ಕುಂದಾಪುರ: ಇಲ್ಲಿನ ನೃತ್ಯ ವಸಂತ ನಾಟ್ಯಾಲಯ ವತಿಯಿಂದ ದಶಾರ್ಪಣಂ ರಾಜ್ಯಮಟ್ಟದ ಭರತನಾಟ್ಯ ಸ್ಪರ್ಧೆ ನವಂಬರ್ ೮ರಂದು ಬೆಳಿಗ್ಗೆ ೯ಕ್ಕೆ ಹಂಗಳೂರಿನ ಅನಂತಪದ್ಮನಾಭ ಸಭಾಗೃಹದಲ್ಲಿ ನಡೆಯಲಿದೆ. ಭರತನಾಟ್ಯ ಅತೀ ಕಿರಿಯ ವಿಭಾಗ, ಕಿರಿಯ ವಿಭಾಗ ಹಿರಿಯ ವಿಭಾಗ ಎಂಬ ಮೂರು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ನೋಂದಣಿಗೆ ನವಂಬರ್ ೪ ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 9845497206, 9448487789ಗೆ ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Author: ಸುನಿಲ್ ಹೆಚ್. ಜಿ. ಬೈಂದೂರು
ಗಂಗೊಳ್ಳಿ: ಕಳೆದ ಕೆಲವು ದಿನಗಳಿಂದ ಗಂಗೊಳ್ಳಿ-ಕುಂದಾಪುರ ನಡುವೆ ಸಂಚರಿಸುತ್ತಿರುವ ಎರಡು ಕೆಎಸ್ಆರ್ಟಿಸಿ ಬಸ್ಗಳ ಪೈಕಿ ಒಂದು ಬಸ್ನ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದ್ದು, ಇದೇ ರೀತಿ ಮುಂದುವರಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಗಂಗೊಳ್ಳಿ ನಾಗರಿಕ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ. ಕಳೆದ ಹಲವು ದಶಕಗಳ ಹೋರಾಟದ ಫಲವಾಗಿ ಮಂಜೂರಾಗಿರುವ ಎರಡು ಕೆಎಸ್ಆರ್ಟಿಸಿ ಬಸ್ ಸಂಚಾರ ಗಂಗೊಳ್ಳಿ ಹಾಗೂ ಸುತ್ತಮುತ್ತಲಿನ ಜನರಿಗೆ ಹೆಚ್ಚು ಅನುಕೂಲಕರವಾಗಿದೆ. ಆದರೆ ಇತ್ತೀಚಿನ ಕೆಲವು ದಿನಗಳಿಂದ ಕುಂದಾಪುರ ಡಿಪೋದ ಅಧಿಕಾರಿಗಳು ಕುಂಟು ನೆಪವೊಡ್ಡಿ ಬಸ್ ಸಂಚಾರವನ್ನು ಸ್ಥಗಿತಗೊಳಿಸುತ್ತಿದ್ದಾರೆ. ಕಳೆದ ಸುಮಾರು ಎರಡು ತಿಂಗಳಿನಿಂದ ಪ್ರತಿ ಆದಿತ್ಯವಾರ ಒಂದು ಬಸ್ ಮಾತ್ರ ಸಂಚರಿಸುತ್ತಿದೆ. ಹೀಗಾಗಿ ನಾಗರಿಕರು ಮತ್ತೊಮ್ಮೆ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ ಎಂದು ನಾಗರಿಕರ ಹೋರಾಟ ಸಮಿತಿ ತಿಳಿಸಿದೆ. ಅನೇಕ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಬಸ್ಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಗಂಗೊಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮದ ಜನರ ಅನುಕೂಲಕ್ಕಾಗಿ ಸಂಚರಿಸುತ್ತಿರುವ ಸರಕಾರಿ ಬಸ್ಗಳ ಸಂಚಾರವನ್ನು ಮೊಟಕುಗೊಳಿಸಿ ಸಂಚಾರವನ್ನೇ ರದ್ದು ಮಾಡುವ ಹುನ್ನಾರ ನಡೆಯುತ್ತಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಾಲೂಕಿನ ಬೀಜಾಡಿ ಬೈಪಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ-66 ಇನೋವಾ ಕಾರಿಗೆ ಇನ್ಸುಲೇಟರ್ ಲಾರಿ ಡಿಕ್ಕಿಯಾದ ಪರಿಣಾಮ ಇನೋವಾದಲ್ಲಿದ್ದ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ಸುಮಾರಿಗೆ ನಡೆದಿದೆ. ಕ್ಲಬ್ ಮಹೇಂದ್ರ ಸಂಸ್ಥೆಯ ಉದ್ಯೋಗಿ ಬಾಲಕೃಷ್ಣ (26) ಮೃತ ದುರ್ದೈವಿ. ಘಟನೆಯ ವಿವರ: ಕಾರವಾರ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮೀನು ಸಾಗಾಟದ ಇನ್ಸುಲೇಟರ್ ಲಾರಿಯೊಂದು ಚಾಲಕನ ಅಜಾಗರೂಕತೆಯಿಂದ ಬೀಜಾಡಿ ಬೈಪಾಸ್ ಬಳಿಯ ಡಿವೈಡರ್ ಡಿಕ್ಕಿ ಹೊಡೆದು ಪಕ್ಕದ ರಸ್ತೆಯಲ್ಲಿ ಕುಂದಾಪುರ ಕಡೆಗೆ ತೆರಳುತ್ತಿದ್ದ ಇನೋವಾ ಕಾರಿಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿಯಾದ ರಭಸಕ್ಕೆ ಇನೋವಾ ಕಾರು ಹಾಗೂ ಲಾರಿ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಇನೋವಾದಲ್ಲಿದ್ದ ಬಾಲಕೃಷ್ಣ ಸ್ಥಳದಲ್ಲಿಯೇ ಮೃತಪಟ್ಟರೇ, ಮಣಿಕಂಠ ಹಾಗೂ ಅರುಣ್ ಎಂಬುವವರಿಗೆ ಗಾಯಗಳಾಗಿದೆ. (ಕುಂದಾಪ್ರ ಡಾಟ್ ಕಾಂ ಸುದ್ದಿ) ಕುಂದಾಪುರದಲ್ಲಿ ಕಂಪೆನಿಯ ಮೀಟಿಂಗ್ ಇದ್ದ ಕಾರಣ ಆರು ಮಂದಿ ಬೆಂಗಳೂರಿನಿಂದ ಆಗಮಿಸಿದ್ದರು. ಮೀಟಿಂಗ್ ಬಳಿಕ ಮೂವರು ಆನೆಗುಡ್ಡೆ ದೇವಳಕ್ಕೆ…
ಕುಂದಾಪುರ: ಕಲ್ಮಶರಹಿತ ಶುದ್ಧ ಮನಸ್ಸು, ಗುರುಹಿರಿಯರ ಆಶಿರ್ವಾದ ಹಾಗೂ ಸ್ಪಷ್ಟ ಗುರಿಯೊಂದಿಗೆ ಮುನ್ನಡೆದರೇ ಮಾತ್ರ ಬದುಕಿನಲ್ಲಿ ಸಾಧನೆಗೈಯಲು ಸಾಧ್ಯ ಎಂದು ಅಬುದಾಬಿಯ ಖ್ಯಾತ ಉದ್ಯಮಿ ಪದ್ಮಶ್ರೀ ಡಾ| ಬಿ. ಆರ್. ಶೆಟ್ಟಿ ಹೇಳಿದರು ಅವರು ಇಲ್ಲಿನ ಆರ್. ಎನ್. ಶೆಟ್ಟಿ ಕಲ್ಯಾಣ ಭವನದಲ್ಲಿ ಕೀರ್ತಿಶೇಷ ಶ್ರೀ ಯಡ್ತರೆ ಮಂಜಯ್ಯ ಶೆಟ್ಟಿ ಸ್ಮಾರಕ ಟ್ರಸ್ಟ್ ನ ಯಡ್ತರೆ ಮಂಜಯ್ಯ ಶೆಟ್ಟಿ ಜಯಂತಿ ಉತ್ಸವ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಯಡ್ತರೆ ಮಂಜಯ್ಯ ಶೆಟ್ಟಿ ಸ್ಮಾರಕ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಕಷ್ಟ-ಸುಖ ಎರಡನ್ನೂ ಅರಿತು ಜೀವನದಲ್ಲಿ ಮೇಲೆ ಬಂದರೆ ಅದಕ್ಕಿಂತ ದೊಡ್ಡ ಸಂತೋಷ ಮತ್ತೊಂದಿರುವುದಿಲ್ಲ. ಬದುಕಿನಲ್ಲಿ ಹಣವೇ ಮುಖ್ಯವಲ್ಲ. ನಿಷ್ಠೆಯಿಂದ ಕೆಲಸ ಮಾಡುವುದೂ ಅಷ್ಟೇ ಮುಖ್ಯ. ನೀವು ನಿಷ್ಠೆಯಿಂದಿದ್ದರೇ, ನಿಮ್ಮನ್ನನುಸರಿಸುವವರೂ ನಿಷ್ಠೆಯಿಂದ ಇರುತ್ತಾರೆ ಮತ್ತು ನೀವು ಎತ್ತರಕ್ಕೆ ಬೆಳೆಯುತ್ತೀರಿ ಎಂದವರು ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಜಿ ಶಾಸಕ ಎ.ಜಿ. ಕೊಡ್ಗಿ ಮಾತನಾಡಿ ಯಡ್ತರೆ ಮಂಜಯ್ಯ ಶೆಟ್ಟಿಯವರ ವ್ಯಕ್ತಿತ್ವದಲ್ಲಿ ರಾಜಕೀಯ ಕಾಣಲು ಸಾಧ್ಯವಿಲ್ಲ. ಅವರು ಬದುಕಿನುದ್ದಕ್ಕೂ…
ಕುಂದಾಪುರ: ಚಿಕ್ಕನ್ಸಾಲು ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ವಿಧಿವಿದಾನಗಳು ಅಚ್ಚುಕಟ್ಟಾಗಿ ನೆರವೇರಿತು. ಪ್ರತಿದಿನ ಭಜನೆ ವಿವಿಧ ಪೂಜೆ, ಅಲಂಕಾರ ಸೇವೆಗಳು ಪ್ರದಾನ ಅರ್ಚಕ ಗಣಪತಿ ಸುವರ್ಣ ಅವರ ಮಾರ್ಗದರ್ಶನದಲ್ಲಿ ವಿದ್ಯುಕ್ತವಾಗಿ ಜರುಗಿತು. ಈ ಸಂದರ್ಭದಲ್ಲಿ ನಡೆದ ಚಂಡಿಕಾ ಯಾಗದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡರು. ಉತ್ಸವ ಸಮಿತಿ ಅಧ್ಯಕ್ಷ ಸೀತರಾಮ ಹೇರಿಕುದ್ರು, ಗೌರವಾಧ್ಯಕ್ಷ ಕೆ. ಬಿ. ಪ್ರಕಾಶ್ ಮೊದಲಾದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಶಂಕರನಾರಾಯಣ: ಇಲ್ಲಿನ ವ್ಯಾಪ್ತಿಯ ಮಾವಿನಕೊಡ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕೊಲ್ಲೂರು ಶ್ರೀ ಮೂಕಾಂಬಿಕಾ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಎಸ್. ಅರುಣ್ಪ್ರಕಾಶ್ ಶೆಟ್ಟಿಯವರನ್ನು ಸ್ಥಳೀಯರು ಸನ್ಮಾನಿಸಿ ಗೌರವಿಸಿದರು.
ಕುಂದಾಪುರ: ರೋಟರ್ಯಾಕ್ಟ್ ಕ್ಲಬ್ ಕುಂದಾಪುರ ವೆಲ್ಫೇರ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ಇಂಜಿನಿಯರ್ ಕಿಶೋರ್ ಕೊಡಮಾಡಿದ ವೀಲ್ ಚೇರ್ನ್ನು ವೆಂಕಟರಮಣ ಆಚಾರ್ಯ ಅವರಿಗೆ ಹಾಗೂ ವಾಟರ್ ಪ್ಯೂರಿಫಯರ್ನ್ನು ಕೋಣಿಯ ಮಾನಸ ಜ್ಯೋತಿ ಸಂಸ್ಥೆಗೆ ಹಸ್ತಾಂತರಿಸಲಾಯಿತು. ಭಾರತೀಯ ಜೀವವಿಮಾ ಪ್ರತಿನಿಧಿ ಶಂಕರ ಐತಾಳ್, ರೋಟರ್ಯಾಕ್ಟ್ ಕ್ಲಬ್ ಕುಂದಾಪುರ ಪೂರ್ವಾಧ್ಯಕ್ಷರಾದ ಪ್ರವೀಣ ಕುಮಾರ್ ಟಿ, ಎಚ್. ಎಸ್. ಹತ್ವಾರ್, ಶ್ರೀಧರ ಸುವರ್ಣ, ಕಿಶೋರ್, ದಾಮೋದರ ಪೈ ಉಪಸ್ಥಿತರಿದ್ದರು.
ಕುಂದಾಪುರ: ವಂಡ್ಸೆ ಗ್ರಾಮದ ಹಳಂಡಿಯ ಪುರಾಣ ಪ್ರಸಿದ್ಧ ವನದುರ್ಗಾಪರಮೇಶ್ವರಿ(ಕಾನಮ್ಮ) ದೇವಸ್ಥಾನ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿದ್ದು, ಜೀರ್ಣೋದ್ಧಾರ ಪ್ರಕ್ರಿಯೆಯ ಅಂಗವಾಗಿ ಶಿಲಾ ಕೆತ್ತನೆಗೆ ಅ.22ರಂದು ಚಾಲನೆ ನೀಡಲಾಯಿತು. ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ವಂಡ್ಸೆ ತಿರುಮಲ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಿ.ಶ್ರೀಧರ ಶೆಟ್ಟಿ, ವನದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರರಾದ ಚಂದ್ರಶೇಖರ ಹೆಗ್ಡೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಿ.ಕೆ.ಶಿವರಾಮ ಶೆಟ್ಟಿ, ಕಾರ್ಯದರ್ಶಿ ಶಶಿಧರ ಶೆಟ್ಟಿ, ಕೋಶಾಧಿಕಾರಿ ಬೆಳ್ವೆ ಆನಂದ ಶೆಟ್ಟಿ, ಕುಂದಾಪುರ ಭೂ ಬ್ಯಾಂಕ್ ಅಧ್ಯಕ್ಷ ಎಸ್.ದಿನಕರ ಶೆಟ್ಟಿ, ಕಟ್ಟೆಮನೆ ರತ್ನಾಕರ ಶೆಟ್ಟಿ, ತೊಂಭತ್ತು ನಾರಾಯಣ ಶೆಟ್ಟಿ, ಬಿ.ಕರುಣಾಕರ ಶೆಟ್ಟಿ ಶಿರಾ, ವಂಡ್ಸೆ ಗ್ರಾ.ಪಂ.ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ನಿವೃತ್ತ ಶಿಕ್ಷಕ ಎನ್.ರತ್ನಾಕರ ಶೆಟ್ಟಿ, ತಿರುಮಲ ಲಕ್ಞ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ಗಣೇಶ ವಿ.ನಾಯ್ಕ್, ಗೋಪಾಲಕೃಷ್ಣ ಉಪಾದ್ಯ, ಹಾಲು ಉತ್ಪಾದಕರ ಸಹಕಾರಿಸಂಘದ ಅಧ್ಯಕ್ಷ ತ್ಯಾಂಪಣ್ಣ ಶೆಟ್ಟಿ, ಗ್ರಾ.ಪಂ.ಸದಸ್ಯ ಉದಯ ನಾಯ್ಕ್, ಸುರೇಂದ್ರ ಶೆಟ್ಟಿ, ಗುತ್ತಿಗೆದಾರರಾದ ಹರ್ಜಿ ಕರುಣಾಕರ ಶೆಟ್ಟಿ, ರುದ್ರಯ್ಯ ಆಚಾರ್ಯ…
ಕುಂದಾಪುರ: ದೇಶದಲ್ಲಿ 75ಕೋಟಿ ಸಂಖ್ಯೆಯಲ್ಲಿ ಯುವಕರು ಇದ್ದಾರೆ. ಈ ಯುವಕ ಪಡೆ ಅನೇಕ ಧಾರ್ಮಿಕ ಉತ್ಸವಗಳನ್ನು ಮಾಡುತ್ತಿದ್ದಾರೆ. ಧಾರ್ಮಿಕ ಉತ್ಸವಗಳು ಜಾತಿ, ಧರ್ಮ, ಪಂಗಡಗಳ ನಡುವೆ ಸಂಘರ್ಷವಾಗಬಾರದು. ಯುವ ಪಡೆ ಧರ್ಮಕ್ಕಾಗಿ ಜಗಳ ಮಾಡದೆ, ಅಭಿವೃದ್ಧಿಗಾಗಿ ಜಗಳವಾಡಬೇಕು ಎಂದು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಕಾರಿ ಅಣ್ಣಾಮಲೈ ಅವರು ಹೇಳಿದರು. ಅವರು ಕಂಡ್ಲೂರು ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ರಾತ್ರಿ ಜರುಗಿದ ಕಂಡ್ಲೂರು ಸಾರ್ವಜನಿಕ ಶ್ರೀ ಶಾರದಾ ಪೂಜಾ ಮಹೋತ್ಸವ ಸಮಿತಿಯ ಸುವರ್ಣ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕಂಡ್ಲೂರು ಪರಿಸರದಲ್ಲಿ ಸಮಾನ ಸಂಖ್ಯೆಯಲ್ಲಿ ಹಿಂದುಗಳು ಹಾಗೂ ಮುಸ್ಲಿಂ ಬಾಂಧವರು ಇದ್ದಾರೆ. ಇಲ್ಲಿ ಸಣ್ಣ ಪುಟ ಘಟನೆಗಳು ಹೋರತು ಪಡಿಸಿದ್ದರೆ, ಶ್ರೀ ಶಾರದೋತ್ಸವ ಸಮಿತಿಯವರು ಸೌರ್ಹಾದತೆಯಿಂದ ಉತ್ಸವವನ್ನು ಮಾಡಿದ್ದಾರೆ. ನವರಾತ್ರಿ ಮಹೋತ್ಸವವು ವಿಶೇಷವಾದ ದಿನವಾಗಿದೆ. ದೇವರು ದುಷ್ಠರನ್ನು ಸಂಹಾರ ಮಾಡಿ, ಧರ್ಮ ರಕ್ಷಿಸಿದ್ದಾರೆ. ಇದರ ಪ್ರತಿಕವಾದ ನವರಾತ್ರಿ ಮಹೋತ್ಸವವು ದೂರದ ಊರುಗಳಲ್ಲಿರುವರಿಗೆ, ಊರಿಗೆ ಬಂದು ಆತ್ಮೀಯತೆ ಹಾಗೂ ಸೌರ್ಹಾದತೆಯಿಂದ ಬೇರೆಯುವ ದಿನವಾಗಿದೆ. ಸೌರ್ಹದತೆಯಿಂದ…
ಗಂಗೊಳ್ಳಿ: ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಶ್ರೀ ಶಾರದಾ ಮಹೋತ್ಸವದ ೪೧ನೇ ವರ್ಷದ ಧಾರ್ಮಿಕ, ಸಾಂಸ್ಕೃತಿಕ ಸಭಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸವಿತಾ ಸಮಾಜದ ತ್ರಾಸಿ-ಗಂಗೊಳ್ಳಿ ವಲಯದ ಅಧ್ಯಕ್ಷ ಮಂಜುನಾಥ ಸಾಲಿಯಾನ್ ಮಾತನಾಡಿ, ಸೇವಾ ಸಂಘದ ಮುಖಾಂತರ ಗಂಗೊಳ್ಳಿಯಲ್ಲಿ ಎಲ್ಲಾ ಜಾತಿ ಧರ್ಮದವರು ಒಂದಾಗಿ ಶ್ರೀ ಶಾರದೋತ್ಸವವನ್ನು ಆಚರಿಸಿಕೊಂಡು ಬಂದಿರುವುದು ಶ್ಲಾಘನೀಯ. ನಿರಂತರ ೪೧ವರ್ಷ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಎಲ್ಲರನ್ನು ಒಂದುಗೂಡಿಸುವ ಸಮಿತಿಯ ಕಾರ್ಯ ಅಭಿನಂದನಾರ್ಹವಾದುದು ಎಂದರು. ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಗೌರವಾಧ್ಯಕ್ಷ, ಪುರೋಹಿತರಾದ ವೇದಮೂರ್ತಿ ಜಿ.ನಾರಾಯಣ ವಿಶ್ವನಾಥ ಆಚಾರ್ಯ ಮತ್ತು ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಆನಂದ ಬಿಲ್ಲವ ಶುಭ ಹಾರೈಸಿದರು. ಇದೇ ಸಂದರ್ಭ ದಸರಾ ಹಬ್ಬದ ಪ್ರಯುಕ್ತ ಮಹಿಳೆಯರು ಹಾಗೂ ಮಕ್ಕಳಿಗೆ ನಡೆದ ವಿವಿಧ ಸ್ಪರ್ಧೆಗಳ ವಿಜೇತರರಿಗೆ ಬಹುಮಾನ ವಿತರಿಸಲಾಯಿತು. ಪ್ರಧಾನ ಕಾರ್ಯದರ್ಶಿ ಶ್ರೀಧರ ಸಕ್ಲಾತಿ, ಕಾರ್ಯದರ್ಶಿ ಗೋಪಾಲ ಚಂದನ್, ಮಹಿಳಾ ಮಂಡಳಿಯ ರೇಣುಕಾ…
