Author: ಸುನಿಲ್ ಹೆಚ್. ಜಿ. ಬೈಂದೂರು

ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

ಕುಂದಾಪುರ: ತಾಲೂಕಿನ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕನ್ನ ಹಾಕಿದ ಖದೀಮರು ದೇವಳದ ಕಾಣಿಕೆಹುಂಡಿಯನ್ನು ಒಡೆದು ಎರಡು ಕೆ.ಜಿ. ಚಿನ್ನದ ಸೊತ್ತುಗಳನ್ನು ಕಳವುಗೈದಿದ್ದಾರೆ. ರಾತ್ರಿ ಎಂಟೂ ವರೆಗೆ ದೇವಸ್ಥಾನದ ಅರ್ಚಕರು ಬಾಗಿಲು ಹಾಕಿ ಮನೆಗೆ ಹೋದ ನಂತರ ಈ ಪ್ರಕರಣ ನಡೆದಿದ್ದು, ಬೆಳಿಗ್ಗೆ ಎಂದಿನಂತೆ ದೇವಸ್ಥಾನಕ್ಕೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಶೂಕ್ರವಾರ ಸಂಜೆ ದೇವಿಗೆ ಮಹಾಪೂಜೆ, ಕರ್ಕಾಟಕ ಅಮಾವಾಸ್ಯೆಯ ವಿಶೇಷ ದಿನವನ್ನು ಗಮನದಲ್ಲಿಟ್ಟುಕೊಂಡೇ ಕಳವು ನಡೆಸಿರಬಹುದಾಗಿದೆ ಎಂದು ಅಂದಾಜಿಸಲಾಗಿದೆ. ದೇವಿಗೆ ಹಾಕಲಾದ ಬೆಳ್ಳಿಯ ದೊಡ್ಡ ಮುಖವಾಡ, ಒಂದು ಚಿನ್ನದ ಮುಖ, ಅರ್ಧ ಕೆ.ಜಿ. ತೂಕದ ೧೫ ನಕ್ಷತ್ರ ಮಾಳ, ಒಂದೂವರೆ ಕೆಜಿ ತೂಕದ ಬಂಗಾರದ ಉತ್ಸವ ಮೂರ್ತಿ, ಒಂದು ಕೆ.ಜಿ. ತೂಕದ ಬೆಳ್ಳಿಯ ಉತ್ಸವ ಮೂರ್ತಿ, ವೀರಭದ್ರ ದೇವರಿಗೆ ಹಾಕಲಾಗಿದ್ದ ಬೆಳ್ಳಿಯ ಮುಖವಾಡ, ತಲೆಯ ಛತ್ರಿ, ಅಮ್ಮನವರ ದೇವಸ್ಥಾನದ ತಲೆಯ ಛತ್ರಿ, ಎರಡು ಕಾಣಿಕೆಯ ಹುಂಡಿ, ಒಂದು ಬೆಳ್ಳಿಯ ಗಂಟೆ, ಎರಡು ಕರಿಮಣಿ ಸರ, ಮೂಗುತಿ, ನೂರು ಗ್ರಾಂ ತೂಕದ…

Read More

ಕುಂದಾಪುರ: ಸರಕಾರದ ಎಲ್ಲಾ ಯೋಜನೆಗಳನ್ನು ಸಮಾಜದ ಕಟ್ಟ ಕಡೆಯ ಪ್ರಜೆಯೂ ದೊರಕಬೇಕೆಂಬುದು ಸ್ವಾತಂತ್ರ್ಯದ ಪರಮ ಗುರಿಯಾಗಿದೆ ಎಂದು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ಚಾರುಲತಾ ಸೋಮಲ್ ಹೇಳಿದರು. ಅವರು ಕುಂದಾಪುರ ತಾಲೂಕು ಆಡಳಿತದ ವತಿಯಿಂದ ಇಲ್ಲಿನ ಗಾಂಧಿ ಮೈದಾನದಲ್ಲಿ ಜರುಗಿದ 69ನೇ ಸ್ವಾಂತಂತ್ರೋತ್ಸವದಲ್ಲಿ ಧ್ವಜಾರೋಹಣಗೈದು ಮಾತನಾಡಿದರು. ದೇಶದ ಸ್ವಾತಂತ್ರ್ಯಕ್ಕಾಗಿ ನಮ್ಮ ಪೂರ್ವಿಕರು ಮಾಡಿದ ತ್ಯಾಗ-ಬಲಿದಾನಗಳನ್ನು ನೆನೆದು ನಮ್ಮ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವುದರೊಂದಿಗೆ ರಾಷ್ಟ್ರವನ್ನು ಅಭಿವೃದ್ಧಿಯ ಪಥದೆಡೆಗೆ ಕೊಂಡೊಯ್ಯಬೇಕಾಗಿದೆ ಎಂದರು. ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷ ಭಾಸ್ಕರ ಬಿಲ್ಲವ, ಕುಂದಾಪುರ ತಹಶೀಲ್ದಾರರಾದ ಗಾಯತ್ರಿ ನಾಯಕ್, ಪುರಸಭಾ ಅಧ್ಯಕ್ಷೆ ಕಲಾವತಿ ಯು.ಎಸ್, ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಂ. ಮಂಜುನಾಥ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಗಣಪತಿ ಶ್ರೀಯಾನ್, ತಾಲೂಕು ಪಂಚಾಯತ್, ಪುರಸಭಾ ಸದಸ್ಯರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕುಂದಾಪುರದ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಗೃಹರಕ್ಷಕ ದಳ ಹಾಗೂ ವಿವಿಧ ಕಾಲೇಜುಗಳ ಎಸಿಸಿ, ಸೌಟ್ಕ-ಗೈಡ್, ಸೇವಾದಲದಿಂದ ಆಕರ್ಪಕ ಪಥಸಂಚಲನ ನಡೆಯಿತು.

Read More

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಅಂಗಳದಲ್ಲಿ 69ನೇ ಸ್ವಾತಂತ್ರ್ಯೋತ್ಸವ ಅದ್ದೂರಿಯಾಗಿ ಜರುಗಿತು. ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಆನ್ಸ್ ಕ್ಲಬ್ ಅಧ್ಯಕ್ಷೆ ಶ್ರೀಮತಿ ಭಾರತಿ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಸುನೇತ್ರಾ ಎಸ್. ಕೋಟ್ಯಾನ್, ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರದ ಅಧ್ಯಕ್ಷ ರಾಘವೇಂದ್ರ ಕೆ.ಸಿ, ರೋಟರಿ ಮಾಜಿ ಜಿಲ್ಲಾ ಗವರ್ನರ್ ಎ.ಎಸ್.ಎನ್. ಹೆಬ್ಬಾರ್, ಡಾ. ಎಚ್. ಎಸ್. ಮಲ್ಲಿ, ಕಿಶೋರ್‌ಕುಮಾರ್ ಬಿ, ಡಾ. ರಾಜಾರಾಮ ಶೆಟ್ಟಿ, ಶಶಿಧರ ಹೆಗ್ಡೆ, ಮನೋಜ್ ನಾಯರ್, ವೆಂಕಟಾಚಲ ಕನ್ನಂತ, ಆವರ್ಸೆ ಮುತ್ತಯ್ಯ ಶೆಟ್ಟಿ, ಸುರೇಶ್ ಆಚಾರ್, ಡಾ. ಬಿ. ಅರ್. ಶೆಟ್ಟಿ, ಸತೀಶ್ ಕೋಟ್ಯಾನ್, ಗೀತಾ ಟಿ.ಬಿ. ಶೆಟ್ಟಿ, ಬಿಂದು ನಾಯರ್, ವಿ. ಆರ್. ಕೆ. ಹೊಳ್ಳ, ರತ್ನಾ ಹೊಳ್ಳ, ಡಾ. ಎಂ. ಎನ್. ಅಡಿಗ, ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ, ರವಿರಾಜ ಶೆಟ್ಟಿ, ಅನಸೂಯ ಶೆಟ್ಟಿ, ರೇಖಾ ಶೆಟ್ಟಿ ಇಂಟರ‍್ಯಾಕ್ಟ್ ಛೇರ್‌ಮೆನ್ ವೆಂಕಟೇಶ ಪ್ರಭು, ರೋಟರಿ ಕಾರ್ಯದರ್ಶಿ…

Read More

ಕುಂದಾಪುರ: ನೆಹರು ಮೈದಾನದಲ್ಲಿರುವ ಆಶ್ರಮ ಶಾಲೆಯಲ್ಲಿ ರೋಟರಿ ಕ್ಲಬ್ ಕುಂದಾಪುರ ಹಾಗೂ ಆನ್ಸ್ ಕ್ಲಬ್ ಮತ್ತು ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರದ ಆಶ್ರಯದಲ್ಲಿ 69ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಆನ್ಸ್ ಕ್ಲಬ್ ಪೂರ್ವಾಧ್ಯಕ್ಷೆ  ರತ್ನಾ ವಿ. ಆರ್. ಕೆ. ಹೊಳ್ಳ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು, ಆನ್ಸ್ ಕ್ಲಬ್ ಅಧ್ಯಕ್ಷೆ ಶ್ರೀಮತಿ ಭಾರತಿ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಸುನೇತ್ರಾ ಎಸ್. ಕೊಟ್ಯಾನ್, ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರದ ಅಧ್ಯಕ್ಷ ರಾಘವೇಂದ್ರ ಕೆ.ಸಿ, ಆಶ್ರಮ ಶಾಲೆಯ ಮುಖ್ಯ ಮೇಲ್ವಿಚಾರಕ ರಮೇಶ್, ಇಂಟರ‍್ಯಾಕ್ಟ್ ಛೇರ್‌ಮೆನ್ ವೆಂಕಟೇಶ ಪ್ರಭು, ರೋಟರಿ ಕಾರ್ಯದರ್ಶಿ ಸಂತೋಷ ಕೋಣಿ ಇನ್ನಿತರರು ಉಪಸ್ಥಿತರಿದ್ದರು.

Read More

ನಾವಿ೦ದು 68ನೇ ಸ್ವಾತ೦ತ್ರ್ಯೋತ್ಸವದ ಹೊಸ್ತಿಲಿನಲ್ಲಿದ್ದೇವೆ. ದೇಶದ ಸ್ವಾತ೦ತ್ರ್ಯಕ್ಕಾಗಿ ಹೋರಾಡಿದವರಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ, ಗಡಿಯಲ್ಲಿ ನಿ೦ತು ತಮ್ಮ ಪ್ರಾಣವನ್ನು ಒತ್ತೆಯಿಟ್ಟು ನಮ್ಮ ಪೊರೆಯುವ ಭಾರತದ ಹೆಮ್ಮೆಯ ಸೈನಿಕರನ್ನು ಎಷ್ಟು ಸ್ಮರಿಸಿಕೊಂಡರೂ ಕಡಿಮೆಯೆ. ದೇಶಕ್ಕಾಗಿಯೇ ಬದುಕಿದ ಮತ್ತು ಬದುಕುತ್ತಿರುವ ಇವರುಗಳನ್ನು  ನಾವು ನಿತ್ಯವೂ ಎನ್ನುವ೦ತೆ ಸ್ಮರಿಸಿಕೊಳ್ಳಬೇಕು. ಆದರೆ ನಮ್ಮಲ್ಲಿ ಬಹುತೇಕರು ಈ ಹೊತ್ತಿಗೂ ಸ್ವಾತ೦ತ್ರ್ಯದ ನಿಜವಾದ ಮೌಲ್ಯ ಅದರ ಚರಿತ್ರೆಯಲ್ಲಡಗಿದ ಆಶಯ ಇತ್ಯಾದಿಗಳ ಬಗೆಗೆ ತಿಳಿದುಕೊಳ್ಳುವ ಕನಿಷ್ಠ ಪ್ರಯತ್ನವನ್ನೂ ಮಾಡಿರುವುದಿಲ್ಲವೆನ್ನುವುದು ಈ ದೇಶದ ದೊಡ್ಡ ದುರ೦ತ. ಸ್ವಾತ೦ತ್ರ್ಯ ಅನ್ನುವ೦ತಾದ್ದು ಲಕ್ಷಾ೦ತರ ಭಾರತೀಯರ ಒಟ್ಟು ಹೋರಾಟ, ತ್ಯಾಗ-ಬಲಿದಾನಗಳ ಫಲ. ಅಲ್ಲಿ ಹಿರಿಯರು-ಕಿರಿಯರು, ಧರ್ಮ, ಜಾತಿ, ಲಿ೦ಗ… ಊಹು೦ ಯಾವೊ೦ದರ ಭೇದವೂ ಇರಲಿಲ್ಲ. ಸ೦ದೇಹವೇ ಬೇಡ. ನಾವು ಈ  ಹೊತ್ತು ಜ್ಞಾಪಿಸಿಕೊಳ್ಳುವ ಅಷ್ಟೂ ಸ್ವಾತ೦ತ್ರ್ಯ ಹೋರಾಟಗಾರರು ಮಾಡಿದ ಮಹಾನ್ ತ್ಯಾಗ ಇದೆಯಲ್ಲಾ ಅದಕ್ಕೆ ನಾವು ಚಿರಋಣಿಗಳಾಗಿರಬೇಕು. ಭೋರ್ಗರೆಯುತ್ತಿರುವ ಸಾಗರದಲ್ಲಿ ದೋಣಿಯೊ೦ದರಲ್ಲಿ ಒಟ್ಟಿಗೆ ಕುಳಿತು ತೀರವನ್ನು ತಲುಪುವ ಸಾಹಸ ಮಾಡುವುದು ಎಷ್ಟು ಮುಖ್ಯವೋ ದೋಣಿಯನ್ನು ಹುಟ್ಟುಹಾಕಿ ಮುನ್ನಡೆಸುವ…

Read More

“ಅಬ್ಬಾ.. ಈ ತಿಂಗಳ್ ಒಂದ್ extra ರಜೆ ಸಿಕ್ಕತ್ತ್…” ಜುಲೈ ತಿಂಗಳು ಮುಗಿದ ಕೂಡ್ಲೆ ನೆನಪಾಪುದೆ ಅದೇ. ಈಗೀಗ ಆಫೀಸಿನ ಅದೇ routine ಕೆಲಸ ಮಾಡಿ ಮಾಡಿ ಬೇಜಾರ್ ಆದ ಕೂಡ್ಲೆ calendarಗೆ ಈ ತಿಂಗಳು ಎಲ್ಲಿ extra ಕೆಂಪು number ಇತ್ತ್ ಅಂದೇಳಿ ಕಾಂಬುಕೆ ಶುರು ಮಾಡ್ದಾಗಳಿಕೆಲ್ಲಾ, ಆಗಸ್ಟ್ ತಿಂಗಳ 15 ನೇ ತಾರೀಕು ಏಗಳಿಕೂ ಕೆಂಪಲ್ಲೆ ಇರತ್ತ್. ನಮ್ಮ ಸೌಭಾಗ್ಯ ಒಂದ್ ದಿನ like ಮಾಡಿ 11 ಗಂಟಿ ವರಿಗೆ ನಿದ್ರೆ ಮಾಡ್ಲಕಲಾ ಅಂದೇಳಿ. ಆದ್ರೂ ಆಗಸ್ಟ್ ತಿಂಗಳು ಬಂದ ಕೂಡ್ಲೆ ನೆನಪಾಪುದೆ primary ಶಾಲಿಯ ಆ ದಿನಗಳು. ಉಳ್ತೂರು ಶಾಲೆಯಲ್ಲಿ ವಿಜ್ರಂಭಣೆಯಿಂದ ಮಾಡುತಿದ್ದ ಸ್ವಾತಂತ್ರ್ಯೋತ್ಸವ. ಪ್ರತಿ ವಿಧ್ಯಾರ್ಥಿಗಳಿಗೆ ದೇಶ ಪ್ರೇಮದ ಕಿಚ್ಚನ್ನ ಪುಟಿದೆಳಿಸುವಂತೆ ಮಾಡುವ ಸ್ವಾತಂತ್ರ್ಯದ ಸ್ವತಂತ್ರ ದಿನಗಳು. ಮಕ್ಕಳಿಗೆ ವಿಧ್ಯಾರ್ಥಿಗಳಾಗಿ ಇಪ್ಪುವತಿಗೆ ಅವರಿಗೆ ದೇಶದ ಬಗ್ಗೆ, ದೇಶದ ವಿಶಿಷ್ಟತೆಯ ಬಗ್ಗೆ ಅಚ್ಚುಕಟ್ಟಾಗಿ ಹೇಳಿಕೊಡ್ತಿದ್ದ ಆ ದಿನಗಳು. ಆಗಳಿಕೆ ಆಗಸ್ಟ್ 15 ಕ್ಕೆ ಒಂದು ತಿಂಗಳು ಇಪ್ಪತಿಗೆ…

Read More

ಕುಂದಾಪುರ: ತಾಲೂಕಿನ ವಕ್ವಾಡಿ ಗ್ರಾಮದ ಗೊಳಿಕಟ್ಟೆ ನಿವಾಸಿ ಗೋವಿಂದ ಪೂಜಾರಿ ಹಾಗೂ ದೇವಕಿ ದಂಪತಿಗಳ ಮಗ ಚಂದ್ರ ಪೂಜಾರಿ ಎಂಬುವರು ಮೇದೋಜಿರಕ ಗೃಂಥಿಯ ಊತ ಹಾಗೂ ಮೂತ್ರಪಿಂಡಗಳ ವೈಫಲ್ಯದಿಂದ ಬಳಲುತ್ತಿದ್ದು, ಡಯಾಲಿಸಿಸ್ ಸೇರಿದಂತೆ ತುರ್ತುಚಿಕಿತ್ಸೆಯ ಅಗತ್ಯವಿದೆ.  ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಇವರ ಚಿಕಿತ್ಸೆಗೆ ಸುಮಾರು 1.5 ಲಕ್ಷ ರೂಪಾಯಿ ಬೇಕಾಗಿದ್ದು, ಆರ್ಥಿಕವಾಗಿ ಕಡುಬಡವರಾದ ಇವರು ದಾನಿಗಳ ನೆರವಿಗಾಗಿ ಮೊರೆಯಿಡುತ್ತಿದ್ದಾರೆ. ಇವರಿಗೆ ಸಹಾಯ ಮಾಡಲಿಚ್ಚಿಸುವ ದಾನಿಗಳು ಸಿಂಡಿಕೇಟ್ ಬ್ಯಾಂಕ್ ಕೋಟೇಶ್ವರ ಶಾಖೆಯ ಖಾತೆ ಸಂಖ್ಯೆ 01492210039370 ಕ್ಕೆ ಹಣ ಪಾವತಿಸಿ ಇವರ ಚಿಕಿತ್ಸೆಗೆ ನೆರವಾಗಬಹುದು.

Read More

ಕುಂದಾಪುರ: ತೆಕ್ಕಟ್ಟೆ ಫ್ರೆಂಡ್ಸ್ 200 ಸದಸ್ಯ ಬಲದೊಂದಿದೆ ಸಾಂಸ್ಕೃತಿಕವಾಗಿ, ಶೈಕ್ಷಣಿಕವಾಗಿ, ಸಮಾಜಮುಖಿ ಕಾರ್ಯಗಳನ್ನು ಶೃದ್ದೆಯಿಂದ ಮಾಡಿಕೊಂಡು ಬರುತ್ತಿದ್ದು, ಕಳೆದ 5 ವರ್ಷಗಳಿಂದ  ಉಚಿತ ಅಂಬುಲೆನ್ಸ್ ಸೇವೆಯನ್ನು ಒದಗಿಸುತ್ತಿದೆ. ಈ ತನಕ 700ಕ್ಕೂ ಹೆಚ್ಚು ಜೀವಗಳನ್ನು ಪ್ರಾಣಾಪಾಯದಿಂದ ಪಾರು ಮಾಡಿದ ತೃಪ್ತಿ ಸಂಸ್ಥೆಗಿದೆ. ಈ ಉಚಿತ ಅಂಬುಲೆನ್ಸ್ ನಿರ್ವಹಣೆಯಾಗಿ ಆ.15ರಂದು ಸಂಜೆ 6 ಗಂಟೆಯಿಂದ ತೆಕ್ಕಟ್ಟೆ ಕಾಲೇಜು ವಠಾರದಲ್ಲಿ ತೆಂಕುತಿಟ್ಟು ಯಕ್ಷಗಾನ  ’ಅಕ್ಷಯಾಂಬರ-ಗದಾಯುದ್ಧ’ವನ್ನು ಆಯೋಜಿಸಲಾಗಿದೆ ಎಂದು ತೆಕ್ಕಟ್ಟೆ ಫ್ರೆಂಡ್ಸ್ ಸಂಚಾಲಕ ಪ್ರಕಾಶ್ ಶೆಟ್ಟಿ ತಿಳಿಸಿದರು. ಕುಂದಾಪುರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸ್ವಾತಂತ್ರ್ಯೋತ್ಸವದ ವಿಶೇಷ ಆಚರಣೆಗಾಗಿ ಯಕ್ಷ ಹೊನಲು-2015 ನಡೆಯಲಿದ್ದು, ಉಚಿತ ಅಂಬುಲೆನ್ಸ್ ನಿರ್ವಹಣೆಗಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಯಕ್ಷಗಾನ ಸ್ಟಾರ್ ಭಾಗವತರೆಂದೇ ಗುರುತಿಸಲ್ಪಟ್ಟ ಪಟ್ಲ ಸತೀಶ್ ಶೆಟ್ಟಿ ಓರ್ವ ಕಲಾವಿದರಾಗಿ, ಕಲೆಯ ಮೂಲಕ ತೆಕ್ಕಟ್ಟೆ ಫ್ರೆಂಡ್ಸ್‌ನ ಸಮಾಜ ಸೇವೆಯ ಕೈಂಕರ್ಯದಲ್ಲಿ ಕೈ ಜೋಡಿಸುತ್ತಿದ್ದಾರೆ. ಆ ಮೂಲಕ ಯಕ್ಷ ಹೊನಲಿಯಲ್ಲಿ ಅವರ ರಸಧಾರೆ ಪ್ರೇಕ್ಷಕರನ್ನು ರಂಜಿಸಲಿದೆ ಎಂದರು. ಕಾರ್ಯಕ್ರಮದಲ್ಲಿ ತೆಂಕಿನ ಖಾತಿವೆತ್ತ ಕಲಾವಿದರು ಭಾಗವಹಿಸಲಿದ್ದಾರೆ. ಪಟ್ಲರ…

Read More

ಕುಂದಾಪುರ: ತಾಲೂಕಿನ ಉಪ್ಪುಂದಂದಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ಬೈಕಿಗೆ ಹಿಂಬದಿಯಿಂದ ಬಂದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುತ್ತಿರುವಾಗ ಮೃತಪಟ್ಟ ಘಟನೆ ಇಂದು ಬೈಂದೂರಿನಲ್ಲಿ ನಡೆದಿದೆ.  ರೇಮಂಡ್ ನಜ್ರತ್ ಮೃತ ದುರ್ದೈವಿ. ಘಟನೆಯ ವಿವರ: ರೇಮಂಡ್ ನಜ್ರತ್ ಉಪ್ಪುಂದದ ತನ್ನ ಮನೆಯಿಂದ ಬೈಂದೂರಿನ ನಿತ್ಯಾನಂದ ನಗರಕ್ಕೆ ಕೆಲಸದ ನಿಮಿತ್ತ ತನ್ನ ಬೈಕಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ಯಲ್ಲಿ ಸಾಗುತ್ತಿದ್ದ ವೇಳೆಗೆ ಹಿಂಬದಿಯಿಂದ ಬಂದ ಅಪರಿಚಿತ ಲಾರಿಯೊಂದು ಬೈಂದೂರಿನ ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ಎದುರು ಬೆಳಿಗ್ಗೆ 3:30ರ ವೇಳೆಗೆ ಬೈಕಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿತ್ತು. ಢಿಕ್ಕಿ ಹೊಡೆದ ರಭಸಕ್ಕೆ ರೇಮಂಡ್ ನಜ್ರತ್ ರಸ್ತೆಗೆ ಬಿದ್ದುದರಿಂದ ಅವರ ತಲೆಗೆ ತೀವ್ರ ಗಾಯಗಳಾಗಿತ್ತು. ಆಪಘಾತವಾದ ಬಳಿಕ ಲಾರಿ ಚಾಲಕ ಲಾರಿಯನ್ನು ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದ್ದಾನೆ. ಬೆಳಗ್ಗಿನ ಸಮಯವಾದ್ದರಿಂದ ಆ ಮಾರ್ಗದಲ್ಲಿ ಯಾರೂ ಕೂಡ ಸಂಚರಿಸುತ್ತಿರಲಿಲ್ಲವಾದ್ದರಿಂದ ಬಹಳ ಹೊತ್ತಿನ ತನಕ ಅವರು ರಸ್ತೆಯ ಬದಿಗೆ ಬಿದ್ದಿದ್ದರೆಲ್ಲನಾಗಿದೆ. ತಡವಾಗಿ ಬಂದ…

Read More

ಕುಂದಾಪುರ: ಭಾರತೀಯ ಜೇಸಿಐನ ಪೂರ್ವ ನಿರ್ದೇಶಕ, ಗೆಲಾಕ್ಸಿ ಸ್ಫೂರ್ಟ್ಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸದಾನಂದ ನಾವಡ ಅವರು ಇಟಲಿಯ ಮಿಲನ್‌ನಲ್ಲಿ ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಜಾಗತಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಕುಂದಾಪುರ, ಉಡುಪಿ, ಮಣಿಪಾಲ, ಭಟ್ಕಳ, ಮಂಗಳೂರಿನಲ್ಲಿ ಗೆಲಾಕ್ಸಿ ಸ್ಫೂರ್ಟ್ಸ್ ಕಂಪನಿಯ ಮೂಲಕ ಕ್ರೀಡೋಪಕರಣಗಳ ಬೃಹತ್ ಮಳಿಗೆಗಳನ್ನು ನಡೆಸುತ್ತಿರುವ ಸದಾನಂದ ನಾವಡ ಅವರು ಜಾಗತಿಕ ವ್ಯವಹಾರ ಸಮ್ಮೇಳನದಲ್ಲಿ ಭಾಗವಿಸುತ್ತಿದ್ದು, ವ್ಯವಹಾರ ಉದ್ಯಮದ ಅಧ್ಯಯನದ ದೃಷ್ಠಿಯಿಂದ ಇದೇ ಮೊದಲ ಬಾರಿಗೆ ಜರ್ಮನಿ, ಫ್ರಾನ್ಸ್, ರೋಮ್, ಸ್ವಿಜರ್‌ಲ್ಯಾಂಡ್, ಇಟಲಿ, ಡೆನ್ಮಾರ್ಕ್, ಆಸ್ಟ್ರೀಯಾ ದೇಶಗಳಿಗೆ ಭೇಟಿ ನೀಡಲಿದ್ದಾರೆ.

Read More