕಾರವನ್ನು ಸ್ವೀಕರಿಸಿ ಮಾತನಾಡಿದರು. ಪತ್ರಿಕೋದ್ಯಮದಲ್ಲಿ ಹೊಸತನವನ್ನು ತಂದ ಸಂತೋಷಕುಮಾರ್ ಗುಲ್ವಾಡಿ ಅವರ ಹೆಸರಿನ ಈ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವುದು ಖುಷಿ ನೀಡಿದೆ. ಎಷ್ಟೇ ದೇಶ ಸುತ್ತಿ ಬಂದರೂ ನಾವಿರುವ ಜಾಗವನ್ನು ಸಾಂಸ್ಕೃತಿಕ ಕೇಂದ್ರವನ್ನಾಗಿ ರೂಪಿಸುವುದು ಬಹಳ ಮುಖ್ಯವಾದುದು. ಆ ನಿಟ್ಟಿನಲ್ಲಿ ಯಾಕುಬ್ ಖಾದರ್ ಗುಲ್ವಾಡಿಯವರ ಪ್ರಯತ್ನ ಶ್ಲಾಘನೀಯ ಎಂದರು. ಗುಲ್ವಾಡಿ…
ಕುಂದಾಪುರ: ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ಮಾಡುವಾಗ ಸಂಭ್ರಮದಿಂದಲೇ ಮಾಡಿ, ಸಂತೋಷವನ್ನು ಹಂಚಿಕೊಳ್ಳಿ ಅದಕ್ಕೆ ಯಾರ ವಿರೋಧವೂ ಇಲ್ಲ ಆದರೆ ಅದು ಇತರರಿಗೆ ತೊಂದರೆಯನ್ನು ಕೊಡುವ ಮಟ್ಟಕ್ಕೆ ಹೋಗುವಂತಿರಬಾರದು ಎಂದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಣ್ಣಾಮಲೈ ಹೇಳಿದರು. ಅವರು ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಕುಂದಾಪುರ ಶಾಂತಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾನೂನು ಪ್ರಕಾರ ಧ್ವನಿವರ್ಧಕಗಳು 50ಡೆಸಿಮಲ್ಕಿಂತ ಹೆಚ್ಚು ಸದ್ದು ಮಾಡಲು ಅವಕಾಶವಿಲ್ಲ. 10ಗಂಟೆಯ ನಂತರ ಉಪಯೋಗಿಸುವಂತೆಯೂ ಆದರೆ ಅದು ಸಾಧ್ಯವಿಲ್ಲವೆಂಬುದು ನಮಗೂ ತಿಳಿಯುತ್ತೆ. ಈ ವಿಚಾರದಲ್ಲಿ ಕಾನೂನನ್ನು ಸಡಿಸಿದ್ದೇವೆ. ರಾತ್ರಿ 10ಗಂಟೆಯ ಬಳಿಕ ಸಣ್ಣ ಧ್ವನಿಯನ್ನು ಬಳಸಿಕೊಳ್ಳಬಹುದು. ಉಡುಪಿ ಜಿಲ್ಲೆಯಲ್ಲಿ 406 ಗಣೇಶ ಉತ್ಸವಗಳು ನಡೆಯುತ್ತವೆ. ಪೊಲೀಸರ ಕಡೆಯಿಂದ ಎಲ್ಲಾ ರೀತಿಯ ಸಹಕಾರವನ್ನು ನಾವು ನೀಡಲು ಸಿದ್ಧರಿದ್ದೇವೆ. ಅದೇ ರೀತಿ ಗಣೇಶೋತ್ಸವ ಸಮಿತಿಗಳು ಕೂಡ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದ ಅವರು, ಸಾರ್ವಜನಿಕರು ಅನವಶ್ಯಕವಾಗಿ ಶಾಂತಿ ಕದಡಿದರೇ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು…
ಕುಂದಾಪುರ: ಪ್ರತಿಯೊಬ್ಬ ವ್ಯಕ್ತಿಯೊಳಗೊಬ್ಬ ಕಲಾವಿದನಿದ್ದಾನೆ. ಆದರೆ ಎಲ್ಲರಿಗೂ ಅವರಲ್ಲಿನ ಕಲೆಯನ್ನು ವ್ಯಕ್ತಪಡಿಸಲು ಸಾಧ್ಯವಿಲ್ಲ. ಕಲೆಗೊಂದು ಸೂಕ್ತ ಅವಕಾಶ ಸಿಕ್ಕಾಗ ಅದು ಅರಳುತ್ತದೆ ಎಂದು ಮಣಿಪಾಲದ ಉದ್ಯಮಿ ಬಾಲಕೃಷ್ಣ ಶೆಣೈ ಹೇಳಿದರು. ಕುಂದಾಪುರದ ಸಾಧನ ಸಂಗಮ ಟ್ರಸ್ಟ್ನ ಮೋಹನ ಮುರಳಿ ಕಲಾ ಗ್ಯಾಲರಿ ಹಾಗೂ ಸಿದ್ಧಾರ್ಥ ಮಯ್ಯ ಉಪ್ಪುಂದ ಇವರ ಏಕವ್ಯಕ್ತಿ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರ ಪ್ರಶಸ್ತಿ ಪುರಸ್ಕ್ರತ ಚಿತ್ರಕಲಾ ಶಿಕ್ಷಕ ಉಪಾಧ್ಯಾಯ ಮೂಡುಬೆಳ್ಳೆ ಮಾತನಾಡಿ ಅಂಗವಿಕಲತೆ ಇದ್ದರೂ ಸಹ ಅದನ್ನು ಮೀರಿ ಮಾಡುವ ಸಾಧನೆ ಆ ವ್ಯಕ್ತಯ ಎಲ್ಲಾ ವೈಕಲ್ಯಗಳನ್ನು ತೊಡೆದು ಹಾಕುತ್ತದೆ. ಸಿದ್ಧಾರ್ಥ ಮಯ್ಯ ಅವರ ಆಧನೆ ನಿಜಕ್ಕೂ ಶ್ಲಾಘನಾರ್ಹ ಎಂದವರು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಕುಂದಾಪುರ ಎಮ್. ಎಮ್ ಶಾಲೆಯ ಪ್ರಾಂಶುಪಾಲೆ ಚಿಂತನ ರಾಜೇಶ್, ಅಂಕಣಕಾರ್ತಿ ಶೋಭಾ ಅರಸ್ ಉಪಸ್ಥಿತರಿರುತ್ತಾರೆ. ಮಂಜುನಾಥ ಮಯ್ಯ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಾಧನ ಸಂಗಮದ ಅಧ್ಯಕ್ಷ ನಾರಾಯಣ ಐತಾಳ ವಂದಿಸಿದರು. ಶಮಂತ್ ಕಾರ್ಯಕ್ರಮ ನಿರೂಪಿಸಿದರು. ಗಣೇಶ ಚತುರ್ಥಿಯ ಅಂಗವಾಗಿ…
ಗ್ರಾ.ಪಂ. ಪ್ರಜಾಪ್ರಭುತ್ವದ ಯಶಸ್ಸಿಗೆ ಬುನಾದಿ: ಮೊಯ್ಲಿ ಕುಂದಾಪುರ: ಗ್ರಾ.ಪಂ. ವ್ಯವಸ್ಥೆ ಯಶಸ್ವಿಯಾದರೆ ದೇಶದ ಪ್ರಜಾಪ್ರಭುತ್ವ ಯಶಸ್ವಿಯಾದಂತೆ, ಇಂದು ಗ್ರಾ.ಪಂ.ಗೆ ಎಲ್ಲಾ ರೀತಿಯ ಹಕ್ಕು ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ಜಾತಿ, ಪಕ್ಷ ಬೇಧ ಮೆರೆತು ನಿರ್ವಹಿಸಿಸುವ ಕರ್ತವ್ಯ ಗ್ರಾ.ಪಂ. ಸದಸ್ಯರದ್ದಾಗಿದೆ. ಪ್ರಬಲ ರಾಜಕೀಯ ಇಚ್ಚಾಶಕ್ತಿ ಬಳೆಸಿಕೊಂಡಲ್ಲಿ ಎಲ್ಲಾ ಸಮಸ್ಯೆಗಳನ್ನು ಮೀರಿ ಮುನ್ನಡೆಯ ಬಹುದು ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಎಂ.ವೀರಪ್ಪ ಮೊಯಿಲಿ ಹೇಳಿದರು. ಅವರು ಕುಂದಾಪುರ ರೋಟರಿ ಲಕ್ಷ್ಮಿನರಸಿಂಹ ಕಲಾಮಂದಿರದಲ್ಲಿ ನಡೆದ ದೇವಾಡಿಗ ಸಮಾಜ ಸೇವಾ ಸಂಘ (ರಿ) ಕುಂದಾಪುರ ಕುಂದಾಪುರ ತಾಲೂಕು ಗ್ರಾ.ಪಂ. ದೇವಾಡಿಗ ಸಮಾಜದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಸದಸ್ಯರುಗಳನ್ನು ಅಭಿನಂದಿಸಿ ಮಾತನಾಡಿದರು. ರಾಜೀವಗಾಂಧಿ ಪ್ರಧಾನಿಯಾಗಿದ್ದಾಗ ನಾನು ಮುಖ್ಯಮಂತ್ರಿಯಾಗಿದ್ದೆ ಈ ಸಂದರ್ಭದಲ್ಲಿ ಗ್ರಾ.ಪಂ. ವ್ಯವಸ್ಥೆ ಬಲಪಡಿಸುವ ಹಾಗೂ ಪಂಚಾಯತ್ಗಳಿಗೆ ಹೆಚ್ಚಿನ ಹಕ್ಕು ಜವಾಬ್ದಾರಿ ನೀಡುವ ವ್ಯವಸ್ಥೆ ರೂಪುಗೊಂಡಿತು. ಅಲ್ಲದೇ ಸಿಇಟಿ ವ್ಯವಸ್ಥೆ ತಂದ ನಂತರ ಎಲ್ಲಾ ವರ್ಗದವರೂ, ಆರ್ಥಿಕವಾಗಿ ಹಿಂದುಳಿದವರೂ ಇಂಜಿನಿಯರ್ ಹಾಗೂ ಮೆಡಿಕಲ್ ಗೆ ಹೋಗಲು ಸಾಧ್ಯವಾಯಿತು ಎಂದರು. ಮುಂಬಯಿಯ…
ಕುಂದಾಪುರ: ಅನಿಯಮಿತ ವಿದ್ಯುತ್ ನಿಲುಗಡೆ ವಿರೋಧಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕುಂದಾಪುರ ವಿಧಾನಸಭಾ ಕ್ಷೇತ್ರದ ವತಿಯಿಂದ ಕುಂದಾಪುರದಲ್ಲಿ ಪ್ರತಿಭಟನಾ ರ್ಯಾಲಿ ನಡೆಯಿತು. ಈ ಸಂದರ್ಭದಲ್ಲಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಕುಂದಾಪುರ ವಿಧಾನಸಭಾ ಅಧ್ಯಕ್ಷ ಇಲಿಯಾಸ್ ಸಾಸ್ತಾನ ಮಾತನಾಡಿ ಲೋಡ್ ಶೆಡ್ಡಿಂಗ್ ನೆಪದಲ್ಲಿ ಬೇರೆಡೆಗಿಂತ ಕುಂದಾಪುರ ಭಾಗದಲ್ಲಿ ಹೆಚ್ಚು ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ. ಹೀಗೆ ಮನಬಂದಂತೆ ವಿದ್ಯುತ್ ನಿಲುಗಡೆ ಮಾಡುತ್ತಿರುವುದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಇದಕ್ಕೊಂದು ಪರ್ಯಾಯ ವ್ಯವಸ್ಥೆ ಮಾಡಬೇಕು ಹಾಗೂ ವಿದ್ಯುತ್ ಕಡಿತಗೋಳಿಸುಲು ನಿರ್ದಿಷ್ಟ ಸಮಯವನ್ನು ನಿಗದಿಗೊಳಿಸಬೇಕು ಎಂದವರು ಆಗ್ರಹಿಸಿದರು. ಕುಂದಾಪುರದ ಶಾಸ್ತ್ರೀವೃತ್ತದಿಂದ ಹೊರಟ ಪ್ರತಿಭಟನಾಕಾರರು ಮೆಸ್ಕಾಂ ಮುಖ್ಯ ಕಛೇರಿಗೆ ತೆರಳಿ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಎಸ್ಡಿಎಫ್ಐ ಉಡುಪಿ ಜಿಲ್ಲಾಧ್ಯಕ್ಷ ಆಸಿಫ್ ಕೋಟೇಶ್ವರ, ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಸಿರಾಜ್ ಕೋಟೇಶ್ವರ, ನವಾಜ್ ಕುಂದಾಪುರ, ಪಿಎಫ್ಐ ತಾಲೂಕು ಅಧ್ಯಕ್ಷ ಮೌಸಮ್ ಮೌಲಾನ ಮುಂತಾದವರು ಭಾಗವಹಿಸಿದ್ದರು.
ಬೈಂದೂರು: ನಾಯ್ಕನಕಟ್ಟೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವೆಂಕಟರಮಣ ಸೇವಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆಯ ದಿನದಂದು ಸುತ್ತಮತ್ತಲಿನ ಪರಿಸರದ ಎಲ್ಲಾ ಕಾರ್ಯಕ್ರಮಗಳಲ್ಲಿ ನೀರಾವರಿ ಮಂತ್ರಿ ಎಂದು ಮನೆಮಾತಾಗಿರುವ ಸುಮಾರು 40ವರ್ಷಗಳಿಂದ ಅವಿರತವಾಗಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸ್ವಯಂ ಸೇವಕರಾಗಿ ಸಾಮಾಜಿಕ ಸೇವೆ ಸಲ್ಲಿಸುವುದರೊಂದಿಗೆ ಜನಪ್ರೀಯರಾಗಿರುವ ಉಪ್ಪುಂದದ ಪದ್ಮನಾಭ ನಾಯಕ್ ಇವರಿಗೆ ನಾಯ್ಕನಕಟ್ಟೆ ಶ್ರೀ ವೆಂಕಟರಮಣ ಸೇವಾಸಮಿತಿಯ ವತಿಯಿಂದ ಗುರುತಿಸಿ ಗೌರವ ಪೂರ್ವಕವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷರಾದ ದಾಮೋದರ ಪ್ರಭು, ಉಪಾಧ್ಯಕ್ಷ ಪುಂಡಲೀಕ ನಾಯಕ್, ಕಾರ್ಯದರ್ಶಿ ರಮೇಶ ಪೈ, ಪ್ರಕಾಶ ಭಟ್, ನಾರಾಯಣ ಶ್ಯಾನುಭಾಗ್ ಉಪ್ರಳ್ಳಿ ಹಾಗೂ ಸಮಿತಿಯ ಸದಸ್ಯರು ಮತ್ತು ವರಮಹಾಲಕ್ಷ್ಮೀ ಸೇವಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಓಂಗಣೇಶ ಉಪ್ಪುಂದ ಇವರು ಸನ್ಮಾನಿತರ ಪರಿಚಯವನ್ನು ವಿಸ್ತಾರವಾಗಿ ವಿವರಿಸಿದರು. ಪ್ರಮೋದ ಪೈ ಸ್ವಾಗತಿಸಿ, ವಂದಿಸಿದರು.
ಕುಂದಾಪುರ: ನಾಯ್ಕನಕಟ್ಟೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಸೇವಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆಯು ದೇವಸ್ಥಾನ ಅರ್ಚಕರಾದ ಶ್ರೀ ಬಾಲಕೃಷ್ಣ ಭಟ್ ಹಾಗೂ ವೇದ ಮೂರ್ತಿ ಗಣೇಶ ಭಟ್ ಇವರ ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ಜರಗಿತು. ರಾತ್ರಿ ಅಲಂಕಾರ ಪೂಜೆ ಮತ್ತು ದಾನಿಗಳಿಗೆ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವರಮಹಾಲಕ್ಷ್ಮೀ ಸೇವಾ ಸಮಿತಿಯ ಸರ್ವ ಸದಸ್ಯರು ವೆಂಕಟರಮಣ ಸೇವಾ ಸಮಿತಿಯ ಸದಸ್ಯರು ಸಹಕರಿಸಿದರು. ನಾಯ್ಕನಕಟ್ಟೆ ಜಿ.ಎಸ್.ಬಿ ಮಹಿಳೆಯರಿಂದ ಸಾಮೂಹಿಕ ಚೂಡಿ ಪೂಜೆ ನಾಯ್ಕನಕಟ್ಟೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಸೇವಾ ಸಮಿತಿಯಿಂದ ಜಿ.ಎಸ್.ಬಿ ಮಹಿಳೆಯರಿಂದ ಸಾಮೂಹಿಕ ಚೂಡಿ ಪೂಜೆ ಕಾರ್ಯಕ್ರಮವು ವಿಜೃಂಭಣೆಯಿಂದ ಜರಗಿತು. ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು.
ಕುಂದಾಪುರ: ಸಂಘಟನೆಗಳು ಸಮಾಜದ ಸ್ಯಾಸ್ಥ್ಯ ಕಾಪಾಡಬೇಕೇ ಹೊರತು ಗೊಂದಲ ಸೃಷ್ಟಿಸುವಂತಾಗಬಾರದು. ಈ ನಿಟ್ಟಿನಲ್ಲಿ ಸಂವಿಧಾನ ಹಕ್ಕನ್ನು ಪಡೆದು ಸರ್ವಾಂಗೀಣ ಅಬಿವೃದ್ದಿಯತ್ತ ಸಾಗಲು ದಲಿತರಿಗೆ ಸಂಘಟನೆ ಅತ್ಯವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ಉಡುಪಿ ಜಿಲ್ಲಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಹೇಳಿದರು. ಅವರು ಕೆರಾಡಿ ಗ್ರಾಮದ ದೀಟಿ ಸಬಾಭವನದಲ್ಲಿ ನೂತನ ದಸಂಸದ ನೂತನ ಗ್ರಾಮ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. ಇತ್ತೀಚೆಗೆ ದಲಿತರ ಒಗ್ಗಟ್ಟನ್ನು ಮುರಿದು ದಲಿತ ಚಳುವಳಿಯನ್ನು ಬಲಿತರು ಹತ್ತಿಕ್ಕುವಂತಾಗಿದೆ. ದಲಿತ ಸಮುದಾಯದವರು ಒಗ್ಗಟ್ಟಿನಿಂದ ಸಂಘಟನೆಯನ್ನು ಬಲಪಡಿಸಿ ಶೋಷಿತರಿಗೆ ಜನಜಾಗ್ರತಿಯನ್ನು ಮೂಡಿಸಬೇಕಾಗಿದೆ ದಲಿತ ಸಂಘಟನೆ ಎಂದರೆ ದಲಿತರ ಸ್ವಾಬಿಮಾನ ಜಾಗೃತಿಯೇ ವಿನಾ: ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಗೊಂದಲವನ್ನು ಸೃಷ್ಟಿಸುವುದಲ್ಲ ಎಂದವರು ದಲಿತ ಸಮುದಾಯಕ್ಕೆ ಕಿವಿಮಾತು ಹೇಳಿದರು. ತಾಲೂಕು ಸಂಚಾಲಕ ಕೆ. ಸಿ. ರಾಜು ಬೆಟ್ಟಿನಮನೆ ಅಧ್ಯಕ್ಷತೆ ವಹಿಸಿದ್ದರು ಮುಖ್ಯ ಅತಿಥಿ ಕೊಲ್ಲೂರು ಆರಕ್ಷಕ ಠಾಣಾಧಿಕಾರಿ ಜಯಂತ್ ಅವರು ಡಾ. ಬಿ .ಆರ್. ಅಂಬೇಡ್ಕರ್ ಅವರ ಬಾವ ಚಿತ್ರಕ್ಕೆ ಮಾಲಾರ್ಪಣೆ…
