Author: ಸುನಿಲ್ ಹೆಚ್. ಜಿ. ಬೈಂದೂರು

ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿಬೈಂದೂರು: ಕಡಲ ತಡಿ ಮತ್ತು ಸಹ್ಯಾದ್ರಿ ಶಿಖರಶ್ರೇಣಿಯ ನಡುವೆ ಹಚ್ಚ ಹಸುರನ್ನು ಹೊದ್ದು ಮಲಗಿರುವ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ನಿಧಾನಕ್ಕೆ ಏರುತ್ತಿದೆ. ಸದ್ಯ ಕ್ಷೇತ್ರದಲ್ಲಿ ಬೇಕು – ಬೇಡ, ಬೇಡಿಕೆಗಳದ್ದೇ ಮಾತು. ತೀರಾ ಹಿಂದುಳಿದ, ಗುಡ್ಡಗಾಡು ಪ್ರದೇಶವನ್ನು ಒಳಗೊಂಡ ವಿಧಾನಸಭಾ ಕ್ಷೇತ್ರವೆಂಬ ಹಣೆಪಟ್ಟಿ ಹೊಂದಿರುವ ಬೈಂದೂರು ಸುಮಾರು 110 ಕಿ.ಮೀ ಪಶ್ಚಿಮ ಘಟ್ಟ ಹಾಗೂ 40 ಕಿ.ಮೀ ಪಶ್ಚಿಮ ಕರಾವಳಿ ಪ್ರದೇಶವನ್ನೊಳಗೊಂಡಿದ್ದು, ಭೌಗೋಳಿಕವಾಗಿ ವಿಸ್ತಾರವಾಗಿದೆ. 2008ರಲ್ಲಿ ಕ್ಷೇತ್ರ ಮರುವಿಂಗಡನೆಯ ಸಂದರ್ಭ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಕುಂದಾಪುರದ ಕೆಲವು ಭಾಗಗಳು ಸೇರ್ಪಡೆಗೊಂಡಿದೆ. ಅಲ್ಲದೇ ಇದು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೂ ಸೇರ್ಪಡೆಗೊಂಡಿತ್ತು. ಕುಂದಾಪುರ ತಾಲೂಕಿನ ಭಾಗವಾಗಿದ್ದ ಬೈಂದೂರು 2018ರಲ್ಲಿ ಸ್ವತಂತ್ರ ತಾಲೂಕಾಯಿತು. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸೋದ್ಯಮ, ವಾಣಿಜ್ಯೋದ್ಯಮಕ್ಕೆ ವಿಪುಲ ಅವಕಾಶಗಳಿದ್ದರೂ ಜನಪ್ರತಿನಿಧಿಗಳ ನಿರ್ಲಕ್ಷ್ಯ, ಅನುಭವದ ಕೊರತೆಯಿಂದಾಗಿಯೇ ಅಭಿವೃದ್ಧಿ ಎಂಬುದು ಮೂಲಭೂತ ಸೌಕರ್ಯಗಳನ್ನು ಒದಗಿಸುವುದಕ್ಕೇ ಸೀಮಿತವಾಗಿದೆ. ನೀರು, ರಸ್ತೆ,…

Read More

ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರಕ್ಕೆ ಬಂದಿದ್ದಾರೆ. ಕಳೆದ 24 ವರ್ಷಗಳಿಂದ ಶಾಸಕರಾಗಿ, ಅಭಿಮಾನಿಗಳಗೆ ‘ಕುಂದಾಪುರದ ವಾಜಪೇಯಿ’ ಎಂದೆನಿಸಿಕೊಂಡಿರುವ ಹಾಲಾಡಿ ಅವರ ಈ ನಡೆಯಿಂದಾಗಿ, ಸದ್ಯ ಬಿಜೆಪಿ ಯಾರಿಗೆ ಟಿಕೆಟ್ ನೀಡಲಿದೆ ಕುತೂಹಲ ಮೂಡಿದೆ. ವಿಧಾನಸಭಾ ಚುನಾವಣೆಗೆ ಪುರ್ವಭಾವಿಯಾಗಿ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸ್ವತಃ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರೇ ಈ ಇಚ್ಛೆ ವ್ಯಕ್ತಪಡಿಸಿರುವ ಬಗ್ಗೆ ಮಾಹಿತಿಗಳು ಲಭ್ಯವಾಗಿದ್ದ ಇದನ್ನು ಸ್ವತಃ ಶಾಸಕರ ಆಪ್ತರು ದೃಢೀಕರಿಸಿದ್ದಾರೆ. ಎ.ಜಿ. ಕೊಡ್ಗಿ ಅವರ ಪುತ್ರ ಹಾಗೂ ತಮ್ಮ ಆಪ್ತ ಕಿರಣ ಕೊಡ್ಗಿ ಅವರಿಗೆ ಕುಂದಾಪುರದ ಟಿಕೆಟ್ ನೀಡುವಂತೆ ಬೇಡಿಕೆ ಇರಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ಈ ಭಾರಿ ಬಿಜೆಪಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಟಿಕೆಟ್ ನೀಡುತ್ತಾ – ಇಲ್ಲವೇ ಎಂಬ ಚರ್ಚೆಯ ಬೆನ್ನಲೇ ಸ್ವತಃ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳುವ ನಿರ್ಧಾರಕ್ಕೆ…

Read More

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಅರಬ್ಬೀ ಸಮುದ್ರದ ತಟ, ಮಲೆನಾಡಿನ ಪ್ರದೇಶಗಳನ್ನೊಳಗೊಂಡ ಜಿಲ್ಲೆಯ ವಿಸ್ತಾರವಾದ ಪ್ರದೇಶ – ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ಜೋರಾಗಿದೆ. ಎಲ್ಲಾ ಪಕ್ಷಗಳ ಹುರಿಯಾಳುಗಳ ಮತಭೇಟೆಯಲ್ಲಿ ತೊಡಗಿದ್ದಾರೆ. ಈ ಭಾರಿ ಮತದಾರ ಯಾರ ಕೈ ಹಿಡಿಯಲಿದ್ದಾನೆ ಎಂಬ ಕುತೂಹಲವಿದ್ದು, ಎರಡು ರಾಷ್ಟ್ರೀಯ ಪಕ್ಷಗಳ ಪೈಕಿ ಬಿಜೆಪಿ ಅಭ್ಯರ್ಥಿ ಯಾರು ಎಂಬುವುದರ ಮೇಲೆ ಕಾಂಗ್ರೆಸ್ – ಬಿಜೆಪಿ ಗೆಲುವಿನ ಲೆಕ್ಕಾಚಾರ ನಿರ್ಣಯವಾಗಲಿದೆ. 69 ಗ್ರಾಮಗಳನ್ನು ಹೊಂದಿರುವ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 218 ಮತಗಟ್ಟೆಗಳಿವೆ. ಕ್ಷೇತ್ರ ಪುನರ್ ವಿಂಗಡನೆಯ ಬಳಿಕ ಬ್ರಹ್ಮಾವರ ವಿಧಾನಸಭಾ ಕ್ಷೇತ್ರದ ಬಹುಪಾಲು ಕ್ಷೇತ್ರಗಳು ಕುಂದಾಪುರ ಕ್ಷೇತ್ರವನ್ನು ಸೇರಿದ್ದವು. ಹಂಗಾರಕಟ್ಟೆಯಿಂದ ಕೋಡಿ ತನಕದ ಕರಾವಳಿ ಭಾಗ, ಹೊಸಂಗಡಿಯಿಂದ ಈಚೆಗಿನ ಮಲೆನಾಡಿನ ಗ್ರಾಮಗಳು, ಕುಂದಾಪುರ ಪುರಸಭೆ, ಸಾಲಿಗ್ರಾಮ ಪಟ್ಟಣ ಪಂಚಾಯತಿ ಕುಂದಾಪುರ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ಕುಂದಾಪುರದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಸಿಪಿಐಎಂ, ಸಂಯುಕ್ತ ಜನತಾದಳ ಪಕ್ಷಗಳು ಸ್ಪರ್ಧಿಸಿದ್ದರೂ, ಬಿಜೆಪಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಬೆಂಗಳೂರು ಇವರು ಡಿಸೆಂಬರ್-2022ರಲ್ಲಿ ನಡೆಸಿದ ವಿಶೇಷ ಸಂಗೀತ, ನೃತ್ಯ ಹಾಗೂ ತಾಳವಾದ್ಯ ಪರೀಕ್ಷೆಯಲ್ಲಿ ವೈಶವಿ ಶೆಟ್ಟಿಗಾರ್ ಇವರು ಭರತನಾಟ್ಯ ಕಿರಿಯ ದರ್ಜೆ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅಂಕಿತ ದೀಪಕ್ ಬೆಂಗಳೂರು ಇವರ ಶಿಷ್ಯರಾಗಿದ್ದು, ದಯಾನಂದ ಶೆಟ್ಟಿಗಾರ್ ಮತ್ತು ಶ್ಯಾಮಲಾಕ್ಷಿ ಶೆಟ್ಟಿಗಾರ್ ಅವರ ಪುತ್ರಿ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಬಂದರು ಹಿತ್ಲುಗದ್ದೆ ಮನೆ ಶ್ರೀ ಪಂಜುರ್ಲಿ ದೈವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯೋತ್ಸವ ಹಾಗೂ ಮಾರಿಜಾತ್ರೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು. ಸೋಮವಾರ ಗುರುಪೂಜೆ, ಕಲಾತತ್ವಹೋಮ, ೧೦೮ ಕಲಶ ಸ್ಥಾಪನೆ, ಅಧಿವಾಸ ಹೋಮ, ಮಹಾಪೂಜೆ, ಸ್ವಾಮಿ ಮತ್ತು ಬೊಬ್ಬರ್ಯ ದೈವಸ್ಥಾನದಲ್ಲಿ ನವಕ ಪ್ರಧಾನ ಕಲಾತತ್ವ ಹೋಮ, ಕಲಶಾಭಿಷೇಕ, ಮಹಾಪೂಜೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಮಂಗಳವಾರ ಶ್ರೀ ನಾಗ ದೇವರಿಗೆ ಆಶ್ಲೇಷಬಲಿ, ಕಲಾತತ್ವಹೋಮ, ಪಂಚವಿಂಶತಿ ಕಲಶ ಸ್ಥಾಪನೆ, ಕಲಶಾಭಿಷೇಕ, ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ ಮಾರಿಜಾತ್ರೆ, ತುಲಾಭಾರ ಸೇವೆ ಹಾಗೂ ಪ್ರಸಾದ ವಿತರಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿತು. ದೈವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಭಕ್ತಾದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು.

Read More

ಕುಂದಾಪ್ರ ಡಾಟ್ ಕಾಂ ವರದಿ.ಬೈಂದೂರು: ಗುಣಮಟ್ಟದ ಶಿಕ್ಷಣದ ಮೂಲಕವೇ ಬೈಂದೂರು ಪರಿಸರದಲ್ಲಿ ಮನೆಮಾತಾದ, ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನಗೈದ ಶಾಲೆಗೀಗ 50ರ ಹರೆಯ. ಖಾವಂದರೆಂದರೆ ನಡೆದಾಡುವ ದೇವರೆಂದು ಪೂಜಿಸುವ ಮಂದಿಯ ನಡುವೆ, ಖಾವಂದರ ಆಶೀರ್ವಾದದ ಫಲವಾಗಿ ಮುನ್ನಡೆಯುತ್ತಾ ಬಂದ ಉಡುಪಿ ಜಿಲ್ಲೆಯ ಏಕೈಕ ಅನುದಾನಿತ ಶಾಲೆಯೀಗ ತನ್ನ ಇತಿಹಾಸವನ್ನು ಸುವರ್ಣಾಕ್ಷರಗಳಲ್ಲಿ ದಾಖಲಿಸುತ್ತಿದೆ. ಹೌದು. ತಾಲೂಕಿನ ಮಯ್ಯಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಗೀಗ ಸುವರ್ಣ ಸಂಭ್ರಮ. ಎಸ್.ಡಿ.ಎಂ ಹಿರಿಯ ಪ್ರಾಥಮಿಕ ಶಾಲೆಯಾಗಿ ಗುರುತಿಸಿಕೊಳ್ಳುವ ಮೊದಲು ಮಯ್ಯಾಡಿಯಲ್ಲಿದ್ದುದು ನಿತ್ಯಾನಂದ ಎಡೆಡ್ ಹೈಯರ್ ಪ್ರೈಮೆರಿ ಸ್ಕೂಲ್ ಎಂಬ ಅನುದಾನಿತ ಶಾಲೆ. 1938ರಲ್ಲಿ ಶೈಕ್ಷಣಿಕ ಸೇವೆಯ ಮಹದಾಸೆಯಿಂದ ಸಮಾನ ಮನಸ್ಕರೊಡಗೂಡಿ ಆರಂಭಿಸಿದ ಶಾಲೆ ಮಯ್ಯಾಡಿಯ ಖಾಸಗಿ ಕಟ್ಟಡಗಳಲ್ಲಿಯೇ ಹತ್ತಾರು ವರ್ಷ ಮುನ್ನಡೆದಿತ್ತು. ಎಂ. ದ್ಯಾವಪ್ಪ ಶೇರುಗಾರ್ ಅವರು ಶಾಲೆಯ ಮುಖ್ಯೋಪಧ್ಯಾಯರಾಗಿದ್ದರು. ಕಾಲಕ್ರಮೇಣ ಸರಕಾರದ ನೀತಿಯಂತೆ ಅನುದಾನ ಪಡೆಯಲು ಸ್ವಂತ ಕಟ್ಟಡ ಪಡೆಯುವುದು ಅನಿವಾರ್ಯವಾದಾಗ ಆಡಳಿತ ಮಂಡಳಿಗೆ ಜಾಗ ಖರೀದಿಸಿ, ಕಟ್ಟಡ ನಿರ್ಮಿಸುವುದು ಕಷ್ಟಸಾಧ್ಯವಾಯಿತು. ಆಗ ಮಯ್ಯಾಡಿಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜ.18: ಕರ್ನಾಟಕ ಕ್ಷತ್ರಿಯ ಒಕ್ಕೂಟದ ನೇತೃತ್ವದಲ್ಲಿ ಜನವರಿ 29ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಕ್ಷತ್ರಿಯ ಸಮಾವೇಶಕ್ಕೆ ರಾಮಕ್ಷತ್ರಿಯ ಸಮುದಾಯ ಸೇರಿದಂತೆ ಸುಮಾರು 38 ಕ್ಷತ್ರಿಯ ಒಳಪಂಗಡಗಳು ಬೆಂಬಲ ನೀಡಿವೆ. ಮರಾಠ ಕ್ಷತ್ರಿಯ, ರಾಜ್ಯ ಕ್ಷತ್ರಿಯ, ಹಿಂದೂ ಕ್ಷತ್ರಿಯ, ರಾಮಕ್ಷತ್ರಿಯ ಹೀಗೆ ಹಲವಾರು ಪಂಗಡಗಳಿದ್ದು, ಕ್ಷತ್ರಿಯ ಸಮುದಾಯ ಒಗ್ಗಟ್ಟು ಕ್ಷೀಣವಾಗಿದೆ. ಬೃಹತ್ ಸಮಾವೇಶದ ಮೂಲಕ ಕ್ಷತ್ರಿಯ ಸಮುದಾಯದ ಕೂಗನ್ನು ಸರಕಾರಕ್ಕೆ ಮುಟ್ಟಿಸುವ ಉದ್ದೇಶ ಹೊಂದಲಾಗಿದೆ. ಕ್ಷತ್ರಿಯ ಸಮುದಾಯಕ್ಕೆ ಸಿಗಬೇಕಾದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಪ್ರಾಮುಖ್ಯತೆನ್ನು ಸಮಾವೇಶದ ಮೂಲಕ ಮುಂದಿಡಲು ತೀರ್ಮಾನಿಸಲಾಗಿದೆ. ಕ್ಷತ್ರಿಯ ಸಮುದಾಯದ ಉಪಪಂಗಡಗಳ ಪ್ರಮುಖ ಬೇಡಿಕೆಯನ್ನು, ಆಯಾ ಸಮುದಾಯದ ನಾಯಕರೊಂದಿಗೆ ಸಮಾಲೋಚಿಸಿ ಪ್ರತ್ಯೇಕ ಮನವಿ ಹಾಗೂ ಹತ್ಕೋತ್ತಾಯವನ್ನು ಸಮಾವೇಶದಲ್ಲಿ ಭಾಗವಹಿಸುವ ರಾಷ್ಟ್ರೀಯ ನಾಯಕರಿಗೆ ಸಲ್ಲಿಸುವ ಉದ್ದೇಶವನ್ನು ಸಮಾವೇಶ ಹೊಂದಿದೆ. ವಿಶ್ವ ರಾಮ ಕ್ಷತ್ರಿಯ ಮಹಾಸಂಘದ ಗೌರವಾಧ್ಯಕ್ಷ ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ಅವರು ಮತ್ತು ವಿಶ್ವ ರಾಮಕ್ಷತ್ರಿಯ ಮಹಾಸಂಘದ ಅಧ್ಯಕ್ಷ ಎಚ್.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.20: ಶಾಲಾ ಮಕ್ಕಳೊಂದಿಗೆ ಮೃದುವಾಗಿ ಮತ್ತು ಅವರ ಮನಸ್ಸನ್ನು ಅರಿತು ಅತ್ಯಂತ ಸೂಕ್ಷ್ಮವಾಗಿ ವರ್ತಿಸುವ ಕುರಿತಂತೆ ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜುಗಳ ಶಿಕ್ಷಕರಿಗೆ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಿಲ್ಲೆಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚೆಗೆ ರಾಜ್ಯದ ಕೆಲವು ಜಿಲ್ಲೆಗಳ ಶಾಲೆಯಲ್ಲಿ ಶಿಕ್ಷಕರು ಮಕ್ಕಳ ಮೇಲೆ ದೌರ್ಜನ್ಯ ನಡೆಸುತ್ತಿರುವ ಕುರಿತಂತೆ ವರದಿಯಾಗುತ್ತಿದ್ದು, ಮಕ್ಕಳು ಅತ್ಯಂತ ಮೃದು ಮತ್ತು ಸೂಕ್ಷ್ಮ ಮನಸ್ಸಿನವರಾಗಿದ್ದು, ಶಿಕ್ಷಕರು ಮಕ್ಕಳ ಸ್ವಭಾವವನ್ನು ಅರಿತು, ಸ್ಥಿತಿಪ್ರಜ್ಞರಾಗಿ ಮಕ್ಕಳೊಂದಿಗೆ ವರ್ತಿಸಬೇಕಾಗಿರುತ್ತದೆ. ಈ ಬಗ್ಗೆ ಶಿಕ್ಷಕ ತರಬೇತಿ ಅವಧಿಯಲ್ಲಿ ತರಬೇತಿ ನೀಡಿದ್ದರೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರಿನಿಂದ ಕೊಲ್ಲೂರು, ನಗರ, ಹೊಸನಗರ, ಆನಂದಪುರ, ಶಿಕಾರಿಪುರ, ಮಾಸೂರು, ರಟ್ಟೆಹಳ್ಳಿ, ಮೂಲಕ ರಾಣೆಬೆನ್ನೂರಿಗೆ ಹೋಗುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 766(ಸಿ)ಯನ್ನು ಸಂಪೂರ್ಣವಾಗಿ ಅಗಲೀಕರಣ ಮಾಡಿ ಅಭಿವೃದ್ಧಿಗೊಳಿಸಲು ಕೇಂದ್ರ ಭೂಸಾರಿಗೆ ಮಂತ್ರಾಲಯವು ಸಕಾರಾತ್ಮಕವಾಗಿ ಸ್ಪಂದಿಸಿದೆ. 2022-23ನೇ ಸಾಲಿಗೆ ಬೈಂದೂರಿನಿಂದ ಹಾಲ್ಕಲ್ ಜಂಕ್ಷನ್ ಮತ್ತು ಕೊಲ್ಲೂರು ಮೂಲಕ ನಾಗೋಡಿ ವರೆಗಿನ 40.40 ಕಿ.ಮೀ ಉದ್ದದ ರಸ್ತೆಯನ್ನು ದ್ವಿಪಥ ರಸ್ತೆಯನ್ನಾಗಿ ಅಗಲೀಕರಣ ಮಾಡಿ ಅಭಿವೃದ್ಧಿಗೊಳಿಸುವ ರೂ 394.05ಕೋಟಿ ಮೊತ್ತದ ಡಿ.ಪಿ.ಆರ್ಗೆ ಕೇಂದ್ರ ಭೂಸಾರಿಗೆ ಮಂತ್ರಾಲಯವು ಮಂಜೂರಾತಿ ನೀಡಿದೆ. ಸದರಿ ಹೆದ್ದಾರಿಯ ಶಿಕಾರಿಪುರ ಪಟ್ಟಣಕ್ಕೆ 6.576 ಕಿ.ಮೀ ಉದ್ದದ ಬೈಪಾಸ್ ರಸ್ತೆ ನಿರ್ಮಾಣ ಮಾಡಲು 66.44 ಕೋಟಿ ಮೊತ್ತದ ಡಿ.ಪಿ.ಆರ್ ಹಾಗೂ ಹೊಸನಗರ ಮಾವಿನಕೊಪ್ಪ ವೃತ್ತದಿಂದ ಹೊಸನಗರ ಬೈಪಾಸ್, ಶರಾವತಿ ಹಿನ್ನೀರಿಗೆ 1.54 ಕಿ.ಮೀ ಮತ್ತು 0.72 ಕಿ.ಮೀ ಉದ್ದದ 2 ಭಾರೀ ಸೇತುವೆಗಳ ನಿರ್ಮಾಣದೊಂದಿಗೆ ಆಡುಗೋಡಿವರೆಗೆ 13.82 ಕಿ.ಮೀ ಉದ್ದದ ಬದಲೀ ರಸ್ತೆ ನಿರ್ಮಾಣ ಮಾಡುವ ರೂ 313.56 ಕೋಟಿಯ…

Read More