Author: ಸುನಿಲ್ ಹೆಚ್. ಜಿ. ಬೈಂದೂರು

ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

ಬೈಂದೂರು: ಹಳೆ ದ್ವೇಷದ ಹಿನ್ನಲೆಯಲ್ಲಿ ಅಂಗಡಿಯೊಂದರ ಬಳಿ ನಿಂತಿದ್ದ ಯುವಕನೋರ್ವನ ಮೇಲೆ ಏಕಾಏಕಿ ದಾಳಿ ನಡೆಸಿದ ನಾಲ್ವರ ತಂಡ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ತಗ್ಗರ್ಸೆ ಗ್ರಾಮದಲ್ಲಿ ವರದಿಯಾಗಿದೆ. ತಗ್ಗರ್ಸೆಯ ರವಿಂದ್ರ ಗಾಣಿಗ(31) ಹಾಗೂ ಅವರ ಸಹೋದರ ಕೃಷ್ಣ ಗಾಣಿಗ ಅಂಗಡಿಯ ಬಳಿ ನಿಂತಿದ್ದಾಗ ಬೈಕಿನಲ್ಲಿ ಬಂದ ತಗ್ಗರ್ಸೆಯವರೇ ಆದ ಶಶಿಧರ ಹುದಾರ್, ರಾಜು ಹುದಾರ್ ಎಂಬುವವರು ರವೀಂದ್ರನನ್ನು ತಡೆದು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕೆನ್ನೆಗೆ ಬಾರಿಸಿದ್ದಲ್ಲದೇ ರಾಡ್ ನಿಂದ ಕಾಲುಗೆ ಹೊಡೆದಿದ್ದಾರೆ. ಆ ಸಮಯದಲ್ಲಿ ತಪ್ಪಿಸಲು ಹೋದ ಕೃಷ್ಣ ಎಂಬುವವರಿಗೂ ಅಲ್ಲಿಗೆ ಬಂದ ನೀಲಕಂಠ ಹುದಾರ್ ಹಾಗೂ ಜಯರಾಜ ಹುದಾರ್ ಎಂಬುವವರು ಕೆನ್ನೆ ಹಾಗೂ ಮೈಕೈಗೆ ಗುದ್ದಿ, ಇಬ್ಬರಿಗೂ ಕೊಲೆ ಬೆದರಿಕೆ ಹಾಕಿದ್ದಾರೆ. ಹಳೆ ವೈಶಷ್ಯವೇ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಕೆ ನಡೆಸುತ್ತಿದ್ದಾರೆ.

Read More

ಕುಂದಾಪುರ: ತಾಲೂಕಿನ ಕೆಂಚನೂರು ಗ್ರಾಮದ ಇಬ್ಬರು ಅಪ್ರಾಪ್ತ ಹೆಣ್ಣ ಮಕ್ಕಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ವರದಿಯಾಗಿದೆ. ಅದೇ ಗ್ರಾಮದ ತಿಮ್ಮ(38) ಎಂಬಾತ ಈ ದುಷ್ಕೃತ್ಯ ಎಸಗಿದ್ದು, ದೂರಿನ ಆಧಾರದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ: ಕೆಂಚನೂರು ಗ್ರಾಮದ ಕಂಬಳಗದ್ದೆ ಎಂಬಲ್ಲಿಯ ಅಕ್ಕಪಕ್ಕದ ಮನೆಯ ನಾಲ್ಕು ಹಾಗೂ ಐದನೇ ತರಗತಿಗೆ ಸೇರಿರುವ ಮಕ್ಕಳಿಬ್ಬರು ಮನೆಯಲ್ಲಿ ಆಟವಾಡುತ್ತಿದ್ದಾಗ, ಕದ್ರಿಗುಡ್ಡೆಯ ತಿಮ್ಮ ಎಂಬಾತ ಅಲ್ಲಿಗೆ ಬಂದು ಮಕ್ಕಳಿಗೆ ಸಿನೆಮಾ ತೋರಿಸುವುದಾಗಿ ಆಮಿಷವೊಡ್ಡಿ ಮನೆಗೆ ಕರೆದೊದಿದ್ದಾನೆ. ಅಲ್ಲಿ ಸಿನೆಮಾ ತೋರಿಸುವ ಬದಲು ತನ್ನ ಮೊಬೈಲ್ ನಲ್ಲಿದ್ದ ಅಶ್ಲೀಲ ಚಿತ್ರಗಳನ್ನು ತೋರಿಸಿ, ಮಕ್ಕಳಿಬ್ಬರಿಗೂ ಹಾಗೆಯೇ ಮಾಡುವಂತೆ ಬಲವಂತ ಮಾಡಿದ್ದಾನೆ. ಈತನ ದುಷ್ಕೃತ್ಯದಿಂದ ಮಕ್ಕಳು ದೈಹಿಕವಾಗಿ ಬಳಲಿದ್ದರು. ಸಂಜೆಯ ವೇಳೆಗೆ ಮನೆಗೆ ಬಂದ ತಾಯಿಯ ಮಕ್ಕಳ ಸ್ಥಿತಿಯನ್ನು ನೋಡಿ ಪ್ರಶ್ನಿಸಿದಾಗ, ಮಕ್ಕಳು ನಡೆದ ವಿಚಾರವನ್ನು ವಿವರಿಸಿದ್ದಾರೆ. ತಕ್ಷಣ ಸ್ಥಳೀಯರ ಮೂಲಕ ಪೊಲೀಸರಿಗೆ ದೂರು ನೀಡಿದ್ದರು. ದೂರಿನನ್ವಯ ಆರೋಪಿ ತಿಮ್ಮನನ್ನು ಬಂಧಿಸಿ ಆತನ ಬಳಿ ಇದ್ದ ಮೊಬೈಲನ್ನು ವಶಪಡಿಸಿಕೊಂಡಿದ್ದಾರೆ.…

Read More

ಕುಂದಾಪುರ: ಸಮುದ್ರದ ಆಳದಲ್ಲಿ ಈಜಲು ತರಬೇತಿಗೆ ಬಂದ ಹೈದರಾಬಾದ್ ಮೂಲದ ಎಂಜಿನಿಯರ್ ಯುವತಿಗೆ ತರಬೇತಿ ನೀಡುತ್ತಿರುವಾಗಲೇ ಕಿರುಕುಳ ನೀಡಿದ ಪ್ರಕರಣ ಸಾಮಾಜಿಕ ತಾಣದ ಮೂಲಕ ಬೆಳಕಿಗೆ ಬಂದಿದ್ದು, ಪ್ರಕರಣ ಗಂಭೀರತೆ ಅರಿತ ಜಿಲ್ಲಾ ಪೊಲೀಸ್ ಇಲಾಖೆ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಚಾರ್ಚ್ ಶೀಟ್ ಸಲ್ಲಿಸಿದ ಘಟನೆ ಇತ್ತಿಚಿಗೆ ವರದಿಯಾಗಿದೆ. ಏನಿದು ಪ್ರಕರಣ: ಮುರ್ಡೇಶ್ವರದಲ್ಲಿ ಕಾರ್ಯಾಚರಿಸುತ್ತಿರುವ ಡ್ರಿಮ್ಝ್ ಸ್ಕೂಬಾ ಡ್ರೈವಿಂಗ್ ಸಂಸ್ಥೆಯಲ್ಲಿ ಮೂಲಕ ಆಳ ಸಮುದ್ರದ ಈಜು ತರಬೇತಿಗಾಗಿ ಕುಂದಾಪುರ ತಾಲೂಕಿನ ಶಿರೂರಿಗೆ ತನ್ನ ಸಹೋದ್ಯೋಗಿಗಳೊಂದಿಗೆ 2015ರ ಜನವರಿ 26ರಂದು ಆಗಮಿಸಿದ್ದ ಹೈದರಬಾದ್ ಮೂಲದ, ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಐಟಿ ಎಂಜಿನೀಯರ್ ಆಗಿರುವ ಯುವತಿಗೆ ತರಬೇತಿ ನೀಡಲು, ಡ್ರಿಮ್ಝ್ ಸ್ಕೂಬಾ ಡ್ರೈವಿಂಗ್ ಸಂಸ್ಥೆಯ ನಿರ್ದೇಶಕನಾಗಿರುವ ಉತ್ತರಖಾಂಡ ಮೂಲಕ ಧೀರೇಂದ್ರ ರಾವತ್ ಎಂಬುವವನು ಬಂದಿದ್ದ. ಸಮುದ್ರದ ಮಟ್ಟದಿಂದ 12ಮೀಟರ್ ಕೆಳಗೆ ಡೈವಿಂಗ್ ತರಬೇತಿ ನೀಡುತ್ತಿದ್ದ ವೇಳೆ ಯುವತಿಗೆ ಕಿರುಕುಳ ನೀಡಿದ ಬಗ್ಗೆ ಸ್ವತಃ ಯುವತಿ ಬೈಂದೂರು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಅದರಂತೆ ಆರೋಪಿಯ…

Read More

ಉಡುಪಿ: ವಿಧಿಯಾಟವೆಂಬುದು ಎಂಥಹ ಕ್ರೂರವಾದುದು ಎಂಬುದಕ್ಕೆ ಈ ಯುವಕನೇ ಸಾಕ್ಷಿ. ಛಲದಿಂದ ಬದುಕು ಕಟ್ಟಿಕೊಳ್ಳಬೇಕೆಂಬುದು ಹೊರಟ ಯುವಕ ಈಗ ಹಾಸಿಗೆಯಿಂದಾಚೆ ಏಳಲಾರದೆ ಪರಿತಪಿಸುತ್ತಿರುವ ರೀತಿ ಮನಕಲಕುವಂತದ್ದು. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಂಗ್ಲೆಗುಡ್ಡೆಯ ನಿವಾಸಿ ಕೃಷ್ಣಯ್ಯ ಶೆಟ್ಟಿ ಮತ್ತು ಪ್ರೇಮಾ ಎಂಬುವವರ ಎರಡನೇ ಮಗನಾದ ನಾಗರಾಜ ಶೆಟ್ಟಿ (26) ಕಳೆದ 10 ವರ್ಷಗಳಿಂದ ಹಾಸಿಗೆಯಿಂದ ಎಳಲಾರದೇ ತನ್ನೆಲ್ಲಾ ಬೇಕು-ಬೇಡಗಳಿಗೆ ಮತ್ತೊಬ್ಬರನ್ನು ಅವಲಂಬಿಸಬೇಕಾದ ಸ್ಥಿತಿಯಲ್ಲಿ ಮಲಗಿದ್ದಾರೆ. ನಾಗರಾಜ ಅವರ ಮನೆಯಲ್ಲಿ ತೀರಾ ಬಡತನವಾದ್ದರಿಂದ ವಿದ್ಯಾಭ್ಯಾಸವನ್ನು ಪಿಯುಸಿಗೆ ಮೊಟಕುಗೊಳಿಸಿದ ಖಾಸಗಿ ವಿದ್ಯುತ್ ಗುತ್ತಿಗೆದಾರರಲ್ಲಿ ಬಳಿ ವಿದ್ಯುತ್ ಕಂಬ ಹಾಕುವ ಹಾಗೂ ತಂತಿ ಎಳೆಯುವ ಕೆಲಸಕ್ಕೆ ಸೇರಿದರು. 2005ರಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಕಂಬದಿಂದ ಆಯತಪ್ಪಿ ಕೆಳಕ್ಕೆ ಬಿದ್ದಿದ್ದರಿಂದ ಅವರ ಬೆನ್ನುಮೂಳೆ ಮುರಿತಕ್ಕೊಳಗಾಗಿತ್ತಲ್ಲದೇ ಮೆದುಳು ಬಳ್ಳಿಯು ಜಖಂಗೊಂಡಿತ್ತು. ಇದರಿಂದ ಸೊಂಟದ ಕೆಳಭಾಗ ನಿಶ್ಚಲವಾಗಿತ್ತು. ಸ್ವಂತ ದುಡಿಮೆಯಲ್ಲಿ ಓದು ಮುಂದುವರಿಸಬೇಕು, ಮುಂದೆ ಒಳ್ಳೆಯ ಉದ್ಯೋಗ ಗಿಟ್ಟಿಸಿಕೊಳ್ಳಬೇಕು ಎಂದು ಹೊರಟ್ಟಿದ್ದ ಯುವಕ ಬದುಕು ಹಾಸಿಗೆಗೆ ಸೀಮಿತವಾಯಿತು. ಮಣಿಪಾಲದ ಕೆಎಂಸಿಯಲ್ಲಿ…

Read More

ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಭಂಡಾರ್‌ಕಾರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ ಕೆ. ಕಾರ್ತಿಕೇಯ ಮಧ್ಯಸ್ಥ ಆಯ್ಕೆಯಾಗಿದ್ದು, ಗೌರವಾಧ್ಯಕ್ಷರಾಗಿ ಡಾ. ಎನ್. ಪಿ. ನಾರಾಯಣ ಶೆಟ್ಟಿ, ಕಾರ್ಯದರ್ಶಿಯಾಗಿ ರಂಜಿತ್ ಕುಮಾರ್ ಶೆಟ್ಟಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಕೃಷ್ಣಾನಂದ ಚಾತ್ರ, ಡಾ.ಸುಧಾಕರ ನಂಬಿಯಾರ್, ಬುದ್ದರಾಜ ಶೆಟ್ಟಿ, ಸಂದೀಪ್ ಎ. ಪೂಜಾರಿ, ಖಜಾಂಚಿಯಾಗಿ ಪ್ರೊ ಕೆ. ಶಾಂತಾರಾಮ್, ಜೊತೆ ಕಾರ್ಯದರ್ಶಿಯಾಗಿ ಅರ್ಚನ, ಮೈತ್ರಿ, ಜಯಮಾಲ, ನಿರ್ದೇಶಕರಾಗಿ ಸಚಿನ್ ನಕ್ಕತ್ತಾಯ, ಚಂದ್ರಕಾಂತ್ (ಚನ್ನ), ರಾಜೇಂದ್ರ, ಪ್ರವೀಣ್ ಕುಮಾರ್ ಟಿ., ಸುರೇಶ ಹಂಗಳೂರು, ದೀಪಕ್ ಕುಮಾರ್ ನಾವುಂದ, ರಾಘವೇಂದ್ರ ಭಟ್, ಸತೀಶ್ ದೇವಾಡಿಗ, ಸಲಹಾ ಸಮಿತಿ ಸದಸ್ಯರಾಗಿ ರಾಜೀವ ಕೋಟ್ಯಾನ್, ಶಶಿಧರ ಶೆಟ್ಟಿ ಮಡಾಮಕ್ಕಿ, ಪ್ರೊ ಅರುಣಾಚಲ ಮೈಯ್ಯ, ನವೀನ್ ಕುಮಾರ್ ಶೆಟ್ಟಿ ಆಯ್ಕೆಗೊಂಡರು. ಇತ್ತೀಚೆಗೆ ನಡೆದ ಸಮಾನ್ಯ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

Read More

ಕುಂದಾಪುರ: ತಾಲೂಕಿನ ಕಂಡ್ಲೂರಿನಲ್ಲಿ ತನ್ನ ಮನೆಯ ಬಾವಿ ಕಟ್ಟೆಯ ಆವರಣ ಮೇಲೆ ಮಗುವನ್ನು ಕುಳ್ಳಿರಿಸಿಕೊಂಡು ಉಟ ಮಾಡಿಸುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಗು ಮೃತಪಟ್ಟ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಮುದ್ದು ಕಂದಮ್ಮ ಶೆಹರಾಝ್(11 ತಿಂಗಳು) ಮೃತ ದುರ್ದೈವಿ ಘಟನೆಯ ವಿವರ: ಕಡ್ಲೂರಿನ ರಾಮಮಂದಿರ ರಸ್ತೆಯ ದಾರು ಸ್ಸೂರೂರ್ ಸರ್ಫರಾಜ್ ಅವರ ಪತ್ನಿ ಹೀನಾ ಅವರು ಎಂದಿನಂತೆ ತನ್ನ ಮನೆಯ ಬಳಿ ಇರುವ ಬಾವಿ ಕಟ್ಟೆಯ ಮೇಲೆ ಮಗುವನ್ನು ಹಿಡಿದು ಕೂರಿಸಿಕೊಂಡು ಊಟ ಮಾಡಿಸುತ್ತಿದ್ದರು. ಊಟ ಮಾಡುತ್ತಿದ್ದ ಮಗು ಕೊಸರಿಕೊಂಡಗ ಒಮ್ಮೆಲೆ ಆಯತಪ್ಪಿ ಬಾವಿಗೆ ಬಿದ್ದಿತ್ತು. ಮಗುವನ್ನು ರಕ್ಷಿಸಲು ತಾಯಿಯೂ ಬೊಬ್ಬೆ ಹಾಕುತ್ತಾ ತಕ್ಷಣ ಬಾವಿಗೆ ಹಾರಿದ್ದಳು. ತಾಯಿಯ ಬೊಬ್ಬೆ ಕೇಳಿದ ನೆರೆಹೊರೆಯವರು ಅಲ್ಲಿಗೆ ಧಾವಿಸಿ ಬಂದು ತಾಯಿ ಮಗುವನ್ನು ರಕ್ಷಿಸಲು ಬಾವಿಗಿಳಿದರಾದರೂ ಅದಾಗಲೇ ಮಗುವಿನ ಪ್ರಾಣಪಕ್ಷಿ ಹಾರಿಹೋಗಿತ್ತು. ತಾಯಿ ಜೀವನ್ಮರಣದ ಮಧ್ಯೆ ಹೋರಾಟುತ್ತಿದ್ದಳು. ತಕ್ಷಣ ತಾಯಿ ಮಗುವನ್ನು ಕುಂದಾಪುರದ ಆಸ್ಪತ್ರೆಗೆ ಸಾಗಿಸಿದರಾದರೂ ವೈದ್ಯರು ಮಗು ಮೃತ ಪಟ್ಟಿರುವುದನ್ನು ದೃಢಪಡಿಸಿದರು.  ದುಬೈನಲ್ಲಿ…

Read More

ಬೈಂದೂರು: ಇಲ್ಲಿನ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ಶ್ರೀ ಮನ್ಮಹಾ ರಥೋತ್ಸವಕ್ಕೆ ಎಪ್ರಿಲ್ 24ರಂದು ಜರುಗಲಿದ್ದು, ಹಬ್ಬದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಇಡಿ ನಗರವೇ ಸಜ್ಜಾಗಿದೆ. ಚಾರಿತ್ರಿಕ ಹಿನ್ನೆಲೆಯುಳ್ಳ ಬೈಂದೂರು ರಥೋತ್ಸವದಲ್ಲಿ ಊರ ಪರವೂರ ಸಾವಿರಾರು ಭಕ್ತಸಮೂಹ ಪಾಲ್ಗೊಂಡು ಪುನೀತರಾಗುತ್ತಾರೆ. ಕಲಾವೈಭವಗಳಿಂದ ಕಂಗೊಳಿಸುವ ದೇವಾಲಯಕ್ಕೆ ವಾರ್ಷಿಕ ರಥೋತ್ಸವ ಇನ್ನಷ್ಟು ಮೆರಗನ್ನು ನೀಡುತ್ತದೆ. ರಥಕ್ಕೆ ಗರ್ನಪಟ್ಟೆ ಕಟ್ಟಿದ ಹನ್ನೊಂದು ದಿನಗಳಿಗೆ ರಥೋತ್ಸವ ನಡೆಯುವುದೆಂಬ ಸೂಚನೆ ದೊರೆಯುತ್ತದೆ. ಒಟ್ಟು ಏಳು ದಿನಗಳ ಕಾಲ ನಡೆಯುವ ಉತ್ಸವವು ಧಾರ್ಮಿಕ ಕಾರ್ಯಗಳಿಂದ ಆರಂಭಗೊಳ್ಳುತ್ತದೆ. ಈ ಮಧ್ಯೆ ನಾಕಟ್ಟೆ ಉತ್ಸವ, ಪಡುವರಿ ಕಟ್ಟೆ ಉತ್ಸವ, ಬಂಕೇಶ್ವರ ಕಟ್ಟೆ ಉತ್ಸವ ನಡೆದ ಬಳಿಕ ರಥೋತ್ಸವ, ಅವಭೃಥೋತ್ಸವ ಕೊನೆಯಲ್ಲಿ ನಗರೋತ್ಸವ ನಡೆಯುತ್ತದೆ. ರಥೋತ್ಸವದ ಪೂರ್ವದಲ್ಲಿ ಮುಸ್ಲಿಂ ಭಾಂದವರನ್ನು ಆಹ್ವಾನಿಸುವ, ರಥೋತ್ಸವದ ಆರಂಭದಲ್ಲಿ ಬೈಂದೂರಿನ ಪೊಲೀಸ್ ಠಾಣಾಧಿಕಾರಿಯನ್ನು ಕರೆತಂದು ಚಾಲನೆ ದೊರಕಿಸುವ ಸಂಪ್ರದಾಯ ಇಂದಿಗೂ ರೂಢಿಯಲ್ಲಿದೆ. ನಗರೋತ್ಸವದಲ್ಲಿ ಜಾತಿ ಮತ ಭೇದವಿಲ್ಲದೇ ಎಲ್ಲಾ ಧರ್ಮಿಯರೂ ಪಾಲ್ಗೊಂಡು ಸಂಭ್ರಮಿಸುತ್ತಾರೆ. ರಥೋತ್ಸವದ ಸಮಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು…

Read More

ಕುಂದಾಪುರ: ಕಳೆದ ವಾರ ಗೋಪಾಡಿಯಲ್ಲಿ ಗರ್ಭಿಣಿಯನ್ನು ಮಹಿಳೆಯನ್ನು ಅತ್ಯಾಚಾರಗೈದು ಕೊಲೆ ನಡೆಸಿರುವ ಪ್ರಕರಣವನ್ನು ಖಂಡಿಸಿ ಹಾಗೂ ಹತ್ಯೆ ಗೀಡಾದ ಮಹಿಳೆಯ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕುಂದಾಪುರ ತಾಲೂಕಿನ ಮಹಿಳಾ ಮಿತ್ರರು ಹಾಗೂ ಮಕ್ಕಳ ಮಿತ್ರರು, ಅಂಗನವಾಡಿ ಕಾರ್ಯಕರ್ತರು, ಮಹಿಳಾ ಸಂಘಟನೆ ಸಂಘಟನೆಯಿಂದ ಪ್ರತಿಭಟನೆ ನಡೆಯಿತು. ಕುಂದಾಪುರದ ಶಾಸ್ತ್ರೀ ವೃತ್ತದಿಂದ ಕಾಲ್ನಡಿಗೆಯಲ್ಲಿ ಮೆರವಣಿಗೆ ಮೂಲಕ ಕುಂದಾಪುರ ಮಿನಿ ವಿಧಾನಸೌಧಕ್ಕೆ ತೆರಳಿದ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿ ಚಾರುಲತಾ ಸೋಮಲ್‌ ಅವರಿಗೆ ಬಳಿಕ ಪೊಲೀಸ್‌ ವೃತ್ತ ನಿರೀಕ್ಷಕ ಪಿ.ಎಂ. ದಿವಾಕರ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ, ಮಕ್ಕಳ ಮಿತ್ರ ರವೀಂದ್ರ ದೊಡ್ಮನೆ ಕರಾವಳಿಯಲ್ಲಿ ಹೆಚ್ಚುತ್ತಿರುವ ಮಹಿಳೆಯ ಹಾಗೂ ಮಕ್ಕಳ ಮೇಲಿನ ದೌರ್ಜನ್ಯದ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಕರಾವಳಿಯ ಹಲವಾರು ಕಡೆ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ, ದಿ ಕನ್ಸ್‌ರ್ರ್ಡ್ ಫಾರ್‌…

Read More

ಬೈಂದೂರು: ಈ ನೆಲದ ಸನಾತನ ಧರ್ಮದ ಅಂದಿನ ಕಂದಾಚಾರಗಳ ಬದಲಿಗೆ ಸದಾಚಾರ ಮತ್ತು ಸಾತ್ವಿಕತೆಗೆ ಒತ್ತುಕೊಟ್ಟು ಜನಸಾಮಾನ್ಯರಿಗೆ ಭಕ್ತಿ ಪ್ರಧಾನವಾದ ಆರಾಧನೆಯ ಮಾರ್ಗವನ್ನು ತೋರಿಸಿದವರು ಆದಿಶಂಕರಾಚಾರ್ಯರು. ಸಂಸ್ಕೃತದಲ್ಲಿ ಸುಲಲಿತ ಕಾವ್ಯ ಮನೋ ಭೂಮಿಕೆಯಿಂದ ಅವರು ರಚಿಸಿದ ಸ್ತೋತ್ರಗಳು ಭಾವಪೂರ್ಣವಾಗಿವೆ ಎಂದು ವೇ|ಮೂ|ಸುಬ್ರಹ್ಮಣ್ಯ ಭಟ್‌ ಬಾಡ ಅವರು ಹೇಳಿದರು. ಅವರು ಶಂಕರ ತತ್ವ ಪ್ರಸಾರ ಸಮಿತಿ ಇವರ ಆಶ್ರಯದಲ್ಲಿ ಬೈಂದೂರು ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆದ ಶಂಕರ ಜಯಂತಿಯ ಸರಣಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಉಪನ್ಯಾಸ ನೀಡುತ್ತಾ ಮಾತನಾಡಿದರು. ಶ್ರೀ ಭಗವದ್ಗೀತಾ ಜಯಂತಿ ಆಚರಣೆಯ ಸಮಿತಿ ಅಧ್ಯಕ್ಷ ರಾಮಕೃಷ್ಣ ಬಿಜೂರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಬೈಂದೂರು ಪರಿಸರದಲ್ಲಿ ಸ್ವರ್ಣವಲ್ಲಿ ಮಠದ ಗೀತಾ ಜಯಂತಿ ಮತ್ತು ಶ್ರೀ ಶೃಂಗೇರಿ ಮಠದ ಶಂಕರ ತತ್ವ ಪ್ರಸರಣ ಕಾರ್ಯಕ್ರಮವು ಆಸ್ತಿಕರಲ್ಲಿ ಧಾರ್ಮಿಕ ಪ್ರಜ್ಞೆ ಮತ್ತು ಜೀವನ ಮೌಲ್ಯಗಳನ್ನು ವೃದ್ಧಿಸುವಲ್ಲಿ ಸಹಕಾರಿಯಾಗಲಿದೆ ಎಂದರು. ಶಂಕರ ತತ್ವ ಪ್ರಸರಣಾ ಸಮಿತಿಯ ಸಂಚಾಲಕ ಉಪ್ಪುಂದ ಚಂದ್ರಶೇಖರ ಹೊಳ್ಳರು…

Read More

ಗಂಗೊಳ್ಳಿ: ಅವಕಾಶಗಳು ಒದಗಿಬಂದಾಗ ಕೈಚೆಲ್ಲಿ ಕುಳಿತುಕೊಂಡಲ್ಲಿ ಉಜ್ವಲ ಸಾಧನೆ ಮತ್ತು ಸುಪ್ತ ಪ್ರತಿಭೆ ಹೊರಹೊಮ್ಮುವ ಮಾರ್ಗವೇ ತಪ್ಪಿಹೋಗುತ್ತದೆ. ಅವಕಾಶಗಳು ದೊಡ್ಡದಿರಲಿ, ಚಿಕ್ಕದಿರಲಿ ಅದನ್ನು ಬಾಚಿಕೊಂಡು ಉತ್ತಮವಾಗಿ ಬಳಸಿಕೊಂಡಾಗ ಮಾತ್ರ ಶ್ರೇಷ್ಠ ಕಾರ್ಯಗಳನ್ನು ರೂಪಿಸಲು ಸಾಧ್ಯ ಎಂದು ಸಾಮಾಜಿಕ ಕಾರ್ಯಕರ್ತ ಮೋಹನಚಂದ್ರ ಕಾಳಾವರ ಅವರು ಹೇಳಿದರು. ಬಸವ ಜಯಂತಿಯ ಅಂಗವಾಗಿ ಮೇಲ್‌ಗಂಗೊಳ್ಳಿ ಬಾವಿಕಟ್ಟೆಯ ಶ್ರೀ ಬಸವೇಶ್ವರ ಸಮಾಜ ಮಂದಿರ ಹಾಗೂ ಶ್ರೀ ಬಸವೇಶ್ವರ ಬಾಲಕರ ಭಜನಾ ತಂಡ ಇವರ ವತಿಯಿಂದ ಆಯೋಜಿಸಲಾದ ಬಸವ ಜಯಂತ್ಯುತ್ಸವ ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿಣ್ಣರ ಭಜನಾ ಸ್ಪರ್ಧೆ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅವರು 2012ನೇ ಸಾಲಿನ ರಾಜೇಶ್ ಶಿಬಾಜೆ ಗ್ರಾಮೀಣ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ ಅವರನ್ನು ಸಮ್ಮಾನಿಸಿ ಮಾತನಾಡಿದರು. ಮುಖ್ಯ ಅತಿಥಿ ಭಜನಾ ಸ್ಪರ್ಧೆ ತೀರ್ಪುಗಾರರಾದ ಬಿ. ಪ್ರಕಾಶ ಶೆಣೈ, ಸಮಾಜ ಮಂದಿರದ ಅಧ್ಯಕ್ಷ ಮಣಿಕಂಠದಾಸ್, ಗುಲ್ವಾಡಿ ವೀರಾಂಜನೇಯ ಭಜನಾ ಮಂದಿರದ ಕಾರ್ಯದರ್ಶಿ ಜಯಕರ ಪೂಜಾರಿ, ಈಶ್ವರ ಜಿ.,…

Read More