ಕುಂದಾಪುರ: ಕರ್ನಾಟಕ ಸರಕಾರದ ಅಲ್ಪ ಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದ ಆಶ್ರಯದಲ್ಲಿ ಎಸಿಸಿಪಿಎಲ್ ತರಬೇತಿ ಕೇಂದ್ರದ ಸಹಯೋಗದೊಂದಿಗೆ 2015-16ನೇ ಸಾಲಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಯೋಜನೆಯಡಿ ಅಲ್ಪ ಸಂಖ್ಯಾತರ ವಿದ್ಯಾರ್ಥಿಗಳಿಗೆ ಉಚಿತ ಸಿ.ಇ.ಟಿ. ತರಬೇತಿ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಪಿ.ಯು.ಸಿ. ಓದುತ್ತಿರುವ ವಿದ್ಯಾರ್ಥಿಗಳ ತರಬೇತಿಗೆ ಅಧ್ಯಾಯನ ಸಾಮಗ್ರಿಗಳನ್ನು ನಿರ್ದೇಶನಾಲಯದಿಂದ ಸರಬರಾಜು ಮಾಡಲಾಗುವುದು. ಉಚಿತ ಸಿಇಟಿ ತರಬೇತಿ ನೀಡುವ ಕೇಂದ್ರಗಳು ಉಡುಪಿ ಜಿಲ್ಲೆಯಲ್ಲಿ ಆರ್.ಎನ್.ಶೆಟ್ಟಿ ಕಾಲೇಜು ಕುಂದಾಪುರ, ಪೂರ್ಣಪ್ರಜ್ಞ ಪಿ.ಯು. ಕಾಲೇಜು ಉಡುಪಿ, ಭುವನೇಂದ್ರ ಪಿ.ಯು. ಕಾಲೇಜು ಕಾರ್ಕಳ, ಎಸ್.ಎಂ.ಎಸ್ ಕಾಲೇಜು ಬ್ರಹ್ಮಾವರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೈಂಟ್ ಅಲೋಶಿಯಸ್ ಪಿ.ಯು. ಕಾಲೇಜು, ಮಂಗಳೂರು, ಸೈಂಟ್ ಆಗ್ನೇಸ್ ಪಿ.ಯು. ಕಾಲೇಜು ಮಂಗಳೂರು, ಸೈಂಟ್ ಫಿಲೋಮಿನಾ ಪಿ.ಯು. ಕಾಲೇಜು ಪುತ್ತೂರು, ಕಾರ್ಮೆಲ್ ಪಿ.ಯು. ಕಾಲೇಜು ಮೂಡನ್ಕಾಪ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೈಂಟ್ ಜೋಸೆಪ್ ಪಿ.ಯು. ಕಾಲೇಜು ಕಾರವಾರ, ಅಕ್ಷಯ ಕೋಚಿಂಗ್ ಕ್ಲಾಸಸ್ ಕುಮಟಾ ಮತ್ತು ಭಟ್ಕಳಗಳಲ್ಲಿ ತರಬೇತಿ ನೀಡಲಾಗುತ್ತದೆ. ಆಸಕ್ತ ಅಲ್ಪಸಂಖ್ಯಾತ ವಿದ್ಯಾರ್ಥಿಗಳು…
Author: ಸುನಿಲ್ ಹೆಚ್. ಜಿ. ಬೈಂದೂರು
ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣ ಕ್ರೀಡಾಂಗಣದಲ್ಲಿ ಶ್ರೀ ರಾಘವೇಂದ್ರ ಸ್ಪೋಟ್ಸ್ ಕ್ಲಬ್ ಗಂಗೊಳ್ಳಿ ಮತ್ತು ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ರಾಘವೇಂದ್ರ ಸ್ಪೋಟ್ಸ್ ಕ್ಲಬ್ನ 40ರ ಸಂಭ್ರಮಾಚರಣೆಯ ಪ್ರಯುಕ್ತ ಜರಗಿದ ರಾಜ್ಯ ಮಟ್ಟದ ಪುರುಷರ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬೆಂಗಳೂರಿನ ಅಮಿತ್ ಮತ್ತು ಪ್ರವೀಣ್ ಜೋಡಿಯು ಪ್ರಥಮ ಸ್ಥಾನ ಪಡೆದು ಪ್ರತಿಷ್ಠಿತ ಎಸ್.ಆರ್.ಎಸ್.ಸಿ. ಟ್ರೋಫಿ-೨೦೧೫ ಮತ್ತು ನಗದನ್ನು ತನ್ನದಾಗಿಸಿಕೊಂಡಿದ್ದಾರೆ. ಬೆಂಗಳೂರಿನ ಸುನೀಲ್ ಗ್ಲಾಡ್ಸನ್ ಮತ್ತು ವೈಭವ್ ಜೋಡಿಯು ರನ್ನರ್ಸ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ವಿಮಲೇಶ್ ಮತ್ತು ಅಖಿಲ್ ಜೋಡಿಯು ತೃತೀಯ ಮತ್ತು ಚೇತನ್ ಮತ್ತು ದರ್ಶನ್ ಜೋಡಿಯು ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಉದ್ಯಮಿ ಎಚ್.ಗಣೇಶ ಕಾಮತ್ ಮತ್ತು ಮುಖ್ಯ ಅತಿಥಿ ಪಿ. ಜನಾರ್ದನ ಪೂಜಾರಿ ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಆಟಗಾರರ ಪರವಾಗಿ…
ಗಂಗೊಳ್ಳಿ: ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ದೊರೆಯಬೇಕೆನ್ನುವ ದೃಷ್ಟಿಯಿಂದ ರಾಜ್ಯ ಸರಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಹಾಕಿಕೊಂಡಿರುವುದರಿಂದ ಶಿಕ್ಷಣ ಕ್ಷೇತ್ರ ಕ್ರಾಂತಿಕಾರಕ ಬೆಳವಣಿಗೆ ಕಂಡಿದೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ, ಮಕ್ಕಳಿಗೆ ಮಧ್ಯಾಹ್ನದೂಟದ ವ್ಯವಸ್ಥೆ, ಕಬ್ಬಿಣದ ಅಂಶದ ಮಾತ್ರೆಗಳ ವಿತರಣೆ ಮಾಡಲಾಗುತ್ತಿದ್ದು, ವಾರಕ್ಕೆ ಮೂರು ದಿನ ವಿತರಣೆ ಮಾಡಲಾಗುತ್ತಿದ್ದ ಹಾಲನ್ನು ವಾರಕ್ಕೆ ಐದು ದಿನ ನೀಡಲು ಸರಕಾರ ಚಿಂತನೆ ನಡೆಸಿದೆ ಎಂದು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಜರಗಿದ ಸಮಾರಂಭದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ಶಿಕ್ಷಕರ ಪ್ರಾಮಾಣಿಕ ಪ್ರಯತ್ನದಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ. ಎಸ್.ವಿ. ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಇಂಟರ್ಲಾಕ್ ಅಳವಡಿಕೆಗೆ ಸುಮಾರು ೩.೫ ಲಕ್ಷ ರೂ. ಮಂಜೂರಾಗಿದ್ದು, ಕಾಲೇಜು ರಸ್ತೆಯನ್ನು ಅಭಿವೃದ್ಧಿ ಪಡಿಸಲು ಮುಂದಿನ ಕ್ರಿಯಾಯೋಜನೆಯಲ್ಲಿ ಅಗತ್ಯ ಅನುದಾನ ಒದಗಿಸುವುದಾಗಿ ಅವರು ಭರವಸೆ ನೀಡಿದರು. ಜಿಎಸ್ವಿಎಸ್ ಅಸೋಸಿಯೇಶನ್ ಕಾರ್ಯದರ್ಶಿ…
ಕುಂದಾಪುರ: ಗಂಗೊಳ್ಳಿ ಬಂದರಿನ ಮೂಲಕ ಭಾನುವಾರ ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದ್ದ ಫಿಶಿಂಗ್ ಬೋಟೊಂದು ಗಂಗೊಳ್ಳಿ ಸಮೀಪ ಸಮುದ್ರದಲ್ಲಿ ದುರಂತಕ್ಕೀಡಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಗಂಗೊಳ್ಳಿಯ ರಾಘವೇಂದ್ರ ಖಾರ್ವಿ ಮಾಲಕತ್ವದ ಶ್ರೀ ಮಂಜುನಾಥೇಶ್ವರ ಹೆಸರಿನ ಮೀನುಗಾರಿಕೆಯ ಬೋಟು ಇಂದು ಬೆಳಿಗ್ಗೆ ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಬಂದರಿನಿಂದ ಕೆಲವೇ ದೂರದಲ್ಲಿ ಸಮುದ್ರದಲ್ಲಿ ತೆರಳುತ್ತಿದ್ದ ಸಂದರ್ಭ ಭಾರಿ ಗಾತ್ರದ ಅಲೆಯೊಂದು ಬೋಟಿಗೆ ಅಪ್ಪಳಿಸಿದ ಪರಿಣಾಮ ಬೋಟು ಮಗುಚಿ ಬಿದ್ದಿತು ಎನ್ನಲಾಗಿದೆ. ಇದೇ ಸಂದರ್ಭ ಸಮೀಪದಲ್ಲಿ ಸಾಗುತ್ತಿದ್ದ ಸುಮಾರು ನಾಲ್ಕೈದು ಬೋಟಿನ ಮೀನುಗಾರರು ಮಗುಚಿ ಬಿದ್ದ ಬೋಟಿನಲ್ಲಿದ್ದ ಪಾಂಡು ಗಂಗೊಳ್ಳಿ, ಪ್ರಭಾಕರ ಗಂಗೊಳ್ಳಿ, ಈಶ್ವರ ಉಪ್ಪುಂದ ಹಾಗೂ ಮಂಜುನಾಥ ಕೊರವಡಿ ಎಂಬುವರನ್ನು ರಕ್ಷಿಸಿದ್ದಾರೆ. ಗಾಯಗೊಂಡ ಮೀನುಗಾರರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದುರಂತದಲ್ಲಿ ಬೋಟು ಸಮುದ್ರದಲ್ಲಿ ಮುಳುಗಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಲೆ ಮತ್ತಿತರ ಸಲಕರಣೆಗಳು ಸಮುದ್ರ ಪಾಲಾಗಿದೆ. ಅಪಘಾತದಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಘಟನೆಯ…
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ವಾಹನ ನಿಲುಗಡೆ ಪ್ರದೇಶದಲ್ಲಿ ಕೆನರಾ ಬ್ಯಾಂಕ್ ಕೊಡುಗೆಯಾಗಿ ನೀಡಿದ ಮೂರುವರೆ ಲಕ್ಷ ರೂ. ವೆಚ್ಚದ ಹೈ-ಮಾಸ್ಟ್ ವಿದ್ಯುತ್ ದೀಪಸ್ಥಂಭವನ್ನು ಸೋಮವಾರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಪ್ರಸಾದ ಅಡ್ಯಂತಾಯ ಲೋಕಾರ್ಪಣೆಗೊಳಿಸಿದರು. ಕೆನರಾ ಬ್ಯಾಂಕ್ ಮಂಗಳೂರು ವೃತ್ತ ಕಛೇರಿಯ ಉಪ ಮಹಾಪ್ರಬಂಧಕ ಜಿ.ವಿ.ಪ್ರಭು, ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಅಧೀಕ್ಷಕ ಕೆ. ರಾಮಕೃಷ್ಣ ಅಡಿಗ, ನೇರಳಕಟ್ಟೆ ಕೆನರಾ ಬ್ಯಾಂಕ್ ಶಾಖೆಯ ಪ್ರಬಂಧಕ ಸತೀಶ್ ಬೀಡು, ಅಧಿಕಾರಿ ಗಿರೀಶ್ ಭಂಡಾರಿ, ಸಿಬ್ಬಂದಿ ಈಶ್ವರ್ ಹಾಗೂ ದೇವಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳಿಗ್ಗಿನಿಂದ ಜಡಿ ಮಳೆ ಸುರಿಯುತ್ತಿತ್ತು. ಮಳೆ ಸುರಿದು ಗದ್ದೆಯಲ್ಲಿ ನೀರು ತುಂಬಿದಂತೆಲ್ಲ ನೆರೆದಿದ್ದವರ ಉತ್ಸಾಹವೂ ಹೆಚ್ಚಿತ್ತಲಿತ್ತು. ಅಲ್ಲಿ ನಾಯಕನಿರಲಿಲ್ಲ, ಕಾರ್ಯಕರ್ತರೂ ಇರಲಿಲ್ಲ. ಒಂದು ದಿನ ಎಲ್ಲರಲ್ಲೂ ಎಲ್ಲವನ್ನೂ ಮರೆತು, ಕಲೆತು ಸ್ನೇಹವನ್ನು ಗಟ್ಟಿಗೊಳಿಸುವ ತುಡಿತ ಮಾತ್ರ ಕಾಣುತ್ತಿತ್ತು. ಕುಂದಾಪುರ ತಾಲೂಕಿನ ಸಟ್ವಾಡಿ ಬಸ್ ನಿಲ್ದಾಣದ ಬಳಿಯ ಕೆಸರು ಗದ್ದೆಯಲ್ಲಿ ಕುಂದಾಪುರ ಬಿಜೆಪಿ ಯುವಮೋರ್ಚಾದ ವತಿಯಿಂದ ಆಯೋಜಿಸಲಾಗಿದ್ದ ’ಶ್ರಾವಣದ ಕೆಸರಿನಲ್ಲಿ ಕಮಲ ಕೂಟ’ ಎಂಬ ವಿಭಿನ್ನ ಕಾರ್ಯಕ್ರಮ ಕೆಸರಿನಲ್ಲಿ ಸ್ನೇಹ ಕಲೆಯುವಂತೆ ಮಾಡಿತ್ತು. ರಾಜಕೀಯ ಪಕ್ಷದ ಕಾರ್ಯಕ್ರಮವೆಂದಾಗಲೆಲ್ಲಾ ನಾಯಕರು, ಭಾಷಣ, ಸಂಘಟನಾತ್ಮಕ ಚಟುವಟಿಕೆಗಳೇ ಕಣ್ಮುಂದೆ ಬರುವಾಗ ಕಮಲ ಕೂಟವು ಕಾರ್ಯಕರ್ತರಲ್ಲಿ ಹೊಸ ಹುರುಪು ತುಂಬಿತ್ತು. ಸದಾ ಪಕ್ಷ, ರಾಜಕಾರಣದಲ್ಲಿ ತೊಡಗಿಕೊಳ್ಳುವವರಿಗೆ ಒಂದಿಷ್ಟು ವಿಶ್ರಾಂತಿ ನೀಡುವ ಸಲುವಾಗಿಯೇ ಆಯೋಜಿಸಲಾಗಿದ್ದ ಕೆಸರು ಗದ್ದೆಯ ಆಟೋಟ ಸ್ವರ್ಧೆಯಲ್ಲಿ ಉಡುಪಿ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಬಿಜೆಪಿ ಪಕ್ಷದ ಸಾವಿರಾರು ಕಾರ್ಯಕರ್ತರು ಉತ್ಸಾಹದಿಂದಲೇ ಭಾಗವಹಿಸಿದ್ದರು. (ಕುಂದಾಪ್ರ ಡಾಟ್ ಕಾಂ ವರದಿ) ಆಟೋಟ: ಕೆಸರು ಗದ್ದೆಯಲ್ಲಿ ಆಯೋಜಿಸಲಾಗಿದ್ದ ಮಾನವ ಪಿರಮಿಡ್, ಹಗ್ಗಜಗ್ಗಾಟ, ಉಪ್ಪುಮೂಟೆ ಓಟ,…
ನಮ್ಮೂರ ಸಂಗೀತ ಕುವರನಿಗೆ ಎರಡು ಪ್ರಶಸ್ತಿ ಸುನಿಲ್ ಹೆಚ್. ಜಿ. ಬೈಂದೂರು | ಅ.5, 2015 ಹೊಸ ಬಗೆಯ ಸಂಗೀತದ ಮೂಲಕ ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಯಶಸ್ವಿ ಯುವ ಸಂಗೀತ ನಿರ್ದೇಶಕ, ಕುಂದಾಪುರ ತಾಲೂಕಿನ ಬಸ್ರೂರಿನ ಹುಡುಗ ರವಿ ಬಸ್ರೂರ್ ತೆಕ್ಕೆಯಲ್ಲಿ ಈ ಭಾರಿ ಎರಡು ಸಂಗೀತ ಪ್ರಶಸ್ತಿಗಳು ಸೇರಿಕೊಂಡಿದೆ. ಕಳೆದ ಕೆಲವು ದಶಕಗಳಿಂದ ಚಿತ್ರರಂಗದಲ್ಲಿ ಸಂಗೀತ ಸ್ವರ ಮೂಡಿಸುತ್ತಿದ್ದ ರವಿ ಬಸ್ರೂರ್ ಅವರಿಗೆ ಈ ಭಾರಿ ಅವಳಿ ಪ್ರಶಸ್ತಿ ದೊರೆತಿರುವುದು ಅವರ ಪ್ರತಿಭೆಗೆ ಸಂದ ದೊಡ್ಡ ಗೌರವವರೇ ಸರಿ. ಅವರು ಒಂದೆಡೆ ಜೀ ಕನ್ನಡ ವಾಹಿನಿ ಕೊಡಮಾಡಿದ 2014ನೇ ಸಾಲಿನ ‘ಜೀ ಮ್ಯೂಸಿಕ್ ಅವಾರ್ಡ್’ನ ಉತ್ತಮ ಹಿನ್ನೆಲೆ ಸ೦ಗೀತ ವಿಭಾಗದಲ್ಲಿ ಉಗ್ರಂ ಚಿತ್ರದ ಸಂಗೀತ ನಿರ್ದೇಶನಕ್ಕಾಗಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದರೆ, ಕನ್ನಡ ಇಂಟರ್ ನ್ಯಾಷನಲ್ ಮ್ಯೂಸಿಕ್ ಅವಾರ್ಡ್ (ಕಿಮಾ) ಕೊಡಮಾಡುವ ಉತ್ತಮ ಹಿನ್ನೆಲೆ ಸಂಗೀತ ವಿಭಾಗದ ಪ್ರಶಸ್ತಿಯನ್ನು ಉಗ್ರಂ ಚಿತ್ರಕ್ಕಾಗಿಯೇ ಪಡೆದುಕೊಂಡಿದ್ದಾರೆ. ಅತ್ಯುತ್ತಮ ಸಂಯೋಜಕ (ಅತ್ಯುತ್ತಮ ಹಾಡು)…
ಕುಂದಾಪುರ: ನಗರದ ಬಿಜೆಪಿ ಯುವಮೋರ್ಚಾದ ವತಿಯಿಂದ ಸಾರ್ವಜನಿಕರು ಹಾಗೂ ಕಾರ್ಯಕರ್ತರಿಗಾಗಿ ಕೆಸರು ಗದ್ದೆಯ ಆಟೋಟ ಸ್ವರ್ಧೆ ‘ಶ್ರಾವಣದ ಕೆಸರಿನಲ್ಲಿ ಕಮಲ ಕೂಟ’ವು ಕುಂದಾಪುರ-ಬಸ್ರೂರು ರಸ್ತೆಯ ಸಟ್ವಾಡಿ ಬಸ್ ನಿಲ್ದಾಣದ ಬಳಿ ಇಂದು(ಅಗಸ್ಟ್.9) ಜರುಗಲಿದೆ. ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ಕಮಲ ಕೂಟವನ್ನು ಉದ್ಘಾಟಿಸಲಿದ್ದು, ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಮುಖ್ಯ ಅತಿಥಿಯಾಗಿ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ರಘುಪತಿ ಭಟ್, ಉಡುಪಿ ಜಿಜೆಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ. ಉದಯಕುಮಾರ್ ಶೆಟ್ಟಿ, ಉಡುಪಿ ಜಿ.ಪಂ ಉಪಾಧ್ಯಕ್ಷ ಪ್ರಕಾಶ್ ಟಿ. ಮೆಂಡನ್, ಜಿ.ಪಂ. ಸದಸ್ಯ ಬಾಬು ಶೆಟ್ಟಿ, ಬಿಜೆಪಿ ಮೀನುಗಾರಿಕಾ ಪ್ರಕೋಷ್ಠದ ರಾಜ್ಯ ಸಂಚಾಲಕ ಕಿಶೋರ್ ಕುಮಾರ್ ಕುಂದಾಪುರ, ಯುವಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿ ವಿಕಾಸ್ ಪುತ್ತೂರು, ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ರಂಜಿತ್ ಸಾಲಿಯಾನ್, ಮಹಿಳಾ ಯುವಮೋರ್ಚಾ ಅಧ್ಯಕ್ಷೆ ಶೀಲಾ ಶೆಟ್ಟಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ…
ಉಡುಪಿ: ಅಕ್ರಮವಾಗಿ ಸ್ಕಾರ್ಪಿಯೊ ವಾಹನದಲ್ಲಿ ದನಗಳನ್ನು ತುಂಬಿ ಸಾಗಣೆ ಮಾಡುತ್ತಿದ್ದ ಘಟನೆ ಹುಲಿಕಲ್ ಘಾಟ್ ಬಳಿ ತಪಾಸಣೆ ವೇಳೆ ಬೆಳಕಿಗೆ ಬಂದಿದೆ. ಸ್ಕಾರ್ಪಿಯೊ ವಾಹನದಲ್ಲಿ ದನಗಳನ್ನು ಸಾಗಿಸುತ್ತಿದ್ದ ವೇಳೆ ಹೊಸನಗರ ತಾಲೂಕಿನ ನಗರದ ಹುಲಿಕಲ್ ಘಾಟ್ ಗೇಟ್ ನಲ್ಲಿ ತಪಾಸಣೆ ನಡೆಸಿದಾಗ ಇಬ್ಬರು ಆರೋಪಿಗಳು ಅಲ್ಲಿದ್ದ ಅಧಿಕಾರಿಗಳನ್ನು ಬೆದರಿಸಿ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ವಾಹನದಲ್ಲಿ ಒಟ್ಟು 8 ದನಗಳಿದ್ದು ಆ ಪೈಕಿ 3ದನಗಳ ಕುತ್ತಿಗೆ ಕಾಲು ಕತ್ತರಿಸಿ ತುಂಬಲಾಗಿತ್ತು. ವಿಪರೀತ ಗಾಯಗೋಂಡಿದ್ದ 5 ದನಗಳನ್ನು ರಕ್ಷಿಸಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಗೊಳ್ಳಿ: ನೆಲದ ಮೇಲೆ ಬೆಳೆದ ಹೂಬಳ್ಳಿಗಳು ಗಿಡ ಗಂಟಿಗಳು ಹತ್ತಿರದಲ್ಲಿರುವ ಮನೆ, ಅಂಗಡಿ ಮುಗ್ಗಟ್ಟು ಅಥವಾ ಕಂಬಗಳನ್ನು ಹತ್ತಿ ಬೆಳೆಯುವುದು ಮಳೆಗಾಲದಲ್ಲಿ ಸಾಮಾನ್ಯ. ಆದರೆ ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯ ಶ್ರೀ ಚಕ್ರೇಶ್ವರಿ ದೇವಸ್ಥಾನದ ಸಮೀಪದಲ್ಲಿರುವ ವಿದ್ಯುತ್ ಕಂಬವೊಂದರ ಮೇಲೆ ಬಳ್ಳಿಗಳು ದೊಡ್ಡದಾಗಿ ಬೆಳೆದು ವಿದ್ಯುತ್ ತಂತಿ ಸಮೇತ ಕಂಬವನ್ನು ಆವರಿಸುತ್ತಿದೆ. ಇಷ್ಟಿದ್ದರೂ ಮೆಸ್ಕಾಂ ಇಲಾಖೆ ದಿವ್ಯ ನಿರ್ಲಕ್ಷ್ಯ ತಾಳಿದ್ದು, ಕಂಬವನ್ನು ಸುತ್ತುವರಿದಿರುವ ಬಳ್ಳಿಗಳನ್ನು ಕತ್ತರಿಸುವ ಗೋಜಿಗೆ ಹೋಗಿಲ್ಲ. ಇದು ಮುಂದಿನ ದಿನಗಳಲ್ಲಿ ಅನಾಹುತಗಳಿಗೆ ಎಡೆಮಾಡಿಕೊಡುವ ಸಾಧ್ಯತೆಗಳಿದ್ದು, ಮೆಸ್ಕಾಂ ಅಧಿಕಾರಿಗಳು ಇತ್ತಮ ಗಮನಹರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಚಿತ್ರ: ಸುರಭಿ ಗಂಗೊಳ್ಳಿ
