ಮೂಡುಬಿದಿರೆ: ನುಡಿಸಿರಿ ಎಂದರೆ ಸಾಕು ಕಲೆ, ಸಾಹಿತ್ತಿಕ, ಸಾಂಸ್ಕೃತಿಕ ವಿಚಾರಗಳು ಕಣ್ಮುಂದೆ ಹಾದುಹೋಗುತ್ತವೆ. ಮೂರುದಿನಗಳ ಕಾರ್ಯಕ್ರಮದಲ್ಲಿ ಹತ್ತಾರು ವಿಚಾರಗಳು ಚರ್ಚೆಗೆ ಬರುವುದರೊಂದಿಗೆ ಆಯಾ ವರ್ಷದ ಪರಿಕಲ್ಪನೆಗೊಂದು ಸ್ಪಷ್ಟ ರೂಪು ನೀಡುವ ಪ್ರಯತ್ನ 12 ವರ್ಷಗಳಿಂದಲೂ ನಡೆದು ಬಂದಿದೆ. ಬೆಳೆಗ್ಗೆ 5:30ರ ಉದಯರಾಗದಿಂದ ಆರಂಭಗೊಳ್ಳುವ ಕಾರ್ಯಕ್ರಮ ಸರಣಿ ವಿಚಾರಗೋಷ್ಠಿ, ವಿಶೇಷೋಪನ್ಯಾಸ, ಕವಿಸಮಯ-ಕವಿನಮನ, ಸಂಸ್ಮರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಲಕ ಭರಪೂರ ಸಾಹಿತ್ತಿಕ ಸಾಂಸ್ಕೃತಿಕ ರಸದೌತಣವನ್ನು ನೀಡುತ್ತದೆ. ಏಕಕಾಲದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ರಸದೌತಣವನ್ನು ನೀಡಲು ಕೆ.ವಿ. ಸುಬ್ಬಣ್ಣ ಬಯಲು ರಂಗಮಂದಿರ, ಶ್ರೀಮತಿ ಜಯಲಕ್ಷ್ಮೀ ಆಳ್ವ ವೇದಿಕೆ, ಬಿ.ವಿ. ಕಾರಂತ ವೇದಿಕೆ, ಕೆ.ಎನ್. ಟೈಲರ್ ವೇದಿಕೆ, ಮಾ| ವಿಠಲ ಶೆಟ್ಟಿ ವೇದಿಕೆ-ಡಾ| ವಿ.ಎಸ್. ಆಚಾರ್ಯ ಸಭಾಭವನ, ಕು.ಶಿ. ಹರಿದಾಸ ಭಟ್ಟ ವೇದಿಕೆ ಸೇರಿ ಒಟ್ಟು 8 ವೇದಿಕೆಗಳು ತೆರೆದುಕೊಂದಿದೆ. ಈ ಭಾರಿಯ ಸಮ್ಮೇಳನದ ಮೂರು ದಿನಗಳ ಕಾಲ ಕೃಷಿಗೆ ಸಂಬಂಧಿಸಿದ 100ಕ್ಕೂ ಹೆಚ್ಚು ಮಳಿಗೆಗಳು, 250ಕ್ಕೂ ಹೆಚ್ಚು ಪುಸ್ತಕ ಮಳಿಗೆಗಳು, ವೈವಿಧ್ಯಮಯ ದೇಶೀ ಆಹಾರ ಖಾದ್ಯ ಮಳಿಗೆಗಳಿವೆ.…
Author: ಸುನಿಲ್ ಹೆಚ್. ಜಿ. ಬೈಂದೂರು
ಮೂಡುಬಿದಿರೆ: ಬೆಳಿಗ್ಗೆ 5:30ರ ಉದಯರಾಗದಿಂದ ಆರಂಭಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿ ರಾತ್ರಿ 11:30ಕ್ಕೆ ರಘು ದೀಕ್ಷಿತ್ ಅವರ ಸಮಕಾಲೀನ ಜನಪದ ಸಂಗೀತದ ಮೂಲಕ ಸಮಾಪನಗೊಂಡಿತು. ಡಾ| ವಿ. ಎಸ್. ಆಚಾರ್ಯ ಸಭಾಭವನದಲ್ಲಿ ಪಂಡಿತ್ ಅಂಬಯ್ಯನುಲಿ ಮತ್ತು ಬಳಗದಿಂದ ಉದಯರಾಗ, ಬ್ರಹ್ಮಾವರ ರಘುನಾಥ ಭಟ್ ಮತ್ತು ಬಳಗದಿಂದ ಲಘು ಶಾಸ್ತ್ರೀಯ ಸಂಗೀತ, ಮೈಸೂರು ಮೈತ್ರಿರಾವ್ ಅವರಿಂದ ಭರತನಾಟ್ಯ, ಸಿ. ಎಂ. ನರಸಿಂಹಮೂರ್ತಿ ಮತ್ತು ಬಳಗದಿಂದ ಜಾನಪದ ಝೇಂಕಾರ, ಶೋಭಾ ಶಶಿಕುಮಾರ್ ಬಳಗದ ಭರತನಾಟ್ಯ, ತಾಳಮದ್ದಳೆ, ನೃತ್ಯರೂಪಕಗಳು ಪ್ರದರ್ಶನಗೊಂಡರೇ, ರತ್ನಾಕರವರ್ಣಿ ವೇದಿಕೆಯಲ್ಲಿ ದಾಸರಪದಗಳು, ನೃತ್ಯ ವೈವಿಧ್ಯಗಳು ಜರುಗಿದವು, ಕೆ. ವಿ. ಸುಬ್ಬಣ್ಣ ಬಯಲು ರಂಗಮಂದಿರದಲ್ಲಿ ಜನಪದ ಗಾಯನ, ಸುಗಮ ಸಂಗೀತ ಜರುಗಿದರೇ, ಶ್ರೀಮತಿ ಜಯಲಕ್ಷ್ಮೀ ಆಳ್ವ ವೇದಿಕೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಗಾಯನ, ಮ್ಯಾಂಡೋಲಿನ್ ವಾದನ ಜರುಗಿತು, ಬಿ.ವಿ ಕಾರಂತ ವೇದಿಕೆಯಲ್ಲಿ ಸಾಹಿತಿ ಜಯಂತ ಕಾಯ್ಕಿಣಿ ರಚನೆಯ, ಹಲುಗಪ್ಪ ಕಟ್ಟೀಮನಿ ನಿರ್ದೇಶನದ ಜತೆಗಿರುವನು ಚಂದಿರ ನಾಟಕವು ಸಂಕಲ್ಪ ಮೈಸೂರು ಹಾಗೂ ಕಾರಾಗೃಹ…
ಮೂಡುಬಿದಿರೆ: ಇಲ್ಲಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಪ್ರಸಿದ್ಧ ಗಾಯಕ ಬೆಂಗಳೂರಿನ ರಘು ದೀಕ್ಷಿತ್ ಅವರಿಂದ ಸಮಕಾಲೀನ ಜನಪದ ಸಂಗೀತ ಗಾಯನ ಕಾರ್ಯಕ್ರಮ ಜರುಗಿತು. ವಿಶಾಲವಾದ ವೇದಿಕೆಯಲ್ಲಿ ನಿಂತ ರಘು ದೀಕ್ಷಿತ್ ಹಾಡುತ್ತಿದ್ದರೇ ನೆರೆದಿದ್ದ ಪ್ರೇಕ್ಷಕರು ಅವರ ಸಂಗೀತಕ್ಕೆ ಮನಸೋತು ಆಲಿಸುತ್ತಿದ್ದುದು ಕಂಡುಬಂತು.
ಕುಂದಾಪುರ: ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ನ.೨೮ ರಂದು ಕನಕದಾಸ ಜಯಂತಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಸುಧಾಕರ ವಕ್ವಾಡಿ ಕನಕದಾಸರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಂತರ ಅವರು ಮಾತನಾಡಿ, ಕನಕದಾಸರು ತಮ್ಮ ಕೀರ್ತನೆ ಮತ್ತು ಸಾಹಿತ್ಯದ ಮೂಲಕ ಜಾತಿ.ಮತ, ಮೇಲು- ಕೀಳು ಎಂಬ ತಾರತಮ್ಯವನ್ನು ಹೋಗಲಾಡಿಸಿ, ಕನ್ನಡ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ್ದಾರೆ ಎಂದರು. ಉಪನ್ಯಾಸಕರುಗಳಾದ ಮಂಜುನಾಥ.ಕೆ.ಎಸ್, ಗೀತಾ ಜೋಷಿ, ಹರೀಶ್ ಕಾಂಚನ್, ಗಿರಿಜಾ ಕೊಡೇರಿ, ಜೆಸ್ಸಿ ಡಿಸಿಲ್ವ, ಶ್ರೀಲತಾ.ಕೆ ಉಪಸ್ಥಿತರಿದ್ದರು.
ಕುಂದಾಪುರ: ಸಮೀಪದ ಮಾವಿನ ಕಟ್ಟೆ ಗ್ರಾಮದಲ್ಲಿ ಬೆಳ್ಳಂಬೆಳ್ಳಗೆ ಚಿರತೆಯೊಂದು ಗೋಚರಿಸಿ ಗ್ರಾಮಸ್ಥರು ಆತಂಕ್ಕೀಡಾಗಿರುವ ಘಟನೆ ಜರಗಿದೆ. ಕಳೆದ ಕೆಲವು ದಿನಗಳಿಂದಲೂ ಪರಿಸರ ಬೀದಿ ನಾಯಿಗಳು ವಿಕರವಾಗಿ ಅರಚುತ್ತಾ ಅತ್ತಿತ್ತ ಒಡಾಡುತ್ತಿದ್ದರೂ ಅದರ ಬಗ್ಗೆ ಹಚ್ಚೇನು ಗಮನ ಹರಿಸದಿದ್ದ ಗ್ರಾಮಸ್ಥರು ಇಂದು ಮಾತ್ರ ಚಿರತೆ ದರ್ಶನದಿಂದ ಬೆಚ್ಚಿ ಬಿದ್ದಿದ್ದಾರೆ. ಸ್ಥಳಿಯ ಮಸೀದಿಯ ಧರ್ಮಗುರುಗಳು ಇಂದು ಬೆಳಿಗ್ಗೆ ನಮಾಝ್ ನಿರ್ವಹಿಸಲು ಮಸೀದಿಯತ್ತ ತೆರಳುತ್ತಿದ್ದಾಗ, ರಸ್ತೆಯ ಪಕ್ಕದಲ್ಲಿ ನಾಯಿಗಳು ಗುಂಪಾಗಿ ಬೊಗಳುತ್ತಿರುವುದನ್ನು ಗಮನಿಸಿ ಅತ್ತ ಟಾರ್ಚಿನ ಬೆಳಕನ್ನು ಹಾಯಿಸಿದ್ದರು. ಟಾರ್ಚಿನ ಬೆಳಕಿನಲ್ಲಿ ಪೊದೆಯೊಂದರಲ್ಲಿ ಅವಿತು ಕುಳಿತು ಗುರುಗುಡುತ್ತಿದ್ದ ಆಳೆತ್ತರದ ಚಿರತೆಯ ದರ್ಶನ ವಾಗುತ್ತಲೇ ಬೆದರಿ ಹೋದ ಧರ್ಮಗುರುಗಳು ಅಲ್ಲಿಂದ ಲಗುಬಗೆಯಿಂದ ಮಸೀದಿಗೆ ತೆರಳಿ ಚಿರತೆ ಅವಿತು ಕೊಂಡಿರುವ ವಿಚಾರವನ್ನು ಹೇಳಿದ್ದರು. ಅದಾಗಲೇ ಹಲವರು ಒಟ್ಟು ಕೂಡಿ ಬಂದು ನೋಡಿದಾಗ ಚಿರತೆಯು ಪಕ್ಕದ ಹಾಡಿಯೊಳಗೆ ಒಡಿ ಹೋಗಿದ್ದು ಹಿಂಬಾಲಿಸಿದ ನಾಯಿಗಳು ಅಲ್ಲಿಯೂ ಆರ್ಭಟಿಸುತ್ತಿರುವ ದೃಶ್ಯ ಕಂಡು ಬಂದಿತ್ತೆನ್ನಲಾಗಿದೆ. ಚಿರತೆ ಗೋಚರವಾಗಿರುವ ವಿಚಾರ ಇದೀಗ ಗ್ರಾಮದೆಲ್ಲಡೆ ವ್ಯಾಪಿಸಿದ್ದು ಮಕ್ಕಳ…
ಮೂಡುಬಿದಿರೆ: ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ನೀಡುವುದಕ್ಕೂ ಮುನ್ನ ನಾಡಗೀತೆ, ರೈತಗೀತೆ, ಭಾವೈಕ್ಯ ಗೀತೆಗಳನ್ನು ಹಾಡುವಾಗ ನೆರೆದಿದ್ದ ವೇದಿಕೆಯಲ್ಲಿದ್ದ ಗಣ್ಯರು ಹಾಗೂ ಸಾವಿರಾರು ಪ್ರೇಕ್ಷಕರು ಕನ್ನಡ ನಾಡಿನ ಭಾವುಟ, ರೈತ ಧ್ವಜ ಹಾಗೂ ರಾಷ್ಟ್ರ ಧ್ವಜವನ್ನು ಬೀಸಿ ಗೌರವ ಸಲ್ಲಿಸಿದರು. ಪುತ್ತಿಗೆ ನುಡಿಸಿರಿ ಮೈದಾನದಲ್ಲಿ ತುಂಬಿದ್ದ ಪ್ರೇಕ್ಷಕರು ಕೈಯಲ್ಲಿದ್ದ ಧ್ವಜದ ವಿಹಂಗಮ ನೋಟ ವಿಶೇಷ ರಂಗು ನೀಡಿತ್ತು.
ಮೂಡಬಿದಿರೆ: ಆಳ್ವಾಸ್ ನುಡಿಸಿರಿ 2015ರ ವಿದ್ಯಾರ್ಥಿ ಸಿರಿ ಸಮ್ಮೇಳನದ ಸರ್ವಾಧ್ಯಕ್ಷೆ ಕುಮಾರಿ ಶಾಲಿಕಾ ಎಕ್ಕಾರು ಇವರನ್ನು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಸನ್ಮಾನಿಸಿದರು. ಈ ಸಂದರ್ಭ ವಿದ್ಯಾರ್ಥಿ ಸಿರಿಯ ಉದ್ಘಾಟಕರಾದ ಚಲನಚಿತ್ರ ನಿರ್ದೇಶಕ ಪಿ. ಶೇಷಾದ್ರಿ, ಹಿರಿಯ ವಿದ್ವಾಂಸರಾದ ಪ್ರೊ. ಹಂಪನಾ ಮತ್ತು ಕಮಲಾ ಹಂಪನಾ ಹಾಗೂ ‘ಆಳ್ವಾಸ್ ವಿದ್ಯಾರ್ಥಿ ಸಿರಿ’ ಪ್ರಶಸ್ತಿ ಪುರಸ್ಕøತ ಸಾಗರದ ಕಿನ್ನರ ಮೇಳದ ನಿರ್ದೇಶಕ ಕೆ.ಜಿ. ಕೃಷ್ಣಮೂರ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕøತ ಟಿ. ಎಸ್. ನಾಗರಾಜ ಶೆಟ್ಟಿ ತಿಪಟೂರು, ವಿದ್ಯಾರ್ಥಿ ಪ್ರತಿಭೆ ಗಗನ್ ಜಿ. ಗಾಂವ್ಕರ್ ಮೊದಲಾದವರು ಉಪಸ್ಥಿತರಿದ್ದರು.
ಮೂಡಬಿದಿರೆ: ಯಾವ ಭಾಷೆಯೂ ಮೇಲಲ್ಲ, ಯಾವ ಭಾಷೆಯೂ ಕೀಳಲ್ಲ ಆದರೆ ನಮ್ಮ ವ್ಯಕ್ತಿತ್ವ ವಿಕಸನಕ್ಕೆ ನಮ್ಮ ಮಾತೃಭಾಷೆಯೇ ಮೂಲ. ಯಾವುದೇ ವಿಚಾರವು ನಮ್ಮ ಹೃದಯವನ್ನು ತಟ್ಟಿ, ಮನಸ್ಸನ್ನು ಸೇರಿ, ಬುದ್ಧಿಯ ಮೂಲಕ ಚೈತನ್ಯಶೀಲಗೊಳಿಸುವ ಶಕ್ತಿ ನಮ್ಮ ಮಾತೃಭಾಷೆಗಿದೆ. ಕನ್ನಡ ಭಾಷೆಯನ್ನು ಆಸ್ವಾದಿಸಲು ಕಲಿಸುವ ಮೂಲಕ ಮಾತೃಭಾಷೆಯನ್ನು ಪ್ರೀತಿಸುವಂತೆ ಮಾಡಿ ಅದರ ಕಡೆಗೆ ಒಲವು ತೋರಿಸಲು ಸಾಧ್ಯ ಎಂದು ಸಂತ ಸಿಸಿಲಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕು. ಶಾಲಿನಿ ಎಕ್ಕಾರು ಹೇಳಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಆಳ್ವಾಸ್ ವಿದ್ಯಾರ್ಥಿ ಸಿರಿ -2015 ವಿದ್ಯಾರ್ಥಿ ಸಾಹಿತ್ಯ ಸಂಸ್ಕೃತಿ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನ್ನಡವು ತನ್ನ ಕಂಪು ಹಾಗೂ ಇಂಪಿನಿಂದ ಹಲವಾರು ಕವಿಗಳನ್ನು, ಸಾಹಿತಿಗಳನ್ನು ತನ್ನೆಡೆಗೆ ಆಕರ್ಷಿಸಿದೆ. ಕನ್ನಡದ ಈ ಸೊಬಗಿನಿಂದ ಅದು ಕರುನಾಡ ಜನರ ಅತ್ಯಮೂಲ್ಯ ಸಂಪತ್ತಾಗಿದೆ. ಆದ್ದರಿಂದಲೇ ಅದನ್ನು ಸಿರಿಗನ್ನಡ, ಸಿರಿನುಡಿ ಎಂದು ಹಲವಾರು ಕವಿಗಳು ಕರೆದಿರುವರು. ಕನ್ನಡದಲ್ಲೊಂದು ಅಪೂರ್ವ ಶಕ್ತಿಯಿದೆ. ತನ್ನೆಡೆಗೆ ಆಕರ್ಷಿಸುವ, ಜನರ ಮನದ ಬಾಗಿಲ ತಟ್ಟುವ,…
ಮೂಡುಬಿದಿರೆ: ಆಳ್ವಾಸ್ ನುಡಿಸಿರಿ 2015ರ ಆರಂಭ ದಿನ ರ್ಭ ಚಲನಚಿತ್ರ ನಿರ್ದೇಶಕ ಪಿ. ಶೇಷಾದ್ರಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಸ್ಭೆರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು ನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನವು ನವಂಬರ್ ತಿಂಗಳ 26, 27, 28 ಮತ್ತು 29ರ ದಿನಾಂಕಗಳಂದು 4 ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ. ಆಳ್ವಾಸ್ ನುಡಿಸಿರಿಯ ಉದ್ಘಾಟನಾ ಸಮಾರಂಭವು ’ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್’ ವೇದಿಕೆಯಲ್ಲಿ ನವಂಬರ್ 26ರಂದು ಮುಸ್ಸಂಜೆ 6.00 ಗಂಟೆಗೆ ನೆರವೇರಲಿದೆ. ಉಳಿದಂತೆ 3 ದಿನಗಳ ಸಮ್ಮೇಳನವು ಪ್ರತಿವರ್ಷದಂತೆ ರತ್ನಾಕರವರ್ಣಿ ವೇದಿಕೆಯಲ್ಲಿ, ನಾಡೋಜ ಕಯ್ಯಾರ ಕಿಂಞಣ್ಣ ರೈ ಸಭಾಂಗಣದಲ್ಲಿ ಜರುಗಲಿದೆ. [quote font_size=”14″ bgcolor=”#ffffff” arrow=”yes” align=”right”]ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರೀ ಸರ್ವಾಧ್ಯಕ್ಷರು: ಈ ಶತಮಾನದ ಹಿರಿಯ ವಿದ್ವಾಂಸರು ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರೀಯವರು. 40 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಹಿರಿಯ ಪ್ರಾಧ್ಯಾಪಕರು ಇವರು. ಹಳೆಗನ್ನಡ ಸಾಹಿತ್ಯ, ವ್ಯಾಕರಣ, ಛಂದಸ್ಸು, ಅಲಂಕಾರಶಾಸ್ತ್ರ, ಸಾಹಿತ್ಯ ಚರಿತ್ರೆ, ಗ್ರಂಥಸಂಪಾದನೆ, ನಿಘಂಟುಶಾಸ್ತ್ರ, ಹಸ್ತಪ್ರತಿ ಶಾಸ್ತ್ರಗಳಲ್ಲಿ ಮೇರುಪಂಡಿತರಿವರು. ಕನ್ನಡ ಸಂಶೋಧನಾ ಕ್ಷೇತ್ರದ ಗಣ್ಯ ಹಾಗೂ ಚಿರಸ್ಮರಣೀಯರಲ್ಲಿ ಇವರೂ ಒಬ್ಬರು.[/quote] ಉದ್ಘಾಟನೆಗೆ ಬೃಹತ್ ವೇದಿಕೆ: ಆಳ್ವಾಸ್ ನುಡಿಸಿರಿಯ ಉದ್ಘಾಟನಾ…
